ಚಿಕ್ಕಮಗಳೂರು: ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಸವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜತೆಗೆ, ಹಿಂದೂ ಮತ್ತು ಎಸ್ಡಿಪಿಐ ಸಂಘಟನೆ, ಮುಖಂಡರ ವಿರುದ್ಧ ಪ್ರತ್ಯೇಕ ಎರಡು ಸೊಮೋಟೋ ಕೇಸ್ ದಾಖಲಾಗಿದೆ.
ಬಂಧಿತ ಆರೋಪಿಗಳಾದ ಯಾಸಿನ್, ಮೊಹಮದ್ ಮತೀನ್, ಅಯಾನ್, ಮುನ್ನಾವರ್ ಪಾಷಾ, ಆಕ್ಷದ್, ಹಸೇನ್ ಬಂಧಿಸಲಾಗಿದೆ. ಮಂಗಳವಾರ ತಡರಾತ್ರಿಯೇ 6 ಆರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ ಪೊಲೀಸರು, ನಾಲ್ವರು ಅಪ್ರಾಪ್ತ ಆರೋಪಿಗಳನ್ನು ಹಾಸನದ ರಿಮ್ಯಾಂಡ್ ಹೋಮ್ಗೆ ಸ್ಥಳಾಂತರಿಸಿದರು. ಉಳಿದ ಇಬ್ಬರನ್ನು ಚಿಕ್ಕಮಗಳೂರು ಜೈಲಿಗೆ ಕಳುಹಿಸಲಾಗಿದೆ.
10:04 AM (IST) Feb 19
08:31 AM (IST) Feb 19
Nikhil Kumaraswamy: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆಗಳು ನಾಲ್ಕು ಗೋಡೆಗಳ ನಡುವೆ ನಡೆಯಬೇಕು, ಹಾದಿಬೀದಿಯಲ್ಲಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕೆಲವರು ಪ್ರಚಾರಕ್ಕಾಗಿ ಮೈತ್ರಿ ಮುರಿಯುವ ಹೇಳಿಕೆ ನೀಡುತ್ತಿದ್ದು, ಎರಡೂ ಪಕ್ಷಗಳ ನಾಯಕರು ಮೈತ್ರಿ ಧರ್ಮವನ್ನು ಗೌರವದಿಂದ ಪಾಲಿಸಬೇಕು ಎಂದರು.
08:16 AM (IST) Feb 19
ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವೈದ್ಯರು, 'ಆಸ್ಟಿಯೋನೆಕ್ರೋಸಿಸ್' ಎಂಬ ವಿರಳ ಕಾಯಿಲೆಯಿಂದ ಬಳಲುತ್ತಿದ್ದ 17 ವರ್ಷದ ಬಾಲಕನಿಗೆ ರೋಬೊಟಿಕ್ ತಂತ್ರಜ್ಞಾನ ಬಳಸಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಿದ್ದಾರೆ. ಈ ಅತ್ಯಾಧುನಿಕ ಚಿಕಿತ್ಸೆಯು ಬಾಲಕನಿಗೆ ನೋವುರಹಿತವಾಗಿ ಮತ್ತೆ ನಡೆಯುವಂತಾಗಿದೆ.
08:02 AM (IST) Feb 19
Karnataka CM change politics ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕೆಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಆಗ್ರಹಿಸಿದ್ದಾರೆ. ಈ ಗೊಂದಲದಿಂದ ಪಕ್ಷ ಹಾಗೂ ಸರ್ಕಾರದ ಇಮೇಜ್ಗೆ ಹಾನಿಯಾಗುತ್ತಿದೆ ಎಂದಿದ್ದಾರೆ.
