ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಉಸ್ತುವಾರಿಯ ಕಲಬುರಗಿಯಲ್ಲೇ ಜಿಲ್ಲಾಡಳಿತ, ಜನನಾಯಕರು ಸಭೆ ನಡೆಸಿ ಟನ್ ಕಬ್ಬಿಗೆ ಸರ್ಕಾರದ ದರ ₹3300 ನೀಡಲು ಇಲ್ಲಿರುವ ಕಲಬುರಗಿ ಹಾಗೂ ಯಾದಗಿರಿಯ 6 ಸಕ್ಕರೆ ಕಾರ್ಖಾನೆಗಳವರು ಒಪ್ಪುತ್ತಿಲ್ಲ. ಕಬ್ಬಿಗೆ ದರ ನಿಗದಿಪಡಿಸೋ ವಿಚಾರದಲ್ಲಿ ರೈತರಿಗೆ ಟನ್ ಕಬ್ಬಿಗೆ ₹3160 ನೀಡುವುದಾಗಿ ಮುಂಚೆ ಹೇಳಿದ್ದ ಅಫಜಲ್ಪುರ ತಾಲೂಕಿನ ಚಿಣಮಗೇರಿ ಬಳಿಯ ಕೆಪಿಆರ್ ಕಾರ್ಖಾನೆ ಇದೀಗ ತಾನೂ ಈ ದರ ನೀಡಲಾಗದು. ಟನ್ಗೆ 3000 ನೀಡುವುದಾಗಿ ಹೇಳಿದೆ. ರೈತರು ಅಫಜಲ್ಪುರದಲ್ಲಿ 7 ದಿನ ನಡೆಸಿದ ಹೋರಾಟದ ಫಲವಾಗಿ ₹3160 ನಿಗದಿಪಡಿಸಿದ್ದ ಕಾರ್ಖಾನೆ ಇದೀಗ ತನ್ನ ನಿಲುವಿಗೆ ಉಲ್ಟಾ ಹೊಡೆದಿರೋದು ಇಲ್ಲಿನ ರೈತರನ್ನು ಕೆರಳಿಸಿದೆ.

10:23 PM (IST) Nov 18
ಬಿಗ್ಬಾಸ್ ಮನೆಯಲ್ಲಿ ಟಾಸ್ಕ್ವೊಂದರ ವೇಳೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಟನ ನಡುವೆ ತೀವ್ರ ಜಗಳ ನಡೆದಿದೆ. ಗಿಲ್ಲಿ ನಟನ ಮಾತುಗಳಿಂದ ನೊಂದ ಅಶ್ವಿನಿ, ತನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಣ್ಣೀರು ಹಾಕಿದ್ದಾರೆ. ಈ ಘಟನೆಯು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
10:23 PM (IST) Nov 18
10:04 PM (IST) Nov 18
09:49 PM (IST) Nov 18
09:29 PM (IST) Nov 18
09:29 PM (IST) Nov 18
ಬಿಗ್ ಬಾಸ್ನಲ್ಲಿ ಗಿಲ್ಲಿ ಮಹಿಳೆಯೆರಿಗೆ ಮಾಡಿದ್ರೂ ಕಿಚ್ಚ ಪ್ರಶ್ನೆ ಮಾಡಿಲ್ಲ, ಎಚ್ಚರಿಕೆ ಕೊಟ್ಟ ದೂರುದಾರೆ , ಗಿಲ್ಲಿ ತಮಾಷೆಗಳು ನಗು ಬರುತ್ತಿಲ್ಲ, ಅಗೌರವಗಳನ್ನು ಸಹಿಸಲು ಸಾಧ್ಯವಿಲ್ಲ. ಆಗಲ್ಲ ಅಂದರೆ ಶೋ ಬಂದ್ ಮಾಡಿ ಎಂದು ಕಲಾವಿದೆ ಕುಶಲ ಹೇಳಿದ್ದಾರೆ.
