LIVE NOW
Published : Dec 17, 2025, 06:52 AM ISTUpdated : Dec 17, 2025, 11:27 PM IST

Karnataka News Live: 19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ

ಸಾರಾಂಶ

 

ಬೆಂಗಳೂರು: ಬಿಜೆಪಿಗೆ ಹೊಸ ಸಾರಥಿ ನೇಮಕ ಬೆನ್ನಲ್ಲೇ ರಾಜ್ಯದ ಕೇಸರಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೆಳಗಾವಿ ಅಧಿವೇಶನ ಬಿಟ್ಟು ದೆಹಲಿಗೆ ತೆರಳಿದ್ದಾರೆ. ಬಿಜೆಪಿ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷ ನಿತಿನ್ ನವೀನ್ ಅವರನ್ನು ಮಂಗಳವಾರ ಭೇಟಿ ಮಾಡಿ ಶುಭ ಕೋರಿದ್ದಾರೆ. ಅಲ್ಲದೆ, ರಾಜ್ಯದ ಪ್ರಸಕ್ತ ರಾಜಕೀಯ ಸ್ಥಿತಿಗತಿ, ಪಕ್ಷ ಸಂಘಟನೆ, ರಾಜ್ಯದಲ್ಲಿನ ಸಿಎಂ ಬದಲಾವಣೆ ಕುರಿತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿಗೆ ರಾಷ್ಟ್ರೀಯ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ನಿತಿನ್ ನವೀನ್ ಅವರು, ರಾಜ್ಯದ ಬಗ್ಗೆಯೂ ಗಮನ ಹರಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಅವರ ಭೇಟಿ ಮಹತ್ವ ಪಡೆದಿದೆ.

11:27 PM (IST) Dec 17

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ

19ರ ಯುವಕನ ಕಾರು ಚಾಲನೆಗೆ ಹೋಯ್ತು ಪಾದಾಚಾರಿ ಪ್ರಾಣ, ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ, ಪದಾಚಾರಿಗೆ ಡಿಕ್ಕಿ ಹೊಡೆದ ಬಳಿಕ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಎರ್ಟಿಗಾ ಕಾರು, ಐದಾರು ಬೈಕ್‌ಗಳಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

Read Full Story

10:48 PM (IST) Dec 17

100 ಸಿನಿಮಾಗಳಲ್ಲಿ 40 ಫ್ಲಾಪ್, 33 ರಿಲೀಸ್ ಆಗಿಲ್ಲ.. ಆದರೂ ಇಂಡಸ್ಟ್ರಿ ಆಳಿದ ಕಿಚ್ಚ ಸುದೀಪ್ ಜೊತೆ ನಟಿಸಿದ ಸ್ಟಾರ್ ಹೀರೋ ಯಾರು?

ಅವರೊಬ್ಬ ಸ್ಟಾರ್ ಹೀರೋ.. 100 ಸಿನಿಮಾ ಪೂರೈಸಿದ ನಟ, ಅದರಲ್ಲಿ 40 ಸಿನಿಮಾಗಳು ಫ್ಲಾಪ್ ಆಗಿವೆ, 33 ಸಿನಿಮಾಗಳು ರಿಲೀಸ್ ಆಗಿಲ್ಲ. ಆದರೂ ಇಂಡಸ್ಟ್ರಿಯಲ್ಲಿ ಸ್ಟಾರ್ ಹೀರೋ ಸ್ಟೇಟಸ್ ಗಳಿಸಿದರು. ಇಷ್ಟು ವರ್ಷಗಳ ಸಿನಿಮಾ ಕೆರಿಯರ್‌ನಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದ ಆ ಸ್ಟಾರ್ ನಟ ಯಾರು ಗೊತ್ತಾ?

Read Full Story

10:28 PM (IST) Dec 17

ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ - ಕೇಂದ್ರ ಸಚಿವ ಕುಮಾರಸ್ವಾಮಿ

ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಫಲ ಸಿಗುತ್ತದೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ಗೆ ಒಳ್ಳೆಯ ಕಾಲ ಬರುತ್ತದೆ. ಅಲ್ಲಿಯವರೆಗೆ ಕಾರ್ಯಕರ್ತರು ಎದೆಗುಂದಬಾರದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

Read Full Story

10:02 PM (IST) Dec 17

ರಾಜ್ಯದಲ್ಲಿ ಹೊಸ 600 ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಶೀಘ್ರವೇ ಆರಂಭ - ಗೃಹ ಸಚಿವ ಪರಮೇಶ್ವರ್‌

ಹೊಸದಾಗಿ 600 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮತಿ ದೊರೆತ ಕೂಡಲೇ ಪಿಎಸ್‌ಐ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

Read Full Story

09:49 PM (IST) Dec 17

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ - ಸಚಿವ ಮಧು ಬಂಗಾರಪ್ಪ

ಕನ್ನಡ ಭಾಷಾ ಕಲಿಕೆ ಅಧಿನಿಯಮದಡಿ ಕನ್ನಡ ಕಲಿಸುತ್ತಿಲ್ಲ ಎಂಬ ದೂರು ಬಂದರೆ ಅಂತಹ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Read Full Story

