ಬಳ್ಳಾರಿ: ಬ್ಯಾನರ್ ಗಲಭೆ ಖಂಡಿಸಿ ಬಳ್ಳಾರಿ ನಗರದ ಎಪಿಎಂಸಿ ಬಳಿ ಶನಿವಾರ ಬಿಜೆಪಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶಕ್ಕೆ ₹50 ಲಕ್ಷದ ಬಾಂಡ್ ನೀಡುವಂತೆ ಜಿಲ್ಲಾಡಳಿತ ಕೇಳಿದ್ದು, ಈ ಬಗ್ಗೆ ಶುಕ್ರವಾರ ಪಕ್ಷದ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ ಅವರಿಗೆ ನೋಟಿಸ್ ನೀಡಲು ಬಂದ ಪೊಲೀಸರನ್ನೇ ತರಾಟೆ ತೆಗೆದುಕೊಂಡ ಘಟನೆ ನಡೆದಿದೆ. ಬಳ್ಳಾರಿ ತಾಲೂಕು ತಹಸೀಲ್ದಾರ್ ಹಾಗೂ ಎಪಿಎಂಸಿ ಪೊಲೀಸ್ ಠಾಣೆ ಮೂಲಕ ನೋಟಿಸ್ ನೀಡಲಾಗಿದ್ದು, ಪ್ರತಿಭಟನಾ ಸಮಾವೇಶಕ್ಕೆ 20 ಸಾವಿರ ಜನರು ಸೇರುವ ನಿರೀಕ್ಷೆ ಇರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುವ ಸಂಭವವಿದೆ. ಹಾಗಾಗಿ ₹50 ಲಕ್ಷ ಮುಚ್ಚಳಿಕೆ ಬಾಂಡ್ ನೀಡುವಂತೆ ನೋಟಿಸ್ ಕೊಡಲು ಪಿಎಸ್ಐ ರಫೀಕ್ ಆಗಮಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು, ಈ ಹಿಂದೆ ಯಾವುದಾದರೂ ಕಾರ್ಯಕ್ರಮಕ್ಕೆ ಬಾಂಡ್ ಬರೆಸಿಕೊಂಡಿದ್ದರೆ ತೆಗೆದುಕೊಂಡು ಬನ್ನಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

12:01 AM (IST) Jan 18
Magadi Fire Tragedy ಬೆಂಗಳೂರಿನ ಕೊಟ್ಟಿಗೆಪಾಳ್ಯದಲ್ಲಿ ಕಸದ ರಾಶಿಗೆ ಹಚ್ಚಿದ ಬೆಂಕಿ ಸಮೀಪದ ನೀಲಗಿರಿ ತೋಪಿಗೆ ವ್ಯಾಪಿಸಿದೆ. ಅಗ್ನಿಶಾಮಕ ದಳ ಬರುವ ಮುನ್ನವೇ ಸ್ಥಳೀಯರು ಸಮಯಪ್ರಜ್ಞೆ ಮೆರೆದು ಬೆಂಕಿಯನ್ನು ನಂದಿಸಿ, ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
10:32 PM (IST) Jan 17
09:49 PM (IST) Jan 17
ಮಾಜಿ ಸಚಿವ ರಾಜುಗೌಡ ಕಾರು ಅಪಘಾತ ಕೇಸ್ಗೆ ಟ್ವಿಸ್ಟ್, ಮೇಲ್ನೋಟಕ್ಕೆ ಸಹಜ ಅಪಘಾತದಂತೆ ಕಂಡರೂ ಉದ್ದೇಶಪೂರ್ವಕವಾಗಿ ಅಪಘಾತ ನಡೆಸಲಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಹೀಗಾಗಿ ಅಪಘಾತ ಕುರಿತು ದೂರು ದಾಖಲಾಗಿದೆ.
