ಬೆಂಗಳೂರು: ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂ*ಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಆರೋಪಿ ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿ ಕುರಿತು ಮಂಗಳವಾರ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಈ ಆದೇಶ ಪ್ರಕಟಿಸಿದರು. ಹೀಗಾಗಿ ಸೂರಜ್ ರೇವಣ್ಣಗೆ ಮುಂದಿನ ಕಾನೂನು ಸಂಕಷ್ಟ ಎದುರಿಸುವುದು ಅನಿವಾರ್ಯವಾಗಿದೆ.
11:26 PM (IST) Feb 18
ಜೀ ಕನ್ನಡದ ಜನಪ್ರಿಯ ಸಂಗೀತ ರಿಯಾಲಿಟಿ ಷೋ 'ಸರಿಗಮಪ ಲಿಟಲ್ ಚಾಂಪ್ಸ್' ಹೊಸ ಆವೃತ್ತಿ ಶೀಘ್ರದಲ್ಲೇ ಆರಂಭವಾಗಲಿದೆ. ಆಡಿಷನ್ಗಳು ಇದೀಗ ಶುರುವಾಗಿದ್ದು, ಸ್ಥಳಕ್ಕೆ ಬರಲು ಸಾಧ್ಯವಾಗದ ಪ್ರತಿಭೆಗಳಿಗಾಗಿ ವಾಹಿನಿಯು ವಾಟ್ಸ್ಆ್ಯಪ್ ಹಾಗೂ ಆನ್ಲೈನ್ ಮೂಲಕ ಆಡಿಷನ್ ನೀಡುವ ವಿಶೇಷ ಅವಕಾಶವನ್ನು ಕಲ್ಪಿಸಿದೆ.
11:03 PM (IST) Feb 18
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಮೆಟ್ರೋ ರೈಲುಗಳಲ್ಲಿ ಸೀಲ್ ಆಗಿರುವ ಮದ್ಯದ ಬಾಟಲಿಗಳನ್ನು ಅನುಮತಿಸುವ ಬಗ್ಗೆ ಪರಿಗಣಿಸುತ್ತಿದೆ, ಅಧಿಕಾರಿಗಳು ದೆಹಲಿ ಮೆಟ್ರೋ ಮಾದರಿಯನ್ನು ಉಲ್ಲೇಖಿಸಿ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವ ಕುರಿತು ಚರ್ಚೆಗಳು ನಡೆಯುತ್ತಿವೆ.
10:44 PM (IST) Feb 18
09:09 PM (IST) Feb 18
ರಾಜ್ಯದ ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಪ್ರಾಥಮಿಕ ಹಂತದಲ್ಲಿ 26 ತಿಂಗಳ ಅರಿಯರ್ಸ್ ಪಾವತಿಸಲು ಆದೇಶಿಸಿದೆ. ಏಪ್ರಿಲ್ 2025 ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ ಸೂಚಿಸಿದ್ದು, ನೌಕರರು ನಡೆಸಲುದ್ದೇಶಿಸಿದ್ದ ಬೃಹತ್ ಪ್ರತಿಭಟನೆಗೆ ತಡೆ ಬಿದ್ದಿದೆ.
09:00 PM (IST) Feb 18
ರೈಲ್ವೆ ಇಲಾಖೆಯ ಆಕ್ಷೇಪದಿಂದಾಗಿ ಒಂದು ಸೂಪರ್ಹಿಟ್ ಸಿನಿಮಾದ ಹಾಡನ್ನೇ ಸಂಪೂರ್ಣವಾಗಿ ಬದಲಾಯಿಸಬೇಕಾಯ್ತು. ಸಿನಿಮಾ ಹಿಟ್ ಆದ್ಮೇಲೆ ರೈಲ್ವೆ ಇಲಾಖೆ ಚಿತ್ರತಂಡಕ್ಕೆ ಶಾಕ್ ಕೊಟ್ಟಿತ್ತು. ಏನಿದು ವಿವಾದ? ಈ ಫೋಟೋ ಸ್ಟೋರಿ ನೋಡಿ.
