ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಫೈರ್ಮ್ಯಾನ್ ಹುದ್ದೆಯನ್ನು ‘ಫೈರ್ ಫೈಟರ್’ ಮತ್ತು ಲೀಡಿಂಗ್ ಫೈರ್ಮ್ಯಾನ್ ಹುದ್ದೆಯನ್ನು ‘ಲೀಡಿಂಗ್ ಫೈಯರ್ ಫೈಟರ್’ ಎಂದು ಮರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕೇಂದ್ರ ಗೃಹ ಮಂತ್ರಾಲಯದ ಸ್ಟ್ಯಾಂಡಿಂಗ್ ಫೈರ್ ಅಡ್ವೈಸರಿ ಕಮಿಟಿ(ಎಸ್ಎಫ್ಎಸಿ) ಸಭೆಯ ತೀರ್ಮಾನದಂತೆ ಅಗ್ನಿಶಾಮಕ ಇಲಾಖೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಎರಡೂ ಹುದ್ದೆಗಳ ಹೆಸರನ್ನು ಬದಲಿಸಿದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ(ವೃಂದ ಮತ್ತು ನೇಮಕಾತಿ) ನಿಯಮಗಳು 2013ರ ಸಮಗ್ರ ಪರಿಷ್ಕರಣೆ ವೇಳೆ ಈ ಮರು ನಾಮಕರಣವನ್ನು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅಳವಡಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ
10:09 PM (IST) Feb 16
ಶಾಲಾ ಮಕ್ಕಳ ಹಾಜರಾತಿಗೆ ಫೇಸ್ ರೆಕಗ್ನೀಶನ್ ಕಡ್ಡಾಯ, ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏನಿದು ಹೊಸ ಫೇಸ್ ರಕಗ್ನೀಶನ್ ನಿಯಮ, ಪೋಷಕರು ಏನು ಮಾಡಬೇಕು, ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
09:25 PM (IST) Feb 16
09:04 PM (IST) Feb 16
ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾದ, ಗುರುತುಗಳಿಲ್ಲದ ರಸ್ತೆ ಉಬ್ಬಿನಲ್ಲಿ ಬೈಕ್ ಹಾರಿಬಿದ್ದ ಪರಿಣಾಮ 28 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದನು. ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.
09:02 PM (IST) Feb 16
ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ, ಚಂದನ್ ಶೆಟ್ಟಿ ಅವರಿಂದ ವಿಚ್ಛೇದನ ಪಡೆದ ನಂತರ ಆರ್ಥಿಕವಾಗಿ ಸದೃಢಳಾಗಲು ಯಾವುದೇ ಪಾತ್ರಕ್ಕೂ ಸೈ ಎಂದಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ದಾಂಪತ್ಯ ಜೀವನದ ಬಗ್ಗೆ ಟಿಪ್ಸ್ ನೀಡಿರುವ ಅವರ ವಿಡಿಯೋ ವೈರಲ್ ಆಗಿದೆ.
08:46 PM (IST) Feb 16
ಭೋಪಾಲ್ನಲ್ಲಿ, ಸ್ನಾನಕ್ಕೆ ನೀರು ಬಿಸಿ ಮಾಡಲು ಇಮ್ಮರ್ಶನ್ ರಾಡ್ ಬಳಸುತ್ತಿದ್ದ 13 ವರ್ಷದ ಬಾಲಕ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾನೆ. ನೀರು ಬಿಸಿಯಾಗಿದೆಯೇ ಎಂದು ಪರೀಕ್ಷಿಸಲು ವಿದ್ಯುತ್ ಸಂಪರ್ಕ ಇರುವಾಗಲೇ ಬಕೆಟ್ಗೆ ಕೈ ಹಾಕಿದಾಗ ಈ ದುರಂತ ಸಂಭವಿಸಿದೆ.
08:36 PM (IST) Feb 16
ಈ ವಾರದಲ್ಲಿ ಆರ್ಸಿಬಿ ಮಾಲೀಕತ್ವ ಅಂತಿಮ, 9 ಬಿಡ್ಡರ್ ಪೈಕಿ ವಿಜಯ್ ಮಲ್ಯ ಇದ್ದಾರಾ? ಆರ್ಸಿಬಿ ಮಾಲೀಕರಾಗಲು ಉದ್ಯಮಿಗಳು, ಕೆಲ ಸಂಸ್ಥೆಗಳು ಆಸಕ್ತಿ ತೋರಿದೆ. ಈ ವಾರ ಹರಾಜು ನಡೆಯಲಿದೆ. 9-10 ಬಿಡ್ಡರ್ ಪೈಕಿ ವಿಜಯ್ ಮಲ್ಯ ಬಿಡ್ಡಿಂಗ್ ಲಿಸ್ಟ್ನಲ್ಲಿದ್ದಾರ?
08:11 PM (IST) Feb 16
ಮಧ್ಯಪ್ರದೇಶದ ಛತ್ತರ್ಪುರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮುಸ್ಲಿಂ ಸೋದರಿಯರು, ಹಿಂದೂ ಸೋದರ ಸಂಬಂಧಿಗಳನ್ನು ವಿವಾಹವಾಗಿ ಪ್ರತ್ಯಕ್ಷರಾಗಿದ್ದಾರೆ. ತಮ್ಮ ಕುಟುಂಬದಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿರುವ ಅವರು ಪೊಲೀಸ್ ರಕ್ಷಣೆ ಕೋರಿ ವೀಡಿಯೋ ಬಿಡುಗಡೆ ಮಾಡಿದ್ದಾರೆ.
08:05 PM (IST) Feb 16
07:50 PM (IST) Feb 16
ಪ್ರಸಿದ್ಧ ಕಂಟೆಂಟ್ ಕ್ರಿಯೇಟರ್ ಧ್ರುವ್ ರಾಠಿ, ಇತ್ತೀಚಿನ ಸಂದರ್ಶನವೊಂದರಲ್ಲಿ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಕುರಿತು ತಾವು ಮಾಡಿದ ವಿಡಿಯೋದ ಬಗ್ಗೆ ಮಾತನಾಡಿದ್ದಾರೆ. ದಕ್ಷಿಣ ಭಾರತದ ಜನರು ತಮ್ಮ ನೆಚ್ಚಿನ ನಟರು ಮತ್ತು ಸಿನಿಮಾಗಳ ಬಗ್ಗೆ ಹೆಚ್ಚು ಅಭಿಮಾನ ಹೊಂದಿರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
07:39 PM (IST) Feb 16
ಜಯನಗರದಲ್ಲಿ ಶೀಘ್ರದಲ್ಲೇ ಪೇಯ್ಡ್ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ 42 ರಸ್ತೆಗಳಲ್ಲಿ ಕಾರು, ದ್ವಿಚಕ್ರ ವಾಹನಗಳಿಗೆ ಶುಲ್ಕ ಸಹಿತ ನಿಲುಗಡೆ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅಕ್ರಮ ಪಾರ್ಕಿಂಗ್ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ.
07:12 PM (IST) Feb 16
06:48 PM (IST) Feb 16
ಬಳ್ಳಾರಿಯಲ್ಲಿ, ರೈಲ್ವೆ ಬ್ರಿಡ್ಜ್ ಮೇಲೆ ಅಪಾಯಕಾರಿಯಾಗಿ ರೀಲ್ಸ್ ಮಾಡುತ್ತಿದ್ದ ವಿಶ್ವನಾಥ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಆಧರಿಸಿ, ಬ್ರೂಸ್ಪೇಟೆ ಪೊಲೀಸರು ಪತ್ತೆಹಚ್ಚಿ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ತಂದ ಆರೋಪದಡಿ ಕ್ರಮ ಕೈಗೊಂಡಿದ್ದಾರೆ.
06:36 PM (IST) Feb 16
06:33 PM (IST) Feb 16
ಯಶ್ ಟಾಕ್ಸಿಕ್ ಸಿನಿಮಾಗಾಗಿ ಕಾಯುತ್ತಿರುವ ಫ್ಯಾನ್ಸ್ಗೆ ಫೆಬ್ರವರಿಯಲ್ಲೇ ಗುಡ್ ನ್ಯೂಸ್ ಸಿಗಲಿದೆ. ಕನ್ನಡ ಮಾತ್ರವಲ್ಲ ದೇಶಾದ್ಯಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಯಶ್ ಟಾಕ್ಸಿಕ್ ತಂಡ ಇದೇ ತಿಂಗಳಲ್ಲಿ ಸಿಹಿ ಸುದ್ದಿ ನೀಡುತ್ತಿದೆ.
