LIVE NOW
Published : Dec 16, 2025, 06:49 AM ISTUpdated : Dec 17, 2025, 12:02 AM IST

Karnataka News Live: ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು

ಸಾರಾಂಶ

ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಲಾಭ ಪಡೆಯುತ್ತಿರುವ ಫಲಾನುಭವಿಗಳ ಪೈಕಿ 1.80 ಲಕ್ಷ ಮಂದಿ ಆದಾಯ ತೆರಿಗೆ- ಜಿಎಸ್‌ಟಿ ಪಾವತಿದಾರರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ವಿಧಾನ ಪರಿಷತ್‌ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿರುವ ಇಲಾಖೆ ಅಧಿಕಾರಿಗಳು, ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ತಲಾ 2 ಸಾವಿರ ರು.ನಂತೆ 2023ರ ಜೂ. 6ರಿಂದ ಗೃಹಲಕ್ಷ್ಮೀ ಯೋಜನೆ ಅಡಿ ಸಹಾಯಧನ ಪಾವತಿಸಲಾಗುತ್ತಿದೆ. ಅಕ್ಟೋಬರ್‌ ಅಂತ್ಯಕ್ಕೆ 1.28 ಕೋಟಿ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ ಅರ್ಹ 1.24 ಕೋಟಿ ರು. ಮಹಿಳೆಯರಿಗೆ ಆಗಸ್ಟ್‌ ಅಂತ್ಯದವರೆಗೆ 22 ಕಂತಿನಲ್ಲಿ ಹಣ ಪಾವತಿಸಲಾಗಿದೆ. ಒಟ್ಟಾರೆ 52,416 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

12:02 AM (IST) Dec 17

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು, 22 ವರ್ಷದ ವಿದ್ಯಾರ್ಥಿನಿ ಎದೆ ನೋವಿನಿಂದ ಕುಸಿದು ಬಿದ್ದಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದರೆ, ಇತ್ತ ಹಾಸ್ಟೆಲ್ ಇತರ ವಿದ್ಯಾರ್ಥನಿಯರು ಆಘಾತಕ್ಕೊಳಗಾಗಿದ್ದಾರೆ.

Read Full Story

10:16 PM (IST) Dec 16

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಪಿಕ್‌ಅಪ್‌ ಮತ್ತು ಡ್ರಾಪ್-ಆಫ್ ವ್ಯವಸ್ಥೆಯ ಕುರಿತು BIAL ಸ್ಪಷ್ಟನೆ ನೀಡಿದೆ. ಪ್ರಯಾಣಿಕರ ಸುರಕ್ಷತೆಯೇ ಈ ನಿಯಮದ ಮುಖ್ಯ ಉದ್ದೇಶವಾಗಿದ್ದು, ಆರಂಭಿಕ ಸಮಸ್ಯೆಗಳನ್ನು 30 ದಿನಗಳಲ್ಲಿ ಪರಿಹರಿಸುವುದಾಗಿ ಭರವಸೆ ನೀಡಿದೆ. 

Read Full Story

09:59 PM (IST) Dec 16

ಚೈತ್ರಾ ಕುಂದಾಪುರ 2ನೇ ಬಾರಿ ಬಿಗ್ ಬಾಸ್ ಮನೆಗೆ ಬಂದ್ರೂ ಚೀಪ್ ಮೆಂಟಾಲಿಟಿ ಆಟ ಬಿಡ್ಲಿಲ್ಲ!

ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಟಾಸ್ಕ್‌ನಲ್ಲಿ ಚೈತ್ರ ಕುಂದಾಪುರ, ಸ್ಪರ್ಧಿ ಅಶ್ವಿನಿ ಗೌಡ ಅವರಿಗೆ ಉಗುರಿನಿಂದ ಪರಚಿ ಗಾಯಗೊಳಿಸಿದ್ದಾರೆ. ಎಚ್ಚರಿಕೆ ನೀಡಿದರೂ ಕೇಳದೆ, ಅಸಭ್ಯವಾಗಿ ವರ್ತಿಸಿದ ಚೈತ್ರಾ, ನಂತರ ತನ್ನ ಮೇಲೆಯೇ ಹಲ್ಲೆಯಾಗಿದೆ ಎಂದು ಆರೋಪಿಸಿ ವಿವಾದ ಸೃಷ್ಟಿಸಿದ್ದಾರೆ.
Read Full Story

09:00 PM (IST) Dec 16

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು

ಮಂಗಳೂರಿನ ಯೆಯ್ಯಾಡಿ ಹರಕೆ ನೇಮ ವಿವಾದದ ಕುರಿತು ಮಾತನಾಡಿದ ತಮ್ಮಣ್ಣ ಶೆಟ್ಟಿಯವರು, ತಾವು ದೈವಾರಾಧನೆಯ ಲೋಪದೋಷಗಳ ಬಗ್ಗೆ ಮಾತ್ರ ಧ್ವನಿ ಎತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ತುಳು ಭಾಷೆಯ ಬದಲು ಕನ್ನಡದಲ್ಲಿ ನುಡಿ ಹೇಳಿರುವುದು, ನಿಯಮ ಮುರಿದಿರುವುದನ್ನು ಆಕ್ಷೇಪಿಸಿದ್ದಾರೆ.

