ಬೆಂಗಳೂರು (ಡಿ.19): ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ, ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂಥ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025’ ಅಂಗೀಕಾರ ಮಾಡಲಾಗಿದೆ. ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್ ಮಾಡಲಾಗಿದೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
03:18 PM (IST) Dec 19
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸಲ್ಲಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಗೆ ರಾಜ್ಯ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.
03:08 PM (IST) Dec 19
Bigg Boss Kannada Season 12 Episode: ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟನಿಗೆ ಈ ಮನೆಯಲ್ಲಿ ಉಳಿದುಕೊಳ್ಳೋಕೆ ಏನಾದರೂ ಕಂಟೆಂಟ್ ಬೇಕು, ಅವನು ಯಾರನ್ನಾದರೂ ಹುಡುಕುತ್ತಾನೆ ಎಂದು ಧ್ರುವಂತ್, ಜಾಹ್ನವಿ, ಅಶ್ವಿನಿ ಗೌಡ ಹೇಳುತ್ತಿದ್ದರು. ಈಗ ಈ ವಿಚಾರವನ್ನು ಸ್ವತಃ ಗಿಲ್ಲಿ ಒಪ್ಪಿಕೊಂಡಿದ್ದಾರೆ.
03:03 PM (IST) Dec 19
02:34 PM (IST) Dec 19
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಅವರ ಲವ್, ಮದುವೆ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಈಗ ಗಿಲ್ಲಿ ನಟನಿಗೆ ಹೆಣ್ಣು ಕೊಡೋ ಮಾವನ ಜೊತೆ ರಘು ಅವರು ಮಾತನಾಡೋಕೆ ರೆಡಿ ಆಗಿದ್ದಾರೆ. ಈ ಬಗ್ಗೆ ಮಾತುಕತೆ ಆಗಿದೆ.
02:32 PM (IST) Dec 19
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗೆ ಇರುವ 1.20 ಲಕ್ಷ ರೂ. ವಾರ್ಷಿಕ ಆದಾಯ ಮಿತಿಯನ್ನು ಬದಲಾಯಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಈ ನಿಯಮದಿಂದ ಕೂಲಿ ಕಾರ್ಮಿಕರೂ ಅನರ್ಹರಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
02:28 PM (IST) Dec 19
ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ 7ನೇ ತರಗತಿ ವಿದ್ಯಾರ್ಥಿಗೆ ಪ್ರಿನ್ಸಿಪಾಲ್ ಹಲ್ಲೆ ನಡೆಸಿ, ಶಬರಿಮಲೆ ಯಾತ್ರೆಗೆ ರಜೆ ನಿರಾಕರಿಸಿದ್ದಾರೆ. ಈ ಘಟನೆಯು ಹಿಂದೂ ಸಂಘಟನೆಗಳ ತೀವ್ರ ಪ್ರತಿಭಟನೆ ಮಾಡಿದ್ದಾರೆ.
02:16 PM (IST) Dec 19
ರೈಲ್ವೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಭಾಷಾ ತಾರತಮ್ಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿದೆ. ಕರವೇ ಒತ್ತಡಕ್ಕೆ ಮಣಿದು ಬೆಂಗಳೂರು ವಿಭಾಗದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಒಪ್ಪಿದೆ.
02:11 PM (IST) Dec 19
ಕರ್ನಾಟಕದಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸೀಟುಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಭವಿಷ್ಯದಲ್ಲಿ ಉಂಟಾಗಬಹುದಾದ ನಿರುದ್ಯೋಗ ಸಮಸ್ಯೆಯನ್ನು ತಡೆಯಲು, ರಾಜ್ಯ ಸರ್ಕಾರವು ಸೀಟುಗಳ ಸಂಖ್ಯೆಯನ್ನು ಮಿತಿಗೊಳಿಸಲು ಯೋಜಿಸುತ್ತಿದೆ.
01:44 PM (IST) Dec 19
400 Failed Students Pass in Bangalore University ಬೆಂಗಳೂರು ವಿವಿ ಎಂ.ಕಾಂ. ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶ ಯುಯುಸಿಎಂಎಸ್ ತಂತ್ರಾಂಶದ ತಾಂತ್ರಿಕ ದೋಷದಿಂದ ಲೋಪವಾಗಿತ್ತು. ಈ ತಪ್ಪನ್ನು ಸರಿಪಡಿಸಿ, ಪರಿಷ್ಕೃತ ಫಲಿತಾಂಶ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.
