LIVE NOW
Published : Mar 16, 2026, 07:52 AM ISTUpdated : Mar 16, 2026, 10:54 PM IST

State News Live: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವೈರಲ್ ಆಡಿಯೋ ಪ್ರಕರಣ, ಕಮಿಷನರ್ ಮಹತ್ವದ ಆದೇಶ

ಸಾರಾಂಶ

ಬೆಂಗಳೂರು (ಮಾ.16):ಇರಾನ್‌ ಯುದ್ಧದಿಂದ ಉಂಟಾಗಿದ್ದ ಎಲ್‌ಪಿಜಿ ಸಿಲಿಂಡರ್‌ ಪೂರೈಕೆ ಸಮಸ್ಯೆ ಕೊಂಚ ತಹಬದಿಗೆ ಬರುವ ಲಕ್ಷಣಗಳು ಗೋಚರಿಸಿವೆ, ‘ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯದಲ್ಲಿ ಕಳೆದ ಮೂರು ದಿನದಲ್ಲಿ ತೈಲ ಕಂಪನಿಗಳ ಅನಿಲ ಸಿಲಿಂಡರ್‌ ಸರಬರಾಜಿನಲ್ಲಿ ಶೇ.20 ರಷ್ಟು ಸುಧಾರಣೆಯಾಗಿದೆ’ ಎಂದು ರಾಜ್ಯದ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆ ಭಾನುವಾರ ಹೇಳಿದೆ. ಇದರಲ್ಲಿ ಹೆಚ್ಚು ಬಾಧಿತವಾಗಿದ್ದ ವಾಣಿಜ್ಯ ಎಲ್‌ಪಿಜಿ ಪೂರೈಕೆಯೂ ಸೇರಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

=

10:54 PM (IST) Mar 16

ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವೈರಲ್ ಆಡಿಯೋ ಪ್ರಕರಣ, ಕಮಿಷನರ್ ಮಹತ್ವದ ಆದೇಶ

ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವೈರಲ್ ಆಡಿಯೋ ಪ್ರಕರಣ, ಕಮಿಷನರ್ ಮಹತ್ವದ ಆದೇಶ ನೀಡಿದ್ದಾರೆ. ಮಹಿಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿರುವ ಆಡಿಯೋ ಕೋಲಾಹಲ ಸೃಷ್ಟಿಸಿದೆ.

Read Full Story

10:47 PM (IST) Mar 16

ಪತಿ, ಪೋಷಕರ ವಿರುದ್ಧ ಬಾಲ್ಯವಿವಾಹ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ, ಆಯೋಜಕರು, ಪುರೋಹಿತರ ವಿರುದ್ಧ ಕ್ರಮ

16 ವರ್ಷದ ಅಪ್ರಾಪ್ತ ಬಾಲಕಿಯ ಬಾಲ್ಯವಿವಾಹ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅಪ್ರಾಪ್ತ ವಯಸ್ಸಿನಲ್ಲಿ ನಡೆದ ವಿವಾಹವು ಕಾನೂನುಬಾಹಿರವಾಗಿದ್ದು, ನಂತರ ನೋಂದಾಯಿಸಿದರೂ ಅಪರಾಧದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬಾಲ್ಯವಿವಾಹ ಆಯೋಜಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.
Read Full Story

10:06 PM (IST) Mar 16

ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ - ಬೆಂಗಳೂರು ಟು ಮಂಗಳೂರು ಟ್ರೈನ್ ಕೋಯಿಕ್ಕೋಡ್‌ವರೆಗೆ ವಿಸ್ತರಣೆ

ಬೆಂಗಳೂರು ಮತ್ತು ಮಂಗಳೂರು ಮೂಲಕ ಕಣ್ಣೂರುವರೆಗೆ ಸಂಚರಿಸುತ್ತಿದ್ದ ದೈನಂದಿನ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಇದೀಗ ಕೇರಳದ ಕೋಯಿಕ್ಕೋಡ್‌ವರೆಗೆ ವಿಸ್ತರಿಸಲಾಗಿದೆ. ಮಾರ್ಚ್ 15 ರಿಂದ ಜಾರಿಗೆ ಬರುವ ಈ ವಿಸ್ತರಣೆಯು, ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಿದೆ.
Read Full Story

09:49 PM (IST) Mar 16

ಅತಿವೇಗದ ಚಾಲನೆ - ಮಾರಕ ರಸ್ತೆ ಅಪಘಾತದ ಹೈಕೋರ್ಟ್ ತೀರ್ಪು, ವ್ಯಕ್ತಿ ವಿರುದ್ಧದ ಕೇಸ್ ರದ್ದುಗೊಳಿಸಿದ್ಯಾಕೆ ಕೋರ್ಟ್‌?

