Published : Dec 18, 2025, 06:50 AM ISTUpdated : Dec 18, 2025, 10:30 PM IST

Karnataka News Live: ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ - ಡಿ.ಕೆ.ಶಿವಕುಮಾರ್‌

ಸಾರಾಂಶ

ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಸುಳ್ಳು ಹೇಳಿ ಜೈಲಿಗೆ ಸೇರಿದ್ದ ಬುರುಡೆ ಪಾತ್ರಧಾರಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಜಾಮೀನು ಸಿಕ್ಕರೂ ಶೂರಿಟಿ ಇಲ್ಲ ದೇ ಶಿವಮೊಗ್ಗದ ಜೈಲಿನಲ್ಲಿ ಚಿನ್ನಯ್ಯ ಮಂಕಾ ಗಿದ್ದು, ಮೌನಕ್ಕೆ ಶರಣಾಗಿದ್ದ. ಈಗ 1 ಲಕ್ಷ ಬಾಂಡ್, 2 ಜಾಮೀನುದಾರರಿಂದ ಬೆಳ್ತಂಗಡಿ ಕೋರ್ಟ್‌ಗೆ ಶೂರಿಟಿ ನೀಡಲಾಗಿದೆ. ಚಿನ್ನಯ್ಯ ಬಿಡುಗಡೆಗೆ ನ್ಯಾಯಾಧೀಶರು ಅಸ್ತು ಎಂದಿದ್ದಾರೆ. ಡಿ.18 ರಂದು ಚಿನ್ನಯ್ಯ ಬಿಡುಗಡೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಳೆದ ನ.24ರಂದು 1 ಲಕ್ಷ ಬಾಂಡ್, ಇಬ್ಬರ ಶೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು .ಚಿನ್ನಯ್ಯನಿಗೆ ಶೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಬಾಂಡ್ ಹಾಗೂ ಇಬ್ಬರು ಜಾಮೀನುದಾರರ ಕೊರತೆಯಿಂದ ಬಿಡುಗ ಡೆಯಾಗದೇ ಚಿನ್ನಯ್ಯ ಜೈಲಿನಲ್ಲಿದ್ದ. ಆ.23ರಂದು ಸುದೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್‌ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಸೆ.6ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

10:30 PM (IST) Dec 18

ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ - ಡಿ.ಕೆ.ಶಿವಕುಮಾರ್‌

ಗೃಹಲಕ್ಷ್ಮೀ ಯೋಜನೆ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್‌ ತಪ್ಪು ಮಾಹಿತಿ ನೀಡಿದ್ದರೆ ಹಕ್ಕುಚ್ಯುತಿ ಮಂಡಿಸಿ. ಅದಕ್ಕೂ ಮೊದಲು ನರೇಗಾ ಹಣ, ನೀರಾವರಿ, ಜಲಜೀವನ್‌ ಮಿಷನ್‌ ಕೇಂದ್ರದಿಂದ ಬಂದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Read Full Story

10:17 PM (IST) Dec 18

ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಗಂಭೀರ

ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಗಂಭೀರ, ಸವದತ್ತಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳುವಾಗ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಲಾಗಿದೆ.

 

Read Full Story

10:01 PM (IST) Dec 18

Avatar Fire and Ash Review - ಪಂಡೋರಾ ದೃಶ್ಯ ಅದ್ಭುತ, ಆದರೆ ಕಥೆ ಡಲ್? ಜೇಮ್ಸ್ ಕ್ಯಾಮರೂನ್ ಹೀಗೇಕೆ ಮಾಡಿದ್ರು?

ಜೇಮ್ಸ್ ಕ್ಯಾಮರೂನ್ ನಿರ್ದೇಶನದ 'ಅವತಾರ್: ಫೈರ್ ಅಂಡ್ ಆಶ್' ಸಿನಿಮಾ ಡಿಸೆಂಬರ್ 19ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಅವತಾರ್ 3 ಬಗ್ಗೆ ಆರಂಭಿಕ ವಿಮರ್ಶೆಗಳು ಶುರುವಾಗಿವೆ.

Read Full Story

09:52 PM (IST) Dec 18

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆ ಸಂಪ್ ಕ್ಯಾಪ್ ಕಳ್ಳತನ ಮಾಡಿ 700 ರೂಗೆ ಮಾರಾಟ, ಆರೋಪಿ ಅರೆಸ್ಟ್

ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆ ಸಂಪ್ ಕ್ಯಾಪ್ ಕಳ್ಳತನ ಮಾಡಿ 700 ರೂಗೆ ಮಾರಾಟ, ಆರೋಪಿ ಅರೆಸ್ಟ್ ಮಾಡಲಾಗಿದೆ. ಇತ್ತೀಚೆಗೆ ಘಟನೆ ಕುರಿತು ರಿಕ್ಕಿ ಕೇಜ್ ರೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