09:01 PM (IST) Jan 17
ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜನೆಗೆ ಸರ್ಕಾರದ ಅನುಮತಿ,, ಕಾಲ್ತುಳಿತದಿಂದ ಸ್ಥಗಿತಗೊಂಡ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಮರು ಜೀವ ಸಿಕ್ಕಿದೆ. ಸರ್ಕಾರ ಇದೀಗ ಐಪಿಎಲ್, ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅನುಮತಿ ನೀಡಿದೆ.
08:07 PM (IST) Jan 17
ಗದಗ ಜಿಲ್ಲೆಯ ದೇವಸ್ಥಾನದಲ್ಲಿ ರಾತ್ರಿ ವೇಳೆ ನಿಗೂಢ ಗೆಜ್ಜೆ ಶಬ್ಧ ಕೇಳಿಬರುತ್ತಿದೆ. ದುರ್ಗಮ್ಮ ದೇವಸ್ಥಾನದಲ್ಲಿ ಬೆಂಕಿ ಅವಘಡದ ನಂತರ ದೇವಿಯರ ಮೂರ್ತಿಗಳನ್ನು ಇಲ್ಲಿಗೆ ಸ್ಥಳಾಂತರಿಸಲಾಗಿದ್ದು, ಅಂದಿನಿಂದ ಈ ಶಬ್ಧ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಾತ್ರೆ ನಡೆಸಲು ತೀರ್ಮಾನಿಸಿದ್ದಾರೆ.
07:21 PM (IST) Jan 17
ಚಿಕ್ಕಮಗಳೂರಿನ ತರೀಕೆರೆ ತಾಲೂಕಿನಲ್ಲಿ ರಾಟ್ವೀಲರ್ ನಾಯಿ ಮತ್ತು ನಾಗರಹಾವಿನ ನಡುವೆ ಭೀಕರ ಕಾಳಗ ನಡೆದಿದೆ. ತನ್ನ ಮಾಲೀಕರನ್ನು ರಕ್ಷಿಸಲು ಹೋರಾಡಿದ ನಾಯಿ, ಹಾವನ್ನು ಕೊಂದರೂ, ಹಾವಿನ ವಿಷದಿಂದ ತಾನೂ ಪ್ರಾಣ ಬಿಟ್ಟಿದೆ. ಈ ದುರಂತ ಘಟನೆಯು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
06:37 PM (IST) Jan 17
ಆರ್ಸಿಬಿ ಫ್ಯಾನ್ಸ್ಗೆ ಗುಡ್ ನ್ಯೂಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತದಿಂದ ಬ್ರೇಕ್ ಬಿದ್ದಿದ್ದ ಪಂದ್ಯಗಳಿಗೆ ಮತ್ತೆ ಸರ್ಕಾರದ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.KSCA ಅಧಿಕೃತ ಘೋಷಣೆ ಮಾಡಲಿದೆ.
06:27 PM (IST) Jan 17
ಬಿಗ್ಬಾಸ್ ಮನೆಯಲ್ಲಿ ಆರಂಭದಲ್ಲಿ ಗಿಲ್ಲಿ ನಟನ ಜೊತೆ ಒಟ್ಟಾಗಿ ಇರುವುದಾಗಿ ಹೇಳಿದ್ದ ಕಾವ್ಯಾ ಶೈವ, ಇದೀಗ ತನ್ನ ಮದುವೆಗೆ ಗಿಲ್ಲಿಯೇ ಅಡ್ಡಿ ಎಂದು ಹೇಳಿಕೆ ನೀಡಿದ್ದಾರೆ. ಗಿಲ್ಲಿ ಅಭಿಮಾನಿಗಳು, ಮೊದಲ ದಿನದ ವಿಡಿಯೋವನ್ನು ಸೋಷಿಯಲ್ ಹಂಚಿಕೊಂಡು ಬೇಸರಿಸುತ್ತಿದ್ದಾರೆ.
