ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಭಿಪ್ರಾಯ ಪಡೆದು, ರಾಜ್ಯದ ಮುಂದಿನ ಕ್ರಮ ನಿರ್ಧರಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಭಾನುವಾರ ಸರ್ವ ಪಕ್ಷ ಸಭೆ ನಡೆಯಲಿದೆ.
ಮಳೆ ಕೊರತೆಯಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಹರಿವು ಕುಸಿತ ಕಂಡಿದ್ದು, ಇಂಥ ಸಂಕಷ್ಟದ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವುದು ಅಸಾಧ್ಯ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಿರುವಾಗಲೂ ತಮಿಳುನಾಡಿಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ಆದೇಶಿಸಿದೆ. ಈ ಆದೇಶ ಪಾಲನೆ ಅಥವಾ ತಿರಸ್ಕಾರ ಹಾಗೂ ರಾಜ್ಯದ ಮುಂದಿರುವ ಆಯ್ಕೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವ ಪಕ್ಷ ಸಭೆ ನಡೆಸಲಾಗುತ್ತಿದೆ.
ಜತೆಗೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿ ಆದೇಶ ಪಾಲಿಸದಿದ್ದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳು ಹಾಗೂ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾದರೆ, ಯಾವೆಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ಅರ್ಜಿ ಸಲ್ಲಿಸಬೇಕು ಎಂಬ ಬಗ್ಗೆಯೂ ಚರ್ಚಿಸಿ ನಿರ್ಧರಿಸಲಾಗುತ್ತದೆ. ಒಂದು ವೇಳೆ ಸುಪ್ರೀಂ ಕೋರ್ಟ್ ಕೂಡ ನೀರು ಬಿಡಲು ಆದೇಶಿಸಿದರೆ, ಆಗ ರಾಜ್ಯ ಸರ್ಕಾರ ಯಾವ ನಡೆ ಇಡಬೇಕು ಎಂಬ ಬಗ್ಗೆಯೂ ವಿಪಕ್ಷಗಳಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
10:21 AM (IST) Aug 02
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿ ಚಿರತೆ ಕಳೆಬರ ಪತ್ತೆಯಾಗಿದೆ. ಮೇಲ್ನೋಟಕ್ಕೆ ಮುಳ್ಳಹಂದಿ ಬೇಟೆಯಾಡಲು ಮುಂದಾಗಿ ಅದರೊಂದಿಗೆ ಕಾದಾಟಕ್ಕಿಳಿದು ಸಾವನ್ನಪ್ಪಿರಬಹುದು ಎಂದ ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.
08:44 AM (IST) Aug 02
ದಾವಣಗೆರೆ ಜಿಲ್ಲೆಯ ಬೆಳಲಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ದಲಿತ ಸಮುದಾಯದ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ಹಾಕದಂತೆ ಎಚ್ಚರಿಕೆ
08:21 AM (IST) Aug 02
08:16 AM (IST) Aug 02
08:09 AM (IST) Aug 02
Bengaluru Belagavi Vande Bharat Express train: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾವಣೆ ಕುರಿತು ಕೆಲವು ಪ್ರಯಾಣಿಕರಿಗೆ ತಪ್ಪು ಸಂದೇಶ ರವಾನೆಯಾದ ಕಾರಣ, ಹಲವರು ರೈಲು ತಪ್ಪಿಸಿಕೊಂಡಿದ್ದಾರೆ.
07:45 AM (IST) Aug 02
ರಾಜಸ್ಥಾನದ ಅಲೆಮಾರಿ ಕುಟುಂಬಗಳು ಬೀಡುಬಿಟ್ಟಿದ್ದು, ಕೈಗೆಟುಕುವ ದರದಲ್ಲಿ ಗಾಳಿ ತುಂಬುವ ಪ್ಲಾಸ್ಟಿಕ್ ಗೊಂಬೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಕುದುರೆ, ನವಿಲು, ಆನೆಯಂತಹ ಆಕರ್ಷಕ ಗೊಂಬೆಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ, ಮಕ್ಕಳಿಂದ ಹಿಡಿದು ಪಾಲಕರವರೆಗೂ ಎಲ್ಲರೂ ಖರೀದಿಗೆ ಮುಗಿಬೀಳುತ್ತಿದ್ದು, ವ್ಯಾಪಾರ ಜೋರಾಗಿ ನಡೆಯುತ್ತಿದೆ.
07:31 AM (IST) Aug 02
07:27 AM (IST) Aug 02
ಆಗಸ್ಟ್ 15 ರಿಂದ 'ಬೆಂಗಳೂರು ಹಸಿರೂರು' ಅಭಿಯಾನ ಆರಂಭವಾಗಲಿದ್ದು, ನಾಗರಿಕರು ತಮ್ಮ ಬಡಾವಣೆಗಳಲ್ಲಿ ಸಸಿಗಳನ್ನು ನೆಡಲು ಆಗಸ್ಟ್ 10ರೊಳಗೆ ಮನವಿ ಸಲ್ಲಿಸಬಹುದು. ಪಾಲಿಕೆಯು ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಸ್ಥಳಗಳಲ್ಲಿ ತಾನೇ ಸಸಿಗಳನ್ನು ನೆಡಲಿದೆ. ಈ ಅಭಿಯಾನದಡಿ 60 ಸಾವಿರ ಸಸಿ ನೆಡುವ ಗುರಿ ಹೊಂದಲಾಗಿದೆ.
07:20 AM (IST) Aug 02
06:59 AM (IST) Aug 02
ಬಹುನಿರೀಕ್ಷಿತ ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ನಿವೇಶನಗಳಿಗೆ ಬಿಡಿಎ ಆಗಸ್ಟ್ 5ರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಈ ಬಡಾವಣೆಯಲ್ಲಿ ಭೂಮಿ ನೀಡಿದ ರೈತರಿಗೆ ಮತ್ತು ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಪ್ರಾಧಿಕಾರ ಸಿದ್ಧತೆ ನಡೆಸಿದೆ.