ಬೆಂಗಳೂರು: ರಾಜ್ಯಸರ್ಕಾರ ಈಗಾಗಲೇ ತನ್ನ ಎರಡು ವರ್ಷಗಳ ಆಡಳಿತ ಪೂರೈಸುತ್ತಾ ಬಂದಿದ್ದು, ಇದೆ 21ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯಲಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗು ಬೃಹತ್ ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಹೊಸಪೇಟೆಯಲ್ಲಿ ಮೇ 20ರಂದು ಬೆಳಗ್ಗೆ 11ಕ್ಕೆ ಕಾರ್ಯಕ್ರಮ ನಡೆಯಲಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯದ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ 3 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು ಕೊಪ್ಪಳ, ಬಳ್ಳಾರಿ, ವಿಜಯನಗರ ಅನೇಕ ಜಿಲ್ಲೆಗಳಿಂದ ಜನರು ಆಗಮಿಸಲಿದ್ದಾರೆ.

05:35 PM (IST) May 18
ನಟ ವಿಜಯ ರಾಘವೇಂದ್ರ ಅವರು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕೆಲವು ದಿನಗಳ ಹಿಂದೆ ಬರೆದುಕೊಂಡಿರುವ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಪೂರ್ತಿ ಓದಿ02:44 PM (IST) May 18
ಬಾಗಲಕೋಟೆಯಲ್ಲಿ ಚಿಂದಿ ಆಯುವ ನೆಪದಲ್ಲಿ ಮಹಿಳೆಯರ ಗ್ಯಾಂಗ್ ಕಳ್ಳತನ ಮಾಡುತ್ತಿದೆ. ನಿರ್ಮಾಣ ಹಂತದ ಮನೆಗಳು, ಅಂಗಡಿಗಳು ಮತ್ತು ದೇವರ ವಿಗ್ರಹಗಳನ್ನು ಕೂಡಾ ಕಳವು ಮಾಡುತ್ತಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.
ಪೂರ್ತಿ ಓದಿ01:50 PM (IST) May 18
ಸಂಕಷ್ಟದಲ್ಲಿರುವ ಚಿತ್ರಮಂದಿರಗಳನ್ನು ಉಳಿಸಲು ಸರ್ಕಾರದಿಂದ ನೆರವು ಕೋರಲು ಚಿತ್ರರಂಗ ನಿರ್ಧರಿಸಿದೆ. ಶಿವರಾಜ್ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು.
ಪೂರ್ತಿ ಓದಿ01:31 PM (IST) May 18
ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ವಿರುದ್ಧ ಅವಹೇಳನಕಾರಿ ಕಾಮೆಂಟ್ ಮಾಡಿದ ಘಟನೆ ಹಿನ್ನೆಲೆಯಲ್ಲಿ ಸಾವಿರಾರು ಮುಸ್ಲಿಂ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಫೇಕ್ ಖಾತೆ ಸೃಷ್ಟಿಸಿ ಈ ಕೃತ್ಯವೆಸಗಿದ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಶಹಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು.
ಪೂರ್ತಿ ಓದಿ12:08 PM (IST) May 18
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಗಳನ್ನು ಮಾಡಿದೆ. ರೈತರ ಆರ್ಥಿಕ ಸ್ಥಿರತೆ, ಸಮೃದ್ಧ ಜೀವನ ಮತ್ತು ಕೃಷಿಯ ಆಧುನೀಕರಣವನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಸರ್ಕಾರ ಕಾರ್ಯನಿರ್ವಹಿಸುತ್ತಿದೆ.
ಪೂರ್ತಿ ಓದಿ11:37 AM (IST) May 18
ಗುತ್ತಲದಲ್ಲಿ ಪತ್ತೆಯಾದ ಶಾಸನವು 1539ರಲ್ಲಿ ಬರಗಾಲದಿಂದ ಮೃತಪಟ್ಟ 6307 ಜನರ ಸಾಮೂಹಿಕ ಸಮಾಧಿಯ ಕುರಿತು ಮಾಹಿತಿ ನೀಡುತ್ತದೆ. ಮರುಳಯ್ಯ ಎಂಬ ವ್ಯಕ್ತಿಯು ಈ ಶವಗಳನ್ನು ಸಂಸ್ಕರಿಸಿದ್ದಾನೆ ಎಂದು ಶಾಸನದಲ್ಲಿ ಉಲ್ಲೇಖವಿದೆ.
