ಬೆಂಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
ರಾಜ್ಯದ 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಹೊಸದಾಗಿ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸುವವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಪ್ರತಿ ಜಿಲ್ಲೆಗಳಿಗೂ ವೀಕ್ಷಕರನ್ನು ನೇಮಿಸಿ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ. ಅದರ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮತ್ತೊಂದೆಡೆ ಆ.19ರಂದು ದೆಹಲಿಯ ಇಂದಿರಾ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.
10:29 PM (IST) Aug 18
10:10 PM (IST) Aug 18
ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಮೂವರು ರೈತರು ಆತ್ಮ*ತ್ಯೆ ಮಾಡಿಕೊಂಡಿದ್ದರೂ, ಜಿಲ್ಲಾಡಳಿತ ಸೌಜನ್ಯಕ್ಕೂ ಅವರ ಮನೆಗೆ ಭೇಟಿ ನೀಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
10:04 PM (IST) Aug 18
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಆಘಾತಕಾರಿ ತಿರುವು ಸಿಕ್ಕಿದೆ. ಸ್ನೇಹದ ಸೋಗಿನಲ್ಲಿ ಪರಿಚಯವಾದ ನೆರೆಹೊರೆಯವರು ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ, ಅದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದ್ದೇ ಈ ಕೃತ್ಯಕ್ಕೆ ಕಾರಣವೆಂದು ತನಿಖೆಯಿಂದ ತಿಳಿದುಬಂದಿದೆ.
10:04 PM (IST) Aug 18
09:22 PM (IST) Aug 18
ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಮೊದಲ ಸಿಎಲ್ಪಿ ಸಭೆಗೆ ಸಿದ್ದರಾಮಯ್ಯ ಗೈರಾಗಿದ್ದು, ಮಂತ್ರಿಗಿರಿ ಹಂಚಿಕೆ ವಿಚಾರದಲ್ಲಿನ ಅಸಮಾಧಾನ ಇನ್ನೂ ತಣಿದಿಲ್ಲ ಎಂಬ ಸೂಚನೆ ನೀಡಿದೆ. ಈ ಕುರಿತ ಸ್ಟೋರಿ ಇಲ್ಲಿದೆ..
09:08 PM (IST) Aug 18
08:49 PM (IST) Aug 18
08:32 PM (IST) Aug 18
ಮೀನುಗಾರ ಕುಟುಂಬದ ಹಿನ್ನೆಲೆಯ ಮಂಕಾಳ್ ವೈದ್ಯ ಅವರು ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರನ್ನು ತಾವೇ ಮನವೊಲಿಸಿ ಈ ಜವಾಬ್ದಾರಿ ನೀಡಿದ್ದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದನದಲ್ಲಿ ತಿಳಿಸಿದರು.
08:06 PM (IST) Aug 18
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಾಗರಪಂಚಮಿ ಪೂಜೆ ಮುಗಿಸಿದ ಬೆನ್ನಲ್ಲೇ ಅವರ ನಿವಾಸದ ಆವರಣದಲ್ಲಿ ಜೀವಂತ ನಾಗರಹಾವು ಪ್ರತ್ಯಕ್ಷವಾಗಿದೆ. ನಾಗದೇವರ ಮೂರ್ತಿಯ ಬಳಿ ಹಾವು ಕಾಣಿಸಿಕೊಂಡ ಈ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ 'ಪವಾಡ' ಎಂದು ವೈರಲ್ ಆಗುತ್ತಿದೆ.
07:42 PM (IST) Aug 18
ಈ ಬಾರಿಯ ಗಣೇಶ ಚತುರ್ಥಿಗೆ ಕಚ್ಚಾವಸ್ತುಗಳ ಬೆಲೆ, ಕಾರ್ಮಿಕರ ಕೂಲಿ ಮತ್ತು ಸಾರಿಗೆ ವೆಚ್ಚ ಹೆಚ್ಚಳದಿಂದಾಗಿ ಗೌರಿ-ಗಣೇಶ ಮೂರ್ತಿಗಳ ಬೆಲೆ ಶೇ. 15 ರಿಂದ 25 ರಷ್ಟು ದುಬಾರಿಯಾಗಲಿದೆ. ಹುಬ್ಬಳ್ಳಿ, ಬೆಳಗಾವಿ, ಮೈಸೂರು ಹಾಗೂ ಬೆಂಗಳೂರಿನಂತಹ ಪ್ರಮುಖ ನಗರಗಳಲ್ಲಿ ಈ ಬೆಲೆ ಏರಿಕೆ ಪರಿಣಾಮ ಬೀರಲಿದೆ.
