LIVE NOW
Published : Jun 18, 2026, 06:52 AM ISTUpdated : Jun 18, 2026, 10:42 AM IST

Karnataka News Live: ಕಲಬುರಗಿ - ನಿವೃತ್ತ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ. ಬ್ಯಾಂಕ್ ಲಾಕರ್‌ನಲ್ಲಿ ₹9 ಲಕ್ಷ ಹಳೆಯ ನೋಟು, 20 ತೊಲೆ ಚಿನ್ನ ಪತ್ತೆ!

ಸಾರಾಂಶ

ಬೆಂಗಳೂರು: ‘ನಾವೇನು ಆಪರೇಷನ್‌ ಮಾಡೋದು? ನಮ್ಮದು ಸಣ್ಣ ಪಕ್ಷ. ಮ್ಯಾನ್‌ ಪವರ್‌, ಮಸಲ್‌ ಪವರ್‌, ಮನಿ ಪವರ್‌ ಇರುವವರ ಎದುರು ನಾವು ಫೈಟ್‌ ಮಾಡಲು ಆಗುತ್ತಾ’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. 

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಕೈಯಲ್ಲಿ ಏನಾಗುತ್ತೆ? ಸರ್ಕಾರ ಅವರ ಕೈಯಲ್ಲಿದೆ. ನಮ್ಮ ಕೈಯಲ್ಲಿ ಏನಿದೆ? ನಾವು ನಮ್ಮ ಪಕ್ಷದ ಮತಗಳು ಚೆಲ್ಲಾಪಿಲ್ಲಿ ಆಗದೆ ಒಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭ್ಯರ್ಥಿ ಹಾಕಿದ್ದೇವೆ. ಕುತಂತ್ರ ಮಾಡಿ ಗೆಲ್ಲಬೇಕು ಎಂಬ ಪ್ರಶ್ನೆ ಇಲ್ಲ. ನಮ್ಮ ಅಭ್ಯರ್ಥಿ ಅರ್ಜಿ ಹಾಕುವಾಗ ಆತ್ಮಸಾಕ್ಷಿಗೆ ಅನುಗುಣವಾಗಿ ನನಗೆ ಮತ ಕೊಡಿ ಎಂದು ಕೇಳಿದ್ದಾರೆ ಎಂದರು. ನಮ್ಮ ಮತಗಳ ಜೊತೆಗೆ ಹೆಚ್ಚುವರಿ ಮತ ನಮಗೆ ಕೊಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇವೆ. ನಮ್ಮ ಮತ ಭದ್ರವಾಗಿಸಲು ನಾವು ಅಭ್ಯರ್ಥಿ ಹಾಕಿದ್ದೇವೆ ಎಂದು ಹೇಳಿದರು.

ಒಂದು ವೇಳೆ ಕಾಂಗ್ರೆಸ್‌ನಿಂದ ಅಡ್ಡಮತದಾನವಾಗಿ ನಮ್ಮ ಅಭ್ಯರ್ಥಿ ಗೆದ್ದರೆ, ಸರ್ಕಾರವನ್ನು ಬಿಗಿ ಮಾಡಲು ನಮಗೆ ಅನುಕೂಲವಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

10:42 AM (IST) Jun 18

ಕಲಬುರಗಿ - ನಿವೃತ್ತ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ. ಬ್ಯಾಂಕ್ ಲಾಕರ್‌ನಲ್ಲಿ ₹9 ಲಕ್ಷ ಹಳೆಯ ನೋಟು, 20 ತೊಲೆ ಚಿನ್ನ ಪತ್ತೆ!