ಕೇವಲ ಅತಿವೇಗದಲ್ಲಿ ವಾಹನ ಚಲಾಯಿಸುವುದರಿಂದಲೇ ಅದನ್ನು ನಿರ್ಲಕ್ಷ್ಯ ಅಥವಾ ದುಡುಕಿನ ಚಾಲನೆ ಎಂದು ಪರಿಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ, 2018ರ ನೈಸ್ ರಸ್ತೆ ಅಪಘಾತ ಪ್ರಕರಣದಲ್ಲಿ ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ರದ್ದುಗೊಳಿಸಿ, ಆತನನ್ನು ಖುಲಾಸೆಗೊಳಿಸಿದೆ.
Read Full Story

09:25 PM (IST) Mar 16

ಕೊಪ್ಪಳದಲ್ಲಿ ಸಿಡಿಲು ಬಡಿದು ಬಾಲಕ ಸಾವು, ರಾಜ್ಯದಲ್ಲಿ ಮಳೆಗೆ ಮೊದಲ ಬಲಿ

ಕೊಪ್ಪಳದಲ್ಲಿ ಸಿಡಿಲು ಬಡಿದು ಬಾಲಕ ಸಾವು, ರಾಜ್ಯದಲ್ಲಿ ಮಳೆಗೆ ಮೊದಲ ಬಲಿ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಬಾಲಕ ಮಂಜುನಾಥ್ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಹಲೆವೆಡೆ ಆಲಿಕಲ್ಲು ಮಳೆಯಾಗಿದೆ.

Read Full Story

09:24 PM (IST) Mar 16

ಸಂಬಂಧ ಇಟ್ಟುಕೊಂಡಿರುವುದು ದ್ವಿವಿವಾಹವಾಗುವುದಿಲ್ಲ - 73 ವರ್ಷದ ವ್ಯಕ್ತಿಯ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಕೇವಲ ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧದಲ್ಲಿರುವುದನ್ನು ದ್ವಿವಿವಾಹ ಎಂದು ಪರಿಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಎರಡನೇ ಮದುವೆ ನಡೆದ ಬಗ್ಗೆ ಸ್ಪಷ್ಟ ಸಾಕ್ಷ್ಯವಿಲ್ಲದ ಕಾರಣ, 73 ವರ್ಷದ ಪತಿಯ ವಿರುದ್ಧ ಪತ್ನಿ ದಾಖಲಿಸಿದ್ದ ದ್ವಿವಿವಾಹ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.  

Read Full Story

09:10 PM (IST) Mar 16

Bhagyalakshmi Making Video - ಸೀರೆಯುಟ್ಟು ಭಾಗ್ಯ ಫೈಟಿಂಗ್‌- ಮುಟ್ತಿದ್ದಂತೆಯೇ ಉರುಳಿ ಉರುಳಿ ಬಿದ್ದ ರೌಡಿಗಳು

ಶ್ರೇಷ್ಠಾಳ ಕುತಂತ್ರದಿಂದ ಅಪಹರಣಕ್ಕೊಳಗಾದ ಭಾಗ್ಯ, ಸೀರೆಯುಟ್ಟೇ ರೌಡಿಗಳನ್ನು ಸದೆಬಡಿದು ತನ್ನ ಕರಾಟೆ ಪರಾಕ್ರಮವನ್ನು ಪ್ರದರ್ಶಿಸಿದ್ದಾಳೆ. ಹೆಣ್ಣುಮಕ್ಕಳಿಗೆ ಸ್ಫೂರ್ತಿದಾಯಕವಾದ ಈ ಫೈಟಿಂಗ್ ದೃಶ್ಯದ ಶೂಟಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ.
Read Full Story

09:00 PM (IST) Mar 16

ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದೆ - ಎಚ್.ಡಿ.ಕುಮಾರಸ್ವಾಮಿ

ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ 105 ವರ್ಷಗಳ ಇತಿಹಾಸ ಹೊಂದಿದ್ದು, ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕದ ಅತ್ಯುತ್ತಮ ಸಹಕಾರ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಶ್ಲಾಘಿಸಿದರು.

Read Full Story

08:58 PM (IST) Mar 16

Brahmagantu Serial ದೀಪಾ ರೋಲ್‌ ಚೇಂಜ್‌ ಆಗೋಯ್ತು! ಬೆಟ್ಟದ ಮೇಲಿನಿಂದ ಬಿದ್ದು ಸತ್ತಿದ್ದು ಅವಳಲ್ಲ, ಇವಳು

ಬ್ರಹ್ಮಗಂಟು ಸೀರಿಯಲ್‌ನಲ್ಲಿ ನಾಯಕಿ ದೀಪಾ ಸತ್ತಂತೆ ತೋರಿಸಲಾಗಿದ್ದು, ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದೆ. ಆದರೆ, ಬೆಟ್ಟದಿಂದ ತಳ್ಳುವ ದೃಶ್ಯದಲ್ಲಿ ದೀಪಾಳ ಬದಲು ಆಕೆಯನ್ನೇ ಹೋಲುವ ಗೊಂಬೆಯನ್ನು ಬಳಸಿರುವ ವಿಡಿಯೋ ವೈರಲ್ ಆಗಿದೆ. ಇದು ದೀಪಾಳ ಪಾತ್ರದ ಅಂತ್ಯದ ಬಗ್ಗೆ ಹೊಸ ಕುತೂಹಲವನ್ನು ಸೃಷ್ಟಿಸಿದೆ.
Read Full Story

08:41 PM (IST) Mar 16

ಕಾಂಗ್ರೆಸ್ ಆಡಳಿತದಲ್ಲಿ ಜಾರಿಗೊಳಿಸಲಾದ ಕಾರ್ಯಕ್ರಮಗಳು ಶಾಶ್ವತ - ಸಚಿವ ಮಧು ಬಂಗಾರಪ್ಪ

ಸಮಾಜದಲ್ಲಿನ ಪ್ರತಿಯೊಬ್ಬರಿಗೂ ರೂಪಿಸಲಾದ ಕಾರ್ಯಕ್ರಮವನ್ನು ಭವಿಷ್ಯದಲ್ಲಿನ ಯಾವುದೇ ಸರ್ಕಾರ ತೆಗೆದುಹಾಕಲು ಸಾದ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Read Full Story

07:44 PM (IST) Mar 16

ಪೊಲೀಸ್ ಅಂದ್ರೆ ಭಯ ಅಲ್ಲ ಭರವಸೆ - ಒಂಟಿ ವೃದ್ಧೆಯರ ಬದುಕಿಗೆ ಬೆಳಕು ತಂದ ಕಾನ್ಸ್ಟೇಬಲ್

ದನದ ಕೊಟ್ಟಿಗೆಗಳಂತಿರುವ ತಗಡಿನ ಶೆಡ್ಗಳಲ್ಲಿ ಅದರಲ್ಲು ವಿದ್ಯುತ್ ಸಂಪರ್ಕ ಇಲ್ಲದೆ ಕತ್ತಲೆಯ ಕೂಪದಲ್ಲಿ ಬದುಕುತ್ತಿರುವ ಈ ಬಡ ವೃದ್ಧೆಯರ ದುಸ್ಥಿತಿ ಕಂಡ ಪೊಲೀಸ್ ಕಾನ್ಸ್ಟೇಬಲ್ ಕುಮಾರಸ್ವಾಮಿ ಮಮ್ಮಲ ಮರುಗಿದ್ದಾರೆ.

Read Full Story

07:31 PM (IST) Mar 16

ರಸ್ತೆಗಳು ಅಭಿವೃದ್ಧಿಯಾದರೆ ಹಳ್ಳಿಗಳ ಮೂಲ ಸಮಸ್ಯೆ ಬಗೆಹರಿದಂತೆ - ಸಚಿವ ಚಲುವರಾಯಸ್ವಾಮಿ

ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಯಾದರೆ ಹಳ್ಳಿಗಳಲ್ಲಿ ಮೂಲ ಸಮಸ್ಯೆಗಳಿಗೆ ಬಹುತೇಕ ಪರಿಹಾರ ಸಿಕ್ಕಂತಾಗುತ್ತದೆ. ಹೀಗಾಗಿ ಹಳ್ಳಿಗಳ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

Read Full Story

07:22 PM (IST) Mar 16

ಪ್ರಜಾ ಸೌಧ ಸರ್ಕಾರದ ಪ್ರತಿಬಿಂಬ, ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು - ಕೃಷ್ಣ ಭೈರೇಗೌಡ

ಆಶಯವನ್ನು ಪೂರೈಸಬೇಕು. ಪ್ರಜೆಗಳಿಗಾಗಿ ನಾವು ಎಂಬ ಭಾವನೆ ಅಧಿಕಾರಿ, ರಾಜಕಾರಣಿಗಳಲ್ಲಿ ಮೂಡಿದಾಗ ಸಮಸ್ಯೆಗಳು ಬಗೆಹರಿಯಲು ಸಾಧ್ಯ ಎಂದು ರಾಜ್ಯ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

Read Full Story

07:19 PM (IST) Mar 16

ಬೆಂಗಳೂರಿಂದ ವಿದೇಶಕ್ಕೆ ಶಿಫ್ಟ್ - ₹1.3 ಕೋಟಿ ವೇತನ, ಟೆಕ್ಕಿ ಜೀವನದಲ್ಲಿ ದೊಡ್ಡ ಬದಲಾವಣೆ, ಭಾರತಕ್ಕೆ ಮರಳೋದು ಡೌಟ್!

ಬೆಂಗಳೂರಿನಿಂದ ಐರ್ಲೆಂಡ್‌ನ ಡಬ್ಲಿನ್‌ಗೆ ಸ್ಥಳಾಂತರಗೊಂಡ 27 ವರ್ಷದ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್, ಅಲ್ಲಿನ ದುಬಾರಿ ಜೀವನ ವೆಚ್ಚದ ನಡುವೆಯೂ ಉತ್ತಮ ಜೀವನ ಗುಣಮಟ್ಟವನ್ನು ಕಂಡುಕೊಂಡಿದ್ದಾರೆ. ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿರುವ ಅವರು, ಭಾರತಕ್ಕಿಂತ ದುಪ್ಪಟ್ಟು ಸಂಬಳ ಪಡೆಯುತ್ತಿದ್ದು, ಯುರೋಪಿಯನ್ ಜೀವನಶೈಲಿಯನ್ನು ಆನಂದಿಸುತ್ತಿದ್ದಾರೆ.
Read Full Story

07:09 PM (IST) Mar 16

ಬಂಗಾರದಂತಹ ಭೂಮಿ ಯಾರೂ ಮಾರಾಟ ಮಾಡಬೇಡಿ - ಸಚಿವ ಎಂ.ಬಿ.ಪಾಟೀಲ ರೈತರಿಗೆ ಮನವಿ

ಭೂಮಿ ಮಾರಾಟ ಮಾಡಿದರೆ ಮತ್ತೆ ಖರೀದಿಸಲು ಸಾಧ್ಯವಿಲ್ಲ. ಭೂಮಿ ಬಂಗಾರವಿದ್ದಂತೆ. ಅದನ್ನು ಯಾರೂ ಮಾರಾಟ ಮಾಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

