Published : Apr 17, 2026, 07:16 AM ISTUpdated : Apr 17, 2026, 10:56 PM IST

Karnataka News Live: IPL 2026 Winner - ಈ ಬಾರಿ RCB ಕಪ್‌ ಗೆಲ್ಲತ್ತಾ? - ಟ್ಯಾರೋ ರೀಡರ್‌ ಭವಿಷ್ಯ ಕೇಳಿ ದಿಗ್ಭ್ರಮೆಗೊಂಡ ಕನ್ನಡಿಗರು!

ಸಾರಾಂಶ

ಬೆಂಗಳೂರಿನಲ್ಲಿ ಮತ್ತೆ ನಾಯಿಗಳ ಹಾವಳಿ ಹೆಚ್ಚಾಗಿದೆ. ಒಂದೇ ವಾರದಲ್ಲಿ ಇದೀಗ 2ನೇ ಪ್ರಕರಣ ದಾಖಲಾಗಿದೆ. ಹೆಚ್ಆರ್‌ಬಿಆರ್ ಲೇಔಟ್‌ನಲ್ಲಿ ವೃದ್ಧನ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ. ಮಾಲೀಕನ ಎದುರೇ ವೃದ್ಧನ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ನಾಯಿ ದಾಳಿಗೆ ವೃದ್ಧನ ಕಾಲಿಗೆ ಗಂಭೀರ ಗಾಯವಾಗಿದೆ. ಕುಟುಂಬಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಲವು ಬಾರಿ ಈ ರೀತಿ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇತ್ತ ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರದ ಬಗ್ಗೆ ಅನೌಪಚಾರಿಕ ಚರ್ಚೆ ನಡೆಸಿದೆ. ಯಾವಾಗ ಮತ್ತೊಮ್ಮೆ ಸಭೆ ಮಾಡಬೇಕು ಎಂಬ ಬಗ್ಗೆ ಸಚಿವ ಸಂಪುಟ ಚರ್ಚೆ ನಡೆಸಿದೆ. ಕರ್ನಾಟಕದ ಇಂದಿನ ಕ್ಷಣ ಕ್ಷಣದ ಅಪ್‌ಡೇಟ್ ಇಲ್ಲಿದೆ.

ipl 2026 winner astrology

10:56 PM (IST) Apr 17

IPL 2026 Winner - ಈ ಬಾರಿ RCB ಕಪ್‌ ಗೆಲ್ಲತ್ತಾ? - ಟ್ಯಾರೋ ರೀಡರ್‌ ಭವಿಷ್ಯ ಕೇಳಿ ದಿಗ್ಭ್ರಮೆಗೊಂಡ ಕನ್ನಡಿಗರು!

IPL 2026 Winner: ಹದಿನಾರು ವರ್ಷಗಳಿಂದ ಐಪಿಎಲ್‌ ಆಡುತ್ತಿದ್ದರೂ ಕೂಡ ನಮ್ಮ ಬೆಂಗಳೂರಿನ ಆರ್‌ಸಿಬಿ ತಂಡ ಮಾತ್ರ ಟ್ರೋಫಿ ಗೆದ್ದಿರಲಿಲ್ಲ. ಆದರೆ ಕಳೆದ ವರ್ಷ ಟ್ರೋಫಿ ಗೆದ್ದರೂ ಕೂಡ, ಕಾಲ್ತುಳಿತದ ಕಾರಣಕ್ಕೆ ಸಂಭ್ರಮದ ಬದಲು ಸೂತಕ ಬಂದಿತ್ತು. ಈ ಬಾರಿ ಕಪ್‌ ನಮ್ದಾಗತ್ತಾ?

 

Read Full Story

09:21 PM (IST) Apr 17

ಮಕ್ಕಳು ಕೆಟ್ಟ ಪದ ಬಳಸುತ್ತಾರಾ? ಸುಲಭವಾಗಿ ತೆಗೆದುಕೊಳ್ಳಬೇಡಿ! ಇದರ ಹಿಂದೆ ಮನೋವೈಜ್ಞಾನಿಕ ಕಾರಣವಿದೆ!

ಮಕ್ಕಳು ಕೆಟ್ಟ ಪದಗಳನ್ನು ಬಳಸುವುದನ್ನು ನಿಲ್ಲಿಸುವುದು ಹೇಗೆ? ಚಿಕ್ಕ ಮಕ್ಕಳು ದೊಡ್ಡವರನ್ನು ನೋಡಿ ಮಾತು ಕಲಿಯುವುದು ಸಹಜ. ಆದರೆ, ಕೆಲವೊಮ್ಮೆ ಅರ್ಥ ತಿಳಿಯದೆ ಕೆಟ್ಟ ಪದ ಬಳಸಿದಾಗ ನಾವು ನಕ್ಕು ಸುಮ್ಮನಾಗುತ್ತೇವೆ. ಈ ಸಣ್ಣ ತಪ್ಪು ಅವರ ನಡವಳಿಕೆಯ ಮೇಲೆ ಹೇಗೆ ಪರಿಣಾಮ ಬೀರಬಹುದು ಗೊತ್ತಾ?