ಕಲಬುರಗಿಯಲ್ಲಿ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ನಿವೃತ್ತ ಇಂಜಿನಿಯರ್ ಮಾಣಿಕ್ ಕನಕಟ್ಟೆ ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅವರ ಬ್ಯಾಂಕ್ ಲಾಕರ್ ಪರಿಶೀಲಿಸಿದಾಗ, ನಿಷೇಧಿತ ₹1000 ಮುಖಬೆಲೆಯ ಹಳೆಯ ನೋಟುಗಳು ಮತ್ತು 20 ತೊಲೆಗೂ ಅಧಿಕ ಚಿನ್ನಾಭರಣಗಳು ಪತ್ತೆಯಾಗಿವೆ.
Read Full Story

10:40 AM (IST) Jun 18

MLC Election - ಕಾಂಗ್ರೆಸ್‌ ನಿಂದ ಬಹುದೊಡ್ಡ ಆಫರ್; ಅಡ್ಡಮತದಾನ ಮಾಡಿದ್ರಾ ಮೂವರು?

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದ ಸುಳಿವು ಸಿಕ್ಕಿದ್ದು, ಬಿಜೆಪಿಯಿಂದ ಉಚ್ಚಾಟಿತ ಶಾಸಕರಾದ ಎಸ್‌.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರು ಕಾಂಗ್ರೆಸ್ ಪರ ಮತ ಚಲಾಯಿಸುವ ಸಾಧ್ಯತೆಯಿದೆ. ಇತ್ತ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರೂ ಪ್ರತ್ಯೇಕವಾಗಿ ಮತ ಚಲಾಯಿಸಿ ಕುತೂಹಲ ಮೂಡಿಸಿದ್ದಾರೆ.
Read Full Story

10:13 AM (IST) Jun 18

RSS Registration row - ಆರ್‌ಎಸ್‌ಎಸ್‌ ನೋಂದಣಿ ಕಡ್ಡಾಯ ಅಲ್ಲ; ಕುಟುಂಬ ರಾಜಕಾರಣದ ವ್ಯಕ್ತಿಯಿಂದ ಸಂಘಕ್ಕೆ ಪ್ರಮಾಣ ಪತ್ರ ಬೇಕಿಲ್ಲ

ಪ್ರಿಯಾಂಕ್‌ ಖರ್ಗೆ ಅವರು ಕರ್ನಾಟಕ ಸರ್ಕಾರದಲ್ಲಿ ಸಚಿವರಾಗಿರಬಹುದು. ಆದರೆ ಆ ಹುದ್ದೆಯು ಅವರಿಗೆ ಕೇವಲ ಕಾನೂನು ಮಾನ್ಯ ಮಾಡಿದ ಕಾರ್ಯಕಾರಿ ಅಧಿಕಾರಗಳನ್ನಷ್ಟೇ ನೀಡುತ್ತದೆಯೇ ಹೊರತು ಯಾವುದೇ ನಾಗರಿಕ, ಸಂಘಟನೆಯನ್ನು ಕರೆಸಿ ತನ್ನ ವೈಯಕ್ತಿಕ ಇಚ್ಛೆಗನುಸಾರವಾಗಿ ಬದಲಾವಣೆಗೆ ಸೂಚಿಸುವ ಅಧಿಕಾರವನ್ನಲ್ಲ.

 

Read Full Story

09:42 AM (IST) Jun 18

5 ವರ್ಷದಲ್ಲಿ ಶಿರಸಿ ಮಾರಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರಕ್ಕೆ 10 ಕೋಟಿ ರೂಪಾಯಿ ಖರ್ಚು

ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಯು ಕಳೆದ ಐದು ವರ್ಷಗಳಲ್ಲಿ ₹10 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾರ್ಯಗಳನ್ನು ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ಭಕ್ತರ ಸೌಕರ್ಯಗಳು ಮತ್ತು ದೇವಾಲಯದ ಅಭಿವೃದ್ಧಿಗಾಗಿ ಗರ್ಭಗುಡಿಯ ಗ್ರಾನೈಟ್ ಅಳವಡಿಕೆ, ವಾಣಿಜ್ಯ ಮಳಿಗೆ, ಶೌಚಾಲಯ ಸೇರಿದಂತೆ ಒಟ್ಟು 28 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷ ಆರ್.ಜಿ. ನಾಯ್ಕ ಮಾಹಿತಿ ನೀಡಿದ್ದಾರೆ.
Read Full Story

