ವಿಜಯನಗರ: ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಡಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಕಿತ್ನೂರು ಗ್ರಾಮದ ಒಂದೇ ಕುಟುಂಬದ ಮೂವರಾದ ನಾಗಪ್ಪ (56), ಪುತ್ರ ಕೊಟ್ರೇಶ್ (22), ಪುತ್ರಿ ಸುಜಾತಾ (35), ತಿಮ್ಮಲಾಪುರ ಗ್ರಾಮದ ದುರುಗಪ್ಪ (55) ಮೃತರು.
ಕಿತ್ನೂರು ಗ್ರಾಮದ ನಾಲ್ವರು 2 ಬೈಕ್ನಲ್ಲಿ ಕೊಟ್ರೇಶ್ಗೆ ಕನ್ಯೆ ನೋಡಲು ಹೊರಟಿದ್ದಾಗ ಡಣಾಪುರ ಸೇತುವೆ ಬಳಿ ಲಾರಿ 2 ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದರಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಈ ಮೊದಲೇ 2 ಬೈಕ್ಗೆ ಲಾರಿ ಡಿಕ್ಕಿ ಹೊಡೆದಿದ್ದು, ಒಬ್ಬ ಬೈಕ್ ಸವಾರ ಮೃತಪಟ್ಟಿದ್ದಾನೆ. ನಂತರ ಕಾರು ಹಾಗೂ ಸೇತುವೆ ಮೇಲೆ ಬಸ್ ಹಿಂಭಾಗಕ್ಕೆ ಗುದ್ದಿದೆ. ಡಿಕ್ಕಿಯ ತೀವ್ರತೆಗೆ ಲಾರಿ ಪಲ್ಟಿಯಾಗಿ ಸೇತುವೆ ಕೆಳಗೆ ಬಿದ್ದಿದೆ.
09:52 PM (IST) Apr 20
‘ಮಹಿಳಾ ಮೀಸಲಾತಿ ವಿಧೇಯಕ 2023ರಲ್ಲೇ ಅಂಗೀಕಾರವಾಗಿದ್ದರೂ ಜಾರಿ ಮಾಡದೆ ಕತ್ತೆ ಕಾಯತ್ತಿದ್ದರೇ ಅಥವಾ ಮಂಡಕ್ಕಿ ತಿನ್ನುತ್ತಿದ್ದರೇ? ಕೂಡಲೇ ಮಹಿಳಾ ಮೀಸಲಾತಿ ಜಾರಿ ಮಾಡಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
09:35 PM (IST) Apr 20
ಬೆಂಗಳೂರಿನ ಬಿಸಿಲ ಬೇಗೆಗೆ ಹೋಟೆಲ್ ಸೇರಿದ ಯುವತಿ, ಮಾಡರ್ನ್ ಪ್ರಾಬ್ಲಂಗೆ ಮಾಡರ್ನ್ ಸೊಲ್ಯೂಷನ್ , ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು ಸುಸ್ತಾಗುವ ಈ ವಾತಾವರಣಕ್ಕೆ ಯುವತಿ ಹೊಸ ಪ್ಲಾನ್ ಮಾಡಿದ್ದಾಳೆ.
09:27 PM (IST) Apr 20
ಇಷ್ಟೊಂದು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರೂ ಸಹ ತೃಪ್ತಿ ಇಲ್ಲವೆಂದರೆ ಆಕಾಶವನ್ನು ಭೂಮಿಗಿಳಿಸಲು ನನ್ನಿಂದ ಸಾಧ್ಯವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.
08:54 PM (IST) Apr 20
08:31 PM (IST) Apr 20
07:31 PM (IST) Apr 20
Kiran Raj Movies: ಪ್ರಸಿದ್ಧ್ ನಿರ್ದೇಶನದಲ್ಲಿ ಕಿರಣ್ ರಾಜ್ ನಟಿಸಿರುವ ಚಿತ್ರ "ಶೇರ್". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಗ್ರೇಸ್ ರಾಜ್ ಪ್ರೊಡಕ್ಷನ್ ಲಾಂಛನದಲ್ಲಿ ಡಾ.ಸುದರ್ಶನ್ ಸುಂದರರಾಜ್ ನಿರ್ಮಿಸಿರುವ ಸಿನಿಮಾ ಇದಾಗಿದೆ. ಎಚ್.ಕುಮಾರ್ (ರಾಟೆ) ಕಾರ್ಯಕಾರಿ ನಿರ್ಮಾಪಕರು.
