ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಬೆಂಗಳೂರು ಹೊರವ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸೆ.1ರಿಂದ ಟೋಲ್ ದರ ಏರಿಕೆಮಾಡಲಾಗಿದೆ. ಸೋಮವಾರ ಮಧ್ಯರಾತ್ರಿಯಿಂದ ರು. ದರ ಏರಿಕೆಯಾಗಲಿದೆ. ನೆಲಮಂಗಲ ದೇವಿಹಳ್ಳಿ ಎಕ್ಸ್ಪ್ರೆಸ್ ಪ್ರೈವೇಟ್ ಲಿಮಿಟೆಡ್ ಟೋಲ್ಗಳಲ್ಲಿ ದರ ಎರಿಕೆಯಾಗಲಿದ್ದು, ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯ-75ರ ಟೋಲ್ ಮೂಲಕ ಸಂಚರಿಸುವ ಹಾಗೂ ವಾಹನ ಸವಾರರಿಗೆ ಬರೆ ಬಿದ್ದಿದೆ. ದೊಡ್ಡಕರೇನಹಳ್ಳಿ ಟೋಲ್ ಕಾರಬೈಲು ಟೋಲ್ ಪ್ಲಾಜಾಗಳಲ್ಲಿಯೂ ದರ ಏರಿಕೆಯಾಗಿದೆ. 2023ರ ದರ ಏರಿಕೆ ಸಂದರ್ಭದಲ್ಲಿ ಕಾರುಗಳಿಗೆ ಒಂದು ದಿಕ್ಕಿನ ಪ್ರಯಾಣಕ್ಕೆ ಸುಮಾರು 10-20 ರು. ಏರಿಕೆಯಾಗಿತ್ತು.

11:26 PM (IST) Sep 01
ಕಿಚ್ಚ ಸುದೀಪ್ ಅಭಿನಯದ 47ನೇ ಸಿನಿಮಾ ಹೆಸರು ಬಹಿರಂಗವಾಗಿದೆ. ಚಿತ್ರತಂಡ ಹೆಸರಿನ ಟೀಸರ್ ಬಿಡುಗಡೆ ಮಾಡಿದೆ. ಮ್ಯಾಕ್ಸ್ ಭಾಗ 2 ಎಂದೇ ಅಭಿಮಾನಿಗಳು ಚರ್ಚಿಸುತ್ತಿದ್ದ ಬೆನ್ನಲ್ಲೇ ಸಿನಿಮಾ ಹೆಸರು ಮಾರ್ಕ್ ಎಂದು ಬಹಿರಂಗಗೊಂಡಿದೆ.
11:23 PM (IST) Sep 01
ಗಣೇಶ ವಿಸರ್ಜನಾ ಸಂದರ್ಭದಲ್ಲಿ ಡಿಜೆ ಸೌಂಡ್ಗೆ ಕುಣಿಯುತ್ತಿದ್ದ ಮೂವರು ಹೃದಯಾಘಾತ ಸಂಭವಿಸಿ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಂಡ್ಯ, ಚಿಕ್ಕಬಳ್ಳಾಪುರ ಮತ್ತು ರಾಯಚೂರಿನಲ್ಲಿ ಈ ಘಟನೆಗಳು ನಡೆದಿವೆ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ವಿವರ ಇಲ್ಲಿದೆ ನೋಡಿ..
10:48 PM (IST) Sep 01
ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್ನ 3ನೇ ಸುತ್ತಿನಲ್ಲಿ ಮುಂಬೈನ ಕಿಯಾನ್ ಶಾ ಗೆಲುವು ಸಾಧಿಸಿದ್ದರೆ,ಬೆಂಗಳೂರಿನ ರಿಷಿಕ್ ರೆಡ್ಡಿಗೆ 2ನೇ ಸ್ಥಾನ ಪಡೆದುಕೊಂಡಿದ್ದಾರೆ.