Read Full Story

06:58 PM (IST) Mar 16

ವರ್ಷದೊಳಗೆ ಪ್ರತಿ ಹಳ್ಳಿಗೂ ಶಾಶ್ವತ ಕುಡಿಯುವ ನೀರು - ಸಚಿವ ಕೆ.ಎಚ್.ಮುನಿಯಪ್ಪ ಭರವಸೆ

ವಿಜಯಪುರ ಪಟ್ಟಣಗಳಿಗೆ ಮಾತ್ರವಲ್ಲದೆ, ಪ್ರತಿ ಗ್ರಾಮಗಳಿಗೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

Read Full Story

06:54 PM (IST) Mar 16

ಬಳ್ಳಾರಿ - ಮೇಲಾಧಿಕಾರಿ ಕಿರುಕುಳ ಆರೋಪ - ಕೃಷಿ ಇಲಾಖೆ ಗುತ್ತಿಗೆ ನೌಕರ ಸಾವಿಗೆ ಶರಣು

Sandur contract employee death: ಬಳ್ಳಾರಿಯ ಸಂಡೂರಿನಲ್ಲಿ ಕೃಷಿ ಇಲಾಖೆಯ ಗುತ್ತಿಗೆ ನೌಕರರೊಬ್ಬರು ಮೇಲಾಧಿಕಾರಿಯ ಮಾನಸಿಕ ಕಿರುಕುಳದಿಂದ ನೊಂದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದ ಡೆತ್‌ನೋಟ್‌ನಲ್ಲಿ ಅಧಿಕಾರಿ  ಹೆಸರನ್ನು ಉಲ್ಲೇಖಿಸಿದ್ದು, ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

Read Full Story

06:24 PM (IST) Mar 16

ಶಿರಸಿಯಲ್ಲಿ ಬಾವಿಗೆ ಬಿದ್ದ 2 ವರ್ಷದ ಮಗು; ಪಂಪ್‌ಸೆಟ್‌ ಪೈಪು ಹಿಡಿದು ಕೂತಿದ್ದ ಬಾಲೆ; ಕಾಪಾಡಿದ ರಿಯಲ್‌ ಹೀರೋ

Girl fell into well: ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದಿದೆ. ಆ ಬಳಿಕ ಆ ಮಗುವನ್ನು ಮೇಲಕ್ಕೆತ್ತಿ ಬಚಾವ್‌ ಮಾಡಿದ ಘಟನೆ ಶಿರಸಿಯಲ್ಲಿ ನಡೆದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ, ಲೇಖನ ಓದಿ.

Read Full Story

05:46 PM (IST) Mar 16

ಬೆಂಗಳೂರಲ್ಲಿ ಐಟಿ ಜಾಬ್ ಪಡೆಯೋದು ಸುಲಭವಲ್ಲ - 15 ದಿನಗಳಲ್ಲಿ ಡೆವೆಲಪರ್ ಹುದ್ದೆಗಳಿಗೆ 34 ಸಾವಿರಕ್ಕೂ ಹೆಚ್ಚು ಅರ್ಜಿ!

ಭಾರತದ ಐಟಿ ರಾಜಧಾನಿ ಬೆಂಗಳೂರಿನಲ್ಲಿ ತಾಂತ್ರಿಕ ಉದ್ಯೋಗ ಮಾರುಕಟ್ಟೆಯು ತೀವ್ರ ಸ್ಪರ್ಧೆಯಿಂದ ಕೂಡಿದೆ. ಇತ್ತೀಚೆಗೆ MERN ಸ್ಟಾಕ್ ಮತ್ತು React ಡೆವಲಪರ್ ಹುದ್ದೆಗಳಿಗಾಗಿ ಕೇವಲ 15 ದಿನಗಳಲ್ಲಿ 34,742 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಇದು ನಗರದಲ್ಲಿ ಉದ್ಯೋಗ ಪಡೆಯುವ ಸವಾಲನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ಅಂಕಿಅಂಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ .

Read Full Story

05:26 PM (IST) Mar 16

ಚಿನ್ನದ ಬೆಲೆಯಲ್ಲಿಂದು ಮತ್ತೆ ಮಹಾ ಕುಸಿತ, ಮಾರ್ಚ್ ತಿಂಗಳಲ್ಲೇ ಅತ್ಯಂತ ಕಡಿಮೆ ದರಕ್ಕೆ ಇಳಿದ ಗೋಲ್ಡ್ ರೇಟ್!

ಕರ್ನಾಟಕದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆಯಾಗುತ್ತಿದ್ದು, 22 ಮತ್ತು 24 ಕ್ಯಾರೆಟ್ ಚಿನ್ನದ ದರಗಳು ಈ ತಿಂಗಳಲ್ಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿವೆ. ಪ್ರತಿ ಗ್ರಾಂಗೆ 205 ರೂಪಾಯಿಗಳಷ್ಟು ಕಡಿಮೆಯಾಗಿದ್ದು, ಇದು ಗ್ರಾಹಕರಿಗೆ ಮತ್ತು ಹೂಡಿಕೆದಾರರಿಗೆ ದೊಡ್ಡ ಸಮಾಧಾನ ತಂದಿದೆ.
Read Full Story

04:57 PM (IST) Mar 16

ಬೆಂಗಳೂರಿನ ಮಂತ್ರಿ ಡೆವಲಪರ್ಸ್ ಮೇಲೆ ಇಡಿ ದಾಳಿ - ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ದೆಹಲಿ ಅಧಿಕಾರಿಗಳು!