Read Full Story

09:43 PM (IST) Dec 18

ಜೈಲುಗಳು ರೆಸಾರ್ಟ್‌ಗಳಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕೈಮೀರಿದೆ - ಆರ್.ಅಶೋಕ್ ಆತಂಕ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಡ್ರಗ್ಸ್ ಮಾಫಿಯಾ ನಿಯಂತ್ರಣ ತಪ್ಪಿದೆ. ಜೈಲುಗಳು ರೆಸಾರ್ಟ್‌ಗಳಾಗಿವೆ. ರಕ್ಷಣೆ ನೀಡಬೇಕಾದ ಪೊಲೀಸರೇ ಕಳ್ಳರಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

Read Full Story

09:22 PM (IST) Dec 18

ಕಾಂಗ್ರೆಸ್‌ ಯೋಜನೆ ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆ - ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯ

ದೇಶದಲ್ಲಿ ಕಾಂಗ್ರೆಸ್‌ ಹಾಗೂ ಯುಪಿಎ ಆಡಳಿತದಲ್ಲಿ ಜಾರಿಗೆ ತಂದ ಯೋಜನೆಗಳ ಹೆಸರುಗಳನ್ನು ಬದಲಿಸಿದ್ದೊಂದೇ ಬಿಜೆಪಿಯವರ ಬಹುದೊಡ್ಡ ಸಾಧನೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯವಾಡಿದ್ದಾರೆ.

Read Full Story

09:16 PM (IST) Dec 18

ರಾಜ್ಯದ 2ನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯ - ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ನಮಗೆ ಎಲ್ಲಾ ಧರ್ಮ, ಜಾತಿ ಒಂದೇ. ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ. ಇದಕ್ಕೆ ಉತ್ತಮ ಭವಿಷ್ಯವಿದೆ. ಇದರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

Read Full Story

09:07 PM (IST) Dec 18

ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ - ಸಂಸದ ಡಾ.ಕೆ.ಸುಧಾಕರ್

ರಾಜ್ಯದ ಸಮಸ್ಯೆಗಳ ಬಗ್ಗೆ ವಿಶೇಷವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ, ಹೂವು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಿದ್ದು, ಲೋಕಸಭೆಯಲ್ಲಿ ರೈತರ ಪರವಾದ 2 ಮಹತ್ವದ ಮಸೂದೆ ಮಂಡಿಸಿದ್ದೇನೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು.

Read Full Story

08:59 PM (IST) Dec 18

ಮಾಲೀಕನ ನಿರ್ಲಕ್ಷ್ಯಕ್ಕೆ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಇಟ್ಟಿಗೆ, 4 ವರ್ಷದ ಮಗು ಸಾವು

ಮಾಲೀಕನ ನಿರ್ಲಕ್ಷ್ಯಕ್ಕೆ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಇಟ್ಟಿಗೆ, 4 ವರ್ಷದ ಮಗು ಸಾವು, ಕಟ್ಟಡದ ಪಕ್ಕದಲ್ಲೇ ಶೀಟ್ ಮನೆಯೊಳಗಿದ್ದ ಮಕ್ಕಳ ಮೇಲೆ ಬಿದ್ದಿದೆ. ಇನ್ನಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.

Read Full Story

08:19 PM (IST) Dec 18

ಮುರಿದ ಕನ್ನಡಿ ಮನೆಯಲ್ಲಿದ್ದರೆ ಏನೇನಾಗುತ್ತೆ ಗೊತ್ತಾ?

ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕನ್ನಡಿ ಒಡೆಯುವುದು (broken mirror vastu tips) ಕೆಲವೊಮ್ಮೆ ಶುಭ ಸಂಕೇತ. ಆದರೆ ಒಡೆದ ಗಾಜು ಮನೆಯಲ್ಲಿರುವುದು ಶುಭವಲ್ಲ. ಹಾಗಾದರೆ ಯಾವುದು ಶುಭ, ಯಾವುದು ಅಶುಭ? ಬನ್ನಿ ತಿಳಿಯೋಣ. 

 

Read Full Story

08:17 PM (IST) Dec 18

ಕೊಡಗಿನಲ್ಲಿ ಗನ್ನಿಗೆ ದೈವತ್ವ - ಕೋವಿಗೂ ಪೂಜೆ ಮಾಡಿ ಮೆರವಣಿಗೆ ಸಲ್ಲಿಸಿದ ಕೊಡವರು!

ಅದೊಂದು ಆಯುಧವೆಂದು ಬಳಕೆ ಮಾಡುವ ಕೋವಿಗೂ ಇಲ್ಲಿಗೆ ಹೂ ಮುಡಿಸಿ, ದೀಪ, ಊದುಬತ್ತಿಗಳ ಹೆಚ್ಚಿ ಪೂಜೆ ಸಲ್ಲಿಸಿದ್ರು. ಅಷ್ಟೇ ಏಕೆ ಎಲ್ಲರೂ ಹೆಗಲ ಮೇಲೇರಿಸಿ ಅದೇ ಕೋವಿಗೆ ಮೆರವಣಿಗೆಯನ್ನೂ ಮಾಡಿದರು.