10:31 PM (IST) Sep 01
10:01 PM (IST) Sep 01
ನಮ್ಮ ಊರನ್ನ ಸರಿಮಾಡಬೇಕು ರಾಜೀವ್, ಹೀಗಾಗಿ ನೀನು ಅಲ್ಲಿಗೆ ಹೋಗಬೇಕು. ಅದು ದೊಡ್ಡ ಜವಾಬ್ದಾರಿ. ನಮ್ಮ ಊರಲ್ಲಿ ಏನೂ ಆಗ್ತಿಲ್ಲ ಎಂದು ಅಪ್ಪ ಹೇಳಿದ್ದರು. ಅಪ್ಪನಿಗೆ ಕೊಟ್ಟ ಮಾತಿನಂತೆ ನನ್ನ ರಾಜ್ಯದಲ್ಲಿ ಅಭಿವೃದ್ಧಿ ಬದಲಾವಣೆ ತರುತ್ತೇನೆ ಎಂದು ಮಾಜಿ ಸಂಸದ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
09:28 PM (IST) Sep 01
ಭಾರಿ ಪ್ಲಾನ್ ಮಾಡಿದ್ದ ಬುರುಡೆ ಪ್ರಕರಣ ಉಲ್ಟಾ ಆಗಿದೆ. ಇದೀಗ ಮೈಸೂರಿನ ಒಡನಾಡಿ ಸಂಸ್ಥೆ ಸೌಜನ್ಯ ಪ್ರಕರಣದಲ್ಲಿ ಹೊಸ ದಾಳ ಉರುಳಿಸಿದೆ.
09:02 PM (IST) Sep 01
ಮೈಸೂರು ಸ್ಯಾಂಡಲ್ ಸೋಪಿನ ರಾಯಭಾರಿಯಾಗಿ ತಮನ್ನಾ ಆಯ್ಕೆ ವಿವಾದದ ನಂತರ, ಕನ್ನಡ ನಟಿ ಐಶಾನಿ ಶೆಟ್ಟಿ ಅವರನ್ನು ಹೊಸ ರಾಯಭಾರಿಯನ್ನಾಗಿ ಆಯ್ಕೆ ಮಾಡಿದಂತಾಗಿದೆ. ಹಬ್ಬದ ಋತುವಿನಲ್ಲಿ ಉಡುಗೊರೆಗಳಿಗಾಗಿ ಮೈಸೂರು ಸ್ಯಾಂಡಲ್ ಸೋಪ್ಗಳನ್ನು ಪ್ರಚಾರ ಮಾಡುವ ಜಾಹೀರಾತಿನಲ್ಲಿ ಐಶಾನಿ ಕಾಣಿಸಿಕೊಂಡಿದ್ದಾರೆ.
08:47 PM (IST) Sep 01
ಗಣೇಶ ವಿಸರ್ಜನೆ ವೇಳೆಯಲ್ಲಿ ಹಾಕಿದ್ದ ಡಿಜೆ ಸೌಂಡ್ ಹಾಗೂ ಡ್ಯಾನ್ಸ್ನಿಂದ 24ರ ಹರೆಯದ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
08:36 PM (IST) Sep 01
ಜಗತ್ತಿನಾದ್ಯಂತ ನಡೆದಿರೋ ಸಂಶೋಧನೆಗಳ ಪ್ರಕಾರ ಹೆಣ್ಣುಮಕ್ಕಳ ಸರಾಸರಿ ಆಯಸ್ಸು ಗಂಡಸರಿಗಿಂತ ಜಾಸ್ತಿ ಅಂತ ಗೊತ್ತಾಗಿದೆ. ಗಂಡಸರು ದಷ್ಟಪುಷ್ಟವಾಗಿದ್ರೂ, ಬಲಿಷ್ಠರಾಗಿದ್ರೂ, ಆಯಸ್ಸಿನ ವಿಷಯದಲ್ಲಿ ಹೆಣ್ಣುಮಕ್ಕಳೇ ಮುಂದೆ. ಇದಕ್ಕೆ ಕಾರಣಗಳೇನು ಅಂತ ನೋಡೋಣ.