07:31 PM (IST) Apr 20
ಬೇಸಿಗೆಯಲ್ಲಿ ದೇಹದ ಉಷ್ಣಾಂಶ ಹೆಚ್ಚಿಸುವ ಆಹಾರಗಳಿಂದ ದೂರವಿರುವುದು ಬಹಳ ಮುಖ್ಯ. ಮಸಾಲೆಯುಕ್ತ, ಕರಿದ ಪದಾರ್ಥ, ಕೆಫೀನ್ ಮತ್ತು ಜಂಕ್ ಫುಡ್ಗಳಿಂದ ಯಾಕೆ ದೂರವಿರಬೇಕು? ಇವುಗಳಿಂದ ದೂರವಿದ್ದರೆ ನಿರ್ಜಲೀಕರಣ ಮತ್ತು ಅಸಿಡಿಟಿಯಿಂದ ಹೇಗೆ ಪಾರಾಗಬಹುದು? ಇಲ್ಲಿದೆ ಮಾಹಿತಿ.
07:16 PM (IST) Apr 20
ಹಲಸಿನಕಾಯಿ ಉಪ್ಪಿನಕಾಯಿ ಒಂದು ಸಾಂಪ್ರದಾಯಿಕ ಮತ್ತು ರುಚಿಕರವಾದ ರೆಸಿಪಿ. ಇದನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಸಾಸಿವೆ ಎಣ್ಣೆ ಮತ್ತು ದೇಸಿ ಮಸಾಲೆಗಳನ್ನು ಬಳಸಿ ಮಾಡುವ ಈ ಉಪ್ಪಿನಕಾಯಿ, ಊಟದ ರುಚಿಯನ್ನು ಹೆಚ್ಚಿಸುವುದಲ್ಲದೆ, ಹೆಚ್ಚು ದಿನಗಳ ಕಾಲ ಸಂಗ್ರಹಿಸಿಡಬಹುದು.
07:09 PM (IST) Apr 20
elra kaleleyutte kala movie: ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ನಿರ್ಮಿಸಿರುವ,ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಸಿನಿಮಾ "ಎಲ್ರ ಕಾಲೆಳಿಯತ್ತೆ ಕಾಲ". ಇತ್ತೀಚೆಗೆ ನಡೆದ ಪ್ರೀ ರಿಲೀಸ್ ಇವೆಂಟ್ನಲ್ಲಿ ಸಿನಿಮಾ ಬಗ್ಗೆ ಮಾಹಿತಿ ನೀಡಲಾಯ್ತು.
07:03 PM (IST) Apr 20
06:53 PM (IST) Apr 20
ಏಪ್ರಿಲ್ 20 ರಿಂದ 27ರ ನಡುವೆ ಒಟಿಟಿಯಲ್ಲಿ ಭರ್ಜರಿ ಸಿನಿಮಾ ಮತ್ತು ವೆಬ್ ಸೀರೀಸ್ಗಳು ಬಿಡುಗಡೆಯಾಗುತ್ತಿವೆ. ಮನೆಯಲ್ಲೇ ಕೂತು ಆ್ಯಕ್ಷನ್, ಕಾಮಿಡಿ ಮತ್ತು ಥ್ರಿಲ್ಲರ್ ಸಿನಿಮಾಗಳನ್ನು ಎಂಜಾಯ್ ಮಾಡಬಹುದು. ಯಾವೆಲ್ಲಾ ಸಿನಿಮಾ, ಸೀರೀಸ್ಗಳು ಯಾವ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಸ್ಟ್ರೀಮ್ ಆಗಲಿವೆ?