Read Full Story

09:10 PM (IST) Apr 17

'ನನ್ನ ಡಿಗ್ರಿ ಕೇವಲ ಎಂಟ್ರಿ ಟಿಕೆಟ್ ಅಷ್ಟೇ' - ಜಾಬ್‌ ವೇಳೆ ಪದವಿ ಕೇವಲ ಶೇ. 3ರಷ್ಟು ಮಾತ್ರ ಬಳಕೆಯಾಗುತ್ತಿದೆ ಎಂದ NIT ಪದವೀಧರೆ!

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ (NIT) ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆ ಮಾನ್ವಿ, ತಮ್ಮ ಪದವಿಗಿಂತ ಸಂವಹನ ಕಲೆ ಮತ್ತು ಹೊಸ ಕೌಶಲಗಳೇ ಉದ್ಯೋಗದಲ್ಲಿ ಯಶಸ್ಸು ನೀಡಿದವು ಎಂದು ಹೇಳಿದ್ದಾರೆ. ಪದವಿ ಕೇವಲ ಕೆಲಸಕ್ಕೆ ಪ್ರವೇಶ ಟಿಕೆಟ್ ಮಾತ್ರ ಎಂದಿದ್ದಾರೆ.

Read Full Story

08:09 PM (IST) Apr 17

ಮುದುಕಿ ಬೇಕಾದ್ರೂ ಅನ್ನಿ, ​ ಆಂಟಿ ಮಾತ್ರ ಹೇಳ್ಬೇಡಿ ಪ್ಲೀಸ್ - ನಟಿ ವಿದ್ಯಾ ಮೂರ್ತಿ ಖಡಕ್​ ವಾರ್ನಿಂಗ್​

ಹಿರಿಯ ನಟಿ ವಿದ್ಯಾ ಮೂರ್ತಿ ಅವರು 35ಕ್ಕೂ ಹೆಚ್ಚು ಸೀರಿಯಲ್‌ಗಳು, 500ಕ್ಕೂ ಹೆಚ್ಚು ನಾಟಕಗಳು ಮತ್ತು ಹಲವಾರು ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ತಮ್ಮನ್ನು 'ಆಂಟಿ' ಎಂದು ಕರೆಯುವುದರ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

Read Full Story

08:00 PM (IST) Apr 17

ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ - ಯತೀಂದ್ರ ಸಿದ್ದರಾಮಯ್ಯ

ನಮ್ಮ ತಂದೆಯ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಸುಭಿಕ್ಷೆ ನೆಲೆಸಲಿ ಹಾಗೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂಬುದು ನಮ್ಮ ಆಶಯ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Read Full Story

07:22 PM (IST) Apr 17

ಬೆಂಗಳೂರು ಮ್ಯಾಚ್‌ ದಿನ ಅನುಷ್ಕಾ ಶರ್ಮಾ ಹಾಕಿದ ಡ್ರೆಸ್‌ ಬೆಲೆಗೆ RCB ವಿಐಪಿ ಟಿಕೆಟ್‌ ಎಷ್ಟು ಬರತ್ತೆ ಗೊತ್ತಾ?

Actress Anushka Sharma: ಐಪಿಎಲ್ ಮ್ಯಾಚ್‌ನಲ್ಲಿ ವಿರಾಟ್‌ ಕೊಹ್ಲಿ ಎಷ್ಟು ಸುದ್ದಿ ಆಗ್ತಾರೋ ಅಷ್ಟೇ ಅವರನ್ನು ಸಪೋರ್ಟ್‌ ಮಾಡಲು ಬರುವ ಅನುಷ್ಕಾ ಕೂಡ ಚರ್ಚೆ ಆಗ್ತಾರೆ. ವಿರಾಟ್‌ ಕೊಹ್ಲಿ ಅವರ ಮ್ಯಾಚ್‌ ಎಲ್ಲೇ ಇದ್ದರೂ ಕೂಡ ಅನುಷ್ಕಾ ಮಾತ್ರ ಮಿಸ್‌ ಮಾಡೋದಿಲ್ಲ.

 

Read Full Story

06:27 PM (IST) Apr 17

ಸಿಎಂ ಸಿದ್ದರಾಮಯ್ಯ ಬಗ್ಗೆ ನಟಿ ಉಮಾಶ್ರಿ ಇದೆಂಥ ಮಾತು- ವ್ಹಾರೆವ್ಹಾ ಎಂದ ನೆಟ್ಟಿಗರು

ಖ್ಯಾತ ನಟಿ ಉಮಾಶ್ರೀ ಅವರು ಸಂದರ್ಶನವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವ್ಯಕ್ತಿತ್ವ ಮತ್ತು ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಅವರೊಬ್ಬ ಶ್ರೇಷ್ಠ ವ್ಯಕ್ತಿ, ಎಲ್ಲರನ್ನೂ ಸಮಾನವಾಗಿ ಕಾಣುತ್ತಾರೆ ಎಂದು ಬಣ್ಣಿಸಿದ್ದು, ಈ ಹೇಳಿಕೆಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Read Full Story