06:27 PM (IST) Jan 17
ಬೆಂಗಳೂರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದೂರುದಾರ ಲಕ್ಷ್ಮೀ ನಾರಾಯಣ್ ಅವರು ಈ ಪ್ರಕರಣದಲ್ಲಿ ಅಬಕಾರಿ ಸಚಿವ ಬಿ. ತಿಮ್ಮಾಪುರ ಅವರ ಪಾತ್ರದ ಬಗ್ಗೆಯೂ ಗಂಭೀರ ಆರೋಪ ಮಾಡಿದ್ದಾರೆ, ಇದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.
06:23 PM (IST) Jan 17
ಕುಶಾಲನಗರದ ಸುಂಟಿಕೊಪ್ಪ ಬಳಿಯ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ನೀರಿನ ಆಳ ಅರಿಯದೆ ಮುಳುಗಿ ಸಾವನ್ನಪ್ಪಿದ್ದಾರೆ. ಕಾಲೇಜು ಮುಗಿಸಿ ಈಜಲು ಹೋಗಿದ್ದಾಗ ಈ ದುರಂತ ಸಂಭವಿಸಿದ್ದು, ಪೊಲೀಸರು, ಮುಳುಗು ತಜ್ಞರು ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದಾರೆ.
05:51 PM (IST) Jan 17
ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಪೊಲೀಸರೇ ಅಪರಾಧಗಳಲ್ಲಿ ಶಾಮೀಲಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸೈಬರ್ ಅಪರಾಧ ಮತ್ತು ಡ್ರಗ್ಸ್ ದಂಧೆಯನ್ನು ಮಟ್ಟಹಾಕಿ ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಸೂಚಿಸಿದರು.
05:49 PM (IST) Jan 17
ಕನ್ನಡ ಬಿಗ್ಬಾಸ್ ಈ ಬಾರಿ 37 ಕೋಟಿಗೂ ಅಧಿಕ ಮತಗಳನ್ನು ಪಡೆದು ಹೊಸ ಇತಿಹಾಸ ಸೃಷ್ಟಿಸಿದೆ. ಈ ವಿಷಯವನ್ನು ಕಿಚ್ಚ ಸುದೀಪ್ ಅವರೇ ಬಹಿರಂಗಪಡಿಸಿದ್ದು, ಮೊದಲ ಮತ್ತು ಎರಡನೇ ಸ್ಥಾನಗಳ ನಡುವೆ ಅತಿ ಕಡಿಮೆ ಮತಗಳ ಅಂತರವಿದೆ ಎಂದು ತಿಳಿಸಿದ್ದಾರೆ.
05:33 PM (IST) Jan 17
Bigg Boss Kannada Season 12: ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ಸಿಕ್ಕಾಪಟ್ಟೆ ಮನರಂಜನೆ ನೀಡಿದ್ದಾರೆ. ಗಿಲ್ಲಿ ನಟ ಅವರು ಏನು ಅಂದುಕೊಂಡಿರೋದೆಲ್ಲ ಆಗುತ್ತಿದೆ. ಇದಕ್ಕೆ ಕಾರಣ ಏನು? ಇದರ ಹಿಂದಿನ ಮಂತ್ರ ಯಾವುದು?
05:23 PM (IST) Jan 17
ಬಿಗ್ಬಾಸ್ ಕನ್ನಡ 12ರ ಫಿನಾಲೆ ಅಭೂತಪೂರ್ವ ಪ್ರಚಾರಕ್ಕೆ ಸಾಕ್ಷಿಯಾಗಿದೆ. ಗಿಲ್ಲಿ ನಟ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ಸೇರಿದಂತೆ ಫೈನಲಿಸ್ಟ್ಗಳ ಪರವಾಗಿ ಶಾಸಕರು ಮತ್ತು ಮಾಜಿ ಸಚಿವರೇ ಅಖಾಡಕ್ಕಿಳಿದು ಬೆಂಬಲ ವ್ಯಕ್ತಪಡಿಸುತ್ತಿದ್ದು, ಇದು ಬಿಗ್ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಎನ್ನಲಾಗಿದೆ.
