LIVE NOW
Published : Dec 19, 2025, 07:27 AM ISTUpdated : Dec 19, 2025, 03:18 PM IST

State News Live: ಬೆಂಗಳೂರಿಗೆ 2ನೇ ಏರ್‌ಪೋರ್ಟ್‌, ಕಾರ್ಯಸಾಧ್ಯತಾ ವರದಿ ಬಗ್ಗೆ ಕರ್ನಾಟಕ ಪ್ರತಿಕ್ರಿಯೆ ನೀಡಿಲ್ಲ ಎಂದ ಕೇಂದ್ರ!

ಸಾರಾಂಶ

ಬೆಂಗಳೂರು (ಡಿ.19): ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ, ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂಥ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025’ ಅಂಗೀಕಾರ ಮಾಡಲಾಗಿದೆ. ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌ ಮಾಡಲಾಗಿದೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್‌ಲೈವ್‌ ಬ್ಲಾಗ್‌

 

03:18 PM (IST) Dec 19

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌, ಕಾರ್ಯಸಾಧ್ಯತಾ ವರದಿ ಬಗ್ಗೆ ಕರ್ನಾಟಕ ಪ್ರತಿಕ್ರಿಯೆ ನೀಡಿಲ್ಲ ಎಂದ ಕೇಂದ್ರ!

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸಲ್ಲಿಸಿದ ಪೂರ್ವ-ಕಾರ್ಯಸಾಧ್ಯತಾ ವರದಿಗೆ ರಾಜ್ಯ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. 

Read Full Story

03:08 PM (IST) Dec 19

BBK 12 - ಎಲ್ಲರೂ ಮಾಡುತ್ತಿದ್ದ ಆರೋಪ ಸತ್ಯ - ಕೊನೆಗೂ ಸತ್ಯ ಒಪ್ಪಿಕೊಂಡ ಗಿಲ್ಲಿ ನಟ!

Bigg Boss Kannada Season 12 Episode: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿ ನಟನಿಗೆ ಈ ಮನೆಯಲ್ಲಿ ಉಳಿದುಕೊಳ್ಳೋಕೆ ಏನಾದರೂ ಕಂಟೆಂಟ್‌ ಬೇಕು, ಅವನು ಯಾರನ್ನಾದರೂ ಹುಡುಕುತ್ತಾನೆ ಎಂದು ಧ್ರುವಂತ್‌, ಜಾಹ್ನವಿ, ಅಶ್ವಿನಿ ಗೌಡ ಹೇಳುತ್ತಿದ್ದರು. ಈಗ ಈ ವಿಚಾರವನ್ನು ಸ್ವತಃ ಗಿಲ್ಲಿ ಒಪ್ಪಿಕೊಂಡಿದ್ದಾರೆ.

Read Full Story

03:03 PM (IST) Dec 19

ಹಾಸನ - ಸ್ನೇಹಿತರಿಂದಲೇ ರೌಡಿ ಶೀಟರ್‌ ಜೆಸಿಬಿ ಮಂಜು ಹತ್ಯೆಗೆ ಯತ್ನ, ರಕ್ತದ ಮಡುವಲ್ಲಿ ನರಳಾಡಿದ ಮಂಜ

ಹಾಸನದಲ್ಲಿ ರೌಡಿ ಶೀಟರ್ ಜೆಸಿಬಿ ಮಂಜನ ಮೇಲೆ ಆತನ ಸ್ನೇಹಿತ ಯೋಗಿಹಳ್ಳಿ ರಾಜು ಮತ್ತು ತಂಡ ತಲ್ವಾರ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದೆ. ಕುಡಿದ ಮತ್ತಿನ ಜಗಳದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read Full Story

02:34 PM (IST) Dec 19

BBK 12 - ಮೊದಲು ನನ್ನ ಹನಿಮೂನ್‌ ಆಗಲಿ, ಆಮೇಲೆ ಹೆಂಡ್ತಿ ತಂದೆ ಜೊತೆ ಮಾತಾಡು; ಗಿಲ್ಲಿ ನಟ ಒಪನ್‌ ಟಾಕ್

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಗಿಲ್ಲಿ ನಟ ಅವರ ಲವ್‌, ಮದುವೆ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಈಗ ಗಿಲ್ಲಿ ನಟನಿಗೆ ಹೆಣ್ಣು ಕೊಡೋ ಮಾವನ ಜೊತೆ ರಘು ಅವರು ಮಾತನಾಡೋಕೆ ರೆಡಿ ಆಗಿದ್ದಾರೆ. ಈ ಬಗ್ಗೆ ಮಾತುಕತೆ ಆಗಿದೆ.