Read Full Story

08:49 PM (IST) Dec 16

ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?

ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಏರಿಕೆಯಾಗುತ್ತಾ ಸಾಗಿದ್ದ ಚಿನ್ನದ ಬೆಲೆಯಲ್ಲಿ ಆಗಿರುವ ಭಾರಿ ಇಳಿಕೆಯಿಂದ ಜನರು ಖರೀದಿ ಹಾಗೂ ಹೂಡಿಕೆಗೆ ಮುಂದಾಗಿದ್ದಾರೆ. ಮತ್ತೆ ಏರಿಕೆಯಾಗುವ ಮೊದಲು ಖರೀದಿಸಲು ಪ್ಲಾನ್ ಮಾಡುತ್ತಿದ್ದಾರೆ.

Read Full Story

08:32 PM (IST) Dec 16

ನಾಳೆ ಅರ್ಧ ಬೆಂಗಳೂರಿಗೆ ನೀರು ಪೂರೈಕೆ ಸ್ಥಗಿತ - ಕಾವೇರಿ 5ನೇ ಹಂತದ ಪೈಪ್‌ಲೈನ್‌ನಲ್ಲಿ ಸೋರಿಕೆ!

ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆಯ ಪೈಪ್‌ಲೈನ್‌ನಲ್ಲಿ ಸೋರಿಕೆ ಉಂಟಾದ ಕಾರಣ, ಬೆಂಗಳೂರು ಜಲಮಂಡಳಿ ತುರ್ತು ದುರಸ್ಥಿ ಕಾರ್ಯ ಕೈಗೆತ್ತಿಕೊಂಡಿದೆ. ಇದರ ಪರಿಣಾಮವಾಗಿ, ಡಿಸೆಂಬರ್ 17 ರಂದು ಬೆಂಗಳೂರಿನ ಹಲವು ನಿರ್ದಿಷ್ಟ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Read Full Story

08:11 PM (IST) Dec 16

ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ, ಕರ್ನಾಟಕದ ಹನೂರಿನಲ್ಲಿ ಬೃಹತ್ ಚಿನ್ನದ ನಿಕ್ಷೇಪ ಪತ್ತೆ!

ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಸಂಸ್ಥೆಯು ಚಾಮರಾಜನಗರ ಜಿಲ್ಲೆಯಲ್ಲಿ ಚಿನ್ನದ ನಿಕ್ಷೇಪವನ್ನು ಪತ್ತೆಹಚ್ಚಿದೆ. ಪ್ರಾಥಮಿಕ ಹಂತದ ಸರ್ವೆಯಲ್ಲಿ ಈ ಸುಳಿವು ದೊರೆತಿದ್ದು, ನಿಕ್ಷೇಪದ ಪ್ರಮಾಣ ಮತ್ತು ಗುಣಮಟ್ಟವನ್ನು ಖಚಿತಪಡಿಸಲು ಹೆಚ್ಚಿನ ಸಂಶೋಧನೆ ನಡೆಯಲಿದೆ.  

Read Full Story

08:08 PM (IST) Dec 16

ಲೋಕಾಯುಕ್ತ ಬಲೆಗೆ ಬಿದ್ದ ಶಿವಮೊಗ್ಗದ ಭ್ರಷ್ಟ ತಿಮಿಂಗಲ; ಕೈತುಂಬಾ ಚಿನ್ನ, ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರೂಪ್ಲ ನಾಯ್ಕ್ ಅವರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ, ಚಿನ್ನಾಭರಣಗಳು ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.
Read Full Story

07:27 PM (IST) Dec 16

ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ

ಕೇಂದ್ರ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ 'ನರೇಗಾ' ಯೋಜನೆಯಡಿ ಕರ್ನಾಟಕಕ್ಕೆ ನೀಡಲಾಗುತ್ತಿದ್ದ 5 ಕೋಟಿ ಮಾನವ ದಿನಗಳನ್ನು ಕಡಿತಗೊಳಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Read Full Story

07:21 PM (IST) Dec 16

ಬೆಂಗಳೂರು-ಕರಾವಳಿ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ!

ಆರು ತಿಂಗಳ ನಂತರ, ಬೆಂಗಳೂರು-ಮಂಗಳೂರು ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು ಸೇವೆ ಪುನರಾರಂಭಗೊಂಡಿದೆ. ಈ ಬಾರಿ, ಪ್ರಯಾಣಿಕರು ಪಶ್ಚಿಮ ಘಟ್ಟಗಳ ಸೌಂದರ್ಯವನ್ನು ಸವಿಯಲು ವಿಶೇಷ 'ವಿಸ್ಟಾಡೋಮ್ ಕೋಚ್'ಗಳನ್ನು ಅಳವಡಿಸಲಾಗಿದೆ. ರೈಲು ಯಶವಂತಪುರದಿಂದ ತನ್ನ ಎಂದಿನ ಮಾರ್ಗದಲ್ಲಿ ಸಂಚರಿಸಲಿದೆ.
Read Full Story

07:16 PM (IST) Dec 16

ಧುರಂಧರದಲ್ಲಿ ರಣವೀರ್ ಲುಕ್‌ ಬದಲಿಸಿದ ಟಾಪ್ ಮೇಕಪ್ ಆರ್ಟಿಸ್ಟ್, ಯಾರೀಕೆ ಪ್ರೀತಿಶೀಲ್? ದಿನವೊಂದಕ್ಕೆ ಎಷ್ಟು ವೇತನ??