08:09 PM (IST) Sep 01
ಉಜಿರೆಯ ಹಳ್ಳಿ ಮನೆ ಹೊಟೆಲ್ನಲ್ಲಿ ಉಳಿದುಕೊಂಡಿದ್ದ ಚಿನ್ನಯ್ಯ. ಹೀಗಾಗಿ ಹೊಟೆಲ್ನಲ್ಲಿ ಎಸ್ಐಟಿ ಅಧಿಕಾರಿಗಳಿಂದ ಸ್ಥಳ ಮಹಜರು ನಡೆಸಲಾಗಿದೆ. ಇದರೊಂದಿಗೆ ಹೊಟೆಲ್ನಿಂದ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.
08:08 PM (IST) Sep 01
ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ನಡುವೆ ನಡೆದ ಹಾಸ್ಯಮಯ ಭಾಷಾ ಜುಗಲ್ಬಂದಿ ನಡೆಯಿತು. ಸಿಎಂ ಅವರು ರಾಷ್ಟ್ರಪತಿಯವರಿಗೆ 'ಯು ನೋ ಕನ್ನಡ?' ಎಂದು ಪ್ರಶ್ನಿಸಿದರು. ರಾಷ್ಟ್ರಪತಿಯವರು 'ನನಗೆ ಎಲ್ಲ ಭಾಷೆಯೂ ಇಷ್ಟ, ಕನ್ನಡ ಸ್ವಲ್ಪ ಸ್ವಲ್ಪ ಅರ್ಥವಾಗುತ್ತದೆ' ಎಂದರು.
07:33 PM (IST) Sep 01
SCO ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾಡಿದ ಒಂದು ಭಾಷಣದಲ್ಲಿ ಮೂರು ರಾಷ್ಟ್ರಕ್ಕೆ ಮೂರು ಸಿಗ್ನಲ್ ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ಗೆ ಸಂದೇಶ ರವಾನಿಸಿದ್ದರೆ, ಚೀನಾಗೆ ಕೆಲ ಘಟನೆಗಳನ್ನು ನೆನಪು ಮಾಡಿಕೊಟ್ಟಿದ್ದಾರೆ. ಇತ್ತ ಪಾಕಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ.
07:32 PM (IST) Sep 01
07:26 PM (IST) Sep 01
ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ವಿರೋಧ ಮತ್ತು ಬುರುಡೆ ಗ್ಯಾಂಗ್ ಷಡ್ಯಂತ್ರದ ತನಿಖೆಯನ್ನು ಸಿಬಿಐ ಅಥವಾ ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ನಾಯಕರು 'ಧರ್ಮಸ್ಥಳ ಚಲೋ' ಸಮಾವೇಶದಲ್ಲಿ ಒಕ್ಕೂರಲ ಅಭಿಪ್ರಾಯ ವ್ಯಕ್ತಪಡಿಸಿದರು. ಜೊತೆಗೆ, ಸೌಜನ್ಯಾ ಕೇಸಿನ ತನಿಖೆಯನ್ನೂ ಸ್ವಾಗತ ಕೋರಿದರು.
07:06 PM (IST) Sep 01
ಬೆಂಗಳೂರಿನ ಸಿಗ್ನಲ್ನಲ್ಲಿ 14 ವರ್ಷಗಳ ಬ್ಯಾಂಕಿಂಗ್ ಅನುಭವ ಹೊಂದಿರುವ ವ್ಯಕ್ತಿಯೊಬ್ಬ ಭಿಕ್ಷೆ ಬೇಡುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಸಮಾಜದ ವೈಫಲ್ಯವೇ ಅಥವಾ ವೈಯಕ್ತಿಕ ಆಯ್ಕೆಗಳ ಪರಿಣಾಮವೇ ಎಂಬ ಚರ್ಚೆಗೆ ಕಾರಣವಾಗಿದೆ.
