ಬೆಂಗಳೂರು: ಆದಾಯ ಹೆಚ್ಚಳ ಮತ್ತು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದೊಂದಿಗೆ ಬಿಎಂಟಿಸಿ ಜಾರಿ ಮಾಡಿರುವ ಯುಪಿಐ ಆಧಾರಿತ ವ್ಯವಸ್ಥೆ ಬಳಸಿ ನಿಗಮಕ್ಕೆ ಸೇರಬೇಕಾದ ಹಣ ತಮ್ಮ ಖಾತೆಗೆ ವರ್ಗಾಯಿಸುತ್ತಿದ್ದ ಮೂವರು ನಿರ್ವಾಹಕರನ್ನು ನಿಗಮ ಅಮಾನತು ಮಾಡಿದೆ.
ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದೊಂದಿಗೆ ಬಿಎಂಟಿಸಿ ಹಲವು ತಿಂಗಳಿನಿಂದ ಯುಪಿಐ ಆಧಾರಿತ ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಿದೆ. ಆದರೆ, ಈ ಯುಪಿಐ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ನಿರ್ವಾಹಕರಾದ ಸುರೇಶ್, ಅಶ್ಫಕ್ ಖಾನ್ ಮತ್ತು ಚಾಲಕ ಕಂ ನಿರ್ವಾಹಕ ಮಂಚೇಗೌಡ ಅವರು ಪ್ರಯಾಣಿಕರಿಗೆ ತಮ್ಮ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್ ಅನ್ನು ನೀಡಿ ಪ್ರಯಾಣಿಕರು ಪಾವತಿಸುತ್ತಿದ್ದ ಪ್ರಯಾಣ ಶುಲ್ಕ ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಮೂಲಕ ಬಿಎಂಟಿಸಿ ಬ್ಯಾಂಕ್ ಖಾತೆಗೆ ಹೋಗಬೇಕಿದ್ದ 1.04 ಲಕ್ಷವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನೂ ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಜತೆಗೆ ಇಲಾಖಾ ವಿಚಾರಣೆಗೂ ಆದೇಶಿಸಲಾಗಿದೆ.
12:02 AM (IST) Jan 22
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಅಭಿಯಂತರ ಅಂದಾನಗೌಡ ಪಾಟೀಲರಿಗೆ ಧಾರವಾಡ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದೆ.
11:31 PM (IST) Jan 21
ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಸಹಯೋಗದಲ್ಲಿ 'ಡಿಸ್ಕವರಿ ಕೊಪ್ಪಳ' ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳು, ಪೌರಾಣಿಕ ಹಾಗೂ ಪ್ರಾಗೈತಿಹಾಸಿಕ ಸ್ಥಳಗಳನ್ನು ನಾಡಿಗೆ ಪರಿಚಯಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
11:02 PM (IST) Jan 21
ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ಜಮೀನು ವಿವಾದವೊಂದು ಕೊಲೆಯಲ್ಲಿ ಅಂತ್ಯವಾಗಿದೆ. ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ದ್ವೇಷಕ್ಕೆ ನಾಗಪ್ಪ ಗೌಡ ಎಂಬಾತ, ಮಾರುತಿ ಹೆಗಡೆ ಎಂಬುವವರನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಈ ಸಂಬಂಧ ಮೃತರ ಪುತ್ರಿ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
10:32 PM (IST) Jan 21
ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುದ್ವೇಷ ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾನವ ಬಂಧುತ್ವ ವೇದಿಕೆಯಿಂದ ದೂರು. ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
10:09 PM (IST) Jan 21
10:06 PM (IST) Jan 21
ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಹಾಗೂ ನಟ ಉಗ್ರಂ ಮಂಜು, ಟ್ರಾನ್ಸ್ಪ್ಲಾಂಟ್ ಕೋ-ಆರ್ಡಿನೇಟರ್ ಆಗಿರುವ ಸಾಯಿ ಸಂಧ್ಯಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಜನವರಿ 23 ರಂದು ಧರ್ಮಸ್ಥಳದಲ್ಲಿ ನಡೆಯಲಿರುವ ವಿವಾಹಕ್ಕೂ ಮುನ್ನ, ಅವರ ಮನೆಯಲ್ಲಿ ಅರಿಶಿಣ ಶಾಸ್ತ್ರ ಸರಳವಾಗಿ ನೆರವೇರಿದೆ.
09:27 PM (IST) Jan 21
09:07 PM (IST) Jan 21
ಹಾಸನದಲ್ಲಿ ಶಾಲಾ ಬಾಲಕಿಯೊಬ್ಬಳನ್ನು ಅಪರಿಚಿತನೋರ್ವ ಮನೆ ಬಾಗಿಲವರೆಗೂ ಹಿಂಬಾಲಿಸಿದ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಸೃಷ್ಟಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.
08:39 PM (IST) Jan 21
ದಾವಣಗೆರೆಯಲ್ಲಿನ ಡ್ರಗ್ಸ್ ಮತ್ತು ಪಡಿತರ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ ತಮ್ಮ ಆಪ್ತರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮೌನ ಮುರಿದಿದ್ದಾರೆ. ತಪ್ಪು ಮಾಡಿದವರು ಯಾರೇ ಆಗಿರಲಿ, ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ.
08:27 PM (IST) Jan 21
08:00 PM (IST) Jan 21
ಬಿಗ್ಬಾಸ್ 12ರ ಸ್ಪರ್ಧಿಗಳನ್ನು ಪ್ರಾಣಿಗಳಿಗೆ ಹೋಲಿಸಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ವೊಂದು ವೈರಲ್ ಆಗಿದೆ. ಈ ಕಲ್ಪನೆಯ ಪ್ರಕಾರ, ಕಿಚ್ಚ ಸುದೀಪ್ ಸಿಂಹವಾದರೆ, ವಿನ್ನರ್ ಗಿಲ್ಲಿ ನಟ ಹುಲಿಯಾಗಿದ್ದಾರೆ. ಆದರೆ, ಅಶ್ವಿನಿ ಗೌಡ ಅವರ ಬಗ್ಗೆ ಹೆಚ್ಚು ಚರ್ಚಿಸಲಾಗುತ್ತಿದೆ.
07:57 PM (IST) Jan 21
07:35 PM (IST) Jan 21
ಬಿಎಂಟಿಸಿ 'ಶಕ್ತಿ' ಯೋಜನೆಯಲ್ಲಿ ಬೃಹತ್ ವಂಚನೆ! ಮಹಿಳೆಯರ ಉಚಿತ ಟಿಕೆಟ್ ಬಳಸಿ, ತಮ್ಮದೇ ಕ್ಯೂಆರ್ ಕೋಡ್ ಮೂಲಕ ಕಂಡಕ್ಟರ್ಗಳು ಲಕ್ಷಾಂತರ ಲೂಟಿ ಮಾಡಿದ್ದು ಹೇಗೆ? ಪೂರ್ತಿ ವಿವರ ತಿಳಿಯಿರಿ.
07:34 PM (IST) