ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಜೋರಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯದ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ದೆಹಲಿಯಲ್ಲಿ ಅವರಿಬ್ಬರ ಮಧ್ಯೆ ಟಾಸ್ ಆಗಿದ್ದು, ಆ ವೇಳೆ ನಾವು ಇರಲಿಲ್ಲ. ಹಾಗಾಗಿ ಹೆಡ್ಡೋ, ಟೇಲೋ ಅವರನ್ನೇ ಕೇಳಿ ಎಂದು ಮಾರ್ಮಿಕವಾಗಿ ಹೇಳಿದರು. ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ಸಿಎಂ ಮತ್ತು ಡಿಸಿಎಂ ಅವರಿಬ್ಬರ ಮಧ್ಯೆ ಟಾಸ್ ಆಗಿದೆ. ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಆವಾಗ ಥರ್ಡ್ ಅಂಪೈರ್ ಕೂಡ ಇರಲಿಲ್ಲ. ಇಬ್ಬರೇ ಟಾಸ್ ಹಾಕಿದ್ದು, ಆ ವೇಳೆ ಹೆಡ್ ಬಿದ್ದಿದೆಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದಿದ್ದಾರೆ.
09:48 PM (IST) Dec 21
ಬಿಗ್ ಬಾಸ್ ತೆಲುಗು 9 ವಿನ್ನರ್ ಕಲ್ಯಾಣ್ ಪಡಾಲ: ಎಲ್ಲರೂ ಅಂದುಕೊಂಡಂತೆಯೇ ನಡೆದಿದೆ. ಬಹಳ ದಿನಗಳಿಂದ ಪ್ರಚಾರದಲ್ಲಿದ್ದಂತೆ ಪವನ್ ಕಲ್ಯಾಣ್ ಪಡಾಲ ವಿನ್ನರ್ ಆಗಿ ಟೈಟಲ್ ಗೆದ್ದಿದ್ದಾರೆ. ಸಾಮಾನ್ಯ ವ್ಯಕ್ತಿ ಬಿಗ್ ಬಾಸ್ ಟೈಟಲ್ ಗೆದ್ದಿದ್ದು ಇದು ಎರಡನೇ ಬಾರಿ.
09:20 PM (IST) Dec 21
ಆಶಿಕಾ ರಂಗನಾಥ್ ಸತತವಾಗಿ ಹೆಚ್ಚು ವಯಸ್ಸಿನ ಅಂತರವಿರುವ ನಟರೊಂದಿಗೆ ನಟಿಸುತ್ತಿದ್ದಾರೆ. ಈ ಬಗ್ಗೆ ಕೇಳಿದಾಗ ಅವರು ಇಂಟ್ರೆಸ್ಟಿಂಗ್ ಉತ್ತರ ನೀಡಿದ್ದಾರೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯಿರಿ.
08:34 PM (IST) Dec 21
ನಟ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ಡಿ.11ರಂದು ರಿಲೀಸ್ ಆಗಿ ಬಹಳಷ್ಟು ಸದ್ದು ಮಾಡಿತ್ತು. ಇದೀಗಗ ದರ್ಶನ್ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ 'ದಿ ಡೆವಿಲ್' ಪ್ರಚಾರ ಮಾಡಿದ್ದಾರೆ.
08:03 PM (IST) Dec 21
ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ರೈತರು ಹೊರ ಬರಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
07:32 PM (IST) Dec 21
ಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.
07:15 PM (IST) Dec 21
ರಾಜ್ಯ ಸರ್ಕಾರದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿ ಗೊಂದಲದ ಸಮಸ್ಯೆ ಬಗೆ ಹರಿಸಲು ಕಾಂಗ್ರೆಸ್ ಹೈಕಮಾಂಡ್ಗೆ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
07:06 PM (IST) Dec 21
ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
06:39 PM (IST) Dec 21
06:33 PM (IST) Dec 21
2025ನೇ ಇಸವಿ ಮುಗಿಯುತ್ತಾ ಬಂದಿದೆ. ಈ ವರ್ಷ ಒಂದೇ ಒಂದು ಸಿನಿಮಾ ಕೂಡ ರಿಲೀಸ್ ಮಾಡದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ಟಾಪ್ ನಟರು ಯಾರು ಯಾರು ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಕಾರಣವೇನು?
