LIVE NOW
Published : Dec 21, 2025, 07:00 AM ISTUpdated : Dec 21, 2025, 11:02 AM IST

Karnataka News Live: BBK 12 - ಪಿತ್ತ ನೆತ್ತಿಗೇರಿತು; ಇದು ಸರಿಯಲ್ಲ ಎಂದು ಅಶ್ವಿನಿ ಗೌಡಗೆ ವಾರ್ನಿಂಗ್‌ ಕೊಟ್ಟ Kiccha Sudeep

ಸಾರಾಂಶ

 

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಜೋರಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಧ್ಯದ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ದೆಹಲಿಯಲ್ಲಿ ಅವರಿಬ್ಬರ ಮಧ್ಯೆ ಟಾಸ್ ಆಗಿದ್ದು, ಆ ವೇಳೆ ನಾವು ಇರಲಿಲ್ಲ. ಹಾಗಾಗಿ ಹೆಡ್ಡೋ, ಟೇಲೋ ಅವರನ್ನೇ ಕೇಳಿ ಎಂದು ಮಾರ್ಮಿಕವಾಗಿ ಹೇಳಿದರು. ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ಸಿಎಂ ಮತ್ತು ಡಿಸಿಎಂ ಅವರಿಬ್ಬರ ಮಧ್ಯೆ ಟಾಸ್ ಆಗಿದೆ. ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಆವಾಗ ಥರ್ಡ್‌ ಅಂಪೈರ್ ಕೂಡ ಇರಲಿಲ್ಲ. ಇಬ್ಬರೇ ಟಾಸ್ ಹಾಕಿದ್ದು, ಆ ವೇಳೆ ಹೆಡ್ ಬಿದ್ದಿದೆಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದಿದ್ದಾರೆ.

11:02 AM (IST) Dec 21

BBK 12 - ಪಿತ್ತ ನೆತ್ತಿಗೇರಿತು; ಇದು ಸರಿಯಲ್ಲ ಎಂದು ಅಶ್ವಿನಿ ಗೌಡಗೆ ವಾರ್ನಿಂಗ್‌ ಕೊಟ್ಟ Kiccha Sudeep

Bigg Boss Kannada Season 12 Episode: ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ವಾರದಿಂದಲೂ ಕಾವ್ಯ ಶೈವ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ನಡೆಯುತ್ತಲೇ ಇದೆ. ಇವರಿಬ್ಬರು ಸಾಕಷ್ಟು ಬಾರಿ ಜಗಳ ಆಡಿಕೊಂಡಿದ್ದಾರೆ. ಈ ವಾರ ಕೂಡ ಅದೇ ಆಯ್ತು. ಕಿಚ್ಚ ಸುದೀಪ್‌ ಕ್ಲಾಸ್‌ ಕೂಡ ತಗೊಂಡ್ರು.

Read Full Story

10:58 AM (IST) Dec 21

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚ ಬಾಂಡ್ - ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!

ಮಂಗಳೂರು ಪೊಲೀಸರು ಮುಸ್ಲಿಂ ಸಂಘಟನೆಗಳನ್ನು ಮಾತ್ರ ಗುರಿಯಾಗಿಸಿ ಪ್ರತಿಭಟನೆಗೆ ಬಾಂಡ್ ಪಡೆಯುತ್ತಿದ್ದಾರೆ ಎಂಬ SDPI ಆರೋಪಕ್ಕೆ ಪೊಲೀಸ್ ಆಯುಕ್ತರು ಅಂಕಿ-ಅಂಶಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈವರೆಗೆ 521 ಹಿಂದೂಗಳು ಮತ್ತು 351 ಮುಸ್ಲಿಮರಿಂದ ಮುಚ್ಚಳಿಕೆ ಬರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Read Full Story

10:40 AM (IST) Dec 21

Amaran ಹೀರೋ ಶಿವಕಾರ್ತಿಕೇಯನ್ ಕಾರ್ ಅಪಘಾತ; ಚೆನ್ನೈ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Sivakarthikeyan's car accident in Chennai: ಶಿವಕಾರ್ತಿಕೇಯನ್ ಪ್ರಯಾಣಿಸುತ್ತಿದ್ದ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದ್ದು, ಅವರೇ ಮಧ್ಯಸ್ಥಿಕೆ ವಹಿಸಿ ಜಗಳ ಬಗೆಹರಿಸಿದ್ದಾರೆ.

