Published : Aug 01, 2025, 06:57 AM ISTUpdated : Aug 01, 2025, 11:10 PM IST

Karnatata Latest News Live: ಸಾವು ಬದುಕಿನ ನಡುವೆ ಹೋರಾಡುತ್ತಿರುವ ಸ್ಯಾಂಡಲ್‌ವುಡ್‌ ಯುವ ನಟ 'ಗಣಪ' ಸಂತೋಷ್‌ ಬಾಲರಾಜ್‌!

ಸಾರಾಂಶ

ಕೊಪ್ಪಳ ನಗರದ ಕೆಆರ್‌ಐಡಿಎಲ್(ಕರ್ನಾಟಕ ಗ್ರಾಮೀಣ ಮೂಲಸೌ ಕಠ್ಯ ಅಭಿವೃದ್ಧಿನಿಗಮ) ನಲ್ಲಿ ಕೆಲ ವರ್ಷ ಹೊರ ಗುತ್ತಿಗೆ ಕಚೇರಿ ಸಹಾಯಕನಾಗಿದ್ದವನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಆತನ ಬಳಿ ಇದ್ದ ಬರೋಬ್ಬರಿ ಆಸ್ತಿ ನೋಡಿ ಲೋಕಾಯುಕ್ತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, 24 ಮನೆ, 50 ನಿವೇಶನ, 40 ಎಕರೆ ಜಮೀನು, ಬಂಗಾರ, ಬೆಳ್ಳಿ ಸೇರಿದಂತೆ 100 ಕೋಟಿ ರು. ಮೌಲ್ಯದ ಆಸ್ತಿ ಪತ್ತೆ ದಾಖಲೆ ಪತ್ತೆಯಾಗಿದೆ.

santhosh balaraj

11:10 PM (IST) Aug 01

ಸಾವು ಬದುಕಿನ ನಡುವೆ ಹೋರಾಡುತ್ತಿರುವ ಸ್ಯಾಂಡಲ್‌ವುಡ್‌ ಯುವ ನಟ 'ಗಣಪ' ಸಂತೋಷ್‌ ಬಾಲರಾಜ್‌!

ಜಾಂಡೀಸ್‌ನಿಂದ ಬಳಲುತ್ತಿರುವ ನಟ ಸಂತೋಷ್‌ ಬಾಲರಾಜ್‌ ಅವರ ಆರೋಗ್ಯ ತೀರಾ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ. ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರಿಯಾ 2, ಕೆಂಪ, ಗಣಪ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

Read Full Story

10:02 PM (IST) Aug 01

ಕರ್ನಾಟಕ ಸಾರಿಗೆ ನೌಕರರ ಮುಷ್ಕರಕ್ಕೆ ಸೆಡ್ಡು ಹೊಡೆದ ಸರ್ಕಾರ! ನಾಳೆ ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರವು ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಲಿದೆ. ಈ ಸಭೆಯಲ್ಲಿ ವಿವಿಧ ಬಸ್ ಮಾಲೀಕರ ಸಂಘಗಳ ಪ್ರತಿನಿಧಿಗಳಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಿದೆ.

Read Full Story

09:59 PM (IST) Aug 01

ಗೃಹಲಕ್ಷ್ಮೀ ಜಂಟಿ ಹೊಣೆಗಾರಿಕೆ ಗುಂಪುಗಳ ರಚನೆ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಆರ್ಥಿಕ ಅಭಿವೃದ್ಧಿಯನ್ನು ವ್ಯವಸ್ಥಿತಗೊಳಿಸುವ ಸಂಬಂಧ ಜಂಟಿ ಹೊಣೆಗಾರಿಕೆ ಗುಂಪುಗಳ ರಚನೆಗೆ ಸರ್ಕಾರ ಉದ್ದೇಶಿಸಿದ್ದು, ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೇತೃತ್ವದಲ್ಲಿ ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

Read Full Story

09:10 PM (IST) Aug 01

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ! ಹಾಸ್ಯನಟನ ನಿಜ ಜೀವನದಲ್ಲಿ ನಗುವೇ ಇರಲಿಲ್ಲ!

ಜೀ ಕನ್ನಡದ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಯಲ್ಲಾಪುರದ ಕಟ್ಟಿಗೆ ಗ್ರಾಮದ ಸಮೀಪದ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ.

