ಬೆಂಗಳೂರು: ಹಟ್ಟಿ ಚಿನ್ನದ ಗಣಿ ಕಂಪನಿ (ಎಚ್ಜಿಎಂಎಲ್) 2025-26 ನೇ ಸಾಲಿನಲ್ಲಿ ಹೊಂದಿದ್ದ 1,700 ಕೆ.ಜಿ. ಚಿನ್ನ ಉತ್ಪಾದಿಸುವ ಗುರಿ ಪೈಕಿ ಶೇ.99.50ರಷ್ಟು ಅಂದರೆ 1,691.50 ಕೆ.ಜಿ. ಚಿನ್ನ ಉತ್ಪಾದಿಸಿದೆ. ಆ ಮೂಲಕ ಇದೇ ಮೊದಲ ಬಾರಿಗೆ ₹1,910 ಕೋಟಿ ವಹಿವಾಟು ನಡೆಸಿದ್ದು, ₹844 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಹಿನ್ನೆಲೆಯಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರು ಹಾಗೂ ಶಾಸಕರಾದ ಜೆ.ಟಿ. ಪಾಟೀಲ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ವರದಿ ನೀಡಿದರು. ಈ ವೇಳೆ ಗೃಹ ಸಚಿವ ಡಾ। ಜಿ. ಪರಮೇಶ್ವರ್, ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆರ್.ಶಿಲ್ಪಾ ಹಾಜರಿದ್ದರು.
08:53 AM (IST) May 17
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಲ್ಲಿ ಸದ್ಯ ಮೋಡ ಮುಸುಕಿದ ವಾತಾವರಣವಿದೆ. ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
07:52 AM (IST) May 17
ಪ್ರಧಾನಿ ಮೋದಿ ಚಿನ್ನದ ಖರೀದಿ ಮಿತಿಗೊಳಿಸಲು ಕರೆ ನೀಡಿದ್ದನ್ನು ಸಂಸದ ರಮೇಶ ಜಿಗಜಿಣಗಿ ಸಮರ್ಥಿಸಿಕೊಂಡಿದ್ದಾರೆ. ದೇಶದ ಹೆಸರಲ್ಲಿ ಕಾಂಗ್ರೆಸ್ ನಾಯಕರು ಚಿನ್ನದ ತುಲಾಭಾರ ಮಾಡಿಸಿಕೊಂಡಿದ್ದನ್ನು ಸ್ಮರಿಸಿದ ಅವರು, ಕೋವಿಡ್ನಂತಹ ಸಂಕಷ್ಟವನ್ನು ಮೋದಿ ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದರು.
07:36 AM (IST) May 17
ಉಡುಪಿ ಪ್ರವಾಸದಲ್ಲಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೋಮು ಸೌಹಾರ್ದತೆಯ ಅಪರೂಪದ ಘಟನೆಯೊಂದನ್ನು ಹಂಚಿಕೊಂಡಿದ್ದಾರೆ. ಈ ಮಾನವೀಯ ಕಾರ್ಯವನ್ನು ಸಚಿವರು ಶ್ಲಾಘಿಸಿ, ತಕ್ಷಣವೇ ಆ ತಾಯಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
07:23 AM (IST) May 17
07:22 AM (IST) May 17
07:08 AM (IST) May 17
ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತವು (ಬಿಎಡಬ್ಲ್ಯುಎಂಎಲ್) 'ಡಿಕ್ಲಟರ್' ಎಂಬ ಹೊಸ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದೆ. ಈ ಆ್ಯಪ್ ಮೂಲಕ, ನಾಗರಿಕರು ತಮ್ಮ ಮನೆಗಳಲ್ಲಿನ ಪೀಠೋಪಕರಣ, ಹಾಸಿಗೆ, ಬಟ್ಟೆಗಳಂತಹ ಹಳೆಯ ಹಾಗೂ ಬೇಡವಾದ ವಸ್ತುಗಳ ಉಚಿತ ವಿಲೇವಾರಿಗೆ ಕೋರಿಕೆ ಸಲ್ಲಿಸಬಹುದು.
07:02 AM (IST) May 17
ಶಾಸಕ ಎ.ಎಸ್ ಪೊನ್ನಣ್ಣ ಅವರು, ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಹಿಜಾಬ್ ಸಾಂವಿಧಾನಿಕ ಹಕ್ಕಾಗಿದ್ದು, ಕೇಸರಿ ಶಾಲನ್ನು ಧಾರ್ಮಿಕ ಸಂಕೇತವಾಗಿ ಹೋಲಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
06:55 AM (IST) May 17
ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯ ಹಜಾರ ರಾಮ ದೇವಸ್ಥಾನದ ಬಳಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ನಡೆಸಿದ ಉತ್ಖನನದಲ್ಲಿ ವಿಜಯನಗರ ಕಾಲದ ಪುರಾತನ ದೇವಾಲಯದ ಕಲ್ಲಿನ ಚಾವಣಿ ಮತ್ತು ಅಪರೂಪದ ಆನೆಯ ಕಲಾಕೃತಿಗಳು ಪತ್ತೆಯಾಗಿವೆ.