LIVE NOW
Published : Dec 21, 2025, 07:00 AM ISTUpdated : Dec 21, 2025, 09:48 PM IST

Karnataka News Live: ಭಾರತೀಯ ಸೈನಿಕ ಕಲ್ಯಾಣ್ ಪಡಾಲ ಬಿಗ್ ಬಾಸ್ ತೆಲುಗು 9ರ ವಿನ್ನರ್.. ಇತಿಹಾಸದಲ್ಲಿ 2ನೇ ಬಾರಿ ಸಂಚಲನ!

ಸಾರಾಂಶ

 

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ಜೋರಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಧ್ಯದ ಒಪ್ಪಂದದ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ದೆಹಲಿಯಲ್ಲಿ ಅವರಿಬ್ಬರ ಮಧ್ಯೆ ಟಾಸ್ ಆಗಿದ್ದು, ಆ ವೇಳೆ ನಾವು ಇರಲಿಲ್ಲ. ಹಾಗಾಗಿ ಹೆಡ್ಡೋ, ಟೇಲೋ ಅವರನ್ನೇ ಕೇಳಿ ಎಂದು ಮಾರ್ಮಿಕವಾಗಿ ಹೇಳಿದರು. ದೆಹಲಿಯ ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ಸಿಎಂ ಮತ್ತು ಡಿಸಿಎಂ ಅವರಿಬ್ಬರ ಮಧ್ಯೆ ಟಾಸ್ ಆಗಿದೆ. ನಾವು ಕ್ಯಾಪ್ಟನ್ ಜಾಗದಲ್ಲಿ ಇಲ್ಲ. ಆವಾಗ ಥರ್ಡ್‌ ಅಂಪೈರ್ ಕೂಡ ಇರಲಿಲ್ಲ. ಇಬ್ಬರೇ ಟಾಸ್ ಹಾಕಿದ್ದು, ಆ ವೇಳೆ ಹೆಡ್ ಬಿದ್ದಿದೆಯೋ ಟೇಲ್ ಬಿದ್ದಿದೆಯೋ ಅವರನ್ನೇ ಕೇಳಬೇಕು ಎಂದಿದ್ದಾರೆ.

09:48 PM (IST) Dec 21

ಭಾರತೀಯ ಸೈನಿಕ ಕಲ್ಯಾಣ್ ಪಡಾಲ ಬಿಗ್ ಬಾಸ್ ತೆಲುಗು 9ರ ವಿನ್ನರ್.. ಇತಿಹಾಸದಲ್ಲಿ 2ನೇ ಬಾರಿ ಸಂಚಲನ!

ಬಿಗ್ ಬಾಸ್ ತೆಲುಗು 9 ವಿನ್ನರ್ ಕಲ್ಯಾಣ್ ಪಡಾಲ: ಎಲ್ಲರೂ ಅಂದುಕೊಂಡಂತೆಯೇ ನಡೆದಿದೆ. ಬಹಳ ದಿನಗಳಿಂದ ಪ್ರಚಾರದಲ್ಲಿದ್ದಂತೆ ಪವನ್ ಕಲ್ಯಾಣ್ ಪಡಾಲ ವಿನ್ನರ್ ಆಗಿ ಟೈಟಲ್ ಗೆದ್ದಿದ್ದಾರೆ. ಸಾಮಾನ್ಯ ವ್ಯಕ್ತಿ ಬಿಗ್ ಬಾಸ್ ಟೈಟಲ್ ಗೆದ್ದಿದ್ದು ಇದು ಎರಡನೇ ಬಾರಿ.

Read Full Story

09:20 PM (IST) Dec 21

30 ವರ್ಷ ವಯಸ್ಸಿನ ಅಂತರವಿರುವ ಮೂವರು ಹೀರೋಗಳೊಂದಿಗೆ ರೊಮ್ಯಾನ್ಸ್.. ಆಶಿಕಾ ರಂಗನಾಥ್ ರಿಯಾಕ್ಷನ್ ವೈರಲ್

ಆಶಿಕಾ ರಂಗನಾಥ್ ಸತತವಾಗಿ ಹೆಚ್ಚು ವಯಸ್ಸಿನ ಅಂತರವಿರುವ ನಟರೊಂದಿಗೆ ನಟಿಸುತ್ತಿದ್ದಾರೆ. ಈ ಬಗ್ಗೆ ಕೇಳಿದಾಗ ಅವರು ಇಂಟ್ರೆಸ್ಟಿಂಗ್ ಉತ್ತರ ನೀಡಿದ್ದಾರೆ. ಆ ವಿವರಗಳನ್ನು ಈ ಲೇಖನದಲ್ಲಿ ತಿಳಿಯಿರಿ.