Read Full Story

09:06 PM (IST) Aug 01

ಐಟಿ ದಾಳಿ ಸಾಮಾನ್ಯ, ಇದಕ್ಕೂ ಸ್ಮಾರ್ಟ್‌ ಮೀಟರ್‌ ಒಪ್ಪಂದಕ್ಕೂ ಸಂಬಂಧವಿಲ್ಲ - ಕೆಜೆ ಜಾರ್ಜ್‌

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಮೇಲಿನ ಐಟಿ ದಾಳಿಗಳು ನಿಯಮಿತ ಕಾರ್ಯವಿಧಾನವಾಗಿದ್ದು, ಯಾವುದೇ ಸರ್ಕಾರಿ ಯೋಜನೆಗಳಿಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗಾಲ್ಫ್‌ಲಿಂಕ್ಸ್ ಸಾಫ್ಟ್‌ವೇರ್ ಪಾರ್ಕ್ ಕೂಡ ಇದನ್ನು ದೃಢಪಡಿಸಿದೆ.
Read Full Story

08:50 PM (IST) Aug 01

ಮದುವೆಯಾದ ಯುವತಿಗೆ ಮೆಸೇಜ್ ಮಾಡಿದ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ; ಬರ್ತಡೇ ಪಾರ್ಟಿ ದಿನವೇ ಹೆಣಹಾಕಿದ ಗಂಡ!

ಹಾವೇರಿಯಲ್ಲಿ ಮದುವೆಯಾದ ಯುವತಿಗೆ ಮೆಸೇಜ್ ಕಳುಹಿಸಿದ್ದಕ್ಕೆ ಕಾಂಗ್ರೆಸ್ ಮುಖಂಡನನ್ನು ಬರ್ತಡೇ ದಿನದಂದೇ ಕೊಲೆ ಮಾಡಲಾಗಿದೆ. ಮನೋಜ್ ಪ್ರಕಾಶ್ ಉಡಗಣಿ ಎಂಬ ಕಾಂಗ್ರೆಸ್ ಕಾರ್ಯದರ್ಶಿಯನ್ನು ಕಂಠಪೂರ್ತಿ ಮದ್ಯ ಕುಡಿಸಿ ವರದಾ ನದಿಗೆ ತಳ್ಳಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೃತನ ಕುಟುಂಬಸ್ಥರ ಆಕ್ರೋಶ.

Read Full Story

08:33 PM (IST) Aug 01

ಬೇಕಾಬಿಟ್ಟಿ ಥಾರ್‌ ಚಲಾಯಿಸಿ ಬೈಕ್‌ಗೆ ಗುದ್ದಿದ ರಕ್ಷಕ್‌ ಬುಲೆಟ್‌, ಯುವಕನ ಕಾಲು ಮುರಿತ!

ನಟ ರಕ್ಷಕ್ ಬುಲೆಟ್ ಅವರ ಥಾರ್ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕನ ಕಾಲು ಮುರಿತವಾಗಿದೆ. ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read Full Story

08:15 PM (IST) Aug 01

ಭಾರತೀಯ ಮೂಲದ ನಿಖಿಲ್ ರವಿಶಂಕರ್ ಏರ್ ನ್ಯೂಜಿಲೆಂಡ್ ಸಂಸ್ಥೆಯ ಸಿಇಒ ಆಗಿ ನೇಮಕ

ಜಾಗತಿಕ ಪ್ರತಿಷ್ಠಿತ ಕಂಪನಿಗಳ ಮುಖ್ಯಸ್ಥರಾಗಿರುವ ಭಾರತೀಯರ ಸಾಲಿಗೆ ಮತ್ತೊಬ್ಬ ಸಾಧಕ ಸೇರಿಕೊಂಡಿದ್ದಾರೆ. ಏರ್ ನ್ಯೂಜಿಲೆಂಡ್ ಏರ್‌ಲೈನ್ಸ್ ಸಂಸ್ಥೆಯ ಸಿಇಒ ಆಗಿ ಭಾರತೀಯ ಮೂಲದ ನಿಖಿಲ್ ರವಿಶಂಕರ್ ನೇಮಕಗೊಂಡಿದ್ದಾರೆ.

Read Full Story

08:11 PM (IST) Aug 01

ಪ್ರಜ್ವಲ್ ರೇವಣ್ಣ ಅಪರಾಧಿ ತೀರ್ಪಿಗೆ ಮೌನಕ್ಕೆ ಶರಣಾದ ಅಪ್ಪ, ಯಾರ‍್ಯಾರು ಏನು ಹೇಳಿದ್ರು?

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಒಂದು ಪ್ರಕರಣದಲ್ಲಿ ತೀರ್ಪು ಬಂದಿದ್ದು, ಇನ್ನೂ ಮೂರು ಪ್ರಕರಣಗಳು ಬಾಕಿ ಇವೆ. ಡಿಕೆಶಿ, ಅಶ್ವಥ್ ನಾರಾಯಣ್, ಸುಮಲತಾ ಅಂಬರೀಶ್ ಮತ್ತು ರೂಪಾ ಹಾಸನ್ ಪ್ರತಿಕ್ರಿಯಿಸಿದ್ದಾರೆ.

