ಬೆಂಗಳೂರು: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಪ್ರಸಿದ್ಧ ಸುಕ್ಷೇತ್ರವಾದ ಹಾರನಹಳ್ಳಿ ಕೋಡಿ ಮಠಕ್ಕೆ ಗೃಹ ಸಚಿವ ಡಾ। ಜಿ.ಪರಮೇಶ್ವರ್ ಅವರು ಸೋಮವಾರ ಮುಂಜಾನೆ ಅಚಾನಕ್ ಭೇಟಿ ನೀಡಿ ಪೀಠಾಧ್ಯಕ್ಷ ಡಾ। ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರೊಂದಿಗೆ ಸುಮಾರು 1 ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ.
ಸಚಿವರು ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಯಾವುದೇ ಕಾಂಗ್ರೆಸ್ ಮುಖಂಡರಿಗೂ, ಹಾಗೆಯೇ ತಮ್ಮದೇ ಇಲಾಖೆಯ ಪೊಲೀಸರಿಗೂ ಮಾಹಿತಿ ನೀಡದೆ, ಏಕಾಂಗಿಯಾಗಿ, ಗೌಪ್ಯವಾಗಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ. ‘ಸಚಿವರು ಮಠದ ಭಕ್ತರು, ಹಾಗಾಗಿ ಭೇಟಿ ನೀಡಿದ್ದಾರೆ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ’ ಎಂದು ಕೋಡಿಮಠದ ಶ್ರೀಗಳು ಮಾಧ್ಯಮದವರಿಗೆ ಸ್ಪಷ್ಟನೆ ನೀಡಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಗಟ್ಟಿಯಾಗಿಯೇ ಕುರ್ಚಿ ಮೇಲೆ ಕುಳಿತು, ಅಧಿಕಾರ ಮಾಡುತ್ತಿದ್ದಾರೆ. ಮುಂದೆಯೂ ಸಿಎಂ ಆಗಿಯೇ ಸಿದ್ದರಾಮಯ್ಯ ಇರುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ। ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು. ಸರ್ಕಾರ, ಪಕ್ಷದ ಮುಂದೆ ಯಾವುದೇ ಆಲೋಚನೆಗಳೂ ಇಲ್ಲ. ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆಯೇ ಇಲ್ಲದಿದ್ದಾಗ ಅಂತೆ ಕಂತೆಗಳ ಬಗ್ಗೆ ಮಾತಾದರೂ ಯಾಕೆ ಎಂದು ಪ್ರಶ್ನಿಸಿದರು.
11:37 PM (IST) Dec 02
10:49 PM (IST) Dec 02
ಆಂಧ್ರಪ್ರದೇಶ ಮತ್ತು ಕರ್ನಾಟಕದ ರೈತರು ತಮ್ಮ ಉತ್ತಮ ಫಸಲನ್ನು ಕೆಟ್ಟ ದೃಷ್ಟಿಯಿಂದ ರಕ್ಷಿಸಲು ಒಂದು ವಿಶಿಷ್ಟ ಉಪಾಯ ಕಂಡುಕೊಂಡಿದ್ದಾರೆ. ಅವರು ತಮ್ಮ ಹೊಲಗಳಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಪೋಸ್ಟರ್ಗಳನ್ನು ಹಾಕುತ್ತಿದ್ದಾರೆ.
10:32 PM (IST) Dec 02
09:35 PM (IST) Dec 02
'ಬಿಗ್ ಬಾಸ್ ಕನ್ನಡ ಸೀಸನ್ 12' ರಿಂದ ಎಲಿಮಿನೇಟ್ ಆದ ಜಾಹ್ನವಿ, ಟಾಪ್ 5 ಸ್ಪರ್ಧಿಗಳ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಶ್ವಿನಿ ಗೌಡ ಗೆಲ್ಲಬೇಕೆಂಬುದು ತಮ್ಮ ಆಸೆಯಾದರೂ, ಗೆಲ್ಲುವುದೇ ಬೇರೆಯವರು ಎನ್ನುವ ಮೂಲಕ ಅವರ ಹೆಸರು ರಿವೀಲ್ ಮಾಡಿದ್ದಾರೆ!