06:21 PM (IST) Dec 21
06:16 PM (IST) Dec 21
ಶಿಕ್ಷಣ ಸಚಿವನಾಗಿ ಎರಡೂವರೆ ವರ್ಷದಲ್ಲಿ ಶಿಕ್ಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಮಸ್ಯೆಗಳಿಗೆ ಸಾಕಷ್ಟು ಪ್ರಾಮಾಣಿಕವಾಗಿ ಸ್ಪಂದಿಸಿ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೈಗೊಂಡಿದ್ದೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
06:08 PM (IST) Dec 21
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ನಡುವೆ, ಭೈರವಿ ಅಮ್ಮನವರು ಡಿ.ಕೆ.ಶಿವಕುಮಾರ್ ಅವರ ಜಾತಕವನ್ನು ವಿಶ್ಲೇಷಿಸಿ, ಭವಿಷ್ಯವಾಣಿ ನುಡಿದಿದ್ದಾರೆ. ಅವರು ಹೇಳಿದ್ದೇನು?
05:54 PM (IST) Dec 21
2025ರಲ್ಲಿ ಹಲವು ಸಿನಿಮಾಗಳು 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದವು. ಆದರೆ, ಅವು ಬಾಕ್ಸ್ ಆಫೀಸ್ನಲ್ಲಿ ಸೋಲು ಮತ್ತು ಡಿಸಾಸ್ಟರ್ ಚಿತ್ರಗಳಾದವು. ಆ ಸಿನಿಮಾಗಳು ಯಾವುವು ಅಂತ ನೋಡೋಣ.
05:52 PM (IST) Dec 21
Actor Sreenivasan: ಮದುವೆಗೆ ಒಂದು ದಿನ ಇರುವವರೆಗೂ ತಾಳಿ ಖರೀದಿಸಲು ಹಣವಿರಲಿಲ್ಲ, ನನಗೆ ಸಹಾಯ ಮಾಡಿದ್ದು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸ್ನೇಹಿತರು ಎಂದು ಮಲಯಾಳಂ ನಟ ಶ್ರೀನಿವಾಸನ್ ಭಾವುಕರಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.
05:25 PM (IST) Dec 21
'ಅವತಾರ್: ಫೈರ್ ಅಂಡ್ ಆಶ್' ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಸಿನಿಮಾಗಳ ಮೇಲೆ ಇಂದು ಶತಕೋಟಿ ಡಾಲರ್ಗಳಷ್ಟು ಹಣ ಹೂಡಿಕೆ ಮಾಡಲಾಗುತ್ತೆ. ಆದರೆ ಅವರ ಆರಂಭದ ದಿನಗಳು ತುಂಬಾ ಕಷ್ಟಕರವಾಗಿದ್ದವು. ಕಾಲೇಜು ಬಿಟ್ಟು, ಟ್ರಕ್ ಓಡಿಸಿದ್ದು ಕೂಡ ಅವರ ಜೀವನದ ಒಂದು ಭಾಗವಾಗಿತ್ತು.
05:09 PM (IST) Dec 21
05:03 PM (IST) Dec 21
ಮಹಿಳಾ ಕಾಂಗ್ರೆಸ್ನ ವಿನೂತನ ಕಾರ್ಯ ಮೆಚ್ಚುವಂತಹದು. ಮಹಿಳಾ ಮೀಸಲಾತಿ ಜಾರಿಯಾದರೇ ರಾಜ್ಯದಲ್ಲಿ 75 ಮಹಿಳಾ ಶಾಸಕಿಯರು ಸದನದಲ್ಲಿರುತ್ತಿರಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
05:03 PM (IST) Dec 21
Amruthadhaare Kannada Serial Today Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್-ಭೂಮಿಕಾ ಕಥೆ ಎಲ್ಲೋ ಹೋಗ್ತಿದೆ. ಈ ಮಧ್ಯೆ ವೀಕ್ಷಕರು ಭೂಮಿ ಪಾತ್ರದ ಬಗ್ಗೆ ಬೇಸರವನ್ನು ಹೊರಹಾಕಿದ್ದಾರೆ. ಇದಕ್ಕೂ ಬಲವಾದ ಕಾರಣವಿದೆ. ಹಾಗಾದರೆ ಏನದು?