Read Full Story

02:32 PM (IST) Dec 19

ಬಿಪಿಎಲ್ ಕಾರ್ಡ್ ಆದಾಯ ಮಿತಿ 1.80 ಲಕ್ಷಕ್ಕೆ ಏರಿಕೆ? ಸಚಿವ ಮುನಿಯಪ್ಪ ಕೊಟ್ಟ ಬಿಗ್ ಅಪ್ಡೇಟ್ ಏನು?

ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗೆ ಇರುವ 1.20 ಲಕ್ಷ ರೂ. ವಾರ್ಷಿಕ ಆದಾಯ ಮಿತಿಯನ್ನು ಬದಲಾಯಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಈ ನಿಯಮದಿಂದ ಕೂಲಿ ಕಾರ್ಮಿಕರೂ ಅನರ್ಹರಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Read Full Story

02:28 PM (IST) Dec 19

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ ಕೆನ್ನೆಗೆ ಬಾರಿಸಿದ ಸೆಂಟ್ ಜೋಸೆಫ್ ಶಾಲೆ ಪ್ರಿನ್ಸಿಪಾಲ್!

ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾನ್ವೆಂಟ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ 7ನೇ ತರಗತಿ ವಿದ್ಯಾರ್ಥಿಗೆ ಪ್ರಿನ್ಸಿಪಾಲ್ ಹಲ್ಲೆ ನಡೆಸಿ, ಶಬರಿಮಲೆ ಯಾತ್ರೆಗೆ ರಜೆ ನಿರಾಕರಿಸಿದ್ದಾರೆ. ಈ ಘಟನೆಯು ಹಿಂದೂ ಸಂಘಟನೆಗಳ ತೀವ್ರ ಪ್ರತಿಭಟನೆ ಮಾಡಿದ್ದಾರೆ.

Read Full Story

02:16 PM (IST) Dec 19

ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆಗೆ ಕರವೇ ಕೆಂಡ; ನಾರಾಯಣ ಗೌಡರ ಹೋರಾಟಕ್ಕೆ ಮಣಿದು ಹೊಸ ಅಧಿಸೂಚನೆ ಹೊರಡಿಸಿದ ಇಲಾಖೆ!

ರೈಲ್ವೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಭಾಷಾ ತಾರತಮ್ಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹೋರಾಟ ನಡೆಸಿದೆ. ಕರವೇ ಒತ್ತಡಕ್ಕೆ ಮಣಿದು ಬೆಂಗಳೂರು ವಿಭಾಗದ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಒಪ್ಪಿದೆ.

Read Full Story

02:11 PM (IST) Dec 19

ನಿರುದ್ಯೋಗದ ಭೀತಿ,ಇಂಜಿನಿಯರಿಂಗ್‌ ಕೋರ್ಸ್‌ಗಳಲ್ಲಿ ಕಂಪ್ಯೂಟರ್‌ ಸೈನ್ಸ್‌ ಸೀಟ್‌ಗಳಿಗೆ ಇನ್ನು ಮಿತಿ!

ಕರ್ನಾಟಕದಲ್ಲಿ ಕಂಪ್ಯೂಟರ್ ಸೈನ್ಸ್‌ ಇಂಜಿನಿಯರಿಂಗ್ ಸೀಟುಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಭವಿಷ್ಯದಲ್ಲಿ ಉಂಟಾಗಬಹುದಾದ ನಿರುದ್ಯೋಗ ಸಮಸ್ಯೆಯನ್ನು ತಡೆಯಲು, ರಾಜ್ಯ ಸರ್ಕಾರವು ಸೀಟುಗಳ ಸಂಖ್ಯೆಯನ್ನು ಮಿತಿಗೊಳಿಸಲು ಯೋಜಿಸುತ್ತಿದೆ. 

Read Full Story

01:44 PM (IST) Dec 19

ಬೆಂಗಳೂರು ವಿವಿ ಫಲಿತಾಂಶ - ಫೇಲಾಗಿದ್ದ 400 ವಿದ್ಯಾರ್ಥಿಗಳೂ ಪಾಸ್!

400 Failed Students Pass in Bangalore University  ಬೆಂಗಳೂರು ವಿವಿ ಎಂ.ಕಾಂ. ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶ ಯುಯುಸಿಎಂಎಸ್‌ ತಂತ್ರಾಂಶದ ತಾಂತ್ರಿಕ ದೋಷದಿಂದ ಲೋಪವಾಗಿತ್ತು. ಈ ತಪ್ಪನ್ನು ಸರಿಪಡಿಸಿ, ಪರಿಷ್ಕೃತ ಫಲಿತಾಂಶ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.