Read Full Story

07:57 PM (IST) Dec 18

ಬೆಂಗಳೂರು ಪಶ್ಚಿಮದಲ್ಲಿ 2.76 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಗುರಿ! ಡಿ.21ರಿಂದ ಲಸಿಕೆ ಆರಂಭ

ಬೆಂಗಳೂರಿನ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಿಸೆಂಬರ್ 21 ರಿಂದ 24 ರವರೆಗೆ ನಾಲ್ಕು ದಿನಗಳ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ 2,76,693 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.

Read Full Story

07:50 PM (IST) Dec 18

ನ್ಯೂ ಈಯರ್ ಪಾರ್ಟಿಗೆ ಪೊಲೀಸ್ ಖಡಕ್ ಎಚ್ಚರಿಕೆ, ಕುಡಿದು ಡ್ರೈವ್ ಮಾಡುವಂತಿಲ್ಲ, ರಾತ್ರಿ 12.30ರೊಳಗೆ ಎಲ್ಲಾ ಬಂದ್‌!

ಮಂಗಳೂರಿನಲ್ಲಿ ಹೊಸ ವರ್ಷಾಚರಣೆ ಆಯೋಜಿಸಲು ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ರಾತ್ರಿ 12.30ರೊಳಗೆ ಕಾರ್ಯಕ್ರಮ ಮುಗಿಸಬೇಕು, ಡಿಜೆ ಪಾರ್ಟಿ, ಮಾದಕ ವಸ್ತುಗಳ ಸೇವನೆ, ಅಶ್ಲೀಲ ನೃತ್ಯಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 

Read Full Story

07:42 PM (IST) Dec 18

ಮಹೇಶ್‌ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಬೆನ್ನಲ್ಲೇ ನಾಪತ್ತೆ! ಮೈಕ್ ಮೂಲಕ ಪ್ರಕಟಣೆ ಹೊರಡಿಸಿದ ಸರ್ಕಾರ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನ 10 ತಿಂಗಳ ಕಾಲ ಗಡೀಪಾರು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ತಿಮರೋಡಿ ಮನೆಯಲ್ಲಿ ಲಭ್ಯವಿಲ್ಲದ ಕಾರಣ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.

Read Full Story

07:23 PM (IST) Dec 18

ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರವೇ ಡಿಪಿಆರ್, ಚಿತ್ರದುರ್ಗವರೆಗೆ ವಿಸ್ತರಿಸುವಂತೆ ಒತ್ತಾಯ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಒತ್ತಾಸೆಯಂತೆ, ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗದ  ಡಿಪಿಆರ್‌ ಇನ್ನೈದು ತಿಂಗಳಲ್ಲಿ ಸಿದ್ಧವಾಗಲಿದೆ. ಈ ಮಾರ್ಗವನ್ನು ಚಿತ್ರದುರ್ಗದವರೆಗೆ ವಿಸ್ತರಿಸುವಂತೆ ಒತ್ತಾಯಿಸಲಾಗಿದ್ದು, ಇದು ವಿಜಯಪುರ-ಬೆಂಗಳೂರು ನಡುವಿನ ಪ್ರಯಾಣದ ದೂರವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ.

Read Full Story

06:54 PM (IST) Dec 18

Bigg Boss - ದೇವರ ಮುಂದೆ ಬಿಕ್ಕಿಬಿಕ್ಕಿ ಅತ್ತ ಚೈತ್ರಾ ಕುಂದಾಪುರ - ವೀಕೆಂಡ್​ ಹೊತ್ತಲ್ಲಿ ಅಂಥದ್ದೇನಾಯ್ತು?

ಬಿಗ್‌ಬಾಸ್ ಮನೆಯಲ್ಲಿ ವೀಕೆಂಡ್ ಎಲಿಮಿನೇಷನ್ ಭಯ ಸ್ಪರ್ಧಿಗಳನ್ನು ಕಾಡುತ್ತಿದೆ. ಈ ನಡುವೆ, ಚೈತ್ರಾ ಕುಂದಾಪುರ ಅವರು ದೇವರ ಮುಂದೆ ಅರಿಶಿಣ ಇಟ್ಟು ಬಿಕ್ಕಿ ಬಿಕ್ಕಿ ಅತ್ತಿದ್ದು, ಅವರ ಈ ನಿಗೂಢ ನಡವಳಿಕೆಯ ಹಿಂದಿನ ಕಾರಣವೇನು ಎಂಬ ಕುತೂಹಲ ಮೂಡಿಸಿದೆ.
Read Full Story

06:46 PM (IST) Dec 18

ರಾಮನಗರದಲ್ಲಿದೆ ವಾರಸುದಾರರಿಲ್ಲದ 48.69 ಕೋಟಿ ರು! ಹಣ ವಾಪಸ್ ಹಿಂದಿರುಗಿಸಲು ನಿಮ್ಮ ಹಣ-ನಿಮ್ಮ ಹಕ್ಕು ಅಭಿಯಾನ

ರಾಮನಗರ ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ ಸುಮಾರು 48.69 ಕೋಟಿ ರೂಪಾಯಿ ವಾರಸುದಾರರಿಲ್ಲದೆ ಉಳಿದಿದೆ. ಈ ಹಣವನ್ನು ಅದರ ಹಕ್ಕುದಾರರಿಗೆ ತಲುಪಿಸಲು 'ನಿಮ್ಮ ಹಣ-ನಿಮ್ಮ ಹಕ್ಕು' ಅಭಿಯಾನವನ್ನು ಆರಂಭಿಸಿದ್ದು, ಗ್ರಾಹಕರು ಡಿಸೆಂಬರ್ ಅಂತ್ಯದೊಳಗೆ ಅಗತ್ಯ ದಾಖಲೆಗಳನ್ನು ನೀಡಿ ತಮ್ಮ ಹಣವನ್ನು ಮರಳಿ ಪಡೆಯಬಹುದು.