06:19 PM (IST) Apr 17

ವಿನಯ್‌ ಕುಲಕರ್ಣಿಗೆ ಜೀವಾವಧಿ - ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯೆ, ಜೈಕಾರ ಹಾಕಿ ಸಂಭ್ರಮಿಸಿದ ಕಾರ್ಯಕರ್ತರು

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಹಿನ್ನೆಲೆಯಲ್ಲಿ, ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಹಿಂದೆ ತಾನು ಹೇಳಿದ್ದೇ ಇಂದು ಸತ್ಯವಾಗಿದೆ ಎಂದಿದ್ದಾರೆ. 2019ರಲ್ಲಿ ತಾವೇ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿತ್ತು ಎಂದು ಅವರು ಸ್ಮರಿಸಿಕೊಂಡರು.
Read Full Story

06:19 PM (IST) Apr 17

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಸತ್ತ ಮರಿಯ ಅಸ್ಥಿಪಂಜರ ಹೊತ್ತು ಸಾಗಿದ ತಾಯಿ ಕೋತಿ, ವಿಡಿಯೋ ವೈರಲ್!

ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿ ಕೋತಿಯೊಂದು ತನ್ನ ಮೃತ ಮರಿಯ ಅಸ್ಥಿಪಂಜರವನ್ನು ಹೊತ್ತು ತಿರುಗುತ್ತಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಈ ಘಟನೆಯು ಪ್ರಾಣಿಗಳಲ್ಲಿನ ತಾಯಿಯ ಮಮತೆ ಮತ್ತು ಶೋಕದ ಆಳವನ್ನು ತೋರಿಸಿದ್ದು, ಪ್ರಯಾಣಿಕರನ್ನು ಮತ್ತು ನೆಟ್ಟಿಗರನ್ನು ಭಾವುಕರನ್ನಾಗಿಸಿದೆ.
Read Full Story

06:10 PM (IST) Apr 17

ಹನಿಮೂನ್​ಗೆ 50 ಮಂದಿ, ಹೆಸ್ರು ಹೇಳಲು 3 ತಿಂಗ್ಳು! ಕೋಟೆ ಪ್ರಭಾಕರ್​ ಲವ್​ಸ್ಟೋರಿಗೆ ನಾಚಿದ Amruthadhaare ಭೂಮಿಕಾ

ನಟ ಕೋಟೆ ಪ್ರಭಾಕರ್ ಮತ್ತು ಅವರ ಪತ್ನಿ ಮಾಲತಿ 'ಜೋಡಿ ನಂಬರ್ 1' ವೇದಿಕೆಯಲ್ಲಿ ತಮ್ಮ 30 ವರ್ಷಗಳ ದಾಂಪತ್ಯದ ಸ್ವಾರಸ್ಯಕರ ಕಥೆಯನ್ನು ಹಂಚಿಕೊಂಡಿದ್ದಾರೆ. ಮದುವೆಗೆ ಕಾಲು ನೋಡಿ ಒಪ್ಪಿಕೊಂಡಿದ್ದು, 50 ಜನರೊಂದಿಗೆ ಹನಿಮೂನ್‌ಗೆ ಹೋಗಿದ್ದು ಸೇರಿದಂತೆ ಹಲವು ತಮಾಷೆಯ ಘಟನೆಗಳನ್ನು ಅವರು ಬಹಿರಂಗಪಡಿಸಿದರು.

Read Full Story

05:42 PM (IST) Apr 17

ಅಕ್ರಮ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಪಲ್ಟಿ - ರಸ್ತೆಗೆ ಬಿದ್ದ ಟನ್‌ಗಟ್ಟಲೇ ಅಕ್ಕಿ

ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಬೀದರ್‌ನ ಝರಣಿ ನರಸಿಂಹ ದೇವಸ್ಥಾನದ ಬಳಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಚಾಲಕ ಸೇರಿದಂತೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

Read Full Story

05:30 PM (IST) Apr 17

ಯೋಗೇಶ್ ಗೌಡ ಕೊಂದ 16 ಮಂದಿಗೆ ಜೀವಾವಧಿ, ವಿನಯ್ ಕುಲಕರ್ಣಿ ಮುಂದಿನ ಆಯ್ಕೆಗಳೇನು? ಜೀವಾವಧಿ ಶಿಕ್ಷೆ ಎಂದರೇನು?

ಧಾರವಾಡದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಸುಮಾರು 10 ವರ್ಷಗಳ ಸುದೀರ್ಘ ವಿಚಾರಣೆಯ ನಂತರ ಈ ತೀರ್ಪು ಹೊರಬಿದ್ದಿದ್ದು, ಪ್ರತಿಯೊಬ್ಬ ಆರೋಪಿಗೂ ₹1 ಲಕ್ಷ ದಂಡವನ್ನೂ ವಿಧಿಸಲಾಗಿದೆ. ಇದೇ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗೆ 7 ವರ್ಷಗಳ ಜೈಲು ಶಿಕ್ಷೆಯಾಗಿದೆ.
Read Full Story

05:14 PM (IST) Apr 17

Bigg Boss ಸೂರಜ್​ ಸಿಂಗ್​- ರಾಶಿಕಾ ಕೊಟ್ಟರು ಗುಡ್​ನ್ಯೂಸ್​ - ಚಿನ್ನ ಖರೀದಿಸ್ತಾ ಜೋಡಿ ಹೇಳಿದ್ದೇನು?

ಬಿಗ್​ಬಾಸ್​ 12ರ ಕ್ಯೂಟ್​ ಜೋಡಿ ಎನಿಸಿಕೊಂಡಿದ್ದ ಸೂರಜ್​ ಸಿಂಗ್ ಮತ್ತು ರಾಶಿಕಾ ಶೆಟ್ಟಿ, ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಚಿನ್ನದ ಮಳಿಗೆಯೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.  ತಮ್ಮಿಬ್ಬರ ನಡುವೆ ಇರುವುದು ಗೆಳೆತನ ಮಾತ್ರ ಎಂದು ಈ ಜೋಡಿ ಸ್ಪಷ್ಟಪಡಿಸಿದ್ದು, ಈ ಮಳಿಗೆಗೆ ಬಂದದ್ದೇಕೆ?

Read Full Story

04:47 PM (IST) Apr 17

ಯಶ್ ಕೆಜಿಎಫ್ 2ಗೆ ನಾಲ್ಕು ವರ್ಷ - ಭಾರತೀಯ ಸಿನಿಮಾ ಸ್ಟೈಲ್ ಬದಲಿಸಿದ ರಾಕಿಂಗ್ ಸ್ಟಾರ್

ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಅವರ ಹೇರ್‌ಸ್ಟೈಲ್‌, ಗಡ್ಡದ ವಿನ್ಯಾಸ ಎಷ್ಟು ಫೇಮಸ್‌ ಆಯ್ತು ಅಂದರೆ ಸದಾ ಗಡ್ಡ, ಮೀಸೆ ಬೋಳಿಸಿಕೊಂಡಿರುತ್ತಿದ್ದ ಬಾಲಿವುಡ್‌ ಹೀರೋಗಳೆಲ್ಲ ಕುರುಚಲು ಗಡ್ಡ, ದಪ್ಪ ಮೀಸೆಯ ಸ್ಟೈಲಿಗೆ ಶರಣಾದರು.

Read Full Story

04:35 PM (IST) Apr 17

ರೈಟರ್ಸ್ ರೂಮ್- ಅಂದ್ರೇನದು ಥೋಥೋ ಛೇಛೇ - ಕಥೆಗಳಿಲ್ಲವೇ ಅಥವಾ ಅವಕಾಶಗಳಿಲ್ಲವೇ?

ಒಂದು ಸಂಜೆ ಹೊತ್ತು ಕಿರುತೆರೆಯಲ್ಲಿರುವವರೊಬ್ಬರು ಮಾತನಾಡುತ್ತಿದ್ದರು. ಚಿತ್ರರಂಗ, ಕನ್ನಡ ವೆಬ್‌ ಸೀರೀಸ್‌ಗಳ ಕುರಿತು ಮಾತುಕತೆ ಆಗುತ್ತಿತ್ತು. ಕನ್ನಡ ಚಿತ್ರರಂಗದ ಕುರಿತು ಥೋಥೋ ಛೇಛೇ ನಡೆಯುತ್ತಿತ್ತು.

Read Full Story

04:28 PM (IST) Apr 17

Breaking - ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ - ಶಾಸಕ ಸ್ಥಾನದಿಂದ ಅನರ್ಹತೆ ಸಾಧ್ಯತೆ, ನಾಳೆ ಅಧಿಸೂಚನೆ ಪ್ರಕಟ?

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ, ತಮ್ಮ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿಯಲ್ಲಿದ್ದಾರೆ. ನ್ಯಾಯಾಲಯದ ತೀರ್ಪಿನ ಪ್ರತಿ ಕೈಸೇರಿದ ತಕ್ಷಣ ಸ್ಪೀಕರ್ ಕಚೇರಿಯು ಅನರ್ಹತೆಯ ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿದೆ.

