ಮಡಿಕೇರಿ: ತಲಕಾವೇರಿಯಲ್ಲಿ ಈ ಬಾರಿಯ ಪವಿತ್ರ ಕಾವೇರಿ ತೀರ್ಥೋದ್ಭವ ಅ.17ರಂದು ರಾತ್ರಿ 7.50ಕ್ಕೆ ನಡೆಯಲಿದೆ. ಭಾಗಮಂಡಲದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ತುಲಾ ಸಂಕ್ರಮಣ-2026ರ ಜಾತ್ರೆಯ ಪ್ರಯುಕ್ತ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟಿಸಲಾಯಿತು.
ಕಾರ್ಯಕ್ರಮಗಳ ವಿವರ: ಸೆ.27ರಂದು ಬೆಳಗ್ಗೆ 8.45ಕ್ಕೆ ಭಗಂಡೇಶ್ವರ ದೇವಾಲಯದಲ್ಲಿ ತುಲಾ ಲಗ್ನದಲ್ಲಿ ಪ್ರತ್ಯೇಕ ಅಕ್ಷಿ ಕಾರ್ಯಕ್ರಮ. ಅ.5ರಂದು ಬೆಳಗ್ಗೆ 10.35ಕ್ಕೆ ವೃಷಭ ಲಗ್ನದಲ್ಲಿ ಆಜ್ಞಾ ಮುಹೂರ್ತ. ಅ.15ರಂದು ಮಧ್ಯಾಹ್ನ 12.35ಕ್ಕೆ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಕಾರ್ಯಕ್ರಮ, ಅದೇ ದಿನ ಸಂಜೆ 6.03ಕ್ಕೆ ಮೀನ ಲಗ್ನದಲ್ಲಿ ಕಾಣಿಕೆ ಡಬ್ಬಿಗಳಿಗೆ ಪೂಜೆ. ಅ.17ರಂದು ರಾತ್ರಿ 7.50ಕ್ಕೆ ತಲಕಾವೇರಿಯಲ್ಲಿ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದೆ.
09:47 AM (IST) Sep 17
09:17 AM (IST) Sep 17
08:49 AM (IST) Sep 17
ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಕಾರ್ಯವೈಖರಿಯನ್ನು ಆರು ತಿಂಗಳ ಬಳಿಕ ಮೌಲ್ಯಮಾಪನ ಮಾಡಲಾಗುವುದು ಎಂದು ಕೆ.ಸಿ.ವೇಣುಗೋಪಾಲ್ ಎಚ್ಚರಿಸಿದ್ದಾರೆ. ಸರಿಯಾಗಿ ಕೆಲಸ ಮಾಡದವರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
08:47 AM (IST) Sep 17
08:36 AM (IST) Sep 17
08:24 AM (IST) Sep 17
Indian Railways: ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದ ರೈಲು ಸಂಪರ್ಕ ಬಲಪಡಿಸಲು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಕಿಶೋರ್ ಕುಮಾರ್ ಪುತ್ತೂರು ನಾಲ್ಕು ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.
08:10 AM (IST) Sep 17
ಚಿಕ್ಕಮಗಳೂರು-ಸಕಲೇಶಪುರ ರೈಲ್ವೆ ಭೂಸ್ವಾಧೀನ ಪರಿಹಾರ ವಿತರಣೆಯಲ್ಲಿ ಎಸ್ಎಲ್ಒ ಮಂಜುನಾಥ್ ನಿಯಮ ಉಲ್ಲಂಘಿಸಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ರೋಹಿತ್ ಬಿ.ಆರ್. ಆರೋಪಿಸಿದ್ದಾರೆ. ನ್ಯಾಯಾಲಯದಲ್ಲಿ ದಾವೆ ಇದ್ದರೂ ವಾದಿಗೆ ಮಾಹಿತಿ ನೀಡದೆ ಪ್ರತಿವಾದಿಗೆ ಹಣ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
08:05 AM (IST) Sep 17
ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ 2ನೇ ರಾಜ್ಯ ಭಾಷೆ ಸ್ಥಾನಮಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ. ಜೊತೆಗೆ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್ಝೆಡ್ ನಿಯಮ ಸಡಿಲಿಕೆ ಘೋಷಣೆಯ ನಿರೀಕ್ಷೆ.
07:57 AM (IST) Sep 17
ಚೌಡೇಶ್ವರಿ ದೇವಿ ಪೂಜೆಯ ನೆಪದಲ್ಲಿ ನಕಲಿ ಜ್ಯೋತಿಷಿಯೊಬ್ಬ ವೃದ್ಧೆಯಿಂದ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದಾನೆ. ಆಭರಣ ವಾಪಸ್ ಕೇಳಿದಾಗ ತನಗೆ ಅಪಘಾತವಾಗಿದೆ ಎಂದು ಎಐ ಫೋಟೋ ಕಳುಹಿಸಿ ಪರಾರಿಯಾಗಿದ್ದಾನೆ.
07:42 AM (IST) Sep 17
ಅಸಮರ್ಪಕ ತ್ಯಾಜ್ಯ ನಿರ್ವಹಣೆ ಮತ್ತು ಪ್ಲಾಸ್ಟಿಕ್ ಬಳಸಿದ್ದಕ್ಕಾಗಿ ಪಿವಿಆರ್ ಸಿನಿಮಾಸ್ಗೆ ಪಾಲಿಕೆ ಅಧಿಕಾರಿಗಳು 75,000 ರೂ. ದಂಡ ವಿಧಿಸಿದ್ದಾರೆ. ಹಾಗೆಯೇ, ಒಳಚರಂಡಿ ತ್ಯಾಜ್ಯ ಸುರಿದಿದ್ದಕ್ಕಾಗಿ ಫೋರಂ ಮಾಲ್ ಸಿಬ್ಬಂದಿಗೆ 50,839 ರೂ. ದಂಡ ಹಾಕಲಾಗಿದೆ.