ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ವರ್ಷದಲ್ಲಿ 3 ಪಟ್ಟು ಸಾಲ ಮಾಡಿದ್ದಾರೆ. ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಜಾರಿಯಾಗಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ಶಿಗ್ಗಾಂವಿ ಪಟ್ಟಣದ ಸವಣೂರ ರಸ್ತೆಯಲ್ಲಿರುವ ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರ ಸುಳ್ಳಿನ ಸರ್ಕಾರವಾಗಿದೆ. ಬಜೆಟ್ನಲ್ಲಿ ₹1.32 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ನಾವಿದ್ದಾಗ ₹54 ಸಾವಿರ ಕೋಟಿ ಸಾಲ ಮಾಡಿದ್ದೇವು. ನಾವು ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಮಾಡಿದ್ದ ಸಾಲವನ್ನು ತೀರಿಸಿದೆವು ಎಂದು ಹೇಳಿದರು.
ಕ್ಷೇತ್ರದ ಜನರ ಮನದಲ್ಲಿ ನಾನು ನೆಲೆ ಊರಿದ್ದೇನೆ. ಜನರ ಪ್ರೀತಿ ವಿಶ್ವಾಸವೇ ನನ್ನ ಕೆಲಸಗಳಿಗೆ ಸಾಕ್ಷಿ. ಶಿಗ್ಗಾಂವಿ-ಸವಣೂರು ಅಭಿವೃದ್ಧಿ ಪರ್ವ ಮುಂದುವರೆಯಬೇಕು. ಚಾಕು ಚೂರಿ ಸಂಸ್ಕೃತಿ ಬಂದಾಗಬೇಕು ಎಂದು ಹೇಳಿದರು.
11:11 PM (IST) Mar 17
10:55 PM (IST) Mar 17
ವರದಿ: ಶೇಷಮೂರ್ತಿ ಅವಧಾನಿ
2025-26ನೇ ಸಾಲಿನ ಆರ್ಥಿಕ ಸಮೀಕ್ಷೆಯ ಪ್ರಕಾರ, ಕಲಬುರಗಿ ಜಿಲ್ಲೆಯ ತಲಾ ಆದಾಯವು ಮೊದಲ ಬಾರಿಗೆ ಋಣಾತ್ಮಕ ಬೆಳವಣಿಗೆ ದಾಖಲಿಸಿ, ರಾಜ್ಯದಲ್ಲೇ ಕೊನೆಯ ಸ್ಥಾನ ಪಡೆದಿದೆ. ಕೃಷಿ ವೈಫಲ್ಯ, ಉದ್ದಿಮೆಗಳ ತೀವ್ರ ಕೊರತೆ ಜಿಲ್ಲೆಯು ಆರ್ಥಿಕವಾಗಿ ತೀವ್ರ ಹಿನ್ನಡೆ ಅನುಭವಿಸಿದೆ.
10:35 PM (IST) Mar 17
ಸಿಲಿಂಡರ್ ಅಭಾವದ ಬಗ್ಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವುದು ಸರಿಯಲ್ಲ. ಮುನ್ನೆಚ್ಚರಿಕೆ ವಹಿಸಿ ಸಿದ್ಧತೆ ಮಾಡಿಕೊಳ್ಳದ ಕಾರಣವೇ ಇಂದು ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದರು.