Read Full Story

07:45 PM (IST) Aug 01

ರಸ್ತೆಯಲ್ಲಿ ಸಿಕ್ಕ ₹50,000 ಹಣದ ಬ್ಯಾಗನ್ನು ಕಂಕಳಲ್ಲಿಟ್ಟುಕೊಂಡು ಬಂದು ಪೊಲೀಸರಿಗೆ ಒಪ್ಪಿಸಿದ ಪ್ರಾಮಾಣಿಕ ವ್ಯಕ್ತಿ!

ಚಳ್ಳಕೆರೆಯಲ್ಲಿ ರಂಗನಾಥ್ ಎಂಬುವವರಿಗೆ ರಸ್ತೆಯಲ್ಲಿ ₹50,000 ಹಣದ ಬ್ಯಾಗ್ ಸಿಕ್ಕಿದೆ. ಬ್ಯಾಗ್‌ ಅನ್ನು ಮನೆಗೆ ತೆಗೆದುಕೊಂಡು ಹೋಗದೆ, ನೇರವಾಗಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ನಂತರ ಹಣ ಕಳೆದುಕೊಂಡ ಗೋವರ್ಧನ್ ಎಂಬುವವರಿಗೆ ಪೊಲೀಸರು ಹಣವನ್ನು ಹಿಂದಿರುಗಿಸಿದ್ದಾರೆ.

Read Full Story

07:26 PM (IST) Aug 01

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ,ಶಾರುಖ್ ಖಾನ್-ವಿಕ್ರಾಂತ್ ಮಾಸ್ಸೆ ಬೆಸ್ಟ್ ನಟ ಕಿರೀಟ

7ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ಸ್ ಪ್ರಕಟವಾಗಿದೆ. ಶಾರುಖ್ ಖಾನ್ ಹಾಗೂ ವಿಕ್ರಾಂಸ್ ಮಾಸ್ಸೆಗೆ ಬೆಸ್ಟ್ ಆ್ಯಕ್ಟರ್ ಪ್ರಶಸ್ತಿ ಒಲಿದು ಬಂದಿದ್ದರೆ, ಅತ್ಯುತ್ತಮ ನಟಿ ಪ್ರಶಸ್ತಿ ರಾಣಿ ಮುಖರ್ಜಿ ಪಾಲಾಗಿದೆ. ಯಾವ ಸಿನಿಮಾಗಳಿಗೆ ಸಿಕ್ಕಿದೆ ಪ್ರಶಸ್ತಿ ಇಲ್ಲಿದೆ ಲಿಸ್ಟ್.

Read Full Story

07:24 PM (IST) Aug 01

ಧರ್ಮಸ್ಥಳ ಸಮಾಧಿ ಪ್ರಕರಣ, 19 ವರ್ಷಗಳ ಯುಡಿಆರ್ ದಾಖಲೆ ಸಂಗ್ರಹಿಸಿದ ಎಸ್‌ಐಟಿ

ನೇತ್ರಾವತಿ ನದಿ ತೀರದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪದ ತನಿಖೆಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡವು ಧರ್ಮಸ್ಥಳ ಗ್ರಾಮ ಪಂಚಾಯತಿಯಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಜುಲೈ 31 ರಂದು 6 ನೇ ಸ್ಥಳದಲ್ಲಿ ಕಳೇಬರ ಪತ್ತೆಯಾಗಿದ್ದು, 7 ಮತ್ತು 8 ನೇ ಸ್ಥಳಗಳಲ್ಲಿ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ.  

Read Full Story

07:22 PM (IST) Aug 01

ಬೆಂಗಳೂರು-ತಿರುವನಂತಪುರಂ ನಡುವೆ ವಿಶೇಷ ರೈಲುಗಳು ಘೋಷಣೆ; ವೇಳಾಪಟ್ಟಿ ಇಲ್ಲಿದೆ

Onam Special Train Bookings: ಬೆಂಗಳೂರು ಮತ್ತು ತಿರುವನಂತಪುರಂ ನಡುವೆ ವಿಶೇಷ ರೈಲುಗಳನ್ನು ಘೋಷಿಸಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ವಾರದ ಮತ್ತು ಬುಧವಾರದಂದು ಸಂಚರಿಸಲಿರುವ ಈ ರೈಲುಗಳು ಪ್ರಯಾಣಿಕರಿಗೆ ಅನುಕೂಲವಾಗಲಿದೆ.

Read Full Story

07:17 PM (IST) Aug 01

ಸ್ಯಾಂಡಲ್‌ವುಡ್‌ಗೆ ಮತ್ತೊಂದು ರಾಷ್ಟ್ರಪ್ರಶಸ್ತಿ, ಕಂದೀಲು ಸಿನಿಮಾಗೆ ಅವಾರ್ಡ್‌!