Read Full Story

08:34 PM (IST) Dec 21

ದರ್ಶನ್ ಇಲ್ದೇ ಇರುವಾಗ ಕೆಲವೊಬ್ರು ಏನೇನೋ ಮಾತಾಡ್ತಾರೆ - ಕಿಚ್ಚ ಸುದೀಪ್‌ಗೆ ಪರೋಕ್ಷವಾಗಿ ಟಕ್ಕರ್ ಕೊಟ್ರಾ ವಿಜಯಲಕ್ಷ್ಮಿ

ನಟ ದರ್ಶನ್ ಅಭಿನಯದ ದಿ ಡೆವಿಲ್ ಸಿನಿಮಾ ಡಿ.11ರಂದು ರಿಲೀಸ್ ಆಗಿ ಬಹಳಷ್ಟು ಸದ್ದು ಮಾಡಿತ್ತು. ಇದೀಗಗ ದರ್ಶನ್ ಅವರ ಅನುಪಸ್ಥಿತಿಯಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ 'ದಿ ಡೆವಿಲ್' ಪ್ರಚಾರ ಮಾಡಿದ್ದಾರೆ.

Read Full Story

08:03 PM (IST) Dec 21

ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ - ಸಿಎಂ ಸಿದ್ದರಾಮಯ್ಯ ಸಲಹೆ

ರೈತರು ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕಾಗಿದೆ‌. ರಸಗೊಬ್ಬರ ಬಳಕೆಯಿಂದ ಹೆಚ್ಚಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ರೈತರು ಹೊರ ಬರಬೇಕಾಗಿದೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Read Full Story

07:32 PM (IST) Dec 21

ಉಡುಪಿಯಲ್ಲಿ ಮಿನಿ ಕುಂಭ.. ಶ್ರೀಲ ಪ್ರಭುಪಾದರಿಗೆ 'ವಿಶ್ವಗುರು' ಗೌರವ - ಪುತ್ತಿಗೆ ಮಠದಲ್ಲಿ ಐತಿಹಾಸಿಕ ಕ್ಷಣ

ಕೃಷ್ಣನ ಭಕ್ತಿ ವೇದಾಂತ ಸಾರವನ್ನು ತಮ್ಮ ಉಪನ್ಯಾಸ ಹಾಗೂ ಭಕ್ತಿ ಚಳುವಳಿಯ ಮೂಲಕ ಪಸರಿಸಿದ ಶ್ರೀಲ ಪ್ರಭುಪಾದರು ನಿಜಾರ್ಥದಲ್ಲಿಯೇ ವಿಶ್ವಗುರುವಾಗಿದ್ದಾರೆ ಎಂದು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

Read Full Story

07:15 PM (IST) Dec 21

ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ - ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ರಾಜ್ಯ ಸರ್ಕಾರದಲ್ಲಿ ಉದ್ಭವಿಸಿರುವ ಮುಖ್ಯಮಂತ್ರಿ ಕುರ್ಚಿ ಗೊಂದಲದ ಸಮಸ್ಯೆ ಬಗೆ ಹರಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಏಕೆ ಸಾಧ್ಯವಾಗುತ್ತಿಲ್ಲ ಎಂಬ ಪ್ರಶ್ನೆ ಮೂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Read Full Story

07:06 PM (IST) Dec 21

ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ - ಸಂಸದ ಬೊಮ್ಮಾಯಿ

ಕೃಷ್ಣಾ ಮೇಲ್ದಂಡೆ ಯೋಜನೆ ಮೊದಲನೇ ಹಂತ ಪೂರ್ಣ ಮಾಡಲು ಕಾಂಗ್ರೆಸ್ 50 ವರ್ಷ ತೆಗೆದುಕೊಂಡಿದ್ದು, ಎರಡನೇ ಹಂತದ ಯೋಜನೆ ಕೂಡಾ ಪೂರ್ಣ ಮಾಡಲು ಆಗಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Read Full Story

06:39 PM (IST) Dec 21

Bigg Boss ಅಬ್ಬಬ್ಬಾ, ಕೊನೆಗೂ ಸುದೀಪ್​ ಎದುರೇ ಕಾವ್ಯಾಗೆ ಪ್ರಪೋಸ್​ ಮಾಡಿದ ಗಿಲ್ಲಿ- ಮದ್ವೆ ಊಟ ಯಾವಾಗ?

ಬಿಗ್​ಬಾಸ್​ ಮನೆಯಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರ ತಮಾಷೆಯ ಲವ್​ಸ್ಟೋರಿ ಜನಪ್ರಿಯವಾಗಿದೆ. ಇತ್ತೀಚೆಗೆ, ನಿರೂಪಕ ಸುದೀಪ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ, ಗಿಲ್ಲಿ ನಟ ಕವನದ ಮೂಲಕ ಕಾವ್ಯಾಗೆ ಪ್ರೇಮ ನಿವೇದನೆ ಮಾಡಿ, ಎಲ್ಲರಿಗೂ ಮತ್ತು ಕಾವ್ಯಾಗೆ ಶಾಕ್ ನೀಡಿದ್ದಾರೆ.
Read Full Story

06:33 PM (IST) Dec 21

ಯಶ್ To ಪ್ರಭಾಸ್‌ - 2025ರಲ್ಲಿ ಒಂದೂ ಸಿನಿಮಾ ರಿಲೀಸ್ ಮಾಡದೆ ನಿರಾಸೆ ಮೂಡಿಸಿದ ಟಾಪ್ ಹೀರೋಗಳು!

