ಬೆಳಗಾವಿ: ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಯು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾ*ಚಾರ ಎಸಗಿದ ಆರೋಪ ಸಾಬೀತಾಗಿದೆ. ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದ್ದು, ಅಪರಾಧಿಗೆ ಶಿಕ್ಷೆಯನ್ನು ಶನಿವಾರ ನೀಡಲಿದೆ. ಹಠಯೋಗಿ ಲೋಕೇಶ್ವರ ಸ್ವಾಮೀಜಿ ಉರೂಫ್ ಲೋಕೇಶ್ವರ ಸಾಬಣ್ಣ ಜಂಬಗಿ (30) ಬಾಲಕಿ ಮೇಲೆ ಅತ್ಯಾ*ಚಾರ ಎಸಗಿದ ಅಪರಾಧಿ. ಮೇ 13ರಂದು ನಿಮ್ಮ ಮನೆಗೆ ಬಿಡುತ್ತೇನೆಂದು ಹೇಳಿ ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳಿ ಲಾಡ್ಜ್ವೊಂದರಲ್ಲಿ ಬಾಲಕಿ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾ*ಚಾರ ಎಸಗಿದ್ದ.

09:57 AM (IST) Dec 20
ಈ ಮಸೂದೆ ಸರ್ಕಾರಿ ಅಧಿಕಾರಿಗಳಿಗೆ ಜನರು ಯಾವ ಮಾತನಾಡಲು ಅನುಮತಿಸಬಹುದು ಎಂಬುದನ್ನು ನಿರ್ಧರಿಸುವ ಅಧಿಕಾರ ನೀಡುತ್ತದೆ. ಇದು ಸಾರ್ವಜನಿಕ ಹಿತಾಸಕ್ತಿಗೆ ಅಪಾಯ ಉಂಟುಮಾಡುವ ಮಾತುಗಳನ್ನು ಮಾತ್ರ ಗುರಿಯಾಗಿಸದೆ, ಸರ್ಕಾರವಿರೋಧಿ ಧ್ವನಿಗಳನ್ನು ಮುಚ್ಚಿಹಾಕುವ ಸಾಧನವಾಗಿ ಪರಿವರ್ತನೆಗೊಳ್ಳಬಹುದು
09:42 AM (IST) Dec 20
Bigg Boss Rakshita Shetty: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಸೀಕ್ರೆಟ್ ರೂಮ್ಗೆ ರಕ್ಷಿತಾ ಶೆಟ್ಟಿ ಹೋದಾಗಿನಿಂದ ವೀಕ್ಷಕರಿಗೆ ಇರಿಟೇಟ್ ಅನಿಸಿದೆ. ಅದಕ್ಕೂ ಮೊದಲೇ ರಕ್ಷಿತಾ ಇರಿಟೇಟ್ ಅನಿಸಿದ್ದರು. ಈಗ ಇದು ಅತಿರೇಕಕ್ಕೆ ಹೋಗಿದೆ. ರಕ್ಷಿತಾ ವ್ಯಕ್ತಿತ್ವ ಏನು ಎನ್ನೋದು ಬಯಲಾಗಿದೆ.
09:36 AM (IST) Dec 20
ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಫೆಬ್ರವರಿ-ಮಾರ್ಚ್ ತಿಂಗಳ ಹಣ ಬಿಡುಗಡೆಯಾಗದ ಕಾರಣ ಬಿಜೆಪಿ ತೀವ್ರ ಆಕ್ರೋಶ.. ಹಣ ಬರುತ್ತದೆಂದು ನಂಬಿ ಸಾಲ ಮಾಡಿದ್ದ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನದಲ್ಲಿ ತಪ್ಪು ಮಾಹಿತಿ ನೀಡಿ ನಂತರ ಒಪ್ಪಿಕೊಂಡಿದ್ದಾರೆ..
09:17 AM (IST) Dec 20
ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಅವರ ಪಾಲಿಗೆ ಉತ್ತರಪ್ರದೇಶದ ಪ್ರಯಾಗರಾಜ್ನ ‘ಮಹಾ ಕುಂಭಮೇಳ ಯಾತ್ರೆ’ಗೆ ತೆರಳಿದ್ದ ವಿಮಾನದ ಟಿಕೆಟ್ಗಳೇ ಕಂಟಕವಾಗಿವೆ ಎಂಬ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ.