09:00 PM (IST) Feb 18
08:30 PM (IST) Feb 18
ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳ ಬಳಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ನಗರವು 'ಗಾರ್ಬೇಜ್ ಸಿಟಿ'ಯಾಗುವ ಭೀತಿ ಎದುರಿಸುತ್ತಿದೆ. ಈ ಕಸದ ಬಿಕ್ಕಟ್ಟು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದ್ದು, ಡಿ.ಕೆ. ಶಿವಕುಮಾರ್ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
07:49 PM (IST) Feb 18
ಮೊಬೈಲ್ ಗೀಳು ಬಿಡುವಂತೆ ಪೋಷಕರು ಮತ್ತು ಶಿಕ್ಷಕರು ನೀಡಿದ ಬುದ್ಧಿಮಾತಿಗೆ ಮನನೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕಾಲೇಜು ಕಟ್ಟಡದ ಮೇಲಿಂದ ಜಿಗಿದಿದ್ದಾನೆ. ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
07:22 PM (IST) Feb 18
ನಟಿ ರೇಖಾ ರತೀಶ್ ಅವರು ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಕೆಲವು ಯೂಟ್ಯೂಬ್ ಚಾನೆಲ್ಗಳ ವಿರುದ್ಧ ಮುಖ್ಯಮಂತ್ರಿ ಕಚೇರಿಗೆ ದೂರು ನೀಡಿದ್ದಾರೆ. ಈ ಸೈಬರ್ ದಾಳಿಯಿಂದ ತಮಗೂ ಮತ್ತು ತಮ್ಮ ಮಗನಿಗೂ ಆಗಿರುವ ಮಾನಸಿಕ ಹಿಂಸೆಯನ್ನು ವಿವರಿಸಿದ ಅವರು, ತಮ್ಮನ್ನು ಬದುಕಲು ಬಿಡುವಂತೆ ಮನವಿ ಮಾಡಿದ್ದಾರೆ.
07:03 PM (IST) Feb 18
06:48 PM (IST) Feb 18
ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಸಫಾರಿಯನ್ನು ಪುನಾರಂಭಿಸಲು ಸರ್ಕಾರ ನಿರ್ಧರಿಸಿದೆ. ತಾಂತ್ರಿಕ ಸಮಿತಿಯ ವರದಿಯ ಆಧಾರದ ಮೇಲೆ, ಶೇ.50ರಷ್ಟು ಸಾಮರ್ಥ್ಯದೊಂದಿಗೆ, ಕಡಿಮೆ ಅವಧಿ ಮತ್ತು ವಾಹನಗಳ ಸಂಖ್ಯೆಯೊಂದಿಗೆ ಸಫಾರಿಯನ್ನು ಹಂತ ಹಂತವಾಗಿ ಆರಂಭಿಸಲಾಗುತ್ತಿದೆ.
06:42 PM (IST) Feb 18
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶ್ಚಿಮ ವಲಯವು, ಮಲ್ಲೇಶ್ವರಂ ವ್ಯಾಪ್ತಿಯಲ್ಲಿ 1.14 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 71 ಆಸ್ತಿಗಳನ್ನು ಫೆಬ್ರವರಿ 21 ರಂದು ಬಹಿರಂಗ ಹರಾಜು ಹಾಕಲು ನಿರ್ಧರಿಸಿದೆ. ಹಲವು ಬಾರಿ ನೋಟಿಸ್ ನೀಡಿದರೂ ತೆರಿಗೆ ಪಾವತಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
06:27 PM (IST) Feb 18
ಸೂರಜ್ ರೇವಣ್ಣ ಅವರ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ತಮ್ಮನ್ನು ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿಂದೆ ಎಸ್ಐಟಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ತಿರಸ್ಕರಿಸಿ ಮರುತನಿಖೆಗೆ ಆದೇಶಿಸಿದ್ದ ನ್ಯಾಯಾಲಯ.
06:00 PM (IST) Feb 18
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಿಟಗಾನಹಳ್ಳಿ ಗ್ರಾಮದಲ್ಲಿ, ಪತ್ನಿಯೊಂದಿಗೆ ಸೋದರ ಮಾವನಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಅಳಿಯನೇ ಮಾವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಹೊಸಕೋಟೆಯಿಂದ ಬಂದಿದ್ದ ನಯಾಜ್ ಖಾನ್ ಎಂಬುವವರನ್ನು ಆರೋಪಿ ಶಾಹಿದ್ ಖಾನ್ ಕೊಲೆ ಮಾಡಿದ್ದಾನೆ.
