LIVE NOW
Published : Aug 18, 2026, 05:21 AM ISTUpdated : Aug 18, 2026, 07:25 AM IST

Karnataka News Live: ಎಡಕುಮೇರಿ ಘಾಟ್‌ನಲ್ಲಿ ವಂದೇ ಭಾರತ್‌; ಸೋಮೇಶ್ವರ ರೈಲ್ವೇ ಗೇಟ್‌ ಬಂದ್‌, ಬದಲಿ ಮಾರ್ಗ

ಸಾರಾಂಶ

ಬೆಂಗಳೂರು: ಜಿಲ್ಲಾ ಕಾಂಗ್ರೆಸ್‌ ಸಮಿತಿಗಳಿಗೆ ಅಧ್ಯಕ್ಷರ ನೇಮಕ ಸಂಬಂಧ ಹೈಕಮಾಂಡ್‌ ನಾಯಕರೊಂದಿಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಹಾಗೂ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ರಾಜ್ಯದ 35 ಜಿಲ್ಲಾ ಕಾಂಗ್ರೆಸ್‌ ಸಮಿತಿಗಳಿಗೆ ಹೊಸದಾಗಿ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರವಹಿಸುವವರನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಪ್ರತಿ ಜಿಲ್ಲೆಗಳಿಗೂ ವೀಕ್ಷಕರನ್ನು ನೇಮಿಸಿ ಪಟ್ಟಿ ಸಿದ್ಧಪಡಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ. ಅದರ ಕುರಿತು ಹೈಕಮಾಂಡ್‌ ನಾಯಕರೊಂದಿಗೆ ಚರ್ಚೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಂಗಳವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮತ್ತೊಂದೆಡೆ ಆ.19ರಂದು ದೆಹಲಿಯ ಇಂದಿರಾ ಭವನದಲ್ಲಿ ನಡೆಯಲಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ.

07:25 AM (IST) Aug 18

ಎಡಕುಮೇರಿ ಘಾಟ್‌ನಲ್ಲಿ ವಂದೇ ಭಾರತ್‌; ಸೋಮೇಶ್ವರ ರೈಲ್ವೇ ಗೇಟ್‌ ಬಂದ್‌, ಬದಲಿ ಮಾರ್ಗ

ಮಂಗಳೂರು-ಬೆಂಗಳೂರು ನಡುವಿನ ಎಡಕುಮೇರಿ ಘಾಟ್ ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಯುತ್ತಿದೆ. ಇದರೊಂದಿಗೆ, ಸೋಮೇಶ್ವರ ರೈಲ್ವೆ ಗೇಟ್ ಬಂದ್, ದ.ಕ. ಜಿಲ್ಲೆಯ ಮಳೆ ಹಾಗೂ ಕುದ್ರೋಳಿ ಕ್ಷೇತ್ರದ ನಾಗರಪಂಚಮಿ ವಿಶೇಷ ಪೂಜೆಯ ಕುರಿತು ವರದಿ ವಿವರಿಸುತ್ತದೆ.
Read Full Story

07:14 AM (IST) Aug 18

ಹಿಡಕಲ್‌ ಡ್ಯಾಂ ಭರ್ತಿ - 10 ಗೇಟ್‌ ಮೂಲಕ ನೀರು ಹೊರಕ್ಕೆ, ಕುಡಿಯುವ ನೀರಿನ ಆತಂಕ ದೂರ

ಪಶ್ಚಿಮ ಘಟ್ಟಗಳಲ್ಲಿನ ನಿರಂತರ ಮಳೆಯಿಂದಾಗಿ ಬೆಳಗಾವಿಯ ಹಿಡಕಲ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ, ಜಲಾಶಯದ 10 ಗೇಟ್‌ಗಳನ್ನು ತೆರೆದು ಘಟಪ್ರಭಾ ನದಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
Read Full Story

06:47 AM (IST) Aug 18

ರಾಜ್ಯದಲ್ಲಿ 206 ಆಹಾರ ಮಳಿಗೆಗಳಿಗೆ ನೋಟಿಸ್‌ - 930 ಹಾಸ್ಟೆಲ್‌ಗಳಲ್ಲಿ ತಪಾಸಣೆ, ಡಾಬಾ ಮೇಲೆ ದಾಳಿ

ಆಹಾರ ಸುರಕ್ಷತಾ ಇಲಾಖೆಯು ರಾಜ್ಯಾದ್ಯಂತ ಹಾಸ್ಟೆಲ್‌, ಬಸ್ ನಿಲ್ದಾಣ, ಡಾಬಾಗಳಲ್ಲಿ ನಡೆಸಿದ ತಪಾಸಣೆಯಲ್ಲಿ ವ್ಯಾಪಕ ಅನೈರ್ಮಲ್ಯ ಪತ್ತೆಯಾಗಿದೆ. ನೂರಾರು ಆಹಾರ ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಶವರ್ಮಾ ಮತ್ತು ಕಬಾಬ್‌ನಂತಹ ಆಹಾರ ಪದಾರ್ಥಗಳು ಅಸುರಕ್ಷಿತ ಎಂದು ವರದಿಯಲ್ಲಿ ತಿಳಿದುಬಂದಿದೆ.
Read Full Story