05:59 PM (IST) Feb 16
ನಿನ್ನೆ ಮಹಾಶಿವರಾತ್ರಿಯನ್ನು ದೇಶದೆಲ್ಲೆಡೆಯ ಜನ ಸಂಭ್ರಮ ಸಡಗರದಿಂದ ಆಚರಿಸಿದ್ರು, ಸರತಿ ಸಾಲಿನಲ್ಲಿ ನಿಂತು ಜನ ದೇವರ ದರ್ಶನ ಪಡೆದರು. ಸನಾತನ ಧರ್ಮದ ಗಂಧಗಾಳಿ ಇಲ್ಲದ ದೂರದ ದೇಶದಲ್ಲೂ ಜನ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
05:53 PM (IST) Feb 16
05:44 PM (IST) Feb 16
05:34 PM (IST) Feb 16
Bhagyalakshmi Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯ ಮನೆ ಮುಂದೆ ತಾಂಡವ್ ಕ್ಷಮೆ ಕೇಳಿದ್ದೂ ಆಯ್ತು, ಶ್ರೇಷ್ಠ ಬಂದು ಇನ್ನೊಂದಿಷ್ಟು ರಾಮಾಯಣ ಮಾಡಿದ್ದೂ ಆಯ್ತು. ಅಷ್ಟೇ ಯಾಕೆ? ಶ್ರೇಷ್ಠಾಳಿಗೆ ತಾಂಡವ್ ಬಾರಿಸಿದ್ದೂ ಆಯ್ತು.
05:13 PM (IST) Feb 16
04:57 PM (IST) Feb 16
ಮಹಾಶಿವರಾತ್ರಿ ದಿನ 'ಶರೀಫ್ ಭಾಯ್ ಬಿರಿಯಾನಿ'ಯಿಂದ ಆರ್ಡರ್ ಮಾಡಿದ ಪನೀರ್ ಬಿರಿಯಾನಿಯಲ್ಲಿ ಚಿಕನ್ ತುಂಡು ಪತ್ತೆಯಾಗಿದೆ. 'ವೆಜ್' ಎಂದು ಲೇಬಲ್ ಮಾಡಿದ್ದರೂ ಮಾಂಸದ ತುಂಡು ಸಿಕ್ಕಿರುವುದು ಗ್ರಾಹಕರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
04:53 PM (IST) Feb 16
Rashmika mandanna: ವರ್ಷಗಳಿಂದ ನಟಿ ರಶ್ಮಿಕಾ, ನಟ ವಿಜಯ ದೇವರಕೊಂಡ ಅವರು ಮದುವೆ ಆಗುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಕಳೆದ ಎರಡು ತಿಂಗಳಿಂದ ಈ ಜೋಡಿ ಮದುವೆ ಬಗ್ಗೆ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲದೆ ಇವರ ಮದುವೆ ತಯಾರಿಗೆಂಡು ಮಾಡಿದ ಮಂಟಪದ ವಿಡಿಯೋ ಕೂಡ ವೈರಲ್ ಆಗಿತ್ತು.
04:51 PM (IST) Feb 16
04:10 PM (IST) Feb 16
ಕಾಸರಗೋಡಿನ ಜನಪ್ರಿಯ ಇನ್ಸ್ಟಾಗ್ರಾಂ ತಾರೆ ಚಿನ್ನು ಪಾಪು ಅಲಿಯಾಸ್ ರೇಷ್ಮಾ ಅವರ ಆತ್ಮ*ಹತ್ಯೆಯ ಬೆನ್ನಲ್ಲೇ, ಆಕೆಯ ಆಪ್ತ ಸ್ನೇಹಿತ ಸಂದೇಶ್ ಕೂಡ ಸಾವಿಗೆ ಶರಣಾಗಿದ್ದಾರೆ. ಒಂದು ವಾರದ ಅಂತರದಲ್ಲಿ ನಡೆದ ಈ ಜೋಡಿ ಸಾವುಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
04:06 PM (IST) Feb 16
ಗಂಗಾವತಿ ತಾಲೂಕಿನ ಸಾಣಾಪೂರದಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾ*ಚಾರ ಮತ್ತು ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, 3 ಆರೋಪಿಗಳಿಗೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಘಟನೆ ನಡೆದ 9 ತಿಂಗಳೊಳಗೆ ನ್ಯಾಯಮೂರ್ತಿ ಅವರು ಈ ಐತಿಹಾಸಿಕ ತೀರ್ಪು ನೀಡಿದ್ದಾರೆ.
