LIVE NOW
Published : Jan 16, 2026, 07:37 AM ISTUpdated : Jan 16, 2026, 11:09 AM IST

State News Live: ಡಿಆರ್‌ಡಿಒ ಇಂಜಿನಿಯರ್‌ಗಳಿಗೆ ಅಚ್ಚರಿಯ ಕರೆ! ಬೆಂಗಳೂರಿನಲ್ಲಿರುವ CABS ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರಾಂಶ

ಬೆಂಗಳೂರು (ಜ.16): ಅಸ್ಸಾಂ ಚುನಾವಣೆ ಸಂಬಂಧ ಶುಕ್ರವಾರ ದೆಹಲಿಗೆ ತೆರಳುತ್ತಿದ್ದು, ಅಲ್ಲಿಎಲ್ಲನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವ ಕುಮಾರ್, ರಾಹುಲ್ గాంಧಿ ಅವರು ನಮ್ಮ ನಾಯಕರು. ಅವರ ಭೇಟಿಯಲ್ಲಿ ಹೊಸತೇನಿಲ್ಲ. ಅವರ ಭೇಟಿಯಾಗಿ ಕೆಲ ವಿಚಾರ ಚರ್ಚೆಮಾಡಿದ್ದೇನೆ.ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಇನ್ನು ಅಸ್ಸಾಂ ಚುನಾವಣೆ ಸಂಬಂಧ ಸಭೆಯಿದ್ದು, ಅದಕ್ಕಾಗಿ ಶುಕ್ರವಾರ ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿಗೆ ಹೋದಾಗ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

DRDO Recruitment

11:09 AM (IST) Jan 16

ಡಿಆರ್‌ಡಿಒ ಇಂಜಿನಿಯರ್‌ಗಳಿಗೆ ಅಚ್ಚರಿಯ ಕರೆ! ಬೆಂಗಳೂರಿನಲ್ಲಿರುವ CABS ವಿಭಾಗದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ DRDO CABS ಸಂಸ್ಥೆಯು 10 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇಂಜಿನಿಯರಿಂಗ್ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ₹37,000 ಸಂಬಳ ನೀಡಲಾಗುತ್ತದೆ. ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Read Full Story

10:48 AM (IST) Jan 16

ಮ್ಯಾಚ್‌ ಫಿಕ್ಸಿಂಗ್‌ ಇಲ್ಲ, BBK 12 ಅಶ್ವಿನಿ ಗೌಡರ ಈ ಆಸೆ ಈಡೇರಲ್ಲ - ನಾರಾಯಣಗೌಡ್ರು ಒಪನ್‌ ಹೇಳಿಕೆ

Bigg Boss Kannada Season 12: ಬಿಗ್‌ ಬಾಸ್‌ ಮನೆಯಲ್ಲಿರುವ ಅಶ್ವಿನಿ ಗೌಡ ಅವರ ಈ ಆಸೆ ಈಡೇರೋದಿಲ್ಲ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

 

Read Full Story

10:35 AM (IST) Jan 16

'ಬ್ಲಾಕ್‌ ಮಾಡ್ತಿನಿ..' ಎಂದು ಸ್ವೀಟ್‌ ವಾರ್ನಿಂಗ್‌ ಕೊಟ್ಟ ಕಾವ್ಯಾ, I Am Waiting.. ಎಂದ ಗಿಲ್ಲಿ!

BBK 12: Kavya Shaiva's Sweet Warning to Gilli Natraj Goes Viral ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಸನಿಹದಲ್ಲಿರುವಾಗ, ದೊಡ್ಮನೆಯಲ್ಲಿ ಭಾವುಕ ಕ್ಷಣಗಳು ಮರುಕಳಿಸಿವೆ. ಕಾವ್ಯಾ ಶೈವ ಮತ್ತು ಗಿಲ್ಲಿ ನಟರಾಜ್ ನಡುವಿನ ಕಿತ್ತಾಟ, ಮುನಿಸು ಈಗ 'ಕ್ಷಮೆ'ಯ ರೂಪ ಪಡೆದಿದೆ.

 

Read Full Story

10:08 AM (IST) Jan 16

BBK 12 ಗಿಲ್ಲಿ ನಟನಿಗೆ ರಾಜಯೋಗ; ಏಕಾಏಕಿ ಯಶಸ್ಸು ಬಂದಿರೋದ್ಯಾಕೆ? ಸತ್ಯ ರಿವೀಲ್‌ ಮಾಡಿದ ಕಂಪೆನಿ HR

Bigg Boss Kannada Season 12: ಗಿಲ್ಲಿ ನಟ ಅವರು ಬಿಗ್ ಬಾಸ್‌ ಶೋ ಗೆಲ್ಲಲಿ ಎಂದು ಅನೇಕರು ಹೇಳುತ್ತಿದ್ದಾರೆ. ಇಷ್ಟೆಲ್ಲ ಅಭಿಮಾನ, ಪ್ರೀತಿ ಸಿಕ್ಕಿರುವುದು ಯಾಕೆ? ಕಾರಣ ರಿವೀಲ್‌ ಮಾಡಿದ HR. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

 

Read Full Story

09:26 AM (IST) Jan 16

BBK 12 - ಫಿನಾಲೆಗೆ 2 ದಿನ ಇರುವಾಗಲೇ, ಗುಡ್‌ನ್ಯೂಸ್‌ ಕೊಟ್ಟ ಗಿಲ್ಲಿ ನಟ; ವೀಕ್ಷಕರು ಫುಲ್‌ ಖುಷ್!

