LIVE NOW
Published : Apr 19, 2026, 06:36 AM ISTUpdated : Apr 19, 2026, 09:31 AM IST

Karnataka News Live: ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಕ್ಕೆ ಸಲೀಂ, ರಿಜ್ವಾನ್ ಕಾರಣ - ಅಲ್ಪಸಂಖ್ಯಾತ ಮುಖಂಡರ ಆಕ್ರೋಶ

ಸಾರಾಂಶ

ಬೆಂಗಳೂರು: ಗುತ್ತಿಗೆದಾರರ ಹೋರಾಟದ ನಂತರದಿಂದ ಬಾಕಿ ಬಿಲ್ ಪಾವತಿಗೆ ಮುಂದಾಗುತ್ತಿರುವ ರಾಜ್ಯ ಸರ್ಕಾರ, ಮಾರ್ಚ್‌ನಲ್ಲಿ 2 ಸಾವಿರ ಕೋಟಿ ರುಪಾಯಿ ಪಾವತಿ ನಂತರ ಇದೀಗ ಸಣ್ಣ ಕಾಮಗಾರಿಗಳ ಬಾಕಿ ಬಿಲ್ ಪಾವತಿಗೆ 300 ಕೋಟಿ ರುಪಾಯಿ ಬಿಡುಗಡೆ ಮಾಡಿದೆ. ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಕಳೆದ ತಿಂಗಳು ರಾಜ್ಯ ಗುತ್ತಿಗೆದಾರರ ಸಂಘದಿಂದ ಭಾರೀ ಪ್ರತಿಭಟನೆ ನಡೆಸಲಾಗಿತ್ತು. ಅದಾದ ನಂತರ ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಂತಹಂತವಾಗಿ ಬಾಕಿ ಬಿಲ್ ಪಾವತಿಸುವುದಾಗಿ ತಿಳಿಸಿದ್ದರು.

Davanagere Muslim Leaders Meeting

09:31 AM (IST) Apr 19

ದಾವಣಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಕ್ಕೆ ಸಲೀಂ, ರಿಜ್ವಾನ್ ಕಾರಣ - ಅಲ್ಪಸಂಖ್ಯಾತ ಮುಖಂಡರ ಆಕ್ರೋಶ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಗೊಂದಲಕ್ಕೆ ಸಲೀಂ ಅಹ್ಮದ್ ಮತ್ತು ರಿಜ್ವಾನ್ ಅರ್ಷದ್ ಅವರೇ ಕಾರಣ ಎಂದು ಆರೋಪಿಸಿರುವ ಮುಸ್ಲಿಂ ಹಾಗೂ ಕ್ರೈಸ್ತ ಮುಖಂಡರು, ಪಕ್ಷಕ್ಕಾಗಿ ದುಡಿದ ಕೆ. ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹಮ್ಮದ್ ವಿರುದ್ಧದ ಕ್ರಮವನ್ನು ಖಂಡಿಸಿದ್ದಾರೆ. 

Read Full Story

09:22 AM (IST) Apr 19

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪ್ಪನ ಪರ ಭಾವನಾತ್ಮಕ ಬರಹ ಬರೆದುಕೊಂಡ ವಿನಯ್ ಕುಲಕರ್ಣಿ ಪುತ್ರಿ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ನಂತರ, ಅವರ ಪುತ್ರಿ ದೀಪಾಲಿ ಕುಲಕರ್ಣಿ ಇನ್ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ತಂದೆಯ ಮೇಲೆ ಸಂಪೂರ್ಣ ನಂಬಿಕೆ ಇದೆ ಮತ್ತು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.

Read Full Story

08:54 AM (IST) Apr 19

ನ್ಯಾಯಾಂಗದಲ್ಲಿ ಎಐ ಬಳಕೆಗೆ ಸಿಎಂ ಕಳವಳ, ನ್ಯಾಯಾಂಗ ಸಮ್ಮೇಳನದಲ್ಲಿ ಸಿದ್ದೆರಾಮಯ್ಯ ಹೇಳಿದ್ದೇನು?

ಬೆಂಗಳೂರಿನಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನದಲ್ಲಿ, ಕೃತಕ ಬುದ್ಧಿಮತ್ತೆ (ಎಐ) ಅಳವಡಿಕೆಯಿಂದ ಪ್ರಕರಣಗಳ ತ್ವರಿತ ಇತ್ಯರ್ಥದ ಸಾಧ್ಯತೆಗಳ ಜೊತೆಗೆ ಅಲ್ಗಾರಿದಮಿಕ್ ಪಕ್ಷಪಾತದಂತಹ ಆಳವಾದ ಕಳವಳಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

Read Full Story

08:40 AM (IST) Apr 19

Karnataka Lokayukta 40th anniversary - ಕರ್ನಾಟಕ ಲೋಕಾಯುಕ್ತ ದೇಶಕ್ಕೆ ಮಾದರಿ; ಸಿಜೆಐ ಮೆಚ್ಚುಗೆ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 40ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಂಸ್ಥೆಯನ್ನು ದೇಶಕ್ಕೆ ಮಾದರಿ ಎಂದು ಶ್ಲಾಘಿಸಿದರು. ಭ್ರಷ್ಟಾಚಾರ ಮುಕ್ತ ಆಡಳಿತದಲ್ಲಿ ಸಂಸ್ಥೆಯ ಪಾತ್ರವನ್ನು ಕೊಂಡಾಡಿದರು.

Read Full Story

08:01 AM (IST) Apr 19

ಆಭರಣ ಖರೀದಿಸುವವಳಂತೆ ನಟಿಸಿ ಎರಡು ಚಿನ್ನದ ಉಂಗುರ ಕದ್ದ ಎಂಬಿಎ ಪದವೀಧರೆ!

MBA graduate caught stealing ಖರೀದಿ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗೆ ತೆರಳಿ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಉಂಗುರ ಕಳವು  ಖಾಸಗಿ ಕಂಪನಿ ಮಹಿಳಾ ಉದ್ಯೋಗಿ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಎಂಬಿಎ ಪದವೀಧರೆಯಾದ ಆರೋಪಿಯಿಂದ ಸುಮಾರು 1 ಲಕ್ಷ ಮೌಲ್ಯದ ಉಂಗುರವನ್ನು ಜಪ್ತಿ ಮಾಡಲಾಗಿದೆ.

Read Full Story

More Trending News