09:13 PM (IST) Dec 17

ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ - ಸಚಿವ ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ಒಬ್ಬರು ನೋಡಲ್‌ ಅಧಿಕಾರಿ ನೇಮಿಸಲಾಗುವುದು. ಕೆಲ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗಂಡು ಮಕ್ಕಳೇ ಹೆಚ್ಚು ಜನಿಸಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Read Full Story

09:07 PM (IST) Dec 17

ನಬಾರ್ಡ್‌ ಅನುದಾನ ಕಡಿತದಿಂದ ಕೃಷಿ ಸಾಲ ನೀಡಲು ಸಮಸ್ಯೆ - ಸಿಎಂ ಸಿದ್ದರಾಮಯ್ಯ

2,185 ಕೋಟಿ ರು. ಅನುದಾನ ಕಡಿತಗೊಳಿಸಲಾಗಿದೆ. ಇದು ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read Full Story

08:54 PM (IST) Dec 17

ಸ್ಪೆಷಲ್ ಡ್ಯಾನ್ಸ್‌ಗಾಗಿಯೇ ನಾಯಕಿಯನ್ನು ಹುಡುಕುವ ನೆಲ್ಸನ್ - ಜೈಲರ್ 2ನಲ್ಲಿ ರಜನಿಕಾಂತ್ ಆ ಫೀಲಿಂಗ್ಸ್ ಈಡೇರುತ್ತಾ?

ಜೈಲರ್ ಚಿತ್ರದಲ್ಲಿ ಕಾವಾಲಾ ಹಾಡಿನ ವೇಳೆ ತಮನ್ನಾ ಜೊತೆ ಮಾತನಾಡಲು ಅವಕಾಶ ಸಿಗಲಿಲ್ಲ ಎಂದು ಹೇಳಿದ್ದ ರಜನಿಕಾಂತ್ ಅವರ ಫೀಲಿಂಗ್ಸ್ ಅನ್ನು ನೋರಾ ಫತೇಹಿ ಈಡೇರಿಸಲಿದ್ದಾರೆ ಎಂದು ಕಾಣುತ್ತಿದೆ.

Read Full Story

08:50 PM (IST) Dec 17

ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌

ರಾಯಚೂರಿನ ಯರಮರಸ್‌ ಶಾಖೋತ್ಪನ್ನ ವಿದ್ಯುತ್‌ ಸ್ಥಾವರದಲ್ಲಿ (ವೈಟಿಪಿಎಸ್) ಕಲ್ಲಿದ್ದಲು ವ್ಯಾಗನ್‌ಗಳನ್ನು ಸರಿಯಾಗಿ ಖಾಲಿ ಮಾಡದೆ, ನಷ್ಟ ಉಂಟುಮಾಡಿದ ಆರೋಪದ ಮೇಲೆ ಪವರ್ ಮೆಕ್ ಪ್ರೈವೆಟ್‌ ಲಿಮಿಟೆಡ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬೃಹತ್ ಕಳ್ಳತನದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ  ನಿರ್ಧರಿಸಿದೆ.

Read Full Story

08:45 PM (IST) Dec 17

ದುಬೈನಲ್ಲಿ ಮೋಸದಿಂದ 'ಬಾರ್​ ಗರ್ಲ್'​ ಆದೆ, ಆದ್ರೆ ಆ ಅನುಭವವೇ ಸೂಪರ್​ - ರಾಧಾ ಕಲ್ಯಾಣ ನಟಿ ಮಾತು ಕೇಳಿ

'ರಾಧಾ ಕಲ್ಯಾಣ' ಖ್ಯಾತಿಯ ನಟಿ ಚಿತ್ರಾಲ್ ರಂಗಸ್ವಾಮಿ ಅವರು ಡಾನ್ಸ್ ಈವೆಂಟ್ ಎಂದು ನಂಬಿಸಿ ದುಬೈಗೆ ಕರೆದೊಯ್ದು ಬಾರ್ ಗರ್ಲ್ ಮಾಡಿದ ಮೋಸದ ಕಥೆಯನ್ನು ಹಂಚಿಕೊಂಡಿದ್ದಾರೆ. ಅಲ್ಲಿನ ಮೂರು ತಿಂಗಳ ಅನುಭವ, ಬಾರ್ ಗರ್ಲ್​ಗಳ ಬಗೆಗಿನ ತಪ್ಪು ಕಲ್ಪನೆಗಳು ಮತ್ತು ಅಲ್ಲಿನ ಕೋಡ್ ವರ್ಡ್​ಗಳ ಬಗ್ಗೆ ತಿಳಿಸಿದ್ದಾರೆ.

Read Full Story

08:14 PM (IST) Dec 17

ಕಾರವಾರದಲ್ಲಿ ಸಿಕ್ಕಿದ ಸೀಗಲ್ ಹಕ್ಕಿಯಲ್ಲಿ ಚೈನಾದ ಜಿಪಿಎಸ್ ಟ್ರ್ಯಾಕರ್ ಪತ್ತೆ! ಪೊಲೀಸರಿಂದ ತನಿಖೆ

ಕಾರವಾರದಲ್ಲಿ ಸೀಗಲ್ ಹಕ್ಕಿಯ ದೇಹದಲ್ಲಿ ಚೀನಾದ ಜಿಪಿಎಸ್ ಟ್ರ್ಯಾಕರ್ ಪತ್ತೆಯಾಗಿ ಆತಂಕ ಸೃಷ್ಟಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಬೀಜಿಂಗ್‌ನ ಪರಿಸರ ಅಧ್ಯಯನದ ಭಾಗವೆಂದು ತಿಳಿದುಬಂದಿದೆ. ಭದ್ರತಾ ದೃಷ್ಟಿಯಿಂದ ಪೊಲೀಸ್ ಮತ್ತು ಅರಣ್ಯ ಇಲಾಖೆಗಳು ತನಿಖೆ ನಡೆಸುತ್ತಿವೆ.