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ 'ಕಂದೀಲು' ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಪಡೆದಿದೆ. ಚಿದಾನಂದ ನಾಯಕ್ ಅವರ 'ಸನ್​ಫ್ಲವರ್ಸ್​​' ಚಿತ್ರಕಥೆಗೆ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಗಳು ಕನ್ನಡ ಚಿತ್ರರಂಗದ ಸಾಧನೆಯನ್ನು ಎತ್ತಿ ತೋರಿಸುತ್ತವೆ.
Read Full Story

07:03 PM (IST) Aug 01

ಕೇರಳ ನರ್ಸ್ ನಿಮಿಷ ಪ್ರಿಯಾ ಪ್ರಕರಣಕ್ಕೆ ಟ್ವಿಸ್ಟ್, ಯೆಮೆನ್ ಗಲ್ಲು ಶಿಕ್ಷೆ ರದ್ದಾಗಿಲ್ಲ

ಕೇರಳ ನರ್ಸ್ ನಿಮಿಷ ಪ್ರಿಯಾಗೆ ಯೆಮೆನ್ ಕೋರ್ಟ್ ನೀಡಿದ್ದ ಗಲ್ಲು ಶಿಕ್ಷೆ ಹಲವರ ಸಂಧಾನದಿಂದ ರದ್ದಾಗಿದೆ ಅನ್ನೋ ಸುದ್ದಿ, ವಿಡಿಯೋ ಹರಿದಾಡಿತ್ತು. ಆದರೆ ಈ ಪ್ರಕರಣ ಕುರಿತು ಇದೀಗ ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟನೆ ನೀಡಿದೆ.

 

Read Full Story

06:41 PM (IST) Aug 01

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ - ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿದೆ. ಈ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Read Full Story

06:27 PM (IST) Aug 01

ಬರೋಬ್ಬರಿ 12 ಸಾವಿರ ಉದ್ಯೋಗ ಕಡಿತ, ಟಿಸಿಎಸ್‌ನಿಂದ ಉತ್ತರ ಕೇಳಿ ರಾಜ್ಯ ಕಾರ್ಮಿಕ ಇಲಾಖೆ ನೋಟಿಸ್

ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (KITU) ರಾಜ್ಯ ಕಾರ್ಮಿಕ ಇಲಾಖೆಗೆ ದೂರು ಸಲ್ಲಿಸಿದೆ. ಕೈಗಾರಿಕಾ ವಿವಾದ ಕಾಯ್ದೆ ಉಲ್ಲಂಘನೆ ಮತ್ತು ನೌಕರರನ್ನು ರಾಜೀನಾಮೆ ನೀಡಲು ಬಲವಂತಪಡಿಸಿದ ಆರೋಪ ಕೇಳಿಬಂದಿದೆ. 

Read Full Story

06:26 PM (IST) Aug 01

ಕಬ್ಬನ್‌ ಪಾರ್ಕ್‌ನಲ್ಲಿ 18 ವರ್ಷ ಮೇಲ್ಪಟ್ಟವರಿಗೆ 199 ರೂ.ಗೆ ಬ್ಲೈಂಡ್ ಡೇಟಿಂಗ್ ಆಯೋಜನೆ!

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಕೇವಲ 199 ರೂ.ಗೆ ಯುವಕ-ಯುವತಿಯರಿಗೆ 'ಬ್ಲೈಂಡ್ ಡೇಟ್' ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದರ ಬುಕಿಂಗ್ ಕೂಡ ಆರಂಭವಾಗಿದೆ. ಇದಕ್ಕೆ ಸ್ಥಳೀಯ ಜನರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ತೋಟಗಾರಿಕಾ ಇಲಾಖೆ ಯಾವುದೇ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.

Read Full Story

06:12 PM (IST) Aug 01

ಅವಳಿ ಮಕ್ಕಳ ನಿರೀಕ್ಷೆಯಲ್ಲಿರುವ ನಟಿ ಭಾವನಾ ರಾಮಣ್ಣ ಸೀಮಂತ ಸಂಭ್ರಮ

ಖ್ಯಾತ ನಟಿ ಭಾವನಾ ರಾಮಣ್ಣ ಐವಿಎಫ್ ಮೂಲಕ ಅವಳಿ ಮಕ್ಕಳನ್ನು ನಿರೀಕ್ಷಿಸುತ್ತಿದ್ದಾರೆ. ಅದ್ದೂರಿಯಾಗಿ ನಡೆದ ಸೀಮಂತ ಕಾರ್ಯಕ್ರಮದಲ್ಲಿ ಆಪ್ತರು, ಕುಟುಂಬಸ್ಥರು ಭಾಗವಹಿಸಿದ್ದರು. ನವೆಂಬರ್ 2025ರಲ್ಲಿ ಡೆಲಿವರಿ ನಿರೀಕ್ಷಿಸಲಾಗಿದೆ.
Read Full Story

