ಬೆಂಗಳೂರು: ಬಿಜೆಪಿಗೆ ಹೊಸ ಸಾರಥಿ ನೇಮಕ ಬೆನ್ನಲ್ಲೇ ರಾಜ್ಯದ ಕೇಸರಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಳಗಾವಿ ಅಧಿವೇಶನ ಬಿಟ್ಟು ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷ ನಿತಿನ್ ನವೀನ್ ಅವರನ್ನು ಮಂಗಳವಾರ ಭೇಟಿ ಮಾಡಿ ಶುಭ ಕೋರಿದ್ದಾರೆ. ಅಲ್ಲದೆ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿಗತಿ, ಪಕ್ಷ ಸಂಘಟನೆ, ರಾಜ್ಯದಲ್ಲಿನ ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿಗೆ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ನಿತಿನ್ ನವೀನ್ ಅವರು, ರಾಜ್ಯದ ಬಗ್ಗೆಯೂ ಗಮನ ಹರಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅವರ ಭೇಟಿ ಮಹತ್ವ ಪಡೆದಿದೆ.
12:23 PM (IST) Dec 17
2 95 Lakh BPL Card Applications Cleared says Minister KH Muniyappa: ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ ಬಂದ 3.96 ಲಕ್ಷ ಅರ್ಜಿಗಳ ಪೈಕಿ 2.95 ಲಕ್ಷ ವಿಲೇವಾರಿಯಾಗಿದ್ದು, ಉಳಿದವುಗಳನ್ನು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ
12:10 PM (IST) Dec 17
ಸುವರ್ಣ ವಿಧಾನಸಭೆಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ವೇಳೆ, ಬಿಜೆಪಿ ಶಾಸಕ ಅಭಯ್ ಪಾಟೀಲ್ 'ಒಂದು-ಎರಡು ಬಾಳೆಲೆ ಹರಡು' ಹಾಡನ್ನು ಕಾಂಗ್ರೆಸ್ ಸರ್ಕಾರಕ್ಕೆ ಅನ್ವಯಿಸಿ ಹಾಡಿನ ಮೂಲಕ ರಾಜ್ಯ ಕಾಂಗ್ರೆಸ್ನಲ್ಲಿನ ಆಂತರಿಕ ಭಿನ್ನಮತ ಮತ್ತು ಬಣ ರಾಜಕೀಯವನ್ನು ವ್ಯಂಗ್ಯವಾಡಿ ಸರ್ಕಾರದ ಕಾಲೆಳೆದರು.
11:57 AM (IST) Dec 17
ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ 'ಮ್ಯೂಸಿಕ್ ಮೈಲಾರಿ'ಯನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಲಾಡ್ಜ್ನಲ್ಲಿ ದೌರ್ಜನ್ಯ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು.
11:42 AM (IST) Dec 17
ಸಂಬಳ ಕಡಿಮೆಯಾದ್ದರಿಂದ ಉಲಿತಾಯ ಮಾಡೋದಕ್ಕಾಗ್ತಿಲ್ಲ ಅಂತ ಎಷ್ಟೋ ಜನ ಹೇಳುತ್ತಿರುತ್ತಾರೆ. ಆದರೆ ಹಣಕಾಸು ತಜ್ಞರ ಪ್ರಕಾರ ಹಣ ಉಳಿತಾಯಕ್ಕೆ ದೊಡ್ಡ ತಡೆ ನಮ್ಮ ಜೀವನಶೈಲಿ. ಈ ಕುರಿತ ಚಿಂತನಾತ್ಮಕ ಲೇಖನ.
11:39 AM (IST) Dec 17
11:15 AM (IST) Dec 17
ರಾಮಮೂರ್ತಿನಗರ ಠಾಣಾಧಿಕಾರಿ ಸತೀಶ್ ಅವರಿಗೆ ಸಂಜನಾ ಎಂಬ ಮಹಿಳೆ ಪ್ರೀತಿಸುವಂತೆ ನಿರಂತರವಾಗಿ ಪೀಡಿಸುತ್ತಿದ್ದಳು. ರಾಜಕೀಯ ನಾಯಕರ ಹೆಸರು ಬಳಸಿ, ಆತ್ಮ*ಹತ್ಯೆ ಬೆದರಿಕೆ ಹಾಕಿ ಕಿರುಕುಳ ನೀಡಿದ ಆಕೆಯನ್ನು ಪೊಲೀಸರು ಬಂಧಿಸಿದ್ದು, ಈ ಹಿಂದೆಯೂ ಆಕೆ ಇದೇ ರೀತಿ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.
11:07 AM (IST) Dec 17
ಸರ್ಕಾರಿ ನೇಮಕಾತಿ ವಿಳಂಬ ಮತ್ತು ಪರೀಕ್ಷೆಯಲ್ಲಿನ ವೈಫಲ್ಯದಿಂದ ಮನನೊಂದು, 25 ವರ್ಷದ ಯುವತಿಯೊಬ್ಬಳು ಧಾರವಾಡದಲ್ಲಿ ರೈಲಿಗೆ ಸಿಲುಕಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಕಳೆದ ನಾಲ್ಕು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಯುವತಿ.
