ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಹಿರಿಯ ನಾಯಕರಾದ ಸತೀಶ್ ಜಾರಕಿಹೊಳಿ ಹಾಗೂ ಬಿ.ಕೆ. ಹರಿಪ್ರಸಾದ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎನ್ನಲಾಗಿದೆ. ಮೇಲ್ವರ್ಗಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಒಬಿಸಿ ವರ್ಗಕ್ಕೆ ನೀಡಲು ಕಾಂಗ್ರೆಸ್ ಬಯಸಿದೆ. ಹೀಗಾಗಿ ಆ ಹುದ್ದೆಯನ್ನು ಪಡೆಯಲು ಸತೀಶ್ ಜಾರಕಿಹೊಳಿ ಅವರು ತೀವ್ರ ಪೈಪೋಟಿ ನಡೆಸಿದ್ದಾರೆ. ಆದರೆ ಪಕ್ಷಕ್ಕೆ ದೀರ್ಘಕಾಲದಿಂದ ನಿಷ್ಠೆಯಿಂದ ಇರುವ ನಾಯಕನಿಗೆ ಪಟ್ಟ ಕಟ್ಟುವ ಇರಾದೆ ಕಾಂಗ್ರೆಸ್ ವರಿಷ್ಠರಲ್ಲಿದೆ. ಆದ ಕಾರಣ ಹರಿಪ್ರಸಾದ್ ಹೆಸರನ್ನು ಕೆಲ ವರಿಷ್ಠ ನಾಯಕರು ಸೂಚಿಸಿದ್ದಾರೆ. ಹೀಗಾಗಿ ಜಾರಕಿಹೊಳಿ ಹಾಗೂ ಹರಿಪ್ರಸಾದ್ ಪೈಕಿ ಇಬ್ಬರಲ್ಲಿ ಒಬ್ಬರಿಗೆ ಹುದ್ದೆ ಒಲಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

10:55 PM (IST) Jun 02
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಡಿಕೆ ಶಿವಕುಮಾರ್ಗೆ ಅವಕಾಶ ಮಾಡಿಕೊಟ್ಟ ಸಿದ್ದರಾಮಯ್ಯಗೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಸಿದ್ದರಾಮಯ್ಯ ಅವರನ್ನು CWC ಸದಸ್ಯರಾಗಿ ನೇಮಕಗೊಳಿಸಿದೆ.
10:33 PM (IST) Jun 02
ಬೆಂಗಳೂರು ಮೆಟ್ರೋ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇದೀಗ ಪೀಕ್ ಹವರ್ನಲ್ಲಿ ಯೆಲ್ಲೋ ಲೈನ್ನಲ್ಲಿ ಕಾಯುವಿಕೆ ಅವಧಿ ಕಡಿತಗೊಂಡಿದೆ.
09:49 PM (IST) Jun 02
ಕರ್ನಾಟಕ ಮುಖ್ಯಮಂತ್ರಿಯಾಗಿ ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಡಿಕೆಶಿ ಜೊತೆ ಸಚಿವ ಸಂಪುಟ ಸೇರುತ್ತಿರುವ ಕುರಿತು ಇದೀಗ ಮತ್ತೊಂದು ಸುತ್ತಿನ ಮೀಟಿಂಗ್ ನಡೆಯುತ್ತಿದೆ. 14+1 ಆಯ್ಕೆ ಕುರಿತು ರಾಹುಲ್ ನೀಡಿದ ಸೂಚನೆ ಏನು?
09:49 PM (IST) Jun 02
ರಾಮನಗರ ಕ್ಷೇತ್ರದಲ್ಲಿ ರಾಜಕೀಯ ಬದಲಾವಣೆ ತರಲು ನನ್ನನ್ನು ಆಯ್ಕೆ ಮಾಡಿದ ಡಿ.ಕೆ.ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನನ್ನ ಪಾಲಿನ ಅದೃಷ್ಟ ಎಂದು ಶಾಸಕ ಇಕ್ಬಾಲ್ ಹುಸೇನ್ ಬಣ್ಣಿಸಿದರು.