05:35 PM (IST) Aug 01

ಭಕ್ತಾದಿಗಳೇ ಗಮನಿಸಿ.. ಇನ್ಮುಂದೆ ತಿರುಪತಿಯಲ್ಲಿ ರೀಲ್ಸ್‌ ಮಾಡಿದ್ರೆ ಜೈಲು ಶಿಕ್ಷೆ - ಟಿಟಿಡಿ ಎಚ್ಚರಿಕೆ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ): ತಿಮ್ಮಪ್ಪನ ಗುಡಿಯ ಹತ್ತಿರ ರೀಲ್ಸ್‌ ಮಾಡಿದ್ರೆ ಖಂಡಿತಾ ಶಿಕ್ಷೆ ಅನುಭವಿಸಬೇಕಾಗುತ್ತೆ ಅಂತ ಟಿಟಿಡಿ ಎಚ್ಚರಿಕೆ ಕೊಟ್ಟಿದೆ. ಭಕ್ತರ ಭಾವನೆಗಳಿಗೆ ಗೌರವ ಕೊಡಿ ಅಂತ ಮನವಿ ಮಾಡಿದೆ.

Read Full Story

05:07 PM (IST) Aug 01

ಡ್ರೈವಿಂಗ್ ಕೆಲಸಕ್ಕೆ ಬಂದು ಮಗು ಕಿಡ್ನಾಪ್ ಮಾಡಿದ; ₹5 ಲಕ್ಷ ಹಣ ಕೊಡದೇ, ಪೊಲೀಸರಿಗೆ ಹೇಳಿದ್ದಕ್ಕೆ ಕೊಂದೇಬಿಟ್ಟ!

ಬೆಂಗಳೂರಿನಲ್ಲಿ 13 ವರ್ಷದ ಬಾಲಕನನ್ನು ಅಪಹರಿಸಿ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಕೊಲೆ ಮಾಡಲಾಗಿದೆ. ಪರಿಚಿತ ಡ್ರೈವರ್ ಆಗಿದ್ದ ಆರೋಪಿ, ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದಾಗ ಗುಂಡೇಟಿನಿಂದ ಬಂಧಿತನಾಗಿದ್ದಾನೆ. ಈ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದ್ದು, ಆರೋಪಿ ಪೊಲೀಸ್ ಕುಟುಂಬದವನಾಗಿದ್ದಾನೆ.
Read Full Story

05:05 PM (IST) Aug 01

ಗೂಗಲ್ ಸರ್ಚ್‌ನಲ್ಲಿ ಚಾಟ್‌ಜಿಪಿಟಿ ಚಾಟ್, ಬಳಕೆದಾರ ಹೆಸರು, ಸ್ಥಳ ಬಹಿರಂಗ, ಪ್ರವೈಸಿ ಆತಂಕ

ವಿದ್ಯಾರ್ಥಿಗಳು, ವೃತ್ತಿಪರರು ಸೇರಿದಂತೆ ಎಲ್ಲರೂ ಚಾಟ್‌ಜಿಪಿಟಿ ಎಐ ಬಳಕೆ ಮಾಡುತ್ತಿದ್ದಾರೆ. ಆದರೆ ಇದು ಎಷ್ಟು ಸುರಕ್ಷಿತ ಅನ್ನೋ ಆತಂಕ ಪದೇ ಪದೇ ಚರ್ಚೆಯಾಗುತ್ತಿದೆ. ಈ ಆತಂಕಗಳ ಬೆನ್ನಲ್ಲೇ ಚಾಟ್‌ಜಿಪಿಟಿಯ ಚಾಟ್, ಬಳಕೆದಾರನ ಹೆೆಸರು, ಸ್ಥಳ ಸೇರಿದಂತೆ ಹಲವು ಮಾಹಿತಿ ಗೂಗಲ್ ಸರ್ಚ್‌ನಲ್ಲಿ ಬಯಲಾಗಿದೆ.

Read Full Story

05:05 PM (IST) Aug 01

ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ - ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ

ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌. ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ.

Read Full Story

04:51 PM (IST) Aug 01

ಕಿಚ್ಚ ಸುದೀಪ್ 47ನೇ ಚಿತ್ರದಲ್ಲಿ ನಿಶ್ವಿಕಾ ನಾಯ್ಡು - ಸಿಕ್ಸ್‌ ಪ್ಯಾಕ್‌ ಸುಂದರಿ ಪಾತ್ರವೇನು ಗೊತ್ತಾ?

ಕಿಚ್ಚ ಸುದೀಪ್ ಅವರ 47ನೇ ಚಿತ್ರ K47 ಬಗ್ಗೆ ದಿನೇ ದಿನೇ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಸದ್ಯ ಚಿತ್ರಕ್ಕೆ ನಿಶ್ಚಿಕಾ ನಾಯ್ಡು ಎಂಟ್ರಿಕೊಟ್ಟಿದ್ದಾರೆ ಎನ್ನಲಾಗಿದೆ.