Read Full Story

04:19 PM (IST) Apr 17

ಎಂಥ ಕಚೇರಿಗೂ ನಾವ್ ರೆಡಿ! ಹಿನ್ನೆಲೆ ಗಾಯನಕ್ಕಿಂತ ಕಾನ್ಸರ್ಟ್‌ಗಳಲ್ಲಿ ಹೆಚ್ಚು ಲಾಭ

ಸಿನಿಮಾದ ಹಿನ್ನೆಲೆ ಗಾಯನಕ್ಕಿಂತ ಕಾನ್ಸರ್ಟ್‌ಗಳಲ್ಲೇ ಇವರು ಬ್ಯುಸಿ. ಹಣ, ಪ್ರಸಿದ್ಧಿ ಎರಡೂ ಇಲ್ಲಿ ಸಮೃದ್ಧ. ಅಂದಹಾಗೆ ಬೆಂಗಳೂರಿನಲ್ಲಿ ಮುಂದಿನ ವಾರ ಇರುವ ಇವರ ಕಾನ್ಸರ್ಟ್‌ಗೆ 900 ರು.ನಿಂದ 3000 ರು.ತನಕ ಟಿಕೆಟ್‌ ದರ ಇದೆ.

Read Full Story

04:11 PM (IST) Apr 17

ಯೋಗೇಶ್ ಗೌಡ ಹತ್ಯೆ ಪ್ರಕರಣ - ಕೊಲೆಗಾರ ವಿನಯ್ ಕುಲಕರ್ಣಿ ಆಂಡ್ ಜೀವಾವಧಿ ಶಿಕ್ಷೆ ಪ್ರಕಟ

ಧಾರವಾಡ ಜಿ.ಪಂ. ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಈ ಹತ್ಯೆಗೆ ಸಂಬಂಧಿಸಿದಂತೆ ಕುಲಕರ್ಣಿ ಸೇರಿದಂತೆ ಒಟ್ಟು 17 ಅಪರಾಧಿಗಳಿಗೆ ಶಿಕ್ಷೆ ಪ್ರಕಟಿಸಲಾಗಿದೆ.
Read Full Story

04:06 PM (IST) Apr 17

ಮಂಡ್ಯ - ಸ್ಟ್ಯಾಲಿನ್ ಗೆ ಬುದ್ದಿ ಇಲ್ಲ ಬುದ್ದಿ ಕಡಿಮೆ, ಆರ್. ಅಶೋಕ್ ಮಾತಿನ ಸಮರ

ಮಂಡ್ಯದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಮಹಿಳಾ ಮೀಸಲಾತಿ ಬಿಲ್ ಕುರಿತು ಕೇಂದ್ರವನ್ನು ಶ್ಲಾಘಿಸಿದರು. ಇದೇ ವೇಳೆ, ಕ್ಷೇತ್ರ ಮರುವಿಂಗಡಣೆ, ಹಿಂದಿ ಪರೀಕ್ಷೆ ವಿವಾದ ಸೇರಿದಂತೆ ಹಲವು ವಿಚಾರಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದು ಅವರು ಟೀಕಿಸಿದರು.
Read Full Story

03:11 PM (IST) Apr 17

2024ರ ಟಾಪರ್ ಈಗ ಎಸಿಬಿ ಬಲೆಗೆ - 60 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ SDM ಕಾಜಲ್ ಮೀನಾ - ಕಚೇರಿಯಲ್ಲಿದ್ದ 4 ಲಕ್ಷ ಜಪ್ತಿ

2024ರ ಸಿವಿಲ್ ಸರ್ವೀಸ್ ಟಾಪರ್ ಹಾಗೂ ಎಸ್‌ಡಿಎಂ ಅಧಿಕಾರಿಯಾದ ಕಾಜಲ್ ಮೀನಾ, ಭೂ ವಿವಾದವೊಂದಕ್ಕೆ ಸಂಬಂಧಿಸಿದಂತೆ 60 ಸಾವಿರ ಲಂಚ ಸ್ವೀಕರಿಸುವಾಗ ರಾಜಸ್ಥಾನದ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರೊಂದಿಗೆ ಇಬ್ಬರು ಸಹಾಯಕರೂ ಬಂಧಿತರಾಗಿದ್ದು, ಕಚೇರಿಯಿಂದ 4 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
Read Full Story

03:00 PM (IST) Apr 17

ಅಂಕೋಲಾ ಹೆದ್ದಾರಿಯಲ್ಲಿ ಎಥನಾಲ್ ದ್ರಾವಣ ತುಂಬಿದ ಟ್ಯಾಂಕರ್ ಸ್ಟೋಟ, ಅಗ್ನಿ ಜ್ವಾಲೆಗೆ ತುಮಕೂರು ಮೂಲದ ಚಾಲಕ ಗಂಭೀರ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
Read Full Story

01:39 PM (IST) Apr 17

ಎಲೆಕ್ಷನ್​ ಗೆಲ್ಲಲು ಒಂದೇ ಗ್ಯಾರೆಂಟಿ ಸಾಕೆಂದು ತೋರಿದ Brahmagantu ದೀಪಾ - ಕೇಸ್​ ಹಾಕಲು ವೀಕ್ಷಕರು ರೆಡಿ

ಬ್ರಹ್ಮಗಂಟು ಧಾರಾವಾಹಿಯಲ್ಲಿ, ದೀಪಾಳ ಮೇಲೆ ಸೇಡು ತೀರಿಸಿಕೊಳ್ಳಲು ದಿಶಾಳನ್ನು ಮನೆಗೆ ತಂದ ಸೌಂದರ್ಯಳಿಗೆ ಈಗ ಸಂಕಷ್ಟ ಎದುರಾಗಿದೆ. ಮಹಿಳಾ ಮಂಡಳದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಸೌಂದರ್ಯಳನ್ನು ಸೋಲಿಸಲು, ದೀಪಾಳು ಉಚಿತ ಸಿಲಿಂಡರ್ ಗ್ಯಾರೆಂಟಿಯ ಆಮಿಷವೊಡ್ಡಿ ಜಾಜಿಯನ್ನು ಕಣಕ್ಕಿಳಿಸಿದ್ದಾಳೆ.
Read Full Story

01:36 PM (IST) Apr 17

ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!