08:02 PM (IST) Jun 02
ಕನ್ನಡದ ಸ್ಟಾರ್ ಸಿನಿಮಾಗಳು, ಅದ್ದೂರಿ ಸಿನಿಮಾಗಳು ಹೇಗೋ ಬಚಾವ್ ಆಗಿಬಿಡುತ್ತಾರೆ ಎಂಬ ಮಾತು ಗಾಂಧಿನಗರದಲ್ಲಿ ಮೊದಲು ಚಾಲ್ತಿಯಲ್ಲಿತ್ತು. ಸ್ಯಾಟಲೈಟ್, ಓಟಿಟಿ ಹಕ್ಕು ಮಾರಾಟದಿಂದ ಜಾಸ್ತಿ ದುಡ್ಡು ಬರುತ್ತದೆ ಅನ್ನುತ್ತಿದ್ದರು.
07:41 PM (IST) Jun 02
ಒಬ್ಬರ ಮುಖದಲ್ಲಿ ಮೊದಲು ಗಮನ ಸೆಳೆಯುವುದೇ ಅವರ ಕಣ್ಣುಗಳು. ಡಲ್ ಆದ ಕಣ್ಣು, ಕಪ್ಪು ವರ್ತುಲ, ಕಣ್ಣಿನ ಕೆಳಗೆ ಊತ... ಇವೆಲ್ಲಾ ಮುಖದ ಅಂದವನ್ನೇ ಹಾಳು ಮಾಡುತ್ತೆ. ಕೆಮಿಕಲ್ ತುಂಬಿದ ಐ-ಕ್ರೀಮ್ಗಳ ಬದಲು, ನ್ಯಾಚುರಲ್ ಆಗಿ ಕಣ್ಣುಗಳನ್ನು ಕಾಂತದಂತೆ ಸೆಳೆಯುವಂತೆ ಮಾಡಲು ಇಲ್ಲಿವೆ ಕೆಲವು ಸೂಪರ್ ಟಿಪ್ಸ್!
07:40 PM (IST) Jun 02
ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ 'ಜಿಮ್ಮಿ' ಚಿತ್ರದ ಮೂಲಕ ಗಾಯಕಿಯಾಗಿ ಮತ್ತು ಸಹಾಯಕ ನಿರ್ದೇಶಕಿಯಾಗಿ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದಾರೆ. ನಟನೆ ಮತ್ತು ಸಿನಿಮಾ ಮೇಕಿಂಗ್ನಲ್ಲಿ ಆಸಕ್ತಿ ಹೊಂದಿರುವ ಸಾನ್ವಿ, , ತಮಗೆ ಪುಷ್ಪರಾಜ್ನಂತಹ ಗಂಡ ಬೇಕು ಎಂದು ತಮಾಷೆಯಾಗಿ ಹೇಳಿಕೊಂಡಿದ್ದಾರೆ.
07:32 PM (IST) Jun 02
ಕರ್ಣ ಸೀರಿಯಲ್ನಲ್ಲಿ ಕರ್ಣನೊಂದಿಗೆ ನಿಧಿ ಪಾತ್ರಧಾರಿ ಭವ್ಯಾ ಗೌಡರ ಮದುವೆಯಾಗಿದೆ. ಇತ್ತೀಚೆಗೆ SITSA ಅವಾರ್ಡ್ಸ್ 2026ರಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ಮತ್ತು ಚಿತ್ತಾರ ಅವಾರ್ಡ್ ಪಡೆದ ಇವರು, ಮಾಹಿತಿ ಹಂಚಿಕೊಂಡಿದ್ದಾರೆ.
07:11 PM (IST) Jun 02
ರಾಜ್ಯದ ಯಾವ ಮೂಲೆಯಲ್ಲೆ ಹಿಂದುಗಳ ಮೇಲೆ ಹಲ್ಲೆ, ದೌರ್ಜನ್ಯ ನಡೆದರೂ ಪ್ರತಿಭಟಿಸುತ್ತೇವೆ, ಕೇಸ್ ಮಾಡದೆ ಹೋದರೆ ಪೊಲೀಸ್ ಠಾಣೆಗೂ ಮುತ್ತಿಗೆ ಹಾಕುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.
06:04 PM (IST) Jun 02
ಜೂನ್ 4 ರಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಅಲರ್ಟ್ ನೀಡಲಾಗಿದೆ.
05:47 PM (IST) Jun 02
ಮೋದಿ ಅವರ ಆಡಳಿತದ ಸಾಧನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸುವ ಕೆಲಸ ಮಾಡಬೇಕು ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದರು.
