ತೀರ್ಥಹಳ್ಳಿ: ಆಗುಂಬೆ ಘಾಟ್ ಮಾರ್ಗದ ಅಗಲೀಕರಣಕ್ಕೆ ಸಂಬಂಧಿಸಿ ತಾಂತ್ರಿಕ ತಜ್ಞರ ಅಭಿಪ್ರಾಯದ ಆಧಾರದಲ್ಲಿ ಕೇಂದ್ರ ಸರ್ಕಾರದ ತೀರ್ಮಾನ ಅಂತಿಮವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಗುಂಬೆ ಮಾರ್ಗದ ಅಗಲೀಕರಣ ಮತ್ತು ಸುರಂಗ ಮಾರ್ಗ ನಿರ್ಮಾಣ ಎರಡಕ್ಕೂ ಅವಕಾಶವಿದ್ದು, ರಾಜ್ಯ ಸರ್ಕಾರದ ಪೂರ್ಣ ಸಹಕಾರವೂ ಇದೆ. ಅಂತಿಮ ತೀರ್ಮಾನ ಕೇಂದ್ರ ಸರ್ಕಾರದ್ದು ಎಂದರು.
ಹುಲಿಕಲ್ ಘಾಟಿಯ ಬಗ್ಗೆ ಪ್ರತಿಕ್ರಿಯಿಸಿ, ಹುಲಿಕಲ್ ಘಾಟಿಯ ಕೆಲಸ ಇನ್ನೂ ಪೂರ್ಣಗೊಂಡಿಲ್ಲ. ಕಾರು ಮತ್ತು ಪ್ರಯಾಣಿಕರ ಬಸ್ಸುಗಳಿಗೆ ಅನುಮತಿ ನೀಡಲಾಗಿದೆ. ಉಳಿದಂತೆ ಭಾರಿ ವಾಹನಗಳ ಸಂಚಾರದ ಬಗ್ಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
11:43 PM (IST) Jul 16
ನಿಮಗೆ ನನ್ನ ಮೇಲೆ ದ್ವೇಷ ಇದ್ದರೆ ನೇರವಾಗಿ ಎದುರು ಬಂದು ಮಾತಾಡಿ, ಬಚ್ಚಿಟ್ಟುಕೊಂಡು ಸಿನಿಮಾ ಮೇಲೆ ಹೊಡೀಬೇಡಿ. ಮದರ್ ಪ್ರಾಮಿಸ್ ಒಂದೊಳ್ಳೆ ಸಿನಿಮಾ ಅಂತ ಗುರುತಿಸಿಕೊಂಡಿದೆ ಎಂದರು ಡಾಲಿ ಧನಂಜಯ.
10:58 PM (IST) Jul 16
ಚಿಕ್ಕಬಳ್ಳಾಪುರದ ರೈತ ಬಸವರಾಜ್ ಅವರ ತೋಟದಿಂದ ಕಟಾವಿಗೆ ಸಿದ್ಧವಾಗಿದ್ದ 2.5 ಟನ್ 'ರೆಡ್ ಗ್ಲೋಬ್' ದ್ರಾಕ್ಷಿಯನ್ನು ಕಳ್ಳರು ರಾತ್ರೋರಾತ್ರಿ ಕದ್ದೊಯ್ದಿದ್ದಾರೆ. ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ ರೈತ, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಣ್ಣೀರು ಹಾಕುತ್ತಿದ್ದಾರೆ.
09:24 PM (IST) Jul 16
Om Kannada Movie: ಭಾರತೀಯ ಚಿತ್ರರಂಗದ ಬಹುಮುಖ ಪ್ರತಿಭೆಗಳಲ್ಲಿ ಒಬ್ಬರಾಗಿರುವ ಖ್ಯಾತ ನಟ, ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ಮತ್ತೊಮ್ಮೆ ಕನ್ನಡ ಸಿನಿಮಾಗಳ ಮೇಲಿನ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.
07:05 PM (IST) Jul 16
05:41 PM (IST) Jul 16
Saregamapa Kannada Show: ಜೀ ಕನ್ನಡ ಸಂಗೀತ ಕಾರ್ಯಕ್ರಮ 'ಸರಿಗಮಪ' ಹೊಸ ಸೀಸನ್ನೊಂದಿಗೆ ಮರಳಿ ಬರುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಆಡಿಷನ್ ಕೂಡ ಆಗಿದೆ. ಹಾಗಿದ್ದರೆ ಯಾವಾಗ? ಎಲ್ಲಿ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
05:40 PM (IST) Jul 16
ವಿಡಿಯೋದಲ್ಲಿ ಶಿವರಾಜ್ಕುಮಾರ್, ಸಾಂಪ್ರದಾಯಿಕ ಕಪ್ಪು ಬಣ್ಣದ ಬಟ್ಟೆ, ಹಣೆಗೆ ತಿಲಕ, ಕಿವಿಯಲ್ಲಿ, ಕೊರಳಲ್ಲಿ ಮತ್ತು ಕೈಯಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ಮನೆಯೊಳಗೆ ಪ್ರವೇಶಿಸುತ್ತಿರುವ ದೃಶ್ಯಗಳು ಗಮನ ಸೆಳೆಯುತ್ತವೆ.