06:37 PM (IST) Apr 20
ರಿಷಬ್ ಶೆಟ್ಟಿಯಂತಹ ಸ್ಟಾರ್ ನಟರು ಇಂತಹ ಭಾವನಾತ್ಮಕ ಸಿನಿಮಾಗಳನ್ನು ಗುರುತಿಸಿ ಬೆಂಬಲ ನೀಡುತ್ತಿರುವುದು ಸಿನಿರಂಗಕ್ಕೆ ಹೊಸ ಶಕ್ತಿ ತಂದಂತಾಗಿದೆ. ನೀವು ಈ ವಾರಾಂತ್ಯದಲ್ಲಿ ಯಾವುದಾದರೂ ಒಳ್ಳೆಯ ಫೀಲ್ ಗುಡ್ ಸಿನಿಮಾ ನೋಡಬೇಕೆಂದು ಅಂದುಕೊಂಡಿದ್ದರೆ, ರಿಷಬ್ ಶೆಟ್ಟಿ ಶಿಫಾರಸು ಮಾಡಿರುವ ಈ 'ಯೂತ್' ಸಿನಿಮಾ ನೋಡಬಹುದು.
06:04 PM (IST) Apr 20
Actress Sridevi Death: ಭಾರತೀಯ ಚಿತ್ರರಂಗದ ಅಪ್ರತಿಮ ನಟಿ, 'ಅತಿಲೋಕ ಸುಂದರಿ' ಶ್ರೀದೇವಿ ಸಾವು ಹೇಗೆ ಆಯ್ತು ಎಂದು ಇನ್ನೂ ಅನೇಕರಿಗೆ ಡೌಟ್ ಇದೆ. Paranormal Investigation ಆಗಿರುವ Saurabh Poonia ಅವರು ಈ ಬಗ್ಗೆ ಶಲೀನ್ ಶ್ರೋತ್ರಿಯಾ ಜೊತೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.
05:44 PM (IST) Apr 20
05:38 PM (IST) Apr 20
ಕಡೂರು ಕ್ಷೇತ್ರದಲ್ಲಿ ಜೆಡಿಎಸ್ ಎಲ್ಲಿದೆ ಎಂದು ಟೀಕಿಸುವವರಿಗೆ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಜನರೇ ಸಾಕ್ಷಿಯಾಗಿದ್ದಾರೆಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
05:23 PM (IST) Apr 20
ಎಸ್ಸಿ, ಎಸ್ಟಿ, ಒಬಿಸಿ ಮೀಸಲಾತಿ ಹೆಚ್ಚಿಸುವ ಸಂಬಂಧ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ಸರ್ವ ಪಕ್ಷಗಳ ನಿಯೋಗದೊಂದಿಗೆ ಪ್ರಧಾನಮಂತ್ರಿ ಭೇಟಿ ಮಾಡಿ ಒಂಬತ್ತನೇ ಶೆಡ್ಯೂಲ್ಗೆ ಸೇರಿಸಲು ಪ್ರಯತ್ನಿಸಬೇಕು ಎಂದು ವಿ.ಎಸ್.ಉಗ್ರಪ್ಪ ಎಚ್ಚರಿಸಿದರು.
05:11 PM (IST) Apr 20
ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಅದಕ್ಕೆ ಸೇರಿಸಿ ಮಂಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
05:10 PM (IST) Apr 20
04:08 PM (IST) Apr 20
ಬೆಂಗಳೂರಿನಲ್ಲಿ ನಡೆದ ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ED 17ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ಶಾಸಕ ನಲಪಾಡ್ ಹ್ಯಾರಿಸ್, ಮಾಜಿ ಸಚಿವ ಕೆ. ರೆಹಮಾನ್ ಖಾನ್ ಅವರ ಸಂಬಂಧಿಕರು ಹಾಗೂ ಹಲವು ಕ್ರಿಪ್ಟೋ ಕಂಪನಿಗಳ ಮೇಲೆ ಶೋಧ ನಡೆಸಲಾಗಿದ್ದು, ಹಣಕಾಸು ವ್ಯವಹಾರಗಳನ್ನು ಪರಿಶೀಲಿಸಲಾಗುತ್ತಿದೆ. 2020ರ ವಂಚನೆ ಪ್ರಕರಣದಿಂದ ಆರಂಭವಾದ ಈ ತನಿಖೆಯು ಇದೀಗ ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ತೀವ್ರಗೊಂಡಿದೆ.
