ಹಾನಗಲ್ಲ: ರಾಜ್ಯ ಸರ್ಕಾರದಿಂದ ಬಡವರಿಗೆ ಕಡಿಮೆ ದರದಲ್ಲಿ ನಿವೇಶನ, ಕಡುಬಡವರಿಗೆ ಉಚಿತ ನಿವೇಶನ ಯೋಜನೆ ಅರಂಭವಾಗಲಿದೆ. ಅಲ್ಲದೆ, 6 ತಿಂಗಳಲ್ಲಿ 72 ಸಾವಿರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ರಾಜ್ಯ ಕರ್ನಾಟಕ ಗೃಹ ಮಂಡಳಿ ನೂತನ ಅಧ್ಯಕ್ಷ ಶಾಸಕ ಶ್ರೀನಿವಾಸ್ ಮಾನೆ ತಿಳಿಸಿದರು.
ಸ್ವಾತಂತ್ರ್ಯ ದಿನೋತ್ಸವದಲ್ಲಿ ಮಾತನಾಡಿದ ಅವರು, ಜನಸಾಮಾನ್ಯರ ಸಮಸ್ಯೆಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ. ದೆಹಲಿಯಲ್ಲಿ ನಮ್ಮ ರಾಜ್ಯದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಕರ್ನಾಟಕ ಭವನ ಆರಂಭಿಸಲಾಗಿದೆ. ಸಮರ್ಥ ಸಮೃದ್ಧ ಭಾರತ ನಿರ್ಮಾಣ ನಮ್ಮ ಆದ್ಯತೆ ಎಂದರು
09:29 AM (IST) Aug 16
ಬೆಂಗಳೂರಿನ ಔಟರ್ ರಿಂಗ್ ರೋಡ್ನಲ್ಲಿ ಅಕ್ಟೋಬರ್ನಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗಲಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗಲಿದೆ. ಇದಕ್ಕೆ ಪರಿಹಾರವಾಗಿ ಸರ್ಕಾರವು ಐಟಿ ಕಂಪನಿಗಳಿಗೆ ಹೈಬ್ರಿಡ್ ಕೆಲಸದ ಮಾದರಿಗೆ ಮನವಿ ಮಾಡಿದೆ.
08:47 AM (IST) Aug 16
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಹೈದರಾಬಾದ್ ನಿಜಾಮ್ ಕಾಲದಲ್ಲಿ ತಮ್ಮ ಕುಟುಂಬವನ್ನು ರಕ್ಷಿಸಿದ್ದು RSS ಎಂಬ ಬಿ.ಎಲ್. ಸಂತೋಷ್ ಅವರ ಹೇಳಿಕೆ ತಳ್ಳಿಹಾಕಿದ್ದಾರೆ. ತಮ್ಮನ್ನು ರಕ್ಷಿಸಿದ್ದು ನೆಹರು, ಸರ್ದಾರ್ ಪಟೇಲ್ ಮತ್ತು ಭಾರತೀಯ ಸೇನೆಯೇ ಹೊರತು ಬೇರೆ ಯಾರೂ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
08:20 AM (IST) Aug 16
ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಬ್ಬರಿದ್ದ ಬ್ಯಾರಕ್ನಿಂದ 16 ಕೈದಿಗಳಿರುವ ಬ್ಯಾರಕ್ಗೆ ವರ್ಗಾಯಿಸಲಾಗಿದೆ. ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕಟ್ಟುನಿಟ್ಟಿನ ಕ್ರಮ.
07:50 AM (IST) Aug 16
07:47 AM (IST) Aug 16
07:40 AM (IST) Aug 16
ಶಿಕಾರಿಪುರದ ಕಡೇನಂದಿಹಳ್ಳಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುವ ಸೌಭಾಗ್ಯ ಲಭಿಸಿತು. ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ವಿಶ್ವಾಗ್ರಹ ಫೌಂಡೇಶನ್ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ, ಮಕ್ಕಳ ಶಿಕ್ಷಣಕ್ಕೆ ಸ್ಫೂರ್ತಿ ತುಂಬಿದವು.