ಬೆಳಗಾವಿ: ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಯು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾ*ಚಾರ ಎಸಗಿದ ಆರೋಪ ಸಾಬೀತಾಗಿದೆ. ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದ್ದು, ಅಪರಾಧಿಗೆ ಶಿಕ್ಷೆಯನ್ನು ಶನಿವಾರ ನೀಡಲಿದೆ. ಹಠಯೋಗಿ ಲೋಕೇಶ್ವರ ಸ್ವಾಮೀಜಿ ಉರೂಫ್ ಲೋಕೇಶ್ವರ ಸಾಬಣ್ಣ ಜಂಬಗಿ (30) ಬಾಲಕಿ ಮೇಲೆ ಅತ್ಯಾ*ಚಾರ ಎಸಗಿದ ಅಪರಾಧಿ. ಮೇ 13ರಂದು ನಿಮ್ಮ ಮನೆಗೆ ಬಿಡುತ್ತೇನೆಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳಿ ಲಾಡ್ಜ್ವೊಂದರಲ್ಲಿ ಬಾಲಕಿ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾ*ಚಾರ ಎಸಗಿದ್ದ.

11:27 PM (IST) Dec 20
10:50 PM (IST) Dec 20
10:10 PM (IST) Dec 20
ಕೋಲಾರದ ಗರುಡನಪಾಳ್ಯ ಗ್ರಾಮದ 256 ಎಕರೆ ಜಮೀನು 1953ರಿಂದಲೂ ನಮ್ಮ ಕುಟುಂಬದ ಸುಪರ್ದಿಯಲ್ಲಿದೆ. ಈ ಜಮೀನು ನಾನು ಹುಟ್ಟುವ ಮೊದಲು ಮೈಸೂರು ರಾಜರಿಂದ ನಮ್ಮ ತಾತ ಚೌಡೇಗೌಡರು ಖರೀದಿಸಿದ್ದರು.
09:42 PM (IST) Dec 20
ಎಲ್ಲದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವುದಾದರೆ, ನೀವು ಏಕಿರಬೇಕು? ರಾಜೀನಾಮೆ ಕೊಟ್ಟು ಹೊರಡಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
09:41 PM (IST) Dec 20
ಬಹುನಿರೀಕ್ಷಿತ '45' ಚಿತ್ರದ ಪ್ರಚಾರದ ವೇಳೆ ನಟ ಉಪೇಂದ್ರ ಅವರು ಡ್ಯಾನ್ಸ್ ಶೋ ವೇದಿಕೆಯಲ್ಲಿ 'ಕಚಡಾ ನನ್ ಮಗನೆ' ಎಂದು ಬೈದಿದ್ದಾರೆ. ನಾನು ಎನ್ನುವ ಅಹಂಕಾರವನ್ನು ಬಿಡಬೇಕು ಎನ್ನುವ ಸಂದೇಶವನ್ನು ಈ ಮೂಲಕ ಸೂಚ್ಯವಾಗಿ ನೀಡಿದ್ದಾರೆ.
09:27 PM (IST) Dec 20
ಜೂ.ಎನ್ಟಿಆರ್ ಬಾಲಿವುಡ್ಗೆ ಎಂಟ್ರಿ ಕೊಟ್ಟು 'ವಾರ್ 2' ನಲ್ಲಿ ನಟಿಸಿದ್ದರು. ಈ ಸಿನಿಮಾ ಓಡಲಿಲ್ಲ. ಆದರೆ ಈಗ ಮತ್ತೊಂದು ಸಿನಿಮಾ ಮಾಡಲಿದ್ದಾರಂತೆ. ಶಾರುಖ್ ಖಾನ್ ಜೊತೆ ಮತ್ತೊಂದು ಮಲ್ಟಿಸ್ಟಾರರ್ ಮಾಡಲು ರೆಡಿಯಾಗಿದ್ದಾರಂತೆ.
