ಕಲಬುರಗಿ: ಉಚಿತ ವಿದ್ಯುತ್ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಗೆ ನಿಗದಿಪಡಿಸಿದ್ದ ಗಡುವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಿಂದ ಅನರ್ಹ ಫಲಾನುಭವಿಗಳನ್ನು ಹೊರಗಿಡುವ ಉದ್ದೇಶದಿಂದ ಜುಲೈ 1ರಿಂದ ಮನೆ-ಮನೆ ಸಮೀಕ್ಷೆ ಆರಂಭಿಸಲಾಗಿತ್ತು.
ಈ ಪ್ರಕ್ರಿಯೆ ಆಗಸ್ಟ್ 31ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ, ಫಲಾನುಭವಿಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮರುಪರಿಶೀಲನೆಗೆ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ಮನೆಗೆ ಸಮೀಕ್ಷಾ ಸಿಬ್ಬಂದಿ ಭೇಟಿ ನೀಡಿದ ಸಂದರ್ಭದಲ್ಲಿ ಮಾಲೀಕರು ಲಭ್ಯವಿಲ್ಲದಿರುವುದು, ಅಪಾರ್ಟ್ಮೆಂಟ್ಗಳಲ್ಲಿ ಸಮೀಕ್ಷಾ ಸಿಬ್ಬಂದಿಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳು ದೊರೆಯದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಮರುಪರಿಶೀಲನೆ ಪ್ರಕ್ರಿಯೆ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಗಡುವಿನೊಳಗೆ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡುವಂತೆ ಜೆಸ್ಕಾಂ ಮನವಿ ಮಾಡಿದೆ.
06:13 AM (IST) Sep 02
05:34 AM (IST) Sep 02
05:28 AM (IST) Sep 02