09:12 PM (IST) Dec 02
ದೇವಸ್ಥಾನದಲ್ಲಿ ಭೂಮಿಕಾಳ ಸೀರೆಗೆ ಬೆಂಕಿ ಹೊತ್ತಿಕೊಂಡಾಗ ಆಘಾತದಿಂದ ಭಾಗ್ಯಮ್ಮನಿಗೆ ದನಿ ಮರಳಿ ಬರುತ್ತದೆ. ಮತ್ತೊಂದೆಡೆ, ಮಲ್ಲಿಯನ್ನು ಹುಡುಕುತ್ತಿರುವ ಜೈದೇವನು, ಆಕೆ ತನ್ನ ಕಣ್ಣೆದುರೇ ಹಾದು ಹೋದರೂ ಕುಡಿದ ನಶೆಯಲ್ಲಿದ್ದ ರಿಂದ ಕಾಣಿಸಿಲ್ಲ, ಆದರೆ ಭಾಗ್ಯಮ್ಮ ಕಣ್ಣಿಗೆ ಬೀಳ್ತಾಳೆ. ಮುಂದೇನು?
09:06 PM (IST) Dec 02
08:43 PM (IST) Dec 02
ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಜೈಲಿನಲ್ಲಿರುವಾಗಲೇ ಅವರ 'ಡೆವಿಲ್' ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಚಿತ್ರದಿಂದ ದರ್ಶನ್ ಅಕ್ಕನ ಮಗ ಚಂದು ಅವರನ್ನು ಹೊರಗಿಟ್ಟಿರುವ ಕಾರಣವನ್ನು ನಿರ್ದೇಶಕ ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಅವರು ಹೇಳಿದ್ದೇನು?
08:40 PM (IST) Dec 02
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ನಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ, ಏರ್ ಬಸ್ ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿವಿದೆಡೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
08:12 PM (IST) Dec 02
ಅತಿಯಾದ ಮಳೆಯಿಂದಾಗಿ ಕಾರ್ಕಳ ತಾಲೂಕಿನಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸಲು ಲೋಕೋಪಯೋಗಿ ಇಲಾಖೆಯು 'ಡ್ರೈನೆಜ್ ಲೇಯರ್' ಎಂಬ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಈ ವಿಧಾನವು ರಸ್ತೆಯ ಕೆಳಗೆ ನೀರು ನಿಲ್ಲುವುದನ್ನು ತಡೆದು, ಡಾಂಬರು ಪದರದ ಬಾಳಿಕೆಯನ್ನು ಹೆಚ್ಚಿಸುತ್ತದೆ.
08:07 PM (IST) Dec 02
07:58 PM (IST) Dec 02
07:17 PM (IST) Dec 02
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಕೆಕೆಆರ್ಡಿಬಿ ನೆರವಿನೊಂದಿಗೆ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆಗಳನ್ನು ಆರಂಭಿಸಲಿದೆ. ಈ ಮೂಲಕ, ಸರ್ಕಾರಿ ಶಾಲೆಗಳಲ್ಲಿ ಕುಸಿಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಎಲ್ಕೆಜಿಯಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ.
06:46 PM (IST) Dec 02
06:43 PM (IST) Dec 02
ಮಂಡ್ಯ ಮಿಮ್ಸ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ವೇಳೆ ಉಳಿಯುವ ಕ್ಯಾನ್ಸರ್ ಅವಶೇಷವನ್ನು ನೈಜ ಸಮಯದಲ್ಲಿ ಗುರುತಿಸುವ ಸಂಶೋಧನೆ ಆರಂಭಿಸಿವೆ. ಈ ತಂತ್ರಜ್ಞಾನವು ಎಐ ಮತ್ತು ಫ್ಲೊರೆಸನ್ಸ್ ಇಮೇಜಿಂಗ್ ಬಳಸಿ ಶಸ್ತ್ರಚಿಕಿತ್ಸೆಯ ನಿಖರತೆಯನ್ನು ಹೆಚ್ಚಿಸಿ, ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಗುರಿ ಹೊಂದಿದೆ.
06:17 PM (IST) Dec 02
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 'ಜೈಷ್-ಇ-ಮೊಹಮ್ಮದ್' ಹೆಸರಿನಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಸಂದೇಶದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಮತ್ತು ಪ್ರಮುಖ ಮಾಲ್ಗಳನ್ನು ಗುರಿಯಾಗಿಸಲಾಗಿತ್ತು.
06:06 PM (IST) Dec 02
ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಪುತ್ತಿಲ ಪರಿವಾರದ ಕಾರ್ಯಕರ್ತರು ತಡೆದು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
05:11 PM (IST) Dec 02
ಲವಂಗ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದು ಸಾಕಷ್ಟು ಔಷಧಿ ಗುಣವನ್ನು ಹೊಂದಿದೆ. ಚಳಿಗಾಲದಲ್ಲಿ ಲವಂಗದ ಟೀ ಕುಡಿದ್ರೆ ರೋಗನಿರೋಧಕ ಶಕ್ತಿ ಹೆಚ್ಚಾಗೋದಲ್ದೆ ಮತ್ತೇನೆಲ್ಲ ಲಾಭವಿದೆ, ಅದನ್ನು ತಯಾರಿಸೋದು ಹೇಗೆ ಎಂಬ ಮಾಹಿತಿ ಇಲ್ಲಿದೆ.