09:15 PM (IST) Dec 20
ಗೋಲ್ಡನ್ಸ್ಟಾರ್ ಗಣೇಶ್ ಮತ್ತು ಅಮೂಲ್ಯ ಅಭಿನಯದ ಬ್ಲಾಕ್ಬಸ್ಟರ್ ಸಿನಿಮಾ 'ಚೆಲುವಿನ ಚಿತ್ತಾರ' ಬಿಡುಗಡೆಯಾಗಿ 17 ವರ್ಷಗಳು ಕಳೆದಿವೆ. ಸಿನಿಮಾದ ದುರಂತ ಕ್ಲೈಮ್ಯಾಕ್ಸ್ನಲ್ಲಿ ಅಮೂಲ್ಯ ಕೈಲಿದ್ದ ಮಗು ಈಗ ದೊಡ್ಡವನಾಗಿದ್ದು, ನಟಿ ಆತನೊಂದಿಗಿನ ಇತ್ತೀಚಿನ ಫೋಟೋವನ್ನು ಹಂಚಿಕೊಂಡಿದ್ದಾರೆ.
09:08 PM (IST) Dec 20
ಬಿಗ್ಬಾಸ್ಗೆ ಹೋದರೆ ಅವಕಾಶಗಳ ಬಾಗಿಲು ತೆರೆಯುತ್ತದೆ ಎಂಬುದು ಹಲವರ ನಂಬಿಕೆ. ಆದರೆ, ಮೊದಲ ಸೀಸನ್ ವಿನ್ನರ್ ವಿಜಯ ರಾಘವೇಂದ್ರ ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ಬಿಗ್ಬಾಸ್ನಿಂದ ಬಂದ ತಕ್ಷಣ ತಮಗೆ ಯಾವುದೇ ಆಫರ್ಗಳು ಬರಲಿಲ್ಲ, ಅದು ಸ್ಟಾರ್ಡಮ್ ತಂದುಕೊಡಲಿಲ್ಲ ಎಂದಿದ್ದಾರೆ.
08:48 PM (IST) Dec 20
ಹೈಕಮಾಂಡ್ ಅವರ ಪರ ಇಲ್ಲ ಎಂದೂ ಹೇಳಿಲ್ಲ. ನನ್ನ, ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಆ ಒಪ್ಪಂದದ ಪ್ರಕಾರ ನಾನು ನಡೆಯುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
08:35 PM (IST) Dec 20
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ಆರೋಪದ ಮೇಲೆ ಬಂಧಿತನಾಗಿದ್ದ ಬುರುಡೆ ಗ್ಯಾಂಗ್ನ ಚಿನ್ನಯ್ಯ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ತನ್ನದೇ ಹೋರಾಟಗಾರರ ತಂಡದ ಐವರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
08:27 PM (IST) Dec 20
ನಮ್ಮ ದೇಶದ ಅತ್ಯಂತ ಶ್ರೀಮಂತ ನಟಿ ಯಾರು ಗೊತ್ತಾ? ಹದಿನೈದು ವರ್ಷಗಳಿಂದ ಸಿನಿಮಾದಿಂದ ದೂರವಿರುವ ಜೂಹಿ ಚಾವ್ಲಾ. ಇವರ ಆಸ್ತಿ ಮೌಲ್ಯ ತಿಳಿದರೆ ಅಚ್ಚರಿ ಪಡ್ತೀರಾ. ಒಂದು ಕಾಲದಲ್ಲಿ ಬೆಳ್ಳಿತೆರೆ ಆಳಿದ ಈಕೆ ಈಗ ಉದ್ಯಮದಲ್ಲೂ ಯಶಸ್ಸು ಕಂಡಿದ್ದಾರೆ.
08:11 PM (IST) Dec 20
Karnataka: 1800 Villages Still Lack Bus Service Despite Shakti Scheme ಶಕ್ತಿ ಯೋಜನೆಯ ಯಶಸ್ಸು ಅಸ್ತಿತ್ವದಲ್ಲಿರುವ ಮಾರ್ಗಗಳಲ್ಲಿ ಬಸ್ಗಳಿಗೆ ಹೆಚ್ಚಿನ ಬೇಡಿಕೆಗೆ ಕಾರಣವಾಗಿದೆ ಎಂದು ಕೆಎಸ್ಆರ್ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
07:58 PM (IST) Dec 20
ಹೊಸ ವರ್ಷದ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಪೊಲೀಸರು ಡಿಸೆಂಬರ್ 24 ರಿಂದ 31 ರವರೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಸ್ಪೇಷಲ್ ಡ್ರೈವ್ನ ಮುಖ್ಯ ಉದ್ದೇಶ ಡ್ರಿಂಕ್ ಅಂಡ್ ಡ್ರೈವ್ , ಅತಿವೇಗ ಮತ್ತು ವಿಲ್ಹಿಂಗ್ ತಡೆಯುವುದಾಗಿದೆ.