09:35 AM (IST) Jun 18

Actress Roopika Marriage - ಲಕ್ಷ್ಮೀ ನಿವಾಸ ಧಾರಾವಾಹಿ ನಟಿ ರೂಪಿಕಾ ಲಗ್ನಪತ್ರಿಕೆ ಶಾಸ್ತ್ರ ಆಯ್ತು!

Lakshmi Nivasa Serial Kannada: ಲಕ್ಷ್ಮೀ ನಿವಾಸ ಧಾರಾವಾಹಿ ನಟಿ ರೂಪಿಕಾ ಅವರು ಮದುವೆಗೆ ರೆಡಿಯಾಗಿದ್ದಾರೆ. ಈ ವಿಷಯವನ್ನು ಅವರೇ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ. ಹಾಗಾದರೆ ಹುಡುಗ ಯಾರು? ಏನು ಮಾಡುತ್ತಿದ್ದಾರೆ?

 

Read Full Story

09:22 AM (IST) Jun 18

ರಾಯಚೂರು ಜಿಲ್ಲೆಯ 29 ಗ್ರಾಮಗಳಲ್ಲಿ ಮೊಹರಂ ಆಚರಣೆ ನಿಷೇಧ - ಜಿಲ್ಲಾಧಿಕಾರಿಗಳಿಂದ ಆದೇಶ

ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರಾಯಚೂರು ಜಿಲ್ಲೆಯ  29 ಗ್ರಾಮಗಳಲ್ಲಿ ಮೊಹರಂ ಹಬ್ಬದ ಸಾರ್ವಜನಿಕ ಆಚರಣೆ ಮತ್ತು ಮೆರವಣಿಗೆಯನ್ನು ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ಕರ್ನಾಟಕ ಪೋಲೀಸ್ ಕಾಯ್ದೆ 1963ರ ಅಡಿಯಲ್ಲಿ ಈ ಆದೇಶವನ್ನು ಹೊರಡಿಸಿದ್ದಾರೆ.

Read Full Story

08:45 AM (IST) Jun 18

ಪುಲಸಾನಿಒಡ್ಡು ಗ್ರಾಮದಲ್ಲಿ ಅಪರೂಪದ ವೀರರಗುಡಿ ಪತ್ತೆ; ರಾಜರ ಬೇಟೆಯ ಪರಾಕ್ರಮ ಅನಾವರಣ

ಪುಲಸಾನಿಒಡ್ಡು ಗ್ರಾಮದಲ್ಲಿ ಪುರಾತತ್ವ ಸರ್ವೇಕ್ಷಣೆ ವೇಳೆ ವಿಜಯನಗರ ಶೈಲಿಯ ಅಪರೂಪದ ವೀರರಗುಡಿಯೊಂದು ಪತ್ತೆಯಾಗಿದೆ. ಈ ದೇವಾಲಯವು ಬೇಟೆಗೆ ಸಂಬಂಧಿಸಿದ ವೀರಗಲ್ಲುಗಳನ್ನು ಹೊಂದಿದ್ದು, 16-17ನೇ ಶತಮಾನದ ಇತಿಹಾಸ ಮತ್ತು ಅಂದಿನ ರಾಜರ ಬೇಟೆಯ ಪರಾಕ್ರಮವನ್ನು ಅನಾವರಣಗೊಳಿಸುತ್ತದೆ.