03:24 PM (IST) Feb 16
03:17 PM (IST) Feb 16
01:58 PM (IST) Feb 16
ಬೆಂಗಳೂರಿನಲ್ಲಿ, ಸರ್ಕಾರಿ ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕನೊಬ್ಬ ಗ್ರಾಹಕರ ಲಾಕರ್ನಿಂದ ₹4.12 ಕೋಟಿ ಮೌಲ್ಯದ ಚಿನ್ನವನ್ನು ಕದ್ದಿದ್ದಾನೆ. ಈ ಚಿನ್ನವನ್ನು ಅಡವಿಟ್ಟು ಬಂದ ಹಣವನ್ನು ಆನ್ಲೈನ್ ಬೆಟ್ಟಿಂಗ್ನಲ್ಲಿ ಕಳೆದುಕೊಂಡಿದ್ದು, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ.
01:55 PM (IST) Feb 16
Actress Rashmi Leela: ಕನ್ನಡದ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದ ರಶ್ಮಿಲೀಲಾ ಅವರು ಅಸು ನೀಗಿದ್ದಾರೆ. ಹಾಗಾದರೆ ರಶ್ಮಿಲೀಲಾಗೆ ಏನಾಗಿತ್ತು? ಇವರ ಪತಿ ಸಾರಕ್ಕಿ ಮಂಜು ಅವರು ಸಂಭಾಷಣೆಕಾರರಾಗಿ ಕೆಲಸ ಮಾಡುತ್ತಿದ್ದಾರೆ.
01:35 PM (IST) Feb 16
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿನ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ 8 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
01:28 PM (IST) Feb 16
Gokarna Temple: ಗೋಕರ್ಣದ ಆತ್ಮಲಿಂಗ ಮಹಾಬಲೇಶ್ವರ ದೇವಸ್ಥಾನದ ದರ್ಶನವನ್ನು ಪಡೆದು ಕೆಲವೇ ನಿಮಿಷಗಳಲ್ಲಿ ವ್ಯಕ್ತಿ ಅಸು ನೀಗಿದ್ದಾರೆ. ಹೌದು, ಈ ಬಗ್ಗೆ ವರದಿಯಾಗಿದೆ. ಹಾಗಾದರೆ ಅವರಿಗೆ ಏನಾಗಿತ್ತು?
01:23 PM (IST) Feb 16
ಜೈಲುಪಾಲಾಗಿರುವನಟ ದರ್ಶನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಈ ವೇಳೆ ದರ್ಶನ್ ನಿವಾಸದ ಬಳಿ ಅಭಿಮಾನಿಯೊಬ್ಬನಿಗೆ ಪೊಲೀಸ್ ಅಧಿಕಾರಿಯೊಬ್ಬರು ಕಪಾಳಮೋಕ್ಷ ಮಾಡಿದ್ದು, ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಪತಿಗಾಗಿ ಪೋಸ್ಟ್ ಹಂಚಿಕೊಂಡಿದ್ದಾರೆ.
01:17 PM (IST) Feb 16
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ಮಗಳ ಎಸ್ಎಸ್ಎಲ್ಸಿ ಪರೀಕ್ಷೆಯ ಕಾರಣ ನೀಡಿ ಸಲ್ಲಿಸಿದ್ದ ಹಂಗಾಮಿ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಗೆಳೆಯ ನಟ ದರ್ಶನ್ ಬರ್ತಡೇ ದಿನವೇ ಪವಿತ್ರಾ ಗೌಡಗೆ ಹಿನ್ನಡೆಯಾಗಿದ್ದು, ಸದ್ಯಕ್ಕೆ ಜೈಲಿನಲ್ಲಿಯೇ ಇರಬೇಕಾಗಿದೆ.
01:17 PM (IST) Feb 16
ವಿಜಯಪುರದಲ್ಲಿ ಮಹಾಶಿವರಾತ್ರಿ ಜಾಗರಣೆಗಾಗಿ ಕುಟುಂಬವೊಂದು ಹೊರಗೆ ತೆರಳಿದ್ದಾಗ, ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ನಗದು, ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ದೋಚಿದ್ದಾರೆ. ಶಾರದಾ ನಗರದಲ್ಲಿ ನಡೆದ ಈ ಘಟನೆ ಸಂಬಂಧ ಗೋಲಗುಂಬಜ್ ಪೊಲೀಸರು ತನಿಖೆ ಆರಂಭಿಸಿದ್ದಾರೆ.
12:58 PM (IST) Feb 16
( ಸಂದರ್ಶನ-ಜೋಗಿ )
Rakshit Shetty: ರಕ್ಷಿತ್ ಶೆಟ್ಟರನ್ನು ಮೊದಲಿನಿಂದಲೂ ನೋಡಿಕೊಂಡು ಬಂದವರಿಗೆ ಅವರು ಕೆಲಸ ಮಾಡುವ ಶೈಲಿ ಗೊತ್ತು. ಯಾವುದನ್ನೂ ಉಸಿರುಗಟ್ಟಿ ಮಾಡಿ ಮುಗಿಸಬೇಕು, ಹಿಂದಿನ ಸಿನಿಮಾದ ಗೆಲುವಿನ ಮೇಲೆ ಮುಂದಿನ ಸಿನಿಮಾ ಕಟ್ಟಬೇಕು ಅನ್ನುವ ಉದ್ದೇಶ ಇಲ್ಲ.