07:48 PM (IST) Dec 20
07:46 PM (IST) Dec 20
ಬೆಂಗಳೂರಿನ ಜಿಮ್ ಟ್ರೈನರ್ ರಂಜನ್, ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದನು. ಪೊಲೀಸರು ಆತನನ್ನು ಬಂಧಿಸಿ, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದರು. ಇದೀಗ ಮತ್ತಷ್ಟು ವಿಡಿಯೋ ವೈರಲ್ ಬೆನ್ನಲ್ಲಿಯೇ ಆತನನ್ನು ಲಾಕ್ ಮಾಡಿ, ಸತ್ಯ ಬಾಯ್ಬಿಡಿಸಿದ್ದಾರೆ.
07:40 PM (IST) Dec 20
07:28 PM (IST) Dec 20
ಫೋರ್ಟಿಸ್ ಹೆಲ್ತ್ಕೇರ್, ಬೆಂಗಳೂರಿನ ಯಶವಂತಪುರದಲ್ಲಿರುವ ಪೀಪಲ್ ಟ್ರೀ ಆಸ್ಪತ್ರೆಯನ್ನು ₹430 ಕೋಟಿಗೆ ಸ್ವಾಧೀನಪಡಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿದೆ. ಈ ಸ್ವಾಧೀನದ ಜೊತೆಗೆ, ಆಸ್ಪತ್ರೆಯ ವಿಸ್ತರಣೆ ಮತ್ತು ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ ₹410 ಕೋಟಿ ಹೂಡಿಕೆ ಮಾಡಲು ಯೋಜಿಸಿದೆ .
06:49 PM (IST) Dec 20
ಬೆಂಗಳೂರಿನ ಮೆಟ್ರೋ ಹಳದಿ ಮಾರ್ಗದ (ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ) ಪ್ರಯಾಣಿಕರಿಗೆ ಸುಗಮ ಸಂಪರ್ಕ ಕಲ್ಪಿಸಲು ಬಿಎಂಟಿಸಿ ಮತ್ತು ಬಿಎಂಆರ್ಸಿಎಲ್ ಜಂಟಿಯಾಗಿ ಕಾರ್ಯನಿರ್ವಹಿಸಿವೆ. ಮೆಟ್ರೋ ನಿಲ್ದಾಣಗಳ ಬಳಿ ಹೊಸ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ.
06:41 PM (IST) Dec 20
ಅಕ್ಷಯ್ ಖನ್ನಾ, ಸಾರಾ ಅರ್ಜುನ್ ನಟನೆಯ ‘ಧುರಂದರ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಸ್ಪೈ ಪಾತ್ರದಲ್ಲಿ ರಣವೀರ್ ಸಿಂಗ್ ನಟಿಸಿರುವ ‘ಧುರಂದರ್’ ಚಿತ್ರವನ್ನು ಪಾಕಿಸ್ತಾನದಲ್ಲಿ ನಿಷೇಧ ಮಾಡಲಾಗಿದೆ.
06:30 PM (IST) Dec 20
ಅದಾನಿ ಗ್ರೂಪ್, ವಿಮಾನ ನಿಲ್ದಾಣ ವ್ಯವಹಾರದಲ್ಲಿ ಮುಂದಿನ 5 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಯೋಜಿಸಿದೆ. ಇದರ ಭಾಗವಾಗಿ, 60ಕ್ಕೂ ಹೆಚ್ಚು ಹೋಟೆಲ್ಗಳನ್ನು ನಿರ್ಮಿಸುವ ಮೂಲಕ ತಾಜ್ ಮತ್ತು ಐಟಿಸಿಗೆ ಸ್ಪರ್ಧೆ ನೀಡಲು ಸಜ್ಜಾಗಿದೆ.