04:51 PM (IST) Dec 21
'ಧುರಂಧರ್' ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 2025ರ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರವಾಗಿದೆ. ಇದು ವಿಶ್ವಾದ್ಯಂತ 800 ಕೋಟಿ ರೂಪಾಯಿಗಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಚಿತ್ರವು ವಿಕ್ಕಿ ಕೌಶಲ್ ನಟನೆಯ 'ಛಾವಾ' ಚಿತ್ರವನ್ನು ಹಿಂದಿಕ್ಕಿದೆ.
04:40 PM (IST) Dec 21
ಮಂಗಳೂರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಐಟಿ ಪಾರ್ಕ್ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಆಹ್ವಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
04:33 PM (IST) Dec 21
South Stars Movie 2026: ಸೌತ್ ಸೂಪರ್ ಸ್ಟಾರ್ಗಳ ಹವಾ ಜೋರಾಗಿರಲಿದೆ. 2026ರಲ್ಲಿ ಹಲವು ದೊಡ್ಡ ಸಿನಿಮಾಗಳು ರಿಲೀಸ್ ಆಗಲಿವೆ. ಹಾಗಿದ್ರೆ ಆ ಸಿನಿಮಾಗಳು ಯಾವುವು? ಯಾವಾಗ ರಿಲೀಸ್ ಆಗಲಿವೆ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.
04:29 PM (IST) Dec 21
ಕೋಲ್ಕತ್ತಾದಲ್ಲಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘವನ್ನು ಬೇರೆ ಸಂಘಟನೆಗಳಿಗೆ ಹೋಲಿಸುವುದು ಅಥವಾ ಬಿಜೆಪಿಯ ಕನ್ನಡಕದಿಂದ ನೋಡುವುದು ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
04:28 PM (IST) Dec 21
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿ 9000 ಸೇರಿದಂತೆ ಹತ್ತು ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
04:21 PM (IST) Dec 21
ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರ ಇಚ್ಛಾಶಕ್ತಿ ಮತ್ತು ಪರಿಶ್ರಮದಿಂದ ಹೇಮಾವತಿ ನೀರು ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಮಾಗಡಿ ಕೆರೆಗಳಿಗೆ ಹರಿದಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಂತಸ ವ್ಯಕ್ತಪಡಿಸಿದರು.
03:12 PM (IST) Dec 21
ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ ,ತ್ರೈಮಾಸಿಕ ನಿರ್ವಹಣಾ ಕೆಲಸ ಕಾರಣ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಎಷ್ಟು ಗಂಟೆ, ಎಲ್ಲಿಲ್ಲಿ ವಿದ್ಯುತ್ ಕಡಿತ?
02:48 PM (IST) Dec 21
ಅನೇಕಲ್ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ, ಸರಣಿ ಅಪಘಾತ ನಡೆಸಿದರೂ ವಾಹನ ನಿಲ್ಲಿಸದೆ ತೆರಳಿದ ಚಾಲಕ, ಸ್ಥಳಯರು ಕಲ್ಲೆಸೆದು ವಾಹನ ನಿಲ್ಲಿಸಲಾಗಿದೆ. ಚಾಲಕ ಸೇರಿದಂತೆ ಹಲವರು ಗಂಭೀರ.