04:48 PM (IST) Dec 02
04:29 PM (IST) Dec 02
04:14 PM (IST) Dec 02
ಬೆಂಗಳೂರಿನ ವಿದ್ಯಾರಣ್ಯಪುರದ 60 ವರ್ಷದ ಮಹಿಳೆಯೊಬ್ಬರು, ಬೆಸ್ಕಾಮ್ ಅಧಿಕಾರಿ ಎಂದು ಹೇಳಿಕೊಂಡ ಸೈಬರ್ ವಂಚಕನ ಮಾತನ್ನು ನಂಬಿ ನಕಲಿ ಆ್ಯಪ್ ಡೌನ್ಲೋಡ್ ಮಾಡಿದ್ದಾರೆ. ಬಿಲ್ ಅಪ್ಡೇಟ್ಗಾಗಿ 12 ರೂ. ಪಾವತಿಸಲು ಹೋಗಿ,14.60 ಲಕ್ಷ ರೂ. ಕಳೆದುಕೊಂಡಿದ್ದಾರೆ.
03:43 PM (IST) Dec 02
ಬೆಂಗಳೂರಿನಲ್ಲಿ ದಾರುಣ ಘಟನೆ! ನಡತೆಯ ಮೇಲಿನ ಅನುಮಾನದಿಂದ ಲಿವ್-ಇನ್ ಸಂಗಾತಿಯನ್ನು ಕೊಲೆಗೈದು, ಪ್ರಿಯಕರ ಆತ್ಮಹ*ತ್ಯೆಗೆ ಶರಣಾಗಿದ್ದಾನೆ. ಘಟನೆಯ ಸಂಪೂರ್ಣ ವಿವರ ತಿಳಿಯಲು ಓದಿ.
03:16 PM (IST) Dec 02
ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಂಗಳೂರಿನಲ್ಲಿ ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಪವರ್ ಶೇರಿಂಗ್ ಮತ್ತು ಸಿಎಂ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವಾಗ, ಈ ಮುಖಾಮುಖಿಯು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
03:09 PM (IST) Dec 02
ಬೆಳಗಾವಿ ಜಿಲ್ಲೆಯ ಮುರಗೋಡ ಠಾಣಾ ವ್ಯಾಪ್ತಿಯಲ್ಲಿ, 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾ*ಚಾರ ಎಸಗಿದ್ದಾರೆ. ಆರೋಪಿಗಳ ಜೀವ ಬೆದರಿಕೆಯಿಂದಾಗಿ 9 ದಿನಗಳ ನಂತರ ದೂರು ದಾಖಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು.
02:46 PM (IST) Dec 02
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಡಿಸೆಂಬರ್ 8, 2025 ರಿಂದ ಹೊಸ ಪಿಕಪ್ ನಿಯಮ ಜಾರಿಯಾಗಲಿದೆ. ಈ ನಿಯಮದ ಪ್ರಕಾರ, ಖಾಸಗಿ ವಾಹನಗಳಿಗೆ ಪಿಕಪ್ ವಲಯದಲ್ಲಿ ಕೇವಲ 8 ನಿಮಿಷಗಳ ಉಚಿತ ಕಾಯುವ ಅವಧಿ ನೀಡಲಾಗಿದೆ.
02:10 PM (IST) Dec 02
01:05 PM (IST) Dec 02
ಬೆಳಗಾವಿಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದ ವಿಚಿತ್ರ ಎಟಿಎಂ ಕಳ್ಳತನ! ಖದೀಮರು ತಳ್ಳು ಗಾಡಿಯಲ್ಲಿ ಸಂಪೂರ್ಣ ಮಷಿನ್ ಹೊತ್ತೊಯ್ದರು. ಪೊಲೀಸರನ್ನೇ ದಂಗಾಗಿಸಿದ ಈ ಘಟನೆಯ ವಿವರ ತಿಳಿಯಲು ಕ್ಲಿಕ್ ಮಾಡಿ.
12:56 PM (IST) Dec 02
Kengeri police arrest brothers: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಪ್ರಯಾಣಿಕರ ಮೊಬೈಲ್ ಕದಿಯುತ್ತಿದ್ದ ಅಣ್ಣತಮ್ಮಂದಿರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಬಸ್ ಹತ್ತುವ ವೇಳೆ ನೂಕುನುಗ್ಗಲು ಸೃಷ್ಟಿಸಿ ಮೊಬೈಲ್ ಕದ್ದು, ನಂತರ ಮಾಲೀಕರ ದಿಕ್ಕು ತಪ್ಪಿಸಿ ಪರಾರಿಯಾಗುತ್ತಿದ್ದರು.