07:36 PM (IST) Aug 18
ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ನಲ್ಲಿ ಭಾರತದ ಗೆಲುವು ಖಚಿತವಾಗಿದ್ದು, ಅಂತಿಮ ದಿನವಾದ ನಾಳೆ ಟೀಮ್ ಇಂಡಿಯಾಕ್ಕೆ ಕೇವಲ 6 ವಿಕೆಟ್ಗಳ ಅವಶ್ಯಕತೆಯಿದೆ. ದ್ವಿತೀಯ ಇನ್ನಿಂಗ್ಸ್ನಲ್ಲಿ 66 ರನ್ ಬಾರಿಸಿದ ರಿಷಬ್ ಪಂತ್, ಟೆಸ್ಟ್ ಕ್ರಿಕೆಟ್ನಲ್ಲಿ 100 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದರು.
07:13 PM (IST) Aug 18
ಸಚಿವ ಕೃಷ್ಣ ಬೈರೇಗೌಡರ ಕಾರ್ಯಕ್ಷಮತೆ ಮತ್ತು ಕ್ಲೀನ್ ಇಮೇಜ್ಗೆ ಮೆಚ್ಚುಗೆ ಸೂಚಿಸಿರುವ ಸಿಎಂ ಡಿಕೆಶಿ, ಅವರಿಗೆ ಸಂಸದೀಯ ವ್ಯವಹಾರಗಳ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈಗಾಗಲೇ ಜನಮನ್ನಣೆ ಗಳಿಸಿರುವ ಬೈರೇಗೌಡರು, ಸರ್ಕಾರದ ಅತ್ಯಂತ ನಂಬಿಕಸ್ತ ಸಚಿವರಾಗಿ ಹೊರಹೊಮ್ಮಿದ್ದಾರೆ.
06:22 PM (IST) Aug 18
ಕಾನೂನು ಹೋರಾಟದಲ್ಲಿ ಹಿನ್ನಡೆ, ಸೊಳ್ಳೆ ಕಾಟ, ಜೈಲಲ್ಲಿನ ಕಿರಿಕಿರಿ ಸೇರಿದಂತೆ ಅನೇಕ ನೋವುಗಳನ್ನು ಅನುಭವಿಸುತ್ತಿದ್ದ ನಟ ದರ್ಶನ್ಗೆ ಇವತ್ತು ಕೊಂಚ ಸಮಾಧಾನ ಸಿಕ್ಕಿದೆ. ಕುಟುಂಬಸ್ಥರ ಭೇಟಿ ಹಿನ್ನೆಲೆಯಲ್ಲಿ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ.
06:22 PM (IST) Aug 18
05:50 PM (IST) Aug 18
ಸ್ಕೋಡಾ ಆಟೋ ಇಂಡಿಯಾ ತನ್ನ ಜನಪ್ರಿಯ ಸೆಡಾನ್ 'ಸ್ಲಾವಿಯಾ'ದ ಹೊಸ ಫೇಸ್ಲಿಫ್ಟೆಡ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ಮಾದರಿಯು ಆಕರ್ಷಕ ಬಾಹ್ಯ ವಿನ್ಯಾಸ, ಡಿಜಿಟಲ್ ಡಿಸ್ಪ್ಲೇ ಹಾಗೂ ವೆಂಟಿಲೇಟೆಡ್ ಸೀಟುಗಳಂತಹ ಆಧುನಿಕ ಕ್ಯಾಬಿನ್ ವೈಶಿಷ್ಟ್ಯಗಳನ್ನು ಹೊಂದಿದೆ.
05:33 PM (IST) Aug 18
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, 'ವಂದೇ ಮಾತರಂ' ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಪದ್ಧತಿಯನ್ನು ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
05:19 PM (IST) Aug 18
ಮಾಜಿ ಕ್ರಿಕೆಟಿಗ ಸಲೀಲ್ ಅಂಕೋಲ ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗಿನ ತಮ್ಮ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದಾರೆ. 1989ರ ಪಾಕಿಸ್ತಾನ ಪ್ರವಾಸದ ವೇಳೆ ಸಚಿನ್ ನಿದ್ರೆಯಲ್ಲಿ ನಡೆದು ಸಹ ಆಟಗಾರನ ಕೋಣೆಯ ಬಾಗಿಲು ತಟ್ಟಿದ ಸ್ವಾರಸ್ಯಕರ ಘಟನೆಯನ್ನು ಈ ಸ್ಟೋರಿ ವಿವರಿಸುತ್ತದೆ.