09:16 PM (IST) Nov 18
09:03 PM (IST) Nov 18
ಈ ಬಾರಿಯ ಬಿಗ್ಬಾಸ್ ಮನೆಯಲ್ಲಿ ಸೂರಜ್-ರಾಶಿಕಾ ಮತ್ತು ಗಿಲ್ಲಿ ನಟ-ಕಾವ್ಯಾ ನಡುವೆ ಪ್ರೀತಿ ಮೊಳಕೆಯೊಡೆದಿದೆ. ಆದರೆ, ಹುಡುಗಿಯರು ಕೆಲವೊಮ್ಮೆ ಪ್ರೇಮಿಗಳಂತೆ ಮತ್ತು ಕೆಲವೊಮ್ಮೆ 'ಅಣ್ಣ' ಎಂದು ಕರೆಯುತ್ತಿರುವುದು ವೀಕ್ಷಕರನ್ನು ಗೊಂದಲಕ್ಕೀಡುಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ.
08:47 PM (IST) Nov 18
ಕೋಣೆಯಲ್ಲಿ ಮಲಗಿದ್ದ ಮೂವರು ಉಸಿರುಗಟ್ಟಿ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ, ಚಳಿ ಕಾರಣ ಕಿಟಕಿ, ಬಾಗಿಲು ಎಲ್ಲಾ ಮುಚ್ಚಿ ಮಲಗಿದ್ದಾರೆ. ಬೆಚ್ಚಗಿರಲು ಇದ್ದಿಲು ಬೆಂಕಿ ಇಟ್ಟು ಮಲಗಿದ್ದಾರೆ. ಪರಿಣಾಮ ಘೋರ ದುರಂತವೇ ನಡೆದುಹೋಗಿದೆ.
07:27 PM (IST) Nov 18
ತುಮಕೂರು ಪ್ರವಾಸದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಯರ ರಕ್ಷಣೆಗಾಗಿ 'ಅಕ್ಕ ಪಡೆ' ಎಂಬ ಹೊಸ ಪಡೆಯನ್ನು ಘೋಷಿಸಿದ್ದಾರೆ. ಇದರೊಂದಿಗೆ, ಅಂಗನವಾಡಿಗಳ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆ ಮತ್ತು ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ.
07:05 PM (IST) Nov 18
'ಜವಾನ್' ಖ್ಯಾತಿಯ ನಟಿ ಗಿರಿಜಾ ಓಕ್, ಪಾಡ್ಕಾಸ್ಟ್ವೊಂದರಲ್ಲಿ ಕಾಣಿಸಿಕೊಂಡ ಬಳಿಕ 'ನ್ಯಾಷನಲ್ ಕ್ರಶ್' ಆಗಿ ಹೊರಹೊಮ್ಮಿದ್ದಾರೆ. ಇದೇ ಸಂದರ್ಶನದಲ್ಲಿ, ಅವರು ತಮ್ಮ ಬಾಲ್ಯದಲ್ಲಿ ಮುಂಬೈ ಲೋಕಲ್ ರೈಲಿನಲ್ಲಿ ಅಪರಿಚಿತನೊಬ್ಬ ತನ್ನನ್ನು ಅಸಭ್ಯವಾಗಿ ಸ್ಪರ್ಶಿಸಿ ಪರಾರಿಯಾದ ಘಟನೆಯನ್ನು ಹಂಚಿಕೊಂಡಿದ್ದಾರೆ.
05:53 PM (IST) Nov 18
ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬೀದರ್ ಮೂಲದ 80 ವರ್ಷದ ರಹಮತ್ ಬಿ ಮೃತಪಟ್ಟಿದ್ದಾರೆ. ಮೆಕ್ಕಾ-ಮದೀನಾ ಯಾತ್ರೆಗೆ ತೆರಳಿದ್ದಾಗ ಈ ದುರಂತ ಸಂಭವಿಸಿದ್ದು, ಮೃತದೇಹವನ್ನು ಗುರುತಿಸಲು ಮತ್ತು ತಾಯ್ನಾಡಿಗೆ ತರಲು ಕುಟುಂಬಸ್ಥರು ಕಾಯುತ್ತಿದ್ದಾರೆ.
05:43 PM (IST) Nov 18
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ, ವಿಚಾರಣಾ ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 2 ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚಿಸಲಾಗಿದೆ.
05:35 PM (IST) Nov 18
Karnataka weather update today: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಾತ್ರಿಯ ತಾಪಮಾನ ಸಾಮಾನ್ಯಕ್ಕಿಂತ ಕುಸಿದಿದ್ದು, ಶೀತಗಾಳಿ ಬೀಸುತ್ತಿದೆ. ತಾಪಮಾನವೂ ರೋಮ್ಯಾಂಟಿಕ್ ಚಿಲ್ಲಿಂಗ್ ವಾತಾವರಣವನ್ನು ಸೃಷ್ಟಿಸಿದ್ದು, ಜನ ಮನೆಯಿಂದ ಹೊರಬರಲು ಯೋಚಿಸ್ತಿದ್ದಾರೆ..