2025ನೇ ಇಸವಿ ಮುಗಿಯುತ್ತಾ ಬಂದಿದೆ. ಈ ವರ್ಷ ಒಂದೇ ಒಂದು ಸಿನಿಮಾ ಕೂಡ ರಿಲೀಸ್ ಮಾಡದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ ಟಾಪ್ ನಟರು ಯಾರು ಯಾರು ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಕಾರಣವೇನು?

Read Full Story

06:21 PM (IST) Dec 21

ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ

1948ರಲ್ಲಿ ಮುದ್ರಣಗೊಂಡ ಮುಸ್ಲಿಂ ಸಮುದಾಯದ ವಿವಾಹ ಆಹ್ವಾನ ಪತ್ರಿಕೆಯೊಂದು ಶುದ್ಧ ಕನ್ನಡದಲ್ಲಿರುವುದು ಇದೀಗ ವೈರಲ್ ಆಗಿದೆ. ಕಾಸರಗೋಡಿನ ಈ ಪತ್ರಿಕೆಯು ಗಡಿನಾಡ ಕನ್ನಡಿಗರ ಕನ್ನಡ ಪ್ರೇಮಕ್ಕೆ ಸಾಕ್ಷಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
Read Full Story

06:16 PM (IST) Dec 21

ಶಿಕ್ಷಕರ, ಶಿಕ್ಷಣ ಸಂಸ್ಥೆಗಳ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವೆ - ಸಚಿವ ಮಧು ಬಂಗಾರಪ್ಪ

ಶಿಕ್ಷಣ ಸಚಿವನಾಗಿ ಎರಡೂವರೆ ವರ್ಷದಲ್ಲಿ ಶಿಕ್ಷಕರ ಹಾಗೂ ಶೈಕ್ಷಣಿಕ ಸಂಸ್ಥೆಗಳ ಸಮಸ್ಯೆಗಳಿಗೆ ಸಾಕಷ್ಟು ಪ್ರಾಮಾಣಿಕವಾಗಿ ಸ್ಪಂದಿಸಿ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೈಗೊಂಡಿದ್ದೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Read Full Story

06:08 PM (IST) Dec 21

ಡಿಕೆಶಿ ಕುಂಡಲಿಯಲ್ಲಿ ಷಷ್ಠ ಸ್ಥಾನದಲ್ಲಿ ಶನಿ - ರಾಜಕೀಯ ಭವಿಷ್ಯವೇನು? CM ಖುರ್ಚಿ ಯಾರಿಗೆ? ಭೈರವಿ ಅಮ್ಮ ಸ್ಫೋಟಕ ನುಡಿ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಇದರ ನಡುವೆ, ಭೈರವಿ ಅಮ್ಮನವರು ಡಿ.ಕೆ.ಶಿವಕುಮಾರ್ ಅವರ ಜಾತಕವನ್ನು ವಿಶ್ಲೇಷಿಸಿ, ಭವಿಷ್ಯವಾಣಿ ನುಡಿದಿದ್ದಾರೆ.  ಅವರು ಹೇಳಿದ್ದೇನು?

Read Full Story

05:54 PM (IST) Dec 21

2025ರಲ್ಲಿ 100 ಕೋಟಿಗೂ ಹೆಚ್ಚು ಗಳಿಸಿಯೂ ಅಟ್ಟರ್ ಫ್ಲಾಪ್ ಆದ ಟಾಪ್ 5 ಸಿನಿಮಾಗಳು!

2025ರಲ್ಲಿ ಹಲವು ಸಿನಿಮಾಗಳು 100 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದವು. ಆದರೆ, ಅವು ಬಾಕ್ಸ್ ಆಫೀಸ್‌ನಲ್ಲಿ ಸೋಲು ಮತ್ತು ಡಿಸಾಸ್ಟರ್ ಚಿತ್ರಗಳಾದವು. ಆ ಸಿನಿಮಾಗಳು ಯಾವುವು ಅಂತ ನೋಡೋಣ.