Read Full Story

07:47 PM (IST) Dec 17

9 ಸಿನಿಮಾ ಮಾಡಿದ್ರೂ 8 ಫ್ಲಾಪ್.. ಪ್ಯಾನ್ ಇಂಡಿಯಾ ಸ್ಟಾರ್ ಮೇಲಿದೆ ಭರವಸೆ.. ಯಾರು ಈ ನಟಿ?

ಸಿನಿಮಾ ಇಂಡಸ್ಟ್ರಿಯಲ್ಲಿ ನೆಲೆಯೂರೋದು ತುಂಬಾ ಕಷ್ಟ.. ಸೌಂದರ್ಯದ ಜೊತೆಗೆ ಅದೃಷ್ಟವೂ ಇರಬೇಕು. ಆದರೆ ಅದೃಷ್ಟ ಇಲ್ಲದ ನಟಿಯರು ಟಾಲಿವುಡ್‌ನಲ್ಲಿ ತುಂಬಾ ಜನರಿದ್ದಾರೆ. ಈ ನಟಿ ಕೂಡಾ ಅದೇ ಸಾಲಿಗೆ ಸೇರುತ್ತಾರೆ. ಹಾಗಾದ್ರೆ ಆ ಕಥೆ ಏನು ಅಂತ ಈಗ ನೋಡೋಣ ಬನ್ನಿ..

Read Full Story

07:41 PM (IST) Dec 17

BBK 12 - ಕಳ್ಳಿಯಂತೆ ಹೋಗಿ ಕ್ಷಮೆಯಾಚಿಸಿದ ಚೈತ್ರಾ ಕುಂದಾಪುರ; ಎಲ್ಲರ ಮುಂದೆ ರಿವೀಲ್ ಮಾಡಿದ ಗಿಲ್ಲಿನಟ!

ಬಿಗ್ ಬಾಸ್ ಕ್ಯಾಪ್ಟನ್ಸಿ ಟಾಸ್ಕ್ ವೇಳೆ ಅಶ್ವಿನಿ ಗೌಡ ಅವರಿಗೆ ಗಾಯ ಮಾಡಿ, ಎಂಜಲು ಉಗುಳಿದ್ದ ಚೈತ್ರಾ ಕುಂದಾಪುರ, ಇದೀಗ ತನ್ನ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದಾರೆ. ದೇವರ ಮುಂದೆ ಕುಳಿತಾಗ ತಪ್ಪು ಎನಿಸಿತು ಎಂದು ಹೇಳಿಕೊಂಡ ಚೈತ್ರಾ, ಕ್ಯಾಮೆರಾ ಇಲ್ಲದಾಗ ಅಶ್ವಿನಿ ಬಳಿ ಕ್ಷಮೆ ಕೇಳಿದ್ದಾರೆ.

Read Full Story

07:33 PM (IST) Dec 17

ಭಾರತದ ಸಂಗೀತ ದಂತಕಥೆ ಸುಬ್ಬಲಕ್ಷ್ಮಿ ಬಯೋಪಿಕ್‌‌ನಲ್ಲಿ ರಾಮಾಯಣದ ಸೀತೆ - ಅಭಿಮಾನಿಗಳಲ್ಲಿ ಕುತೂಹಲ!

ಗಾಯಕಿ ಎಂಎಸ್ ಸುಬ್ಬಲಕ್ಷ್ಮಿ ಅವರ ಪಾತ್ರದಲ್ಲಿ ನಟಿಸಲು ಸಾಯಿ ಪಲ್ಲವಿ ಒಪ್ಪಿಗೆ ನೀಡಿದ್ದಾರೆ. ಈ ಪಾತ್ರಕ್ಕಾಗಿ ವಿಶೇಷ ತಯಾರಿಯನ್ನೂ ಸಹ ಸಾಯಿ ಪಲ್ಲವಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

Read Full Story

07:10 PM (IST) Dec 17

ರಾಜಕುಮಾರ ಚಿತ್ರದ ನಟನ ಜೊತೆ ಲವ್ ಅಫೇರ್ ಇಟ್ಕೊಂಡಿದ್ದ ಸ್ಟಾರ್ ನಟಿ? ಮದುವೆಯಾಗದೆ ಒಂಟಿಯಾಗಿ ಉಳಿದ್ರು!

ಚಿರಂಜೀವಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ನಟನೊಂದಿಗೆ ಸ್ಟಾರ್ ನಟಿಯೊಬ್ಬರು ಲವ್ ಅಫೇರ್ ಹೊಂದಿದ್ದರು. ಆದರೆ ಕೊನೆಗೆ ಆಕೆ ಮದುವೆಯಾಗದೆ ಒಂಟಿಯಾಗಿ ಉಳಿದರು. ಆ ನಟ ಮತ್ತು ನಟಿ ಯಾರೆಂದು ಈ ಲೇಖನದಲ್ಲಿ ತಿಳಿಯಿರಿ.