04:01 PM (IST) Nov 18
ಕರ್ನಾಟಕ ಸರ್ಕಾರವು ರಾಜ್ಯದ ಡಿಜಿಟಲ್ ಅಂತರವನ್ನು ಕಡಿಮೆ ಮಾಡಲು, ಸಂಪೂರ್ಣವಾಗಿ ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಕೈಗೆಟುಕುವ, AI-ಸಿದ್ಧ ವೈಯಕ್ತಿಕ ಕಂಪ್ಯೂಟರ್ 'KEO' ಅನ್ನು ಅನಾವರಣಗೊಳಿಸಿದೆ.
03:45 PM (IST) Nov 18
ಬೆಳಗಾವಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು ಮುಂದುವರಿದಿದ್ದು, ಮೃತರ ಸಂಖ್ಯೆ 31ಕ್ಕೆ ಏರಿದೆ. ರಾಷ್ಟ್ರೀಯ ಸಂಸ್ಥೆಯೊಂದು ಮೂರು ತಿಂಗಳ ಹಿಂದೆಯೇ ಸಾಂಕ್ರಾಮಿಕ ರೋಗದ ಬಗ್ಗೆ ಎಚ್ಚರಿಕೆ ನೀಡಿದ್ದರೂ, ಸಂಬಂಧಿತ ಇಲಾಖೆಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ.
03:27 PM (IST) Nov 18
02:50 PM (IST) Nov 18
ಪಾಕಿಸ್ತಾನದ ಜಿಡಿಪಿ ಬೆಂಗಳೂರು ರಸ್ತೆಯಲ್ಲಿ, 10ಕ್ಕೂ ಹೆಚ್ಚು ರೋಲ್ಸ್ ರಾಯ್ಸ್ ಕಾನ್ವೊಯ್ ವಿಡಿಯೋ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಭಾರತದ ರಸ್ತೆಯಲ್ಲಿ ನೋಡಿದ ಅತ್ಯಂತ ರಾಯಲ್ ಸಂಚಾರ ಇದು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
02:41 PM (IST) Nov 18
ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿಯವರು, ಪ್ರಿಯಾಂಕ್ ಖರ್ಗೆಯವರು ಈ ಜನ್ಮದಲ್ಲಿ ಆರೆಸ್ಸೆಸ್ ನಿಷೇಧಿಸಲು ಸಾಧ್ಯವಿಲ್ಲ ಎಂದರು. ಭಯೋತ್ಪಾದಕರನ್ನು ಹುತಾತ್ಮರು ಎನ್ನುವುದನ್ನು ಖಂಡಿಸಿದ ಅವರು, ಬೆಂಗಳೂರು ಮೆಟ್ರೋ ಬಾಂಬ್ ಬೆದರಿಕೆಗೆ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವೇ ಕಾರಣ ಎಂದರು.
02:01 PM (IST) Nov 18
ದೇಶದೆಲ್ಲೆಡೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ಟಿಟಿಡಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ತುಪ್ಪವನ್ನು ಕೇಳಿದೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತುಪ್ಪದ ಉತ್ಪಾದನೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು.
01:41 PM (IST) Nov 18
01:41 PM (IST) Nov 18
ಬಿಗ್ ಬಾಸ್ ಮನೆಯಲ್ಲಿ ಎಷ್ಟೋ ಜನರು ಲವ್ನಲ್ಲಿ ಬಿದ್ದು, ಬ್ರೇಕಪ್ ಮಾಡಿಕೊಂಡಿದ್ದೂ ಇದೆ. ಆ ಮನೆಯಲ್ಲಿ ಲವ್ ಹುಟ್ಟಿ, ಆ ಮನೆಯಲ್ಲಿ ಲವ್ ಮುರಿದಿದ್ದೂ ಇದೆ. ಎಷ್ಟೋ ಸ್ಪರ್ಧಿಗಳ ಮಧ್ಯೆ ಲವ್ ಮಾಡಿ, ಡಿವೋರ್ಸ್ ಮಾಡಿಕೊಂಡಿದ್ದೂ ಇದೆ. ಡಿವೋರ್ಸ್ ತಗೋಬೇಕಿದ್ದ ಜೋಡಿಯೊಂದು, ಈ ಮನೆಗೆ ಬಂದು ಒಂದಾಗಿದೆ.