10:34 PM (IST) Mar 17
Woman dies in wall collapse: ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಅಕಾಲಿಕ ಮಳೆಗೆ ಪಾಳು ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ನಿಂತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
10:19 PM (IST) Mar 17
10:08 PM (IST) Mar 17
09:34 PM (IST) Mar 17
ಕೆಮ್ಮು, ಜ್ವರದಂತಹ ಸಾಮಾನ್ಯ ಕಾಯಿಲೆಗಳಿಗೂ ಔಷಧಿ ಲಭ್ಯವಿಲ್ಲದಿರುವುದು ದುರದೃಷ್ಟಕರ," ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
09:11 PM (IST) Mar 17
ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆ (PMKVY) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಅಧಿಕೃತ ಅಂಕಿಅಂಶಗಳ ಪ್ರಕಾರ, ತರಬೇತಿ ಪಡೆದ ಸಾವಿರಾರು ಯುವಕರಲ್ಲಿ ಕೇವಲ 8% ಕ್ಕಿಂತ ಕಡಿಮೆ ಮಂದಿ ಉದ್ಯೋಗ ಪಡೆದಿದ್ದು, ಇದು ಯೋಜನೆಯ ಪರಿಣಾಮಕಾರಿತ್ವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
09:08 PM (IST) Mar 17
ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಆದರೆ, ಸ್ಥಳದಲ್ಲಿ ಯಾರೂ ಇಲ್ಲದಿರುವುದು ಮತ್ತು ಪೊಲೀಸರಿಗೆ ಮಾಹಿತಿ ನೀಡದಿರುವುದು ಘಟನೆಯ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
08:54 PM (IST) Mar 17
ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧರಾಗಲು, ಇಬ್ಬರು ಯುವತಿಯರೊಂದಿಗೆ ತ್ರಿಪಲ್ ರೈಡಿಂಗ್ ಮಾಡಿ ರೀಲ್ಸ್ ಚಿತ್ರೀಕರಿಸಿದ ದೊಡ್ಡಬಳ್ಳಾಪುರದ ವ್ಯಕ್ತಿಗೆ ಸಂಚಾರಿ ಪೊಲೀಸರು ರೂ. ದಂಡ ವಿಧಿಸಿದ್ದಾರೆ. ಹೆಲ್ಮೆಟ್ ಧರಿಸದೆ, ಅಜಾಗರೂಕತೆಯಿಂದ ಬೈಕ್ ಚಲಾಯಿಸಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.
08:45 PM (IST) Mar 17
ನನ್ನ ಕ್ಷೇತ್ರದಲ್ಲೂ ನಿಮ್ಮ ರಾಯರೆಡ್ಡಿಯಷ್ಟು ನಾನ್ ಕೆಲಸ ಮಾಡಿಲ್ಲ, ಅಷ್ಟು ಅಭಿವೃದ್ಧಿ ಕೆಲಸಗಾರ ನಿಮ್ಮ ಶಾಸಕ ಬಸವರಾಜ ರಾಯರೆಡ್ಡಿ. ಹಿಡಿದ ಕೆಲಸ ಬಿಡದ ಛಲಗಾರ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.
08:36 PM (IST) Mar 17
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಸುಸಜ್ಜಿತವಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
08:26 PM (IST) Mar 17
ಇದ್ದ ಜಮೀನೆಲ್ಲ ಕೊಟ್ಟು ಈಗ ಸ್ಮಶಾನಕ್ಕೆ ಜಾಗ ಸಿಗದೆ ಸರ್ಕಾರವೇ ಜಾಗಕ್ಕಾಗಿ ಭಿಕ್ಷಾಪಾತ್ರೆ ಹಿಡಿದು ಓಡಾಡುವ ಸ್ಥಿತಿ ಬಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ಬೇಸರ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.
08:18 PM (IST) Mar 17
08:13 PM (IST) Mar 17
ವಿಧಾನಪರಿಷತ್ತಿನಲ್ಲಿ ರಾಜ್ಯ ಸರ್ಕಾರದ ಬಜೆಟ್ ಚರ್ಚೆಯಲ್ಲಿ, ಹೆಚ್. ವಿಶ್ವನಾಥ್ ಅವರು ಸರ್ಕಾರದ ದುಂದುವೆಚ್ಚ, ಅಬಕಾರಿ ನೀತಿ, ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ತೀವ್ರವಾಗಿ ಟೀಕಿಸಿದರು. ಜಾಹೀರಾತು ವೆಚ್ಚ, ಬಿಯರ್ ಬೆಲೆ ಏರಿಕೆ, ಮತ್ತು ಕುರಿಗಾಹಿಗಳ ಅನುದಾನದ ದುರ್ಬಳಕೆಯನ್ನು ಅವರು ಪ್ರಶ್ನಿಸಿದ್ದಾರೆ.
07:32 PM (IST) Mar 17
ಪುರುಷರಿಗಿಂತ ಮಹಿಳೆಯರಲ್ಲಿ ಹೃದಯಾಘಾತದ ಲಕ್ಷಣಗಳು ಮತ್ತು ಕಾರಣಗಳು ಬೇರೆಯಾಗಿರುತ್ತವೆ. ಇದೇ ಕಾರಣಕ್ಕೆ ರೋಗ ಪತ್ತೆ ಮಾಡುವುದು ಕೂಡ ತಡವಾಗಬಹುದು. ಈ ಬಗ್ಗೆ ಮಹಿಳೆಯರು ತಿಳಿದುಕೊಳ್ಳಲೇಬೇಕಾದ ಕೆಲವು ಮುಖ್ಯ ವಿಚಾರಗಳು ಇಲ್ಲಿವೆ.