05:54 PM (IST) Feb 18
ಕೇರಳದಲ್ಲಿ ಬಾರ್ಗಳ ಕಾರ್ಯನಿರ್ವಹಣೆ ಸಮಯವನ್ನು ಹೆಚ್ಚಿಸಿರುವ ಸರ್ಕಾರದ ನಿರ್ಧಾರದ ಹಿಂದೆ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಇದು ಎಡ ಮತ್ತು ಬಲಪಂಥೀಯ ರಂಗಗಳ ಒಳಒಪ್ಪಂದ, ಚುನಾವಣಾ ಫಂಡ್ ಸಂಗ್ರಹವೇ ಇದರ ಮುಖ್ಯ ಉದ್ದೇಶ ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.
05:16 PM (IST) Feb 18
05:03 PM (IST) Feb 18
04:48 PM (IST) Feb 18
ಭಾರತೀಯ ನೌಕಾ ಸೇನೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್ಯಾರ್ಡ್ಗೆ ಸಂಬಂಧಿಸಿದ ಈ ಜಾಲವು, ಹಡಗುಗಳ ರಹಸ್ಯ ವಿವರಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸೋರಿಕೆ ಮಾಡುತ್ತಿತ್ತು.
04:31 PM (IST) Feb 18
ಮಂಡ್ಯ ಶಾಸಕ ಗಣಿಗ ರವಿಕುಮಾರ್, ರಾಜ್ಯ ಕಾಂಗ್ರೆಸ್ನಲ್ಲಿನ ನಾಯಕತ್ವದ ಚರ್ಚೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹೈಕಮಾಂಡ್ ಕೂಡಲೇ ಸ್ಪಷ್ಟನೆ ನೀಡಬೇಕು, ಇಲ್ಲದಿದ್ದರೆ ಪಕ್ಷ ಮತ್ತು ಸರ್ಕಾರಕ್ಕೆ ಹಾನಿಯಾಗಲಿದೆ ಎಂದು ಎಚ್ಚರಿಸಿದ್ದಾರೆ.
04:00 PM (IST) Feb 18
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಕಳ್ಳತನದ ಉದ್ದೇಶದಿಂದ ವೃದ್ಧೆ ಗೀತಾ ಹುಂಡೇಕರ್ ಅವರನ್ನು ಹತ್ಯೆಗೈದಿದ್ದ ಪ್ರಕರಣದಲ್ಲಿ, ಶಿರಸಿ ಜಿಲ್ಲಾ ನ್ಯಾಯಾಲಯವು ಅಪರಾಧಿ ಅಭಿಜಿತ್ ಮಡಿವಾಳನಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
03:56 PM (IST) Feb 18
ನಟ ರವಿಚಂದ್ರನ್ ಅವರು ಇನ್ನೆರಡು ತಿಂಗಳಲ್ಲಿ ದರ್ಶನ್ ಜೈಲಿನಿಂದ ಹೊರಬರುತ್ತಾರೆ ಎಂದು ಹೇಳಿದ್ದಾರೆ. ಈ ಹೇಳಿಕೆಯಿಂದ ದರ್ಶನ್ ಅಭಿಮಾನಿಗಳು ಸಂತಸಗೊಂಡಿದ್ದರೂ, ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ 272 ಸಾಕ್ಷಿಗಳಿರುವುದರಿಂದ ಇದು ಅಷ್ಟು ಸುಲಭವಲ್ಲ ಎಂದು ಈ ಲೇಖನವು ವಿಶ್ಲೇಷಿಸುತ್ತದೆ.
03:53 PM (IST) Feb 18
02:02 PM (IST) Feb 18
ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು, ಈ ನಿರ್ಧಾರವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಜೆಡಿಎಸ್, ಸರ್ಕಾರದ ಈ ನಡೆಯನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಟೀಕಿಸಿದ್ದು, ಭ್ರಷ್ಟಾಚಾರ ಮುಚ್ಚಿಹಾಕುವ ಯತ್ನವೆಂದು ಆರೋಪಿಸಿದ್ದಾರೆ..
01:46 PM (IST) Feb 18
ಕೆಲಸದ ಮಧ್ಯೆ ಮಕ್ಕಳು ಕಾಟ ಕೊಟ್ಟರೆ ಅಥವಾ ಅಳುತ್ತಿದ್ದರೆ, ತಾಯಂದಿರು ಮೊಬೈಲ್ ಫೋನ್ ಕೈಗೆ ಕೊಡುತ್ತಾರೆ. ಹೀಗೆ ಪದೇ ಪದೇ ಮಾಡುವುದರಿಂದ, ಸೆಲ್ ಫೋನ್ ಮಕ್ಕಳಿಗೆ ಚಟವಾಗುವ ಅಪಾಯವಿದೆ. ಇದು ಮಕ್ಕಳಿಗೆ ಎಷ್ಟು ಅಪಾಯಕಾರಿ ಗೊತ್ತಾ?