Read Full Story

06:34 PM (IST) Dec 18

ಎಲ್ಲೆಡೆ ರಣವೀರ್ ಸಿಂಗ್ ಅಬ್ಬರ.. 'ಧುರಂಧರ್' ವಿಮರ್ಶೆ ಕೊಟ್ಟ ಪಾಕಿಸ್ತಾನಿ ವ್ಯಕ್ತಿ - ವಿಡಿಯೋ ಸಖತ್ ವೈರಲ್

ರಣವೀರ್ ಸಿಂಗ್ ಅಭಿನಯದ 'ಧುರಂಧರ್' ಚಿತ್ರ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನದಲ್ಲೂ ಮೆಚ್ಚುಗೆ ಗಳಿಸುತ್ತಿದೆ. ಅಲ್ಲಿಯೂ ಶೋಗಳು ಹೌಸ್‌ಫುಲ್ ಆಗುತ್ತಿವೆ. ಈ ನಡುವೆ, ಪಾಕಿಸ್ತಾನಿ ವ್ಯಕ್ತಿಯೊಬ್ಬರು ಈ ಚಿತ್ರದ ವಿಮರ್ಶೆ ಮಾಡಿದ್ದು, ಅದು ವೈರಲ್ ಆಗಿದೆ.

Read Full Story

06:33 PM (IST) Dec 18

Smita Patil - ಸಿನಿಮಾ ಸೆಟ್‌ನಲ್ಲಿ ತನ್ನ ಅಡುಗೆ ತಾನೇ ತಯಾರಿಸುತ್ತಿದ್ದ ಹೀರೋಯಿನ್!‌

ಭಾರತೀಯ ಸಿನೆಮಾ ರಂಗದ ಈ ಮಹಾನ್ ಹೀರೋಯಿನ್ (Smita patil), ತಮ್ಮ ಖ್ಯಾತಿಯ ನಡುವೆಯೂ ಸರಳ ಜೀವನ ನಡೆಸುತ್ತಿದ್ದರು. ಶೂಟಿಂಗ್ ಸೆಟ್‌ನಲ್ಲಿ ತಾವೇ ಅಡುಗೆ ಮಾಡಿಕೊಳ್ಳುತ್ತಿದ್ದ ಅವರ ಸರಳತೆ, ಮಹಿಳಾ ಹಕ್ಕುಗಳ ಬಗೆಗಿನ ಅವರ ದೃಢ ನಿಲುವು ಹಾಗೂ ಅವರ ಬಲಿಷ್ಠ ಪಾತ್ರಗಳು ಇಂದಿಗೂ ಸ್ಮರಣೀಯ.

Read Full Story

06:31 PM (IST) Dec 18

Bhagyalakshmi ಶೂಟಿಂಗ್​ನಲ್ಲಿ ಬೆಚ್ಚಿಬಿದ್ದ ನಟಿಯರು! ಏನೆಲ್ಲಾ ಆಯ್ತು ನೋಡಿ - ಇಷ್ಟು ರಿಸ್ಕ್​ ಯಾಕೆ ಕೇಳ್ತಿರೋ ಫ್ಯಾನ್ಸ್​!

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ'ಯ ಚಿತ್ರೀಕರಣದ ವಿಡಿಯೋವೊಂದು ವೈರಲ್ ಆಗಿದೆ. ಬೆಟ್ಟದ ಮೇಲಿನಿಂದ ಬೀಳುವ ಅಪಾಯಕಾರಿ ದೃಶ್ಯಕ್ಕಾಗಿ ನಟಿಯರಾದ ಸುಷ್ಮಾ ರಾವ್ ಮತ್ತು ಕಾವ್ಯಾ ಗೌಡ ತೆಗೆದುಕೊಂಡ ರಿಸ್ಕ್ ಹಾಗೂ ಗ್ರೀನ್ ಸ್ಕ್ರೀನ್ ತಂತ್ರಜ್ಞಾನದ ಬಳಕೆಯ ಬಗ್ಗೆ ಈ ಲೇಖನ ವಿವರಿಸುತ್ತದೆ.
Read Full Story

06:26 PM (IST) Dec 18

ಬೆಂಗಳೂರಲ್ಲಿ ಪಬ್‌ಗೆ ಬಂದಿದ್ದ ಹುಡುಗಿ ಫೋನ್ ನಂಬರ್ ಕೇಳಿದ ಉಮೇಶ; ಕೊಡದಿದ್ದಕ್ಕೆ ಹಲ್ಲೆ!