06:38 AM (IST) Aug 18

ಶಿಕ್ಷಕರಿಬ್ಬರಿಗೆ H1N1, 500 ಮಕ್ಕಳಿಗೆ ಜ್ವರ? ಬೆಂಗಳೂರಿನ ಶಾಲೆಗೆ 2 ದಿನ ರಜೆ ಘೋಷಣೆ

ಬೆಂಗಳೂರಿನ ರಿಚ್ಮಂಡ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಶಾಲೆಯ ಇಬ್ಬರು ಸಿಬ್ಬಂದಿಗೆ ಎಚ್1ಎನ್1 ಸೋಂಕು ದೃಢಪಟ್ಟಿದೆ. ನೂರಾರು ಮಕ್ಕಳಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ರಜೆ ಘೋಷಿಸಲಾಗಿದ್ದು, ಪಾಲಿಕೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Read Full Story

06:24 AM (IST) Aug 18

Prajwal Revanna - ಸಹ ಕೈದಿಗಳಿಂದ ಕಜ್ಜಿ ಬರಹುದು - ಸೆಲ್ ಬದಲಿಸುವಂತೆ ಪ್ರಜ್ವಲ್ ಗೋಳಾಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಸಹ ಕೈದಿಗಳಿಂದ ಕಜ್ಜಿ, ಕೆಮ್ಮು ಮುಂತಾದ ಸೋಂಕು ಹರಡುವ ಭಯದಿಂದ ತಮ್ಮನ್ನು ಬೇರೆ ಸೆಲ್‌ಗೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮೊಬೈಲ್ ಪತ್ತೆ ಪ್ರಕರಣದ ನಂತರ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟಪಡುತ್ತಿದ್ದಾರೆ.

Read Full Story

06:14 AM (IST) Aug 18

ಕುಡಿದು ‘ಯಾರಿವಳು ಯಾರಿವಳು’ ಎಂದು ಹಾಡಿದ ಮರುಳಾರಾಧ್ಯ ಶ್ರೀ! ಹಾಡು ಹಾಡಿದ ಖಾವಿಧಾರಿ

ಕಲಬುರಗಿ ಜಿಲ್ಲೆಯ ಮಾಶಾಳ ಮಠದ ಮರುಳಾರಾಧ್ಯ ಸ್ವಾಮೀಜಿ ಅವರು ಶ್ರಾವಣ ಮಾಸದಲ್ಲಿ ಮದ್ಯದ ಬಾಟಲಿ ಮುಂದಿಟ್ಟುಕೊಂಡು ಸಿನಿಮಾ ಹಾಡು ಹಾಡಿ ಮೋಜು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಭಕ್ತರ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಹಿಂದೆಯೂ ಸ್ವಾಮೀಜಿ ಹಲವು ವಿವಾದಗಳಿಂದ ಸುದ್ದಿಯಾಗಿದ್ದರು.
Read Full Story

06:07 AM (IST) Aug 18

ಬಟ್ಟೆ ಅಳತೆ ನೆಪದಲ್ಲಿ ಅಪ್ರಾಪ್ತೆ ದೇಹ ಮುಟ್ಟಿದ ಆರೋಪ; ಟೈಲರ್‌ ವಿರುದ್ಧ ಪೋಕ್ಸೋ ಕೇಸ್

ಬಟ್ಟೆ ಅಳತೆ ನೆಪದಲ್ಲಿ ಅಪ್ರಾಪ್ತೆಯ ದೇಹ ಮುಟ್ಟಿದ ಆರೋಪ ಎದುರಿಸುತ್ತಿರುವ 53 ವರ್ಷದ ಟೈಲರ್, ಘಟನೆ ನಡೆದ ದಿನ ಆಸ್ಪತ್ರೆಯಲ್ಲಿದ್ದೆ ಎಂದು ದಾಖಲೆ ಸಲ್ಲಿಸಿದ್ದಾನೆ. ಈ ದಾಖಲೆ ಕಂಡು ದಿಗ್ಭ್ರಮೆಗೊಂಡ ಹೈಕೋರ್ಟ್‌, ದಾಖಲೆಗಳ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ತನಿಖಾಧಿಕಾರಿಗೆ ಆದೇಶಿಸಿದೆ.
Read Full Story

05:42 AM (IST) Aug 18

RSS 11 ಸಾವಿರ ಹೆಡೆಗಳ ವಿಷ ಸರ್ಪ, ಹಾಗೆಯೇ ಬಿಟ್ಟರೆ ಸಮಾಜ ಹಾಳಾಗುತ್ತೆ - ಯತೀಂದ್ರ ಸಿದ್ದರಾಮಯ್ಯ

ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಅನ್ನು ಸಾವಿರ ಹೆಡೆಗಳ ವಿಷ ಸರ್ಪಕ್ಕೆ ಹೋಲಿಸಿ ವಿವಾದ ಸೃಷ್ಟಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ್ದ ವೇದಿಕೆ ಶುದ್ಧೀಕರಣ ಖಂಡಿಸಿ ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ, ಆರ್‌ಎಸ್‌ಎಸ್‌ ಜಾತಿವಾದ ಮತ್ತು ಮನುವಾದವನ್ನು ಹರಡುತ್ತಿದೆ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.
Read Full Story

More Trending News