03:43 PM (IST) Apr 20
Gicchi Gili Gili Prashanth Gowda Wedding: ಕ್ವಾಟ್ಲೆ ಕಿಚನ್, ಗಿಚ್ಚಿ ಗಿಲಿಗಿಲಿ ಶೋ ಖ್ಯಾತಿಯ ನಟ ಟಾಲೆಂಟೆಡ್ ಕಲಾವಿದ ಅವರು ಎಂಗೇಜ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
03:22 PM (IST) Apr 20
ಆರ್ಸಿಬಿ ಮೇಲಿನ ಪ್ರೀತಿಗೆ ತನ್ನ ಕಾರನ್ನೇ ಮಾಡಿಫಿಕೇಶನ್ ಮಾಡಿದ ಕ್ರೇಝಿ ಫ್ಯಾನ್, ವಿಡಿಯೋ, ಸ್ಕೋಡಾ ಕಾರನ್ನು ಸಂಪೂರ್ಣವಾಗಿ ಆರ್ಸಿಬಿ ಮಯ ಮಾಡಿದ್ದಾರೆ. ಈ ಕಾರು ಕನ್ನಡ ಬೆಂಗಾಲಿ ದಂಪತಿಗಳ ಕಣ್ಣಿಗೆ ಬಿದ್ದು ಇದೀಗ ಭಾರಿ ವೈರಲ್ ಆಗಿದೆ.
03:18 PM (IST) Apr 20
ಜಮ್ಮು ಕಾಶ್ಮೀರದ ಉದ್ದಂಪುರದಲ್ಲಿ ಸರ್ಕಾರಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಬಸ್ನಲ್ಲಿದ್ದ 21 ಜನ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 29 ಜನ ಗಾಯಗೊಂಡಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ.
03:14 PM (IST) Apr 20
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋತರೂ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಕಣ್ಣೀರು ಎಲ್ಲರ ಗಮನ ಸೆಳೆದಿದೆ. ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೂ ತಂಡ ಸೋತ ನೋವಿನಲ್ಲಿ ಮೈದಾನದಲ್ಲೇ ಅತ್ತ ವೈಭವ್ ಅವರ ಕ್ರೀಡಾಸ್ಪೂರ್ತಿ ಮೆಚ್ಚುಗೆಗೆ ಪಾತ್ರವಾಗಿದೆ.
02:51 PM (IST) Apr 20
Actress Priyanka Chopra: ಬಾಲಿವುಡ್ ತೊರೆದು ಹಾಲಿವುಡ್ ಸೇರಿದ ನಟಿಯೊಬ್ಬರು ಸದ್ಯ 700 ಕೋಟಿ ಆಸ್ತಿ, 20 ಕೋಟಿಗೂ ಅಧಿಕ ಮೌಲ್ಯದ ಚಿನ್ನದ ಒಡತಿಯಾಗಿದ್ದಾರೆ. ಹಾಲಿವುಡ್ ಪತಿಯೊಂದಿಗೆ ಐಷಾರಾಮಿ ಜೀವನ ನಡೆಸುತ್ತಿರುವ ಈ ನಟಿ ಬೇರಾರೂ ಅಲ್ಲ, ನಮ್ಮದೇ ಪ್ರಿಯಾಂಕಾ ಚೋಪ್ರಾ.