07:30 PM (IST) Mar 17
07:21 PM (IST) Mar 17
ಬೇಸಿಗೆ ಬಂತೆಂದರೆ ಬರೀ ಬಿಸಿಲಲ್ಲ, ನಮ್ಮ ಕೂದಲು ಕೂಡಾ ಸುಸ್ತಾಗುತ್ತದೆ. ಬೆವರು, ಧೂಳು ಮತ್ತು ಸೂರ್ಯನ ಕಿರಣಗಳಿಂದ ಕೂದಲು ಉದುರುವುದು ಡಬಲ್ ಆಗುತ್ತದೆ. ಇದಕ್ಕೆ ಹಳೆಯ ಕಾಲದ ಅಜ್ಜಿ ಮದ್ದು ಮಾತ್ರ ಸಾಲದು, Gen Z ಲೈಫ್ಸ್ಟೈಲ್ಗೆ ಹೊಂದುವ ಸ್ಮಾರ್ಟ್ ಟಿಪ್ಸ್ ಬೇಕು.
07:18 PM (IST) Mar 17
'ಕರ್ಣ' ಸೀರಿಯಲ್ನ ಮಹಿಳಾ ದಿನದ ವಿಶೇಷ ಸಂಚಿಕೆಯಲ್ಲಿನ ಫೈಟಿಂಗ್ ದೃಶ್ಯದ ಬಗ್ಗೆ 'ಅಣ್ಣಯ್ಯ' ಸೀರಿಯಲ್ ಖ್ಯಾತಿಯ ನಟಿ ರಾಘವಿ ಅರಳಗುಂಡಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಭಯಪಟ್ಟಿದ್ದು, ನಟ ಕಿರಣ್ ರಾಜ್ ಅವರನ್ನು ಶ್ಲಾಘಿಸಿದ್ದು, ಸಹ-ನಟಿಯರೊಂದಿಗಿನ ಬಾಂಧವ್ಯದ ಬಗ್ಗೆ ಮಾತನಾಡಿದ್ದಾರೆ.
07:05 PM (IST) Mar 17
ಸಚಿವ ಜಮೀರ್ ಅಹ್ಮಮದ್ ಖಾನ್, ಈ ಹಿಂದೆ ನಿಮ್ಮದೇ ಸರ್ಕಾರ ಇದ್ದಾಗ ಹೆಚ್ಚು ಅನುದಾನ ಏಕೆ ತೆಗೆದುಕೊಳ್ಳಲಿಲ್ಲ? ಸರ್ಕಾರ ಸ್ಲಂ ಬೋರ್ಡ್ಗೆ 50 ಕೋಟಿ ರು. ನೀಡಿದೆ. ರಾಜ್ಯದಲ್ಲಿ 2,800 ಕೊಳಗೇರಿಗಳಿವೆ. ಬೆಂಗಳೂರಿನಲ್ಲಿ 480 ಕೊಳಗೇರಿಗಳಿವೆ.
06:49 PM (IST) Mar 17
ಪರ್ಷಿಯನ್ ಭಾಷೆ ಹೇರಿ ಕನ್ನಡ ಕೊಲೆ ಮಾಡಿದ ಕನ್ನಡದ್ರೋಹಿ ಟಿಪ್ಪುವನ್ನು ಕೇವಲ ಒಂದು ಸಮುದಾಯದ ಓಲೈಸುವುದಕ್ಕಾಗಿ ನಮ್ಮವ ಎನ್ನುವುದು ಯಾವ ನ್ಯಾಯ ಎಂದು ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರು.
06:39 PM (IST) Mar 17
ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿ ಪ್ರೀತಿ ಹಾಗೂ ತಾಯ್ತನದಿಂದ ಶಾಲಾ ಮಕ್ಕಳಿಗೆ ಊಟ ಬಡಿಸುವ ಕಾರ್ಯ ಶ್ಲಾಘನೀಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಹೇಳಿದರು.