05:06 PM (IST) Aug 18
ಭಾರತೀಯ ನಿಯಂತ್ರಕ ಮತ್ತು ಮಹಾಲೇಖಾಪಾಲರ (CAG) ವರದಿಯು ಬೆಂಗಳೂರಿನ ಕೆಎಸ್ಆರ್ ಮತ್ತು ಯಶವಂತಪುರ ಸೇರಿದಂತೆ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಸೌಲಭ್ಯದ ತೀವ್ರ ಕೊರತೆಯನ್ನು ಬಯಲುಮಾಡಿದೆ.
04:51 PM (IST) Aug 18
ಸರ್ಕಾರಿ ಉದ್ಯೋಗಕ್ಕಾಗಿ ಧಾರವಾಡದಲ್ಲಿ ಶಾಂತಿಯುತ ಪ್ರತಿಭಟನೆಗೆ ಮುಂದಾದ ಉದ್ಯೋಗಾಂಕ್ಷಿಗಳ ಧ್ವನಿಯನ್ನು ಪೊಲೀಸ್ ಇಲಾಖೆ ಹತ್ತಿಕ್ಕಿದೆ. ಪ್ರತಿಭಟನೆಗೆ ಅನುಮತಿ ನಿರಾಕರಿಸಿ, ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಅವರನ್ನು ಬಂಧಿಸುವ ಮೂಲಕ ಯುವಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯು ವ್ಯವಸ್ಥೆಯ ವಿರುದ್ಧ ಯುವ ಸಮೂಹದ ನೋವು ಮತ್ತು ಅಸಹಾಯಕತೆಯನ್ನು ಬಿಂಬಿಸುತ್ತದೆ
04:13 PM (IST) Aug 18
ಕರ್ನಾಟಕ ಸರ್ಕಾರದ ಪೂರ್ವಾನ್ವಯ ಖನಿಜ ತೆರಿಗೆ ಮಸೂದೆಯಿಂದಾಗಿ, ಕೇಂದ್ರ ಸರ್ಕಾರದ ಗಣಿಗಾರಿಕೆ ಸಂಸ್ಥೆ ಎನ್ಎಂಡಿಸಿ ₹15,785.72 ಕೋಟಿಗಳಷ್ಟು ಬೃಹತ್ ತೆರಿಗೆಯನ್ನು ಪಾವತಿಸುವ ಸಂಭಾವ್ಯ ಅಪಾಯವನ್ನು ಎದುರಿಸುತ್ತಿದೆ.
04:00 PM (IST) Aug 18
03:57 PM (IST) Aug 18
ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು ನಾಯ್ಡು ಸರ್ಕಾರದಲ್ಲಿ ತಮ್ಮ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ. ತಮ್ಮ ಸಹೋದರನಿಗೆ ಸಂಪುಟ ದರ್ಜೆಯ ಸ್ಥಾನಮಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತ ಸ್ಟೋರ ಇಲ್ಲಿದೆ..
03:32 PM (IST) Aug 18
01:18 PM (IST) Aug 18
ಇತ್ತೀಚೆಗೆ ನಟ ಯಶ್ ಅವರು ಭಾರತದ ಫೇಮಸ್ ಟಿವಿ ಶೋ ಆಪ್ ಕಿ ಅದಾಲತ್ನಲ್ಲಿ ಭಾಗವಹಿಸಿ, ಸಿನಿಮಾದ ಬಗ್ಗೆ ಹಾಗೂ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರ ಕೊಡುವ ಮೂಲಕ ಸಾಕಷ್ಟು ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಇಂದು 09ರ ಕೌಂಟ್ಡೌನ್ನಲ್ಲಿರುವ ಟಾಕ್ಸಿಕ್ ಬಿಡುಗಡೆ ನಾಳೆ 08.
11:42 AM (IST) Aug 18
11:24 AM (IST) Aug 18
11:21 AM (IST) Aug 18
ಭದ್ರಾವತಿ ತಾಲೂಕಿನ ಮೈದೊಳಲಿನಲ್ಲಿ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ 'ಶಿಖರದ ತುದಿಗೆ ಘಟಸರ್ಪ ಏರಿತಲ್ಲೇ ಎಚ್ಚರ' ಎಂಬ ಭವಿಷ್ಯವಾಣಿ ನುಡಿಯಲಾಗಿದೆ. ಈ ಕಾರ್ಣಿಕವು ಗ್ರಾಮೀಣ ಭಾಗದಲ್ಲಿ ಪ್ರಸಿದ್ಧಿಯನ್ನು ಹೊಂದಿದೆ.