ಬೆಂಗಳೂರಿನ ನಾಗರಬಾವಿ ಪಬ್‌ನಲ್ಲಿ ಯುವತಿಯರ ಮೊಬೈಲ್ ಸಂಖ್ಯೆ ಕೇಳಿದ ವಿಚಾರಕ್ಕೆ ಗಲಾಟೆ ನಡೆದಿದೆ. ಹಲ್ಲೆ ಮತ್ತು ಅಸಭ್ಯ ವರ್ತನೆ ಆರೋಪದಡಿ ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read Full Story

06:21 PM (IST) Dec 18

ಗಡಿಪಾರಾಗಿ ಬಂದಿದ್ದ ರೌಡಿಶೀಟರ್ ಬರ್ಬರ ಹತ್ಯೆ, ಐವರು ಅರೆಸ್ಟ್, ಕೊಲೆಗೆ ಸ್ಕೆಚ್ ಹೇಗೆ ನಡೆದಿತ್ತು?

ಗಡಿಪಾರಾಗಿ ಬಂದಿದ್ದ ರೌಡಿಶೀಟರ್ ಎಲ್.ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಾಂಡವಪುರ ಪೊಲೀಸರು ಮುಖ್ಯ ಆರೋಪಿ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಹಳೆಯ ದ್ವೇಷವೇ ಕೊಲೆಗೆ ಕಾರಣವಾಗಿದೆ.

Read Full Story

06:07 PM (IST) Dec 18

ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್.. ಈ ದಿನ 'ರಾಮಾಯಣ' ಟೀಸರ್ ರಿಲೀಸ್, ರಾವಣನ ಆರ್ಭಟ ಹೇಗಿರುತ್ತೆ!

ನಿತೇಶ್ ತಿವಾರಿ ಅವರ 'ರಾಮಾಯಣ' ಮತ್ತು AI ನಿಂದ ತಯಾರಾದ ಧಾರ್ಮಿಕ ಚಿತ್ರ 'ಹನುಮಾನ್: ದಿ ಇಟರ್ನಲ್' ಟೀಸರ್ ಡಿಸೆಂಬರ್ 19, 2025 ರಂದು ಹಾಲಿವುಡ್ ಚಿತ್ರ 'ಅವತಾರ್: ಫೈರ್ ಅಂಡ್ ಆಶ್' ಜೊತೆಗೆ ಥಿಯೇಟರ್‌ಗಳಲ್ಲಿ ಪ್ರದರ್ಶನಗೊಳ್ಳಲಿದೆ.

Read Full Story

05:44 PM (IST) Dec 18

ಓಲಾ ಎಲೆಕ್ಟ್ರಿಕ್ ಕಂಪನಿಯ ಮಾರುಕಟ್ಟೆ ಮೌಲ್ಯ ಭಾರೀ ಕುಸಿತ, ಹೂಡಿಕೆದಾರರಿಗೆ ಅಪಾರ ನಷ್ಟ! ಕಾರಣವೇನು?

ಓಲಾ ಎಲೆಕ್ಟ್ರಿಕ್ ಷೇರುಗಳು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ಹೂಡಿಕೆದಾರರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪ್ರವರ್ತಕರ ಷೇರು ಮಾರಾಟ, ಮಾರುಕಟ್ಟೆ ಪಾಲಿನಲ್ಲಿ ಕುಸಿತ, ಮತ್ತು ಹೆಚ್ಚುತ್ತಿರುವ ಸಾಲದಂತಹ ಪ್ರಮುಖ ಕಾರಣಗಳಿಂದ ಕಂಪನಿಯ ಮಾರುಕಟ್ಟೆ ಮೌಲ್ಯವು  ₹13,950 ಕೋಟಿಗೆ ಇಳಿದಿದೆ. 

Read Full Story

05:36 PM (IST) Dec 18

ವಿಶೇಷ ದಿನದಂದು ಸಲ್ಮಾನ್ ಖಾನ್‌ರ 'ಕಿಕ್ 2' ಸಿನಿಮಾ ಘೋಷಣೆ.. ನಾಯಕಿ-ವಿಲನ್ ಹೆಸರು ಕೂಡ ಬಹಿರಂಗ!

ಸಲ್ಮಾನ್ ಖಾನ್‌ ಬಿಗ್ ಬಾಸ್ 19ರ ನಂತರ ತಮ್ಮ ಮುಂಬರುವ ಚಿತ್ರಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಅವರ 'ಕಿಕ್ 2' ಚಿತ್ರವನ್ನು ಅವರ ಹುಟ್ಟುಹಬ್ಬದ ದಿನ, ಅಂದರೆ ಡಿ.27ರಂದು ಘೋಷಿಸಬಹುದು ಎಂಬ ಸುದ್ದಿ ಇದೆ. ಜೊತೆಗೆ, ಚಿತ್ರದ ನಾಯಕಿ ಜಾಕ್ವೆಲಿನ್‌ರನ್ನು ಬದಲಾಯಿಸಬಹುದು ಎಂದೂ ಹೇಳಲಾಗುತ್ತಿದೆ.