Read Full Story

04:50 PM (IST) Aug 01

ಅಕ್ರಮ ಸಂಬಂಧಕ್ಕಾಗಿ ಗಂಡನ ಕೊಂದು ಹಬ್ಬ ಮಾಡಿದ ಪತ್ನಿ! ಕೊಲೆ ಬಳಿಕ ಧರ್ಮಸ್ಥಳಕ್ಕೆ ಹೋದ್ರೆಂದು ಕಥೆ ಹೆಣೆದ್ಲು

ಕೊಪ್ಪಳ ಜಿಲ್ಲೆಯಲ್ಲಿ ಪತಿಯನ್ನು ಕೊಲೆಗೈದ ಪತ್ನಿ ನಂತರ ನಾಗರಪಂಚಮಿ ಹಬ್ಬ ಆಚರಿಸಿದ್ದಾಳೆ. ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು ಶವವನ್ನು ಸುಟ್ಟುಹಾಕಿದ್ದಾಳೆ.
Read Full Story

04:35 PM (IST) Aug 01

ಮಾಲೇಗಾಂವ್ ಸ್ಫೋಟದ ಮತ್ತೊಂದು ಷಡ್ಯಂತ್ರ ಬಯಲು, RSS ಮುಖ್ಯಸ್ಥರ ಅರೆಸ್ಟ್‌ಗೆ ನಡೆದಿತ್ತು ಪ್ರಯತ್ನ

ಮಾಲೇಗಾಂವ್ ಸ್ಫೋಟವನ್ನು ಹಿಂದೂಗಳ ಮೇಲೆ ಮಾತ್ರವಲ್ಲ ಆರ್‌ಎಸ್ಎಸ್ ಮುಖ್ಯಸ್ಥರ ಅರೆಸ್ಟ್ ಮಾಡಲು ಬಹುದೊಡ್ಡ ಷಡ್ಯಂತ್ರ ನಡೆದಿತ್ತು ಅನ್ನೋದನ್ನು ಸ್ಫೋಟದ ಪ್ರಕರಣದ ತನಿಖಾ ಅಫೀಸರ್ ಬಹಿರಂಗಪಡಿಸಿದ್ದಾರೆ.

Read Full Story

04:11 PM (IST) Aug 01

Niveditha Gowda - ಕಮೆಂಟ್ ಸೆಕ್ಷನ್​ಗೆ ಸ್ವಾಗತ- ಸುಸ್ವಾಗತ; ಎಲ್ಲರಿಗೂ ಹಾಜರಾತಿ ಕಡ್ಡಾಯ!

ಬಿಗ್​ಬಾಸ್​ ಖ್ಯಾತಿಯ ನಿವೇದಿತಾ ಗೌಡ ರೀಲ್ಸ್​ ಹಾಕೋದನ್ನೇ ಕಾಯ್ತಿರೋ ನೆಟ್ಟಿಗರು ಈ ಬಾರಿ ಭರ್ಜರಿ ಕಮೆಂಟ್​ ಮಾಡಿದ್ದಾರೆ. ಕಮೆಂಟ್​ ಓದುವ ಸಲುವಾಗಿಯೇ ಬರೋ ಹಾಗಿದೆ ನೋಡಿ....

 

Read Full Story

04:02 PM (IST) Aug 01

ನಮ್ಮ ಮೆಟ್ರೋ ಫೇಸ್‌-3 - ಬನಶಂಕರಿ ದೇವಸ್ಥಾನ, ಸರ್ಕಾರಿ ಕಚೇರಿಗಳ ಜಾಗಕ್ಕೆ ಎದುರಾಯ್ತು ಕುತ್ತು!

ಬೆಂಗಳೂರು ಮೆಟ್ರೋದ 3ನೇ ಹಂತದ ಯೋಜನೆಗೆ ಬನಶಂಕರಿ ದೇವಸ್ಥಾನ, PES ವಿಶ್ವವಿದ್ಯಾಲಯ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ಭೂಮಿ ಬಿಟ್ಟುಕೊಡಲಿವೆ. ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಾಣದಿಂದ ಭೂಸ್ವಾಧೀನ ಹೆಚ್ಚಳವಾಗಿದ್ದು, ಯೋಜನೆಯ ವೆಚ್ಚವೂ ಏರಿಕೆಯಾಗಿದೆ.
Read Full Story

03:53 PM (IST) Aug 01

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆ, ನಾಮಪತ್ರ ಸಲ್ಲಿಸಲು ಅರ್ಹತೆ ಏನು?

ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಿಸಿದೆ. ನಾಮ ಪತ್ರ ಸಲ್ಲಿಸಲು ಅರ್ಹತೆ ಏನಿರಬೇಕು?