12:48 PM (IST) Dec 02
Cartier ವಾಚ್ ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ರಾ ಸಿಎಂ-ಡಿಸಿಎಂ? ಕಂಪನಿ ಪ್ರಕಾರ ಇದ್ರ ಬೆಲೆ 43 ಲಕ್ಷ ರೂ, ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಉಭಯ ನಾಯಕರು ಒಂದೇ ರೀತಿ ವಾಚ್ ಕಟ್ಟಿ ಮಾಧ್ಯಮ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಆದರೆ ಇದೀಗ ಇದರ ಬೆಲೆ ಭಾರಿ ಚರ್ಚೆಗೆ ಗ್ರಾಸವಾಗಿದೆ.
12:47 PM (IST) Dec 02
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ದಿ ಡೆವಿಲ್' ಚಿತ್ರವು ಡಿಸೆಂಬರ್ 11 ರಂದು ಬಿಡುಗಡೆಯಾಗಲಿದೆ. ದರ್ಶನ್ ಅನುಪಸ್ಥಿತಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಸಹನಟರೊಬ್ಬರು ಕಣ್ಣೀರಿಟ್ಟಿದ್ದು, ಚಿತ್ರತಂಡವು ಬಿಡುಗಡೆಗೆ ಭರ್ಜರಿ ಸಿದ್ಧತೆ ನಡೆಸಿದೆ. ಚಿತ್ರದ ಟ್ರೈಲರ್ ಡಿ.5 ರಂದು ಬಿಡುಗಡೆಯಾಗಲಿದೆ.
12:41 PM (IST) Dec 02
ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ 'ಕಾಂತಾರ' ಚಿತ್ರದ ದೈವವನ್ನು 'ದೆವ್ವ' ಎಂದು ಕರೆದು ನಟ ರಣ್ವೀರ್ ಸಿಂಗ್ ವಿವಾದ ಸೃಷ್ಟಿಸಿದ್ದರು. ರಣ್ವೀರ್ ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿ, ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸಿದ್ದಾರೆ.
12:24 PM (IST) Dec 02
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಫಾಸ್ಟ್ ಟ್ರ್ಯಾಕ್ ಕೋರ್ಟ್ ವಿಚಾರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಯಡಿಯೂರಪ್ಪ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
12:09 PM (IST) Dec 02
ಈ ಲೇಖನವು ಎಚ್1ಬಿ ವೀಸಾ, ಮುಕ್ತ ವ್ಯಾಪಾರ ಮತ್ತು ಕೃತಕ ಬುದ್ಧಿಮತ್ತೆಯ (ಎಐ) ಪ್ರಭಾವವ ಚರ್ಚಿಸುತ್ತದೆ. ಎಐ ಮತ್ತು ರೊಬೊಟಿಕ್ಸ್ನಿಂದಾಗಿ ಮುಂದಿನ 20 ವರ್ಷಗಳಲ್ಲಿ ಕೆಲಸ ಮಾಡುವುದು ಐಚ್ಛಿಕವಾಗಬಹುದು ಎಂದು ವಿಶ್ಲೇಷಿಸಲಾಗಿದ್ದು, ಯುವ ಉದ್ಯಮಿಗಳು ಸಮಾಜಕ್ಕೆ ಹೆಚ್ಚು ಕೊಡುಗೆ ನೀಡಬೇಕೆಂಬ ಸಂದೇಶವಿದೆ..
12:05 PM (IST) Dec 02
ಬಿಗ್ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಗಿಲ್ಲಿ ನಟ ಅವರ ಆಟದ ಬಗ್ಗೆ ನಟ ಗೌರವ್ ಶೆಟ್ಟಿ ಮತ್ತು ಶಿಶಿರ್ ಮಾತನಾಡಿದ್ದಾರೆ ಗಿಲ್ಲಿ ಆಟವನ್ನು 'ಒನ್ಮ್ಯಾನ್ ಶೋ' ಎಂದು ಬಣ್ಣಿಸಿದ್ದು, ಅವರ ವಿಶೇಷ ಗುಣವನ್ನು ಶ್ಲಾಘಿಸಿದ್ದಾರೆ.
11:58 AM (IST) Dec 02
ವಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ 5 ಮಹಾನಗರಗಳಲ್ಲಿ ರಸ್ತೆಗುಂಡಿಗಳಿಂದ 558 ಸಾವುಗಳು ಸಂಭವಿಸಿರುವುದನ್ನು ಮತ್ತು ರೈತರಿಗಾಗಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯುವಲ್ಲಿ ವಿಫಲತೆಯನ್ನು ಖಂಡಿಸಿದ್ದಾರೆ.
11:46 AM (IST) Dec 02
ಶ್ರೀರಂಗಪಟ್ಟಣದಲ್ಲಿ ನಡೆಯಲಿರುವ ಹನುಮ ಮಾಲಾ ಸಂಕೀರ್ತನಾ ಯಾತ್ರೆಗೆ ಪಟ್ಟಣ ಸಜ್ಜಾಗಿದೆ. ಮೂಡಲಬಾಗಿಲು ಆಂಜನೇಯ ದೇಗುಲ ಪುನರ್ ಪ್ರತಿಷ್ಠಾಪನೆಗಾಗಿ ನಡೆಯುತ್ತಿರುವ ಈ ಯಾತ್ರೆಯ ಹಿನ್ನೆಲೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣದಾದ್ಯಂತ, ವಿಶೇಷವಾಗಿ ಜಾಮೀಯಾ ಮಸೀದಿ ಸುತ್ತಲೂ ಬಿಗಿ ಪೊಲೀಸ್ ಭದ್ರತೆ.
11:38 AM (IST) Dec 02
ರಾಜ್ಯದಲ್ಲಿ ಟೊಮೆಟೊ ಬೆಲೆ ಕಳೆದ 15 ದಿನಗಳಲ್ಲಿ ಕೆಜಿಗೆ ₹60-₹80ಕ್ಕೆ ಏರಿಕೆಯಾಗಿದೆ. ಹವಾಮಾನ ವೈಪರೀತ್ಯ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದ್ದು, ಕೋಲಾರ ಟೊಮೆಟೊಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಪರಿಸ್ಥಿತಿ ಇನ್ನೂ ಒಂದೂವರೆ ತಿಂಗಳು ಮುಂದುವರಿಯುವ ಸಾಧ್ಯತೆಯಿದೆ.
11:11 AM (IST) Dec 02
10:47 AM (IST) Dec 02
ಬೆಂಗಳೂರು ಮೊದಲ ಬಾರಿಗೆ ಎಂಟರ್ಪ್ರೆನಾರಿ ಮೇಳ 2.0 ಆಯೋಜಿಸುತ್ತಿದೆ. ಆಸ್ಪೈರ್ ಫಾರ್ ಹರ್ ಮತ್ತು ಪ್ರಾಜೆಕ್ಟ್ ನವೇಲಿ ಸಹಭಾಗಿತ್ವದಲ್ಲಿ ನಡೆಯುವ ಈ ಕಾರ್ಯಕ್ರಮ, 70ಕ್ಕೂ ಹೆಚ್ಚು ಮಹಿಳa ನೇತೃತ್ವದ ಬ್ರ್ಯಾಂಡ್ಗಳಿಗೆ ವೇದಿಕೆ ಕಲ್ಪಿಸಲಿದ್ದು, ಮಹಿಳಾ ಉದ್ಯಮಶೀಲತೆ ಆರ್ಥಿಕ ಸಬಲೀಕರಣ ಸಂಭ್ರಮಿಸಲಿದೆ..
10:27 AM (IST) Dec 02
ಕೋವಿಡ್ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಅಂತಿಮ ತನಿಖಾ ವರದಿಯನ್ನು ನ್ಯಾ. ಮೈಕಲ್ ಡಿ. ಕುನ್ಹಾ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಈ ದುರಂತದಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.
09:51 AM (IST) Dec 02
ವಕೀಲರ ಗುಮಾಸ್ತರ ಕ್ಷೇಮಾಭಿವೃದ್ಧಿ ನಿಧಿ ವಿಚಾರದಲ್ಲಿ ಸರ್ಕಾರದ ನಿಷ್ಕ್ರಿಯತೆಗೆ ಹೈಕೋರ್ಟ್ ತೀವ್ರ ಅಸಮಾಧಾನ. ವಕೀಲರ ಕಲ್ಯಾಣ ನಿಧಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದು ಗುಮಾಸ್ತರಿಗೆ ಅನುಕೂಲ ಮಾಡಿಕೊಡಲು ವಿಫಲವಾದರೆ, ರಾಜ್ಯ ಕಾನೂನು ಇಲಾಖೆಯ ಕಾರ್ಯದರ್ಶಿ ಖುದ್ದು ಹಾಜರಾಗಬೇಕೆಂದು ಎಚ್ಚರಿಕೆ ನೀಡಿದೆ.