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಫಿನಾಲೆಗೆ ದಿನಗಣನೆ ಶುರುವಾಗಿದೆ. ಹೀಗಿರುವಾಗ ಗಿಲ್ಲಿ ನಟ ಅವರು ಗುಡ್‌ನ್ಯೂಸ್‌ ನೀಡಿದ್ದಾರೆ.

 

Read Full Story

09:07 AM (IST) Jan 16

ಚಿನ್ನಾಭರಣ ಸಿಕ್ಕಿದ ಚಾಲುಕ್ಯರ ತಾಣ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಪನನ ಕಾರ್ಯ, ಇಡೀ ಗ್ರಾಮ ಸ್ಥಳಾಂತರ?

ಗದಗದ ಲಕ್ಕುಂಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಚಿನ್ನದ ನಿಧಿಯ ಹಿನ್ನೆಲೆಯಲ್ಲಿ, ಪುರಾತತ್ವ ಇಲಾಖೆಯು ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಉತ್ಖನನ ಕಾರ್ಯವನ್ನು ಆರಂಭಿಸಿದೆ. ಸರ್ಕಾರವು ಇಡೀ ಗ್ರಾಮವನ್ನೇ ಸ್ಥಳಾಂತರಿಸುವ ಗಂಭೀರ ಚಿಂತನೆ ನಡೆಸುತ್ತಿದೆ.

Read Full Story

08:34 AM (IST) Jan 16

ರಾಸುಗಳಿಗೆ ಅಲಂಕಾರ ಮಾಡಿ ಕಿಚ್ಚು ಹಾಯಿಸಿದ ರೈತರು; ನಾಡಿನಾದ್ಯಂತ ಮಕರ ಸಂಕ್ರಾಂತಿಯ ಸಂಭ್ರಮ

ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಭಕ್ತರು ನದಿಗಳಲ್ಲಿ ಪುಣ್ಯಸ್ನಾನ ಮಾಡಿ, ದೇಗುಲಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ, ರೈತರು ರಾಸುಗಳಿಗೆ ಕಿಚ್ಚು ಹಾಯಿಸಿ ಸಂಭ್ರಮಿಸಿದರು. 

Read Full Story

08:33 AM (IST) Jan 16

70 ಸಾವಿರ ಬೆಲೆಯ ಕಾರಿಗೆ 1.11 ಲಕ್ಷ ರು. ದಂಡ ಕಟ್ಟಿದ ಮಾಲೀಕ

ಕಾರಿನ ಸೈಲೆನ್ಸರ್‌ ಮಾರ್ಪಾಡು ಮಾಡಿ ಬೆಂಕಿ ಉಗುಳುವಂತೆ ಮಾಡಿದ್ದ ಕಾರಿನ ಮಾಲೀಕನಿಗೆ ಆರ್‌.ಟಿ.ಒ ಅಧಿಕಾರಿಗಳು ಹಾಗೂ ಹೆಣ್ಣೂರು ಸಂಚಾರ ಪೊಲೀಸರು ಬರೋಬ್ಬರಿ 1.11 ಲಕ್ಷ ರು. ದಂಡ ವಿಧಿಸಿದ್ದಾರೆ.

Read Full Story

08:22 AM (IST) Jan 16

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ - ರಾಜೀವ್‌ಗೌಡ ವಿರುದ್ಧ 2 ಕೇಸ್‌, ಬೆನ್ನಲ್ಲೇ ನಾಪತ್ತೆ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!

ಶಿಡ್ಲಘಟ್ಟ ಪೌರಾಯುಕ್ತರಿಗೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ನಂತರ ತಲೆಮರೆಸಿಕೊಂಡಿರುವ ಅವರಿಗೆ, ಪಕ್ಷಕ್ಕೆ ಮುಜುಗರ ತಂದ ನಡವಳಿಕೆಗಾಗಿ ಕೆಪಿಸಿಸಿ ಶಿಸ್ತು ಸಮಿತಿಯು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. 

Read Full Story

07:38 AM (IST) Jan 16

ಪ್ರಾರ್ಥನೆ ಮಾತಿನ ಬೆನ್ನಲ್ಲೇ ಡಿಕೆಶಿ ಇಂದು ದಿಲ್ಲಿ ಭೇಟಿ ಕುತೂಹಲ

ಅಸ್ಸಾಂ ಚುನಾವಣೆ ಸಂಬಂಧ ಶುಕ್ರವಾರ ದೆಹಲಿಗೆ ತೆರಳುತ್ತಿದ್ದು, ಅಲ್ಲಿ ಎಲ್ಲ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ರಾಹುಲ್‌ ಗಾಂಧಿ ಅವರು ನಮ್ಮ ನಾಯಕರು. ಅವರ ಭೇಟಿಯಲ್ಲಿ ಹೊಸತೇನಿಲ್ಲ ಎಂದು ತಿಳಿಸಿದರು.

 

Read Full Story

More Trending News