‘14ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಬಂದಿದ್ದ ಪಾಲು ಶೇ.4.71. ಆದರೆ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇನ್ನೂ ಕಮ್ಮಿ, ಅಂದರೆ, ಶೇ.3.64ರಷ್ಟು ಮಾತ್ರ ಬಂದಿದೆ. ಕನಿಷ್ಠ ಶೇ 4.71ರಷ್ಟಾದರೂ ಕೊಡಿ ಎಂದು ಒತ್ತಾಯ ಮಾಡಿದ್ದೆವು. 14ನೇ ಹಣಕಾಸು ಆಯೋಗಕ್ಕಿಂತ ಜಾಸ್ತಿ ಮಾಡಲು ಕೇಳಿದ್ದೆವು. ಆದರೆ, ಶೇ.4.131ರಷ್ಟು ಮಾತ್ರ ಕೊಡಲಾಗಿದೆ. ಇದು ರಾಜ್ಯಕ್ಕೆ ಮಾಡಿದ ದೊಡ್ಡ ಅನ್ಯಾಯ’ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.
10:39 PM (IST) Feb 02
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಫಾಕ್ಸ್ಕಾನ್ ಮತ್ತು ದೇವನಹಳ್ಳಿ ವಿಶೇಷ ಹೂಡಿಕೆ ಪ್ರದೇಶದ ಇತರ ಘಟಕಗಳಿಗೆ ಆಸ್ತಿ ತೆರಿಗೆ ಪಾವತಿಸಲು ನಿರ್ದೇಶನ ನೀಡಿದೆ, ಅಧಿಸೂಚಿತ ಕೈಗಾರಿಕಾ ಪ್ರದೇಶಗಳಲ್ಲಿ ತೆರಿಗೆ ಮೌಲ್ಯಮಾಪನ ಮತ್ತು ಸಂಗ್ರಹಣೆಯ ಮೇಲಿನ ಅಧಿಕಾರವನ್ನು ಕೂಡ ಉಲ್ಲೇಖಿಸಿದೆ.
10:23 PM (IST) Feb 02
57ನೇ ವಯಸ್ಸಿನಲ್ಲಿ ರಾಜ್ಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ನಟ ಜಗ್ಗೇಶ್ ಅವರ ಪತ್ನಿ ಪರಿಮಳಾ ಜಗ್ಗೇಶ್ ಸಾಧನೆ ಮಾಡಿದ್ದಾರೆ. ಸಂಸಾರದ ಜವಾಬ್ದಾರಿಯ ನಡುವೆಯೂ ಶಿಕ್ಷಣ ಹಾಗೂ ಹೊಸ ಕೌಶಲ್ಯಗಳನ್ನು ಕಲಿಯುವ ಅವರ ಛಲಕ್ಕೆ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
08:42 PM (IST) Feb 02
ನಟ ಕಿಶೋರ್ ಅವರು ಬಿಜೆಪಿ, ಆರೆಸ್ಸೆಸ್ ಹಾಗೂ ಕೇಂದ್ರ ಸರ್ಕಾರದ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ. 'ಹಿಂದೂ ಹಿಂದಕ್ಕೆ, ಜಾತಿ ಮುಂದಕ್ಕೆ' ಎಂದು ಹೇಳುವ ಮೂಲಕ, ಯುಜಿಸಿ ನಿರ್ಧಾರ ಹಾಗೂ ದೇಶದ ಜಾಗತಿಕ ಸೂಚ್ಯಂಕಗಳ ಕುಸಿತದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
07:47 PM (IST) Feb 02
Extra Marital Affairs Signs: ಅಕ್ರಮ ಸಂಬಂಧ ಅನ್ನೋದು ತಪ್ಪು ಅಂತ ಎಲ್ಲರಿಗೂ ಗೊತ್ತು. ಆದರೂ ಕೆಲವರು ಯಾಕೆ ಆ ತಪ್ಪಿನ ಕಡೆಗೇ ಆಕರ್ಷಿತರಾಗುತ್ತಾರೆ? ಅಕ್ರಮ ಸಂಬಂಧದಲ್ಲಿರುವವರಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ? ಈ ಬಗ್ಗೆ ಮನಃಶಾಸ್ತ್ರ ಏನು ಹೇಳುತ್ತೆ?