ಪೂರ್ತಿ ಓದಿ11:18 AM (IST) May 18
ಹುಣಸೂರಿನಲ್ಲಿ ಸೌತೆಕಾಯಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಲು ಆಗ್ರಹಿಸಿ ನಗರಸಭಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಾರಿಗೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿ ನಾಗರಿಕರು ಪ್ರತಿಭಟನೆ ನಡೆಸಿದರು. ಕೆಎಸ್ಆರ್ಟಿಸಿ ಅಧಿಕಾರಿಗಳ ದುರ್ವರ್ತನೆ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪೂರ್ತಿ ಓದಿ11:09 AM (IST) May 18
ಬೆಂಗಳೂರಿನಲ್ಲಿ ಸಂಚಾರ ನಿಯಂತ್ರಣಕ್ಕೆ 10 ಡ್ರೋನ್ಗಳನ್ನು ಬಳಸಲಾಗುತ್ತಿದೆ. ಹೆಚ್ಚು ವಾಹನ ದಟ್ಟಣೆಯಿರುವ ಪ್ರದೇಶಗಳಲ್ಲಿ ಡ್ರೋನ್ಗಳು ನೈಜ ಸಮಯದ ಮಾಹಿತಿ ನೀಡಲಿವೆ. ಜೂನ್ 2023ರಲ್ಲಿ ಪ್ರಾಯೋಗಿಕವಾಗಿ ಬಳಸಿದ್ದು, ಜನವರಿ 2024ರಿಂದ ಅಧಿಕೃತವಾಗಿ ಬಳಕೆ ಶುರುವಾಗಿದೆ.
ಪೂರ್ತಿ ಓದಿ09:58 AM (IST) May 18
ಕರಿಕ್ಯಾತನಹಳ್ಳಿಯಲ್ಲಿ ಬುದ್ಧಿಮಾಂದ್ಯ ಯುವತಿಯ ಮೇಲೆ ಅಪ್ರಾಪ್ತ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿರುವ ಘಟನೆ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪೂರ್ತಿ ಓದಿ09:19 AM (IST) May 18
ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶದ ಬೆನ್ನಲ್ಲೇ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 9 ರಿಂದ 20 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಮೇ 26 ರೊಳಗೆ ನೋಂದಣಿ ಮಾಡಿಕೊಳ್ಳಬಹುದು. ಪರೀಕ್ಷೆ 1 ಮತ್ತು 2ರಲ್ಲಿ ಅನುತ್ತೀರ್ಣರಾದವರಿಗೆ ಈ ಬಾರಿ ಶುಲ್ಕ ಇರುವುದಿಲ್ಲ.
ಪೂರ್ತಿ ಓದಿ08:27 AM (IST) May 18
ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ಸರ್ಕಾರವನ್ನು ಶ್ಲಾಘಿಸಿದ ಸಚಿವ ಮಧು ಬಂಗಾರಪ್ಪ, ಬಿಜೆಪಿಯ ಟೀಕೆಗಳನ್ನು ತಳ್ಳಿ ಹಾಕಿದರು. ಬಿಜೆಪಿ ಕೇವಲ ಹಿಂದುತ್ವ ಮತ್ತು ಪಾಕಿಸ್ತಾನದಂತಹ ಭಾವನಾತ್ಮಕ ವಿಷಯಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬರುತ್ತದೆ ಎಂದು ಆರೋಪಿಸಿದರು.
ಪೂರ್ತಿ ಓದಿ08:08 AM (IST) May 18
ಬೆಂಗಳೂರಿನಲ್ಲಿ ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿಸಿ, ಜನರ ಮನೆ ಬಾಗಿಲಿಗೆ ಖಾತೆ ದಾಖಲೆ ತಲುಪಿಸುವ ಭರವಸೆಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದಾರೆ. ಈಗಾಗಲೇ ಶೇ.60 ರಷ್ಟು ಆಸ್ತಿಗಳ ಪರಿಶೀಲನೆ ಮುಗಿದಿದೆ ಎಂದು ಅವರು ತಿಳಿಸಿದ್ದಾರೆ.
ಪೂರ್ತಿ ಓದಿ07:36 AM (IST) May 18
ಮಂಡ್ಯದಲ್ಲಿ ಸಲೂನ್ ಅಂಡ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಕೇಂದ್ರದ ಮೇಲೆ ದಾಳಿ ನಡೆಸಿ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಪಿಇಎಸ್ ಕಾಲೇಜು ಪಕ್ಕದ ಕ್ಲೌಡ್-11 ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾ ಮಾಲಕಿ ಎಲಿಜೆಬತ್, ಪಿಂಪ್ ಮತ್ತು ಗ್ರಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೂರ್ತಿ ಓದಿ