05:31 PM (IST) Jun 02
05:22 PM (IST) Jun 02
ಕೇಂದ್ರ ಸರ್ಕಾರದ ಸೆಂಟ್ರಲ್ ಎಂಪವರ್ಡ್ ಕಮಿಟಿಯು (ಸಿಇಸಿ) ಸ್ಥಳೀಯರಿಗೆ ಗೊತ್ತಾಗದ ರೀತಿಯಲ್ಲಿ ಯೋಜನಾ ಪ್ರದೇಶಕ್ಕೆ ಸಮೀಕ್ಷೆಗೆಂದು ಬರುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದು ಒಳ್ಳೆ ಬೆಳವಣಿಗೆಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಗುಡುಗಿದರು.
04:52 PM (IST) Jun 02
ಬೆಂಗಳೂರಿನ ಅಪ್ಪ-ಮಗಳ ಬಾಂಧವ್ಯದ ಒಂದು ಮುದ್ದಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕೋಟ್ಯಂತರ ಜನರ ಮನಗೆದ್ದಿದೆ. ಈ ವಿಡಿಯೋ ನೋಡಿದ ಪ್ರತಿಯೊಬ್ಬರ ಮುಖದಲ್ಲೂ ನಗು ಮೂಡಿದೆ.
04:50 PM (IST) Jun 02
04:26 PM (IST) Jun 02
04:04 PM (IST) Jun 02
ಖ್ಯಾತ ನಿರೂಪಕಿ ಜಾಹ್ನವಿ ಅವರು ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಒಂದು ಮಣ್ಣಿನ ಪಕ್ಷವಾಗಿದ್ದು, ದೇವೇಗೌಡರ ಸಾಧನೆ ಮತ್ತು ಕುಮಾರಸ್ವಾಮಿಯವರ ರೈತ ಹಾಗೂ ಮಹಿಳಾ ಪರ ಕಾಳಜಿಯಿಂದ ಪ್ರೇರಿತರಾಗಿ ಈ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾಗಿ ಹೇಳಿದ್ದಾರೆ.
03:53 PM (IST) Jun 02
ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಭಾರತೀಯ ರೈಲ್ವೆಯು ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಘೋಷಿಸಿದೆ. ಜೂನ್ ತಿಂಗಳಿನಲ್ಲಿ ನಾಲ್ಕು ಸುತ್ತಿನ ಸಂಚಾರ ನಡೆಸಲಿರುವ ಈ ರೈಲು, ತೆಲಂಗಾಣ, ಕರ್ನಾಟಕ, ಮತ್ತು ಕೇರಳದ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
02:38 PM (IST) Jun 02
ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭ ಜೂ.3 ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಭಾಗದ ಸರ್ಕಾರಿ ನೌಕರರಿಗೆ ಮಧ್ಯಾಹ್ನದ ನಂತರ ರಜೆ ಘೋಷಿಸಲಾಗಿದೆ. ಇದೇ ವೇಳೆ, ವಿಧಾನಸಭೆ ಸಚಿವಾಲಯದ ನೌಕರರಿಗಾಗಿ ಸಭಾಧ್ಯಕ್ಷರು ವಿಶೇಷ ಭೋಜನ ಆಯೋಜಿಸಿದ್ದಾರೆ.
02:35 PM (IST) Jun 02
01:20 PM (IST) Jun 02
ನೈಋತ್ಯ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ, ಚಂಡಮಾರುತದ ಸುಳಿ ಹಾಗೂ ಟ್ರಫ್ ಪ್ರಭಾವದಿಂದಾಗಿ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
01:17 PM (IST) Jun 02
ಬೆಂಗಳೂರಿನ ಅನಿರುದ್ಧ್ ರಾಪೋಲ್, 10ವರ್ಷಗಳಲ್ಲಿ ತಮ್ಮ ಸಿಎ ವೃತ್ತಿಜೀವನದಲ್ಲಿ ಅದ್ಭುತ ಯಶಸ್ಸು ಕಂಡಿದ್ದಾರೆ. ಕೆಪಿಎಂಜಿ ಸಂಸ್ಥೆಯಲ್ಲಿ 1.92ಲಕ್ಷ ರೂ. ಸ್ಟೈಫಂಡ್ನಿಂದ ಆರಂಭಿಸಿ, ಸ್ವೀಡನ್ನಲ್ಲಿ 57.8ಲಕ್ಷ ರೂ. ವಾರ್ಷಿಕ ವೇತನದವರೆಗೆ ಬೆಳೆದ ತಮ್ಮ ಸ್ಪೂರ್ತಿದಾಯಕ ಪಯಣವನ್ನು ಅವರು ಹಂಚಿಕೊಂಡಿದ್ದಾರೆ.