01:29 PM (IST) Dec 19
ಒಂಟಿತನ ನೀಗಿಸಿಕೊಳ್ಳಲು ಪುರುಷರು ದುಬಾರಿ ಸೆ*ಕ್ಸ್ ಡಾಲ್ಸ್ ಮೊರೆ ಹೋಗುತ್ತಿದ್ದು, ಭಾರತದಲ್ಲಿ ಇದರ ಮಾರುಕಟ್ಟೆ ಬೆಳೆಯುತ್ತಿದೆ. ಅದರಲ್ಲೂ ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ, ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ ಖರೀದಿಯಲ್ಲಿ ಮುಂದಿದ್ದಾರೆ ಎಂದು ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ.
01:26 PM (IST) Dec 19
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗೋಕರ್ಣ ಹಾಗೂ ಅಂಕೋಲಾದ ಆಂದ್ಲೆ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಹುದ್ದೆಯ ಕನಸು ಹಾಗೂ ರಾಜಕೀಯ ಸಮಸ್ಯೆಗಳ ಪರಿಹಾರಕ್ಕಾಗಿ ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ದ ಮೂಲಕ ಭವಿಷ್ಯದ ಅಪ್ಪಣೆ ಕೇಳಿದ್ದಾರೆ.
01:22 PM (IST) Dec 19
Bharti Singh Welcome Second Baby Boy: ಕಪಿಲ್ ಶರ್ಮಾ ಶೋ ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋ, ಅವಾರ್ಡ್ ಫಂಕ್ಷನ್ಗಳಿಗೆ ನಿರೂಪಣೆ ಮಾಡಿದ್ದ ನಟಿ, ನಿರೂಪಕಿ ಭಾರತಿ ಸಿಂಗ್ ಅವರು ಎರಡನೇ ಬಾರಿಗೆ ತಾಯಿಯಾಗಿದ್ದಾರೆ. ಇವರ ಮನೆಯಲ್ಲಿ ಖುಷಿ ಮನೆ ಮಾಡಿದೆ.
01:17 PM (IST) Dec 19
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ಗೆ ಹಿನ್ನಡೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಸೂಚನೆ ನೀಡಲಾಗಿದೆ.
01:07 PM (IST) Dec 19
12:56 PM (IST) Dec 19
Bigg Boss Kannada 12 Rakshita Shetty: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸೀಕ್ರೆಟ್ ರೂಮ್ನಲ್ಲಿರುವ ರಕ್ಷಿತಾ ವ್ಯಕ್ತಿತ್ವ ಹೇಗೆ ಎಂದು ವೀಕ್ಷಕರಿಗೆ ಗೊತ್ತಾಗುತ್ತಲಿದೆ. ಬೇರೆಯವರಿಗೆ ಕೆಟ್ಟದ್ದು ಬಯಸಿದ್ದರೆ ಕೆಟ್ಟದ್ದೇ ಆಗುವುದು ಎನ್ನೋದು ಮತ್ತೆ ಸಾಬೀತಾಗಿದೆ. ಹಾಗಾದರೆ ಏನಾಯ್ತು?
12:44 PM (IST) Dec 19
ರಾಜ್ಯ ಸರ್ಕಾರದ 'ಗೃಹಲಕ್ಷ್ಮೀ' ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಮಹಿಳಾ ಘಟಕ ಬೃಹತ್ ಪ್ರತಿಭಟನೆ ನಡೆಸಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಿರತರು, ಹಣ ಬಿಡುಗಡೆಯಾಗದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದರು.
12:41 PM (IST) Dec 19
ಬೆಂಗಳೂರಿನ ತ್ಯಾಗರಾಜ ನಗರದಲ್ಲಿ, ಜಿಮ್ ಟ್ರೈನರ್ ರಂಜನ್ ಆಟವಾಡುತ್ತಿದ್ದ ಬಾಲಕನಿಗೆ ಅಮಾನವೀಯವಾಗಿ ಒದ್ದು ವಿಕೃತಿ ಮೆರೆದಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯ ಆರೋಪಿ ಈ ಹಿಂದೆಯೂ ಹಲವು ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ.
12:07 PM (IST) Dec 19
11:29 AM (IST) Dec 19
ಜಿನೀವಾದ ವಿಶ್ವಸಂಸ್ಥೆಯಲ್ಲಿ ನಡೆದ ವಿಶ್ವ ಧ್ಯಾನ ದಿನದ ಕಾರ್ಯಕ್ರಮದಲ್ಲಿ, ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಧ್ಯಾನದ ಮಹತ್ವವನ್ನು ಒತ್ತಿ ಹೇಳಿದರು. ಜಾಗತಿಕ ಸಂಘರ್ಷಗಳ ಈ ಕಾಲದಲ್ಲಿ, ಧ್ಯಾನವು ವೈಯಕ್ತಿಕ ಶಾಂತಿಯ ಜೊತೆಗೆ ಜಾಗತಿಕ ಸವಾಲುಗಳನ್ನು ಅರ್ಥಮಾಡಿಕೊಳ್ಳಲು
11:14 AM (IST) Dec 19
Lakshmi Nivasa Serial Episode: ಆಸ್ತಿಗೋಸ್ಕರ ಇಂದು ಸಮಾಜದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿ ಎಂದು ಹೊಡೆದಾಟ ಮಾಡುವುದನ್ನು ನೋಡುತ್ತೇವೆ. ಅಣ್ಣ ನಮ್ಮನವಾದರೂ ಕೂಡ, ಅತ್ತಿಗೆ ನಮ್ಮವಳಾ ಎಂಬ ಗಾದೆ ಇದೆ. ಆದರೆ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಈ ಗಾದೆಯನ್ನು ಉಲ್ಟಾ ಮಾಡಬೇಕಿದೆ.
11:08 AM (IST) Dec 19
ರಾಯಚೂರಿನಲ್ಲಿ ಬೀದಿಬದಿ ಡ್ರೈ ಫ್ರೂಟ್ಸ್ ವ್ಯಾಪಾರಿ ಇಮಾಮ್ ಹುಸೇನ್ನನ್ನು ನಾಲ್ವರು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾರೆ. ಈ ದಾಳಿಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳು ಪರಾರಿಯಾಗುತ್ತಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
11:08 AM (IST) Dec 19
10:36 AM (IST) Dec 19
ಕೆಲ ಧಾರಾವಾಹಿಗಳು TRP ಲೆಕ್ಕಾಚಾರಕ್ಕೂ ಮೀರಿದ ಕಥೆಗಳಾಗಿರುತ್ತವೆ. ಎಷ್ಟೋ ಸೂಕ್ಷ್ಮ ಕತೆಗಳು ಬಂದಿದ್ದು, ಅವೆಲ್ಲವೂ TRP ಲೆಕ್ಕಾಚಾರದಲ್ಲಿ ಗೆದ್ದಿಲ್ಲ, ಕಥೆ ನಿರೂಪಣೆ, ಸಂಭಾಷಣೆ, ಚಿತ್ರಕಥೆಯಲ್ಲಿ ಜನರ ಮನಸ್ಸಿನಲ್ಲಿ ಹಾಗೆ ಉಳಿದುಕೊಂಡಿವೆ. ಕಂಟೆಂಟ್ ವಿಚಾರದಲ್ಲಿ ಭೇಷ್ ಎನಿಸಿಕೊಂಡ ಸೀರಿಯಲ್ಗಳಿವು
10:33 AM (IST) Dec 19
Arvind Bellad vs Siddaramaiah :ಪರಿಶಿಷ್ಟರ ಮೀಸಲಾತಿ ಹೆಚ್ಚಳವನ್ನು ತಾವು ವಿರೋಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು ಎಂಬ ಅರವಿಂದ ಬೆಲ್ಲದ್ ಆರೋಪಕ್ಕೆ ತಿರುಗೇಟು ನೀಡಿದರು.