ಯಾದಗಿರಿ ಜಿಲ್ಲೆಯ ಸುರಪುರ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ತಿಂಥಣಿ ಮೌನೇಶ್ವರ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ರಾಯಚೂರು ಜಿಲ್ಲೆಯ ಸಿರವಾರದ ಕುಟುಂಬ ಈ ದುರಂತಕ್ಕೆ ಬಲಿಯಾಗಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
Read Full Story

12:45 PM (IST) Apr 17

ಪದೇ ಪದೇ ಸಿದ್ದರಾಮಯ್ಯ ಆಪ್ತರ ಟಾರ್ಗೆಟ್; ರಕ್ಷಣೆಗೆ ಮುಂದಾಗದ ಸಿಎಂ, ಆಪ್ತರಿಂದಲೇ ಬಹಿರಂಗ ಅಸಮಾಧಾನ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದ ನಾಯಕರನ್ನು ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಚರ್ಚೆ ಕಾಂಗ್ರೆಸ್‌ನಲ್ಲೇ ಶುರುವಾಗಿದೆ. ಈ ಷಡ್ಯಂತ್ರದ ನಡುವೆಯೂ ಸಿಎಂ ತಮ್ಮ ಆಪ್ತರ ರಕ್ಷಣೆಗೆ ನಿಲ್ಲದೆ ಮೌನ ವಹಿಸಿರುವುದು ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ  ಆತಂಕಕ್ಕೆ ಕಾರಣವಾಗಿದೆ.

Read Full Story

12:36 PM (IST) Apr 17

ಹಿಂಡಲಗಾ ಜೈಲಿನ ಮೇಲೆ ದಾಳಿ, ಸಿಗರೆಟ್, ಜೀಮ್ ಡೆಂಬಲ್ಸ್ ಪತ್ತೆ! ಜೈಲು ಸಿಬ್ಬಂದಿ ಚಳಿಬಿಡಿಸಿದ ಡಿಜಿಪಿ ಅಲೋಕ ಕುಮಾರ

ಬಂದಿಖಾನೆ ಡಿಜಿಪಿ ಅಲೋಕ ಕುಮಾರ್ ಅವರು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಎರಡು ಶ್ವಾನಗಳ ಸಹಾಯದಿಂದ ನಡೆದ ಈ ಶೋಧದಲ್ಲಿ ಸಿಗರೇಟ್ ಪ್ಯಾಕೆಟ್ ಹಾಗೂ ಡಂಬೆಲ್ಸ್ ಪತ್ತೆಯಾಗಿದ್ದು, ನಿರ್ಲಕ್ಷ್ಯ ತೋರಿದ ಜೈಲು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ.
Read Full Story

12:19 PM (IST) Apr 17

No 1 ಆಗಿ ಮೆರೆದಿದ್ದ ಜನಪ್ರಿಯ ಧಾರಾವಾಹಿ ಅಂತ್ಯ ಆಗ್ತಿದ್ಯಾ? ಹೀರೋ ಕ್ಲಾರಿಟಿ ಕೊಟ್ರು!

Amruthadhaare Serial: ಅಮೃತಧಾರೆ ಧಾರಾವಾಹಿಯಲ್ಲಿ ಜಯದೇವ್‌ ದಿವಾನ್‌ ದಿವಾಳಿಯಾದ್ರೆ, ಗೌತಮ್‌ ದಿವಾನ್‌ ಹೊಸ ಸಾಮ್ರಾಜ್ಯ ಕಟ್ಟಿದರೆ ಈ ಸೀರಿಯಲ್‌ ಅಂತ್ಯಕ್ಕೆ ಬಂದಂತೆ. ಗೌತಮ್‌ ಮಗಳ ಹುಡುಕಾಟವನ್ನು ಕೂಡ ಮಾಡಬೇಕಿತ್ತು. ಈ ಬಗ್ಗೆ ರಾಜೇಶ್‌ ನಟರಂಗ ಯುಟ್ಯೂಬ್‌ ಚಾನೆಲ್‌ ಜೊತೆ ಮಾತನಾಡಿದ್ದಾರೆ.