01:05 PM (IST) Jun 02
Nan Magle Superstar Movie Ritu Singh: ಹನಿ ಫಿಲಂಸ್ ಲಾಂಛನದಲ್ಲಿ ಎನ್ ಎ ಶಿವಕುಮಾರ್(ಕುಮಾರ್ ನೊಣವಿನಕೆರೆ) ನಿರ್ಮಿಸಿರುವ, ಆಯುರ್ ನಿರ್ದೇಶಿಸಿರುವ ಸಿನಿಮಾವೇ ‘ನನ್ ಮಗಳೇ ಸೂಪರ್ಸ್ಟಾರ್’. ಈ ಸಿನಿಮಾದಲ್ಲಿ ‘ಸೀತಾರಾಮ’ ಧಾರಾವಾಹಿ ಸಿಹಿ ಪಾತ್ರಧಾರಿ ನಟಿಸುತ್ತಿದ್ದಾರೆ.
01:00 PM (IST) Jun 02
12:55 PM (IST) Jun 02
ನವರಸ ನಾಯಕ ಜಗ್ಗೇಶ್ ತಮ್ಮ ಮೊಮ್ಮಗ ಅರ್ಜುನ್ನ 11ನೇ ಹುಟ್ಟುಹಬ್ಬಕ್ಕೆ ಲ್ಯಾಪ್ಟಾಪ್ ಉಡುಗೊರೆಯಾಗಿ ನೀಡಿದ್ದಾರೆ. ಮೊಮ್ಮಗನ ಸಂತೋಷವನ್ನು ಕಂಡು, ತಮ್ಮ ಬಾಲ್ಯದಲ್ಲಿ ತಾತ ನೀಡುತ್ತಿದ್ದ 5 ಪೈಸೆಯನ್ನು ನೆನೆದು ಜಗ್ಗೇಶ್ ಭಾವುಕರಾಗಿದ್ದಾರೆ.
12:42 PM (IST) Jun 02
ಸಂಪುಟ ರಚನೆ ಹೊತ್ತಲ್ಲಿ ಜಮೀರ್ ಅವರ ವಿರುದ್ಧದ ವೈರಲ್ ಆಡಿಯೋ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ ಈ ನಡುವೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಜಮೀರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ದಿಢೀರ್ ಭೇಟಿ ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.
12:24 PM (IST) Jun 02
ಅ*ತ್ಯಾಚಾರ ಆರೋಪ ಎದುರಿಸುತ್ತಿರುವ ಇಂಜಿನಿಯರಿಂಗ್ ವಿದ್ಯಾರ್ಥಿಯ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ವಿಚಾರಣೆ ವೇಳೆ, ನ್ಯಾಯಮೂರ್ತಿಗಳು ದೇಶದ ಕಾನೂನು ವ್ಯವಸ್ಥೆಯು ದುರ್ಬಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
12:15 PM (IST) Jun 02
Karna Kannada Serial: ಕರ್ಣ ಧಾರಾವಾಹಿ ಆರಂಭದಲ್ಲಿ ನಟ ಅಶೋಕ್ ಅವರು ಅಭಿನಯಿಸಿದ್ದರು. ಇಲ್ಲಿ ಅವರಿಗೆ ಕೆಲವೇ ದಿನಗಳ ಕಾಲ ಪಾತ್ರ ಇತ್ತು. ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಅಶೋಕ್ ಅವರೀಗ ಅಷ್ಟಾಗಿ ಸೀರಿಯಲ್ನಲ್ಲಿ ನಟಿಸೋದಿಲ್ಲ, ಇದಕ್ಕೆ ಕಾರಣ ಏನು ಎಂದು ಹೇಳಿದ್ದಾರೆ.
