ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಹೊರಬರುವ ಉದ್ದೇಶದೊಂದಿಗೆ ಜಲಮಂಡಳಿಯು ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಲಿದೆ. ಪರಿಣಾಮ ಏಪ್ರಿಲ್ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ ಸರಾಸರಿ 20ರಿಂದ 30 ರು. ಹೆಚ್ಚುವರಿ ನೀರಿನ ಬಿಲ್ ಬರುವ ಸಾಧ್ಯತೆಗಳಿವೆ.
ನೀರಿನ ಸರಬರಾಜು ವೆಚ್ಚ, ನಿರ್ವಹಣಾ ವೆಚ್ಚ, ವಿದ್ಯುತ್ ಮತ್ತು ಮೂಲಸೌಕರ್ಯ ಖರ್ಚಿನಲ್ಲಿನ ಹೆಚ್ಚಳ ಸೇರಿ ಇನ್ನಿತರ ಕಾರಣಗಳಿಂದಾಗಿ ಜಲಮಂಡಳಿ ಆರ್ಥಿಕ ನಷ್ಟದಲ್ಲಿದೆ. ಅದನ್ನು ತಪ್ಪಿಸಲು ಪ್ರತಿವರ್ಷ ಶೇ.3ರಷ್ಟು ನೀರು ಬಳಕೆ ಶುಲ್ಕ ಹೆಚ್ಚಿಸಲು ಜಲಮಂಡಳಿ ನಿರ್ಧರಿಸಿದೆ. ಕಳೆದ ವರ್ಷವೂ ಇದೇ ಮಾದರಿಯಲ್ಲಿ ನೀರು ಬಳಕೆ ಶುಲ್ಕ ಹೆಚ್ಚಿಸಲಾಗಿತ್ತು. ಇದೀಗ ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ಮತ್ತೆ ಶೇ.3ರಷ್ಟು ನೀರಿನ ಬಿಲ್ ಹೆಚ್ಚಳ ಮಾಡಲಾಗುತ್ತಿದೆ.
09:32 AM (IST) Apr 01
ಪೊಲೀಸರು ನೋಟಿಸ್ ಅಥವಾ ಎಫ್ಐಆರ್ ಪ್ರತಿಯನ್ನು ವಾಟ್ಸ್ಆ್ಯಪ್ ಅಥವಾ ಇತರೆ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ನೀಡುವಂತಿಲ್ಲ, ಬದಲಾಗಿ ಭೌತಿಕವಾಗಿಯೇ ನೀಡಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆದರೆ ಈ ಕೇಳಗಿನ ಸಂದರ್ಭದಲ್ಲಿ ಆರೋಪಿಗೆ ವಾಟ್ಸಪ್ ನೋಟಿಸ್ ನೀಡಬಹುದು ಎಂದಿದೆ.
09:32 AM (IST) Apr 01
ಚಿನ್ನದ ಬೆಲೆ ಏರಿಕೆಯಿಂದಾಗಿ ಐತಿಹಾಸಿಕ ನಾಣ್ಯಗಳ ಮೇಲೆ ಆಸಕ್ತಿ ಬೆಳೆಸಿಕೊಂಡ ಲೇಖಕರು, ಆನ್ಲೈನ್ ಹರಾಜಿನಲ್ಲಿ ವಿಜಯನಗರ ಸಾಮ್ರಾಜ್ಯದ ಅಪರೂಪದ ನಾಣ್ಯಗಳನ್ನು ಹುಡುಕಲು ಆರಂಭಿಸುತ್ತಾರೆ.
09:12 AM (IST) Apr 01
08:57 AM (IST) Apr 01
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಮಹೋತ್ಸವವನ್ನು ವೈಭವೋಪೇತವಾಗಿ ಆಚರಿಸಲಾಗುತ್ತಿದೆ. ಈ ಗುರುವಂದನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದು, ಲಕ್ಷಾಂತರ ಭಕ್ತರಿಗಾಗಿ ದಾಸೋಹದ ವ್ಯವಸ್ಥೆ ಮಾಡಲಾಗಿದೆ.
08:53 AM (IST) Apr 01
ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ನ ರಿಜಿಸ್ಟ್ರಾರ್ ಮಲ್ಲು ಎಂಬಾತ ತನ್ನದೇ ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ. ಸಂತ್ರಸ್ತೆ ದೂರಿನ ಅನ್ವಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿ ಅಧಿಕಾರಿಯು ತಲೆಮರೆಸಿಕೊಂಡಿದ್ದಾನೆ.
07:57 AM (IST) Apr 01
ಶಿವಮೊಗ್ಗದಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಬಾಲಕ ಸಂಕೇತ್ ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಪ್ರತಿ ಬುಧವಾರ ಪೂಜೆ ಸಲ್ಲಿಸುತ್ತಿದ್ದ ಕುಟುಂಬಸ್ಥರು, ಮಗನ ಸಮಾಧಿ ಧ್ವಂಸಗೊಂಡಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
07:51 AM (IST) Apr 01
07:46 AM (IST) Apr 01
07:27 AM (IST) Apr 01
Bengaluru Karaga 2026 ಐತಿಹಾಸಿಕ ಬೆಂಗಳೂರು ಹಸಿ ಕರಗ ಮಹೋತ್ಸವವು ಸಂಪಂಗಿ ಕೆರೆ ಅಂಗಳದಲ್ಲಿ ಭಕ್ತಿ-ಭಾವದಿಂದ ಆರಂಭವಾಗಿದೆ. ಬುಧವಾರ ರಾತ್ರಿ ನಡೆಯಲಿರುವ ಹೂವಿನ ಕರಗವು ನಗರದ ಪ್ರಮುಖ ಭಾಗಗಳಲ್ಲಿ ಸಂಚರಿಸಲಿದ್ದು, ಇದಕ್ಕಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.