LIVE NOW
Published : Jun 16, 2026, 05:05 AM ISTUpdated : Jun 16, 2026, 09:02 AM IST

Karnataka News Live ರಾಜ್ಯದಲ್ಲಿ ಈವರೆಗೆ ಶೇ.21ರಷ್ಟು ಭಾರೀ ಮುಂಗಾರು ಕೊರತೆ: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್ - ಕೋಟಿ ಕೋಟಿ ಆಸ್ತಿ ಪತ್ತೆ, ಎಲ್ಲೆಲ್ಲಿ ದಾಳಿ?

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಜೂನ್ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಶೇ.21ರಷ್ಟು ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಪೂರ್ವ ಮುಂಗಾರು ಮಳೆ ಕೂಡ ಕಡಿಮೆ ಬಿದ್ದಿರುವುದರಿಂದ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟ ಕಡಿಮೆಯಿರುವುದು ಆತಂಕ ಮೂಡಿಸಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.

09:02 AM (IST) Jun 16

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್ - ಕೋಟಿ ಕೋಟಿ ಆಸ್ತಿ ಪತ್ತೆ, ಎಲ್ಲೆಲ್ಲಿ ದಾಳಿ?

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ, ಮತ್ತು ಬೆಂಗಳೂರಿನಲ್ಲಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಈ ಕಾರ್ಯಾಚರಣೆ ನಡೆದಿದೆ.
Read Full Story

09:01 AM (IST) Jun 16

ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ತನಿಖೆ CBI ಗೆ ವಹಿಸಿ; ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಬರೆದ ಸಿ.ಟಿ ರವಿ

ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆದಿದೆ ಎನ್ನಲಾದ ₹200 ಕೋಟಿ ವೆಚ್ಚದ ಷಡ್ಯಂತ್ರದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಈ ಸಂಚಿನ ಹಿಂದೆ ದೊಡ್ಡ ಜಾಲವಿದ್ದು, ಹಣದ ಮೂಲ ಮತ್ತು ಇದರಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಲು ಕೇಂದ್ರ ತನಿಖಾ ಸಂಸ್ಥೆಯಿಂದಲೇ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
Read Full Story

08:22 AM (IST) Jun 16

ಬುರುಡೆ ಗ್ಯಾಂಗ್‌ನಿಂದ ಜೀವ ಬೆದರಿಕೆಯಿದೆ - ಮಾಸ್ಕ್‌ಮ್ಯಾನ್ ಚಿನ್ನಯ್ಯ ಆರೋಪ! ಅಷ್ಟಕ್ಕೂ SIT ಗೆ ಸಲ್ಲಿಸಿದ ದೂರಿನಲ್ಲಿ ಏನಿದೆ?

ಧರ್ಮಸ್ಥಳದ ಬುರುಡೆ ಪ್ರಕರಣದಲ್ಲಿ ಸಾಕ್ಷಿಯಿಂದ ಆರೋಪಿಯಾಗಿರುವ ಚಿನ್ನಯ್ಯ, ತನಗೆ ಜೀವ ಬೆದರಿಕೆ ಇದೆ ಎಂದು ಎಸ್ಐಟಿಗೆ ದೂರು ನೀಡಿದ್ದಾನೆ. ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಬಳಿಕ ಗಿರೀಶ್ ಮಟ್ಟಣ್ಣನವರ್ ಮತ್ತು ಇತರರಿಂದ ಬೆದರಿಕೆ ಕರೆಗಳು ಬರುತ್ತಿದ್ದು, ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾನೆ.
Read Full Story

07:13 AM (IST) Jun 16

ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು, ಪುತ್ತೂರು ಗೆಲ್ಲಲು ಬಿಜೆಪಿಯಿಂದ ರಹಸ್ಯ ಟಾಸ್ಕ್!