11:13 AM (IST) Jun 02
ರಾಜ್ಯಪಾಲರ ಮಾರ್ಗದಲ್ಲಿ ವಾಹನ ತಡೆದಿದ್ದಕ್ಕೆ ರಸ್ತೆ ಮಧ್ಯೆ ಕುಳಿತು ಪ್ರತಿಭಟಿಸಿದ್ದ ವ್ಯಕ್ತಿಯ ವಿಡಿಯೋ ವೈರಲ್ ಆಗಿತ್ತು. ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಎಂದು ಹೇಳಲಾಗಿತ್ತು. ಆದರೆ, ಪೊಲೀಸ್ ತನಿಖೆಯಿಂದ ಕಾರಿನಲ್ಲಿ ಪತ್ನಿ ಇರಲಿಲ್ಲ ಎಂಬ ಸತ್ಯಾಂಶ ಬಯಲಾಗಿದೆ.
10:42 AM (IST) Jun 02
ಬೆಂಗಳೂರಿನಲ್ಲಿ, "ಲವ್ ಮಾಕ್ಟೇಲ್" ಸಿನಿಮಾದಂತೆ ತನ್ನ ಪತ್ನಿ ಕ್ಯಾನ್ಸರ್ನಿಂದ ನಿಧನಳಾಗಿದ್ದಾಳೆ ಎಂದು ಸುಳ್ಳು ಹೇಳಿ ಪವನ್ ಎಂಬಾತ ನರ್ಸ್ ಒಬ್ಬರನ್ನು ಮದುವೆಯಾಗಿದ್ದಾನೆ. ಮದುವೆಯಾದ ಎಂಟು ತಿಂಗಳ ನಂತರ, ಅಪರಿಚಿತ ಮಹಿಳೆಯ ಕರೆಯಿಂದ ಪವನ್ನ ಮೊದಲ ಪತ್ನಿ ಜೀವಂತವಿರುವ ಸತ್ಯ ಬಯಲಾಗಿದೆ.
10:26 AM (IST) Jun 02
ರಾಜ್ಯ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಅವಕಾಶ ನೀಡಿದ್ದನ್ನು ವಿರೋಧಿಸಿ, ಶ್ರೀರಾಮಸೇನಾ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ಹಂಚಿ ಪ್ರತಿಭಟಿಸಿತು. ಸರ್ಕಾರ ಈ ನಿರ್ಧಾರ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.
10:10 AM (IST) Jun 02
ಸೀತಾರಾಮ ಧಾರಾವಾಹಿಯಲ್ಲಿ ಅಶೋಕ್ ತಂಗಿ ಪಾತ್ರಧಾರಿ ನಟಿ ಅನುಷಾ ಪರಮೇಶ್ವರಪ್ಪ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಕೂಡ ಹಂಚಿಕೊಂಡಿದ್ದಾರೆ.
08:41 AM (IST) Jun 02
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಗೃಹಲಕ್ಷ್ಮಿ ಲೋನ್ ಯೋಜನೆ ಅಡಿಯಲ್ಲಿ 3 ಲಕ್ಷದವರೆಗೆ ಸಾಲ ಸಿಗುತ್ತದೆ ಎಂಬುದು ಸುಳ್ಳು ಸುದ್ದಿ. ಸರ್ಕಾರದಿಂದ ಇಂತಹ ಯಾವುದೇ ಅಧಿಕೃತ ಯೋಜನೆ ಪ್ರಕಟವಾಗಿಲ್ಲ.
08:32 AM (IST) Jun 02
08:27 AM (IST) Jun 02
2018ರಲ್ಲಿ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ಹಾರಿಸಿ ದೋಷಕ್ಕೆ ಒಳಗಾಗಿದ್ದ ಡಿ.ಕೆ. ಶಿವಕುಮಾರ್, ಬಳಿಕ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿದ್ದರು. ಈಗ ಮುಖ್ಯಮಂತ್ರಿಯಾಗುತ್ತಿರುವ ಹಿನ್ನೆಲೆ ಈ ಘಟನೆ ಮತ್ತೆ ಮುನ್ನೆಲೆಗೆ ಬಂದಿದೆ.
08:25 AM (IST) Jun 02
08:13 AM (IST) Jun 02
ಗದಗ ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಅನಾರೋಗ್ಯದಿಂದ ಬಳಲುತ್ತಿದ್ದ ಅಕ್ಕನಿಗೆ ಚಿಕಿತ್ಸೆ ಕೊಡಿಸಿ ಮರಳುತ್ತಿದ್ದ ತಮ್ಮ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಈ ಸುದ್ದಿ ಕೇಳಿದ ಆಘಾತಕ್ಕೆ ಅಕ್ಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
07:55 AM (IST) Jun 02
07:40 AM (IST) Jun 02
07:30 AM (IST) Jun 02