05:09 PM (IST) Jan 17
ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಳ್ಳಾರಿ ಲೂಟಿ, ಜನಾರ್ದನ ರೆಡ್ಡಿ ಸೇರ್ಪಡೆ, ಮತ್ತು ಕುಮಾರಸ್ವಾಮಿಯವರ ಹೇಳಿಕೆಗಳನ್ನು ಖಂಡಿಸಿದ ಅವರು, ಪಕ್ಷಾಂತರಿ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡರು.
05:06 PM (IST) Jan 17
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ಪವಿತ್ರಾ ಗೌಡಗೆ ಕೋರ್ಟ್ ಅನುಮತಿ ನೀಡಿದರೂ ಮನೆಯೂಟ ಸಿಗುತ್ತಿಲ್ಲ. ಜೈಲಾಧಿಕಾರಿಗಳು ಈ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸಿದ್ದು, ಪವಿತ್ರಾ ಜೈಲಿನಲ್ಲೇ ಪರದಾಡುವಂತಾಗಿದೆ.
05:06 PM (IST) Jan 17
ಗದಗ ನಗರದ ಬಸ್ ನಿಲ್ದಾಣದಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ, ಬಸ್ ಹತ್ತಲು ಬಿಡಲಿಲ್ಲವೆಂದು ರಾದ್ಧಾಂತ ಸೃಷ್ಟಿಸಿದ್ದಾನೆ. ಬಸ್ನಲ್ಲಿ ಹೆಚ್ಚು ಜನರಿದ್ದಾರೆಂದು ಆರೋಪಿಸಿ, ಬಸ್ನ ಚಕ್ರದ ಮುಂದೆ ಮಲಗಿ ಪ್ರತಿಭಟಿಸಿ, ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಹೈರಾಣಾದರು.
04:39 PM (IST) Jan 17
04:34 PM (IST) Jan 17
ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯಿಂದ ಬಸ್ಗಳಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಇದನ್ನೇ ಬಳಸಿಕೊಂಡು ಟಿಕೆಟ್ ರಹಿತ ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಡಿಸೆಂಬರ್ ತಿಂಗಳೊಂದರಲ್ಲೇ ಕೆಎಸ್ಆರ್ಟಿಸಿಯಲ್ಲಿ 4,353 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ 8 ಲಕ್ಷಕ್ಕೂ ಅಧಿಕ ದಂಡ ವಸೂಲಿ.
04:22 PM (IST) Jan 17
BMRCL ನಮ್ಮ ಮೆಟ್ರೋ ಟಿಕೆಟ್ ದರವನ್ನು ಶೇ.5ರಷ್ಟು ಹೆಚ್ಚಿಸಲು ಚಿಂತಿಸುತ್ತಿದ್ದು, ಇದು ಸಾರ್ವಜನಿಕರಿಂದ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಸಂಸದ ತೇಜಸ್ವಿ ಸೂರ್ಯ ಈ ಕ್ರಮವನ್ನು ಖಂಡಿಸಿದ್ದು, ದರ ಏರಿಕೆ ಹಿಂಪಡೆಯದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
04:11 PM (IST) Jan 17
03:54 PM (IST) Jan 17
ಬೆಂಗಳೂರಿನಲ್ಲಿ ನಡೆದ ಭಾರೀ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ, ಸಿಎಲ್–7 ಮತ್ತು ಮೈಕ್ರೋ ಬ್ರೇವರಿ ಲೈಸೆನ್ಸ್ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ಸೇರಿದಂತೆ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.