Read Full Story

05:20 PM (IST) Dec 18

ರಜನಿಕಾಂತ್ ಜೊತೆ ಆ ಪಾತ್ರದಲ್ಲಿ ನಟಿಸಲಿದ್ದಾರೆ ದಿ ಡರ್ಟಿ ಪಿಕ್ಚರ್ ನಟಿ.. ಯಾವ ಸಿನಿಮಾ ಗೊತ್ತಾ?

ಈ ಸಿನಿಮಾದಲ್ಲಿ ಸ್ಯಾಂಡಲ್‌ವುಡ್‌ನ ನಟ ಶಿವರಾಜ್‌ಕುಮಾರ್ ಕೂಡಾ ಮೊದಲ ಪಾರ್ಟ್ನಂತೆ ಪಾರ್ಟ್-2 ಚಿತ್ರದಲ್ಲೂ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2026ರ ಜೂನ್‌ 12ರಂದು ‘ಜೈಲರ್‌ 2’ ತೆರೆಗೆ ಬರಲಿದೆ.

Read Full Story

05:01 PM (IST) Dec 18

ದುರಂಧರ್ ಸ್ಟೈಲ್‌ನಲ್ಲಿ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನಿ ಲೇಡಿ ಸ್ಪೈ; ವಿಡಿಯೋ ಭಾರೀ ವೈರಲ್!

ಇನ್‌ಸ್ಟಾಗ್ರಾಮ್‌ನಲ್ಲಿ 'ಭಾರತದಲ್ಲಿ ಪಾಕಿಸ್ತಾನಿ ಸ್ಪೈ' ಎಂಬ ಹೊಸ ರೀಲ್ಸ್ ಟ್ರೆಂಡ್ ವೈರಲ್ ಆಗಿದೆ. ಈ ತಮಾಷೆಯ ವೀಡಿಯೋಗಳ ನಡುವೆಯೇ ಪಾಕ್ ಯುವತಿ ಸ್ಪೈ ಆಗಿ ಬಂದು ಸಿಕ್ಕಿಬಿದ್ಇರುವ ವಿಡಿಯೋ ಭಾರೀ ವೈರಲ್ ಆಗಿದೆ. ಸಂಪೂರ್ಣ ಮಾಹಿತಿ ತಿಳಿಯಲು ಓದಿ.

Read Full Story

04:46 PM (IST) Dec 18

ಏಕಾಂಗಿತನ, ಮಾನಸಿಕ ಸಂಕಟಕ್ಕೆ ಧ್ಯಾನವೇ ಉತ್ತರ - ರವಿಶಂಕರ್ ಗುರೂಜಿ ಜಾಗತಿಕ ಸಂದೇಶ

ಕಳೆದ ವರ್ಷ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿ.21ನ್ನು ಪ್ರಥಮ ‘ವಿಶ್ವ ಧ್ಯಾನ ದಿನ’ವಾಗಿ ಘೋಷಿಸಿದ ದಿನದಂದೇ, ಜಗತ್ತಿನಾದ್ಯಂತ 8.5 ಮಿಲಿಯನ್ ಜನರು ಒಂದೇ ಸಮಯದಲ್ಲಿ ಧ್ಯಾನದಲ್ಲಿ ಭಾಗವಹಿಸಿದ್ದರು.

Read Full Story

04:27 PM (IST) Dec 18

ಸಿದ್ದರಾಮಯ್ಯ ಮುಡಾ ಕೇಸ್, ತನಿಖಾಧಿಕಾರಿಗಳು ಸರ್ವಾಧಿಕಾರಿಗಳೇ? ಕೋರ್ಟ್‌ ನಲ್ಲಿ ಸ್ನೇಹಮಯಿ ಕೃಷ್ಣ ಕೆಂಡಾಮಂಡಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ತನಿಖೆ ವಿಳಂಬವಾಗಿದ್ದಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರು ಮತ್ತಷ್ಟು ಕಾಲಾವಕಾಶ ಕೋರಿದೆ.

Read Full Story

04:26 PM (IST) Dec 18

ನನಗೆ ಯಾರ ಜೊತೆಯೂ ಮನಸ್ತಾಪ ಇಲ್ಲ - ರಿಷಬ್ ಜೊತೆಗಿನ ಸಂಬಂಧ ಕುರಿತು ರಾಜ್ ಬಿ ಶೆಟ್ಟಿ ಹೇಳಿದ್ದೇನು?

ನನಗಂತೂ ಏನೂ ಮನಸ್ತಾಪವಿಲ್ಲ. ನಾನು ಎಲ್ಲೂ ಯಾರ ಹೆಸರೂ ಮಿಸ್‌ ಮಾಡಲಿಲ್ಲ. ಅವರೂ ಉದ್ದೇಶಪೂರ್ವಕವಾಗಿ ಮಿಸ್‌ ಮಾಡಿದ್ದಾರೆ ಅಂತ ಅನಿಸುವುದಿಲ್ಲ. ಇಂಥದ್ದನ್ನೆಲ್ಲ ಅಲ್ಲಲ್ಲೇ ಬಿಟ್ಟು ಮುಂದಕ್ಕೆ ಹೋಗಬೇಕು ಎಂದರು ರಾಜ್ ಬಿ ಶೆಟ್ಟಿ.