ಬಾಲಿವುಡ್‌ಗೆ ಹೊಸ ಹುರುಪು ತಂದಿರುವ 'ಧುರಂಧರ್' ಚಿತ್ರದಲ್ಲಿ ರಣವೀರ್ ಸಿಂಗ್, ಹಮ್ಜಾ ಅಲಿ ಮಜಾರಿ ಎಂಬ ಗೂಢಚಾರನಾಗಿ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಮೇಕಪ್ ಕಲಾವಿದೆ ಪ್ರೀತಿಶೀಲ್ ಸಿಂಗ್ ಅವರು, ರಣವೀರ್‌ರ ಹಿಂದಿನ ಖಿಲ್ಜಿ ಪಾತ್ರಕ್ಕಿಂತ ಸಂಪೂರ್ಣ ಭಿನ್ನವಾದ ನೋಟ ಸೃಷ್ಟಿಸಿದ್ದಾರೆ.

Read Full Story

06:07 PM (IST) Dec 16

ಉಡುಪಿ ನೀರು ಸೇದುವಾಗ ಅಮ್ಮನ ಕೈತಪ್ಪಿ ಬಾವಿಗೆ ಬಿದ್ದ ಮಗು; ತಾಯಿ ಬಾವಿಗಿಳಿಯುವಷ್ಟರಲ್ಲಿ ಮಗು ಸಾವು!

ಉಡುಪಿಯ ಕಿನ್ನಿಮೂಲ್ಕಿ ಎಂಬಲ್ಲಿ, ತಾಯಿ ನೀರು ಸೇದುತ್ತಿದ್ದಾಗ ಒಂದೂವರೆ ವರ್ಷದ ಮಗು ಆಯತಪ್ಪಿ ಬಾವಿಗೆ ಬಿದ್ದಿದೆ. ಮಗುವನ್ನು ರಕ್ಷಿಸಲು ತಾಯಿ ಕೂಡಲೇ ಬಾವಿಗಿಳಿದರೂ, ಅಷ್ಟರಲ್ಲಾಗಲೇ ಮಗು ಮೃತಪಟ್ಟಿತ್ತು. ಈ ದುರ್ಘಟನೆ ಸ್ಥಳದಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದೆ.
Read Full Story

05:27 PM (IST) Dec 16

'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!

ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌, ಜನಪ್ರಿಯ ಜಾನಪದ ಭಕ್ತಿಗೀತೆ 'ಮಾದೇಶ್ವರ ದಯಬಾರದೆ'ಯನ್ನು ಹಾಡಿ ಯೂಟ್ಯೂಬ್‌ನಲ್ಲಿ ಹಂಚಿಕೊಂಡಿದ್ದಾರೆ. ಕನ್ನಡೇತರರಾದ ಶಿವಶ್ರೀ, ತಮ್ಮ ಪತಿಯಿಂದಲೇ ಈ ಹಾಡನ್ನು ಕಲಿತು ಸ್ಪಷ್ಟವಾಗಿ ಹಾಡಿರುವುದು ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.
Read Full Story

05:18 PM (IST) Dec 16

ರಾಜ್ಯಾದ್ಯಂತ ಎಲ್‌ಕೆಜಿ ಯಿಂದ ಪಿಯುಸಿವರೆಗೆ ಕಲಿಕಾ ಸಮಯದ ಅವಧಿ ಬದಲಾಯಿಸಿಸುವಂತೆ ಶಿಕ್ಷಣ ಇಲಾಖೆಗೆ ಮಕ್ಕಳ ಆಯೋಗ ಪತ್ರ

ರಾಜ್ಯದಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಲ್‌ಕೆಜಿ ಯಿಂದ ಪಿಯುಸಿ ವರೆಗಿನ ಶಾಲಾ ಸಮಯವನ್ನು ತಾತ್ಕಾಲಿಕವಾಗಿ ಬದಲಾಯಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶಿಕ್ಷಣ ಇಲಾಖೆಗೆ ಮನವಿ ಮಾಡಿದೆ. ಚಳಿಗಾಲ ಮುಗಿಯುವವರೆಗೆ ತರಗತಿಗಳನ್ನು ಬೆಳಿಗ್ಗೆ 9.30ಕ್ಕೆ ಆರಂಭಿಸಲು ಆಯೋಗ ಸಲಹೆ ನೀಡಿದೆ.

Read Full Story

05:12 PM (IST) Dec 16

ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ; ಕಗ್ಗಲೀಪುರ PSI ಹರೀಶ್ ಸಸ್ಪೆಂಡ್

ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ.