02:36 PM (IST) Dec 21
ಭಾರತೀಯ ಚಿತ್ರರಂಗದ ಟಾಪ್ 10 ನಾಯಕಿಯರ ಪಟ್ಟಿಯನ್ನು ಓರ್ಮಾಕ್ಸ್ ಮೀಡಿಯಾ ಸಂಸ್ಥೆ ಬಿಡುಗಡೆ ಮಾಡಿದೆ. ಒಂದಾದ ಮೇಲೆ ಒಂದರಂತೆ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ರಶ್ಮಿಕಾ ಮಂದಣ್ಣ ಅವರೇ ಎರಡನೇ ಸ್ಥಾನವನ್ನು ಪಡೆದಿದ್ದಾರೆ. ಯಾಕೆ?
02:01 PM (IST) Dec 21
ಸಿನಿಮಾಗಳಲ್ಲಿ, ಸೀರಿಯಲ್ಗಳಲ್ಲಿ ವಿಲನ್ ಆಗಿ ಅಬ್ಬರಿಸಿದ ಅನೇಕ ಕಲಾವಿದರು ರಿಯಲ್ ಲೈಫ್ನಲ್ಲಿ ನಿಜಕ್ಕೂ ಮಾನವೀಯ ಮೌಲ್ಯಗಳನ್ನು ಹೊಂದಿರುತ್ತಾರೆ, ಸಾಮಾಜಿಕ ಕೆಲಸಗಳನ್ನು ಮಾಡಿರುತ್ತಾರೆ ಎನ್ನೋದಿಕ್ಕೆ ನಟ ಸಯಾಜಿ ಶಿಂಧೆ ಉತ್ತಮ ಉದಾಹರಣೆ.
01:34 PM (IST) Dec 21
ಬಳ್ಳಾರಿಯಲ್ಲಿ ನಡೆದ ಕೆಇಎ ಎಫ್ಡಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಯಿತು. ಈ ವೇಳೆ, ವಿದ್ಯಾರ್ಥಿನಿಯರ ಕಾಲುಗೆಜ್ಜೆ ಹಾಗೂ ಅಭ್ಯರ್ಥಿಗಳ ಶಿವದಾರಗಳನ್ನು ತೆಗೆಸಿ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಿದ್ದು, ಇದು ಕೆಲವರ ಅಸಮಾಧಾನಕ್ಕೆ ಕಾರಣವಾಯಿತು.
01:17 PM (IST) Dec 21
ಸೀತಾರಾಮ ಸೀರಿಯಲ್ ಮೂಲಕ ಮನೆಮಾತಾದ ಬಾಲ ನಟಿ ರಿತು ಸಿಂಗ್ (ಸಿಹಿ), ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳಿಂದ ವಿವಾದಕ್ಕೆ ಕಾರಣವಾಗಿದ್ದಾಳೆ. ತನಗೆ ಸಿನಿಮಾ ನೋಡಲು ಸಮಯವಿಲ್ಲ ಎಂದು ಗತ್ತಿನಿಂದ ಉತ್ತರಿಸಿದ್ದು, ಆಕೆಯ ವರ್ತನೆ ಅತಿಯಾಯಿತು ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
12:51 PM (IST) Dec 21
ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು, ದ್ವೇಷ ಭಾಷಣ ತಡೆಗಟ್ಟಲು ಸರ್ಕಾರ ತರಲು ಹೊರಟಿರುವ ಹೊಸ ಕಾನೂನು ದುರುದ್ದೇಶದಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ಸಂವಿಧಾನಬದ್ಧ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಪ್ರಯತ್ನ, ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಬಳಸುವ ಸಾಧ್ಯತೆ ಇದೆ..
12:40 PM (IST) Dec 21
12:34 PM (IST) Dec 21
ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದ್ವೇಷಭಾಷಣ ತಡೆ ಮಸೂದೆಯನ್ನು ಜಾರಿಗೆ ತರಲಾಗಿದೆ. ಈ ವಿಧೇಯಕವು ಧರ್ಮ, ಜಾತಿ, ಅಥವಾ ಸಮುದಾಯದ ಆಧಾರದ ಮೇಲೆ ದ್ವೇಷ ಹರಡುವುದನ್ನು ತಡೆಯುವ ಗುರಿ ಹೊಂದಿದೆ ಎಂದು ಲೇಖನವು ಸ್ಪಷ್ಟಪಡಿಸುತ್ತದೆ.