Read Full Story

10:26 AM (IST) Dec 21

ಕರೆಂಟ್‌ ಅಕೌಂಟಲ್ಲಿ ₹150 ಕೋಟಿಅಲ್ಲ, ₹1 ಸಾವಿರ ಕೋಟಿ ವಹಿವಾಟು

ದಾವಣಗೆರೆಯಲ್ಲಿ ₹150 ಕೋಟಿ ಎಂದು ಭಾವಿಸಲಾಗಿದ್ದ ಸೈಬರ್ ವಂಚನೆ ಪ್ರಕರಣವು ಇದೀಗ ₹1000 ಕೋಟಿಗೂ ಅಧಿಕ ವಹಿವಾಟು ನಡೆಸಿರುವುದು ತನಿಖೆಯಿಂದ ಬಯಲಾಗಿದೆ. ದೂರುದಾರನೇ ಪ್ರಮುಖ ಆರೋಪಿಯಾಗಿದ್ದು, ದುಬೈನಿಂದ ಹಣ ವರ್ಗಾವಣೆಗಾಗಿ ಕರೆಂಟ್ ಅಕೌಂಟ್‌ಗಳನ್ನು ಮಾರಾಟ ಮಾಡುವ ದಂಧೆ ಬೆಳಕಿಗೆ ಬಂದಿದೆ. 

Read Full Story

10:19 AM (IST) Dec 21

BBK 12 - ರಕ್ಷಿತಾ ಶೆಟ್ಟಿ ಭ್ರಮೆಗೆ ಕಾವ್ಯಾ ಕೊಟ್ರು ತಿರುಗೇಟು! ಭವಿಷ್ಯ ನುಡಿದ ಬಿಗ್‌ಬಾಸ್‌ ವೀಕ್ಷಕರು

ಸೀಕ್ರೆಟ್ ರೂಮ್‌ನಿಂದ ಮರಳಿದ ರಕ್ಷಿತಾ ಶೆಟ್ಟಿ, ತಾನಿಲ್ಲದೆ ಮನೆಗೆ ಸ್ಪಾರ್ಕ್ ಇರಲಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಯಾಗಿ, 'ಭ್ರಮೆಯಲ್ಲಿರುವ ಸ್ಪರ್ಧಿ' ಟಾಸ್ಕ್‌ನಲ್ಲಿ ಬಹುತೇಕ ಸದಸ್ಯರು ರಕ್ಷಿತಾ ಅವರ ಬಲೂನ್ ಒಡೆದು, ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. 

Read Full Story

10:12 AM (IST) Dec 21

ಬಾಗಲಕೋಟೆ - ಬುದ್ಧಿಮಾಂದ್ಯನ ಮೇಲೆ ಅಮಾನವೀಯ ಹಲ್ಲೆ

ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ, ಶಿಕ್ಷಕ ದಂಪತಿ 16 ವರ್ಷದ ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಕಾರದಪುಡಿ ಎರಚಿ ಪೈಪ್‌ನಿಂದ ಹಲ್ಲೆ ನಡೆಸಿದ್ದಾರೆ. ಮೂರು ತಿಂಗಳ ಹಿಂದಿನ ಈ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆಗಿದ್ದು, ಪೋಷಕರ ದೂರು. ಪೊಲೀಸರು ಆರೋಪಿ ದಂಪತಿಯನ್ನು ವಶಕ್ಕೆ 

Read Full Story

10:07 AM (IST) Dec 21

ತನ್ನ ತಪ್ಪನ್ನು ಎತ್ತಿ ತೋರಿಸಿದ ಗಿಲ್ಲಿ ನಟ; ಬಾಯಿ ಮುಚ್ಚಿಸಿದ Rakshita Shetty; ಕಿಚ್ಚ ಸುದೀಪ್‌ಗೆ ಕ್ಷಮೆ ಕೇಳಿಲ್ಲ