02:48 PM (IST) Apr 20
ಪ್ರಮುಖ ಡೆಲಿವರಿ ಪ್ಲಾಟ್ಫಾರ್ಮ್ ಸ್ವಿಗ್ಗಿ, ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ತನ್ನ ಹೊಸ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ತೆರೆದಿದೆ. 'ದಿ ಎವೆರಿಡೇ ಎನೇಬಲರ್' ಪರಿಕಲ್ಪನೆಯಡಿ ನಿರ್ಮಿಸಲಾದಪರಿಸರ ಸ್ನೇಹಿ ಕ್ಯಾಂಪಸ್, ಶೇ. 85ರಷ್ಟು ಹಳೆಯ ವಸ್ತುಗಳ ಮರುಬಳಕೆ, ವಿದ್ಯುತ್ ಉಳಿತಾಯವನ್ನು ಹೊಂದಿದೆ.
02:46 PM (IST) Apr 20
ಪ್ರಧಾನಿ ಮೋದಿ ಕಳೆದ ಬುಧವಾರ ರಾಜ್ಯಕ್ಕೆ ಆಗಮಿಸಿದ್ದರು. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಏನೋ ಗುಟ್ಟು ಹೇಳುತ್ತಿರುವಂತಹ ಫೋಟೋಗಳು ವೀಡಿಯೋಗಳು ಭಾರಿ ವೈರಲ್ ಆಗಿದ್ದವು. ಆದರೆ ಈಗ ಪಿಎಂ ತಮ್ಮ ಕಿವಿಯಲ್ಲಿ ಹೇಳಿದ್ದೇನು ಎಂಬುದನ್ನು ಸಿಎಂ ರಿವೀಲ್ ಮಾಡಿದ್ದಾರೆ.
02:18 PM (IST) Apr 20
ಬೆಂಗಳೂರು ಜಲಮಂಡಳಿಯು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಂದ ಉತ್ಪತ್ತಿಯಾಗುವ ಜೈವಿಕ ಅನಿಲವನ್ನು ಕಂಪ್ರೆಸ್ಡ್ ಬಯೋ-ಗ್ಯಾಸ್ ಆಗಿ ಪರಿವರ್ತಿಸುವ ಮಹತ್ವಾಕಾಂಕ್ಷಿ ಯೋಜನೆ ಆರಂಭಿಸಿದೆ. ಖಾಸಗಿ ಸಹಭಾಗಿತ್ವದ ಯೋಜನೆಯು, ಯಾವುದೇ ಹೂಡಿಕೆಯಿಲ್ಲದೆ ಮುಂದಿನ 20 ವರ್ಷಗಳಲ್ಲಿ ₹120 ಕೋಟಿಗೂ ಅಧಿಕ ಆದಾಯ ಗಳಿಸುವ ಗುರಿ ಹೊಂದಿದೆ. ಇದು ಸುಸ್ಥಿರ ನಗರ ನಿರ್ವಹಣೆ ಮತ್ತು ಸರ್ಕ್ಯುಲರ್ ಎಕಾನಮಿ ದಿಸೆಯಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.
02:09 PM (IST) Apr 20
How to prevent milk curdling: ಬೇಸಿಗೆಯಲ್ಲಿ ದಿನಕ್ಕೆ ಎರಡು ಬಾರಿ ಕಾಯಿಸಿದರೂ ಹಾಲು ಒಡೆದು ಹೋಗುತ್ತಿದೆಯೇ? ಹಾಗಿದ್ರೆ ಚಿಂತೆ ಬೇಡ. ಫ್ರಿಡ್ಜ್ ಇಲ್ಲದೆಯೂ ಹಾಲನ್ನು ಕೆಡದಂತೆ ತಾಜಾವಾಗಿ ಇಡಲು ಕೆಲವು ಸುಲಭ ಟಿಪ್ಸ್ ಇಲ್ಲಿವೆ.
02:01 PM (IST) Apr 20
ಆರ್ಆರ್ವಿ ಕೇಟರ್ಸ್ನ ವಿನಯ್ ಶ್ರೀನಿವಾಸ್ ಅವರು ಮನೆಯಲ್ಲಿಯೇ ದಿಢೀರ್ ಇಡ್ಲಿ-ದೋಸೆ ಪುಡಿ ತಯಾರಿಸುವ ಸುಲಭ ವಿಧಾನವನ್ನು ಹಂಚಿಕೊಂಡಿದ್ದಾರೆ. ಅಕ್ಕಿ, ಉದ್ದಿನಬೇಳೆ ಮತ್ತು ಅವಲಕ್ಕಿ ಬಳಸಿ ತಯಾರಿಸಿದ ಈ ಪುಡಿಯನ್ನು ಫ್ರಿಜ್ ಇಲ್ಲದೆಯೇ ಆರೆಂಟು ತಿಂಗಳು ಸಂಗ್ರಹಿಸಿಡಬಹುದು.