07:27 PM (IST) Feb 02
Effects of quitting junk food: ಜಂಕ್ ಫುಡ್ ಆರೋಗ್ಯಕ್ಕೆ ಒಳ್ಳೇದಲ್ಲ ಅಂತ ಎಲ್ಲರಿಗೂ ಗೊತ್ತು. ಆದ್ರೂ, ಬಹುತೇಕರು ಅದನ್ನೇ ಇಷ್ಟಪಟ್ಟು ತಿಂತಾರೆ. ಆದ್ರೆ, 30 ದಿನಗಳ ಕಾಲ ಜಂಕ್ ಫುಡ್ ತಿನ್ನೋದನ್ನು ನಿಲ್ಲಿಸಿದರೆ ನಿಮ್ಮ ದೇಹದಲ್ಲಿ, ಮುಖ್ಯವಾಗಿ ಮುಖದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ?
07:19 PM (IST) Feb 02
ಧಾರವಾಡದಲ್ಲಿ, ಅಜ್ಜಿಯ ಅಂತಿಮ ಸಂಸ್ಕಾರ ಮುಗಿಸಿ ಮನೆಗೆ ಮರಳುತ್ತಿದ್ದ ಮೊಮ್ಮಗ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿದ್ದ ಬೈಕ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಒಂದೇ ಕುಟುಂಬದಲ್ಲಿನ ಸತತ ಎರಡು ಸಾವುಗಳು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.
07:19 PM (IST) Feb 02
ಸಿಜೆ ರಾಯ್ ಸಾವಿಗೂ ಮುನ್ನ ನಡೆದಿತ್ತು ಮಹತ್ವದ ಘಟನೆ, ಸಿಜೆ ರಾಯ್ ಸಾವಿಗೆ ಐಟಿ ದಾಳಿ, ಕಿರುಕುಳವೇ ಕಾರಣ ಎಂದು ಹೇಳಲಾಗುತ್ತಿದೆ. ಆದರೆ ಸಿಜೆ ರಾಯ್ ಮಹತ್ವದ ಯೂ ಟರ್ನ್ ಇದೀಗ ಅನುಮಾನ ಹೆಚ್ಚಿಸಿದೆ.
07:14 PM (IST) Feb 02
07:11 PM (IST) Feb 02
South Indian Celebrity Second Marriage: ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಕೆಲ ನಟ, ನಟಿಯರು ತಮ್ಮ ಮೊದಲನೇ ವೈವಾಹಿಕ ಜೀವನದಲ್ಲಿ ಸೋತಿದ್ದರು, ಆಮೇಲೆ ಅವರು ಎರಡನೇ ಮದುವೆ ಆಗಿ ಖುಷಿಯಿಂದ ಬದುಕುತ್ತಿದ್ದಾರೆ.
06:58 PM (IST) Feb 02
ಹೊಸಕೋಟೆ ಜನರ ಬಹುನಿರೀಕ್ಷಿತ ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಶಾಸಕ ಶರತ್ ಬಚ್ಚೇಗೌಡರ ಪ್ರಯತ್ನದ ಫಲವಾಗಿ, ಕೆ.ಆರ್.ಪುರಂನಿಂದ ಹೊಸಕೋಟೆಯವರೆಗಿನ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನಕ್ಕೆ ಚಾಲನೆ ನೀಡಲಾಗಿದೆ. ಈ ಯೋಜನೆಯು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸುವ ನಿರೀಕ್ಷೆಯಿದೆ.
06:21 PM (IST) Feb 02
06:20 PM (IST) Feb 02
ಕನಕೋತ್ಸವದಲ್ಲಿ ಗಾಯಕ ನವೀನ್ ಸಜ್ಜು ಜೊತೆ ಡಿಸಿಎಂ ಡಿಕೆಶಿ ಪತ್ನಿ ಉಷಾ ಹೆಜ್ಜೆ ಹಾಕಿದ್ದು, ಈ ವೇಳೆ ಅವರು ನಾಚಿದ ಪ್ರಸಂಗ ಗಮನ ಸೆಳೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ , 2027ರಲ್ಲಿ ಅದ್ಧೂರಿ ಉತ್ಸವ ನಡೆಸುವ ಬಗ್ಗೆ ಘೋಷಣೆಗಳನ್ನು ಮಾಡಿದರು.