01:20 PM (IST) Nov 18
ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ರಾಜಾಜಿನಗರ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ 50ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರೋದಿಲ್ಲ.
01:18 PM (IST) Nov 18
12:58 PM (IST) Nov 18
ಮಕ್ಕಳ ಶಿಕ್ಷಣ ಮತ್ತು ಉಜ್ವಲ ಭವಿಷ್ಯಕ್ಕಾಗಿ ಆರ್ಥಿಕ ಭದ್ರತೆ ಒದಗಿಸುವ ಐದು ಪ್ರಮುಖ ದೀರ್ಘಾವಧಿ ಹೂಡಿಕೆ ಯೋಜನೆಗಳನ್ನು ಈ ಲೇಖನ ವಿವರಿಸುತ್ತದೆ. ಇದರಲ್ಲಿ ಸರ್ಕಾರಿ ಬೆಂಬಲಿತ ಸುಕನ್ಯಾ ಸಮೃದ್ಧಿ ಯೋಜನೆಯಿಂದ ಹಿಡಿದು, ಮಾರುಕಟ್ಟೆ ಆಧಾರಿತ ಮ್ಯೂಚುವಲ್ ಫಂಡ್ಗಳವರೆಗಿನ ಆಯ್ಕೆಗಳ ಬಗ್ಗೆ ಮಾಹಿತಿ ಇಲ್ಲಿದೆ.
12:31 PM (IST) Nov 18
ವಿಶ್ವಪ್ರಸಿದ್ಧ ಮೈಸೂರು ರೇಷ್ಮೆಯ ತವರಾದ ಮೈಸೂರಿನಲ್ಲಿ ದೇಶದ ಮೊದಲ ರೇಷ್ಮೆ ವಸ್ತುಸಂಗ್ರಹಾಲಯ ಸ್ಥಾಪನೆಯಾಗಲಿದೆ. ಈ ಸಂಗ್ರಹಾಲಯವು ಟಿಪ್ಪು ಸುಲ್ತಾನನ ಕಾಲದಿಂದ ಇಂದಿನವರೆಗಿನ ರೇಷ್ಮೆಯ ಇತಿಹಾಸ, ರೇಷ್ಮೆ ಗೂಡಿನಿಂದ ಬಟ್ಟೆಯಾಗುವವರೆಗಿನ ಪಯಣವನ್ನು ಪ್ರದರ್ಶಿಸಲಿದೆ.
12:25 PM (IST) Nov 18
non-veg in swiggy veg order: ಬೆಂಗಳೂರಿನ ಮಹಿಳೆಯೊಬ್ಬರು ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ ಸಸ್ಯಾಹಾರಿ ಸ್ಯಾಂಡ್ವಿಚ್ನಲ್ಲಿ ಸೀಗಡಿ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಹಕರ ನ್ಯಾಯಾಲಯದ ಮೊರೆ ಹೋಗಿ ಕೇಸು ಗೆದ್ದಿದ್ದಾರೆ. ಅವರಿಗೆ 1 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
12:22 PM (IST) Nov 18
Bigg Boss Kannada Season 12: ತೋಟಕೆ ಹೋಗೋ ತಿಮ್ಮ, ತೋಳ ಬಂದೀತಮ್ಮ, ಊಟಕೆ ಬಾರೋ ತಿಮ್ಮ, ಓಡಿ ಬಂದೆನಮ್ಮ ಎಂಬ ಶಿಶುಗೀತೆಯೇ ಇದೆ. ಇದಕ್ಕೆ ತಕ್ಕಂತೆ ಮನೆಯಲ್ಲಿ ಯಾರಿದ್ದಾರೆ ಎಂದು ಬಿಗ್ ಬಾಸ್ ಪ್ರಶ್ನೆ ಮಾಡಿದ್ದರು. ಅದಕ್ಕೆ ಎಲ್ಲರೂ ಒಮ್ಮತದಿಂದ ಗಿಲ್ಲಿ ನಟನ ಹೆಸರು ಹೇಳಿದ್ದಾರೆ.