06:18 PM (IST) Dec 20
ಬೆಂಗಳೂರು ಹೊರವಲಯದ ಆನೇಕಲ್ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಹಾಜರಾತಿ ದಂಧೆ ನಡೆದಿದೆ. ಲಕ್ಷಾಂತರ ರೂಪಾಯಿ ಹಣ ಪಡೆದು ಡಿಜಿಟಲ್ ಸಹಿ ತಿರುಚಿದ್ದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿದೆ.
05:50 PM (IST) Dec 20
ರೇಣುಕಾಸ್ವಾಮಿ ಕೇಸ್ ಟ್ರಯಲ್ ಆರಂಭವಾಗಿದ್ದು, ಈ ಕೇಸ್ ವಿಚಾರವಾಗಿ ದರ್ಶನ್ಗಿಂತ ಹೆಚ್ಚು ಎ-1 ಪವಿತ್ರಾಗೆ ಢವಢವ ಶುರುವಾಗಿದೆ. ಈ ನಡುವೆ ಪವಿತ್ರಾ, ದರ್ಶನ್ ಬೇಟಿ ಮಾಡ್ಲಿಕ್ಕೆ ಪ್ರಯತ್ನ ಪಟ್ಟಿದ್ದು, ಅದಕ್ಕೆ ದಾಸ ಒಪ್ಪಿಲ್ಲ.
05:42 PM (IST) Dec 20
ಅಲ್ಲಿ ಒಂದಲ್ಲ ... ಎರಡಲ್ಲ... ಐದು ಹುಲಿಗಳಿವೆ. ಕಳೆದ ಎರಡು ತಿಂಗಳಿಂದ 30ಕ್ಕೂ ಹೆಚ್ಚು ಹಸುಗಳನ್ನು ತಿಂದು ತೇಗಿವೆ. ಗ್ರಾಮಸ್ಥರು ಹೊಲಗದ್ದೆಗಳಿಗೆ ಹೋಗಲು ಭಯಪಡುವಂತಾಗಿವೆ. ಹೌದು ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳ ಸದ್ದು ಜೋರಾಗಿದೆ.
05:07 PM (IST) Dec 20
ದಿ ಡೆವಿಲ್ ಚಿತ್ರೀಕರಣದ ಬಿಡುವಿನ ಸಮಯದಲ್ಲಿ ಅಪ್ಪ- ಮಗ ಸೇಮ್ ಟು ಸೇಮ್ ಡ್ರೆಸ್ ಹಾಕಿ ಫೋಟೋ ತೆಗೆದುಕೊಂಡಿದ್ದಾರೆ. ದಿ ಡೆವಿಲ್ ತಂಡ ರಾಜಸ್ಥಾನದಲ್ಲಿ ಚಿತ್ರೀಕರಣಕ್ಕೆ ತೆರಳಿದ್ದರು. ಆ ವೇಳೆ ದರ್ಶನ್ ಜೊತೆಗೆ ವಿನೀಶ್ ಹೋಗಿದ್ದರು.
04:45 PM (IST) Dec 20
ಚಿಕ್ಕಮಗಳೂರು ನಗರದ ನಾಯ್ಡು ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ನಡೆಸಿದ ಕಳಪೆ ಕಾಮಗಾರಿಯಿಂದಾಗಿ, ಹಾಕಿದ 24 ಗಂಟೆಯೊಳಗೆ ಡಾಂಬರ್ ಕಿತ್ತುಬಂದಿದೆ. ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ಗುಣಮಟ್ಟದ ರಸ್ತೆ ನಿರ್ಮಿಸಲು ಆಗ್ರಹಿಸಿದ್ದಾರೆ.