06:17 PM (IST) Mar 17
06:05 PM (IST) Mar 17
ಜ್ಞಾನಭಾರತಿ ಆವರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸೈನ್ಸ್ ಫೋರಮ್ (ಬಿಯುಎಸ್ಎಫ್) ಹಾಗೂ ಪಿಎಂ ಉಷಾ ಸಹಯೋಗದೊಂದಿಗೆ ಆಯೋಜಿಸಿದ್ದ ಬೆಂಗಳೂರು ವಿಶ್ವವಿದ್ಯಾಲಯ ವಿಜ್ಞಾನ ಉತ್ಸವ - 2026 ಉದ್ಘಾಟಿಸಲಾಯಿತು.
06:04 PM (IST) Mar 17
ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ಗೆ, ಅವರ ಕುಟುಂಬಸ್ಥರು ಒಳಗೆ ಬಂದು ಭೇಟಿಯಾಗಲು ಸೆಷನ್ಸ್ ಕೋರ್ಟ್ ಅನುಮತಿ ನೀಡಿದೆ. ಆದರೆ, ಜೈಲಿನ ಸೂಪರಿಂಟೆಂಡೆಂಟ್ ಅವರ ಒಪ್ಪಿಗೆ ಕಡ್ಡಾಯವಾಗಿದೆ. ಇದೇ ವೇಳೆ, ತನಿಖಾಧಿಕಾರಿ ವಿರುದ್ಧ ಸುಳ್ಳು ಅರ್ಜಿ ಸಲ್ಲಿಸಿದ್ದ ಪವನ್ಗೆ ದಂಡ ವಿಧಿಸಿದೆ.
05:38 PM (IST) Mar 17
ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂದು, 'ಅಂಜನಿ ಪುತ್ರ' ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ, ರಶ್ಮಿಕಾ ಮಂದಣ್ಣ ಅವರು ಪುನೀತ್ ಅವರೊಂದಿಗೆ ನಟಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರೆ, ಪುನೀತ್ ಚಿತ್ರತಂಡದ ಕನಸಿನ ಬಗ್ಗೆ ಮಾತನಾಡಿದ್ದಾರೆ.
05:16 PM (IST) Mar 17
05:13 PM (IST) Mar 17
05:07 PM (IST) Mar 17
ಸಮಾಲೋಚನೆಯಲ್ಲಿ ತಜ್ಞರು ಶಾಲೆ ಮತ್ತು ಸಮುದಾಯಗಳಲ್ಲಿ ಆರಂಭಿಕವಾಗಿ ಮಾನಸಿಕ ಆರೋಗ್ಯದ ಕುರಿತು ಹೆಚ್ಚುತ್ತಿರುವ ಜಾಗೃತಿ ವ್ಯಕ್ತಪಡಿಸಿದ್ದಾರೆ. 18 ವರ್ಷದೊಳಗಿನ 17,102 ಹೆಣ್ಣು ಮಕ್ಕಳು ಭಾಗವಹಿಸಿದ್ದಾರೆ.
04:51 PM (IST) Mar 17
ಏರ್ ಬೌಂಡ್ ಸಂಸ್ಥೆಗಳು ಡ್ರೋನ್ ಮೂಲಕ ರೋಗನಿರ್ಣಯ ಮಾದರಿಗಳನ್ನು ಯಶಸ್ವಿಯಾಗಿ ಪ್ರಯೋಗಾಲಯಕ್ಕೆ ಕೊಂಡೊಯ್ಯುವ ತಮ್ಮ ಮಹತ್ವದ ಮೆಡಿಕಲ್ ಲಾಜಿಸ್ಟಿಕ್ಸ್ ಪೈಲಟ್ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ.
04:27 PM (IST) Mar 17
04:18 PM (IST) Mar 17
03:21 PM (IST) Mar 17
01:59 PM (IST) Mar 17
ಬಿಗ್ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ ತಮ್ಮ ಹುಟ್ಟುಹಬ್ಬವನ್ನು ಐಷಾರಾಮಿ ಪಾರ್ಟಿಗಳ ಬದಲು ವಿಭಿನ್ನವಾಗಿ ಆಚರಿಸಿಕೊಂಡಿದ್ದಾರೆ. ಉಡುಪಿಯ ಸಾಲಿಗ್ರಾಮದಲ್ಲಿರುವ 'ಹೊಸಬದುಕು' ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳೊಂದಿಗೆ ದಿನ ಕಳೆದು, ಊಟ ಬಡಿಸಿ, ಅವರ ನೋವು-ನಲಿವಿನಲ್ಲಿ ಭಾಗಿಯಾಗಿದ್ದಾರೆ.