06:53 PM (IST) Sep 01
ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯ ರೇಡಿಯಾಲಜಿಸ್ಟ್ ಡಾ. ಶಶಿ ಎಸ್.ಎಲ್. ಅವರನ್ನು ಭ್ರೂಣ ಲಿಂಗ ಪತ್ತೆ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಭ್ರೂಣ ಲಿಂಗ ಪತ್ತೆ ನಂತರ ಭ್ರೂಣ ಹತ್ಯೆ ಮಾಡಿರುವುದು ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣ ತೆಗೆಸಿದ್ದು, ಸರ್ಕಾರಿ ವೈದ್ಯೆ ಪಾತ್ರ ಬೆಳಕಿಗೆ ಬಂದಿದೆ.
06:51 PM (IST) Sep 01
ಗೆಳೆಯನ ಜೊತೆ ಆಪ್ತ ಸಮಯ ಕಳೆಯುತ್ತಿದ್ದ ಪೊಲೀಸ್ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪೊಲೀಸ್ ಕಾನ್ಸ್ಸ್ಟೇಬಲ್ ಘಟನೆ ಇದೀಗ ಭಾರಿ ಸದ್ದು ಮಾಡುತ್ತಿದೆ.
06:09 PM (IST) Sep 01
ಕಾರ್ಯಗತಗೊಳಿಸುವ ಪ್ರಯತ್ನದಲ್ಲಿ, ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಟೌನ್ಶಿಪ್ ಸೇರಿದಂತೆ 282 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ನಿರ್ಧಾರ ಮಾಡಿದೆ.
05:45 PM (IST) Sep 01
ಬಾಗೇಪಲ್ಲಿಯಲ್ಲಿ ಉಚಿತ ವೈದ್ಯಕೀಯ ಸೇವೆ ನೀಡುವ ಸಾಯಿ ಸ್ವಾಸ್ಥ್ಯ ಕ್ಷೇಮ ಕೇಂದ್ರ ಮತ್ತು ಶಾಹ್ ಹ್ಯಾಪಿನೆಸ್ ತುರ್ತು ಆರೈಕೆ ಕೇಂದ್ರವನ್ನು ಸದ್ಗುರು ಮಧುಸೂದನ ಸಾಯಿ ಲೋಕಾರ್ಪಣೆ ಮಾಡಿದರು. ಇದು ಮುದ್ದೇನಹಳ್ಳಿಯ ಮಧುಸೂದನ ಸಾಯಿ ವೈದ್ಯಕೀಯ ಸಂಸ್ಥೆ ವಿಸ್ತರಣೆ ಆಗಿದ್ದು, 2 ಲಕ್ಷ ಜನರಿಗೆ ಅನುಕೂಲವಾಗಲಿದೆ.
05:44 PM (IST) Sep 01
ಸೆಪ್ಟೆಂಬರ್ ತಿಂಗಳಲ್ಲಿ ಅತೀ ಗರಿಷ್ಠ ಮಳೆ ದಾಖಲಾಗಲಿದೆ. ಭಾರಿ ಮಳೆ, ಪ್ರವಾಹ, ಭೂಕುಸಿತ ಸೇರಿದಂತೆ ಹಲವು ಅವಘಡಗಳ ಸಾಧ್ಯತೆ ಹೆಚ್ಚು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
05:41 PM (IST) Sep 01
ಕಿರುತೆರೆ ನಿರೂಪಕಿ ಅನುಶ್ರೀ ಅವರ ಮದುವೆ ಸಂಭ್ರಮದ ನಡುವೆ ಅಭಿಮಾನಿಯೊಬ್ಬರ ವಿಶಿಷ್ಟ ಶುಭಾಶಯ ವೈರಲ್ ಆಗಿದೆ. ಅನುಶ್ರೀ ಅವರನ್ನು ಮದುವೆಯ ಫೋಟೋ ಪ್ರಿಂಟ್ ಮಾಡಿಸಿ ಶುಭ ಕೋರಿದ ಅಭಿಮಾನಿಯ ನಡೆಗೆ ಅನುಶ್ರೀ ಭಾವುಕರಾಗಿ ಧನ್ಯವಾದ ತಿಳಿಸಿದ್ದಾರೆ.