12:20 PM (IST) Nov 18
ಖ್ಯಾತ ನಟಿ ರಮ್ಯಾ ಅವರು ಶಿವರಾಜ್ ಕುಮಾರ್ ದಂಪತಿಯನ್ನು ನೋಡಿ ತಮ್ಮ ಅಭಿಪ್ರಾಯವನ್ನು ಬದಲಿಸಿಕೊಂಡಿದ್ದಾರೆ. ಇದೇ ವೇಳೆ ಅವರು, ತಮ್ಮ ಕಂಬ್ಯಾಕ್ ಸಿನಿಮಾ ಕೂಡ ಶಿವಣ್ಣನ ಜೊತೆಗೇ ಇರಲಿದೆ ಎಂಬ ಸುಳಿವು ನೀಡಿದ್ದಾರೆ.
12:02 PM (IST) Nov 18
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿರುವ ಬಿವೈ ವಿಜಯೇಂದ್ರ, ಹೈಕಮಾಂಡ್ ಸೂಚನೆಯಂತೆ ಹಿರಿಯ ನಾಯಕರ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಆಂತರಿಕ ಅಸಮಾಧಾನ ಶಮನಗೊಳಿಸಿ, ಮುಂಬರುವ ಚುನಾವಣೆಗೆ ಪಕ್ಷವನ್ನು ಒಗ್ಗೂಡಿಸುವ ಪ್ರಯತ್ನವಾಗಿ ಅವರು ಪ್ರಮುಖ ನಾಯಕರ ನಿವಾಸಗಳಿಗೆ ಭೇಟಿ ನೀಡುತ್ತಿದ್ದಾರೆ.
11:10 AM (IST) Nov 18
Bangalore Metro Saves Life Again: ಬೆಂಗಳೂರಿನ ತೀವ್ರ ಸಂಚಾರ ದಟ್ಟಣೆಯ ನಡುವೆಯೂ, ತುರ್ತು ಹೃದಯ ಕಸಿ ಶಸ್ತ್ರಚಿಕಿತ್ಸೆಗಾಗಿ ಆಸ್ಟರ್ ಆರ್ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯವನ್ನು ಮೆಟ್ರೋ ಮೂಲಕ ಯಶಸ್ವಿಯಾಗಿ ಸಾಗಿಸಲಾಯಿತು. ಕೇವಲ 7 ನಿಮಿಷಗಳಲ್ಲಿ ತಲುಪಿತು.
10:41 AM (IST) Nov 18
Bhagyalakshmi Serial Episode: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ನಟಿ ಮೇಘಶ್ರೀ ಅವರು ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಪ್ರೇಕ್ಷಕರಲ್ಲಿ ಹೊಸ ಕುತೂಹಲವನ್ನು ಮೂಡಿಸಿದೆ. ಹಳೆಯ ಕಥೆಗಳು ತೆರೆದುಕೊಂಡಿವೆ. ಹಾಗಾದರೆ ಏನಾಗಲಿದೆ?
10:28 AM (IST) Nov 18
ಮರ್ಸಿಡಿಸ್ ಬೆಂಜ್ ಗ್ರಾಹಕರು ತಮ್ಮ ಐಷಾರಾಮಿ ಕಾರುಗಳಿಗೆ ತಮ್ಮಿಚ್ಛೆಯಂತೆ ಬದಲಾವಣೆಗಳನ್ನು ಬಯಸುತ್ತಿದ್ದು, ವಾಹನದ ಬೆಲೆಯ ಅರ್ಧದಷ್ಟು ಹೆಚ್ಚು ಪಾವತಿಸಲು ಸಿದ್ಧರಿದ್ದಾರೆ. ಗ್ರಾಹಕರ ಅಭಿರುಚಿಗೆ ತಕ್ಕಂತೆ ಕಸ್ಟಮೈಸ್ ಆಯ್ಕೆ ಒದಗಿಸುತ್ತಿರುವ ಕಂಪನಿಯ, ಬೆಂಗಳೂರಲ್ಲಿ ಹೊಸ ಮಾದರಿ ಬಿಡುಗಡೆಗೆ ಸಜ್ಜು.