05:56 PM (IST) Feb 02
05:54 PM (IST) Feb 02
ಬೆಂಗಳೂರಿನ 'ಟೀಚ್ ಫಾರ್ ಇಂಡಿಯಾ' ಶಿಕ್ಷಕಿ ತಮಗೆ ಹಣ್ಣುಗಳಿಷ್ಟ ಎಂದು ಹೇಳಿದ್ದಕ್ಕೆ, ಅವರ ವಿದ್ಯಾರ್ಥಿಗಳು ಪ್ರತಿದಿನ ಪ್ರೀತಿಯಿಂದ ಹಣ್ಣುಗಳನ್ನು ತಂದುಕೊಡುತ್ತಿದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಮಕ್ಕಳು ತೋರುತ್ತಿರುವ ಈ ನಿಸ್ವಾರ್ಥ ಪ್ರೀತಿಯ ವಿಡಿಯೋ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ.
05:31 PM (IST) Feb 02
ದಾವಣಗೆರೆಯಲ್ಲಿ ಕಾಂಗ್ರೆಸ್ ಮುಖಂಡ ಆಯೂಬ್ ಪೈಲ್ವಾನ್ ಪುತ್ರರು ಮಹಿಳಾ ಸಿಪಿಐ ಸೇರಿದಂತೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಘಟನೆ ಬಳಿಕ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಈ ಪ್ರಕರಣವು ರಾಜಕೀಯ ತಿರುವು ಪಡೆದುಕೊಂಡಿದೆ.
05:07 PM (IST) Feb 02
Online Business: ಅನೇಕರು ಇಂದು ಮನೆಯಲ್ಲಿ ಕೂತು ಆನ್ಲೈನ್ ಬ್ಯುಸಿನೆಸ್ ಮಾಡುತ್ತಿದ್ದಾರೆ. ಇಂದಿನ ಕಾಲದಲ್ಲಿ ಇದು ಅತ್ಯಂತ ಲಾಭ ತಂದುಕೊಡುವ ಹಾಗೂ ಸ್ಮಾರ್ಟ್ ನಿರ್ಧಾರವಾಗಿದೆ. ಕಡಿಮೆ ಬಂಡವಾಳದಲ್ಲಿ ದೊಡ್ಡ ಮಟ್ಟದ ಯಶಸ್ಸು ಪಡೆಯಬಹುದು.
04:53 PM (IST) Feb 02
ಗ್ರೇಟರ್ ಬೆಂಗಳೂರು ಪ್ರಾಧಿಕಾರವು 2026-27ನೇ ಸಾಲಿನ ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆಯನ್ನು ಆರಂಭಿಸಿದೆ. ದಂಡ ರಹಿತವಾಗಿ ನವೀಕರಿಸಲು ಫೆಬ್ರವರಿ 28 ಕೊನೆಯ ದಿನವಾಗಿದ್ದು, ಏಪ್ರಿಲ್ 1ರ ನಂತರ ಶೇ. 100ರಷ್ಟು ದಂಡ ವಿಧಿಸಲಾಗುವುದು. ಈ ನಿಯಮ ಪಾಲಿಸದಿದ್ದರೆ ಪರವಾನಿಗೆಯನ್ನು ತಿರಸ್ಕರಿಸಲಾಗುವುದು.
04:14 PM (IST) Feb 02
04:14 PM (IST) Feb 02
Bigg Boss Gilli Nata: ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ವಿಜೇತ ಗಿಲ್ಲಿ ನಟ ಅವರು ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ನಿತ್ಯ ಒಂದಲ್ಲ ಒಂದು ಕಾರ್ಯಕ್ರಮಗಳು, ರಾಜಕಾರಣಿಗಳ ಭೇಟಿ ಮಧ್ಯೆ ಇನ್ನೆರಡು ಖುಷಿಯ ವಿಷಯವೂ ಇದೆ.
04:12 PM (IST) Feb 02
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ತಮ್ಮ 30 ವರ್ಷಗಳ ಸಿನಿ ಪಯಣವನ್ನು ಪೂರ್ಣಗೊಳಿಸಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ, ತಮ್ಮ ಅಭಿಮಾನಿಗಳಿಗೆ, ನಿರ್ದೇಶಕರಿಗೆ ಮತ್ತು ಚಿತ್ರರಂಗದ ಎಲ್ಲರಿಗೂ ಧನ್ಯವಾದ ಅರ್ಪಿಸಿ ಭಾವುಕ ಪತ್ರ ಬರೆದಿದ್ದಾರೆ. ಸದ್ಯ 'ಬಿಲ್ಲ ರಂಗಾ ಬಾಷಾ' ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ.