Read Full Story

07:01 PM (IST) Dec 17

Bigg Boss ಚೈತ್ರಾ, ಪ್ರತಿ ಶುಕ್ರವಾರ ಹುಷಾರ್​ ತಪ್ಪೋದು ಯಾಕೆ? ಕಿಡಿ ಹಚ್ಚಿ ಮಜಾ ತಗೊಂಡ ಗಿಲ್ಲಿ- ರಜತ್​

ಬಿಗ್ ಬಾಸ್ ಮನೆಯಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿರುವ ಗಿಲ್ಲಿ ನಟ, ರಜತ್ ಮತ್ತು ಚೈತ್ರಾ ಕುಂದಾಪುರ ನಡುವೆ ಜಗಳಕ್ಕೆ ಕಿಡಿ ಹಚ್ಚಿದ್ದಾರೆ. ರಜತ್ ಅವರು ಗಿಲ್ಲಿ ನಟನನ್ನು ಬಳಸಿಕೊಂಡು ಚೈತ್ರಾ ಅವರನ್ನು ಕೆರಳಿಸುತ್ತಿದ್ದು, ಇದು ಮನೆಯಲ್ಲಿ ಹೊಸ ಗಲಾಟೆಗೆ ಕಾರಣವಾಗಿದೆ

Read Full Story

06:53 PM (IST) Dec 17

ಹೀರೋಗಳೆಲ್ಲಾ ಲೈನ್ ಹೊಡೆಯೋಕೆ ಬರ್ತಾರೆ ಅಂತ ಸ್ಟಾರ್ ನಟನನ್ನೇ ದೂರವಿಟ್ಟಿದ್ದ ಪುಷ್ಪ ನಟಿ!

ಆ್ಯಂಕರ್ ಅನಸೂಯಾ ಭಾರದ್ವಾಜ್ ಸದ್ಯ ಕೆಲವೇ ಕೆಲವು ಸಿನಿಮಾಗಳನ್ನು ಮಾಡುತ್ತಿದ್ದಾರೆ. 'ಜಬರ್ದಸ್ತ್' ಶೋ ತೊರೆದ ನಂತರ ಅವರ ಕ್ರೇಜ್ ಕಡಿಮೆಯಾಗಿದೆ. ಈ ನಡುವೆ, ಹೀರೋಗಳ ಬಗ್ಗೆ ಅವರು ಮಾಡಿದ ಕಾಮೆಂಟ್ ವೈರಲ್ ಆಗಿದೆ.

Read Full Story

06:52 PM (IST) Dec 17

ರಾಜ್‌ ಬಿ ಶೆಟ್ಟಿ ಹೆಸರು ತೆಗೆದುಕೊಳ್ಳದೆ 45 ಸಿನಿಮಾಗೆ ವಿಶ್‌ ಮಾಡಿದ ರಿಷಭ್‌, ಶೆಟ್ಟಿ ಗ್ಯಾಂಗ್‌ನಲ್ಲಿ ಮೂಡಿದ್ಯಾ ಬಿರುಕು?

Raj B Shetty Breaks Silence on Rishab Shetty Missing His Name ಸ್ಯಾಂಡಲ್‌ವುಡ್‌ನ ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. '45' ಸಿನಿಮಾ ಕುರಿತು ರಿಷಬ್ ಶೆಟ್ಟಿ ಮಾಡಿದ ಟ್ವೀಟ್‌ನಲ್ಲಿ ರಾಜ್ ಬಿ ಶೆಟ್ಟಿ ಹೆಸರು ಪ್ರಸ್ತಾಪಿಸದಿದ್ದದ್ದು ಇದಕ್ಕೆ ಕಾರಣವಾಗಿತ್ತು.

Read Full Story

06:48 PM (IST) Dec 17

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು; ಬೆಳಗಾವಿ ಸರ್ಕ್ಯೂಟ್ ಹೌಸ್‌ಗೆ ಗಣ್ಯರ ದಂಡು!

ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರು ಸದನಕ್ಕೆ ಗೈರಾಗಿ ಸರ್ಕ್ಯೂಟ್ ಹೌಸ್‌ನಲ್ಲಿ ವಿಶ್ರಾಂತಿ ಪಡೆದರು. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಜಿ.ಟಿ. ದೇವೇಗೌಡರಂತಹ ರಾಜಕೀಯ ನಾಯಕರು ಅವರನ್ನು ಭೇಟಿ ಮಾಡಿದ್ದಾರೆ.

Read Full Story

06:31 PM (IST) Dec 17

ರಾಜ್ಯದ ಮಹಿಳೆಯರಿಗೆ ತಪ್ಪಿದ 2 ಗೃಹಲಕ್ಷ್ಮಿ ಹಣ; ಸದನದಲ್ಲಿ ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮೀ ಹಣ ವಿಳಂಬಕ್ಕೆ ಇಲಾಖೆಗಳ ನಡುವಿನ ಸಂಘರ್ಷವೇ ಕಾರಣ. ಈ ಬಗ್ಗೆ ಮಾಹಿತಿ ಇಲ್ಲದೇ ತಪ್ಪು ಮಾಹಿತಿ ನಿಡಿದ್ದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸದನದಲ್ಲಿ ಕ್ಷಮೆಯಾಚನೆ ಮಾಡಿದರು. ಪೂರ್ಣ ವಿವರ ಇಲ್ಲಿದೆ.