Read Full Story

04:06 PM (IST) Dec 16

ಮುಡಾ ಹಗರಣದಲ್ಲಿ ಕೋರ್ಟ್ ಹೊಸ ಆದೇಶ, ಜೈಲಲ್ಲಿದ್ದ ಮಾಜಿ ಆಯುಕ್ತ ದಿನೇಶ್ ಕುಮಾರ್ ಮತ್ತೆ ಪೊಲೀಸ್‌ ಕಸ್ಟಡಿಗೆ!

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ, ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 24 ಗಂಟೆಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದೆ. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೋರಿದ್ದು, ಡಿ.18 ರಂದು ಅಂತಿಮ ತನಿಖಾ ವರದಿ ಸಲ್ಲಿಕೆಯಾಗಲಿದೆ. 

Read Full Story

03:55 PM (IST) Dec 16

ಲೋಕಾಯುಕ್ತ ದಾಳಿ - ₹50 ಸಾವಿರ ಹಣ ಟಾಯ್ಲಟ್ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಕೃಷಿ ಅಧಿಕಾರಿ!

ಬೆಳಗಾವಿ ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜಶೇಖರ ಬಿಜಾಪುರ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಸಾಕ್ಷ್ಯ ನಾಶಪಡಿಸಲು ಹಣವನ್ನು ಟಾಯ್ಲೆಟ್ ಕಮೋಡ್‌ಗೆ ಹಾಕಿ ಫ್ಲಶ್ ಮಾಡಲು ಯತ್ನಿಸಿದ್ದು, ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಮತ್ತು ಚಿನ್ನಾಭರಣಗಳು ಪತ್ತೆಯಾಗಿವೆ.
Read Full Story

03:38 PM (IST) Dec 16

ಕೊಪ್ಪಳದ ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹುಳು ಪತ್ತೆ; ಸಚಿವರೇನ್ ನಿದ್ದೆ ಮಾಡ್ತಿದ್ದಾರಾ?

ಕೊಪ್ಪಳ ತಾಲೂಕಿನ ಬಿಸರಹಳ್ಳಿ ಮತ್ತು ಹೊಸಲಿಂಗಾಪುರ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳುಗಳು ಮತ್ತು ನುಶಿಗಳು ಪತ್ತೆಯಾಗಿವೆ. ಈ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು,  ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Read Full Story

02:53 PM (IST) Dec 16

ಮೆಜೆಸ್ಟಿಲ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!

ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿಯ ರಕ್ಷಣೆಯಿಂದ, ದೆಹಲಿ ಮತ್ತು ಬೆಂಗಳೂರಿನಲ್ಲಿ ಸಕ್ರಿಯವಾಗಿದ್ದ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆ ಜಾಲವೊಂದು ಬಯಲಾಗಿದೆ. ದೆಹಲಿ ಹಾಗೂ ಬೆಂಗಳೂರಿನ ಸ್ಪಾದಲ್ಲಿ ಬಾಲಕಿಯನ್ನು ಕೂಡಿಹಾಕಿ ದಂಧೆ ನಡೆಸಿದ್ದಾರೆ.

Read Full Story

02:44 PM (IST) Dec 16

BBK 12 - ಅಯ್ಯೋ ಭಗವಂತ ಇದೇನಿದು? ಮನದಲ್ಲಿದ್ದ ಮಾತು ಬಿಚ್ಚಿಟ್ಟ ಚೈತ್ರಾ; ರಜತ್ ಶಾಕ್!

ಬಿಗ್‌ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳಾದ ಚೈತ್ರಾ ಕುಂದಾಪುರ ಮತ್ತು ರಜತ್ ಕಿಶನ್ ನಡುವೆ ತೀವ್ರ ಜಗಳ ನಡೆದಿದೆ. ಆಟದ ವೇಳೆ ರಜತ್ 'ಸುಳ್ಳಿ' ಎಂದಿದ್ದಕ್ಕೆ ಕೆರಳಿದ ಚೈತ್ರಾ, ಅವರ ಕುಟುಂಬದ ಬಗ್ಗೆ ಮಾತನಾಡಿದ್ದು, ಇದು ದೊಡ್ಡ ಮಾತಿನ ಚಕಮಕಿಗೆ ಕಾರಣವಾಯಿತು.
Read Full Story

02:23 PM (IST) Dec 16

ಡಿಜಿಟಲ್ ಅರೆಸ್ಟ್‌ಗೆ ಹೆದರಿ ಕೋಟಿಗಟ್ಟಲೆ ಬೆಲೆಬಾಳುವ ಸೈಟ್, ಮನೆ ಮಠ ಮಾರಿದ ಬೆಂಗಳೂರು ಮಹಿಳಾ ಟೆಕ್ಕಿ!