04:45 PM (IST) Dec 20
ನಾನು ಕನ್ನಡ ಕಲಿಯಲು ಪುನೀತ್ ರಾಜ್ಕುಮಾರ್ ಕಾರಣ. ಭಾಷೆ ಗೊತ್ತಿದ್ದರೆ ಸನ್ನಿವೇಶಗಳಲ್ಲಿ ಸುಲಭವಾಗಿ ನಟಿಸಲು ಸಾಧ್ಯವಾಗುತ್ತದೆ ಎಂದಿದ್ದರು. ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದರು ನಟಿ ಪ್ರಿಯಾ ಆನಂದ್.
04:41 PM (IST) Dec 20
ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ಮುಂಬೈ ಕಾರ್ಯಕ್ರಮದಲ್ಲಿ 'ಗಣಪತಿ ಬಪ್ಪಾ ಮೋರಿಯಾ' ಎಂದು ಘೋಷಣೆ ಕೂಗಿದ್ದನ್ನು ನಟ ಕಿಶೋರ್ ಪ್ರಶ್ನಿಸಿದ್ದಾರೆ. ಕ್ರೀಡಾ ಕಾರ್ಯಕ್ರಮದಲ್ಲಿ ದೇವರ ಜಪದ ರಾಜಕೀಯ ಬೇಕಿತ್ತೇ ಎಂದು ಟೀಕಿಸಿದ್ದಾರೆ.
04:22 PM (IST) Dec 20
ರವಿಶಂಕರ್ ಅವರು ಪ್ರಧಾನ ಭಾಷಣ ನೀಡಿ, ಮಾರ್ಗದರ್ಶಿತ ಧ್ಯಾನವನ್ನು ನಡೆಸಿಕೊಡುವ ಮೂಲಕ, ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನ ಪದ್ಧತಿಯನ್ನು ವಿಶ್ವದ ಅತ್ಯಂತ ಮಹತ್ವದ ರಾಜತಾಂತ್ರಿಕ ವೇದಿಕೆಯ ಮೂಲಕ ಮುನ್ನೆಲೆಗೆ ತಂದರು.
03:33 PM (IST) Dec 20
ನಟ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಗಂಡು ಮಗುವಿನ ಪಾಲಕರಾಗಿ ಬಡ್ತಿ ಪಡೆದಿದ್ದಾರೆ. ತಂದೆಯಾಗಿರೋದು ಹೇಗಿದೆ ಎಂದು ವಿಕ್ಕಿ ಕೌಶಲ್ ಅವರು ಹೇಳಿದ್ದಾರೆ. ಕೆಲಸದ ಸಲುವಾಗಿ ಊರು ಬಿಟ್ಟು ಹೋಗುವುದು, ಮನೆಗೆ ಬಂದಿರೋ ಮಗುವನ್ನು ಬಿಟ್ಟು ಬರುವುದು ವಿಶೇಷವಾಗಿ ಕಷ್ಟವಾಗಿತ್ತು ಎಂದು ವಿಕ್ಕಿ ಹೇಳಿದ್ದಾರೆ.
03:21 PM (IST) Dec 20
ಬೆಂಗಳೂರು ಪೊಲೀಸ್ ದಂಪತಿ ಲೋಕೇಶ್ ಮತ್ತು ಆಶಾ ಅವರು 'ಪ್ರಾಜೆಕ್ಟ್ ಖುಷಿ' ಎಂಬ ಆರೋಗ್ಯ ಉಪಕ್ರಮದ ಮೂಲಕ ಗಮನಾರ್ಹವಾಗಿ ತೂಕ ಇಳಿಸಿಕೊಂಡು ಆರೋಗ್ಯ ಸುಧಾರಿಸಿಕೊಂಡಿದ್ದಾರೆ. ಈವರೆಗೆ 30 ಪೊಲೀಸ್ ಸಿಬ್ಬಂದಿಗೆ ಥೈರಾಯ್ಡ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡಿದೆ.
03:02 PM (IST) Dec 20
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕಿಚ್ಚ ಸುದೀಪ್ ಅವರು ‘ವಾರದ ಕಥೆ ಕಿಚ್ಚನ ಜೊತೆ’ ಎಪಿಸೋಡ್ನಲ್ಲಿ ಟಾಸ್ಕ್ಗಳ ಬಗ್ಗೆ ಮಾತನಾಡಿದ್ದಾರೆ. ಈ ಬಾರಿ ಟಾಸ್ಕ್ಗಳಲ್ಲಿ ಸಾಕಷ್ಟು ಗೊಂದಲ ಮಾಡಿಕೊಂಡಿದ್ದರು.