03:11 PM (IST) Jan 17
ದೇವನಹಳ್ಳಿ ತಾಲ್ಲೂಕಿನ ಬೈಚಾಪುರ-ಬೆಟ್ಟಕೋಟೆ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೈಕ್ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
03:09 PM (IST) Jan 17
ಬಿಗ್ ಬಾಸ್ ಶೋನಲ್ಲಿ ನಟ ಸುದೀಪ್ ರಣಹದ್ದುಗಳ ಬಗ್ಗೆ ತಪ್ಪಾಗಿ ಮಾತನಾಡಿದ್ದಕ್ಕೆ ವಿವಾದ ಸೃಷ್ಟಿಯಾಗಿದೆ. ಈ ಬಗ್ಗೆ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದ್ದು, ಅರಣ್ಯ ಇಲಾಖೆ ಬಿಗ್ ಬಾಸ್ ಆಯೋಜಕರಿಗೆ ನೊಟೀಸ್ ಜಾರಿ ಮಾಡಿದೆ.
02:56 PM (IST) Jan 17
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಅಶ್ವಿನಿ ಗೌಡ ಅವರು ಸ್ಪರ್ಧಿ. ಈಗ ಅಶ್ವಿನಿ ಬಗ್ಗೆ ವಾಹಿನಿಯವರು ಏನು ಹೇಳಿದರು ಎನ್ನೋದನ್ನು ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ್ರು ಮಾತನಾಡಿರೋ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
02:26 PM (IST) Jan 17
02:13 PM (IST) Jan 17
ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಹತ್ತಿರವಾಗುತ್ತಿದ್ದಂತೆ, ಸ್ಪರ್ಧಿ ಗಿಲ್ಲಿಗೆ ಭರ್ಜರಿ ಜನಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಾದ್ಯಂತ ಫ್ಯಾನ್ಸ್ ಪ್ರಚಾರ ಮಾಡುತ್ತಿದ್ದು, ಅವರ ಹೋರಾಟದ ಬದುಕು, ಪ್ರಸ್ತುತ ವೋಟಿಂಗ್ ಟ್ರೆಂಡ್ ಗಮನಿಸಿದರೆ, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವ ಸಾಧ್ಯತೆ ದಟ್ಟವಾಗಿದೆ.
01:31 PM (IST) Jan 17
Chinese man drinks an entire beer with his NOSE: ಕೆಲವರು ಆಲ್ಕೋಹಾಲ್ ಸಿಕ್ಕಿದರೆ ಸಾಕು ಎನ್ನುತ್ತಿರುತ್ತಾರೆ. ಆದರೆ ಇಲ್ಲೋರ್ವ ವ್ಯಕ್ತಿ ಬಿಯರ್ನ್ನು ಮೂಗಿನ ಮೂಲಕ ಸೇವನೆ ಮಾಡಿದ್ದಾರೆ. ಈ ವಿಡಿಯೋ ಈಗ ಭಾರೀ ವೈರಲ್ ಆಗ್ತಿದೆ.
01:01 PM (IST) Jan 17
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ, ಆರೋಪಿಗಳಿಗೆ ಮನೆ ಊಟ ನೀಡದ ಜೈಲು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ. ಇದೇ ವೇಳೆ, ರೇಣುಕಾಸ್ವಾಮಿ ತಾಯಿಯನ್ನು ಹಾಸ್ಟೈಲ್ ಸಾಕ್ಷಿ ಎಂದು ಪರಿಗಣಿಸುವ ಪ್ರಾಸಿಕ್ಯೂಷನ್ ಮನವಿ ತಿರಸ್ಕರಿಸಿದೆ.
12:45 PM (IST) Jan 17
Bigg Boss Kannada Season 12 Episode: ಬಿಗ್ ಬಾಸ್ ಮನೆಯಲ್ಲಿ ಗ್ರ್ಯಾಂಡ್ ಫಿನಾಲೆ ಕುರಿತಂತೆ ಸಂಭ್ರಮ ಶುರುವಾಗಿದೆ. ಯಾರು ಗೆಲ್ಲುತ್ತಾರೆ? ಯಾರು ಯಾವ ಸ್ಥಾನ ತಗೊಳ್ಳಲಿದ್ದಾರೆ ಎಂಬ ಪ್ರಶ್ನೆ ಎದುರಾಗಿದೆ. ಹೀಗಿರುವಾಗ ಗಿಲ್ಲಿ ನಟನ ಗೆಟಪ್ ಕೂಡ ಬದಲಾಗಿದೆ.