Read Full Story

06:21 PM (IST) Dec 17

ಬಾಗಿಲು, ಕಿಟಕಿ ಮುಚ್ಚಿ ಬಾತ್‌ರೂಮ್ ಕ್ಲೀನ್ ಮಾಡ್ತೀರಾ? ಈ ಸತ್ಯ ತಿಳಿದರೆ ಶಾಕ್ ಆಗ್ತೀರಾ!

ಬಾತ್‌ರೂಮ್ ಸ್ವಚ್ಛವಾಗಿದ್ದರೆ ಮನೆಯವರೆಲ್ಲರೂ ಆರೋಗ್ಯವಾಗಿರುತ್ತಾರೆ ಎಂದು ಹಲವರು ನಂಬುತ್ತಾರೆ. ಆದರೆ ಬಾತ್‌ರೂಮ್ ಸ್ವಚ್ಛಗೊಳಿಸುವಾಗ ನಾವು ಮಾಡುವ ಕೆಲವು ತಪ್ಪುಗಳಿಂದ ಆರೋಗ್ಯ ಹಾಳಾಗುತ್ತದೆ. ಅದರಲ್ಲೂ ಬಾಗಿಲು, ಕಿಟಕಿ ಮುಚ್ಚಿ ಕ್ಲೀನ್ ಮಾಡುವುದು ತುಂಬಾ ಅಪಾಯಕಾರಿ ಎನ್ನುತ್ತಾರೆ ತಜ್ಞರು.

Read Full Story

05:57 PM (IST) Dec 17

ಪರಭಾಷೆಗೆ ಹಾವಳಿ ಕೊಡುವ ಚಿತ್ರ ಮಾಡಬೇಕು - 45 ಟ್ರೇಲರ್‌ಗೆ ತಲಾ 1 ಕೋಟಿ+ ಹಿಟ್ಸ್‌, ಭಾರಿ ಮೆಚ್ಚುಗೆ!

ಕನ್ನಡ ಮತ್ತು ಹಿಂದಿಯಲ್ಲಿ ‘45’ ಚಿತ್ರದ ಟೀಸರ್‌ 1 ಕೋಟಿಗೂ ಹೆಚ್ಚು ಹಿಟ್ಸ್‌ ಗಳಿಸಿದೆ. ತೆಲುಗು, ತಮಿಳು, ಮಲಯಾಳಂನಲ್ಲಿ ಕ್ರಮವಾಗಿ 90 ಲಕ್ಷ, 86 ಲಕ್ಷ, 84 ಲಕ್ಷ ವೀಕ್ಷಣೆ ಪಡೆದಿದೆ. ಈ ಚಿತ್ರವು ಡಿ.25ಕ್ಕೆ ತೆರೆಗೆ ಬರುತ್ತಿದೆ.

Read Full Story

05:40 PM (IST) Dec 17

ಕನ್ನಡದ ಖ್ಯಾತ ನಟನಿಗೆ 'ವಾರಣಾಸಿ' ಚಿತ್ರದಲ್ಲಿ ಅವಕಾಶ ಕೊಟ್ಟ ರಾಜಮೌಳಿ - ಯಾರು ಆ ಸ್ಟಾರ್?

ಮಹೇಶ್‌ ಬಾಬು ಮತ್ತು ಪ್ರಕಾಶ್‌ ರೈ ಆಪ್ತರಾಗಿದ್ದು, ಮಹೇಶ್ ಬಾಬು ನಟನೆಯ ಬಹುತೇಕ ಸಿನಿಮಾಗಳಲ್ಲಿ ಪ್ರಕಾಶ ರೈ ಕೂಡ ಕಾಣಿಸಿಕೊಳ್ಳುತ್ತಾರೆ. ಇದೀಗ ಪ್ರಕಾಶ್ ರೈ ಅವರು ಮಹೇಶ್‌ ಬಾಬು ವೃತ್ತಿ ಜೀವನದ ಬಹುದೊಡ್ಡ ಸಿನಿಮಾದ ಭಾಗವಾಗಿದ್ದಾರೆ.

Read Full Story

05:37 PM (IST) Dec 17

Karna Serial - ವೀಕ್ಷಕರು ಬೇಡ ಅಂದದ್ದೇ ಆಗೋಯ್ತು! ತೇಜಸ್​ ಎದುರೇ ನಡೆದು ಹೋಯ್ತಾ ಕರ್ಣ- ನಿತ್ಯಾಳ ಮದುವೆ?

