LIVE NOW
Published : Apr 17, 2026, 07:16 AM ISTUpdated : Apr 17, 2026, 09:58 AM IST

Karnataka News Live: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಇನ್ನು ಇರೋಲ್ಲ? 13,262 ಕೋಟಿ ವೆಚ್ಚದಲ್ಲಿ 11 ಎಲಿವೇಟೆಡ್ ಕಾರಿಡಾರ್‌ಗೆ ಸಂಪುಟ ಅಸ್ತು!

ಸಾರಾಂಶ

ಬೆಂಗಳೂರಿನಲ್ಲಿ ಮತ್ತೆ ನಾಯಿಗಳ ಹಾವಳಿ ಹೆಚ್ಚಾಗಿದೆ. ಒಂದೇ ವಾರದಲ್ಲಿ ಇದೀಗ 2ನೇ ಪ್ರಕರಣ ದಾಖಲಾಗಿದೆ. ಹೆಚ್ಆರ್‌ಬಿಆರ್ ಲೇಔಟ್‌ನಲ್ಲಿ ವೃದ್ಧನ ಮೇಲೆ ಸಾಕು ನಾಯಿಯೊಂದು ದಾಳಿ ಮಾಡಿದೆ. ಮಾಲೀಕನ ಎದುರೇ ವೃದ್ಧನ ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ. ನಾಯಿ ದಾಳಿಗೆ ವೃದ್ಧನ ಕಾಲಿಗೆ ಗಂಭೀರ ಗಾಯವಾಗಿದೆ. ಕುಟುಂಬಸ್ಥರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಹಲವು ಬಾರಿ ಈ ರೀತಿ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇತ್ತ ರಾಜ್ಯ ಸರ್ಕಾರ ಒಳ ಮೀಸಲಾತಿ ವಿಚಾರದ ಬಗ್ಗೆ ಅನೌಪಚಾರಿಕ ಚರ್ಚೆ ನಡೆಸಿದೆ. ಯಾವಾಗ ಮತ್ತೊಮ್ಮೆ ಸಭೆ ಮಾಡಬೇಕು ಎಂಬ ಬಗ್ಗೆ ಸಚಿವ ಸಂಪುಟ ಚರ್ಚೆ ನಡೆಸಿದೆ. ಕರ್ನಾಟಕದ ಇಂದಿನ ಕ್ಷಣ ಕ್ಷಣದ ಅಪ್‌ಡೇಟ್ ಇಲ್ಲಿದೆ.

 11 elevated corridors

09:58 AM (IST) Apr 17

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಇನ್ನು ಇರೋಲ್ಲ? 13,262 ಕೋಟಿ ವೆಚ್ಚದಲ್ಲಿ 11 ಎಲಿವೇಟೆಡ್ ಕಾರಿಡಾರ್‌ಗೆ ಸಂಪುಟ ಅಸ್ತು!

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 13,262.70 ಕೋಟಿ ರು. ವೆಚ್ಚದಲ್ಲಿ 72.60 ಕಿ.ಮೀ ಉದ್ದದ 11 ಎಲಿವೇಟೆಡ್ ಕಾರಿಡಾರ್‌ಗಳ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ಸ್ಮಾರ್ಟ್‌ ಇನ್‌ಫ್ರಾಸ್ಟ್ರಕ್ಚರ್‌ ಲಿ. (ಬಿ-ಸ್ಮೈಲ್‌) ಸಂಸ್ಥೆಯು ಈ ಯೋಜನೆ ಅನುಷ್ಠಾನಗೊಳಿಸಲಿದೆ.

Read Full Story

09:49 AM (IST) Apr 17

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ದಸರಾ ರಜೆ ದಿನವನ್ನು ನಿರ್ಧರಿಸಲಾಗಿದೆ.

Read Full Story

09:14 AM (IST) Apr 17

ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ

ಕುಡಿದ ಗ್ರಾಹಕನಿಗೆ ಟೆಸ್ಟ್ ಡ್ರೈವ್ ಕೊಟ್ಟ ಎಡವಟ್ಟು ಮಾಡಿದ ಮಹೀಂದ್ರ ಶೋ ರೂಂ, ಹಲವು ಕಾರಿಗೆ ಡಿಕ್ಕಿ, ಕುಡಿದ ಮತ್ತಿನಲ್ಲಿ ಮನಸ್ಸೋ ಇಚ್ಚೆ ಕಾರು ಚಲಾಯಿಸಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.