ಬೆಂಗಳೂರಿನಲ್ಲಿ "ಡಿಜಿಟಲ್ ಅರೆಸ್ಟ್" ಎಂಬ ಹೊಸ ಸೈಬರ್ ವಂಚನೆಗೆ ಮಹಿಳಾ ಟೆಕ್ಕಿಯೊಬ್ಬರು ಬಲಿಯಾಗಿದ್ದಾರೆ. ಮುಂಬೈ ಪೊಲೀಸರ ಸೋಗಿನಲ್ಲಿ ಬೆದರಿಸಿದ ಸೈಬರ್ ಖದೀಮರು, ಆಕೆಯಿಂದ ಫ್ಲಾಟ್ ಮತ್ತು ಸೈಟ್‌ಗಳನ್ನು ಮಾರಾಟ ಮಾಡಿಸಿ ಹಂತ ಹಂತವಾಗಿ ಸುಮಾರು ₹2 ಕೋಟಿ ಹಣವನ್ನು ದೋಚಿದ್ದಾರೆ.
Read Full Story

01:38 PM (IST) Dec 16

ಮೂಡಿಗೆರೆ - ಮನೆ ಭೋಗ್ಯ ವಿಚಾರಕ್ಕೆ ಜಗಳ, ಮಹಿಳೆಯ ಜಡೆ ಹಿಡಿದು ಎಳೆದು ಬಿಸಾಡಿ ಹಲ್ಲೆ.!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಮನೆ ಭೋಗ್ಯದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಮನೆ ಖಾಲಿ ಮಾಡುವಂತೆ ಕೇಳಿದ್ದಕ್ಕೆ ಹೆಚ್ಚು ಹಣಕ್ಕೆ ಬೇಡಿಕೆಯಿಟ್ಟಿದ್ದು, ಇದು ಗಲಾಟೆಗೆ ಕಾರಣವಾಗಿದೆ. ಈ ವೇಳೆ ಯುವಕನೊಬ್ಬ ಮಹಿಳೆಯ ಜಡೆ ಹಿಡಿದು ಎಳೆದು ಹಲ್ಲೆ ನಡೆಸಿದ್ದಾನೆ ಎಂದು ಆರೋಪ.

Read Full Story

01:30 PM (IST) Dec 16

ಮೆಸ್ಸಿ ಹೈದರಾಬಾದ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿಯನ್ನು ಪ್ರಧಾನಿ ಎಂದು ಕರೆದ ಟ್ರಾನ್ಸ್‌ಲೇಟರ್! ವಿಡಿಯೋ ವೈರಲ್

ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ತಮ್ಮ ಭಾರತ ಪ್ರವಾಸದ ವೇಳೆ ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಅವರ ಸ್ಪ್ಯಾನಿಶ್ ಭಾಷಣವನ್ನು ಭಾಷಾಂತರಿಸುವಾಗ, ಭಾಷಾಂತರಕಾರರೊಬ್ಬರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು 'ಪ್ರಧಾನ ಮಂತ್ರಿ' ಎಂದು ತಪ್ಪಾಗಿ ಉಲ್ಲೇಖಿಸಿದ್ದು ವೈರಲ್ ಆಗಿದೆ.

Read Full Story

01:19 PM (IST) Dec 16

Bengaluru - ಹಾರ್ಟ್‌ ಅಟ್ಯಾಕ್‌ ಆಗಿ ರಸ್ತೆಯಲ್ಲಿ ಬಿದ್ದ ವ್ಯಕ್ತಿ, ಪತ್ನಿಯ ಗೋಳಾಟ ಕೇಳಿಯೂ ನೆರವಿಗೆ ಬಾರದ ಜನ!

ಬೆಂಗಳೂರಿನ ಬನಶಂಕರಿ ಬಳಿ ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ 34 ವರ್ಷದ ವ್ಯಕ್ತಿಗೆ ಹೃದಯಾಘಾತವಾಗಿದೆ. ಪತ್ನಿ ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ಮುಂದೆ ಬಾರದ ಕಾರಣ, ಅವರು ರಸ್ತೆಯಲ್ಲಿಯೇ ಪ್ರಾಣ ಬಿಟ್ಟ ದಾರುಣ ಘಟನೆ ನಡೆದಿದೆ.
Read Full Story

01:15 PM (IST) Dec 16

ಮಗಳಿಗಾಗಿ ಸೀರಿಯಲ್ ನಟಿಯಾಗಿರೋ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ - ಅತ್ತೆಗೆ ಬೆದರಿಕೆ

ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದನಿರ್ಮಾಪಕ ಹರ್ಷವರ್ಧನ್, ತನ್ನ ಮಗಳಿಗಾಗಿ ಕಿರುತೆರೆ ನಟಿ ಪತ್ನಿ ಚೈತ್ರಾಳನ್ನು ಅಪಹರಿಸಿದ್ದಾರೆ. ಸೀರಿಯಲ್ ಶೂಟಿಂಗ್ ನೆಪದಲ್ಲಿ ಮೈಸೂರಿಗೆ ಕರೆಸಿ, ಪತ್ನಿಯನ್ನು ಬಿಡುಗಡೆ ಮಾಡಲು ಮಗಳನ್ನು ತನಗೆ ನೀಡುವಂತೆ ಬೇಡಿಕೆಯಿಟ್ಟ ಘಟನೆ ನಡೆದಿದೆ. 