ಮುಂದಿನ ಅಸೆಂಬ್ಲಿ ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗಲೇ, ಬಿಜೆಪಿ ಮಂಗಳೂರು ಮತ್ತು ಪುತ್ತೂರು ಕ್ಷೇತ್ರಗಳನ್ನು ಗೆಲ್ಲಲು ಸಿದ್ಧತೆ ಆರಂಭಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ ದಾಸ್ ಅಗರ್‌ವಾಲ್ ರಹಸ್ಯ ಸಭೆ ನಡೆಸಿ, ಪಕ್ಷದ ಚಿಹ್ನೆಗೆ ಮಹತ್ವ ನೀಡುವುದು ಮತ್ತು ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವಂತಹ ತಂತ್ರಗಾರಿಕೆಯ ಟಾಸ್ಕ್ ನೀಡಿದ್ದಾರೆ.
Read Full Story

06:56 AM (IST) Jun 16

ವಿಜಯಪುರ To ಬೇನಾಳ RS - ಕೊನೆಗೂ ಆರಂಭವಾದ ಬಹುನಿರೀಕ್ಷಿತ ಸೇವೆ, ಈಡೇರಿತು ಗ್ರಾಮಸ್ಥರ ಬೇಡಿಕೆ

ಗ್ರಾಮಸ್ಥರ ಬಹುದಿನಗಳ ಬೇಡಿಕೆಯಂತೆ ವಿಜಯಪುರದಿಂದ ಬೇನಾಳ ರೈಲು ನಿಲ್ದಾಣಕ್ಕೆ ನೂತನ ಬಸ್ ಸಂಚಾರ ಆರಂಭವಾಗಿದೆ. ಈ ಬಸ್ ಪ್ರತಿದಿನ ನಾಲ್ಕು ಟ್ರಿಪ್‌ಗಳ ಮೂಲಕ ಆಲಮಟ್ಟಿ ಉದ್ಯಾನದವರೆಗೆ ಸಂಚರಿಸಲಿದ್ದು, ವಿದ್ಯಾರ್ಥಿಗಳು, ರೈತರು ಮತ್ತು ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

Read Full Story

06:41 AM (IST) Jun 16

4 ದಶಕಗಳ ಬಳಿಕ ಒಂದೆಡೆ ಸೇರಿದ 1983-84ನೇ ಸಾಲಿನ ವಿದ್ಯಾರ್ಥಿಗಳು; ಮೃತ ಗೆಳೆಯರಿಗೆ ಕಂಬನಿ

ಹರಪನಹಳ್ಳಿಯ ಎಚ್.ಎಂ. ಏಕೋರಾಮರಾಧ್ಯ ಪ್ರೌಢಶಾಲೆಯ 1983-84ನೇ ಸಾಲಿನ ವಿದ್ಯಾರ್ಥಿಗಳು 'ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ' ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ತಮ್ಮ ಗುರುಗಳನ್ನು ಸನ್ಮಾನಿಸಿ, ಶಾಲೆಯ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ಮಾಡಿದರು. ತೆಗ್ಗಿನಮಠದ ಶ್ರೀಗಳು ಗುರುವಿನ ಮಹತ್ವವನ್ನು ಸಾರಿದರು.
Read Full Story

06:10 AM (IST) Jun 16

ಫ್ರಿ ಬಸ್ ಸ್ಮಾರ್ಟ್‌ಕಾರ್ಡ್‌ ವಿತರಣೆಗೆ ಸಿದ್ಧವಾಯ್ತು ಹೊಸ ಸೂತ್ರ - ಸಚಿವ ಬೈರತಿ ಸುರೇಶ್‌

ಶಕ್ತಿ ಯೋಜನೆ ಫಲಾನುಭವಿಗಳಿಗೆ ಸ್ಮಾರ್ಟ್‌ಕಾರ್ಡ್‌ ವಿತರಿಸಲು ವಿಶೇಷ ಉದ್ದೇಶಿತ ವಾಹಕ (ಎಸ್‌ಪಿವಿ) ರಚಿಸಲು ಸಾರಿಗೆ ಸಚಿವ ಬೈರತಿ ಸುರೇಶ್‌ ಸೂಚಿಸಿದ್ದಾರೆ. ಪಿಪಿಪಿ ಮಾದರಿಯಲ್ಲಿ ನಡೆಯುವ ಈ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಕಾರ್ಡ್‌ ನೀಡಲಾಗುವುದು ಮತ್ತು ಪುರುಷರು ಹಣ ನೀಡಿ ಖರೀದಿಸಬೇಕಾಗುತ್ತದೆ.
Read Full Story