01:43 PM (IST) Feb 18
ಬಳ್ಳಾರಿಯಲ್ಲಿ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಮಂಗಳಮುಖಿ ಸುಹಾಸಿನಿ ಮತ್ತು ಆಕೆಯ ಪ್ರಿಯಕರ ಶೇಖರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಹಾಸಿನಿಯನ್ನು ಕೊಲೆ ಮಾಡಿ ಶೇಖರ್ ಆತ್ಮ*ಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
01:20 PM (IST) Feb 18
01:08 PM (IST) Feb 18
01:07 PM (IST) Feb 18
12:27 PM (IST) Feb 18
'ನಾ ನಿನ್ನ ಬಿಡಲಾರೆ' ಧಾರಾವಾಹಿಯಲ್ಲಿ, ದೆವ್ವವಾಗಿರುವ ಅಂಬಿಕಾ, ಶರತ್ ಮತ್ತು ದುರ್ಗಾಳನ್ನು ಒಂದು ಮಾಡಲು ನಾನಾ ತಂತ್ರಗಳನ್ನು ಮಾಡುತ್ತಿದ್ದಾಳೆ. ಅವರಿಬ್ಬರು ಮಲಗಿದ್ದ ಕೋಣೆಗೆ ಬಂದು ಎಸಿ ತಾಪಮಾನ ಕಡಿಮೆ ಮಾಡಿ ಹತ್ತಿರ ತರುವ ಪ್ರಯತ್ನ ಮಾಡಿದ್ದಾಳೆ.
12:27 PM (IST) Feb 18
ಬೆಂಗಳೂರಿನಲ್ಲಿ ಆನ್ಲೈನ್ ಬಾಡಿಗೆ ಮನೆ ಹುಡುಕುವವರನ್ನು ಗುರಿಯಾಗಿಸಿ ಸೈಬರ್ ವಂಚಕರು ಎಐ ತಂತ್ರಜ್ಞಾನ ಬಳಸಿ ವಂಚಿಸುತ್ತಿದ್ದಾರೆ. ಐಷಾರಾಮಿ ಫ್ಲಾಟ್ಗಳ ನಕಲಿ ಫೋಟೋಗಳನ್ನು ಬಳಸಿ, ವಿಸಿಟರ್ ಪಾಸ್' ಹಾಗೂ ಅಡ್ವಾನ್ಸ್ ನೆಪದಲ್ಲಿ ಹಣ ಪಡೆದು ಮೋಸ ಮಾಡುತ್ತಿದ್ದು, ವೈದ್ಯೆಯೊಬ್ಬರು ಹಣ ಕಳೆದುಕೊಂಡಿದ್ದಾರೆ.
12:03 PM (IST) Feb 18
ಸಾಕು ಮಗ ಕರ್ಣನ ಮೇಲಿನ ಸಿಟ್ಟಿಗೆ ಅವನಪ್ಪ ರಮೇಶ ಮಾಡುತ್ತಿರುವ ಕುತಂತ್ರ ಒಂದೆರಡಲ್ಲ. ಇದೀಗ ಕರ್ಣನ ಮೇಲಿನ ಸಿಟ್ಟಿಗೆ ಎರಡು ಮಕ್ಕಳನ್ನು ಬಲಿ ತೆಗೆದಿದ್ದು, ನೆಟ್ಟಿಗರು ನಿರ್ದೇಶಕರಿಗೇ ಉಗೀತಾ ಇದ್ದಾರೆ.
11:49 AM (IST) Feb 18
11:49 AM (IST) Feb 18
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ! ಭದ್ರತೆಯ ನೆಪದಲ್ಲಿ DPAR ಹೊರಡಿಸಿದ ಹೊಸ ಆದೇಶದ ಹಿಂದಿನ ಅಸಲಿ ಕಾರಣವೇನು? ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳುವ ತಂತ್ರವೇ? ಪೂರ್ಣ ವಿವರ ತಿಳಿಯಿರಿ.