 

Read Full Story

12:15 PM (IST) Apr 17

ಕೂಲಿ ಕೆಲ್ಸ ಮಾಡಿದ್ದೆ, ಜೈಲೂ ಸೇರಿದೆ - Amruthadhaare ನಟ ರಾಣವ್​ ಬದುಕಿನ ಯಾರೂ ತಿಳಿಯದ ಸತ್ಯ

ಅಮೃತಧಾರೆ ಸೀರಿಯಲ್ ಖ್ಯಾತಿಯ ನಟ ಜೈದೇವ್ ಅಲಿಯಾಸ್ ರಾಣವ್ ಗೌಡ, ಸಹನಟಿ ರಾಧಾ ಭಗವತಿ ಅವರನ್ನು ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ನಟನಾ ಪಯಣದ ಹಿಂದಿನ ಕಷ್ಟಹಂಚಿಕೊಂಡಿದ್ದು, ಕೂಲಿ ಕೆಲಸ ಮಾಡಿದ್ದರಿಂದ ಹಿಡಿದು ಜೈಲು ಸೇರಿದ್ದರ ಬಗ್ಗೆಯೂ ಮಾತನಾಡಿದ್ದಾರೆ.

Read Full Story

12:03 PM (IST) Apr 17

ಯಾದಗಿರಿ ಬಳಿ ಬಸ್ ಮತ್ತು ಕಾರು ನಡುವೆ ಭಯಾನಕ ಅಪಘಾತ - ಕಾರಲ್ಲಿದ್ದ 6 ಮಂದಿ ಸುಟ್ಟು ಭಸ್ಮ!

ಯಾದಗಿರಿ ಜಿಲ್ಲೆಯ ಸುರಪುರ ಬಳಿ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
Read Full Story

11:41 AM (IST) Apr 17

ಕ್ಷೇತ್ರ ವಿಂಗಡಣೆ - ಕನ್ನಡಿಗರ ಪಾಲೇ ಕಡಿಮೆ ಆಗುತ್ತೆ, ಅದನ್ನೇಕೆ ಹೇಳ್ತಿಲ್ಲ? - ಕರವೇ ನಾರಾಯಣಗೌಡ

ಕ್ಷೇತ್ರ ಪುನರ್ ವಿಂಗಡಣೆ ಜನಸಂಖ್ಯೆ ನಿಯಂತ್ರಿಸಿದ ಕರ್ನಾಟಕದಂತಹ ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ  ಕುಗ್ಗಿಸುವ ಅಪಾಯ ಒಡ್ಡಿದೆ. ಇದು ದಕ್ಷಿಣದ ರಾಜ್ಯಗಳು ತಮ್ಮ ಯಶಸ್ವಿ ಜನಸಂಖ್ಯಾ ನೀತಿಗಾಗಿ ಶಿಕ್ಷೆ ಅನುಭವಿಸಿದಂತೆ ಆಗಲಿದ್ದು, ತೆರಿಗೆ ಹಂಚಿಕೆಯಲ್ಲಿ ಅನ್ಯಾಯವನ್ನು ಮತ್ತಷ್ಟು ಹೆಚ್ಚಿಸಲಿದೆ. 

Read Full Story

11:23 AM (IST) Apr 17

ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್

ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್, ಮಹಿಳೆ ಮೇಲೆ ಹಲ್ಲೆ ಕೊಲೆ ಬೆದರಿಕೆ ಕೇಸ್ ಸಂಬಂಧ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತೀರ್ಪು ಪ್ರಕಟಿಸಿದೆ. ಏನಿದು ಪ್ರಕರಣ?

Read Full Story

11:15 AM (IST) Apr 17

ಅನಂತಕುಮಾರ್ ಹೆಗಡೆ ಪುತ್ರನ ವಿರುದ್ಧದ ಗಲಾಟೆ ಪ್ರಕರಣಕ್ಕೆ ಹೈಕೋರ್ಟ್ ತಡೆ; ಎಫ್‌ಐಆರ್‌ನಲ್ಲಿ ಹೆಸರಿಲ್ಲದಿದ್ದರೂ ಕೇಸಿನಲ್ಲಿ ಸಿಲುಕಿದ್ದೇಕೆ?

ಮಾಜಿ ಸಚಿವ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ಹೆಗಡೆ ವಿರುದ್ಧದ ಗಲಾಟೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಫ್‌ಐಆರ್ ಅಥವಾ ಆರೋಪಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಮತ್ತು ಮೇಲ್ನೋಟಕ್ಕೆ ಅಪರಾಧದ ಆರೋಪಗಳಿಲ್ಲವೆಂದು ಪರಿಗಣಿಸಿ, ನ್ಯಾಯಪೀಠವು ಈ ಮಧ್ಯಂತರ ಆದೇಶವನ್ನು ನೀಡಿದೆ.