12:52 PM (IST) Feb 16
ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆಗಳು 24 ಗಂಟೆಗಳಲ್ಲಿ ಇಬ್ಬರ ಪ್ರಾಣ ತೆಗೆದಿವೆ. ಆಡುಗೋಡಿಯಲ್ಲಿ ಗುಂಡಿಗೆ ಮಹಿಳೆ ಬಲಿಯಾದರೆ, ಕೆ.ಆರ್.ಪುರಂನಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಯಿಂದ ಎರಡು ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿವೆ.
12:33 PM (IST) Feb 16
ಚಿತ್ರದುರ್ಗದ ಭರಮಸಾಗರ ಗ್ರಾಮದ ಡಿವಿಎಸ್ ಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿ ಕೊಟ್ರೇಶ್, ಹಾಸ್ಟೆಲ್ ವಾರ್ಡನ್ ಕಿರುಕುಳದಿಂದ ನೊಂದು ಶಾಲಾ ಕಟ್ಟಡದ ಎರಡನೇ ಮಹಡಿಯಿಂದ ಜಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
12:25 PM (IST) Feb 16
ಧಾರವಾಡ, ದಾವಣಗೆರೆ, ಮತ್ತು ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ರಾಜ್ಯಾದ್ಯಂತ ಆತಂಕ ಸೃಷ್ಟಿಯಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು, ನ್ಯಾಯಾಲಯದ ಆವರಣಗಳನ್ನು ಖಾಲಿ ಮಾಡಿಸಿ ತೀವ್ರ ಶೋಧ ಕಾರ್ಯ ನಡೆಸಿವೆ.
12:02 PM (IST) Feb 16
ಜಾನುವಾರಿಗೆ ಮೇವು ಮತ್ತು ಸೊಪ್ಪು ತರಲು ಕಾಡಿಗೆ ಹೋಗಿ ಮರ ಹತ್ತಿ ಸೊಪ್ಪು ಕಡಿಯುತ್ತಿರುವಾಗ ಕಡಿದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವನಪ್ಪಿದ ದುರ್ಘಟನೆ ಶನಿವಾರ ನಡೆದಿದೆ.
ಸಮೀಪದ ಉಳ್ಳೂರು ಬ್ರಾಹ್ಮಣ ಮಂಚಾಲೆ ಗ್ರಾಮದ ನಿವಾಸಿಯಾದ ಹೇಮಂತ್ (27) ಮೃತ ವ್ಯಕ್ತಿ.
11:58 AM (IST) Feb 16
Gooli Kannada Movie: ಕಿಚ್ಚ ಸುದೀಪ್ ನಟನೆಯ ಗೂಳಿ ಸಿನಿಮಾ ಹೀರೋಯಿನ್ ಮಮತಾ ಮೋಹನ್ದಾಸ್ ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದರು, ಆದರೆ ವೈಯಕ್ತಿಕ ಜೀವನ ಮಾತ್ರ ಸರಿ ಹೋಗಲೇ ಇಲ್ಲ. ಈ ಬಗ್ಗೆ ಅವರು ಮಾತನಾಡಿದ್ದಾರೆ.
11:37 AM (IST) Feb 16
ತನ್ನ ಕೊ*ಲೆಯಾಗಿದೆ ಎಂದು ಬಿಂಬಿಸಿ, ಪ್ರಿಯಕರ ಡೇವಿಡ್ ಜೊತೆ 30 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಪರಾರಿಯಾಗಲು ಪ್ರಿಯಾಂಕಾ ಪ್ಲಾನ್ ಮಾಡಿದ್ದಳು. ಆದರೆ, ಬಿಹಾರಕ್ಕೆ ತೆರಳುವ ಮುನ್ನವೇ ಬೇಲೂರು ಪೊಲೀಸರು ಟವರ್ ಲೊಕೇಶನ್ ಆಧರಿಸಿ ಕುಣಿಗಲ್ನಲ್ಲಿ ಇಬ್ಬರನ್ನೂ ಪತ್ತೆಹಚ್ಚಿದ್ದಾರೆ.