ಬೆಂಗಳೂರಿನ ಪ್ರಸಿದ್ಧ ರಿಯಲ್ ಎಸ್ಟೇಟ್ ಸಂಸ್ಥೆ ಮಂತ್ರಿ ಡೆವಲಪರ್ಸ್ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಸಂಸ್ಥೆಯ ನಿರ್ದೇಶಕ ಸುಶೀಲ್ ಮಂತ್ರಿ ಅವರ ನಿವಾಸ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ಶೋಧ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಹಿಂದೆ 2022 ಮತ್ತು 2023ರಲ್ಲಿಯೂ ಸಂಸ್ಥೆಯ ಮೇಲೆ ಇಡಿ ಕ್ರಮ ಕೈಗೊಂಡಿತ್ತು.
Read Full Story

04:35 PM (IST) Mar 16

ಕನ್ನಡ ನಿರ್ದೇಶಕ, ನಿರ್ಮಾಪಕರು ಕಿಚ್ಚ ಸುದೀಪ್ ಪ್ರತಿಭೆ ಬಳಸಿಕೊಳ್ಳುತ್ತಿಲ್ಲವೇಕೆ - ಕಾರಣವೇನು?

‘ಬಿಲ್ಲಾ ರಂಗಾ ಬಾಷಾ’ ತೆಲುಗು ನಿರ್ಮಾಪಕರು ಮಾಡಬೇಕಿತ್ತಾದರೂ ಅವರು ಕೊಂಚ ಹೆಜ್ಜೆ ಹಿಂದೆ ಇಟ್ಟಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಕಿಚ್ಚ ಸುದೀಪ್ ತೆಲುಗು ನಿರ್ದೇಶಕನ ಹೊಸ ಚಿತ್ರಕ್ಕೆ ಓಕೆ ಎಂದಿದ್ದಾರೆ ಎನ್ನಲಾಗಿದೆ.

Read Full Story

04:27 PM (IST) Mar 16

ನಿಮ್ಮ ಹೃದಯದಲ್ಲಿ ಬ್ಲಾಕ್ ಇದ್ರೆ ಕಾಣಿಸಿಕೊಳ್ಳೋ 7 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಇತ್ತೀಚೆಗೆ ಅನೇಕರಲ್ಲಿ ಹೃದಯದ ಬ್ಲಾಕ್‌ ಸಮಸ್ಯೆ ಕಾಣಿಸಿಕೊಳ್ತಿದೆ. ಈ ಬ್ಲಾಕ್‌ ಹೆಚ್ಚಾದಾಗ ಹಾರ್ಟ್‌ ಅಟ್ಯಾಕ್‌, ನಂತರ ಹಾರ್ಟ್‌ ಫೇಲ್ಯೂರ್‌ಗೂ ಕಾರಣವಾಗುತ್ತೆ. ಹೃದಯದ ಕಾರ್ಯವ್ಯವಸ್ಥೆಯಲ್ಲಿ ದೋಷ ಉಂಟಾದಾಗ ಹಾರ್ಟ್‌ ಬ್ಲಾಕ್‌ ಸಂಭವಿಸುತ್ತದೆ.

Read Full Story

04:18 PM (IST) Mar 16

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ - ಉಜಿರೆಯ ಎಸ್‌ಡಿಎಂ ಕಾಲೇಜಿಗೆ 6 ಚಿನ್ನದ ಪದಕ

ದರ್ಶನ್ ಡಿ ಎಸ್ 60 ಕೆ.ಜಿ ಒಳಗಿನ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿದ್ದರು. ಈ ಪೈಕಿ ಫುಲ್ ಪವರ್‌ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನ, ಬೆಂಚ್ ಪ್ರೆಸ್ ವಿಭಾಗದಲ್ಲಿ ಚಿನ್ನ, ಸ್ಕ್ವಾಟ್ಸ್ ವಿಭಾಗದಲ್ಲಿ ಚಿನ್ನ ಪಡೆದುಕೊಂಡಿದ್ದಾರೆ.

Read Full Story

04:02 PM (IST) Mar 16

ಬಿಸಿಲ ಝಳ, ವಿಪರೀತ ಸೆಕೆ ನಡುವೆ ರಾಜ್ಯ ಹವಾಮಾನದ ಅಚ್ಚರಿ! ಮಾರ್ಚ್ 21ರವರೆಗೆ ಮಳೆ ಮುನ್ಸೂಚನೆ!