12:33 PM (IST) Jan 17
ಮಂಡ್ಯದಲ್ಲಿ 11 ತಿಂಗಳ ಬಂಡೂರು ಟಗರು, 1 ಲಕ್ಷ 35 ಸಾವಿರ ರೂಪಾಯಿ ದಾಖಲೆ ಬೆಲೆಗೆ ಮಾರಾಟವಾಗಿದೆ. ಬೆಂಗಳೂರಿನ ಇಂಜಿನಿಯರ್ ಹರೀಶ್ ಅವರು ಈ ಟಗರುವನ್ನು ತಳಿ ಅಭಿವೃದ್ಧಿ ಹಾಗೂ ಸಂರಕ್ಷಣೆಗಾಗಿ ಖರೀದಿಸಿದ್ದಾರೆ. ಈ ಘಟನೆಯು ಬಂಡೂರು ತಳಿಯ ಮಹತ್ವ ಮತ್ತು ರೈತರಿಗೆ ಉತ್ತಮ ಆದಾಯದ ಸಾಧ್ಯತೆಯನ್ನು ತೋರಿಸಿದೆ.
12:28 PM (IST) Jan 17
‘ಜಾತ್ಯತೀತ ಮನೋಭಾವ ಕಲಿಸುವುದಕ್ಕೆ ಯಾವುದೇ ಕ್ರ್ಯಾಶ್ ಕೋರ್ಸ್ ಇಲ್ಲ. ಅದು ನಮ್ಮ ಜೀವನಶೈಲಿ ಆದಾಗಲೇ ಅರ್ಥಪೂರ್ಣ. ಇವತ್ತು ಜಾತ್ಯತೀತ ಎನ್ನುವುದನ್ನು ನಾಲ್ಕು ಅಕ್ಷರಗಳ ಪದಕ್ಕೆ ಇಳಿಸಲಾಗಿದೆ’ ಎಂದು ಹಿರಿಯ ಗೀತರಚನಕಾರ, ಲೇಖಕ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟರು.
12:08 PM (IST) Jan 17
ದೇಶದ ಪ್ರತಿಷ್ಠಿತ ಆಟೋ ಮೊಬೈಲ್ ಕಂಪನಿ ಬಜಾಜ್ ಆಟೋ ಲಿಮಿಟೆಡ್ ಮತ್ತೊಂದ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ. ಪುಣೆ ನಗರದ ಅಕ್ಕುರಡಿಯಲ್ಲಿರುವ ಸಂಸ್ಥೆಯ ಉತ್ಸಾಹ್ ಸಭಾಂಗಣದಲ್ಲಿ ಚೇತಕ್ ಸಿ25 ವಾಹನದ ಬಿಡುಗಡೆ ಹಾಗೂ ವಾಹನದ ಟೆಸ್ಟ್ ರೈಡ್ ನಡೆಸಲಾಯಿತು.
11:48 AM (IST) Jan 17
ಗಿಲ್ಲಿ ನಟ ಮತ್ತು ಅಶ್ವಿನಿ ಗೌಡರ ಪರವಾಗಿ 'ಕುರುಬ Vs ಗೌಡ' ಎಂಬ ಜಾತಿ ರಾಜಕಾರಣಕ್ಕೆ ತಿರುಗಿದೆ. ಈ ಬೆಳವಣಿಗೆಯನ್ನು 'ಪಿಆರ್ ಮಾಫಿಯಾ' ಎಂದು ಕರೆದಿರುವ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ, ಮನರಂಜನಾ ಕಾರ್ಯಕ್ರಮದಲ್ಲಿ ಜಾತಿ ಬೆರೆಸದಂತೆ ವೀಕ್ಷಕರಿಗೆ ಸಲಹೆ ನೀಡಿದ್ದಾರೆ.