07:54 AM (IST) Feb 19
ಬೆಂಗಳೂರಿನ ಹೊರವಲಯದ ಬೆಳ್ಳಹಳ್ಳಿ ಮತ್ತು ಮಿಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ಗಳಲ್ಲಿ ಗ್ರಾಮಸ್ಥರು 150ಕ್ಕೂ ಹೆಚ್ಚು ಕಸದ ಲಾರಿಗಳನ್ನು ತಡೆದಿದ್ದಾರೆ. ಅಸಮರ್ಪಕ ನಿರ್ವಹಣೆ, ಅಭಿವೃದ್ಧಿ ಶುಲ್ಕ ಪಾವತಿಸದಿರುವುದು ಮತ್ತು ಇತ್ತೀಚಿನ ಅಪಘಾತಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
07:51 AM (IST) Feb 19
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಕಥೆಯು ಯುಎಇ ವಿತರಕರ ವೆಬ್ಸೈಟ್ನಲ್ಲಿ ಸೋರಿಕೆಯಾಗಿದೆ ಎನ್ನಲಾಗಿದೆ. 1940-70ರ ದಶಕದ ಗೋವಾದ ಭೂಗತ ಲೋಕದಲ್ಲಿ, ಯುವಕನೊಬ್ಬ ರಕ್ತ, ಭಯ ಮತ್ತು ದ್ರೋಹದ ಮೂಲಕ ತನ್ನ ಸಾಮ್ರಾಜ್ಯವನ್ನು ಹೇಗೆ ರೂಪಿಸಿದ ಎಂಬುದು ಚಿತ್ರದ ಮುಖ್ಯ ಕಥಾವಸ್ತು ಎಂದು ವರದಿಯಾಗಿದೆ.
07:47 AM (IST) Feb 19
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸುವ ಶಾಸಕರು ಸೇರಿದಂತೆ ಯಾರೇ ಆದರೂ ಎಸ್ಮಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ. ವಿರೋಧ ಮುಂದುವರೆದರೆ ಬಿಜೆಪಿ ಕಚೇರಿ ಅಥವಾ ಶಾಸಕರ ಮನೆ ಮುಂದೆ ಕಸ ಸುರಿಯಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
07:35 AM (IST) Feb 19
Guru Vaibhavotsava 2026 ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ, ಶ್ರೀ ಗುರುರಾಯರ 405ನೇ ಪಟ್ಟಾಭಿಷೇಕ ಹಾಗೂ 431ನೇ ವರ್ಧಂತೋತ್ಸವದ ಅಂಗವಾಗಿ 'ಶ್ರೀ ರಾಘವೇಂದ್ರ ಗುರು ವೈಭವೋತ್ಸವ'ಕ್ಕೆ ಚಾಲನೆ ನೀಡಲಾಗಿದೆ.
07:35 AM (IST) Feb 19
07:23 AM (IST) Feb 19
ದೇವರಹಿಪ್ಪರಗಿಯಲ್ಲಿ, ಸಾಲದ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯನ್ನು ಕೊಂ*ದು ಮನೆಯ ಆವರಣದಲ್ಲಿ ಹೂತುಹಾಕಿದ್ದಾನೆ. ನಂತರ ಆಕೆ ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದು, 24 ದಿನಗಳ ಬಳಿಕ ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲಾಗಿದ್ದು, ಆರೋಪಿ ಪತಿಯನ್ನು ಬಂಧಿಸಲಾಗಿದೆ.
07:20 AM (IST) Feb 19
Namma Metro fare hike protest ಜಯನಗರದ ಆರ್.ವಿ.ಮೆಟ್ರೋ ನಿಲ್ದಾಣದ ಬಳಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ 9 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
07:18 AM (IST) Feb 19
07:05 AM (IST) Feb 19
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ಕುರಿತು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ನಮ್ಮನ್ನು ಯಾರೂ ಕರೆದಿಲ್ಲ, ಸ್ನೇಹಿತರು ಮಜಾ ಮಾಡಲು ಹೋಗಿದ್ದಾರೆ ಎಂದಿದ್ದಾರೆ. ಆದರೆ, ಈ ಪ್ರವಾಸದ ಉದ್ದೇಶದ ಬಗ್ಗೆ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ.
07:01 AM (IST) Feb 19
ಬೆಂಗಳೂರು ಮತ್ತು ಬೆಳಗಾವಿ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಿದ ಹಿನ್ನೆಲೆಯಲ್ಲಿ, ಡಿಜಿಪಿ ಅಲೋಕಕುಮಾರ ಅವರು ಹುಬ್ಬಳ್ಳಿ ಉಪಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.