Bigg Boss Kannada Season 12 Episode: ಬಿಗ್‌ ಬಾಸ್‌ ಮನೆಯಲ್ಲಿ ಕಾವ್ಯ ಶೈವ ಗೆಲ್ಲಲೇಬಾರದು ಎಂದು ಪ್ಲ್ಯಾನ್‌ ಮಾಡಿದ್ರಿ. ನೀವು ಮನೆಯೊಳಗಡೆ ಬಂದಾಗ, ಅವರು ಕ್ಯಾಪ್ಟನ್‌ ಆಗಿದ್ದಾರೆ ಎಂದು ಕಿಚ್ಚ ಸುದೀಪ್‌ ಹೇಳಿದ್ದಾರೆ. ಆ ಬಗ್ಗೆ ಚರ್ಚೆ ನಡೆದಿದೆ. ರಕ್ಷಿತಾ ಮಾತನ್ನು ಉಳಿದವರು ವಿರೋಧ ಮಾಡಿದ್ದಾರೆ.

 

Read Full Story

09:45 AM (IST) Dec 21

ವೀರವೈಶ ಲಿಂಗಾಯತ ಸಮಾಜ ಒಡೆದಾಳಲು ಯತ್ನ - ವಿಜಯೇಂದ್ರ

ಮಳವಳ್ಳಿಯಲ್ಲಿ ನಡೆದ ಸುತ್ತೂರು ಶ್ರೀಗಳ ಜಯಂತೋತ್ಸವದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ಪ್ರಯತ್ನಗಳು ವಿಫಲವಾಗಲಿವೆ ಎಂದಿದ್ದಾರ ಎಂದರು.

Read Full Story

09:26 AM (IST) Dec 21

ತಾಕತ್ತಿದ್ರೆ ನೋಟಲ್ಲಿರುವ ಗಾಂಧಿ ಚಿತ್ರ ತೆಗೆಯಿರಿ - ಕೇಂದ್ರಕ್ಕೆ ಡಿಕೆಶಿ ಸವಾಲು!

ನರೇಗಾ ಹೆಸರು ಬದಲು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕೇಂದ್ರದ ದ್ವೇಷದ ರಾಜಕಾರಣವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಬಿಡುವುದಿಲ್ಲ ಎಂದು ಸವಾಲು ಹಾಕಿದರು.

Read Full Story

09:08 AM (IST) Dec 21

ಶುಭಾ ಪೂಂಜಾ ಶೂಟಿಂಗ್‌ ಸೆಟ್‌ನಲ್ಲಿ ಹೇಗಿರ್ತಾರೆ? ಕಾಮಿಡಿ ಕಿಲಾಡಿ ಬಿಚ್ಚಿಟ್ಟ ಸತ್ಯ ಏನು?

ನಟಿ ಶುಭಾ ಪೂಂಜಾ 'ಕಾಮಿಡಿ ಕಿಲಾಡಿಗಳು' ವೇದಿಕೆಯಲ್ಲಿ ಕೋಳಿ ಕಳ್ಳ ಖ್ಯಾತಿಯ ಮನು ಜೊತೆ ನಟಿಸಿದ್ದಾರೆ. ಅವರ ಸರಳತೆಗೆ ಸಹನಟ ಮನು ಮನಸೋತರೆ, ಹಿರಿಯ ನಟ ಜಗ್ಗೇಶ್ ಅವರ ನಟನೆ ಹಾಗೂ ಕಲಿಯುವ ಆಸಕ್ತಿಯನ್ನು ಮೆಚ್ಚಿಕೊಂಡಿದ್ದಾರೆ.