Read Full Story

08:35 AM (IST) Jun 18

RSS Registration issue - ಖಾಸಗಿ ಸಂಘ-ಸಂಸ್ಥೆಗಳ ನೋಂದಣಿ ಕಡ್ಡಾಯವಲ್ಲ! | ಡಾ।। ಅರುಣ ಶ್ಯಾಮ್ ಲೇಖನ

ಭಾರತೀಯ ಸಂವಿಧಾನವು ಸಂಘ-ಸಂಸ್ಥೆಗಳನ್ನು ಸ್ಥಾಪಿಸುವ ಮೂಲಭೂತ ಹಕ್ಕನ್ನು ನೀಡಿದೆ. ಈ ಸಂಸ್ಥೆಗಳ ನೋಂದಣಿಯು ಕಡ್ಡಾಯವಲ್ಲ, ಬದಲಾಗಿ ಐಚ್ಛಿಕವಾಗಿದ್ದು, ಸರ್ಕಾರಿ ಸವಲತ್ತುಗಳು ಮತ್ತು ಕಾನೂನಾತ್ಮಕ ವ್ಯಕ್ತಿತ್ವ ಪಡೆಯಲು ಮಾತ್ರ ನೋಂದಣಿ ಅವಶ್ಯಕವಾಗಿದೆ.
Read Full Story

07:42 AM (IST) Jun 18

ಹಾಸನ ನಗರದ ರೈಲ್ವೆ ಸೇತುವೆ ಎರಡೂ ಬದಿ ಸಂಚಾರ ಯಾವಾಗ? ಸಂಸದ ಶ್ರೇಯಸ್ ಪಟೇಲ್ ಮಹತ್ವದ ಘೋಷಣೆ

ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿಯು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದ್ದಾರೆ. ಜೊತೆಗೆ, ಗೃಹಲಕ್ಷ್ಮೀ ಯೋಜನೆಯು ಸ್ಥಗಿತಗೊಳ್ಳುವುದಿಲ್ಲ, ಬದಲಿಗೆ ಪರಿಷ್ಕರಣೆಗಾಗಿ ಮರು-ನೋಂದಣಿ ಅಗತ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

07:24 AM (IST) Jun 18

ಆರ್‌ಎಸ್‌ಎಸ್‌ನ ಲೆಕ್ಕ ಕೇಳಿದ ಬೆನ್ನಲ್ಲೇ ಖರ್ಗೆ ಕುಟುಂಬದ ಆಸ್ತಿ ಕೆದಕಿದ ಎಂಪಿ ರೇಣುಕಾಚಾರ್ಯ!

ಆರೆಸ್ಸೆಸ್ ಟೀಕಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ, ಭದ್ರಾ ಡ್ಯಾಂ ಬಳಿ ಜಿಲೆಟಿನ್ ಬಳಸಿ ಏಕಶಿಲೆ ಸ್ಫೋಟಿಸುತ್ತಿರುವುದು ಡ್ಯಾಂನ ಸುರಕ್ಷತೆಗೆ ಅಪಾಯ ತಂದೊಡ್ಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Read Full Story

07:13 AM (IST) Jun 18

ಮದುವೆಯಲ್ಲಿ ಇನ್ಮುಂದೆ ತಡರಾತ್ರಿವರೆಗೆ ಬ್ಯಾಂಡ್, ಬೆಂಜೊ ಸದ್ದಿಲ್ಲ; ಹೊಸ ನಿಯಮಗಳು

ಮದುವೆ ಸಮಾರಂಭಗಳಲ್ಲಿ ತಡರಾತ್ರಿವರೆಗೆ ವಾದ್ಯ ನುಡಿಸುವುದನ್ನು ಮತ್ತು ಮದುವೆಗೆ ಒಂದು ದಿನ ಮುಂಚಿತವಾಗಿ ಸೇವೆ ನೀಡುವುದನ್ನು ನಿಲ್ಲಿಸಲು ನಿರ್ಧರಿಸಿದೆ. ಇನ್ನು ಮುಂದೆ, ಮದುವೆ ದಿನದಂದು ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆ ಲಭ್ಯವಿರಲಿದೆ. 

Read Full Story

More Trending News