LIVE NOW
Published : Apr 02, 2026, 07:10 AM ISTUpdated : Apr 02, 2026, 10:09 AM IST

Karnataka News Live: Bhagyalakshmi Serial - ನಾನ್ ಮದುವೆ ಆಗಲ್ಲ-ಉಲ್ಟಾ ಹೊಡೆದ ಆದೀಶ್ವರ್;‌ ಮತ್ತೆ ನರಕವಾದ ಭಾಗ್ಯ ಜೀವನ

ಸಾರಾಂಶ

ಬೆಂಗಳೂರು: ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಮತ್ತು ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ನುಗ್ಲಿ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ವಸಂತ ಕುಮಾರ್‌ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಗೆ ಬುಧವಾರ ದೂರು ನೀಡಿದ್ದಾರೆ.

ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವೇಳೆ ಶಾಸಕ ಪ್ರದೀಪ್‌ ಈಶ್ವರ್‌ ಅವರು ಬಿಜೆಪಿ ನಾಯಕರ ವಿರುದ್ಧ ಅವಹೇಳನ ಮಾಡಿದ್ದಾರೆ. ಸರ್ಕಾರಿ ನೌಕರ ಚಂದ್ರಶೇಖರ್ ನುಗ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಹೀಗಾಗಿ ಈ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

10:09 AM (IST) Apr 02

Bhagyalakshmi Serial - ನಾನ್ ಮದುವೆ ಆಗಲ್ಲ-ಉಲ್ಟಾ ಹೊಡೆದ ಆದೀಶ್ವರ್;‌ ಮತ್ತೆ ನರಕವಾದ ಭಾಗ್ಯ ಜೀವನ

Bhagyalakshmi Kannada Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಭಾಗ್ಯ, ಆದಿ ಮದುವೆ ಆಗ್ತಾರೆ ಎನ್ನುವಾಗಲೇ ಇನ್ನೊಂದು ಟ್ವಿಸ್ಟ್‌ ಸಿಕ್ಕಿದೆ. ಇವರಿಬ್ಬರು ಮದುವೆ ಆಗೋದು ಅನೇಕರಿಗೆ ಇಷ್ಟವೇ ಇಲ್ಲ. ಹೀಗಾಗಿ ಒಂದಾದ ಮೇಲೆ ಒಂದರಂತೆ ಸಮಸ್ಯೆ ಬರುತ್ತಿದೆ.

 

Read Full Story

10:01 AM (IST) Apr 02

ಸಾಲ ಮಾಡೋದ್ರಲ್ಲಿ ದಾಖಲೆ ವೀರ ಸಿದ್ದರಾಮಯ್ಯ - ಬಸವರಾಜ ಬೊಮ್ಮಾಯಿ ವಾಗ್ದಾಳಿ

ದಾವಣಗೆರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮೇ ತಿಂಗಳಲ್ಲಿ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಮತ್ತೆ ಜಂಗಿ ಕುಸ್ತಿ ಶುರುವಾಗಲಿದೆ ಎಂದು ಭವಿಷ್ಯ ನುಡಿದರು. ಸಾಲ ಮಾಡುವುದರಲ್ಲಿ ಸಿದ್ದರಾಮಯ್ಯ ದಾಖಲೆ ವೀರ, ತಮ್ಮ ಹಾಗೂ ಸಿದ್ದರಾಮಯ್ಯ ಕಾಲದ ಸಾಲದ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದರು..

Read Full Story

09:55 AM (IST) Apr 02

ಖರ್ಚಿಗೆ ಒಂದಿಷ್ಟು ಕೊಡಿ? ರೈತನ ಬಳಿ ಲಂಚ ಕೇಳಿದ ನಾಚಿಕೆ ಬಿಟ್ಟು ಅರಣ್ಯ ಇಲಾಖೆ ಸಿಬ್ಬಂದಿ

ಆನೆ ದಾಳಿಯಿಂದಾದ ಬೆಳೆ ಹಾನಿ ವರದಿ ಸಿದ್ಧಪಡಿಸಲು ಬಂದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು, ರೈತರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. "ಖರ್ಚಿಗೆ ಏನಾದರೂ ಕೊಡಿ, ಹೆಚ್ಚು ಹಾನಿ ಎಂದು ಬರೆಯುತ್ತೇನೆ" ಎಂದು ಹೇಳಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಕ್ರಮಕ್ಕೆ ಆಗ್ರಹಿಸಿದ್ದಾರೆ.
Read Full Story

08:59 AM (IST) Apr 02

ಸ್ನೇಹಿತರ ಜೊತೆ ಪ್ರವಾಸ ದುರಂತ, ಕಾವೇರಿ ನದಿಯಲ್ಲಿ ಈಜಲು ಹೋದ ಬೆಂಗಳೂರು ಇನ್ಫೋಸಿಸ್ ಉದ್ಯೋಗಿ ಜಲಸಮಾಧಿ

ಬೆಂಗಳೂರಿನ ಇನ್ಫೋಸಿಸ್ ಉದ್ಯೋಗಿ ವಿಘ್ನೇಶ್ (25) ಎಂಬುವವರು ಶ್ರೀರಂಗಪಟ್ಟಣದ ಎಡಮುರಿ ಪ್ರವಾಸಿ ತಾಣದಲ್ಲಿ ಕಾವೇರಿ ನದಿಗೆ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅವರು, ನೀರಿನ ಹರಿವಿನ ಅಂದಾಜು ಸಿಗದೆ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದು, ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story

08:46 AM (IST) Apr 02

ಸಾರಿಗೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ - ಶೀಘ್ರದಲ್ಲೇ ವೇತನ ಹೆಚ್ಚಳ ಫಿಕ್ಸ್‌? ಏ.6ರಂದು ಮಹತ್ವದ ಸಭೆ

ದಶಕಗಳ ಹೋರಾಟದ ನಂತರ ರಾಜ್ಯ ಸಾರಿಗೆ ನೌಕರರ ವೇತನ ಹೆಚ್ಚಳದ ಬೇಡಿಕೆ ಈಡೇರುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಚರ್ಚಿಸಲು ಏಪ್ರಿಲ್ 6 ರಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ನೌಕರರ ಸಂಘಟನೆಗಳೊಂದಿಗೆ ಮಹತ್ವದ ಸಭೆ ಕರೆದಿದ್ದು, ಅಂದೇ ವೇತನ ಹೆಚ್ಚಳ ಮತ್ತು ಹಿಂಬಾಕಿನಿರ್ಧಾರ?