Read Full Story

03:52 PM (IST) Aug 01

ರಮ್ಯಾ ಮತ್ತೊಂದು ಪೋಸ್ಟ್; ಪ್ರಜ್ವಲ್ ದೋಷಿ ತೀರ್ಪು ಬೆನ್ನಲ್ಲೇ 'ನ್ಯಾಯ ಸಿಕ್ಕಿತು' ಎಂದ ನಟಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾ*ರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದೆ. ನಟಿ ರಮ್ಯಾ 'ಎಲ್ಲಾ ಮಹಿಳೆಯರಿಗೂ ನ್ಯಾಯ ಸಿಕ್ಕಿದೆ' ಎಂದು ಪ್ರತಿಕ್ರಿಯಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸಲಾಗುವುದು.

Read Full Story

03:08 PM (IST) Aug 01

ಇಂದಿನಿಂದ ಪ್ರತಿ ಯುಪಿಐ ವಹಿವಾಟಿಗೆ ಶುಲ್ಕ ವಿಧಿಸುತ್ತಿದೆ ಐಸಿಐಸಿ ಬ್ಯಾಂಕ್

ಐಸಿಐಸಿಐ ಬ್ಯಾಂಕ್ UPI ಪಾವತಿಗಳಿಗೆ ಶುಲ್ಕ ವಿಧಿಸಲು ಮುಂದಾಗಿದೆ. ಆಗಸ್ಟ್ 1, 2025 ರಿಂದ ಈ ಹೊಸ ನಿಯಮ ಜಾರಿಗೆ ಬಂದಿದೆ. ಎಷ್ಟು ಚಾರ್ಜ್ ಮಾಡಲಾಗುತ್ತದೆ? 

Read Full Story

02:45 PM (IST) Aug 01

ನಿವೃತ್ತೀ ಜೀವನ ಆರಾಮದಾಯಕವಾಗಿಸಲು ಭಾರತೀಯರು ಎಷ್ಟು ಹಣ ಉಳಿತಾಯ ಮಾಡಬೇಕು?

ಭಾರತೀಯರು ಸದ್ಯ ನಿವೃತ್ತಿ ಜೀವನ ನಡೆಸಲು ಎಷ್ಟು ದುಡ್ಡಿರಬೇಕು? ಕೆಲಸದಿಂದ ನಿವೃತ್ತಿಯಾಗುವ ವೇಳೆ ಎಷ್ಟು ಮೊತ್ತ ಉಳಿತಾಯ ಅಥವಾ ಹೂಡಿಕೆ ಮಾಡಿದ ಮೊತ್ತ ಕೈಯಲ್ಲಿರಬೇಕು ಅನ್ನೋ ಅಧ್ಯಯನ ವರದಿ ಬಹಿರಂಗವಾಗಿದೆ.

 

Read Full Story

02:32 PM (IST) Aug 01

ನಟ ದರ್ಶನ್ ತಾಯಿ ಮೀನಾ ಕೂಡ ಧರ್ಮಸ್ಥಳಕ್ಕೆ ಸಾಯಲು ಬಂದಿದ್ದರು, ನಮ್ಮೂರಿನ ಏಳಿಗೆ ಸಹಿಸಲಾಗ್ತಿಲ್ಲ

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ನಡೆದ ಉತ್ಖನನದಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಗ್ರಾಮಸ್ಥರಾದ ಶಂಕರ್ ಕುಲಾಲ್, ಯಾವುದೇ ಅತ್ಯಾ*ಚಾರ ಅಥವಾ ಕೊಲೆ ನಡೆದಿಲ್ಲ ಎಂದು ಹೇಳಿದ್ದಾರೆ. ಹಿಂದೆ ಸ್ಮಶಾನವಿಲ್ಲದ ಕಾರಣ ಶವಗಳನ್ನು ಹೂಳುತ್ತಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ.

Read Full Story

01:36 PM (IST) Aug 01

Breaking - ಪ್ರಜ್ವಲ್ ರೇವಣ್ಣಗೆ ಬಿಗ್‌ ಶಾಕ್‌ ದೋಷಿ ಎಂದ ನ್ಯಾಯಾಲಯ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಮತ್ತು ಅತ್ಯಾ8ಚಾರ ಪ್ರಕರಣದ ತೀರ್ಪು ಇಂದು ಹೊರಬಿದ್ದಿದೆ. 14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ಅವರ ಭವಿಷ್ಯ ಈ ತೀರ್ಪಿನಿಂದ ನಿರ್ಧಾರವಾಗಲಿದೆ.