Read Full Story

01:29 PM (IST) Dec 19

4 ಲಕ್ಷ ಬೆಲೆ ಬಾಳುವ ಸೆ*ಕ್ಸ್​ ಡಾಲ್ಸ್​ ಮಾರಾಟ - ಕರ್ನಾಟಕ ನಂ.1 - ಅಂಥದ್ದೇನಿದೆ? ಮಾಲೀಕರೇ ಹೇಳಿದ್ದಾರೆ ನೋಡಿ!

ಒಂಟಿತನ ನೀಗಿಸಿಕೊಳ್ಳಲು ಪುರುಷರು ದುಬಾರಿ ಸೆ*ಕ್ಸ್ ಡಾಲ್ಸ್ ಮೊರೆ ಹೋಗುತ್ತಿದ್ದು, ಭಾರತದಲ್ಲಿ ಇದರ ಮಾರುಕಟ್ಟೆ ಬೆಳೆಯುತ್ತಿದೆ. ಅದರಲ್ಲೂ ಕರ್ನಾಟಕದ ಪುರುಷರು ನಾಲ್ಕು ಲಕ್ಷ ರೂಪಾಯಿವರೆಗಿನ, ಥೇಟ್ ಹೆಣ್ಣನ್ನೇ ಹೋಲುವ ಗೊಂಬೆ  ಖರೀದಿಯಲ್ಲಿ ಮುಂದಿದ್ದಾರೆ ಎಂದು ತಯಾರಕರೊಬ್ಬರು ಬಹಿರಂಗಪಡಿಸಿದ್ದಾರೆ.

Read Full Story

01:26 PM (IST) Dec 19

ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗೋಕರ್ಣ ಹಾಗೂ ಅಂಕೋಲಾದ ಆಂದ್ಲೆ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಹುದ್ದೆಯ ಕನಸು ಹಾಗೂ ರಾಜಕೀಯ ಸಮಸ್ಯೆಗಳ ಪರಿಹಾರಕ್ಕಾಗಿ ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ದ ಮೂಲಕ ಭವಿಷ್ಯದ ಅಪ್ಪಣೆ ಕೇಳಿದ್ದಾರೆ. 

Read Full Story

01:22 PM (IST) Dec 19

ಸೆಟ್‌ನಲ್ಲಿ ವಾಟರ್‌ ಬ್ಯಾಗ್‌ ಒಡೀತು, ಜ್ಯೋತಿಷಿ ಹೇಳಿದಂತೆ ಖ್ಯಾತ ಹಾಸ್ಯನಟಿಗೆ ಮಗು ಜನನ;‌ 3ನೇಯದಕ್ಕೆ ಪ್ಲ್ಯಾನ್

Bharti Singh Welcome Second Baby Boy: ಕಪಿಲ್‌ ಶರ್ಮಾ ಶೋ ಸೇರಿದಂತೆ ಸಾಕಷ್ಟು ರಿಯಾಲಿಟಿ ಶೋ, ಅವಾರ್ಡ್‌ ಫಂಕ್ಷನ್‌ಗಳಿಗೆ ನಿರೂಪಣೆ ಮಾಡಿದ್ದ ನಟಿ, ನಿರೂಪಕಿ ಭಾರತಿ ಸಿಂಗ್‌ ಅವರು ಎರಡನೇ ಬಾರಿಗೆ ತಾಯಿಯಾಗಿದ್ದಾರೆ. ಇವರ ಮನೆಯಲ್ಲಿ ಖುಷಿ ಮನೆ ಮಾಡಿದೆ.

 

Read Full Story

01:17 PM (IST) Dec 19

ಬೈರತಿ ಬಸವರಾಜ್‌ಗೆ ಬಂಧನದ ಭೀತಿ; ಬಿಕ್ಲುಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಹೈಕೋರ್ಟ್!

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಹಿನ್ನಡೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಸೂಚನೆ ನೀಡಲಾಗಿದೆ.

Read Full Story

01:07 PM (IST) Dec 19

ಹೊಸಪೇಟೆ - ಮಗನ ಜೊತೆಗೆ ಜಗಳವಾಡ್ತಿದ್ದ ಯುವಕರು ಗುಂಪು, ಬಿಡಿಸಲು ಹೋದ ತಂದೆಯನ್ನೇ ಕೊಲೆಗೈದ ಗ್ಯಾಂಗ್!