12:22 PM (IST) Dec 21
Upendra's Tears: ರಿಯಲ್ ಸ್ಟಾರ್ ಉಪೇಂದ್ರ ಅವರು '45' ಸಿನಿಮಾ ಪ್ರಚಾರದ ವೇಳೆ, ತಾವು ಮೊದಲ ಬಾರಿಗೆ ಕಣ್ಣೀರು ಹಾಕಿದ ಕ್ಷಣವನ್ನು ಬಹಿರಂಗಪಡಿಸಿದ್ದಾರೆ. ತನ್ನ ವಿಚಾರಧಾರೆಗಳಿಗೂ ದ್ರೋಹ ಬಗೆಯಲಾಗದೆ ಸಂದಿಗ್ಧ ಪರಿಸ್ಥಿತಿಯಲ್ಲಿ ಅನುಭವಿಸಿದ ನೋವಿನಿಂದ ಅತ್ತಿದ್ದಾಗಿ ಅವರು ಹೇಳಿಕೊಂಡಿದ್ದಾರೆ.
12:12 PM (IST) Dec 21
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಚಿತ್ರವು ಇದೇ 25ಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರದ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರಕ್ಕೆ ಅವರು ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ತಮ್ಮ ಮೌನಕ್ಕೆ ಕಾರಣ ಹೇಳಿ ಖಡಕ್ ಆಗಿ ಉತ್ತರಿಸಿದ್ದಾರೆ.
12:07 PM (IST) Dec 21
Gruhalakshmi scheme 24th installment: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣವನ್ನು ಮುಂಬರುವ ಸೋಮವಾರದಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಮೃತ ಫಲಾನುಭವಿಗಳ ಖಾತೆಗೆ ಹಣ ಹೋಗುವುದನ್ನು ತಡೆಯಲು ಹೊಸ ಸಾಫ್ಟ್ವೇರ್ ಅಳವಡಿಸಲಾಗುತ್ತಿದೆ ಎಂದರು.
11:31 AM (IST) Dec 21
11:02 AM (IST) Dec 21
Bigg Boss Kannada Season 12 Episode: ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರದಿಂದಲೂ ಕಾವ್ಯ ಶೈವ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ನಡೆಯುತ್ತಲೇ ಇದೆ. ಇವರಿಬ್ಬರು ಸಾಕಷ್ಟು ಬಾರಿ ಜಗಳ ಆಡಿಕೊಂಡಿದ್ದಾರೆ. ಈ ವಾರ ಕೂಡ ಅದೇ ಆಯ್ತು. ಕಿಚ್ಚ ಸುದೀಪ್ ಕ್ಲಾಸ್ ಕೂಡ ತಗೊಂಡ್ರು.
10:58 AM (IST) Dec 21
ಮಂಗಳೂರು ಪೊಲೀಸರು ಮುಸ್ಲಿಂ ಸಂಘಟನೆಗಳನ್ನು ಮಾತ್ರ ಗುರಿಯಾಗಿಸಿ ಪ್ರತಿಭಟನೆಗೆ ಬಾಂಡ್ ಪಡೆಯುತ್ತಿದ್ದಾರೆ ಎಂಬ SDPI ಆರೋಪಕ್ಕೆ ಪೊಲೀಸ್ ಆಯುಕ್ತರು ಅಂಕಿ-ಅಂಶಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈವರೆಗೆ 521 ಹಿಂದೂಗಳು ಮತ್ತು 351 ಮುಸ್ಲಿಮರಿಂದ ಮುಚ್ಚಳಿಕೆ ಬರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ.
10:40 AM (IST) Dec 21
Sivakarthikeyan's car accident in Chennai: ಶಿವಕಾರ್ತಿಕೇಯನ್ ಪ್ರಯಾಣಿಸುತ್ತಿದ್ದ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದ್ದು, ಅವರೇ ಮಧ್ಯಸ್ಥಿಕೆ ವಹಿಸಿ ಜಗಳ ಬಗೆಹರಿಸಿದ್ದಾರೆ.