09:59 AM (IST) Dec 19
Bangalore Turf Club horse restrictions:: ಕುದುರೆ ಗ್ಲ್ಯಾಂಡರ್ಸ್ ರೋಗ ಕಾಣಿಸಿಕೊಂಡಿರುವ ಹಿನ್ನೆಲೆ ಬೆಂಗಳೂರು ಟರ್ಫ್ ಕ್ಲಬ್ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಕತ್ತೆ ಪ್ರಾಣಿಗಳ ಚಲನ ನಿರ್ಬಂಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
09:36 AM (IST) Dec 19
ಕಾರಟಗಿಯಲ್ಲಿ ರೈತರನ್ನು ಭೇಟಿಯಾದ ಸಚಿವ ಶಿವರಾಜ ತಂಗಡಗಿ, ತುಂಗಭದ್ರಾ ಅಣೆಕಟ್ಟೆ ಕಾಮಗಾರಿಯಿಂದಾಗಿ ಬೇಸಿಗೆಯ ಎರಡನೇ ಬೆಳೆಗೆ ನೀರು ಲಭ್ಯವಿಲ್ಲದ ಕಾರಣ ಸಸಿ ನಾಟಿ ಮಾಡದಂತೆ ರೈತರಿಗೆ ಸಲಹೆ ನೀಡಿದರು. ಇದೇ ವೇಳೆ, ಕಾಂಗ್ರೆಸ್ನಲ್ಲಿ ಯಾವುದೇ ಸಹಿ ಸಂಗ್ರಹ ನಡೆದಿಲ್ಲ, ಇದೆಲ್ಲಾ ಬಿಜೆಪಿಯ ಸೃಷ್ಟಿ ಎಂದರು.
09:23 AM (IST) Dec 19
ಮೈಸೂರಿನಲ್ಲಿ, ತನಗೆ ಗೌರವ ನೀಡುತ್ತಿಲ್ಲ ಎಂಬ ಕಾರಣಕ್ಕೆ ಪಾನಿಪುರಿ ವ್ಯಾಪಾರಿಯೊಬ್ಬ ತನ್ನ ಪತ್ನಿಯನ್ನೇ ಕೊಲ್ಲಲು 5 ಲಕ್ಷ ರೂಪಾಯಿ ಸುಪಾರಿ ನೀಡಿದ್ದಾನೆ. ಸುತ್ತಿಗೆಯಿಂದ ಹೊಡೆದು, ಮನೆಗೆ ಬೆಂಕಿ ಹಚ್ಚಿ ಅಪಘಾತವೆಂದು ಬಿಂಬಿಸಲು ಯತ್ನಿಸಿದರೂ, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
09:14 AM (IST) Dec 19
ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ತನಿಖೆ ವಿಳಂಬಿಸಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ವಿಶೇಷ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಅಂತಿಮ ವರದಿ ಸಲ್ಲಿಸಲು ವಿಫಲವಾದರೆ ಲಭ್ಯ ದಾಖಲೆಗಳ ಆಧಾರದ ಮೇಲೆ ಬಿ-ರಿಪೋರ್ಟ್ ಬಗ್ಗೆ ತೀರ್ಮಾನಿಸುವುದಾಗಿ ಎಚ್ಚರಿಕೆ
08:41 AM (IST) Dec 19
Annayya Serial Today Episode: 'ಅಣ್ಣಯ್ಯ' ಧಾರಾವಾಹಿಯಲ್ಲಿ ಈಗಾಗಲೇ ನಾಲ್ಕು ಟ್ರ್ಯಾಕ್ ಕಥೆ ಸಾಗುತ್ತಿದೆ. ಶಿವು-ಪಾರು, ರಶ್ಮಿ-ಜಿಮ್ ಸೀನ, ರತ್ನ, ರಾಣಿ-ಮನು ಕುರಿತಂತೆ ಎಪಿಸೋಡ್ ಪ್ರಸಾರ ಆಗ್ತಿದೆ. ಈ ಮಧ್ಯೆ ಹೊಸ ವಿಷಯವನ್ನು ಹೇಳಲಾಗಿದೆ. ಧಾರಾವಾಹಿಯಲ್ಲಿ ಸಾಮಾಜಿಕ ಸಂದೇಶ ಸಾರಲಾಗಿದೆ.
08:24 AM (IST) Dec 19
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಈಗ ರಕ್ಷಿತಾ, ಧ್ರುವಂತ್ ಅವರು ಮನೆಯೊಳಗಡೆ ಬಂದು, ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಈಗ ಮನೆಯಲ್ಲಿದ್ದವರು ಮನೆಯನ್ನು ಕ್ಲೀನ್ ಮಾಡಬೇಕಿದೆ.
07:55 AM (IST) Dec 19
ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಪ್ತ ಸಚಿವರು ರಹಸ್ಯ ಸಭೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡದಂತೆ ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿದ್ದು, ಹೈಕಮಾಂಡ್ ಮೇಲೆ ಒತ್ತಡ ತರಲು 'ಪತ್ರ ಚಳುವಳಿ' ಹಾಗೂ ಬೃಹತ್ 'ಅಹಿಂದ' ಸಮಾವೇಶ ನಡೆಸಲು ನಿರ್ಧಾರ.