Read Full Story

08:38 AM (IST) Dec 21

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್ - ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ

Kollur temple fake website scam :ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಆನ್‌ಲೈನ್ ರೂಮ್ ಬುಕ್ಕಿಂಗ್ ಹೆಸರಿನಲ್ಲಿ ಭಕ್ತರಿಂದ ಹಣ ಪಡೆದು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ನಾಸೀರ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

Read Full Story

08:36 AM (IST) Dec 21

ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ - ಮೋದಿ ಪಣ

ಪಶ್ಚಿಮ ಬಂಗಾಳದ ಜಂಗಲ್‌ ರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ತಾಂಡವವಾಡುತ್ತಿದೆ. ಆದ್ದರಿಂದ 2026ರ ಚುನಾವಣೆಯಲ್ಲಿ ಡಬಲ್‌ ಎಂಜಿನ್‌ ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Read Full Story

08:19 AM (IST) Dec 21

ನಾನಿಲ್ಲದೆ Bigg Boss ಮನೇಲಿ Spark ಇಲ್ಲ ಎಂದ Rakshita Shetty; ಅಲ್ಲೇ ಸತ್ಯದರ್ಶನ ಮಾಡಿಸಿದ ಕಿಚ್ಚ ಸುದೀಪ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ, ಧ್ರುವಂತ್‌ ಅವರು ಸೀಕ್ರೆಟ್‌ ರೂಮ್‌ನಲ್ಲಿದ್ದರು. ಅಲ್ಲಿಂದ ಅವರು ದೊಡ್ಮನೆಯಲ್ಲಿ ಏನು ನಡೆಯುತ್ತಿದೆ ಎಂದು ನೋಡುತ್ತಿದ್ದರು, ಆಮೇಲೆ ಟೀಂ ರಚನೆ ಮಾಡಿದ್ದರು. ತನ್ನಿಂದಲೇ ಎಲ್ಲ, ತಾನೇ ಎಲ್ಲ ಎಂದುಕೊಂಡ ರಕ್ಷಿತಾಗೆ ಉಳಿದವರು ಠಕ್ಕರ್‌ ಕೊಟ್ಟಿದ್ದಾರೆ.

 

Read Full Story

08:18 AM (IST) Dec 21

ಬೆಳಗಾವಿಯಲ್ಲಿ ಕೊನೆ ದಿನ 11 ಗಂಟೆ ಅಧಿವೇಶನ ನಡೆಸಿ ಹೊರಟ್ಟಿ ದಾಖಲೆ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಅಧಿವೇಶನದ ಕೊನೆಯ ದಿನ ಸತತ 11.10 ಗಂಟೆಗಳ ಕಾಲ ಸದನ ನಡೆಸಿ ಹೊಸ ದಾಖಲೆ ಬರೆದಿದ್ದಾರೆ. 45 ವರ್ಷಗಳ ಕಾಲ ಪರಿಷತ್ ಸದಸ್ಯರಾಗಿ ವಿಶ್ವದಾಖಲೆ ಹೊಂದಿರುವ ಹೊರಟ್ಟಿ, ಈ ಮೂಲಕ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

Read Full Story

08:13 AM (IST) Dec 21

Winter - ಚಳಿಗಾಲದಲ್ಲಿ ಈ ಟ್ರಿಕ್ಸ್‌ನಿಂದ ಮನೆ ಬೆಚ್ಚಗಿಡಿ, ಚಳಿ ನಿಮಿಷದಲ್ಲಿ ಓಡಿಹೋಗುತ್ತೆ

ಚಳಿಗಾಲದಲ್ಲಿ ರಾತ್ರಿ ಹೊತ್ತು ಮನೆ ಬೆಚ್ಚಗಿಡಲು ಕಿಟಕಿಗಳನ್ನು ಸರಿಯಾಗಿ ಮುಚ್ಚುವುದು, ದಪ್ಪ ಪರದೆಗಳನ್ನು ಬಳಸುವುದು ಮತ್ತು ನೆಲದ ಮೇಲೆ ರಗ್‌ಗಳನ್ನು ಹಾಕುವುದು ಮುಖ್ಯ. ಹೆಚ್ಚು ಚಳಿ ಇದ್ದರೆ, ಸುರಕ್ಷಿತವಾಗಿ ರೂಮ್ ಹೀಟರ್ ಬಳಸಬಹುದು.