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ, ಮಗನ ಜಗಳವನ್ನು ಬಿಡಿಸಲು ಹೋದ 50 ವರ್ಷದ ತಂದೆ ಮಾಬುಸಾಬ್ ಯುವಕರ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟಿದ್ದಾರೆ. ಈ ಘೋರ ಘಟನೆಗೆ ಸಂಬಂಧಿಸಿದಂತೆ ಹೊಸಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
Read Full Story

12:56 PM (IST) Dec 19

BBK 12 - ಬೇರೆಯವರಿಗೆ ಕೇಡು ಬಯಸಿದ ರಕ್ಷಿತಾ ಶೆಟ್ಟಿಗೆ ಮುಖಭಂಗ; ಮುಖಮುಚ್ಚಿ ಕೂತ ಗಿಲ್ಲಿ ವಂಶದ ಕುಡಿ

Bigg Boss Kannada 12 Rakshita Shetty: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಸೀಕ್ರೆಟ್‌ ರೂಮ್‌ನಲ್ಲಿರುವ ರಕ್ಷಿತಾ ವ್ಯಕ್ತಿತ್ವ ಹೇಗೆ ಎಂದು ವೀಕ್ಷಕರಿಗೆ ಗೊತ್ತಾಗುತ್ತಲಿದೆ. ಬೇರೆಯವರಿಗೆ ಕೆಟ್ಟದ್ದು ಬಯಸಿದ್ದರೆ ಕೆಟ್ಟದ್ದೇ ಆಗುವುದು ಎನ್ನೋದು ಮತ್ತೆ ಸಾಬೀತಾಗಿದೆ. ಹಾಗಾದರೆ ಏನಾಯ್ತು?

 

Read Full Story

12:44 PM (IST) Dec 19

'ಅಕ್ಕಾ ಅಕ್ಕಾ ಎಲ್ಲಿದೆ ರೊಕ್ಕಾ?' ಗೃಹಲಕ್ಷ್ಮಿ ಹಣ ವಿಳಂಬ,ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ 'ಗೃಹಲಕ್ಷ್ಮೀ' ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಮಹಿಳಾ ಘಟಕ ಬೃಹತ್ ಪ್ರತಿಭಟನೆ ನಡೆಸಿತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ರಾಜೀನಾಮೆಗೆ ಒತ್ತಾಯಿಸಿದ ಪ್ರತಿಭಟನಿರತರು, ಹಣ ಬಿಡುಗಡೆಯಾಗದಿದ್ದರೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದರು.

Read Full Story

12:41 PM (IST) Dec 19

ಆಟವಾಡುತ್ತಿದ್ದ ಮಗುವನ್ನು ಫುಟ್ಬಾಲ್‌ನಂತೆ ಒದ್ದ ಜಿಮ್ ಟ್ರೈನರ್; ಮಾರುದ್ದ ಹಾರಿಬಿದ್ದ ಮಗು!

ಬೆಂಗಳೂರಿನ ತ್ಯಾಗರಾಜ ನಗರದಲ್ಲಿ, ಜಿಮ್ ಟ್ರೈನರ್ ರಂಜನ್ ಆಟವಾಡುತ್ತಿದ್ದ ಬಾಲಕನಿಗೆ ಅಮಾನವೀಯವಾಗಿ ಒದ್ದು ವಿಕೃತಿ ಮೆರೆದಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯ ಆರೋಪಿ ಈ ಹಿಂದೆಯೂ ಹಲವು ಮಕ್ಕಳ ಮೇಲೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ.

Read Full Story

12:07 PM (IST) Dec 19

ಕೋಲಾರ - ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!

ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ, ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಸಂದೀಪ್ ಎಂಬ 26 ವರ್ಷದ ಯುವಕ ಕಾಲುಜಾರಿ ಬಿದ್ದು ತನ್ನ ಎಡಗೈಯನ್ನು ಕಳೆದುಕೊಂಡಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
Read Full Story

11:29 AM (IST) Dec 19

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ - ಶ್ರೀ ಶ್ರೀ ರವಿಶಂಕರ್ ಗುರೂಜಿ

ಜಿನೀವಾದ ವಿಶ್ವಸಂಸ್ಥೆಯಲ್ಲಿ ನಡೆದ ವಿಶ್ವ ಧ್ಯಾನ ದಿನದ ಕಾರ್ಯಕ್ರಮದಲ್ಲಿ, ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಶ್ರೀ ಶ್ರೀ ರವಿಶಂಕರ್‌ ಗುರೂಜಿಯವರು ಧ್ಯಾನದ ಮಹತ್ವವನ್ನು ಒತ್ತಿ ಹೇಳಿದರು. ಜಾಗತಿಕ ಸಂಘರ್ಷಗಳ ಈ ಕಾಲದಲ್ಲಿ, ಧ್ಯಾನವು ವೈಯಕ್ತಿಕ ಶಾಂತಿಯ ಜೊತೆಗೆ ಜಾಗತಿಕ ಸವಾಲುಗಳನ್ನು ಅರ್ಥಮಾಡಿಕೊಳ್ಳಲು

Read Full Story

11:14 AM (IST) Dec 19

Lakshmi Nivasa Serial - ದುಡ್ಡೇ ದೊಡ್ಡಪ್ಪ, ತಂಗಿ ಜೀವನ ಬಲಿ ಕೊಟ್ಟ; ಇಂಥ ಅಣ್ಣ-ತಮ್ಮ ಸಾಯೋದು ಬೆಸ್ಟ್!