ರಾಜ್ಯಾದ್ಯಂತ ಮಾರ್ಚ್ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಬೆಂಗಳೂರಿನಲ್ಲೂ ತಾಪಮಾನ ಏರಿಕೆಯಾಗಿದೆ. ಆದರೆ, ಸಂಜೆ ವೇಳೆಗೆ ಪೂರ್ವ ಮಾನ್ಸೂನ್ ಮಳೆಯಾಗುವ ಲಕ್ಷಣಗಳಿದ್ದು, ಮಾರ್ಚ್ 21ರವರೆಗೆ ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಈ ಹಠಾತ್ ಮಳೆಯು ಬಿಸಿಲಿನಿಂದ ತಾತ್ಕಾಲಿಕ ಪರಿಹಾರ ನೀಡುವ ಸಾಧ್ಯತೆಯಿದೆ.
Read Full Story

03:42 PM (IST) Mar 16

ಮನೆಯ ಕಿಚನ್‌ ಸ್ಟೈಲಿಶ್‌ ಆಗಿ ಕಾಣಲು ಹೀಗೆ ಮಾಡಿ; 5 ಸಿಂಪಲ್‌ ಐಡಿಯಾಗಳಿವೆ!

ಓಪನ್ ಕಿಚನ್ ಚಿಕ್ಕದಾಗಿ ಅಥವಾ ಗಲೀಜಾಗಿ ಕಾಣುವುದನ್ನು ತಪ್ಪಿಸಲು ಟ್ರೆಂಡಿ ಡಿಸೈನ್ ಐಡಿಯಾಗಳನ್ನು ಅಳವಡಿಸಿಕೊಳ್ಳಿ. ಮಿನಿಮಲಿಸ್ಟ್ ಲೇಔಟ್, ಕಿಚನ್ ಐಲ್ಯಾಂಡ್, ಗ್ಲಾಸ್ ಪಾರ್ಟಿಷನ್, ಸ್ಮಾರ್ಟ್ ಸ್ಟೋರೇಜ್ ಮತ್ತು ಸರಿಯಾದ ಲೈಟಿಂಗ್‌ನಿಂದ ನಿಮ್ಮ ಅಡುಗೆಮನೆ ಮಾಡರ್ನ್, ಕ್ಲಾಸಿ, ಸ್ಟೈಲಿಶ್ ಆಗಿ ಕಾಣುತ್ತದೆ.

 

Read Full Story

03:32 PM (IST) Mar 16

ಗ್ಯಾಸ್ ಏಜೆನ್ಸಿ ಮುಂದೆಯೇ ಕಳ್ಳರ ಕೈಚಳಕ - ಕಣ್ ಮುಚ್ಚಿ ತೆರೆಯೋಷ್ಟರಲ್ಲಿ ಗ್ಯಾಸ್ ಸಿಲಿಂಡರ್ ನಾಪತ್ತೆ

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ, ಗ್ಯಾಸ್ ಅಭಾವದ ನಡುವೆಯೇ ಭಾರತ್ ಗ್ಯಾಸ್ ಏಜೆನ್ಸಿಯ ಮುಂದೆ ಇಟ್ಟಿದ್ದ ಗೃಹ ಬಳಕೆಯ ಸಿಲಿಂಡರ್ ಕಳ್ಳತನವಾಗಿದೆ. ಮಲ್ಲಿಕಾರ್ಜುನ್ ಎಂಬುವವರು ಸಿಲಿಂಡರ್ ಪಡೆದು ಚೀಟಿ ತರಲು ಕಚೇರಿಗೆ ಹೋದಾಗ ಈ ಘಟನೆ ನಡೆದಿದ್ದು,  ಪೊಲೀಸರಿಗೆ ದೂರು ನೀಡಿದ್ದಾರೆ.

Read Full Story

03:31 PM (IST) Mar 16

ಸಾಹಿತಿ ಅಮರೇಶ ನುಗಡೋಣಿ ಅವರ 'ದಡ ಸೇರಿಸು ತಂದೆ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ

ಖ್ಯಾತ ಸಾಹಿತಿ ಅಮರೇಶ ನುಗಡೋಣಿ ಅವರ ‘ದಡ ಸೇರಿಸು ತಂದೆ’ ಕಥಾ ಸಂಕಲನಕ್ಕೆ 2025ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಈ ಕೃತಿಯು ಗ್ರಾಮೀಣ ಭಾರತದ ಮರ್ಯಾದಾ ಹತ್ಯೆ ಮತ್ತು ಗುಂಪು ಹಿಂಸಾಚಾರದಂತಹ ಜ್ವಲಂತ ಸಮಸ್ಯೆಗಳನ್ನು ನೈಜವಾಗಿ ಚಿತ್ರಿಸುತ್ತದೆ.
Read Full Story

02:20 PM (IST) Mar 16

ಬನ್ನೇರುಘಟ್ಟ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ - ಹೆಣ್ಣು ಮರಿಗಳಿಗೆ ಜನ್ಮ ನೀಡಿದ ಕೋಕಿಲಾ, ಕಾವೇರಿ

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕೋಕಿಲಾ ಮತ್ತು ಕಾವೇರಿ ಎಂಬ ಜೀಬ್ರಾಗಳು ಮರಿಗಳಿಗೆ ಜನ್ಮ ನೀಡಿವೆ. ಈ ಮೂಲಕ ಉದ್ಯಾನವನದಲ್ಲಿ ಜೀಬ್ರಾಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. 