Read Full Story

01:08 PM (IST) Dec 16

Darshan ಅರೆಸ್ಟ್‌ ಆದ್ರು; ಮಗ ವಿನೀಶ್‌ ಹ್ಯಾಂಡಲ್‌ ಮಾಡೋದು ಮಾತ್ರ...; ನೈಜ ಘಟನೆ ತಿಳಿಸಿದ Vijayalakshmi

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ತೂಗುದೀಪ ಅವರು ಸದ್ಯ ಜೈಲಿನಲ್ಲಿದ್ದಾರೆ. ಇವರು ಅರೆಸ್ಟ್‌ ಆದಾಗ ಮಗನನ್ನು ಹ್ಯಾಂಡಲ್‌ ಮಾಡೋದು ತುಂಬ ಕಷ್ಟ ಆಗಿತ್ತು ಎಂದು ವಿಜಯಲಕ್ಷ್ಮೀ ಅವರು ನಟಿ ರಚನಾ ರೈ ಜೊತೆಗಿನ ಸಂದರ್ಶನದಲ್ಲಿ ಹೇಳಿದ್ದಾರೆ.

Read Full Story

01:02 PM (IST) Dec 16

ಮಾರತಹಳ್ಳಿ ಹೊಟೇಲ್ ಕಟ್ಟಡದಿಂದ ಯುವತಿ ಜಿಗಿತ ಪ್ರಕರಣ, ಪೊಲೀಸರ ಮೇಲೆ ಕಮಿಷನರ್‌ಗೆ ಮೂಡಿದ ಅನುಮಾನ?

ಬೆಂಗಳೂರಿನ ಮಾರತ್ ಹಳ್ಳಿ ಹೋಟೆಲ್‌ನಿಂದ ಯುವತಿ ಜಿಗಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪೊಲೀಸರ ಆಗಮನದ ನಂತರ ಈ ಘಟನೆ ನಡೆದಿದ್ದು, ಅವರ ಪಾತ್ರದ ಬಗ್ಗೆಯೇ ಗಂಭೀರ ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ, ಪೊಲೀಸ್ ಕಮಿಷನರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

Read Full Story

12:47 PM (IST) Dec 16

ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!

HD Kumaraswamy birthday in Mandya: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯಕರ್ತರೊಬ್ಬರು ಅವರಿಗೆ ವಿಶೇಷ 'ಶಿವ ತಾಯತ'ವನ್ನು ಉಡುಗೊರೆಯಾಗಿ ನೀಡಿದರು.

Read Full Story

12:36 PM (IST) Dec 16

ಪರಭಾಷೆಗೆ ಹಾವಳಿ ಕೊಡೋ ಹಾಗೆ ರೆಡಿಯಾದ ಕನ್ನಡದ 45 Movie - ಕೆಲವೇ ಗಂಟೆಗಳಲ್ಲಿ ಯುಟ್ಯೂಬ್‌ ತತ್ತರ; ಕಥೆ ಏನು?

45 Movie Trailer: ನಟ ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ, ಎಂ. ರಮೇಶ್ ರೆಡ್ಡಿ ಅವರು ನಿರ್ಮಿಸಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ‘45’ ಸಿನಿಮಾ ಸದ್ದು ಮಾಡುತ್ತಿದೆ. ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ. 

Read Full Story

12:09 PM (IST) Dec 16

ಸಿಎಂ ಸ್ಥಾನದ ಜಟಾಪಟಿ - 'ಉರಿತೀರೋದಕ್ಕೆ ಉಪ್ಪು ಹಾಕಬೇಡ' ಎಂದ ಸಿಎಂ, 'ಹಾಗಾದ್ರೆ ಉರೀತಿದೆಯಾ?' - ಅಶೋಕ್..

ವಿಧಾನಸಭೆಯಲ್ಲಿ ಅನುದಾನ ಹಂಚಿಕೆ ವಿಚಾರವಾಗಿ ಸ್ವಪಕ್ಷೀಯ ಶಾಸಕ ಕುಣಿಗಲ್ ರಂಗನಾಥ್ ಅವರೇ ಸರ್ಕಾರದ ವಿರುದ್ಧ ಅಸಮಾಧಾನ.. ಈ ಚರ್ಚೆಯು ಮುಖ್ಯಮಂತ್ರಿ ಸ್ಥಾನದ ಜಟಾಪಟಿಯಾಗಿ ಮಾರ್ಪಟ್ಟಾಗ, 'ಐದು ವರ್ಷ ನಾನೇ ಸಿಎಂ' ಎಂದು ಸಿದ್ದರಾಮಯ್ಯ ವಿಪಕ್ಷಗಳಿಗೆ  ಸ್ವಪಕ್ಷೀಯರಿಗೆ ಸ್ಪಷ್ಟ ಸಂದೇಶ ರವಾನಿಸಿದರು.

Read Full Story

11:58 AM (IST) Dec 16

ಧರ್ಮಸಂಕಟದಲ್ಲಿ Bigg Boss; ಸೀಕ್ರೇಟ್‌ ರೂಮ್‌ಗೆ ಹಾಕಿದ್ಯಾಕೆ? ಸತ್ಯ ಧ್ರುವಂತ್‌ಗೆ ಗೊತ್ತಾಯ್ತು!