Lakshmi Nivasa Serial Episode: ಆಸ್ತಿಗೋಸ್ಕರ ಇಂದು ಸಮಾಜದಲ್ಲಿ ಅಣ್ಣ-ತಮ್ಮ, ಅಕ್ಕ-ತಂಗಿ ಎಂದು ಹೊಡೆದಾಟ ಮಾಡುವುದನ್ನು ನೋಡುತ್ತೇವೆ. ಅಣ್ಣ ನಮ್ಮನವಾದರೂ ಕೂಡ, ಅತ್ತಿಗೆ ನಮ್ಮವಳಾ ಎಂಬ ಗಾದೆ ಇದೆ. ಆದರೆ ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ಈ ಗಾದೆಯನ್ನು ಉಲ್ಟಾ ಮಾಡಬೇಕಿದೆ. 

Read Full Story

11:08 AM (IST) Dec 19

ರಾಯಚೂರು - ಮಧ್ಯರಾತ್ರಿ ಬೀದಿಬದಿ ವ್ಯಾಪಾರಿಯ ಭೀಕರ ಹತ್ಯೆ! ಸಾಲವೋ?ಹಳೆಯ ದ್ವೇಷವೋ?

ರಾಯಚೂರಿನಲ್ಲಿ ಬೀದಿಬದಿ ಡ್ರೈ ಫ್ರೂಟ್ಸ್ ವ್ಯಾಪಾರಿ ಇಮಾಮ್ ಹುಸೇನ್‌ನನ್ನು ನಾಲ್ವರು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದಾರೆ. ಈ ದಾಳಿಯಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳು ಪರಾರಿಯಾಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. 

Read Full Story

11:08 AM (IST) Dec 19

Bengaluru - ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ ಅಮಾನುಷವಾಗಿ ಕಾಲಿನಿಂದ ಒದ್ದ ಪಾಪಿ!

ಬೆಂಗಳೂರಿನಲ್ಲಿ ಮನೆ ಬಳಿ ಆಟವಾಡುತ್ತಿದ್ದ ನೀವ್ ಜೈನ್ ಎಂಬ ಬಾಲಕನ ಮೇಲೆ ರಂಜನ್ ಎಂಬ ವ್ಯಕ್ತಿ ಅಮಾನುಷವಾಗಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
Read Full Story

10:36 AM (IST) Dec 19

ಅಬ್ಬರವಿಲ್ಲ, ಹೈಪ್‌ ಇಲ್ಲ, ಮನಸ್ಸಿನಲ್ಲಿ ಕ್ರಾಂತಿ ಮಾಡಿ ಕಾಡುವ ಕನ್ನಡದ ಸೀರಿಯಲ್‌ಗಳಿವು!

ಕೆಲ ಧಾರಾವಾಹಿಗಳು TRP ಲೆಕ್ಕಾಚಾರಕ್ಕೂ ಮೀರಿದ ಕಥೆಗಳಾಗಿರುತ್ತವೆ. ಎಷ್ಟೋ ಸೂಕ್ಷ್ಮ ಕತೆಗಳು ಬಂದಿದ್ದು, ಅವೆಲ್ಲವೂ TRP ಲೆಕ್ಕಾಚಾರದಲ್ಲಿ ಗೆದ್ದಿಲ್ಲ, ಕಥೆ ನಿರೂಪಣೆ, ಸಂಭಾಷಣೆ, ಚಿತ್ರಕಥೆಯಲ್ಲಿ ಜನರ ಮನಸ್ಸಿನಲ್ಲಿ ಹಾಗೆ ಉಳಿದುಕೊಂಡಿವೆ. ಕಂಟೆಂಟ್‌ ವಿಚಾರದಲ್ಲಿ ಭೇಷ್‌ ಎನಿಸಿಕೊಂಡ ಸೀರಿಯಲ್‌ಗಳಿವು

Read Full Story

10:33 AM (IST) Dec 19

ಸದನದಲ್ಲಿ ಸಿದ್ದು vs ಬೆಲ್ಲದ್‌ ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ

Arvind Bellad vs Siddaramaiah :ಪರಿಶಿಷ್ಟರ ಮೀಸಲಾತಿ ಹೆಚ್ಚಳವನ್ನು ತಾವು ವಿರೋಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟಪಡಿಸಿದರು. ಬಿಜೆಪಿ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು ಎಂಬ ಅರವಿಂದ ಬೆಲ್ಲದ್ ಆರೋಪಕ್ಕೆ ತಿರುಗೇಟು ನೀಡಿದರು.