Read Full Story

02:10 PM (IST) Mar 16

ಸರಸದಲ್ಲಿದ್ದಾಗಲೇ ಹೆಂಡ್ತಿಯನ್ನ ಹಿಡಿದ ಗಂಡ; ಚಿನ್ನ, ರನ್ನ ಅಂತಿದ್ದವ್ಳ ಅಸಲಿಯತ್ತು ಬಯಲು

ಪ್ರಿಯಕರನೊಂದಿಗೆ ಲಾಡ್ಜ್‌ನಲ್ಲಿದ್ದ ಪತ್ನಿಯನ್ನು ಪತಿಯೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ. ಈ ಹಿಂದೆ ಪತಿಯ ವಿರುದ್ಧವೇ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದ ಪತ್ನಿ, ಪ್ರಿಯಕರನ ಜೊತೆ ಹೊಸ ಜೀವನ ನಡೆಸಲು ಯೋಜಿಸಿದ್ದಳು. ಪೊಲೀಸರ ಸಹಾಯದಿಂದ ಪತಿ ಈ ಅಕ್ರಮ ಸಂಬಂಧವನ್ನು ಬಯಲಿಗೆಳೆದಿದ್ದಾನೆ.
Read Full Story

01:44 PM (IST) Mar 16

ತೋಟದಲ್ಲಿ ಕೆಲಸ ಮಾಡುವ ವೇಳೆ ಜೇನು ನೊಣಗಳ ದಾಳಿ - ಕೃಷಿಕ ಸಾವು

ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕೃಷಿಕರೊಬ್ಬರ ಮೇಲೆ ಜೇನುಹುಳುಗಳು ದಾಳಿ ಮಾಡಿದ ಪರಿಣಾಮ ಅವರು ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ನಡೆದಿದೆ.

Read Full Story

12:46 PM (IST) Mar 16

Bengaluru - ಮೈಸೂರು ಬ್ಯಾಂಕ್‌ ಸರ್ಕಲ್‌ ಆಂಜನೇಯನ ಎದುರೇ ನಿಂತ 'ನ್ಯಾಯದೇವ' - ಶನೈಶ್ಚರನ ದರ್ಶನಕ್ಕೆ ಮುಗಿಬಿದ್ದ ಭಕ್ತರು!

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಇರುವ ಶ್ರೀ ಶನೈಶ್ಚರ ಸ್ವಾಮಿ ದೇವಸ್ಥಾನದಲ್ಲಿ 45 ಅಡಿ ಎತ್ತರದ ಭವ್ಯವಾದ ಶನಿದೇವರ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಹೊಸ ಆಧ್ಯಾತ್ಮಿಕ ಹೆಗ್ಗುರುತು, ಕಷ್ಟಗಳಿಂದ ಮುಕ್ತಿ ಮತ್ತು ನ್ಯಾಯವನ್ನು ಬಯಸುವ ಭಕ್ತರನ್ನು ತನ್ನತ್ತ ಆಕರ್ಷಿಸುತ್ತಿದೆ.
Read Full Story

12:37 PM (IST) Mar 16

ಚೀಟಿ ಹೆಸರಲ್ಲಿ ಜನರಿಗೆ ಲಕ್ಷ ಲಕ್ಷ ರೂ. ನಾಮ ಹಾಕಿದ್ದ ಬಳ್ಳಾರಿಯ ವೆಂಕಟೇಶನ ಕಡೆಗೂ ಬಂಧಿಸಿದ ಪೊಲೀಸರು

ಬಳ್ಳಾರಿಯಲ್ಲಿ ಚೀಟಿ ವ್ಯವಹಾರದ ಹೆಸರಿನಲ್ಲಿ 700ಕ್ಕೂ ಹೆಚ್ಚು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ನಾಲ್ಕು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ವೆಂಕಟೇಶ್‌ನನ್ನು ಬ್ರೂಸ್‌ಪೇಟೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

Read Full Story

12:22 PM (IST) Mar 16

ಕ್ರಿಕೆಟರ್‌ ಶ್ರೇಯಸ್‌ ಅಯ್ಯರ್‌ ಭೇಟಿಯಾದ 'ಶೇಕ್‌ ಇಟ್‌ ಪುಷ್ಪವತಿ' ಖ್ಯಾತಿಯ ನಟಿ ನಿಮಿಕಾ ರತ್ನಾಕರ್!

Actress Nimika Ratnakar: ಸಿನಿಮಾ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೂಡ ನಿಮಿಕಾ ರತ್ನಾಕರ್‌ಗೆ ಸ್ನೇಹಿತರಿದ್ದಾರೆ. ಇತ್ತೀಚೆಗೆ ನಡೆದ ಕ್ರಿಕೆಟರ್ ಪೃಥ್ವಿ ಶಾ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರನ್ನು ಭೇಟಿಯಾಗಿದ್ದಾರೆ.

 

Read Full Story

11:42 AM (IST) Mar 16

ಗ್ರಾಮ ಪಂಚಾಯಿತಿ ನೀರುಗಂಟಿಯ ಡೆತ್‌ನೋಟ್‌ನಲ್ಲಿತ್ತು 11 ತಿಂಗಳ ಸಂಬಳದ ನೋವಿನ ಕಥೆ!

ಚಿಕ್ಕಮಗಳೂರು ತಾಲೂಕಿನಲ್ಲಿ 11 ತಿಂಗಳಿಂದ ಸಂಬಳ ನೀಡದ ಕಾರಣ ನೀರುಗಂಟಿಯೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ, ಬೆಂಗಳೂರಿನ ವಿಲ್ಸನ್‌ ಗಾರ್ಡನ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಲಾಗಿದೆ.