BBK 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಧ್ರುವಂತ್‌, ರಕ್ಷಿತಾ ಶೆಟ್ಟಿ ಮಧ್ಯೆ ಮೊದಲಿನಿಂದಲೂ ಜಗಳ ಆಗುತ್ತಲೇ ಇದೆ. ಈಗ ಸೀಕ್ರೆಟ್‌ ರೂಮ್‌ನಲ್ಲಿ ಇವರು ಕಿತ್ತಾಡುತ್ತಲೇ ಇದ್ದಾರೆ. ಇವರು ಸೀಕ್ರೆಟ್‌ ರೂಮ್‌ಗೆ ಹೋಗಿದ್ದು ಯಾಕೆ? ಇನ್ನು ಬಿಗ್‌ ಬಾಸ್‌ಗೆ ಧರ್ಮ ಸಂಕಟ ಆಗಿದ್ದು ಯಾಕೆ?

Read Full Story

11:36 AM (IST) Dec 16

ಭಟ್ಕಳ ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ - ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ

ಮಂಗಳವಾರ ಬೆಳಗ್ಗೆ ಭಟ್ಕಳ ತಹಶೀಲ್ದಾರ್ ಕಚೇರಿಗೆ ಈಮೇಲ್ ಮೂಲಕ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಬಂದಿದ್ದು, ಆವರಣದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಈಮೇಲ್‌ನಲ್ಲಿ ತಮಿಳುನಾಡು ಡಿಎಂಕೆ ಸರ್ಕಾರದ ವಿರುದ್ಧವೂ ಆಧಾರರಹಿತ ಆರೋಪಗಳನ್ನು ಮಾಡಲಾಗಿದೆ.
Read Full Story

10:31 AM (IST) Dec 16

45 Movie Trailer - ಚೆಲುವೆಯ ನೋಟ ಚೆನ್ನ..ಸಿನಿಮಾ ನೋಡಲೇಬೇಕು ಎಂದು ಸೈಕ್‌ ಮಾಡಿದ ಕಾರಣಗಳಿವು!

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ 45 ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ. ಇಷ್ಟುದಿನಗಳ ಸಂಗೀತ ನಿರ್ದೇಶನ ಮಾಡುತ್ತಿದ್ದ ಅರ್ಜುನ್‌ ಜನ್ಯ ಮೊದಲ ಬಾರಿಗೆ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ಈ ಸಿನಿಮಾ ಟ್ರೇಲರ್‌ ನೋಡಿ ಅನೇಕರು ಖುಷಿಪಟ್ಟಿದ್ದು, ಶಿವರಾಜ್‌ಕುಮಾರ್‌ ಲುಕ್‌ಗೆ ಕಳೆದು ಹೋಗಿದ್ದಾರೆ. 

Read Full Story

10:26 AM (IST) Dec 16

ಆರ್‌ಸಿಬಿ ಫ್ಯಾನ್ಸ್ ಗುಡ್ ನ್ಯೂಸ್! ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ? KCSA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸುಳಿವು!

ಈ ಬಾರಿಯ IPL ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಬಿಸಿಸಿಐ ಜೊತೆ ಮಾತುಕತೆ ನಡೆಸುತ್ತಿದೆ. ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ಪ್ರಕಾರ, ರಾಜ್ಯ ಸರ್ಕಾರದಿಂದಲೂ ಇದಕ್ಕೆ ಹಸಿರು ನಿಶಾನೆ ದೊರೆತಿದ್ದು, ಶೀಘ್ರ ದಿನಾಂಕ ನಿಗದಿಯಾಗುವ ನಿರೀಕ್ಷೆ

Read Full Story

09:54 AM (IST) Dec 16

The Devil Movie ಶೋಗೆ ಚಪ್ಪಲಿ ಹಾಕ್ಬೇಡ ಅಂತ ಮಗ ವಿನೀಶ್‌ಗೆ ಹೇಳೋಕೆ ಕಾರಣವಿದೆ - Vijayalakshmi Darshan

Darshan Thoogudeepa Wife Vijayalakshmi: ನಟ ದರ್ಶನ್‌ ತೂಗುದೀಪ ‘ದಿ ಡೆವಿಲ್’‌ ಸಿನಿಮಾ ರಿಲೀಸ್‌ ಆಗಿದೆ. ಒಂದು ಕಡೆ ಅಭಿಮಾನಿಗಳು, ಇನ್ನೊಂದು ಕಡೆ ನೆಗೆಟಿವ್‌ ಪ್ರತಿಕ್ರಿಯೆ ಬಗ್ಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮಾತನಾಡಿದ್ದಾರೆ.

 

Read Full Story

09:46 AM (IST) Dec 16

ಶಾಮನೂರು ನಿಧನ - ಮೇಲ್ಮನೆಯಲ್ಲಿ ಮುರಿದ ಸಂಪ್ರದಾಯ

ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆ  ವಿಧಾನ ಪರಿಷತ್‌ನಲ್ಲಿ ಸಂತಾಪ ಸೂಚನೆ ನಂತರ ಕಲಾಪ ನಡೆಸುವ ಸಂಪ್ರದಾಯ ಮುರಿದು, ಇಡೀ ದಿನದ ಕಲಾಪ ಮುಂದೂಡಲಾಯಿತು. ಸದಸ್ಯರು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಬೇಕಿದ್ದ ಕಾರಣ, ವಿವಿಧ ಪಕ್ಷಗಳ ಸದಸ್ಯರ ಸಲಹೆ ಮೇರೆಗೆ ಸಭಾಪತಿಯಿಂದ ಐತಿಹಾಸಿಕ ನಿರ್ಧಾರ 