Read Full Story

04:14 PM (IST) Dec 18

ಕೆಲಸ ಬೋರ್‌, ಒತ್ತಡ, ಸಂಬಳ ಕಮ್ಮಿನಾ? - ಬಿಸಿರಕ್ತ.. ಮಾಡಿದ ಕೆಲಸಕ್ಕೆ ಪಶ್ಚಾತ್ತಾಪ ಪಡ್ತಿರೋ ಬೆಂಗಳೂರಿನ ಹುಡುಗ

Gen Z ಪೀಳಿಗೆಯವರಂತೂ ಯಾವುದಕ್ಕೂ ಚಿಂತೆ ಮಾಡೋದಿಲ್ಲ, ಕೇರ್‌ ಮಾಡೋದಿಲ್ಲ, ಜವಾಬ್ದಾರಿ ತಗೊಳಲ್ಲ ಎನ್ನುವ ದೂರು ಇದೆ. ಈಗ ಬೆಂಗಳೂರಿನ ಕನ್ನಡಿಗನೋರ್ವ ಏಕಾಏಕಿ ಕೆಲಸ ಬಿಟ್ಟು, ಸಮಸ್ಯೆ ತಂದುಕೊಂಡಿದ್ದಾರೆ.

 

Read Full Story

03:45 PM (IST) Dec 18

ಕಾರವಾರದಲ್ಲಿ ಚೀನಾ ಜಿಪಿಎಸ್ ಟ್ರ್ಯಾಕರ್ ಹೊಂದಿದ ಸೀಗಲ್ ಹಕ್ಕಿ - ಎಲೆಕ್ಟ್ರಾನಿಕ್ ಡಿವೈಸ್ ಸತ್ಯ ಬಿಚ್ಚಿಟ್ಟ ಎಸ್‌ಪಿ!

ಕಾರವಾರದ ಕಡಲತೀರದಲ್ಲಿ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ಗಾಯಗೊಂಡ ಸೀಗಲ್ ಹಕ್ಕಿಯೊಂದು ಪತ್ತೆಯಾಗಿದೆ. ಪೊಲೀಸರು ಮತ್ತು ಅರಣ್ಯ ಇಲಾಖೆ ತನಿಖೆ ನಡೆಸುತ್ತಿದ್ದು, ಇದು ವೈಜ್ಞಾನಿಕ ಅಧ್ಯಯನದ ಭಾಗವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಭದ್ರತಾ ದೃಷ್ಟಿಯಿಂದಲೂ ಈ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದೆ.
Read Full Story

03:38 PM (IST) Dec 18

'ಏಕೆ ಕನಸು ಕಾಣುವೆ..' ಯುವ ಹಾಗೂ ನಟಿ ರಿಲೇಷನ್‌ಷಿಪ್‌ ಕುರಿತು 'ರಾಜ್‌ಕುಮಾರ್‌' ಹಾಡು ಹಾಕಿ ತಿವಿದ ಶ್ರೀದೇವಿ ಭೈರಪ್ಪ!

ಯುವ ರಾಜ್‌ಕುಮಾರ್ ಜೊತೆಗಿನ ವಿಚ್ಛೇದನದ ನಡುವೆ, ಶ್ರೀದೇವಿ ಭೈರಪ್ಪ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಯುವ ಹಾಗೂ ಮತ್ತೊಬ್ಬ ನಟಿಯ ಸಂಬಂಧದ ಬಗ್ಗೆ ಕೇಳಿದಾಗ, ಡಾ. ರಾಜ್‌ಕುಮಾರ್ ಅವರ ಹಾಡು ಹಾಕಿ ಗಮನಸೆಳೆದಿದ್ದಾರೆ.

Read Full Story

03:36 PM (IST) Dec 18

'ಜೈಲರ್‌ 2'ನಿಂದ ತಮನ್ನಾಗೆ ಗೇಟ್‌ಪಾಸ್.. ರಜನಿಕಾಂತ್ ಚಿತ್ರದ ಸ್ಪಷಲ್‌ ಹಾಡಿಗೆ ಬರಲಿರೋ ನಟಿ ಇವರೇ ನೋಡಿ!

ಜೈಲರ್ 2 ಅಡ್ಡಾದಿಂದ ಹೊಸದೊಂದು ನ್ಯೂಸ್ ಬಂದಿದೆ. ಅದೂ ಜೈಲರ್ ಪಾರ್ಟ್ 2ನಲ್ಲಿ ನಟಿ ತಮನ್ನಾ ಹಾಡು ಇರೋದಿಲ್ಲ ಅಂತ. ಹಾಗಿದ್ರೆ ಹಾಡೇ ಇರೋದಿಲ್ವಾ ಅಥವಾ ತಮನ್ನಾ ಇರೋದಿಲ್ವಾ ಅಂತ ಕೇಳಿದ್ರೆ, ಹಾಡು ಇರಲಿದೆ, ಆದ್ರೆ ತಮನ್ನಾ ಭಾಟಿಯಾ (Tamannah Bhatia) ಅದರಲ್ಲಿ ಇರೋದಿಲ್ಲ ಎಂಬ ಉತ್ತರ ಸಿಕ್ಕಿದೆ.