Read Full Story

11:03 AM (IST) Apr 17

ಚಿನ್ನ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾಗೆ ಸುಪ್ರೀಂನಲ್ಲಿ ಹಿನ್ನಡೆ, ಸಿಇಐಬಿ ಕಾಫಿಪೋಸಾ ಬಂಧನ ಎತ್ತಿಹಿಡಿದ ಕೋರ್ಟ್

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. ಕಾಫಿಪೋಸಾ ಕಾಯ್ದೆಯಡಿ ಅವರ ಮುನ್ನೆಚ್ಚರಿಕಾ ಬಂಧನವನ್ನು ನ್ಯಾಯಾಲಯ ಎತ್ತಿಹಿಡಿದಿದ್ದು, ಅವರ ಪರವಾಗಿ ಸಲ್ಲಿಸಲಾದ ಮೇಲ್ಮನವಿಗಳನ್ನು ವಜಾಗೊಳಿಸಿದೆ.  

Read Full Story

11:01 AM (IST) Apr 17

ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಾಣೆಗಾರರ ಕ್ವಾರಂಟೈನ್ ಮಾಡಿದ ವೈದ್ಯರು

ಕರ್ನಾಟಕದಲ್ಲಿ H5N1 ವೈರಸ್ ಪತ್ತೆ, ಕೋಳಿ ಸಾಕಾಣೆಗಾರರ ಕ್ವಾರಂಟೈನ್ ಮಾಡಿದ ವೈದ್ಯರು, ಕೇಂದ್ರ ಸರ್ಕಾರದ ಅನುಮತಿ ಮೇರೆ ರಾಜ್ಯದಲ್ಲಿ ತಪಾಸಣೆ ನಡೆಯುತ್ತಿದೆ. ಈ ವೇಳೆ ವೈರಸ್ ಪತ್ತೆಯಾಗಿದೆ.

 

Read Full Story

10:43 AM (IST) Apr 17

ರಾಹುಲ್ ಗಾಂಧಿ ತಮಿಳುನಾಡು ಸಮಾವೇಶದ ಉಸ್ತುವಾರಿ ಡಿಕೆ ಸುರೇಶ್ ಹೆಗಲಿಗೆ!

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪೊನ್ನೇರಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
Read Full Story

09:58 AM (IST) Apr 17

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಇನ್ನು ಇರೋಲ್ಲ? 13,262 ಕೋಟಿ ವೆಚ್ಚದಲ್ಲಿ 11 ಎಲಿವೇಟೆಡ್ ಕಾರಿಡಾರ್‌ಗೆ ಸಂಪುಟ ಅಸ್ತು!

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 13,262.70 ಕೋಟಿ ರು. ವೆಚ್ಚದಲ್ಲಿ 72.60 ಕಿ.ಮೀ ಉದ್ದದ 11 ಎಲಿವೇಟೆಡ್ ಕಾರಿಡಾರ್‌ಗಳ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ಸ್ಮಾರ್ಟ್‌ ಇನ್‌ಫ್ರಾಸ್ಟ್ರಕ್ಚರ್‌ ಲಿ. (ಬಿ-ಸ್ಮೈಲ್‌) ಸಂಸ್ಥೆಯು ಈ ಯೋಜನೆ ಅನುಷ್ಠಾನಗೊಳಿಸಲಿದೆ.

Read Full Story

09:49 AM (IST) Apr 17

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ದಸರಾ ರಜೆ ದಿನವನ್ನು ನಿರ್ಧರಿಸಲಾಗಿದೆ.

Read Full Story

09:14 AM (IST) Apr 17

ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ

ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ, ಕುಡಿದ ಮತ್ತಿನಲ್ಲಿ ಮನಸ್ಸೋ ಇಚ್ಚೆ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.

Read Full Story

09:14 AM (IST) Apr 17

ಮಹಾರಾಷ್ಟ್ರ ಮಾದರಿಯಲ್ಲಿ ಕನ್ನಡ ಮಾತಾಡಲು ಬಾರದ ಟ್ಯಾಕ್ಸಿ ಚಾಲಕರ ಡಿಎಲ್ ರದ್ದಾಗಲಿ - ಕರವೇ

ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಪರವಾನಗಿ ರದ್ದುಗೊಳಿಸುವ ನಿರ್ಧಾರವನ್ನು ಸ್ವಾಗತಿಸಿರುವ ಕರವೇ, ಕರ್ನಾಟಕದಲ್ಲೂ ಇದೇ ನಿಯಮ ಜಾರಿಗೆ ತರಲು ಆಗ್ರಹಿಸಿದೆ. ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರ ಪರವಾನಗಿ ರದ್ದುಗೊಳಿಸಲು ಕರವೇ ಆಗ್ರಹಿಸಿದೆ.

Read Full Story

07:57 AM (IST) Apr 17

ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾಳ ತಲೆಬುರುಡೆ ಪತ್ತೆ! ಸಿಸಿಟಿವಿಯಲ್ಲಿ ಸೆರೆಯಾಯ್ತು ಕೊನೆಯ ದೃಶ್ಯ !

ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾ ಎಂಬ ಮಹಿಳೆಯ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.
Read Full Story

07:55 AM (IST) Apr 17

ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ

ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ, ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಮಳೆಯಾಗಿದ್ದು, ಕಾಫಿನಾಡು ಕಂಗಾಲಾಗಿದೆ.

Read Full Story

More Trending News