09:13 AM (IST) Dec 20
BBK 12 Elimination Twist: ಈ ವಾರ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್ ಆಗುವ ಸಾಧ್ಯತೆಯಿದೆ. ಮತ್ತೊಂದೆಡೆ, ಸೀಕ್ರೆಟ್ ರೂಮ್ನಲ್ಲಿರುವ ರಕ್ಷಿತಾ ಶೆಟ್ಟಿ, ಧ್ರುವಂತ್ ವರ್ತನೆಯಿಂದ ಬೇಸತ್ತು ಮನೆಗೆ ಮರಳಲು ಮನವಿ ಮಾಡಿದ್ದಾರೆ.
08:31 AM (IST) Dec 20
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ವಾರದ ಕತೆ ಕಿಚ್ಚನ ಜೊತೆ ಎಪಿಸೋಡ್ನಲ್ಲಿ ಯಾವ ವಿಷಯವನ್ನು ಚರ್ಚೆ ಮಾಡುತ್ತಾರೆ? ಕಿಚ್ಚ ಸುದೀಪ್ ಅವರು ಯಾರಿಗೆ ಕ್ಲಾಸ್ ತಗೊಳ್ತಾರೆ ಎಂಬ ಪ್ರಶ್ನೆ ಇರುತ್ತದೆ. ಹಾಗಾದರೆ ಯಾವ ವಿಷಯದ ಬಗ್ಗೆ ಮಾತನಾಡಬೇಕು?
08:11 AM (IST) Dec 20
Karnataka weather update: ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:03 AM (IST) Dec 20
Dance Karnataka Dance Show: ‘ಚಲಿಸುವ ಮೋಡಗಳು’ ಸಿನಿಮಾದ ‘ಚಂದಿರ ತಂದ ಹುಣ್ಣಿಮೆ ರಾತ್ರಿ’ ಹಾಡು ಇಂದಿಗೂ ಕೂಡ ಪ್ರಸ್ತುತವಾಗಿದೆ. ಎಲ್ಲರೂ ಈ ಹಾಡಿಗೆ ಡ್ಯಾನ್ಸ್ ಮಾಡೋದುಂಟು. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ರಚಿತಾ ರಾಮ್, ಶಿವರಾಜ್ಕುಮಾರ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
07:56 AM (IST) Dec 20
ಸೀಕ್ರೆಟ್ ರೂಮ್ನಲ್ಲಿರುವ ರಕ್ಷಿತಾ ಶೆಟ್ಟಿ, ಕಿಚ್ಚ ಸುದೀಪ್ ಮುಂದೆ ತಮ್ಮ ಕಣ್ಣೀರಿನ ಕಥೆ ಹೇಳಿಕೊಂಡಿದ್ದಾರೆ. ಧ್ರುವಂತ್ ಜೊತೆ ಇರಲು ಸಾಧ್ಯವಾಗುತ್ತಿಲ್ಲ, ನನ್ನ ನೆಮ್ಮದಿ ಹಾಳಾಗುತ್ತಿದೆ ಎಂದು ಅವರು ಮನವಿ ಮಾಡಿದ್ದಾರೆ. ಇವರಿಬ್ಬರ ತದ್ವಿರುದ್ಧ ಮನಸ್ಥಿತಿಯೇ ಸೀಕ್ರೆಟ್ ರೂಮ್ನ ಮನರಂಜನೆಯಾಗಿದೆ.
07:47 AM (IST) Dec 20
ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ, ಗೃಹಲಕ್ಷ್ಮೀ ಯೋಜನೆ ಭ್ರಷ್ಟಾಚಾರ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿತು. ಇದರೊಂದಿಗೆ, ಅಲೆಮಾರಿ ಸಮುದಾಯಗಳು, ದಲಿತ ಕುಟುಂಬಗಳು ಸೇರಿದಂತೆ ವಿವಿಧ ಸಂಘಗಳು ಬೇಡಿಕೆಗಳ ಈಡೇರಿಕೆಗೆ ಧರಣಿ ನಡೆಸಿದವು.
07:34 AM (IST) Dec 20