05:27 PM (IST) Sep 01
05:23 PM (IST) Sep 01
04:46 PM (IST) Sep 01
ಹಳದಿ ಮಾರ್ಗದ ಮೆಟ್ರೋಗೆ ರೈಲುಗಳ ಪೂರೈಕೆಯನ್ನು ತ್ವರಿತಗೊಳಿಸುವ ಕುರಿತು ತಿತಾಘರ್ನ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸೆಪ್ಟೆಂಬರ್ 1 ರಂದು ಚರ್ಚೆ ನಡೆಸಿರುವುದಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹೇಳಿದರು.
04:38 PM (IST) Sep 01
ಬೆಂಗಳೂರಿನ ಮೆಜೆಸ್ಟಿಕ್ ಬಸ್ಸ್ಟ್ಯಾಂಡ್ ಫ್ಲೈ ಓವರ್, ಅಂಡರ್ಪಾಸ್ ಸೇರಿದಂತೆ ಆಸುಪಾಸು ಸಂಜೆಯಾಗುತ್ತಿದ್ದಂತೆಯೇ ಚಿತ್ರಣವೇ ಬದಲಾಗಿ ಹೋಗುತ್ತದೆ. ಇಲ್ಲಿ ಮಹಿಳೆಯರು ನಡೆಸುವ ದಂಧೆಗೆ ಪುರುಷರು ಹೈರಾಣಿ ಹೋಗಿದ್ದಾರೆ.
04:34 PM (IST) Sep 01
ಬೆಂಗಳೂರಿನ ಲೇಡೀಸ್ ಪಿಜಿಗೆ ನುಗ್ಗಿದ ಅನಾಮಿಕ ಯುವಕನೊಬ್ಬ ಒಬ್ಬಂಟಿಯಾಗಿ ಮಲಗಿದ್ದ ಯುವತಿ ಕೈ-ಕಾಲು ಹಾಗೂ ಮೈ-ಕೈ ಮುಟ್ಟಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಿರುಕುಳ ವಿರೋಧಿಸಿದ ಯುವತಿಯಿಂದ ಹಣ ಕಿತ್ತುಕೊಂಡು ಹೋದ ಕಳ್ಳತನ ಪ್ರಕರಣ ನಡೆದಿದೆ. ಈ ಘಟನೆಯ ಎಲ್ಲ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
04:25 PM (IST) Sep 01
04:14 PM (IST) Sep 01
ಈ ಪೆಟ್ರೋಲ್ ಬಂಕ್ನಿಂದ ಇಂಧನ ತುಂಬಿಸಿಕೊಂಡವರ ವಾಹನಗಳು ಕೆಟ್ಟು ನಿಂತ ಘಟನೆ ನಡೆದಿದೆ. ಐಷಾರಾಮಿ ಕಾರು, ಬೈಕ್ಗಗಳು ಕೆಟ್ಟು ನಿಂತಿದೆ. ಭಾರೀ ಪ್ರತಿಭಟನೆ, ಆಕ್ರೋಶದ ಬೆನ್ನಲ್ಲೇ ಇದೀಗ ಪೆಟ್ರೋಲ್ ಬಂಕ್ ವಿರುದ್ಧ ದೂರು ದಾಖಲಾಗಿದೆ.
04:06 PM (IST) Sep 01
ತಮ್ಮ 52ನೇ ಹುಟ್ಟುಹಬ್ಬದಂದು ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಕಿಚ್ಚ ಸುದೀಪ್, ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಸುಳಿವು ನೀಡಿದ್ದಾರೆ. ಸ್ಮಾರಕದ ನೀಲನಕ್ಷೆ ಸಿದ್ಧವಾಗಿದ್ದು, ಸ್ಥಳದ ಕುರಿತಾದ ಕಾನೂನು ಹೋರಾಟ ನಡೆಯುತ್ತಿದ್ದರೂ, ತಾವು ಕೆಲಸ ಮುಂದುವರೆಸುತ್ತಿರುವುದಾಗಿ ತಿಳಿಸಿದ್ದಾರೆ.