ರಮೇಶ್ ಕುತಂತ್ರದಿಂದ ಕರ್ಣ ಮತ್ತು ನಿತ್ಯಾ ನಿಜವಾಗಿಯೂ ಮದುವೆಯಾಗುವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ, ಕರ್ಣನ ಮೇಲೆ ತಪ್ಪು ತಿಳಿದು ತಪ್ಪಿಸಿಕೊಂಡು ಬಂದಿರುವ ತೇಜಸ್, ಮದುವೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಾನೆ. ತೇಜಸ್ ಬರುವಷ್ಟರಲ್ಲಿ ಮದುವೆ ನಡೆದುಹೋಗುತ್ತದೆಯೇ ಎಂಬ ಕುತೂಹಲ ಇದೀಗ ಮನೆಮಾಡಿದೆ

Read Full Story

05:28 PM (IST) Dec 17

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಬಂಗಾರಕ್ಕೆ ಕನ್ನ! 85 ಗುಂಡು ಕೊಟ್ಟರೆ 77 ಮಾತ್ರ ವಾಪಸ್

ಮೈಸೂರಿನ ಹಿನಕಲ್ ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನದ ಸ್ವರೂಪ ಬದಲಾದ ಆರೋಪ. ಆಭರಣದ ವಿನ್ಯಾಸ, ತೂಕ ಸರಿಯಾಗಿದ್ದರೂ 85 ಗುಂಡುಗಳ ಸರದಲ್ಲಿ 77 ಮಾತ್ರ ಲಭ್ಯ! ತನಿಖೆಗೆ ಆದೇಶ.

Read Full Story

05:19 PM (IST) Dec 17

ಸಿನಿಮಾ ಸ್ಕೂಲ್ ಅಲ್ಲ.. ಫ್ಯಾನ್ಸ್‌ ನಮ್ಮ ಗೊಂಬೆಗಳಲ್ಲ - ಕಿಚ್ಚ ಸುದೀಪ್ ಹೇಳಿದ್ದೇನು?

ಸಿನಿಮಾ ಸಮಾಜಕ್ಕೆ ಸಂದೇಶ ನೀಡುವಂತಿರಬೇಕು ಎಂಬ ಅಂಶವನ್ನು ತಳ್ಳಿ ಹಾಕಿದ್ದಾರೆ. ಫ್ಯಾನ್ಸ್‌ ನಮ್ಮ ಗೊಂಬೆಗಳಲ್ಲ. ನಮ್ಮಿಂದ ಪಾಠ ಹೇಳಿಸಿಕೊಳ್ಳುವ ದಡ್ಡರಲ್ಲ. ಅಡ್ವೈಸ್‌ ಕೊಡೋವಷ್ಟು ದೊಡ್ಡವರು ನಾವ್ಯಾರೂ ಅಲ್ಲ ಎಂದರು ಕಿಚ್ಚ ಸುದೀಪ್.

Read Full Story

05:06 PM (IST) Dec 17

ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೋಲಾರದಲ್ಲಿ 21 ಎಕರೆ ಸ್ಮಶಾನ ಮತ್ತು ಕೆರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ ಎಂದು ವಿಪಕ್ಷ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಇದು ತಮ್ಮ ಪಿತ್ರಾರ್ಜಿತ ಆಸ್ತಿ  ಎಂದು ಸ್ಪಷ್ಟನೆ ನೀಡಿದ್ದಾರೆ.

Read Full Story

04:49 PM (IST) Dec 17

ದೈವವನ್ನು ರಣವೀರ್‌ ಸಿಂಗ್‌ ಮಿಮಿಕ್ರಿ ಮಾಡಿದ್ದು ಸರಿ ಅನಿಸಲಿಲ್ಲ - ಕೊನೆಗೂ ಮೌನ ಮುರಿದ ರಿಷಬ್ ಶೆಟ್ಟಿ

ಕಾಂತಾರ ಚಾಪ್ಟರ್‌ 1ರಲ್ಲಿ ಬರುವ ದೈವದ ಅಂಶ ಅತಿ ಸೂಕ್ಷ್ಮ ಹಾಗೂ ಪವಿತ್ರ. ಅದನ್ನು ಅನುಕರಿಸಬೇಡಿ ಎಂದು ಎಲ್ಲೇ ಹೋದರೂ ಹೇಳುತ್ತೇನೆ. ಆದರೂ ನಟ ರಣವೀರ್‌ ಸಿಂಗ್‌ ದೈವವನ್ನು ಮಿಮಿಕ್ರಿ ಮಾಡಿದ್ದು ಸರಿ ಅನಿಸಲಿಲ್ಲ. ಮುಜುಗರ ತರಿಸಿತು ಅಂತಾರೆ ರಿಷಬ್ ಶೆಟ್ಟಿ.

Read Full Story

04:24 PM (IST) Dec 17

ವಿದ್ಯಾರ್ಥಿಗಳೇ ತಂತ್ರಜ್ಞಾನ ಯುಗದಲ್ಲಿ ಪ್ರಶ್ನೆ ಮಾಡುವ ಧೈರ್ಯ ಬೆಳೆಸಿಕೊಳ್ಳಿ - ರಶ‍್ಮಿ ಮಹೇಶ್

ವಿದ್ಯಾರ್ಥಿಗಳು ಪ್ರಶ‍್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೇ ಅನುಮಾನಗಳಿಗೆ ಪ್ರಶ್ನೆಗಳನ್ನು ಕೇಳಿ ತಮ್ಮಲ್ಲಿರುವ ಆತಂಕಗಳನ್ನು ಸರಿಪಡಿಸಿಕೊಳ್ಳಬೇಕೆಂದು ವಿ ರಶ‍್ಮಿ ಮಹೇಶ್ ರವರು ಕಿವಿ ಮಾತು ಹೇಳಿದರು.