10:41 AM (IST) Aug 18
ಬೀದರ್ ಜಿಲ್ಲೆಯ ಸೋಲದಾಬಕಾ ಗ್ರಾಮದಲ್ಲಿ, ನೀರಿನ ಟ್ಯಾಂಕ್ ಬಳಿ ಕೆಲಸ ಮಾಡುತ್ತಿದ್ದ ವಾಟರ್ಮ್ಯಾನ್ ಭೀಮ ಜಾಧವ್ (48) ಮೃತಪಟ್ಟಿದ್ದಾರೆ. ಹಾಗೆಯೇ, ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಸತ್ಯವ್ವ ಶಿಂಗೆ (43) ಎಂಬ ಮಹಿಳೆ ಹಾವು ಕಡಿತದಿಂದ ಸಾವನ್ನಪ್ಪಿದ್ದಾರೆ.
09:59 AM (IST) Aug 18
ಚಿಕ್ಕಮಗಳೂರಿನ ಕಳಸದ ಹೋಟೆಲ್ನಲ್ಲಿ ವಡೆಯಲ್ಲಿ ಸತ್ತ ಹಲ್ಲಿ ಪತ್ತೆಯಾಗಿದ್ದರೆ, ನಗರದ ಪ್ರತಿಷ್ಠಿತ ಬೇಕರಿಯೊಂದರಲ್ಲಿ ಅವಧಿ ಮೀರಿದ ಸಾಸ್ ಬಳಸಿ ತಯಾರಿಸಿದ ಕೊಳೆತ ಕೇಕ್ ಪತ್ತೆಯಾಗಿದೆ. ಈ ಘಟನೆಗಳು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿವೆ.
09:16 AM (IST) Aug 18
ದಾವಣಗೆರೆಯ ಕಮ್ಮಾರಗಟ್ಟೆಯಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ 'ಭೂಲೋಕದ ಮುತ್ತು ಗಗನಕ್ಕೇರಿತಲೆ' ಎಂಬ ಭವಿಷ್ಯವಾಣಿ ನುಡಿಯಲಾಗಿದೆ. ಇದು ಮಳೆ ಕೊರತೆ ಹಾಗೂ ಆಹಾರಧಾನ್ಯಗಳ ಬೆಲೆ ಏರಿಕೆಯ ಮುನ್ಸೂಚನೆ ಎಂದು ವಿಶ್ಲೇಷಿಸಲಾಗಿದೆ.
09:09 AM (IST) Aug 18
ನೈಸ್ ಯೋಜನೆಗೆ ಬಳಕೆಯಾಗದೆ ಉಳಿದಿರುವ ಸುಮಾರು 6,757 ಎಕರೆ ಭೂಮಿಯನ್ನು ಹಿಂಪಡೆದು, ಪ್ರಸ್ತಾಪಿತ ಬಿಡದಿ ಟೌನ್ಶಿಪ್ ಯೋಜನೆಗೆ ಬಳಸುವಂತೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೃಷಿ ಭೂಮಿ ಸ್ವಾಧೀನವನ್ನು ತಪ್ಪಿಸಿ ರೈತರನ್ನು ಸ್ಥಳಾಂತರ ಸಂಕಷ್ಟದಿಂದ ಪಾರುಮಾಡಬಹುದು ಎಂದು ಸಾಮಾಜಿಕ ಕಾರ್ಯಕರ್ತರು ಮತ್ತು ರೈತ ಸಂಘಟನೆಗಳ ಮನವಿಯನ್ನು ಉಲ್ಲೇಖಿಸಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
08:55 AM (IST) Aug 18
07:51 AM (IST) Aug 18
07:40 AM (IST) Aug 18
07:25 AM (IST) Aug 18
07:14 AM (IST) Aug 18
06:47 AM (IST) Aug 18
06:38 AM (IST) Aug 18
06:24 AM (IST) Aug 18
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಸಹ ಕೈದಿಗಳಿಂದ ಕಜ್ಜಿ, ಕೆಮ್ಮು ಮುಂತಾದ ಸೋಂಕು ಹರಡುವ ಭಯದಿಂದ ತಮ್ಮನ್ನು ಬೇರೆ ಸೆಲ್ಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮೊಬೈಲ್ ಪತ್ತೆ ಪ್ರಕರಣದ ನಂತರ ಸಾಮಾನ್ಯ ಬ್ಯಾರಕ್ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟಪಡುತ್ತಿದ್ದಾರೆ.
06:14 AM (IST) Aug 18