11:46 AM (IST) Jan 17
ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನದಲ್ಲಿ ಶಿವಲಿಂಗದ ಪೀಠ ಪತ್ತೆಯಾಗಿದೆ. ಈ ಐತಿಹಾಸಿಕ ಸಂಶೋಧನೆಯು ಕುತೂಹಲ ಕೆರಳಿಸಿದ್ದರೆ, ಉತ್ಖನನದಿಂದಾಗಿ ವಾರ್ಷಿಕ ವೀರಭದ್ರೇಶ್ವರ ಜಾತ್ರೆಗೆ ಅಡ್ಡಿಯಾಗುವ ಆತಂಕದಿಂದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
11:31 AM (IST) Jan 17
ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಅಪಹರಣ/ನಾಪತ್ತೆ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪಹರಣವಾದ ಮಕ್ಕಳನ್ನು ಭಿಕ್ಷಾಟನೆ ಸೇರಿ ಇನ್ನಿತರ ಕೆಲಸಗಳಿಗೆ ಬಲವಂತವಾಗಿ ದೂಡಲಾಗುತ್ತಿದೆ.
11:02 AM (IST) Jan 17
ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಒಂದೊಂದೇ ಕರಾಳ ಮುಖ ಬಯಲಾಗುತ್ತಿದೆ. ತನಗೆ ಮದುವೆ ಮಾಡಿದ್ದ ಪುರೋಹಿತನಿಗೂ ಲಾಂಗ್ ತೋರಿಸಿ ಹಲ್ಲೆ ಮಾಡಿದ್ದ ಎಂಬ ವಿಚಾರ ತಿಳಿದುಬಂದಿದೆ.
11:01 AM (IST) Jan 17
ನಗರಾಭಿವೃದ್ಧಿ ಇಲಾಖೆಯು ಬನಶಂಕರಿ 6ನೇ ಹಂತ ಮತ್ತು ಅಂಜನಾಪುರ ಸೇರಿದಂತೆ ಎಂಟು ಪ್ರಮುಖ ಬಿಡಿಎ ಬಡಾವಣೆಗಳನ್ನು ಸಂಬಂಧಿತ ನಗರ ಪಾಲಿಕೆಗಳಿಗೆ ಹಸ್ತಾಂತರಿಸಲು ಅಧಿಕೃತ ಆದೇಶ ಹೊರಡಿಸಿದೆ.
10:55 AM (IST) Jan 17
Gejje Nada: ಗದಗದ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ, ಬೆಂಕಿ ಅವಘಡದಿಂದ ವಿರೂಪಗೊಂಡ ದೇವರ ಮೂರ್ತಿಗಳನ್ನು ಸ್ಥಳಾಂತರಿಸಿದ ಮಾರುತಿ ಮಂದಿರದಿಂದ ನಿಗೂಢ ಗೆಜ್ಜೆನಾದ ಕೇಳಿಬರುತ್ತಿದೆ.
10:53 AM (IST) Jan 17
Bigg Boss Kannada Season 12: ಬಿಗ್ ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಹತ್ತಿರ ಬಂತು. ಇನ್ನು ಒಂದೇ ದಿನದಲ್ಲಿ ಯಾರು ವಿನ್ನರ್ ಆಗ್ತಾರೆ ಎಂದು ಘೋಷಣೆ ಆಗುವುದು. ಈ ಮಧ್ಯೆ ನರೇಂದ್ರ ಮೋದಿ ಅವರು ಗಿಲ್ಲಿ ನಟನ ಬಗ್ಗೆ ಮಾತನಾಡಿದ್ರಾ?