11:11 AM (IST) Feb 18
ಶಬರಿಮಲೆ ಯಾತ್ರೆ ಮುಗಿಸಿ ಚಾಮರಾಜನಗರಕ್ಕೆ ಹಿಂತಿರುಗುತ್ತಿದ್ದ ಕನ್ನಡಿಗ ಯಾತ್ರಿಗಳ ಮೇಲೆ ತಮಿಳುನಾಡಿನ ತೂತುಕುಡಿ ಬಳಿ ಸ್ಥಳೀಯರು ದೌರ್ಜನ್ಯ ಎಸಗಿದ್ದಾರೆ. ಯಾತ್ರಿಗಳ ವಾಹನಕ್ಕೆ ಕಟ್ಟಿದ್ದ ಕನ್ನಡ ಬಾವುಟವನ್ನು ತೆಗೆಯುವಂತೆ ಒತ್ತಾಯಿಸಿ ತಮಿಳಿಗರು ಪುಂಡಾಟ ಮೆರೆದಿದ್ದಾರೆ.
11:10 AM (IST) Feb 18
'ಬ್ರಹ್ಮಗಂಟು' ಧಾರಾವಾಹಿಯಲ್ಲಿ, ಒಂದಾದ ಚಿರು ಮತ್ತು ದೀಪಾ ಜೋಡಿಯನ್ನು ದೂರದ ಸಂಬಂಧಿಯ ಸಾವಿನ ಸೂತಕದ ಕಾರಣ ನೀಡಿ ಪ್ರತ್ಯೇಕವಾಗಿ ಮಲಗಿಸಲಾಗುತ್ತದೆ. ಈ ಅನಿರೀಕ್ಷಿತ ಬೇರ್ಪಡುವಿಕೆಯಿಂದ ವಿರಹ ವೇದನೆ ಅನುಭವಿಸುವ ದಂಪತಿ, ವಿಡಿಯೋ ಕಾಲ್ ಮೂಲಕ ತಮ್ಮ ಪ್ರೀತಿಯನ್ನು ಹಂಚಿಕೊಳ್ಳುತ್ತಾರೆ.
10:56 AM (IST) Feb 18
ಡಾಲಿ ಧನಂಜಯ್ ನಿರ್ಮಾಣದ 'JC: The University' ಚಿತ್ರದ ನಾಯಕ ನಟ ಪ್ರಖ್ಯಾತ್, ಚಿತ್ರಮಂದಿರದಲ್ಲಿ ಅಭಿಮಾನಿಯೊಬ್ಬ ನೀಡಿದ ಮಚ್ಚನ್ನು ಹಿಡಿದು ಪೋಸ್ ನೀಡಿದ್ದಾರೆ. ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಪೊಲೀಸರು ನಟನಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.
10:24 AM (IST) Feb 18
09:55 AM (IST) Feb 18
09:43 AM (IST) Feb 18
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಂಗಳೂರಿಗೆ ಭೇಟಿ ನೀಡಿ, ನಗರ ಪೊಲೀಸ್ ಸಿಬ್ಬಂದಿಗೆ ಮುಂದಿನ ವರ್ಷದೊಳಗೆ 100 ಹೊಸ ವಸತಿಗೃಹಗಳನ್ನು ಮಂಜೂರು ಭರವಸೆ ನೀಡಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಮತ್ತು ನಗರದ ಜಿಲ್ಲಾ ಕಾರಾಗೃಹವನ್ನು ಶೀಘ್ರದಲ್ಲೇ ಸ್ಥಳಾಂತರಿಸುವ ಬಗ್ಗೆಯೂ ಮಾತನಾಡಿದರು.
09:21 AM (IST) Feb 18
ಪ್ರೇಮಿಗಳ ದಿನದ ಪ್ರಯುಕ್ತ ಬೆಂಗಳೂರಿನಿಂದ 6 ಕೋಟಿ ಗುಲಾಬಿ ಹೂವುಗಳನ್ನು ದೇಶ-ವಿದೇಶಗಳಿಗೆ ರಫ್ತು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ನಡೆದ ಈ ಬೃಹತ್ ರಫ್ತು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.38ರಷ್ಟು ಹೆಚ್ಚಳ. ಸಿಂಗಾಪುರ, ಲಂಡನ್, ದೆಹಲಿ, ಕೋಲ್ಕತಾದಂತಹ ನಗರಗಳಿಗೆ ಹೂವುಗಳು ಪೂರೈಕೆ