05:04 PM (IST) Jul 16
Ra Ra RX Kannada Movie: ಪತ್ರಕರ್ತ, ಕಲಾವಿದ ಹಾಗೂ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಯತಿರಾಜ್ ಇದೀಗ ತಮ್ಮ ಹೊಸ ಕನಸಿನ ಸಿನಿಮಾ 'ರಾ.. ರಾ.. RX' ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.
05:01 PM (IST) Jul 16
04:56 PM (IST) Jul 16
ರಾಜಧಾನಿಯ ಕಾನೂನು ಸುವ್ಯವಸ್ಥೆ ಬಲಪಡಿಸಲು, ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಅನ್ನು ಎರಡು ಅಥವಾ ಮೂರು ಭಾಗಗಳಾಗಿ ವಿಭಜಿಸಲು ಕರ್ನಾಟಕ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಪ್ರಸ್ತಾವನೆಯನ್ನು ಖಚಿತಪಡಿಸಿದ್ದಾರೆ.
04:38 PM (IST) Jul 16
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಸೂಪರ್ ಹಿಟ್ 'ರಾಜಾಹುಲಿ' ಚಿತ್ರದ ಸಹಾಯಕ ನಿರ್ದೇಶಕರಾಗಿ ಸಿನಿಪಯಣ ಆರಂಭಿಸಿದ್ದ ಹೊನ್ನರಾಜ್, ಇದೀಗ 'ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ' ಚಿತ್ರದ ಮೂಲಕ ಹೊಸ ಅಧ್ಯಾಯ ಆರಂಭಿಸಿದ್ದಾರೆ.
04:32 PM (IST) Jul 16
04:22 PM (IST) Jul 16
'ಅತಿಕಾಯ' ಚಿತ್ರದಲ್ಲಿ ಅವರು ಇದುವರೆಗೂ ಕಾಣಿಸದ ರಗಡ್ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದು, ಅವರ ಜೋಡಿಯಾಗಿ ಪ್ರತಿಭಾವಂತ ನಟಿ ಸ್ವಾತಿಷ್ಟ ಕೃಷ್ಣನ್ ಅಭಿನಯಿಸುತ್ತಿರುವುದು ಚಿತ್ರದ ಮತ್ತೊಂದು ವಿಶೇಷ.
04:18 PM (IST) Jul 16
04:14 PM (IST) Jul 16
ಫುಟ್ಬಾಲ್ ದಂತಕಥೆ ಮೆಸ್ಸಿ ಮತ್ತು ಉದಯೋನ್ಮುಖ ತಾರೆ ಲ್ಯಾಮಿನ್ ಯಮಾಲ್ 2026ರ ವಿಶ್ವಕಪ್ ಫೈನಲ್ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. 19 ವರ್ಷಗಳ ಹಿಂದೆ, 2007ರಲ್ಲಿ ನಡೆದ ಒಂದು ಚಾರಿಟಿ ಫೋಟೋಶೂಟ್ನಲ್ಲಿ ಮೆಸ್ಸಿ, ಹಸುಗೂಸಾಗಿದ್ದ ಯಮಾಲ್ನನ್ನು ಎತ್ತಿಕೊಂಡಿದ್ದ ಅಪರೂಪದ ಚಿತ್ರ ವೈರಲ್ ಆಗಿದೆ.
04:09 PM (IST) Jul 16
Rukmini Radha Krishna Kannada Movie: ಪಾರು ಧಾರಾವಾಹಿ ಖ್ಯಾತಿಯ ನಟಿ ಮೋಕ್ಷಿತಾ ಪೈ ಅವರು 'ರುಕ್ಮಿಣಿ ರಾಧಾಕೃಷ್ಣ' ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಎರಡು ಹಾಡುಗಳು ರಿಲೀಸ್ ಆಗಿವೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
03:54 PM (IST) Jul 16
ಉಡುಪಿಯ ಸಾಮಾನ್ಯ ಕುಟುಂಬದ ಸ್ಪೂರ್ತಿ ಶೆಟ್ಟಿ 'ಮಿಸ್ ಯೂನಿವರ್ಸ್ ಇಂಡಿಯಾ' ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ. ಪ್ರಾದೇಶಿಕ ಸುತ್ತಿನಲ್ಲಿ ಸೋತರೂ 'ವೈಲ್ಡ್ ಕಾರ್ಡ್ ಎಂಟ್ರಿ' ಮೂಲಕ ರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಟ್ಟಿರುವ ಇವರ ಯಶೋಗಾಥೆ ಹಲವರಿಗೆ ಸ್ಪೂರ್ತಿದಾಯಕವಾಗಿದೆ.