Read Full Story

11:31 AM (IST) Mar 16

ಕಲಬುರಗಿ - 8 ದಿನದ ಕರುವನ್ನು ತೊಟ್ಟಿಲಲ್ಲಿ ಮಲಗಿಸಿ ಅದ್ದೂರಿ ನಾಮಕರಣ - ಗೋ ಸೇವಕರಿಗೆ ಸನ್ಮಾನ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನವನೀತ ಗೋ ಶಾಲೆಯಲ್ಲಿ, 8 ದಿನದ ಕರುವನ್ನು ತೊಟ್ಟಿಲಲ್ಲಿ ಮಲಗಿಸಿ, ಜೋಗುಳ ಹಾಡಿ 'ಭೀಮಾ' ಎಂದು ವಿಶಿಷ್ಟವಾಗಿ ನಾಮಕರಣ ಮಾಡಲಾಯಿತು. ಇದೇ ವೇಳೆ ಗೋಪಾಲಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read Full Story

11:15 AM (IST) Mar 16

ಮೊದಲ ಮಾತುಕತೆಯಲ್ಲೇ ದ್ರಾವಿಡ್‌ರನ್ನು ತಬ್ಬಿಬ್ಬು ಮಾಡಿದ್ದ ವೈಭವ್ ಸೂರ್ಯವಂಶಿ! ಆ ಕ್ಷಣವನ್ನು ನೆನಪಿಸಿದ ಸಂಜು ಸ್ಯಾಮ್ಸನ್

ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್, 14 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಆಸಕ್ತಿದಾಯಕ ಕಥೆಯೊಂದನ್ನು ಹಂಚಿಕೊಂಡಿದ್ದಾರೆ. ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಮುನ್ನ ರಾಹುಲ್ ದ್ರಾವಿಡ್ ಜೊತೆಗಿನ ವೈಭವ್ ಸಂಭಾಷಣೆ ಹಾಗೂ ನಂತರ ಆತ ಮಾಡಿದ ದಾಖಲೆಗಳ ಬಗ್ಗೆ ಈ ಲೇಖನ ವಿವರಿಸುತ್ತದೆ.
Read Full Story

10:26 AM (IST) Mar 16

ಆಹಾರ ಅರಸಿ ಬಂದ ಕರಡಿ ವಿದ್ಯುತ್ ತಂತಿ ಸ್ಪರ್ಶಿಸಿ ದಾರುಣ ಸಾವು

ಕೊಪ್ಪಳ ತಾಲೂಕಿನ ಇರಕಲ್ ಗಡ ಸಮೀಪ ಆಹಾರ ಮತ್ತು ನೀರಿಗಾಗಿ ಜಮೀನಿಗೆ ನುಗ್ಗಲು ಯತ್ನಿಸಿದ ಕರಡಿಯೊಂದು ವಿದ್ಯುತ್ ಸ್ಪರ್ಶದಿಂದ ದಾರುಣವಾಗಿ ಸಾವನ್ನಪ್ಪಿದೆ. ಈ ಘಟನೆಯಿಂದಾಗಿ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story

10:20 AM (IST) Mar 16

ಬೇರೆ ರಾಜ್ಯಗಳಲ್ಲೂ ಡಿಮ್ಯಾಂಡ್‌ ಸೃಷ್ಟಿಸಿದ Ninna Jothe Nanna Kathe Serial - ಇದು ಕನ್ನಡದ ತಾಕತ್ತು!

Ninna Jothe Nanna Kathe Serial: ನಿನ್ನ ಜೊತೆ ನನ್ನ ಕಥೆ ಧಾರಾವಾಹಿ ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಒಳ್ಳೆಯ ಟಿಆರ್‌ಪಿ ಪಡೆಯುತ್ತಿದೆ. ಇದು ಅಪ್ಪಟ ಕನ್ನಡದ ಕಥೆ. ಈಗ ಈ ಸೀರಿಯಲ್‌ ಖ್ಯಾತಿ ಬೇರೆ ರಾಜ್ಯಗಳಿಗೂ ಹರಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

 

Read Full Story

09:58 AM (IST) Mar 16

63 ದನಕರುಗಳೊಂದಿಗೆ ನಾಲ್ವರು ಅವಿವಾಹಿತ ಸಹೋದರಿಯ ಸಹಜೀವನ; ಗೋಪ್ರೇಮಕ್ಕೆ ಇವರೇ ಮಾದರಿ

ಗೋಳಿತೊಟ್ಟು ಗ್ರಾಮದ ನಾಲ್ವರು ಅವಿವಾಹಿತ ಸಹೋದರಿಯರು 63 ಮಲೆನಾಡ ಗಿಡ್ಡ ದನಕರುಗಳೊಂದಿಗೆ ಶೋಚನೀಯ ಬದುಕು ಸಾಗಿಸುತ್ತಿದ್ದಾರೆ. ತಮ್ಮ ಕಷ್ಟದ ನಡುವೆಯೂ, ಜಾನುವಾರುಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸುತ್ತಾ, ಮನೆಯೊಳಗೆ ಆಶ್ರಯ ನೀಡಿರುವ ಇವರ ಗೋಪ್ರೇಮ ನಾಗರಿಕ ಸಮಾಜಕ್ಕೆ ಮಾದರಿಯಾಗಿದೆ.
Read Full Story

More Trending News