Read Full Story

09:14 AM (IST) Apr 17

ಮಹಾರಾಷ್ಟ್ರ ಮಾದರಿಯಲ್ಲಿ ಕನ್ನಡ ಮಾತಾಡಲು ಬಾರದ ಟ್ಯಾಕ್ಸಿ ಚಾಲಕರ ಡಿಎಲ್ ರದ್ದಾಗಲಿ - ಕರವೇ

ಮಹಾರಾಷ್ಟ್ರದಲ್ಲಿ ಮರಾಠಿ ಬಾರದ ಚಾಲಕರ ಪರವಾನಗಿ ರದ್ದುಗೊಳಿಸುವ ನಿರ್ಧಾರವನ್ನು ಸ್ವಾಗತಿಸಿರುವ ಕರವೇ, ಕರ್ನಾಟಕದಲ್ಲೂ ಇದೇ ನಿಯಮ ಜಾರಿಗೆ ತರಲು ಆಗ್ರಹಿಸಿದೆ. ಕನ್ನಡ ಮಾತನಾಡಲು, ಓದಲು ಮತ್ತು ಬರೆಯಲು ಬಾರದ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರ ಪರವಾನಗಿ ರದ್ದುಗೊಳಿಸಲು ಕರವೇ ಆಗ್ರಹಿಸಿದೆ.

Read Full Story

07:57 AM (IST) Apr 17

ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾಳ ತಲೆಬುರುಡೆ ಪತ್ತೆ! ಸಿಸಿಟಿವಿಯಲ್ಲಿ ಸೆರೆಯಾಯ್ತು ಕೊನೆಯ ದೃಶ್ಯ !

ದಾಬಸ್‍ಪೇಟೆ ಬಳಿ ನಾಪತ್ತೆಯಾಗಿದ್ದ ಯಮುನಾ ಎಂಬ ಮಹಿಳೆಯ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದು, ಸಿಸಿ ಕ್ಯಾಮೆರಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಗಾಗಿ ಬಲೆ ಬೀಸಿದ್ದಾರೆ.
Read Full Story

07:55 AM (IST) Apr 17

ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ

ಭಾರಿ ಮಳೆಗೆ ಚಿಕ್ಕಮಗಳೂರಿನಲ್ಲಿ ವಿದ್ಯುತ್ ಸಂಪರ್ಕ ಕಡಿತ, ಧರೆಗುರುಳಿದ 60ಕ್ಕೂ ಹೆಚ್ಚು ವಿದ್ಯುತ್ ಕಂಬ, ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಾದ್ಯಂತ ಭಾರಿ ಮಳೆಯಾಗಿದ್ದು, ಕಾಫಿನಾಡು ಕಂಗಾಲಾಗಿದೆ.

Read Full Story

07:40 AM (IST) Apr 17

ಬಿಡಿಎ ವಿರುದ್ಧ ಹೋರಾಡಿ ₹56 ಲಕ್ಷ ಬಡ್ಡಿ ಗೆದ್ದ ನಿವೇಶನದಾರೆ! ಏನಿದು ಪ್ರಕರಣ?

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿ ಮನೆ ಕಟ್ಟಲು ಅಗತ್ಯವಾದ ಮೂಲಸೌಲಭ್ಯ ನೀಡದ ಕಾರಣಕ್ಕಾಗಿ ನಿವೇಶನದಾರರೊಬ್ಬರಿಗೆ ಬರೋಬ್ಬರಿ ₹56.3 ಲಕ್ಷ ಬಡ್ಡಿ ಪರಿಹಾರ ನೀಡುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ಕೆ-ರೇರಾ) ಆದೇಶಿಸಿದೆ.

Read Full Story

07:16 AM (IST) Apr 17

ಮಾಲೀಕನ ಎದುರೇ ನಾಯಿ ಕಡಿತಕ್ಕೊಳಗಾದ ವೃದ್ಧನ ನರಳಾಟ

HRBR ಲೇ ಔಟ್ ನಿವಾಸಿ ತನ್ನ ಪಾಡಿಗೆ ತೆರಳುತ್ತಿದ್ದ ವೇಳೆ ನಾಯಿ ದಾಳಿ ಮಾಡಿದೆ. ಮಾಲೀಕ ಎದುರಿಗೆ ನಿಂತಿರುವಾಗಲೇ ದಾಳಿಯಾಗಿದೆ. ಮಾಲೀಕನ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.


More Trending News