01:25 PM (IST) Apr 20
ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ರಾಮೇಶ್ವರಂ ಕೆಫೆ, 90,000 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡ ವಿಶ್ವದ ಅತಿದೊಡ್ಡ ಕೆಫೆಯಾಗಿದೆ. ಇದು ಕೇವಲ ರೆಸ್ಟೋರೆಂಟ್ ಆಗಿರದೆ, ಆದಿಯೋಗಿ ಪ್ರತಿಮೆ, ದೇವಾಲಯ, ದೈವಿಕ ಹಾಗೂ ಸಾಂಸ್ಕೃತಿಕ ಅನುಭವ ಕೇಂದ್ರವಾಗಿದೆ.
01:24 PM (IST) Apr 20
12:59 PM (IST) Apr 20
Star Suvarna Serials: ಸಾಮಾನ್ಯವಾಗಿ ಎರಡು ಧಾರಾವಾಹಿಗಳು ಒಂದಾಗುವುದನ್ನು 'ಮಹಾಸಂಗಮ' ಎಂದು ಹೇಳಲಾಗುತ್ತದೆ. ಆದರೆ ಕಿರುತೆರೆಯಲ್ಲಿ ಮೂರೂ ಧಾರಾವಾಹಿಗಳನ್ನು ಸೇರಿಸಿ ತ್ರಿವೇಣಿ ಸಂಗಮ ಮಾಡುತ್ತಿರುವುದು ಇದೇ ಮೊದಲು. ಈ ಹೆಗ್ಗಳಿಕೆ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ.
12:43 PM (IST) Apr 20
12:41 PM (IST) Apr 20
12:39 PM (IST) Apr 20
12:35 PM (IST) Apr 20
ಕರ್ಣ ಸೀರಿಯಲ್ ಖ್ಯಾತಿಯ ನಟಿ ನಮ್ರತಾ ಗೌಡ, ತಮ್ಮನ್ನು 'ಅಟಿಟ್ಯೂಡ್' ಹುಡುಗಿ ಎಂದು ತಪ್ಪಾಗಿ ತಿಳಿಯುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಬಿಗ್ಬಾಸ್ ನಂತರ ಬದಲಾದ ತಮ್ಮ ಜೀವನ ಹಾಗೂ ಬಾಲ್ಯದ ಬಗ್ಗೆ ಮಾತನಾಡಿದ ಅವರು, ಕಾರ್ತಿಕ್ ಮಹೇಶ್ ಜೊತೆಗಿನ ಡೇಟಿಂಗ್ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.
11:49 AM (IST) Apr 20
11:14 AM (IST) Apr 20
ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಇನ್ಸ್ಪೆಕ್ಟರ್ ಶ್ರೀನಿವಾಸ್, ತಮ್ಮ ಮೇಲಾಧಿಕಾರಿಗಳಾದ ಎಸ್ಪಿ ಕರಿಬಸನಗೌಡ ಮತ್ತು ಡಿವೈಎಸ್ಪಿ ಮಹೇಶ್ವರಗೌಡ ವಿರುದ್ಧ ಜಾತಿ ನಿಂದನೆ ಮತ್ತು ಮಾನಸಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ.
11:13 AM (IST) Apr 20
10:38 AM (IST) Apr 20
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ, ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡಿ ಸಿ ಆರ್ ಇ ಎಸ್ಪಿ ಕಾಶಿನಾಥ್ ಅವರು ಡಿಜಿಪಿ ಸಲೀಂ ಅವರಿಗೆ ಪತ್ರ ಬರೆದಿದ್ದಾರೆ.