Read Full Story

09:28 AM (IST) Dec 16

ಉಡುಪಿ - ವರನಿಗೆ ರಜೆ ಸಿಗದ ಕಾರಣ ವಿಡಿಯೋ ಮೂಲಕ ಅದ್ಧೂರಿ ನಿಶ್ಚಿತಾರ್ಥ! ಫೋಟೋ ಇಲ್ಲಿವೆ ನೋಡಿ

ಕೆನಡಾದಲ್ಲಿ ಉದ್ಯೋಗದಲ್ಲಿರುವ ಮಾಗಡಿ ತಾಲ್ಲೂಕಿನ ಸುಹಾಸ್.ಎಸ್ ಮತ್ತು ಉಡುಪಿಯ ನಿವಾಸಿ ಮೇಘಾ ಅವರು ಬ್ರಾಹ್ಮಣ ಸಂಪ್ರದಾಯದಂತೆ ವಿಡಿಯೋ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವರನಿಗೆ ರಜೆ ಸಿಗದ ಕಾರಣ, ಉಡುಪಿಯ ಸರಸ್ವತಿ ಸಭಾಭವನದಲ್ಲಿ ವಧು ಮತ್ತು ಕುಟುಂಬದವರು ಹಾಜರಿದ್ದರು,

Read Full Story

09:20 AM (IST) Dec 16

ಅಷ್ಟು ನೋವಿದ್ರೂ ದರ್ಶನ್‌ ಆಪರೇಶನ್‌ ಯಾಕೆ ಮಾಡಿಸಿಕೊಂಡಿಲ್ಲ? ನಡೆದ ಘಟನೆ ಬಿಚ್ಚಿಟ್ಟ Vijayalakshmi Darshan

Vijayalakshmi Darshan: ನಟ ದರ್ಶನ್‌ ಅವರೀಗ ಚಿತ್ರದುರ್ಗ ರೇಣುಕಾಸ್ವಾಮಿ ಕೊ*ಲೆ ಕೇಸ್‌ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇವರ ಅನುಪಸ್ಥಿತಿಯಲ್ಲಿ ‘ದಿ ಡೆವಿಲ್’‌ ಸಿನಿಮಾ ರಿಲೀಸ್‌ ಆಗಿದ್ದು, ಪತ್ನಿ ವಿಜಯಲಕ್ಷ್ಮೀ ಅವರು ಸಿನಿಮಾ ಕುರಿತಂತೆ ಸಂದರ್ಶನ ನೀಡಿದ್ದಾರೆ.

Read Full Story

08:32 AM (IST) Dec 16

ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಿಯರ್ ಉತ್ಪಾದನೆ, ಯುಬಿಎಲ್ ಬಿಯರ್‌ಗೆ ವಿಧಿಸಿದ್ದ 29 ಕೋಟಿ ದಂಡಕ್ಕೆ ಹೈಕೋರ್ಟ್ ತಡೆ

ನಿಗದಿತ ಪ್ರಮಾಣಕ್ಕಿಂತ ಕಡಿಮೆ ಬಿಯರ್ ಉತ್ಪಾದನೆ ಮಾಡಿದ್ದಕ್ಕಾಗಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ಗೆ ಅಬಕಾರಿ ಇಲಾಖೆ ವಿಧಿಸಿದ್ದ 29 ಕೋಟಿ ರೂ. ದಂಡದ ನೋಟಿಸ್ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅಧೀನ ಅಧಿಕಾರಿಗಳಿಗೆ ದಂಡ ವಿಧಿಸುವ ಅಧಿಕಾರವಿಲ್ಲ ನಿಯಮ ಪ್ರಕಾರ ಮೊದಲು ಕಾರಣ ತಿಳಿಸಬೇಕು ಎಂದಿದೆ.

Read Full Story

08:14 AM (IST) Dec 16

ಹೀರೋಯಿನ್ಸ್‌ಗೂ ಹೀಗೆ ಮಾಡಿದ್ರಾ? ತಮಿಳುನಾಡಿನಲ್ಲಿ ಯುಟ್ಯೂಬರ್‌ ಪ್ರಶ್ನೆ; ರೇಷ್ಮೆ ಶಾಲಿನಲ್ಲಿ ಸುತ್ತಿ Kiccha Sudeep ಉತ್ತರ

Actor Kiccha Sudeep: ಡಿಸೆಂಬರ್‌ 25 ರಂದು ‘ಮಾರ್ಕ್’‌ ಸಿನಿಮಾ ರಿಲೀಸ್‌ ಆಗುತ್ತಿದೆ. ಕಿಚ್ಚ ಸುದೀಪ್‌ ಚೆನ್ನೈನಲ್ಲಿ ನಡೆದ ‘ಮಾರ್ಕ್’‌ ಇವೆಂಟ್‌ನಲ್ಲಿ ಭಾಗವಹಿಸಿದ್ದರು. ಆ ವೇಳೆ ಪತ್ರಕರ್ತರೋ ಅಥವಾ ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವುದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

 

Read Full Story

More Trending News