10:39 AM (IST) Dec 17
10:06 AM (IST) Dec 17
ಅಜಾನ್ ಲೌಡ್ ಸ್ಪೀಕರ್ಗಳ ಡೆಸಿಬಲ್ ಮಿತಿ ಕುರಿತ ಪ್ರಶ್ನೆಗೆ, ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ದೀಪಾವಳಿ ಪಟಾಕಿ ಮತ್ತು ಹಬ್ಬಗಳ ವಿಷಯ ಪ್ರಸ್ತಾಪಿಸಿದ್ದು, ಸದನದಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.
09:54 AM (IST) Dec 17
ಸರಸ್ವತಿ ಸ್ವಾಮೀಜಿ ಮಹಿಳೆಯಿಂದ ಬೆತ್ತಲೆಯಾಗಿ ಎಣ್ಣೆ ಮಸಾಜ್ ಮಾಡಿಸಿಕೊಳ್ಳುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಸ್ವಾಮೀಜಿ ತನ್ನನ್ನು ಬ್ಲಾಕ್ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
09:44 AM (IST) Dec 17
ಕರ್ನಾಟಕ ಸರ್ಕಾರದ 'ನಮ್ಮ ಹೊಲ ನಮ್ಮ ದಾರಿ' ಯೋಜನೆಯು ಗ್ರಾಮೀಣ ರೈತರ ಕೃಷಿ ಭೂಮಿಗಳಿಗೆ ನೇರ ರಸ್ತೆ ಸಂಪರ್ಕ ಕಲ್ಪಿಸುವ ಗುರಿ ಹೊಂದಿದೆ. ಈ ಮೂಲಕ ದೊಡ್ಡ ವಾಹನಗಳಲ್ಲಿ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಸಾಗಿಸಬಹುದು, ಸಾರಿಗೆ ವೆಚ್ಚ ಕಡಿಮೆ ಮಾಡಬಹುದು ಮತ್ತು ಸ್ಥಳೀಯ ಜಗಳಗಳನ್ನು ತಪ್ಪಿಸಬಹುದು.
08:07 AM (IST) Dec 17
ಪಾಂಡವಪುರದ ನಿವೃತ್ತ ಶಿಕ್ಷಕ ರಾಮೇಗೌಡ ಅವರು, ತಾವು ಸಾಕುತ್ತಿದ್ದ ವರಲಕ್ಷ್ಮಿ ಎಂಬ ಗರ್ಭಿಣಿ ಹಸುವಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಮನುಷ್ಯರಿಗೆ ಮಾಡುವಂತೆಯೇ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿ ನೂರಾರು ಜನರಿಗೆ ಭೋಜನ ವ್ಯವಸ್ಥೆ ಮಾಡುವ ಮೂಲಕ ತಮ್ಮ ಅಪಾರ ಗೋ ಪ್ರೀತಿಯನ್ನು ಮೆರೆದಿದ್ದಾರೆ.
08:04 AM (IST) Dec 17
ಈ ವರ್ಷ ದಕ್ಷಿಣ ಭಾರತದಲ್ಲೇ ಒಂದು ಲಕ್ಷದ ಆರು ಸಾವಿರ ಟೊಯೋಟಾ ಕಾರುಗಳು ಮಾರಾಟವಾಗಿದ್ದು, ಅದರಲ್ಲಿ ಬೆಂಗಳೂರಿನ ಪಾಲು ಶೇ.31ರಷ್ಟಿದೆ ಎಂದು ಟೊಯೋಟಾ ಕಂಪನಿಯ ದಕ್ಷಿಣ ಭಾರತದ ಉಪಾಧ್ಯಕ್ಷ ವೈಸ್ಲೈನ್ ಸಿಗಮಣಿ ತಿಳಿಸಿದರು.
08:00 AM (IST) Dec 17
07:46 AM (IST) Dec 17
07:12 AM (IST) Dec 17
North Karnataka special grant: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಉತ್ತರ ಕರ್ನಾಟಕಕ್ಕೆ ₹15,000 ಕೋಟಿ ವಿಶೇಷ ಅನುದಾನ ನೀಡಿದ್ದು, ಎಲ್ಲ ಕ್ಷೇತ್ರಗಳ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಕಷ್ಟು ಕೊಡುಗೆ ನೀಡಿದೆ ಎಂದು ಕಾಂಗ್ರೆಸ್ ಸದಸ್ಯ ಅಜಯ್ ಧರಂಸಿಂಗ್ ಹೇಳಿದ್ದಾರೆ.
07:03 AM (IST) Dec 17
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಎಂ-ನರೇಗಾ) ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾನೇ ಬಯಲು ಮಾಡಿಕೊಂಡಿದ್ದಾರೆ.