Read Full Story

05:52 PM (IST) Dec 21

ಮುಸ್ಲಿಂ, ಕ್ರಿಶ್ಚಿಯನ್‌ ಸಹಾಯದಿಂದಲೇ ನನ್ನ ಮದುವೆಗೆ ತಾಳಿ ಖರೀದಿಸಿದ್ದೆ - Actor Sreenivasan

Actor Sreenivasan: ಮದುವೆಗೆ ಒಂದು ದಿನ ಇರುವವರೆಗೂ ತಾಳಿ ಖರೀದಿಸಲು ಹಣವಿರಲಿಲ್ಲ, ನನಗೆ ಸಹಾಯ ಮಾಡಿದ್ದು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸ್ನೇಹಿತರು ಎಂದು ಮಲಯಾಳಂ ನಟ ಶ್ರೀನಿವಾಸನ್ ಭಾವುಕರಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

 

Read Full Story

05:25 PM (IST) Dec 21

ಟ್ರಕ್ ಡ್ರೈವರ್ ಕೋಟ್ಯಾಧಿಪತಿ ನಿರ್ದೇಶಕನಾಗಿದ್ದು ಹೇಗೆ? ಇಲ್ಲಿದೆ ಅವತಾರ್ ಖ್ಯಾತಿಯ ಜೇಮ್ಸ್ ಕ್ಯಾಮರೂನ್ ಯಶೋಗಾಥೆ

'ಅವತಾರ್: ಫೈರ್ ಅಂಡ್ ಆಶ್' ನಿರ್ದೇಶಕ ಜೇಮ್ಸ್ ಕ್ಯಾಮರೂನ್ ಸಿನಿಮಾಗಳ ಮೇಲೆ ಇಂದು ಶತಕೋಟಿ ಡಾಲರ್‌ಗಳಷ್ಟು ಹಣ ಹೂಡಿಕೆ ಮಾಡಲಾಗುತ್ತೆ. ಆದರೆ ಅವರ ಆರಂಭದ ದಿನಗಳು ತುಂಬಾ ಕಷ್ಟಕರವಾಗಿದ್ದವು. ಕಾಲೇಜು ಬಿಟ್ಟು, ಟ್ರಕ್ ಓಡಿಸಿದ್ದು ಕೂಡ ಅವರ ಜೀವನದ ಒಂದು ಭಾಗವಾಗಿತ್ತು.

Read Full Story

05:09 PM (IST) Dec 21

ಅತ್ಯಧಿಕ ಹಣದ ಆಫರ್​ ಕೊಟ್ರೂ ಯುವತಿಯರ 'ಡ್ರೀಮ್​ ಬಾಯ್'​ ಮುಕೇಶ್​ ಗೌಡ Bigg Bossಗೆ ಹೋಗದ ಕಾರಣ ರಿವೀಲ್​

ಕಿರುತೆರೆ ಹಾಗೂ ಸ್ಯಾಂಡಲ್‌ವುಡ್ ನಟ ಮುಕೇಶ್ ಗೌಡ ಅವರಿಗೆ ಕನ್ನಡ ಮತ್ತು ತೆಲುಗು ಬಿಗ್‌ಬಾಸ್‌ನಿಂದ ಆಫರ್ ಬಂದಿತ್ತು. ಅಧಿಕ ಸಂಭಾವನೆ ನೀಡಿದರೂ, ಆಟದ ಪರಿಕಲ್ಪನೆ ಮತ್ತು ಗೆಲ್ಲುವ ತಂತ್ರ ಅರ್ಥವಾಗದ ಕಾರಣ ಅವರು ಈ ಆಫರ್‌ಗಳನ್ನು ತಿರಸ್ಕರಿಸಿದ್ದಾರೆ ಎಂದು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
Read Full Story

05:03 PM (IST) Dec 21

ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು - ಸಚಿವ ಶಿವರಾಜ ತಂಗಡಗಿ

ಮಹಿಳಾ ಕಾಂಗ್ರೆಸ್‍ನ ವಿನೂತನ ಕಾರ್ಯ ಮೆಚ್ಚುವಂತಹದು. ಮಹಿಳಾ ಮೀಸಲಾತಿ ಜಾರಿಯಾದರೇ ರಾಜ್ಯದಲ್ಲಿ 75 ಮಹಿಳಾ ಶಾಸಕಿಯರು ಸದನದಲ್ಲಿರುತ್ತಿರಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

Read Full Story

05:03 PM (IST) Dec 21

Amruthadhaare Serial - ಅಷ್ಟು ಸುಳಿವು ಸಿಕ್ಕರೂ ಭೂಮಿಕಾ ಸುಮ್ನಿರೋದ್ಯಾಕೆ? ಸಿಡಿದೆದ್ದ ವೀಕ್ಷಕರು

Amruthadhaare Kannada Serial Today Episode: ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್-ಭೂಮಿಕಾ ಕಥೆ ಎಲ್ಲೋ ಹೋಗ್ತಿದೆ. ಈ ಮಧ್ಯೆ ವೀಕ್ಷಕರು ಭೂಮಿ ಪಾತ್ರದ ಬಗ್ಗೆ ಬೇಸರವನ್ನು ಹೊರಹಾಕಿದ್ದಾರೆ. ಇದಕ್ಕೂ ಬಲವಾದ ಕಾರಣವಿದೆ. ಹಾಗಾದರೆ ಏನದು?