Read Full Story

09:59 AM (IST) Dec 19

Glanders disease - ಮಾರಕ ರೋಗದ ಭೀತಿ, ರೇಸ್ ಕೋರ್ಸ್ ಸುತ್ತ ಕತ್ತೆ ಕುದುರೆ ಹೆಸರಗತ್ತೆ ಓಡಾಟಕ್ಕೆ ನಿರ್ಬಂಧ!

Bangalore Turf Club horse restrictions:: ಕುದುರೆ ಗ್ಲ್ಯಾಂಡರ್ಸ್ ರೋಗ ಕಾಣಿಸಿಕೊಂಡಿರುವ ಹಿನ್ನೆಲೆ ಬೆಂಗಳೂರು ಟರ್ಫ್ ಕ್ಲಬ್‌ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಕತ್ತೆ ಪ್ರಾಣಿಗಳ ಚಲನ ನಿರ್ಬಂಧಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.

Read Full Story

09:36 AM (IST) Dec 19

'ಎರಡನೆ ಬೆಳೆಗೆ ನೀರಿಲ್ಲ, ಸಸಿ ನಾಟಿ ಮಾಡಬೇಡಿ' ತುಂಗಭದ್ರಾ ರೈತರಿಗೆ ಸಚಿವ ತಂಗಡಗಿ ಅಚ್ಚರಿಯ ಸಲಹೆ!

ಕಾರಟಗಿಯಲ್ಲಿ ರೈತರನ್ನು ಭೇಟಿಯಾದ ಸಚಿವ ಶಿವರಾಜ ತಂಗಡಗಿ, ತುಂಗಭದ್ರಾ ಅಣೆಕಟ್ಟೆ ಕಾಮಗಾರಿಯಿಂದಾಗಿ ಬೇಸಿಗೆಯ ಎರಡನೇ ಬೆಳೆಗೆ ನೀರು ಲಭ್ಯವಿಲ್ಲದ ಕಾರಣ ಸಸಿ ನಾಟಿ ಮಾಡದಂತೆ ರೈತರಿಗೆ ಸಲಹೆ ನೀಡಿದರು. ಇದೇ ವೇಳೆ, ಕಾಂಗ್ರೆಸ್‌ನಲ್ಲಿ ಯಾವುದೇ ಸಹಿ ಸಂಗ್ರಹ ನಡೆದಿಲ್ಲ, ಇದೆಲ್ಲಾ ಬಿಜೆಪಿಯ ಸೃಷ್ಟಿ ಎಂದರು.

Read Full Story

09:23 AM (IST) Dec 19

Mysore - ಗೌರವ ಕೊಡದ ಹೆಂಡ್ತಿ ಕೊಲ್ಲಲು ಸುಪಾರಿ ಕೊಟ್ಟ ಪತಿರಾಯ!

ಮೈಸೂರಿನಲ್ಲಿ, ತನಗೆ ಗೌರವ ನೀಡುತ್ತಿಲ್ಲ ಎಂಬ ಕಾರಣಕ್ಕೆ ಪಾನಿಪುರಿ ವ್ಯಾಪಾರಿಯೊಬ್ಬ ತನ್ನ ಪತ್ನಿಯನ್ನೇ ಕೊಲ್ಲಲು 5 ಲಕ್ಷ ರೂಪಾಯಿ ಸುಪಾರಿ ನೀಡಿದ್ದಾನೆ. ಸುತ್ತಿಗೆಯಿಂದ ಹೊಡೆದು, ಮನೆಗೆ ಬೆಂಕಿ ಹಚ್ಚಿ ಅಪಘಾತವೆಂದು ಬಿಂಬಿಸಲು ಯತ್ನಿಸಿದರೂ, ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read Full Story

09:14 AM (IST) Dec 19

ಮುಡಾ ಪ್ರಕರಣ - ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತಪರಾಕಿ! ತನಿಖೆಯ ವೈಖರಿಗೆ ತೀವ್ರ ಅಸಮಾಧಾನ

ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ತನಿಖೆ ವಿಳಂಬಿಸಿದ್ದಕ್ಕೆ ಲೋಕಾಯುಕ್ತ ಪೊಲೀಸರನ್ನು ವಿಶೇಷ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಅಂತಿಮ ವರದಿ ಸಲ್ಲಿಸಲು ವಿಫಲವಾದರೆ ಲಭ್ಯ ದಾಖಲೆಗಳ ಆಧಾರದ ಮೇಲೆ ಬಿ-ರಿಪೋರ್ಟ್ ಬಗ್ಗೆ ತೀರ್ಮಾನಿಸುವುದಾಗಿ ಎಚ್ಚರಿಕೆ 