10:08 AM (IST) Nov 18
ರಾಜಗೋಪಾಲನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಎಡ್ವಿನ್ ಎಂಬ ಗೃಹಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಣಕಾಸಿನ ವಿಚಾರವಾಗಿ ಪತಿ ಮಣಿಯೇ ಹತ್ಯೆ ಮಾಡಿರುವುದಾಗಿ ಮೃತಳ ಕುಟುಂಬಸ್ಥರು ಆರೋಪಿಸಿದ್ದು, ಮೈಮೇಲಿನ ಗಾಯದ ಗುರುತುಗಳು ಮತ್ತು ಪುಡಿಯಾದ ಬಳೆಗಳು ಅನುಮಾನಕ್ಕೆ ಕಾರಣವಾಗಿವೆ.
09:58 AM (IST) Nov 18
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಸವರಾಜ್ ಸಂಕೀನ್ ಅವರು ಯುರೋಪಿಯನ್ ಸ್ಪೇಸ್ ಏಜೆನ್ಸಿಯಲ್ಲಿ ಸ್ಪೇಸ್ ಸಿಸ್ಟಮ್ ಎಂಜಿನಿಯರ್ ಆಗಿ ನೇಮಕಗೊಂಡಿದ್ದಾರೆ. ಏರೋನಾಟಿಕಲ್ ಎಂಜಿನಿಯರಿಂಗ್ ಪದವೀಧರ, ಬಾಹ್ಯಾಕಾಶ ನೌಕೆಗಳ ಉಡಾವಣೆ, ಉಪಗ್ರಹ ಕಾರ್ಯಾಚರಣೆಗಳ ಮಿಷನ್ ಕಂಟ್ರೋಲ್ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
09:24 AM (IST) Nov 18
Bigg Boss Kannada Season 12 Updates: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ರಕ್ಷಿತಾ ಕಂಡರೆ ಧ್ರುವಂತ್ಗೆ ಆಗೋದಿಲ್ಲ. ಭಾಷೆ ಬರೋದಿಲ್ಲ ಎಂದು ಅವಳು ನಾಟಕ ಮಾಡ್ತಾಳೆ ಎಂದು ಧ್ರುವಂತ್ ಹೇಳಿದ್ದರು. ಈಗ ಮತ್ತೊಂದು ಆರೋಪ ಮಾಡಿದ್ದಾರೆ.
09:01 AM (IST) Nov 18
Bangalore Metro bomb threa: ಬೆಂಗಳೂರು ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಿಎಂಆರ್ಸಿಎಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ. ತನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ನೀಡುತ್ತಿರುವುದೇ ಇದಕ್ಕೆ ಕಾರಣ ಎಂದು ಉಲ್ಲೇಖ. ಈ ಸಂಬಂಧ ಪ್ರಕರಣ ದಾಖಲು
08:50 AM (IST) Nov 18
Bigg Boss Kannada Season 12 Update: ಬಿಗ್ ಬಾಸ್ ಮನೆಯಲ್ಲಿ ಕಿಚ್ಚ ಸುದೀಪ್ ಅವರು ಜಾಹ್ನವಿ, ಅಶ್ವಿನಿ ಗೌಡಗೆ ಎಚ್ಚರಿಕೆ ಕೊಟ್ಟಿದ್ದರು. ಆದರೂ ಮತ್ತೆ ಅದೇ ತಪ್ಪು ಮಾಡಿದ್ದಾರೆ. ಈ ಬಾರಿ ಬಿಗ್ ಬಾಸ್ ದೊಡ್ಡ ಶಿಕ್ಷೆ ಕೊಟ್ಟಿದ್ದಾರೆ. ಹಾಗಾದರೆ ಏನದು?
08:35 AM (IST) Nov 18
ಬಿಗ್ಬಾಸ್ ಕನ್ನಡ ಸೀಸನ್ 12ರ ಡ್ರಮ್ ಟಾಸ್ಕ್ನಲ್ಲಿ ಉಸ್ತುವಾರಿಗಳಾದ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ನಡುವೆ ತೀವ್ರ ವಾಕ್ಸಮರ ನಡೆದಿದೆ. ಈ ಜಗಳವು ವೈಯಕ್ತಿಕ ನಿಂದನೆಯ ಹಂತಕ್ಕೆ ತಲುಪಿದ್ದು, ಹಿಂದಿನ ಮನಸ್ತಾಪ ಈಗ ಜ್ವಾಲೆಯಾಗಿ ಮಾರ್ಪಟ್ಟಿದೆ.
08:27 AM (IST) Nov 18