03:52 PM (IST) Jul 16
ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರು ಎರಡು ವರ್ಷ ಪೂರೈಸಿದ್ದಾರೆ. ಬೆನ್ನಲ್ಲೇ ಅವರ ಕಾರ್ಯ ಕ್ಷಮತೆ ಬಗ್ಗೆ ಮಾಜಿ ಕ್ರಿಕೆಟಿಗರು ಪ್ರಶ್ನೆ ಮಾಡಿದ್ದಾರೆ. ಮೊಹ್ಮದ್ ಕೈಫ್ 10ಕ್ಕೆ 4 ಅಂಕ ನೀಡಿದ ಬೆನ್ನಲ್ಲೇ ಜಹೀರ್ ಖಾನ್ ಕೂಡ ರೇಟ್ ನೀಡಿದ್ದಾರೆ. ಎಷ್ಟು ಎಂದು ತಿಳಿದುಕೊಳ್ಳಲು ಸ್ಟೋರಿ ಓದಿ.
03:23 PM (IST) Jul 16
01:26 PM (IST) Jul 16
ಜೀ ಕನ್ನಡದ ಮಹಾನಟಿ ಖ್ಯಾತಿಯ ನಟಿ ವರ್ಷಾ ಡಿಗ್ರಜೆ, ತಮಗೆ ಸ್ನೇಹಿತರಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಣ್ಣೀರಿಟ್ಟಿದ್ದಾರೆ. ಶಾಲಾ ದಿನಗಳಲ್ಲಿ ತಾನು ಮಾಡಿದ ತರಲೆ ಕೆಲಸಗಳಿಂದಾಗಿ ಯಾರು ತನ್ನೊಂದಿಗೆ ಸ್ನೇಹ ಬೆಳೆಸಲಿಲ್ಲ ಎಂದು ವಿಡಿಯೋದಲ್ಲಿ ವಿವರಿಸಿದ್ದಾರೆ.
01:25 PM (IST) Jul 16
01:10 PM (IST) Jul 16
12:25 PM (IST) Jul 16
ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿದ್ದಾರೆ. ಯುವತಿಯು ವಿಡಿಯೋ ಮೂಲಕ ಸಹಾಯ ಯಾಚಿಸಿದ ನಂತರ, ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಇದೀಗ ಪಾಪಿ ಪೋಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
11:46 AM (IST) Jul 16
11:32 AM (IST) Jul 16
ಸಚಿವ ಕೃಷ್ಣ ಭೈರೇಗೌಡರ ಸೂಚನೆಯಂತೆ, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಖಾಸಗಿ ಬಸ್ಗಳ ಮೇಲೆ ಕ್ರಮ. . ಟ್ರಾಫಿಕ್ ಸಿಗ್ನಲ್ಗಳ 75 ಮೀಟರ್ ಅಂತರದಲ್ಲಿ ಬಸ್ ನಿಲುಗಡೆ ನಿಷೇಧಿಸುವ ನಿಯಮ ಜಾರಿಯಾಗಲಿದ್ದು, ಮೆಜೆಸ್ಟಿಕ್, ಕಲಾಸಿಪಾಳ್ಯದಂತಹ ಪ್ರಮುಖ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮ.
11:22 AM (IST) Jul 16
10:11 AM (IST) Jul 16
ಬಿಡದಿ ಟೌನ್ಶಿಪ್ ಕೈಬಿಡುವಂತೆ ಆಗ್ರಹಿಸಿ ಜು.17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು, ಮಾಜಿ ಸಂಸದರು ಸೇರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಪಾದಿಸಿದರು.
10:09 AM (IST) Jul 16
ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ವೈದ್ಯರು ನೀಡಿರುವ ಮಾಹಿತಿ ಇಲ್ಲಿದೆ.
09:36 AM (IST) Jul 16
ಧಾರವಾಡದ ಪ್ರತಿಷ್ಠಿತ ಅಪಾರ್ಟ್ಮೆಂಟ್ನಲ್ಲಿ, ನೇತ್ರತಜ್ಞೆ ಡಾ. ಪ್ರಿಯಾಂಕಾ ತನ್ನ ಪತಿ, ಅರವಳಿಕೆ ತಜ್ಞ ಡಾ. ಕಿರಣ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಈ ಕೃತ್ಯವನ್ನು ಮುಚ್ಚಿಹಾಕಲು ತನ್ನ 8 ವರ್ಷದ ಮಗನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸದ್ಯ ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ.
09:29 AM (IST) Jul 16
09:25 AM (IST) Jul 16
08:56 AM (IST) Jul 16
08:40 AM (IST) Jul 16
07:56 AM (IST) Jul 16
07:36 AM (IST) Jul 16
07:34 AM (IST) Jul 16
ಮನೆ ಹೊರಗೆ ಒಣ ಹಾಕುತ್ತಿದ್ದ ಒಳ ಉಡುಪುಗಳನ್ನು ರಾತ್ರಿ ಕಳವು ಮಾಡುತ್ತಿದ್ದ ಕಿಡಿಗೇಡಿಯೊಬ್ಬನನ್ನು ಇಬ್ಬರು ಯುವತಿಯರು ಪತ್ತೆ ಹಚ್ಚಿ ಇಂದಿರಾನಗರ ಠಾಣೆ ಪೊಲೀಸರಿಗೆ ಹಿಡಿದು ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.