Read Full Story

04:01 PM (IST) Dec 17

Shivamogga News - ಹೊಸನಗರ ಕಾಲೇಜು ಪ್ರತಿಭಾವಂತ ವಿದ್ಯಾರ್ಥಿನಿ ರಚನಾ ನೇಣಿಗೆ ಶರಣು!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ, ಕೊಡಚಾದ್ರಿ ಸರ್ಕಾರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ರಚನಾ (20) ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ.

Read Full Story

03:58 PM (IST) Dec 17

Lakshmi Nivasa ಕಥಾಬ್ರಹ್ಮರ ಷಡ್ಯಂತ್ರಕ್ಕೆ ಈ ಹಸಿರು ಸೀರೆ - ನಗಲೋ, ಅಳಲೊ? ಲಲಿತಾ ಪಾತ್ರ ಮುಗಿಸಿದ ನಟಿ ನೋವು

'ಲಕ್ಷ್ಮೀ ನಿವಾಸ' ಧಾರಾವಾಹಿಯಲ್ಲಿ ಲಲಿತಾ ಪಾತ್ರವನ್ನು ಹಠಾತ್ತನೆ ಅಂತ್ಯಗೊಳಿಸಿರುವುದಕ್ಕೆ ನಟಿ ವಿಜಯಲಕ್ಷ್ಮಿ ಸುಬ್ರಮಣಿ ಬೇಸರ ವ್ಯಕ್ತಪಡಿಸಿದ್ದಾರೆ. ತಮ್ಮ ಪಾತ್ರವನ್ನು ಸಾಯಿಸಿರುವುದು ಕಥೆಗಾರರ ಷಡ್ಯಂತ್ರ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.  

Read Full Story

03:32 PM (IST) Dec 17

Bengaluru - 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ನಿವೃತ್ತ ಪ್ರಾಧ್ಯಾಪಕಿ!

67 ವರ್ಷದ ನಿವೃತ್ತ ಸರ್ಕಾರಿ ಪ್ರಾಧ್ಯಾಪಕಿಯೊಬ್ಬರು, 42 ವರ್ಷಗಳ ದಾಂಪತ್ಯದಲ್ಲಿ ತಮ್ಮ ಪತಿಯಿಂದ ನಿರಂತರ ದೈಹಿಕ, ಮಾನಸಿಕ, ಆರ್ಥಿಕ ಮತ್ತು ಲೈಂಗಿಕ ದೌರ್ಜನ್ಯವನ್ನು ಅನುಭವಿಸಿದ್ದಾರೆ. ಪತಿಯು ಮನೆಯಿಂದ ಹೊರಹೋಗುವಂತೆ ಲೀಗಲ್ ನೋಟಿಸ್ ನೀಡಿದ ನಂತರ ಈ ದೂರು ನೀಡಿದ್ದಾರೆ.

Read Full Story

03:27 PM (IST) Dec 17

ಉತ್ತರದಿಂದ ಬೀಸಿದ ಶೀತಗಾಳಿ, ರಾಜ್ಯದಲ್ಲಿ ಚಳಿ ತೀವ್ರ, ಬೆಂಗಳೂರಿನಲ್ಲಿ ಈವರೆಗೆ ದಾಖಲಾಗಿದ್ದು 7.8 ಡಿಗ್ರಿ ಸೆಲ್ಸಿಯಸ್!

ಉತ್ತರ ಭಾರತದ ಶೀತಗಾಳಿಯ ಪ್ರಭಾವದಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಚಳಿ ತೀವ್ರಗೊಂಡಿದೆ. ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಬೆಂಗಳೂರಿನಲ್ಲೂ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಮುಂದಿನ ದಿನಗಳಲ್ಲಿ ಚಳಿ ಮುಂದುವರೆಯುವ ಸಾಧ್ಯತೆಯಿದೆ.
Read Full Story

03:05 PM (IST) Dec 17

ಬೆಳಗಾವಿ - ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ

ಬೆಳಗಾವಿಯ ಸುವರ್ಣಸೌಧದಲ್ಲಿ ತಮ್ಮ ಗ್ರಾಮದ ಶಾಲಾ ಶೌಚಗೃಹದ ಸಮಸ್ಯೆ ಬಗ್ಗೆ ಅಹವಾಲು ನೀಡಲು ಬಂದ ರೈತರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಚಿವರ ವರ್ತನೆಯಿಂದ ಆಕ್ರೋಶಗೊಂಡ ರೈತರು, ಅವರ ಕೊಠಡಿಯ ಮುಂದೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
Read Full Story

02:48 PM (IST) Dec 17

Amruthadhaare - ಅಜ್ಜಿನೇ ಡ್ರಾಮಾ ಕ್ವೀನ್​ ಅಂದ್ರೆ ಮರಿಮೊಮ್ಮಕ್ಕಳು ಇನ್ನೊಂದು ಹೆಜ್ಜೆ ಮುಂದೆ!