04:11 PM (IST) Feb 02
ಕುಣಿಗಲ್ನಲ್ಲಿ ನಡೆದ ಲಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿ ಮಂಜು ತನ್ನ ಸಹೋದರಿಯ ಪ್ರೀತಿಯ ವಿಚಾರವಾಗಿ ಗಾಯಾಳು ಜಗದೀಶ್ ಮೇಲೆ ಪೂರ್ವನಿಯೋಜಿತವಾಗಿ ದಾಳಿ ನಡೆಸಿದ್ದನು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.
03:42 PM (IST) Feb 02
03:34 PM (IST) Feb 02
C-DAC 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಗಳನ್ನು ಭರ್ತಿ ಮಾಡಲಿದೆ. ಪ್ರಾಜೆಕ್ಟ್ ಎಂಜಿನಿಯರ್, ಪ್ರಾಜೆಕ್ಟ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ತಾಂತ್ರಿಕ ಹುದ್ದೆಗಳಿಗೆ ಆಸಕ್ತರು ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
03:33 PM (IST) Feb 02
ಕಲಾವಿದರಿಗೆ ಕಾಂಡೋಮ್ ಸಪ್ಲೈ ಮಾಹಿತಿ ಬಿಚ್ಚಿಟ್ಟ ಚಂದ್ರಚೂಡ್,, ಚಕ್ರವರ್ತಿ ಚಂದ್ರಚೂಡ್ ಹೇಳಿಕೆ ಕೋಲಾಹಲ ಸೃಷ್ಟಿಸಿದೆ. ಚಂದ್ರಚೂಡ ವಿರುದ್ದ ಪ್ರಕರಣ ದಾಖಲಿಸಲು ಸಿನಿಮಾ ನಿರ್ಮಾಪಕರ ಸಂಘ ಮುಂದಾಗಿದೆ.
03:11 PM (IST) Feb 02
ಬೆಂಗಳೂರು ಜಲಮಂಡಳಿಯು (BWSSB) ಫೆಬ್ರವರಿ 5 ಮತ್ತು 6 ರಂದು ಸಾರಕ್ಕಿಯಲ್ಲಿ ತುರ್ತು ಪೈಪ್ಲೈನ್ ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ, ದಕ್ಷಿಣ ಮತ್ತು ಕೇಂದ್ರ ಬೆಂಗಳೂರಿನ ಹಲವು ಪ್ರಮುಖ ಪ್ರದೇಶಗಳಲ್ಲಿ 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
02:43 PM (IST) Feb 02
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ, ಸಾಲ ಮರುಪಾವತಿ ಮಾಡುವ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೇ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಮಲಿಂಗೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿ ಪತಿಯನ್ನು ವಶಕ್ಕೆ ಪಡೆಯುವ ಪ್ರಕ್ರಿಯೆಯಲ್ಲಿದ್ದಾರೆ.
02:35 PM (IST) Feb 02
ಬಾಲ್ಯದಲ್ಲಿ ಪುಟ್ಟ ಮಕ್ಕಳಿಗೆ ತಿನ್ನುವುದರ ಮೇಲೆ ಭಾರಿ ಆಸೆ ಇರುತ್ತದೆ. ತಮ್ಮಿಷ್ಟದ ತಿನಿಸನ್ನು ಎಷ್ಟು ತಿಂದರೂ ಸಾಕಾಗದು ಎಂಬಷ್ಟು ವ್ಯಾಮೋಹ ಬಾಲ್ಯದಲ್ಲಿ ಇರುತ್ತದೆ.ಹಾಗೆಯೇ ಇಲ್ಲೊಬ್ಬ ಬಾಲಕನಿಗೆ ಮೊಮೊ ತಿನ್ನುವ ಆಸೆ. ಇದಕ್ಕಾಗಿ ಆತ ಏನ್ ಮಾಡಿದ್ದಾನೆ ನೋಡಿ..