Read Full Story

08:04 AM (IST) Dec 21

World Meditation Day 2025 - ಮಾನಸಿಕ ಆರೋಗ್ಯಕ್ಕೆ ಧ್ಯಾನವೊಂದೇ ಪರಿಹಾರ

ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿಮಗೆ ಬೆಲೆ ನೀಡಬೇಕು. ಮನಸ್ಸು ಬಲವಾಗಿದ್ದರೆ, ದುರ್ಬಲ ದೇಹವನ್ನೂ ಸಹ ಅದು ನೋಡಿಕೊಳ್ಳುತ್ತದೆ.   ಜೀವನದ ಬಗ್ಗೆ ನಿಮಗಿರುವ ದೃಷ್ಟಿಕೋನವನ್ನು ವಿಸ್ತರಿಸಿಕೊಳ್ಳಿ, ನಿಮ್ಮ ಆತ್ಮಶಕ್ತಿಯಲ್ಲಿ ವಿಶ್ವಾಸವನ್ನು ಇಡಿ. ಧ್ಯಾನವನ್ನು ಅಭ್ಯಾಸ ಮಾಡಿ.

Read Full Story

07:50 AM (IST) Dec 21

BBK 12 - ರಕ್ಷಿತಾ ಆಟದ ನಿಗೂಢ ತಂತ್ರಗಾರಿಕೆ ಬಿಚ್ಚಿಟ್ಟ ಧ್ರುವಂತ್‌ಗೆ ಫಿದಾ ಆದ್ರು ಗಿಲ್ಲಿ ಫ್ಯಾನ್ಸ್

ಸೀಕ್ರೆಟ್ ರೂಮ್‌ನಲ್ಲಿದ್ದ ಧ್ರುವಂತ್, ರಕ್ಷಿತಾ ಅವರ ಆಟದ ತಂತ್ರಗಾರಿಕೆಯನ್ನು ವೀಕೆಂಡ್ ಸಂಚಿಕೆಯಲ್ಲಿ ಬಹಿರಂಗಪಡಿಸಿದ್ದಾರೆ. ಫಿನಾಲೆಯಲ್ಲಿ ಗಿಲ್ಲಿ ಜೊತೆಗಿರಲು ರಕ್ಷಿತಾ, ಕಾವ್ಯಾ ಮತ್ತು ಸ್ಪಂದನಾ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಧ್ರುವಂತ್ ವಿವರಿಸಿದರು. 

Read Full Story

07:40 AM (IST) Dec 21

BBK 12 - ಫಿನಾಲೆ ಟೈಮ್‌ನಲ್ಲಿ ಟೇಸ್ಟ್‌ ಗೊತ್ತಾಗ್ತಿಲ್ಲ, ಕೊರೊನಾ ಬಂತಾ ಎಂದು ಚಿಂತೆಗೆ ಬಿದ್ದ Gilli Nata

Bigg Boss Kannada Season 12 Episode Update: ಬಿಗ್‌ ಬಾಸ್‌ ಮನೆಯಲ್ಲಿ ಸೂಪರ್‌ ಸಂಡೇ ವಿಥ್‌ ಸುದೀಪ ಎಪಿಸೋಡ್‌ ಸಖತ್‌ ಕಾಮಿಡಿಯಿಂದಲೇ ಶುರುವಾಗಿದೆ. ಹೌದು, ಇಂದು ಸ್ಪರ್ಧಿಗಳೆಲ್ಲ ಸಿಕ್ಕಾಪಟ್ಟೆ ನಕ್ಕಿದ್ದಾರೆ. ವಾಹಿನಿಯು ಪ್ರೋಮೋ ರಿಲೀಸ್‌ ಮಾಡಿದೆ.

Read Full Story

07:32 AM (IST) Dec 21

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ

ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಗೃಹಲಕ್ಷ್ಮೀ ಮಾತ್ರವಲ್ಲದೆ ಶಕ್ತಿ ಯೋಜನೆಯಲ್ಲೂ ಸರ್ಕಾರ ಜನರಿಗೆ ಮೋಸ ಮಾಡಿದೆ  ಹಣ ಬಿಡುಗಡೆಯಾಗುವವರೆಗೂ ಪ್ರತಿಭಟನೆಗೆ ಕರೆ..

Read Full Story

More Trending News