03:01 PM (IST) Dec 20
02:37 PM (IST) Dec 20
ನಾವು ಸಾಮಾನ್ಯವಾಗಿ 'ಮಿನರಲ್ ವಾಟರ್' ಎಂದು ಕರೆಯುವ ಬಿಸ್ಲೇರಿ, ಕಿನ್ಲೆಯಂತಹ ಬ್ರಾಂಡ್ಗಳು ವಾಸ್ತವವಾಗಿ 'ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್' ಆಗಿವೆ. ನೈಸರ್ಗಿಕ ಮಿನರಲ್ ವಾಟರ್ ಅನ್ನು ಬುಗ್ಗೆಗಳಿಂದ ನೇರವಾಗಿ ಪಡೆಯಲಾಗುತ್ತದೆ ಮತ್ತು ಅದಕ್ಕೆ ಯಾವುದೇ ಸಂಸ್ಕರಣೆ ಇರುವುದಿಲ್ಲ.
02:15 PM (IST) Dec 20
ಚಿಕ್ಕಮಗಳೂರಿನ ಕಳಸ ತಾಲೂಕಿನ ಬಳಿ ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಪ್ರವಾಸಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 45ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
02:05 PM (IST) Dec 20
02:02 PM (IST) Dec 20
ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ನಿರ್ವಹಣೆಯ ರೆಸಾರ್ಟ್ನಲ್ಲಿ ದಾಖಲೆಗಳಿಲ್ಲದ ನೇಪಾಳಿ ಮೂಲದವರಿಗೆ ಆಶ್ರಯ ನೀಡಿದ ಆರೋಪ ಕೇಳಿಬಂದಿದೆ. ಗರ್ಭಿಣಿಯೊಬ್ಬರ ಆಸ್ಪತ್ರೆ ದಾಖಲಾತಿ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಬ್ರಹ್ಮಾವರ ಪೊಲೀಸರಿಂದ ಒಂಬತ್ತು ಮಂದಿ ವಶಕ್ಕೆ
01:43 PM (IST) Dec 20
ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧೀಜಿ ಹೆಸರು ಕೈಬಿಟ್ಟು 'ಜಿ ರಾಮ್ ಜಿ' ಎಂದು ಮರುನಾಮಕರಣ ಮಾಡಿರುವುದನ್ನು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಖಂಡಿಸಿದ್ದಾರೆ. ಇದು ಗಾಂಧೀಜಿಗೆ ಮಾಡಿದ ಅವಮಾನವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
01:23 PM (IST) Dec 20
01:23 PM (IST) Dec 20
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರವು 'ದ್ವೇಷ ಭಾಷಣ' ತಡೆ ಕಾಯ್ದೆ ಮತ್ತು 'ಫ್ಯಾಕ್ಟ್ ಚೆಕ್ ಎಜೆನ್ಸಿ' ಮೂಲಕ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕಿ 'ಅಘೋಷಿತ ತುರ್ತು ಪರಿಸ್ಥಿತಿ' ಹೇರುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
01:09 PM (IST) Dec 20
Actress Shubha Poonja Weight Loss: ನಟಿ ಶುಭಾ ಪೂಂಜ ಅವರು ತೂಕ ಇಳಿಸಿಕೊಂಡಿದ್ದಾರೆ. ಆಯುರ್ವೇದಿಕ್ ಪದ್ಧತಿ ಮೂಲಕ ಅವರು ತೂಕ ಇಳಿಸಿಕೊಂಡಿದ್ದಾರೆ. ಹಾಗಾದರೆ ಆಯುರ್ವೇದಿಕ್ ಡಯೆಟ್ ಹೇಗಿರಲಿದೆ? ಸೈಡ್ ಎಫೆಕ್ಟ್ ಇಲ್ಲದೆ ಸಣ್ಣಗಾಗಬಹುದು ಹೇಗೆ?