 

Read Full Story

04:51 PM (IST) Dec 21

800 ಕೋಟಿ ಕ್ಲಬ್‌ಗೆ ಎಂಟ್ರಿ ಕೊಟ್ಟ ಧುರಂಧರ್ ಸಿನಿಮಾ.. ಅಗ್ರಸ್ಥಾನದಲ್ಲಿ ಕಾಂತಾರ ಚಾಪ್ಟರ್ 1

'ಧುರಂಧರ್' ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 2025ರ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಬಾಲಿವುಡ್ ಚಿತ್ರವಾಗಿದೆ. ಇದು ವಿಶ್ವಾದ್ಯಂತ 800 ಕೋಟಿ ರೂಪಾಯಿಗಿಂತ ಹೆಚ್ಚು ಕಲೆಕ್ಷನ್ ಮಾಡಿದೆ. ಈ ಚಿತ್ರವು ವಿಕ್ಕಿ ಕೌಶಲ್ ನಟನೆಯ 'ಛಾವಾ' ಚಿತ್ರವನ್ನು ಹಿಂದಿಕ್ಕಿದೆ.

Read Full Story

04:40 PM (IST) Dec 21

ಐಟಿ ಪಾರ್ಕ್ ಗುತ್ತಿಗೆ 30 ವರ್ಷ, ವಿಸ್ತರಣೆಗೂ ಅವಕಾಶ - ಸಚಿವ ಪ್ರಿಯಾಂಕ್‌ ಖರ್ಗೆ

ಮಂಗಳೂರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಐಟಿ ಪಾರ್ಕ್‌ ವಾಣಿಜ್ಯ ಕಚೇರಿ ನಿರ್ಮಾಣಕ್ಕೆ ಈಗಾಗಲೇ ಟೆಂಡರ್‌ ಆಹ್ವಾನಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Read Full Story

04:33 PM (IST) Dec 21

Upcoming South Movies 2026 - ಹೊಸ ವರ್ಷಕ್ಕೆ ಸ್ಟಾರ್‌ಗಳ ಬಹುನಿರೀಕ್ಷಿತ ಸಿನಿಮಾಗಳ ರಿಲೀಸ್‌ ದಿನಾಂಕ

South Stars Movie 2026: ಸೌತ್ ಸೂಪರ್‌ ಸ್ಟಾರ್‌ಗಳ ಹವಾ ಜೋರಾಗಿರಲಿದೆ. 2026ರಲ್ಲಿ ಹಲವು ದೊಡ್ಡ ಸಿನಿಮಾಗಳು ರಿಲೀಸ್ ಆಗಲಿವೆ. ಹಾಗಿದ್ರೆ ಆ ಸಿನಿಮಾಗಳು ಯಾವುವು? ಯಾವಾಗ ರಿಲೀಸ್‌ ಆಗಲಿವೆ? ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. 

 

Read Full Story

04:29 PM (IST) Dec 21

ಬಿಜೆಪಿಯ ಲೆನ್ಸ್‌ ಒಳಗಿಂದ ಆರ್‌ಎಸ್‌ಎಸ್‌ನ್ನು ಅರ್ಥ ಮಾಡಿಕೊಳ್ಳುವುದು ದೊಡ್ಡ ತಪ್ಪು - ಮೋಹನ್ ಭಾಗವತ್

ಕೋಲ್ಕತ್ತಾದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘವನ್ನು ಬೇರೆ ಸಂಘಟನೆಗಳಿಗೆ ಹೋಲಿಸುವುದು ಅಥವಾ ಬಿಜೆಪಿಯ ಕನ್ನಡಕದಿಂದ ನೋಡುವುದು ತಪ್ಪು ತಿಳುವಳಿಕೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

Read Full Story

04:28 PM (IST) Dec 21

ರಸ್ತೆ ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿ ನೇಮಕ - ಸಚಿವ ರಾಮಲಿಂಗಾರೆಡ್ಡಿ

ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿ 9000 ಸೇರಿದಂತೆ ಹತ್ತು ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

Read Full Story

04:21 PM (IST) Dec 21

83 ಕೆರೆಗಳಿಗೆ ನೀರು ಹರಿಯಲು ಡಿಕೆ ಬ್ರದರ್ಸ್ ಇಚ್ಛಾಶಕ್ತಿ ಕಾರಣ - ಶಾಸಕ ಎಚ್.ಸಿ.ಬಾಲಕೃಷ್ಣ ಸಂತಸ

ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರ ಇಚ್ಛಾಶಕ್ತಿ ಮತ್ತು ಪರಿಶ್ರಮದಿಂದ ಹೇಮಾವತಿ ನೀರು ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ ಮಾಗಡಿ ಕೆರೆಗಳಿಗೆ ಹರಿದಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಸಂತಸ ವ್ಯಕ್ತಪಡಿಸಿದರು.

Read Full Story

03:12 PM (IST) Dec 21

ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ

ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ ,ತ್ರೈಮಾಸಿಕ ನಿರ್ವಹಣಾ ಕೆಲಸ ಕಾರಣ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಎಷ್ಟು ಗಂಟೆ, ಎಲ್ಲಿಲ್ಲಿ ವಿದ್ಯುತ್ ಕಡಿತ?