Read Full Story

08:41 AM (IST) Dec 19

ಇಂದು ಕೂಡ ಸಮಾಜ ಮುಜುಗರಪಡುವ ಟಾಪಿಕ್‌ ಬಗ್ಗೆ ದನಿಯೆತ್ತಿದ Annayya Serial; ವೀಕ್ಷಕರಿಂದ ಮೆಚ್ಚುಗೆ

Annayya Serial Today Episode: 'ಅಣ್ಣಯ್ಯ' ಧಾರಾವಾಹಿಯಲ್ಲಿ ಈಗಾಗಲೇ ನಾಲ್ಕು ಟ್ರ್ಯಾಕ್‌ ಕಥೆ ಸಾಗುತ್ತಿದೆ. ಶಿವು-ಪಾರು, ರಶ್ಮಿ-ಜಿಮ್‌ ಸೀನ, ರತ್ನ, ರಾಣಿ-ಮನು ಕುರಿತಂತೆ ಎಪಿಸೋಡ್‌ ಪ್ರಸಾರ ಆಗ್ತಿದೆ. ಈ ಮಧ್ಯೆ ಹೊಸ ವಿಷಯವನ್ನು ಹೇಳಲಾಗಿದೆ. ಧಾರಾವಾಹಿಯಲ್ಲಿ ಸಾಮಾಜಿಕ ಸಂದೇಶ ಸಾರಲಾಗಿದೆ.

 

Read Full Story

08:24 AM (IST) Dec 19

BBK 12 - ಆಗ ಕಿಚ್ಚ ಸುದೀಪ್‌ ಹೇಳಿದ್ರೂ ಕೇಳಲಿಲ್ಲ; ಈಗ ಗಿಲ್ಲಿ ನಟ ಶರಣಾಗುವಂತೆ ಮಾಡಿದ ರಕ್ಷಿತಾ ಶೆಟ್ಟಿ

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಈಗ ರಕ್ಷಿತಾ, ಧ್ರುವಂತ್‌ ಅವರು ಮನೆಯೊಳಗಡೆ ಬಂದು, ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಈಗ ಮನೆಯಲ್ಲಿದ್ದವರು ಮನೆಯನ್ನು ಕ್ಲೀನ್‌ ಮಾಡಬೇಕಿದೆ.

Read Full Story

07:55 AM (IST) Dec 19

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?

ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಪ್ತ ಸಚಿವರು ರಹಸ್ಯ ಸಭೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡದಂತೆ ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿದ್ದು, ಹೈಕಮಾಂಡ್ ಮೇಲೆ ಒತ್ತಡ ತರಲು 'ಪತ್ರ ಚಳುವಳಿ' ಹಾಗೂ ಬೃಹತ್ 'ಅಹಿಂದ' ಸಮಾವೇಶ ನಡೆಸಲು ನಿರ್ಧಾರ.

Read Full Story

07:36 AM (IST) Dec 19

ಬೆಂಗಳೂರು ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!

ನಗರದ 75 ಜಂಕ್ಷನ್‌ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗಿದ್ದು, ಈ ಪೈಕಿ ಅರ್ಧದಷ್ಟು ಜಂಕ್ಷನ್‌ಗಳಲ್ಲಿ ಈವರೆಗೆ ಕಾಮಗಾರಿಯೇ ಶುರುವಾಗಿಲ್ಲ. ಇನ್ನೂ ಕಾಮಗಾರಿ ಆರಂಭಿಸಲಾದ 12 ಜಂಕ್ಷನ್‌ಗಳಲ್ಲಿ ಕೇವಲ ಶೇ.25 ರಷ್ಟು ಕಾಮಗಾರಿ ಪೂರ್ಣಗೊಂಡಿಲ್ಲ.

 

Read Full Story

07:36 AM (IST) Dec 19

ಜಿಪಂ ಸದಸ್ಯ ಯೋಗೇಶ್‌ ಗೌಡ ಹತ್ಯೆ ಕೇಸ್‌: ವಿನಯ್‌ ಕುಲಕರ್ಣಿಗೆ ಬೇಲ್‌ ಅಗತ್ಯವೇ ಇಲ್ಲ: ಸಿಬಿಐ ವಾದ

ಧಾರವಾಡ ಜಿಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ. ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ ಮುಂದೂಡಿದೆ. ಸುಪ್ರೀಂ ಹಿಂದೆ ಜಾಮೀನು ರದ್ದುಪಡಿಸಿದ್ದರಿಂದ, ಹಾಲಿ ಅರ್ಜಿಯನ್ನು ಹೈಕೋರ್ಟ್‌ ನಿರ್ಧರಿಸಬಹುದೇ ಎಂಬ ಬಗ್ಗೆ ಸ್ಪಷ್ಟನೆ ಕೋರಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ

 

Read Full Story

07:35 AM (IST) Dec 19

ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು

ಹಿಂದಿ-ಇಂಗ್ಲಿಷ್‌ನಲ್ಲೇ ನಡೆಸಲುದ್ದೇಶಿಸಿದ್ದ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ಗೂಡ್ಸ್‌ ಟ್ರೈನ್‌ ವ್ಯವಸ್ಥಾಪಕ ಹುದ್ದೆಗೆ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ನಿರ್ದೇಶನ ನೀಡಿದ್ದಾರೆ.