Read Full Story

01:30 PM (IST) Aug 01

ಮಧ್ಯರಾತ್ರಿ ಮಸ್ತಿ, ಸ್ಕೂಟರ್ ಮೇಲೆ 7 ಯುವಕರ ಸವಾರಿಗೆ ಬಿತ್ತು 21,500 ರೂ ದಂಡ

ಮಧ್ಯರಾತ್ರಿ ಯುವಕರ ಗುಂಪು ಸ್ಕೂಟರ್ ಮೇಲೆ ಮಸ್ತಿ ಮಾಡಿದೆ. ತ್ರಿಬಲ್ ರೈಡ್ ಕೇಳಿರುತ್ತೀರಿ. ಆದರೆ ಒಂಂದು ಸ್ಕೂಟರ್ ಮೇಲೆ 7 ಮಂದಿ ರೈಡ್ ನೋಡಿದ್ದೀರಾ. ಈ ಯುವಕರ ಈ ಸಾಹಸ ಮಾಡಿ ಇದೀಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಇದೀಗ ಇವರ ಪೋಷಕರು ಪೊಲೀರ ಬಳಿ ಅಂಗಲಾಚುತ್ತಿದ್ದಾರೆ.

Read Full Story

12:49 PM (IST) Aug 01

ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ

ಧರ್ಮಸ್ಥಳ ಪ್ರಕರಣ ಸಂಬಂಧ ಸುಳ್ಳು ಸುದ್ದಿ ಹರಡಿದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಗೃಹ ಸಚಿವ ನೇತತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದ್ದು, ಹಲವು ನಿರ್ಣಯ ಕೈಗೊಳ್ಳಲಾಗಿದೆ.

Read Full Story

12:25 PM (IST) Aug 01

ಧರ್ಮಸ್ಥಳ ಸಮಾಧಿ ಪ್ರಕರಣ - ಅಸ್ಥಿಪಂಜರದ ಫಾರೆನ್ಸಿಕ್ ಪರೀಕ್ಷೆ ಹೇಗೆ ನಡೆಯುತ್ತೆ?

ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ಥಿಪಂಜರದ ಭಾಗಗಳ ತಾಂತ್ರಿಕ ವಿಶ್ಲೇಷಣೆ ಫಾರೆನ್ಸಿಕ್ ತಜ್ಞರಿಗೆ ಸವಾಲೊಡ್ಡಿದೆ. ಮಣಿಪಾಲ ಕೆಎಂಸಿಯಲ್ಲಿ ಈ ಪರೀಕ್ಷೆ ನಡೆಯಲಿದ್ದು, ಲಿಂಗ, ವಯಸ್ಸು, ಹತ್ಯೆಯ ವಿಧಾನ ಸೇರಿದಂತೆ ಹಲವು ಮಾಹಿತಿಗಳನ್ನು ಪಡೆಯಲು ತಜ್ಞರು ಯತ್ನಿಸಲಿದ್ದಾರೆ.
Read Full Story

11:25 AM (IST) Aug 01

ಕಾರ್ಮಿಕರು ಒಪ್ಪಿದ್ರೆ 10 ಗಂಟೆ ಕೆಲಸಕ್ಕೆ ಓಕೆ - ಲಾಡ್‌

ಕಾರ್ಮಿಕರ ಕೆಲಸದ ಅವಧಿಯನ್ನು ದಿನದಲ್ಲಿ 9 ರಿಂದ 10 ಗಂಟೆಗಳಿಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ‘ಫ್ಲೆಕ್ಸಿ ಅವರ್‌’ ಪ್ರಸ್ತಾವನೆ ಅಳವಡಿಕೆಗೆ ರಾಜ್ಯದ ಯಾವುದೇ ಕೈಗಾರಿಕೆ, ಉದ್ಯಮಗಳು ತಮ್ಮ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಯ ಸಮ್ಮತಿಯೊಂದಿಗೆ ಮುಂದೆ ಬಂದರೆ ಅನುಮತಿ ನೀಡುತ್ತೇವೆ-  ಸಂತೋಷ್‌ ಲಾಡ್‌  

Read Full Story

11:05 AM (IST) Aug 01

100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಶಿಲ್ಪಾ ಮಂಟಗಣಿ ಎಂಬ ಗೃಹಿಣಿ 100 ರೊಟ್ಟಿಯಿಂದ ಶುರು ಮಾಡಿದ ವ್ಯಾಪಾರ ಈಗ ಜವಾರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್​​ ಆಗಿ ಬೆಳೆದು ನಿಂತಿದೆ.

Read Full Story

10:12 AM (IST) Aug 01

ಸಿಎಂ ಸಿದ್ದರಾಮಯ್ಯಗೆ ಮಳೆ ಹಾನಿ ವರದಿ ನೀಡಿದ ಶಾಸಕರು

ಸ್ವಪಕ್ಷೀಯ ಶಾಸಕರ ಅಸಮಾಧಾನ ತಣಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿರುವ ಸರಣಿ ಸಭೆ ಸತತ ಮೂರನೇ ದಿನವೂ ಮುಂದುವರೆಯಿತು.

Read Full Story

More Trending News