02:17 PM (IST) Feb 02
ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕಾಗಿ ಬುರ್ಖಾಧಾರಿ ಮಹಿಳೆಯೊಬ್ಬಳು 'ಲಕ್ಷ್ಮಮ್ಮ' ಹೆಸರಿನ ಆಧಾರ್ ಕಾರ್ಡ್ ಬಳಸಿ ಸಿಕ್ಕಿಬಿದ್ದಿದ್ದಾಳೆ. ಈ ವೈರಲ್ ವಿಡಿಯೋ ಆಕೆಯ ಗುರುತು ಮತ್ತು ಹಿಜಾಬ್ ಮೇಲಿನ ಅರೇಬಿಕ್ ಬರಹದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.
02:09 PM (IST) Feb 02
ಕಲಬುರಗಿಯ ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಅವರ ಆತ್ಮಹತ್ಯೆ ಪ್ರಕರಣವು ಡೆತ್ ನೋಟ್ ಪತ್ತೆಯಾಗುವುದರೊಂದಿಗೆ ಹೊಸ ತಿರುವು ಪಡೆದಿದೆ. ತಮ್ಮ ಸಾವಿಗೆ 11 ಜನರ ಕಿರುಕುಳವೇ ಕಾರಣ ಎಂದು ಅವರು ಆರೋಪಿಸಿದ್ದು, ಆರ್ಥಿಕ ವ್ಯವಹಾರದಲ್ಲಿ ಮೋಸ ಹೋಗಿರುವುದಾಗಿಯೂ ಉಲ್ಲೇಖಿಸಿದ್ದಾರೆ.
01:26 PM (IST) Feb 02
ಚಾಮರಾಜನಗರದಿಂದ ಸ್ಪರ್ಧಿಸುವ ಊಹಾಪೋಹಗಳಿಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ. ರಾಮನಗರವು ತಮ್ಮ ತಂದೆಯ ಕರ್ಮಭೂಮಿ ಮತ್ತು ತಾತನಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿ, ಹಾಗಾಗಿ ಆ ಮಣ್ಣನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
01:16 PM (IST) Feb 02
ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಶಾಸಕ ಎ. ಮಂಜು ಅವರು, ಇಡಿ ಅಧಿಕಾರಿಗಳ ಒತ್ತಡ ಮತ್ತು ಪ್ರಭಾವಿ ರಾಜಕಾರಣಿಗಳ ಕೈವಾಡದ ಶಂಕೆ ವ್ಯಕ್ತಪಡಿಸಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕೇಂದ್ರ ಸರ್ಕಾರದ ತನಿಖೆಗೆ ಒತ್ತಾಯಿಸಿದ್ದಾರೆ.
12:57 PM (IST) Feb 02
ಸಾಮಾಜಿಕ ಜಾಲತಾಣದ ಇನ್ಫ್ಲುಯೆನ್ಸರ್ ರೇಷ್ಮಾ ಆಂಟಿ, ಪ್ರೀತಿಸಿ ಮದುವೆಯಾದ ಕಾರಣಕ್ಕೆ ತವರಿನಿಂದ ದೂರವಾಗಿದ್ದರು. ಈ ಸಂತಸದ ವಿಷಯವನ್ನು ವಿಡಿಯೋ ಮೂಲಕ ಹಂಚಿಕೊಂಡು ಭಾವುಕರಾಗಿದ್ದಾರೆ. ತಾಯಿಯನ್ನು ಭೇಟಿಯಾಗಲು ಹಾಸನಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
12:42 PM (IST) Feb 02
ಹಿರಿಯ ನಟಿ ತಾರಾ ಅನುರಾಧಾ ಅವರು ಮೂರು ಬಾರಿ ಗರ್ಭಪಾತದ ನೋವು ಅನುಭವಿಸಿದ ನಂತರ ಕೃತಕ ಗರ್ಭಧಾರಣೆ (IVF) ಮೂಲಕ ಮಗ ಕೃಷ್ಣನಿಗೆ ಜನ್ಮ ನೀಡಿದರು. ಇತ್ತೀಚೆಗೆ 13ನೇ ವಸಂತಕ್ಕೆ ಕಾಲಿಟ್ಟಿರುವ ಕೃಷ್ಣ, 'ಶಿವಾರ್ಜುನ' ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದಾನೆ.
