LIVE NOW
Published : Sep 02, 2026, 05:05 AM ISTUpdated : Sep 02, 2026, 06:13 AM IST

Karnataka News Live: ಪಟ್ಟಂದೂರಿನ ವಿವಾದಿತ ಜಾಗ - ನಿರ್ಮಾಣ ಚಟುವಟಿಕೆ ನಡೆಸದಂತೆ ಹೈಕೋರ್ಟ್‌ ಮಧ್ಯಂತರ ತಡೆ

ಸಾರಾಂಶ

ಕಲಬುರಗಿ: ಉಚಿತ ವಿದ್ಯುತ್ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಗೆ ನಿಗದಿಪಡಿಸಿದ್ದ ಗಡುವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಿಂದ ಅನರ್ಹ ಫಲಾನುಭವಿಗಳನ್ನು ಹೊರಗಿಡುವ ಉದ್ದೇಶದಿಂದ ಜುಲೈ 1ರಿಂದ ಮನೆ-ಮನೆ ಸಮೀಕ್ಷೆ ಆರಂಭಿಸಲಾಗಿತ್ತು. 

ಈ ಪ್ರಕ್ರಿಯೆ ಆಗಸ್ಟ್ 31ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ, ಫಲಾನುಭವಿಗಳಿಂದ ನಿರೀಕ್ಷಿತ ಪ್ರಮಾಣದಲ್ಲಿ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಮರುಪರಿಶೀಲನೆಗೆ ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ಮನೆಗೆ ಸಮೀಕ್ಷಾ ಸಿಬ್ಬಂದಿ ಭೇಟಿ ನೀಡಿದ ಸಂದರ್ಭದಲ್ಲಿ ಮಾಲೀಕರು ಲಭ್ಯವಿಲ್ಲದಿರುವುದು, ಅಪಾರ್ಟ್‌ಮೆಂಟ್‌ಗಳಲ್ಲಿ ಸಮೀಕ್ಷಾ ಸಿಬ್ಬಂದಿಗೆ ಅಗತ್ಯ ಮಾಹಿತಿ ಹಾಗೂ ದಾಖಲೆಗಳು ದೊರೆಯದಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಮರುಪರಿಶೀಲನೆ ಪ್ರಕ್ರಿಯೆ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಗಡುವಿನೊಳಗೆ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡುವಂತೆ ಜೆಸ್ಕಾಂ ಮನವಿ ಮಾಡಿದೆ.

06:13 AM (IST) Sep 02

ಪಟ್ಟಂದೂರಿನ ವಿವಾದಿತ ಜಾಗ - ನಿರ್ಮಾಣ ಚಟುವಟಿಕೆ ನಡೆಸದಂತೆ ಹೈಕೋರ್ಟ್‌ ಮಧ್ಯಂತರ ತಡೆ

ಕೆ.ಆರ್.ಪುರಂ ಹೋಬಳಿಯ ಪಟ್ಟಂದೂರು ಅಗ್ರಹಾರದ ವಿವಾದಿತ ಜಾಗದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆ ನಡೆಸದಂತೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. 'ನಮ್ಮ ವೈಟ್‌ಫೀಲ್ಡ್‌ ಆರ್‌ಡಬ್ಲ್ಯುಎ ಫೆಡರೇಷನ್‌ ಟ್ರಸ್ಟ್‌' ಸಲ್ಲಿಸಿದ್ದ ಅರ್ಜಿ ಆಧರಿಸಿ, ಜಿಬಿಎ ಮುಖ್ಯ ಆಯುಕ್ತರಿಗೆ ಯಾವುದೇ ನಿರ್ಮಾಣ ನಡೆಯದಂತೆ ನೋಡಿಕೊಳ್ಳಲು ನ್ಯಾಯಪೀಠ ನಿರ್ದೇಶಿಸಿದೆ.
Read Full Story

05:34 AM (IST) Sep 02

10 ದಿನದ ಬಳ್ಳಾರಿ ಪಾದಯಾತ್ರೆಗೆ ಲಿಂಗಸುಗೂರಲ್ಲಿ ಚಾಲನೆ, ಸರ್ಕಾರ ವಿರುದ್ಧ BJP ಕಹಳೆ

ವಾಲ್ಮೀಕಿ ನಿಗಮದ ಹಗರಣವನ್ನು ವಿರೋಧಿಸಿ, ರಾಜ್ಯ ಬಿಜೆಪಿ ಲಿಂಗಸುಗೂರಿನಿಂದ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ನೀಡಿದೆ. ಸಚಿವ ನಾಗೇಂದ್ರ ರಾಜೀನಾಮೆ ನೀಡಿದರೂ, ದುರ್ಬಳಕೆಯಾದ 187 ಕೋಟಿ ರೂ. ವಾಪಸ್ ನೀಡುವವರೆಗೂ ಹೋರಾಟ ನಿಲ್ಲದು ಎಂದು ಬಿಜೆಪಿ ನಾಯಕರು ಘೋಷಿಸಿದ್ದಾರೆ.
Read Full Story

05:28 AM (IST) Sep 02

ಚಟಕ್ಕೆ ಬಿದ್ದು ತಾವೇ ಹುಕ್ಕಾಬಾರ್‌ ತೆಗೆದ್ದಿದ್ದ ಟೆಕ್ಕಿ ಸೇರಿದಂತೆ ಇಬ್ಬರ ಸೆರೆ

ನಗರದ ಹೊರವಲಯದ ಕೆಂಚನಪುರದಲ್ಲಿ ಅಕ್ರಮವಾಗಿ ಹುಕ್ಕಾಬಾರ್ ನಡೆಸುತ್ತಿದ್ದ ಸಿವಿಲ್ ಎಂಜಿನಿಯರ್ ಸೇರಿ ಇಬ್ಬರನ್ನು ಕುಂಬಳಗೋಡು ಪೊಲೀಸರು ಬಂಧಿಸಿದ್ದಾರೆ. ಹುಕ್ಕಾಬಾರ್‌ಗಳು ದುಬಾರಿಯಾದ ಕಾರಣ, ಹಣ ಉಳಿಸಲು ಆರೋಪಿಗಳು ಬಾಡಿಗೆ ಮನೆಯಲ್ಲಿ ಈ ದಂಧೆ ಆರಂಭಿಸಿದ್ದರು.
Read Full Story

More Trending News