ಅಮೃತಧಾರೆ ಧಾರಾವಾಹಿಯಲ್ಲಿ ಅಜ್ಜಿ, ಗೌತಮ್ ಮತ್ತು ಭೂಮಿಕಾರನ್ನು ಒಂದು ಮಾಡಲು ಮಾಸ್ಟರ್‌ಪ್ಲ್ಯಾನ್ ರೂಪಿಸಿದ್ದಾಳೆ. ತನ್ನ ಕೊನೆಯಾಸೆಯಂತೆ ನಟಿಸಿ, ಮಕ್ಕಳಾದ ಆಕಾಶ್ ಮತ್ತು ಮಿಂಚು ಜೊತೆ ಸೇರಿ ಇಬ್ಬರನ್ನೂ ಮತ್ತೆ ಒಂದುಗೂಡಿಸಲು ಪ್ರಯತ್ನಿಸುತ್ತಿದ್ದಾಳೆ.  

Read Full Story

02:45 PM (IST) Dec 17

ಗಾಂಧಿನಗರ ಮಾದಪ್ಪ ಮೆಸ್‌ನಲ್ಲಿ ಮುದ್ದೆ ಬಡಿಸೋದು ಅಶುಚಿ; ಬೌದ್ಧಿಕ ಬಡತನ ಬಯಲಿಗೆಳೆದ ಕಾರ್ತಿಕ್ ರೆಡ್ಡಿ!

ರಾಗಿ ಮುದ್ದೆ ಬಡಿಸುವ ಸಾಂಪ್ರದಾಯಿಕ ವಿಧಾನವನ್ನು 'ಅಶುಚಿ' ಎಂದು ಟೀಕಿಸಿದ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದು ನಮ್ಮ ಸಾಂಸ್ಕೃತಿಕ ಅನಕ್ಷರತೆಯನ್ನು ತೋರಿಸುತ್ತದೆ ಎಂದು ಕಾರ್ತಿಕ್ ರೆಡ್ಡಿ ಎಂಬುವವರು ತಿರುಗೇಟು ನೀಡಿದ್ದಾರೆ.

Read Full Story

02:31 PM (IST) Dec 17

ಪಲ್ಲವಿ ಕಗ್ಗಲ್ ದುರಂತ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ನೇಮಕಾತಿ ವಿಳಂಬದ ಸುದ್ದಿ ಸುಳ್ಳು ಎಂದ ಕಮಿಷನರ್!

ಹುಬ್ಬಳ್ಳಿಯಲ್ಲಿ ಪಲ್ಲವಿ ಕಗ್ಗಲ್ ಆತ್ಮ೧ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಮಕಾತಿ ವಿಳಂಬ ಕಾರಣ ಎಂಬ ವದಂತಿ ಪೊಲೀಸ್ ಕಮಿಷನರ್ ತಳ್ಳಿಹಾಕಿದ್ದಾರೆ. ಸ್ಥಳದಲ್ಲಿ ಸಿಕ್ಕ ಡೆತ್ ನೋಟ್‌ನಲ್ಲಿ ಅನಾರೋಗ್ಯ, ವೈಯಕ್ತಿಕ ಕಾರಣಗಳ ಬಗ್ಗೆ  ಪಲ್ಲವಿ ಉಲ್ಲೇಖಿಸಿದ್ದಾರೆ. ಸುಳ್ಳು ಸುದ್ದಿ ಹರಡದಂತೆ ಮನವಿ.

Read Full Story

02:11 PM (IST) Dec 17

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!

'ಮದಗಜ' ಖ್ಯಾತಿಯ ನಟಿ ಜೋಶಿತಾ ಮತ್ತು ಅವರ ಕುಟುಂಬದ ಮೇಲೆ ಪತಿ ಸುರೇಶ್ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮದುವೆಗೂ ಮುನ್ನ ಅ*ತ್ಯಾಚಾರ ಮಾಡಿ, ವಿಡಿಯೋ ಮೂಲಕ ಬೆದರಿಸಿ ಮದುವೆಯಾಗಿದ್ದಲ್ಲದೆ, ಮದುವೆಯ ನಂತರವೂ ಚಿತ್ರಹಿಂಸೆ ನೀಡುತ್ತಿದ್ದ ಎಂದು ನಟಿ ಮತ್ತು ಅವರ ತಾಯಿ ಆರೋಪಿಸಿದ್ದಾರೆ. 

Read Full Story

01:47 PM (IST) Dec 17

2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ

Gruha Lakshmi scheme payment delay: ಗೃಹಲಕ್ಷ್ಮಿ ಯೋಜನೆ ಹಣ ಬಾಕಿ ವಿಚಾರವಾಗಿ ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಉಂಟಾಯಿತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಉತ್ತರದಿಂದ ಅಸಮಾಧಾನಗೊಂಡ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Read Full Story

01:28 PM (IST) Dec 17

ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನಿಗೆ ಕಿವಿಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್!

ಬೆಂಗಳೂರಿನ ಹೆಬ್ಬಾಳದಲ್ಲಿ ರಾಂಗ್ ರೂಟ್‌ನಲ್ಲಿ ಬಂದ ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನ ಮೇಲೆ ಸಂಚಾರ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಚಾಲಕನ ಕಿವಿಯಿಂದ ರಕ್ತಸ್ರಾವವಾಗಿದ್ದು, ಈ ಘಟನೆಯ ವಿಡಿಯೋ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story

More Trending News