01:55 PM (IST) Mar 17
01:12 PM (IST) Mar 17
12:43 PM (IST) Mar 17
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಕೊಪ್ಪಳದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಉಂಟಾಗಿದ್ದು, ಐತಿಹಾಸಿಕ ಗವಿಮಠದ ಅಕ್ಷರ ದಾಸೋಹ ಕೇಂದ್ರಕ್ಕೆ ಗ್ಯಾಸ್ ಸಮಸ್ಯೆ ತಟ್ಟಿದೆ. ಸಾವಿರಾರು ಮಕ್ಕಳಿಗೆ ಬಿಸಿಯೂಟ ತಯಾರಿಸಲು ಅಧಿಕಾರಿಗಳು ಗ್ಯಾಸ್ ಏಜೆನ್ಸಿ ಮುಂದೆ ಬೇಡಿದ್ರೂ, ಸ್ಟಾಕ್ ಇಲ್ಲದ ಕಾರಣ ಸಿಲಿಂಡರ್ ಸಿಕ್ಕಿಲ್ಲ.
12:36 PM (IST) Mar 17
ಪುನೀತ್ ರಾಜ್ಕುಮಾರ್ ಅವರು ಆರು ತಿಂಗಳ ಶಿಶುವಾಗಿದ್ದಾಗ 'ಪ್ರೇಮದ ಕಾಣಿಕೆ' ಚಿತ್ರದ ಮೂಲಕ ಬಾಲನಟರಾಗಿ ಪಾದಾರ್ಪಣೆ ಮಾಡಿದರು. ಡಾ. ರಾಜ್ಕುಮಾರ್ ಅವರೇ ತಮ್ಮ ಮಗನನ್ನು ಚಿತ್ರೀಕರಣಕ್ಕೆ ಕರೆತಂದಿದ್ದರು. ಸಮಾಜಮುಖಿ ಕಾರ್ಯಗಳ ಮೂಲಕ ಕರುನಾಡಿನ ಮನೆಮಾತಾದ ಅಪ್ಪು, ಇಂದಿಗೂ ಜನಮಾನಸದಲ್ಲಿ ಅಜರಾಮರ.
12:05 PM (IST) Mar 17
Kottur drinking water crisis ಬನ್ನಿಗೋಳ ಜಲಾಶಯದಲ್ಲಿ ಸಾಕಷ್ಟು ನೀರಿದ್ದರೂ, ನಿರಂತರ ವಿದ್ಯುತ್ ಪೂರೈಕೆಯಾಗದ ಕಾರಣ ಕೊಟ್ಟೂರು ಪಟ್ಟಣಕ್ಕೆ ವಾರಕ್ಕೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದೆ. ಈ ವಿದ್ಯುತ್ ಸಮಸ್ಯೆಯಿಂದಾಗಿ 40 ಸಾವಿರಕ್ಕೂ ಹೆಚ್ಚು ನಿವಾಸಿಗಳು ತೀವ್ರ ನೀರಿನ ಅಭಾವ ಎದುರಿಸುತ್ತಿದ್ದಾರೆ..
11:41 AM (IST) Mar 17
ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದನ್ನು ವಿರೋಧಿಸಿ ನಡೆದ ತೀವ್ರ ಹೋರಾಟಕ್ಕೆ ಜಯ ಸಿಕ್ಕಿದೆ. 'ಕನ್ನಡಪ್ರಭ' ವರದಿಯ ಫಲವಾಗಿ ಮತ್ತು ಕರವೇ ಪ್ರತಿಭಟನೆಯಿಂದಾಗಿ, ರೈಲ್ವೆ ಇಲಾಖೆಯು ನಡೆಯುತ್ತಿದ್ದ ಪರೀಕ್ಷೆಯನ್ನು ದಿಢೀರ್ ರದ್ದುಗೊಳಿಸಿ ಮುಂದೂಡಿದೆ.