06:00 AM (IST) Jun 16

ವಾರದಲ್ಲಿ 4 ದಿನ ದರ್ಶನ್‌ ಕೇಸ್‌ ವಿಚಾರಣೆ ಫಾಸ್ಟ್‌ ಟ್ರ್ಯಾಕ್‌; 60 ಪ್ರಮುಖ ಸಾಕ್ಷಿಗಳ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ವಾರದಲ್ಲಿ ನಾಲ್ಕು ದಿನಗಳ ಕಾಲ ಪ್ರತಿದಿನ ನಡೆಸಲು ಸೆಷನ್ಸ್ ನ್ಯಾಯಾಲಯ ನಿರ್ಧರಿಸಿದೆ. ಸುಪ್ರೀಂಕೋರ್ಟ್ ಆದೇಶದಂತೆ ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸುವ ಗುರಿಯೊಂದಿಗೆ ಈ ತೀರ್ಮಾನ ಕೈಗೊಳ್ಳಲಾಗಿದೆ. ನ್ಯಾಯಾಲಯವು ಇಬ್ಬರು ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿದೆ.
Read Full Story

05:50 AM (IST) Jun 16

ವೋಟ್ ಇರೋರಿಗೆ ಕಾಂಗ್ರೆಸ್ ಗ್ಯಾರಂಟಿ - SIRನಲ್ಲಿ ಹೆಸ್ರು ರದ್ದಾಗದಂತೆ ನೋಡಿಕೊಳ್ಳೋ ಅನಿವಾರ್ಯ

ರಾಜ್ಯದ ಗ್ಯಾರಂಟಿ ಯೋಜನೆಗಳು ಕೇವಲ ಕರ್ನಾಟಕದ ಮತದಾರರಿಗೆ ಮಾತ್ರ ಸೀಮಿತವಾಗಲಿದ್ದು, ಶೀಘ್ರದಲ್ಲೇ ವೋಟರ್ ಐಡಿ ಕಡ್ಡಾಯವಾಗುವ ಸಾಧ್ಯತೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸುಳಿವು ನೀಡಿದ್ದಾರೆ. ಯೋಜನೆಗಳ ದುರ್ಬಳಕೆ ತಡೆದು, ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Read Full Story

05:42 AM (IST) Jun 16

RSS ನೋಂದಾಯಿಸಿ, ಆಸ್ತಿಮೂಲ ತಿಳಿಸಿ, ಭಾಗವತ್‌ಗೆ 8 ಪ್ರಶ್ನೆಗಳ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಆರೆಸ್ಸೆಸ್‌ ಅನ್ನು ನೋಂದಾಯಿಸದಿರುವ ಕಾನೂನಾತ್ಮಕ ಕಾರಣಗಳು, ಅದರ ಆಸ್ತಿ, ದೇಣಿಗೆ ಮತ್ತು ತೆರಿಗೆ ಪಾವತಿ ವಿವರಗಳನ್ನು ಬಹಿರಂಗಪಡಿಸುವ ಮೂಲಕ ಪಾರದರ್ಶಕತೆ ಮೆರೆಯುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

Read Full Story

05:30 AM (IST) Jun 16

ಅನುಮಾನಾಸ್ಪದವಾಗಿ 'ಮಜಾ ಭಾರತ' ಖ್ಯಾತಿಯ ಹಾಸ್ಯ ಕಲಾವಿದ ಸಿದ್ದು ಪರಸನೂರು ನಿಧನ; ಶವ ಪತ್ತೆ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದ ಸಿದ್ದು ಪರಸನೂರು ಬೀದರ್‌ನಲ್ಲಿ ನಿಧನರಾಗಿದ್ದಾರೆ. ಹುಮ್ನಾಬಾದ್ ಹೊರವಲಯದಲ್ಲಿ ಅವರ ಶವ ಪತ್ತೆಯಾಗಿದ್ದು, ವಿದ್ಯುತ್ ಶಾಕ್‌ನಿಂದ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Read Full Story

More Trending News