03:44 PM (IST) Sep 01
03:32 PM (IST) Sep 01
52ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಕಿಚ್ಚ ಸುದೀಪ್, ಮಾಧ್ಯಮಗಳೊಂದಿಗೆ ಹಲವು ವಿಚಾರ ಹಂಚಿಕೊಂಡಿದ್ದಾರೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕುದುರೆ ಸವಾರಿ ಮಾಡುವಾಗ ಬಿದ್ದ ಅನುಭವವನ್ನು ವಿವರಿಸಿದ್ದಾರೆ.
03:16 PM (IST) Sep 01
SCO ಶೃಂಗಸಭೆಗೆ ಪಾಲ್ಗೊಳ್ಳಲು ರಷ್ಯನ್ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತಮ್ಮ ಲಿಮೋಸಿನ್ ಲಕ್ಷುರಿ ಕಾರಿನಲ್ಲಿ ಆಗಮಿಸಿದ್ದಾರೆ. ಈ ವೇಳೆ ಇದೇ ಕಾರಿನಲ್ಲಿ ಪ್ರಧಾನಿ ಮೋದಿಯೂ ಪ್ರಯಾಣ ಮಾಡಿದ್ದಾರೆ. ಪುಟಿನ್ ಬಳಸುವ ಲಿಮೋಸಿನ್ ಕಾರಿನ ವಿಶೇಷತೆ ಏನು?
02:45 PM (IST) Sep 01
ಬೆಂಗಳೂರಿನಲ್ಲಿ ಪತಿಯ ಅಕ್ರಮ ಸಂಬಂಧ ಮತ್ತು ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ವಿವಾಹವಾದ ದಂಪತಿಗೆ ಒಂದು ಮಗು ಇದೆ. ಪತಿಯ ಕಿರುಕುಳದಿಂದ ಬೇಸತ್ತು ಪತ್ನಿ ನೇಣಿಗೆ ಶರಣಾಗಿದ್ದಾರೆ.
02:45 PM (IST) Sep 01
ಭಾರತದಲ್ಲಿ ಅತಿ ಹೆಚ್ಚು ಭೂಮಿ ಯಾರ ಬಳಿಯಲ್ಲಿದೆ ಎಂಬ ವಿಷಯ ನಿಮಗೆ ಗೊತ್ತಿದೆಯಾ? ಇಂದು ಭೂಮಿ ಅಂದ್ರೆ ಸಂಪತ್ತು, ಅಧಿಕಾರ ಮತ್ತು ಸ್ಥಾನಮಾನದ ಸಂಕೇತವಾಗಿ ಬದಲಾಗಿದೆ.
02:31 PM (IST) Sep 01
02:19 PM (IST) Sep 01
ಸ್ಟಾಪ್ ಇಲ್ಲದ ಕಡೆ ಬಸ್ ನಿಲ್ಲಿಸಿದ್ದಕ್ಕಾಗಿ ಬಸ್ ಹಾಗೂ ಪ್ರಯಾಣಿಕರನ್ನು ಸಂಜಯ್ ನಗರ ಟ್ರಾಫಿಕ್ ಪೊಲೀಸರು ಸೀಜ್ ಮಾಡಿದ್ದಾರೆ. ಪ್ರಯಾಣಿಕರನ್ನು 30 ನಿಮಿಷ ಟ್ರಾಫಿಕ್ನಲ್ಲಿ ಸುತ್ತಾಡಿಸಿ, ಪರ್ಯಾಯ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಬಿಟ್ಟಿದ್ದಾರೆ.
01:38 PM (IST) Sep 01
01:37 PM (IST) Sep 01
01:06 PM (IST) Sep 01
12:44 PM (IST) Sep 01
ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರನ್ನು ತೆಲಂಗಾಣ ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲು ಸರ್ಕಾರ ನಿರ್ಧರಿಸಿದೆ. ಈ ನಾಮನಿರ್ದೇಶನವು ಸಚಿವ ಸ್ಥಾನಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.