07:36 AM (IST) Dec 19
ನಗರದ 75 ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದ್ದು, ಈ ಪೈಕಿ ಅರ್ಧದಷ್ಟು ಜಂಕ್ಷನ್ಗಳಲ್ಲಿ ಈವರೆಗೆ ಕಾಮಗಾರಿಯೇ ಶುರುವಾಗಿಲ್ಲ. ಇನ್ನೂ ಕಾಮಗಾರಿ ಆರಂಭಿಸಲಾದ 12 ಜಂಕ್ಷನ್ಗಳಲ್ಲಿ ಕೇವಲ ಶೇ.25 ರಷ್ಟು ಕಾಮಗಾರಿ ಪೂರ್ಣಗೊಂಡಿಲ್ಲ.
07:36 AM (IST) Dec 19
ಧಾರವಾಡ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ. ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿದೆ. ಸುಪ್ರೀಂ ಹಿಂದೆ ಜಾಮೀನು ರದ್ದುಪಡಿಸಿದ್ದರಿಂದ, ಹಾಲಿ ಅರ್ಜಿಯನ್ನು ಹೈಕೋರ್ಟ್ ನಿರ್ಧರಿಸಬಹುದೇ ಎಂಬ ಬಗ್ಗೆ ಸ್ಪಷ್ಟನೆ ಕೋರಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ
07:35 AM (IST) Dec 19
ಹಿಂದಿ-ಇಂಗ್ಲಿಷ್ನಲ್ಲೇ ನಡೆಸಲುದ್ದೇಶಿಸಿದ್ದ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ಗೂಡ್ಸ್ ಟ್ರೈನ್ ವ್ಯವಸ್ಥಾಪಕ ಹುದ್ದೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ನಿರ್ದೇಶನ ನೀಡಿದ್ದಾರೆ.
07:35 AM (IST) Dec 19
ಕಳೆದ ಮೂರು ವರ್ಷಗಳಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರ ವಿರುದ್ಧ ಆರು ಸ್ವಯಂ ಪ್ರೇರಿತ ದೂರು ದಾಖಲಿಸಿ, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದರು.
07:34 AM (IST) Dec 19
‘ಸಿದ್ದರಾಮಯ್ಯ ಔಟ್ಗೋಯಿಂಗ್ ಚೀಫ್ ಮಿನಿಸ್ಟರ್. ಇದು ಅವರ ಕೊನೆಯ ಅಧಿವೇಶನ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಅಲ್ಲದೆ, ‘ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ರಾಜ್ಯದ ಖಜಾನೆ ಖಾಲಿ ಎಂದು ಗಂಭೀರ ಆರೋಪ ಮಾಡಿದ್ದಾರೆ.
07:34 AM (IST) Dec 19
‘ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ರಾಜ್ಯದ ಖಜಾನೆ ಖಾಲಿ ಮಾಡಿ ಹೈಕಮಾಂಡ್ ಅನ್ನು ತೃಪ್ತಿಪಡಿಸುತ್ತಿದ್ದಾರೆ’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
07:34 AM (IST) Dec 19
ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ‘ಏಮ್ಸ್’ ಸಂಸ್ಥೆ ಸ್ಥಾಪಿಸಲು ಅಂತಿಮ ಅನುಮೋದನೆ ನೀಡಬೇಕು ಸೇರಿ ಏಳು ಬೇಡಿಕೆಗಳನ್ನು ಜಾರಿ ತರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಲಾಯಿತು.
07:31 AM (IST) Dec 19
ಕೇಂದ್ರ ಚುನಾವಣಾ ಆಯೋಗ ಅಧಿಕೃತ ಸೂಚನೆಗೂ ಮುನ್ನವೇ ಕರ್ನಾಟಕದಲ್ಲಿ, ವಿಶೇಷವಾಗಿ ಧಾರವಾಡ ಜಿಲ್ಲೆಯಲ್ಲಿ, ಮತದಾರರ ಪಟ್ಟಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪೂರ್ವ ತಯಾರಿ ಕಾರ್ಯ ಆರಂಭವಾಗಿದೆ. ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪರಿಶೀಲನೆ ನಡೆಸುತ್ತಿದೆ.
07:30 AM (IST) Dec 19
ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ, ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂಥ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025’ ಅಂಗೀಕಾರ