Read Full Story

02:48 PM (IST) Dec 21

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ, ಸರಣಿ ಅಪಘಾತ ನಡೆಸಿದರೂ ವಾಹನ ನಿಲ್ಲಿಸದೆ ತೆರಳಿದ ಚಾಲಕ, ಸ್ಥಳಯರು ಕಲ್ಲೆಸೆದು ವಾಹನ ನಿಲ್ಲಿಸಲಾಗಿದೆ. ಚಾಲಕ ಸೇರಿದಂತೆ ಹಲವರು ಗಂಭೀರ.

Read Full Story

02:36 PM (IST) Dec 21

ಸದ್ಯ ಸಿನಿಮಾಗಳನ್ನು ಮಾಡದೆ, ರಶ್ಮಿಕಾ ಮಂದಣ್ಣರನ್ನೇ ಬೀಟ್‌ ಮಾಡಿದ ಸೌಥ್‌ ನಟಿ ಯಾರು?

ಭಾರತೀಯ ಚಿತ್ರರಂಗದ ಟಾಪ್ 10 ನಾಯಕಿಯರ ಪಟ್ಟಿಯನ್ನು ಓರ್ಮಾಕ್ಸ್ ಮೀಡಿಯಾ ಸಂಸ್ಥೆ ಬಿಡುಗಡೆ ಮಾಡಿದೆ. ಒಂದಾದ ಮೇಲೆ ಒಂದರಂತೆ ಹಿಟ್‌ ಸಿನಿಮಾಗಳನ್ನು ನೀಡುತ್ತಿರುವ ರಶ್ಮಿಕಾ ಮಂದಣ್ಣ ಅವರೇ ಎರಡನೇ ಸ್ಥಾನವನ್ನು ಪಡೆದಿದ್ದಾರೆ. ಯಾಕೆ?

 

Read Full Story

02:01 PM (IST) Dec 21

ಸಿನಿಮಾದಲ್ಲಿ ವಿಲನ್, ರಿಯಲ್ ಲೈಫ್ ಹೀರೋ - ತಾಯಿ ತೂಕದಷ್ಟೇ ಸಸ್ಯ ಬೀಜ ಕ್ರಾಂತಿ ಮಾಡಿದ 'ಉಪ್ಪಿ 2' ನಟ Sayaji Shinde‌

ಸಿನಿಮಾಗಳಲ್ಲಿ, ಸೀರಿಯಲ್‌ಗಳಲ್ಲಿ ವಿಲನ್‌ ಆಗಿ ಅಬ್ಬರಿಸಿದ ಅನೇಕ ಕಲಾವಿದರು ರಿಯಲ್‌ ಲೈಫ್‌ನಲ್ಲಿ ನಿಜಕ್ಕೂ ಮಾನವೀಯ ಮೌಲ್ಯಗಳನ್ನು ಹೊಂದಿರುತ್ತಾರೆ, ಸಾಮಾಜಿಕ ಕೆಲಸಗಳನ್ನು ಮಾಡಿರುತ್ತಾರೆ ಎನ್ನೋದಿಕ್ಕೆ ನಟ ಸಯಾಜಿ ಶಿಂಧೆ ಉತ್ತಮ ಉದಾಹರಣೆ.

Read Full Story

01:34 PM (IST) Dec 21

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ - ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

ಬಳ್ಳಾರಿಯಲ್ಲಿ ನಡೆದ ಕೆಇಎ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಯಿತು. ಈ ವೇಳೆ, ವಿದ್ಯಾರ್ಥಿನಿಯರ ಕಾಲುಗೆಜ್ಜೆ ಹಾಗೂ ಅಭ್ಯರ್ಥಿಗಳ ಶಿವದಾರಗಳನ್ನು ತೆಗೆಸಿ ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡಿದ್ದು, ಇದು ಕೆಲವರ ಅಸಮಾಧಾನಕ್ಕೆ ಕಾರಣವಾಯಿತು.

Read Full Story

01:17 PM (IST) Dec 21

ಲಕ್ಷಾಂತರ ಮಂದಿ ಹೃದಯ ಕದ್ದ ಸೀತಾರಾಮ 'ಸಿಹಿ' ಇವಳೇನಾ? ಫ್ಯಾನ್ಸ್​ ಗರಂ- ತಿರುಗಿಬಿದ್ದದ್ದು ಯಾಕೆ?