12:38 PM (IST) Feb 02
ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರ ಆತ್ಮ*ಹತ್ಯೆ ಪ್ರಕರಣದ ತನಿಖೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಅವರ ದಿನಚರಿ ಡೈರಿ ಲಭ್ಯವಾಗಿದ್ದರೂ, ಅದನ್ನು ಡೆತ್ ನೋಟ್ ಎಂದು ಪರಿಗಣಿಸಲಾಗದು ಎಂದು ಎಸ್ಐಟಿ ಸ್ಪಷ್ಟಪಡಿಸಿದ್ದು, ಇದು ಸಾವಿನ ನಿಗೂಢತೆಯನ್ನು ಮತ್ತಷ್ಟು ಹೆಚ್ಚಿಸಿದೆ.
12:29 PM (IST) Feb 02
ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ, ಕಾಲು ಕಳೆದುಕೊಂಡ ವ್ಯಕ್ತಿಯೊಬ್ಬರಿಗೆ 2.10 ಲಕ್ಷ ರು. ಮೌಲ್ಯದ ಕೃತಕ ಕಾಲಿನ ದೇಣಿಗೆ ನೀಡಿ ಆ ವ್ಯಕ್ತಿಯು ನಡೆದಾಡುವ ಅಪೂರ್ವ ಅವಕಾಶ
12:19 PM (IST) Feb 02
ಭರತ ಹುಣ್ಣಿಮೆಯಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ಮೈಲಾರ ಜಾತ್ರೆಯಲ್ಲಿ ಗೊರವಯ್ಯನವರು ಕಾರ್ಣಿಕ ನುಡಿದಿದ್ದಾರೆ. 'ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್' ಇದುವೇ ಈ ವರ್ಷದ ಕಾರ್ಣಿಕವಾಗಿದೆ.
12:13 PM (IST) Feb 02
ಕೊಪ್ಪಳ ಜಿಲ್ಲೆಯ ಪೊಲೀಸ್ ಕಾನ್ಸ್ಟೇಬಲ್ ಬ್ರಹ್ಮಾನಂದ ಅವರು, ವರ್ಷವಿಡೀ ರಜೆ ಇಲ್ಲದ ಕೆಲಸದ ಒತ್ತಡದಿಂದ ಬೇಸತ್ತು, ಪೊಲೀಸ್ ಕೆಲಸಕ್ಕಿಂತ ಎಗ್ ರೈಸ್ ಮಾರುವುದು ಉತ್ತಮ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದಾರೆ. ಈ ಸ್ಟೇಟಸ್ ವೈರಲ್ ಆಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.
12:12 PM (IST) Feb 02
ಬೆಂಗಳೂರಿನ ತೀವ್ರ ಸಂಚಾರ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು, ಜಿಬಿಎ ಮತ್ತು ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದ್ದಾರೆ. ಇದರೊಂದಿಗೆ, ನಗರದ ಪ್ರಮುಖ ರಸ್ತೆಗಳಲ್ಲಿ 'ಪೇ ಆ್ಯಂಡ್ ಪಾರ್ಕ್' ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ.
11:58 AM (IST) Feb 02
ಚುನಾವಣಾ ಫಲಿತಾಂಶ ಸಹ ಪ್ರಕಟವಾಗಿ ಚುನಾವಣೆಯಲ್ಲಿ ಆಡಳಿತ ಪಕ್ಷದ ಕಾಂಗ್ರೆಸ್ ಬೆಂಬಲಿತರು 6 ಸ್ಥಾನಗಳು ಎನ್ಡಿಎ ಬೆಂಬಲಿತ ಅಭ್ಯರ್ಥಿಗಳು 5 ಹಾಗೂ ಕೆಎಚ್ಪಿ ಬಣದಿಂದ ಇಬ್ಬರು ಗೆಲವು ಸಾಧಿಸಿದ್ದಾರೆ.
11:45 AM (IST) Feb 02
Kannada Serial Actress: ಓರ್ವ ನಟಿಯೋರ್ವರು ಏಕಕಾಲಕ್ಕೆ ಎರಡು ಕನ್ನಡ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ. ಈಗ ಎರಡೂ ಧಾರಾವಾಹಿಯಿಂದ ಹೊರಬರುವ ಅಥವಾ ಬ್ರೇಕ್ ತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.