 

Read Full Story

07:35 AM (IST) Dec 19

ಪಾಕ್‌ ಜಿಂದಾಬಾದ್‌ ಕೇಸ್‌: ಸಿಟಿ ರವಿ ಪ್ರಶ್ನೆಗೆ ಗೃಹಸಚಿವ ಸ್ಫೋಟಕ ಮಾಹಿತಿ

ಕಳೆದ ಮೂರು ವರ್ಷಗಳಲ್ಲಿ 'ಪಾಕಿಸ್ತಾನ್‌ ಜಿಂದಾಬಾದ್‌' ಘೋಷಣೆ ಕೂಗಿದವರ ವಿರುದ್ಧ ಆರು ಸ್ವಯಂ ಪ್ರೇರಿತ ದೂರು ದಾಖಲಿಸಿ, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿಧಾನ ಪರಿಷತ್‌ನಲ್ಲಿ ತಿಳಿಸಿದ್ದಾರೆ. ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದರು.

Read Full Story

07:34 AM (IST) Dec 19

ಸಿಎಂ ಸಿದ್ದುಗೆ ಇದು ಕೊನೆ ಅಧಿವೇಶನ: ವಿಜಯೇಂದ್ರ

‘ಸಿದ್ದರಾಮಯ್ಯ ಔಟ್‌ಗೋಯಿಂಗ್‌ ಚೀಫ್‌ ಮಿನಿಸ್ಟರ್‌. ಇದು ಅವರ ಕೊನೆಯ ಅಧಿವೇಶನ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಅಲ್ಲದೆ, ‘ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ರಾಜ್ಯದ ಖಜಾನೆ ಖಾಲಿ ಎಂದು ಗಂಭೀರ ಆರೋಪ ಮಾಡಿದ್ದಾರೆ.

 

Read Full Story

07:34 AM (IST) Dec 19

ಬಿವೈವಿ ಕಲೆಕ್ಷನ್‌ ಕಿಂಗ್‌, ಕಲೆಕ್ಷನ್‌ ಬಿಚ್ಚಿಡ್ಲಾ? : ಡಿಕೆ

‘ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ರಾಜ್ಯದ ಖಜಾನೆ ಖಾಲಿ ಮಾಡಿ ಹೈಕಮಾಂಡ್ ಅನ್ನು ತೃಪ್ತಿಪಡಿಸುತ್ತಿದ್ದಾರೆ’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಕಿಡಿಕಾರಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

 

Read Full Story

07:34 AM (IST) Dec 19

ಉ.ಕ. ಪರ ಕೇಂದ್ರಕ್ಕೆ ಅಸೆಂಬ್ಲಿ 7 ನಿರ್ಣಯ

ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ‘ಏಮ್ಸ್’ ಸಂಸ್ಥೆ ಸ್ಥಾಪಿಸಲು ಅಂತಿಮ ಅನುಮೋದನೆ ನೀಡಬೇಕು ಸೇರಿ ಏಳು ಬೇಡಿಕೆಗಳನ್ನು ಜಾರಿ ತರುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಲಾಯಿತು.

 

Read Full Story

07:31 AM (IST) Dec 19

ಚುನಾವಣಾ ಆಯೋಗ ಆದೇಶಕ್ಕೂ ಮೊದಲೇ ಧಾರವಾಡದಲ್ಲಿ ಎಸ್ಐಆರ್

ಕೇಂದ್ರ ಚುನಾವಣಾ ಆಯೋಗ ಅಧಿಕೃತ ಸೂಚನೆಗೂ ಮುನ್ನವೇ ಕರ್ನಾಟಕದಲ್ಲಿ, ವಿಶೇಷವಾಗಿ ಧಾರವಾಡ ಜಿಲ್ಲೆಯಲ್ಲಿ, ಮತದಾರರ ಪಟ್ಟಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪೂರ್ವ ತಯಾರಿ ಕಾರ್ಯ ಆರಂಭವಾಗಿದೆ. ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಮತದಾರರ ಪರಿಶೀಲನೆ ನಡೆಸುತ್ತಿದೆ.

 

Read Full Story

07:30 AM (IST) Dec 19

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌

ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ, ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂಥ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025’ ಅಂಗೀಕಾರ

 

Read Full Story

More Trending News