Read Full Story

08:39 AM (IST) Apr 02

Chitradurga - ಅಧ್ಯಾಪಕನೊಂದಿಗೆ ಸಂಬಂಧ ಅಪಪ್ರಚಾರ; ನೇಣಿಗೆ ಶರಣಾದ BAMS ವಿದ್ಯಾರ್ಥಿನಿ ನಿಖಿತಾ

ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ ನೇಣಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಅಧ್ಯಾಪಕ ಡಾ. ರಾಜು ಮತ್ತು ಕೆಲ ವಿದ್ಯಾರ್ಥಿನಿಯರು ಕಾರಣ ಎಂದು ಉಲ್ಲೇಖಿಸಿದ್ದಾರೆ. 

Read Full Story

08:32 AM (IST) Apr 02

ಕೊಪ್ಪಳ - ಅನೈತಿಕ ಸಂಬಂಧಕ್ಕೆ ವ್ಯಕ್ತಿ ಕೊಂದು 21 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ ಜಿಲ್ಲೆಯಲ್ಲಿ 21 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದಲ್ಲಿ, ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕೆಯ ಮೇಲೆ ವ್ಯಕ್ತಿಯನ್ನು ಕೊಲೆ ಮಾಡಿದ್ದ ಆರೋಪಿ ಪರಶುರಾಮ್‌ಗೆ ಗಂಗಾವತಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಲೆಯ ನಂತರ 21 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
Read Full Story

08:05 AM (IST) Apr 02

ಧರ್ಮಸ್ಥಳ ವಿರುದ್ಧ ವರದಿ - ಸಮೀರ್‌ ಮೇಲಿನ ಕೇಸ್‌ ತನಿಖೆಗೆ ಹೈಕೋರ್ಟ್ ತಡೆ

ಧರ್ಮಸ್ಥಳದ ಅಸಹಜ ಸಾವಿನ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಕಾಲ್ಪನಿಕ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಎಂ.ಡಿ.ಸಮೀರ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಮೀರ್ ಸಲ್ಲಿಸಿದ್ದರು.

Read Full Story

08:00 AM (IST) Apr 02

Hubballi - ನೈಋತ್ಯ ರೈಲ್ವೆಯಿಂದ ದಾಖಲೆಗಳ ಮೇಲೆ ದಾಖಲೆ; ಆದಾಯ ಕೇಳಿದ್ರೆ ಶಾಕ್ ಆಗ್ತೀರಿ!

2025-26ನೇ ಆರ್ಥಿಕ ವರ್ಷದಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ, ಆದಾಯ ಮತ್ತು ಮೂಲಸೌಕರ್ಯದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ವಲಯದ ಒಟ್ಟು ಆದಾಯ ₹9,488 ಕೋಟಿಗೆ ಏರಿಕೆಯಾಗಿದ್ದು, 52.46 ಮಿಲಿಯನ್ ಟನ್ ಸರಕು ಸಾಗಣೆ ಮಾಡಿದೆ

Read Full Story

07:49 AM (IST) Apr 02

ಎಸ್ಸೆಸ್ಸೆಲ್ಸಿಯಲ್ಲಿ ಆಟಕ್ಕುಂಟು, ಲೆಕಕ್ಕೆಇಲ್ಲದ ಹಿಂದಿ ಕೇಸ್ ಹೈಕೋರ್ಟ್‌ಗೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಗಳಿಗೆ ಪಾಸ್-ಫೇಲ್ ಬದಲು ಗ್ರೇಡಿಂಗ್ ವ್ಯವಸ್ಥೆ ಜಾರಿಗೊಳಿಸುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL  ಅರ್ಜಿ. ಯಾವುದೇ ಚರ್ಚೆ ಇಲ್ಲದೆ, ಏಕಪಕ್ಷೀಯವಾಗಿ ಕೈಗೊಂಡ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆಕ್ಷೇಪ.

Read Full Story

07:44 AM (IST) Apr 02

ಎಲ್‌ಪಿಜಿ ಸಿಲಿಂಡರ್ ಕೊರತೆ ನೀಗಿಸಿದ ಹೊಸ ಒಲೆ - ಬೆಳಗಾವಿ ಹೋಟೆಲ್‌ಗಳಲ್ಲಿ ಬಯೋಮಾಸ್

ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಬೆಳಗಾವಿಯಲ್ಲಿ ತೀವ್ರಗೊಂಡಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ಈ ಬಿಕ್ಕಟ್ಟನ್ನು ಎದುರಿಸಲು, ಅನೇಕ ಹೋಟೆಲ್ ಮಾಲೀಕರು ಪರ್ಯಾಯವಾಗಿ ಕಡಿಮೆ ಖರ್ಚಿನ ಹಾಗೂ ಪರಿಸರ ಸ್ನೇಹಿ ಬಯೋಮಾಸ್ ಒಲೆಗಳ ಬಳಕೆಗೆ ಮುಂದಾಗಿದ್ದಾರೆ.
Read Full Story

More Trending News