Read Full Story

03:08 PM (IST) Dec 18

ಸುತ್ತಿ ಬಳಸಿ ನನ್​ ಬಳಿ ಬಂದ್ಲು ಮಾವನ ಮಗಳು, ಆಮೇಲೆ ಏನೆನೆನೋ ಆಗೋಯ್ತು- ರಜತ್​ ಮುಂದೆ ಗಿಲ್ಲಿ ನಟ ಗುಟ್ಟು ರಿವೀಲ್​

ಬಿಗ್‌ಬಾಸ್ ಮನೆಯಲ್ಲಿ ತನ್ನ ಕಾಮಿಡಿಯಿಂದ ಜನಪ್ರಿಯರಾಗಿರುವ ಗಿಲ್ಲಿ ನಟ, ಸಹ ಸ್ಪರ್ಧಿ ಕಾವ್ಯಾ ಶೈವ ಜೊತೆಗಿನ ತಮ್ಮ ಜೋಡಿಯ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಾರೆ. ತನ್ನ 'ಮಾವನ ಮಗಳು' ಎಂದು ಹೇಳಿಕೊಂಡು, ಜಂಟಿಯಾಗಿ ಮನೆಗೆ ಪ್ರವೇಶಿಸಿದ ಕಥೆಯನ್ನು ಹಾಸ್ಯಮಯವಾಗಿ ವಿವರಿಸಿದ್ದಾರೆ.

Read Full Story

03:08 PM (IST) Dec 18

ತುಂಗಭದ್ರಾ ಜಲಾಶಯದ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆ, 6 ತಿಂಗಳು ಕಾಲುವೆಗಳಿಗೆ ನೀರು ಸ್ಥಗಿತ!

TB ಡ್ಯಾಂ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆಯಲ್ಲಿ, ತಜ್ಞರ ತಂಡವು ಎಡದಂಡೆ ಕಾಲುವೆ ಮಾರ್ಗವನ್ನು ಪರಿಶೀಲಿಸಿದೆ. ಮುಂದಿನ ಆರು ತಿಂಗಳು ಕಾಲುವೆಗೆ ನೀರು ಸ್ಥಗಿತಗೊಳ್ಳಲಿದ್ದು, ಈ ಅವಧಿಯಲ್ಲಿ ₹430 ಕೋಟಿ ವೆಚ್ಚದಲ್ಲಿ ಕಾಲುವೆಯ ದುರಸ್ತಿ ಮತ್ತು ಸುಧಾರಣಾ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗಿದೆ.

Read Full Story

03:07 PM (IST) Dec 18

BBK 12 - ಹುಚ್ಚುತನದ ಪರಮಾವಧಿ ತೋರಿಸಿದ ರಕ್ಷಿತಾ ಶೆಟ್ಟಿ; ಧ್ರುವಂತ್‌ ಹೇಳಿದ್ದು ಸತ್ಯ ಎಂದ ವೀಕ್ಷಕರು

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ದೊಡ್ಮನೆಯೊಳಗಡೆ ಒಂದು ಸಿನಿಮಾ, ಸೀಕ್ರೇಟ್‌ ರೂಮ್‌ನಲ್ಲಿ ಇನ್ನೊಂದು ಸಿನಿಮಾ ಪ್ರಸಾರವಾಗುತ್ತಿದೆ. ಧ್ರುವಂತ್‌ ಹಾಗೂ ರಕ್ಷಿತಾ ಅವರು ಆಟ ಆಡಿಸಿದಂತೆ, ಸ್ಪರ್ಧಿಗಳು ಆಟ ಆಡುತ್ತಿದ್ದಾರೆ.

 

Read Full Story

02:44 PM (IST) Dec 18

KPTCL ಕೆಲಸ, ಶನಿವಾರ ಬೆಂಗಳೂರಲ್ಲಿ ಕರೆಂಟ್‌ ಇರಲ್ಲ..!

ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ರಾಜಧಾನಿ ಬೆಂಗಳೂರಿನ ಹಲವು ಪ್ರಮುಖ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆನಗರ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

Read Full Story

02:29 PM (IST) Dec 18

'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ

ಸಚಿವ ಭೈರತಿ ಸುರೇಶ್ ಅವರ 'ಕರಾವಳಿಯವರು ಬೆಂಕಿ ಹಚ್ಚುವವರು' ಎಂಬ ಹೇಳಿಕೆಯು ಸುವರ್ಣಸೌಧದ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಕ್ಷಮೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

Read Full Story

02:07 PM (IST) Dec 18

ಚಾಮರಾಜನಗರ - ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ

ಹನೂರು ತಾಲೂಕಿನ ಜಲ್ಲಿಪಾಳ್ಯ ಬಳಿ ಕೂಲಿ ಮುಗಿಸಿ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದ ಶಿವಮೂರ್ತಿ ಎಂಬುವವರ ಮೇಲೆ ಕಾಡಾನೆಗಳ ಗುಂಪು ದಾಳಿ ನಡೆಸಿದೆ. ಈ ಭೀಕರ ದಾಳಿಯಿಂದಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
Read Full Story

More Trending News