LIVE NOW
Published : May 20, 2026, 07:03 AM ISTUpdated : May 20, 2026, 08:30 AM IST

Karnataka News Live: Sadhana samavesha - 3 ವರ್ಷಗಳ ಸಾಧನೆಯಲ್ಲ, 300 ವೈಫಲ್ಯಗಳ ಸಾಧನೆ - ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರಿದಿದ್ದು, ಮಂಗಳವಾರ ದಾವಣಗೆರೆ, ಬೀದರ್‌, ರಾಯಚೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬಳ್ಳಾರಿಯಲ್ಲಿ ವರುಣನ ಆರ್ಭಟಕ್ಕೆ ಸುಮಾರು 500ಕ್ಕೂ ಅಧಿಕ ಮರಗಳು ಹಾಗೂ 76 ವಿದ್ಯುತ್ ಕಂಬಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಗುಡುಗು, ಮಿಂಚಿನ ಮಳೆಗೆ 20 ಅಡಕೆ ಮರಗಳು ಸುಟ್ಟುಹೋಗಿದೆ. ಇನ್ನೂ ರಾಯಚೂರಿನ ಮಾನ್ವಿ, ಮಸ್ಕಿ ಹಾಗೂ ಲಿಂಗಸುಗೂರು ಇತರೆ ಪ್ರದೇಶಗಳಲ್ಲಿ ವಿದ್ಯುತ್‌ ಕಂಬ, ಮರಗಳು ನೆಳಕ್ಕುರುಳಿವೆ.

ಕಾರವಾರದಲ್ಲಿ ಚಂಡಮಾರುತ, ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಗೋಕರ್ಣ, ಮುರು ಡೇಶ್ವರ, ಕಾರವಾರ ಬೀಚ್‌ಗಳಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್‌ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

08:30 AM (IST) May 20

Sadhana samavesha - 3 ವರ್ಷಗಳ ಸಾಧನೆಯಲ್ಲ, 300 ವೈಫಲ್ಯಗಳ ಸಾಧನೆ - ಸಂಸದ ರಮೇಶ್ ಜಿಗಜಿಣಗಿ ವಾಗ್ದಾಳಿ

ಸಂಸದ ರಮೇಶ ಜಿಗಜಿಣಗಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತವನ್ನು ಸಾಧನೆಯಲ್ಲ, ಬದಲಿಗೆ 300 ವೈಫಲ್ಯಗಳ ಸರಮಾಲೆ ಎಂದು ತೀವ್ರವಾಗಿ ಟೀಕಿಸಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳು, ಭ್ರಷ್ಟಾಚಾರ, ಮತ್ತು ಮಹಿಳೆಯರ ಅಸುರಕ್ಷತೆಯಂತಹ ವಿಷಯಗಳ ಬಗ್ಗೆ ಅವರು ತೀವ್ರ ವಾಗ್ದಾಳಿ ನಡೆಸಿದರು.

Read Full Story

07:47 AM (IST) May 20

Gadag - ಬಟ್ಟೆ ತೊಳೆಯಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಲಕ್ಷ್ಮವ್ವ, ಮುತ್ತವ್ವ ಸಾವು

ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ, ಬಟ್ಟೆ ತೊಳೆಯಲು ಕೃಷಿಹೊಂಡಕ್ಕೆ ತೆರಳಿದ್ದ ಇಬ್ಬರು ಬಾಲಕಿಯರು ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಲಕ್ಷ್ಮವ್ವ (15) ಮತ್ತು ಮುತ್ತವ್ವ (8) ಮೃತಪಟ್ಟಿದ್ದು, ಈ ಹೃದಯವಿದ್ರಾವಕ ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
Read Full Story

07:36 AM (IST) May 20

NRI arrested in Bangalore - ಅಮೆರಿಕದಿಂದ ಜೀವಂತ 7 ಗುಂಡು ತಂದಿದ್ದಅನಿವಾಸಿ ಭಾರತೀಯನ ಸೆರೆ!

ಬೆಂಗಳೂರಿನಲ್ಲಿ ಅನಿವಾಸಿ ಭಾರತೀಯನೊಬ್ಬನನ್ನು ಅಕ್ರಮವಾಗಿ ಜೀವಂತ ಗುಂಡುಗಳನ್ನು ಹೊಂದಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಅಮೆರಿಕದಿಂದ ತಂದಿದ್ದ ರಿವಾಲ್ವಾರ್ ಮ್ಯಾಗ್ಜಿನ್‌ ಅನ್ನು ಹೋಟೆಲ್‌ನಲ್ಲಿ ಮರೆತು ಹೋಗಿದ್ದು, ಸಿಬ್ಬಂದಿ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Read Full Story

More Trending News