ಸೀತಾರಾಮ ಸೀರಿಯಲ್ ಮೂಲಕ ಮನೆಮಾತಾದ ಬಾಲ ನಟಿ ರಿತು ಸಿಂಗ್ (ಸಿಹಿ), ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳಿಂದ ವಿವಾದಕ್ಕೆ ಕಾರಣವಾಗಿದ್ದಾಳೆ. ತನಗೆ ಸಿನಿಮಾ ನೋಡಲು ಸಮಯವಿಲ್ಲ ಎಂದು ಗತ್ತಿನಿಂದ ಉತ್ತರಿಸಿದ್ದು, ಆಕೆಯ ವರ್ತನೆ ಅತಿಯಾಯಿತು ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Read Full Story

12:51 PM (IST) Dec 21

Hate Speech Bill - ಒಬ್ಬ ವ್ಯಕ್ತಿಯ ಮಾತನ್ನು ದ್ವೇಷಭಾಷಣ ಅಂತ ಹೇಗೆ ಸಾಬೀತು ಮಾಡುತ್ತೀರಿ

ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರು, ದ್ವೇಷ ಭಾಷಣ ತಡೆಗಟ್ಟಲು ಸರ್ಕಾರ ತರಲು ಹೊರಟಿರುವ ಹೊಸ ಕಾನೂನು ದುರುದ್ದೇಶದಿಂದ ಕೂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದು ಸಂವಿಧಾನಬದ್ಧ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿಯುವ ಪ್ರಯತ್ನ, ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಬಳಸುವ ಸಾಧ್ಯತೆ ಇದೆ..

Read Full Story

12:40 PM (IST) Dec 21

Bigg Boss ಫ್ರೆಂಡ್​ಶಿಪ್​ ಚಾಲೆಂಜ್​ನಲ್ಲಿ ಗೆಲ್ಲೋರು ಯಾರು? ಇಂಥ ಸವಾಲು ಹಾಕೋ ಜಗತ್ತಿನ ಏಕೈಕ ವ್ಯಕ್ತಿನಾ ಗಿಲ್ಲಿ?

ಬಿಗ್‌ಬಾಸ್ ಮನೆಯಲ್ಲಿ ಗಿಲ್ಲಿ ನಟ, ಮ್ಯೂಟೆಂಟ್ ರಘು ಅವರಿಗೆ ವಿಶಿಷ್ಟವಾದ ಚಾಲೆಂಜ್ ಹಾಕಿದ್ದಾರೆ. ತನ್ನನ್ನು ಸ್ನೇಹಿತನಾಗಿ ಸ್ವೀಕರಿಸಬೇಕೆಂಬ ಗಿಲ್ಲಿಯ ಸವಾಲಿಗೆ, ಶೋ ಮುಗಿದ ನಂತರ ಒಂದು ವಾರ ತಮ್ಮ ಮನೆಯಲ್ಲಿ ಉಳಿದುಕೊಳ್ಳುವಂತೆ ರಘು ಪ್ರತಿ-ಸವಾಲು ಹಾಕಿದ್ದಾರೆ.
Read Full Story

12:34 PM (IST) Dec 21

Hate Speech Bill - ಸರ್ವಜನಾಂಗ ಶಾಂತಿಯ ತೋಟ ಆಗಲು ಈ ಮಸೂದೆ ಬೇಕೇಬೇಕು

ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದ್ವೇಷಭಾಷಣ ತಡೆ ಮಸೂದೆಯನ್ನು ಜಾರಿಗೆ ತರಲಾಗಿದೆ. ಈ ವಿಧೇಯಕವು ಧರ್ಮ, ಜಾತಿ, ಅಥವಾ ಸಮುದಾಯದ ಆಧಾರದ ಮೇಲೆ ದ್ವೇಷ ಹರಡುವುದನ್ನು ತಡೆಯುವ ಗುರಿ ಹೊಂದಿದೆ ಎಂದು ಲೇಖನವು ಸ್ಪಷ್ಟಪಡಿಸುತ್ತದೆ.

Read Full Story

12:22 PM (IST) Dec 21

ಕೊನೆಯ ಬಾರಿ ಅತ್ತಿದ್ದನ್ನು ಹೇಳಿಕೊಂಡ ಉಪೇಂದ್ರ; ಈಗ ಕಣ್ಣೀರು ಬತ್ತಿದೆ ಎಂದ ರಿಯಲ್ ಸ್ಟಾರ್

Upendra's Tears: ರಿಯಲ್ ಸ್ಟಾರ್ ಉಪೇಂದ್ರ ಅವರು '45' ಸಿನಿಮಾ ಪ್ರಚಾರದ ವೇಳೆ, ತಾವು ಮೊದಲ ಬಾರಿಗೆ ಕಣ್ಣೀರು ಹಾಕಿದ ಕ್ಷಣವನ್ನು ಬಹಿರಂಗಪಡಿಸಿದ್ದಾರೆ. ತನ್ನ ವಿಚಾರಧಾರೆಗಳಿಗೂ ದ್ರೋಹ ಬಗೆಯಲಾಗದೆ ಸಂದಿಗ್ಧ ಪರಿಸ್ಥಿತಿಯಲ್ಲಿ ಅನುಭವಿಸಿದ ನೋವಿನಿಂದ ಅತ್ತಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

Read Full Story

12:12 PM (IST) Dec 21

ನಾನು ಸೈಲೆಂಟ್​ ಇರೋದು ಬಾಯಿ ಇಲ್ಲ ಅಂತಲ್ಲ, ಹೇಗೆ ತಟ್ಟಬೇಕೆನ್ನೋದು ಗೊತ್ತಿದೆ - ಸುದೀಪ್​ ಖಡಕ್​ ವಾರ್ನಿಂಗ್​!

ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಚಿತ್ರವು ಇದೇ 25ಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರದ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರಕ್ಕೆ ಅವರು ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ತಮ್ಮ ಮೌನಕ್ಕೆ ಕಾರಣ ಹೇಳಿ ಖಡಕ್ ಆಗಿ ಉತ್ತರಿಸಿದ್ದಾರೆ.

Read Full Story

12:07 PM (IST) Dec 21

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ

Gruhalakshmi scheme 24th installment: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣವನ್ನು ಮುಂಬರುವ ಸೋಮವಾರದಿಂದ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಮೃತ ಫಲಾನುಭವಿಗಳ ಖಾತೆಗೆ ಹಣ ಹೋಗುವುದನ್ನು ತಡೆಯಲು ಹೊಸ ಸಾಫ್ಟ್‌ವೇರ್ ಅಳವಡಿಸಲಾಗುತ್ತಿದೆ ಎಂದರು.

Read Full Story

11:31 AM (IST) Dec 21

ಬೆಳಗಾವಿ ಡಿಸಿ ಟಾರ್ಗೆಟ್; ಎಂಇಎಸ್ ಪರ ನಿಂತು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ ಮಹಾರಾಷ್ಟ್ರದ ಸಂಸದ ಮಾನೆ!

ಎಂಇಎಸ್ 'ಕರಾಳ ದಿನ'ಕ್ಕೆ ತಡೆ ಒಡ್ಡಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿರುದ್ಧ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಹಕ್ಕುಚ್ಯುತಿ ದೂರು ದಾಖಲಿಸಿದ್ದಾರೆ. ತಮಗೆ ಬೆಳಗಾವಿ ಪ್ರವೇಶ ನಿರಾಕರಿಸಿ ಸಂಸದರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ್ದಾರೆ.
Read Full Story

11:02 AM (IST) Dec 21

BBK 12 - ಪಿತ್ತ ನೆತ್ತಿಗೇರಿತು; ಇದು ಸರಿಯಲ್ಲ ಎಂದು ಅಶ್ವಿನಿ ಗೌಡಗೆ ವಾರ್ನಿಂಗ್‌ ಕೊಟ್ಟ Kiccha Sudeep

Bigg Boss Kannada Season 12 Episode: ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ವಾರದಿಂದಲೂ ಕಾವ್ಯ ಶೈವ ಹಾಗೂ ಅಶ್ವಿನಿ ಗೌಡ ಮಧ್ಯೆ ಜಗಳ ನಡೆಯುತ್ತಲೇ ಇದೆ. ಇವರಿಬ್ಬರು ಸಾಕಷ್ಟು ಬಾರಿ ಜಗಳ ಆಡಿಕೊಂಡಿದ್ದಾರೆ. ಈ ವಾರ ಕೂಡ ಅದೇ ಆಯ್ತು. ಕಿಚ್ಚ ಸುದೀಪ್‌ ಕ್ಲಾಸ್‌ ಕೂಡ ತಗೊಂಡ್ರು.

Read Full Story

10:58 AM (IST) Dec 21

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚ ಬಾಂಡ್ - ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!

ಮಂಗಳೂರು ಪೊಲೀಸರು ಮುಸ್ಲಿಂ ಸಂಘಟನೆಗಳನ್ನು ಮಾತ್ರ ಗುರಿಯಾಗಿಸಿ ಪ್ರತಿಭಟನೆಗೆ ಬಾಂಡ್ ಪಡೆಯುತ್ತಿದ್ದಾರೆ ಎಂಬ SDPI ಆರೋಪಕ್ಕೆ ಪೊಲೀಸ್ ಆಯುಕ್ತರು ಅಂಕಿ-ಅಂಶಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಈವರೆಗೆ 521 ಹಿಂದೂಗಳು ಮತ್ತು 351 ಮುಸ್ಲಿಮರಿಂದ ಮುಚ್ಚಳಿಕೆ ಬರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Read Full Story

10:40 AM (IST) Dec 21

Amaran ಹೀರೋ ಶಿವಕಾರ್ತಿಕೇಯನ್ ಕಾರ್ ಅಪಘಾತ; ಚೆನ್ನೈ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Sivakarthikeyan's car accident in Chennai: ಶಿವಕಾರ್ತಿಕೇಯನ್ ಪ್ರಯಾಣಿಸುತ್ತಿದ್ದ ಕಾರು ಮುಂದಿನ ಕಾರಿಗೆ ಡಿಕ್ಕಿ ಹೊಡೆದಿದ್ದು, ಅವರೇ ಮಧ್ಯಸ್ಥಿಕೆ ವಹಿಸಿ ಜಗಳ ಬಗೆಹರಿಸಿದ್ದಾರೆ.

Read Full Story

More Trending News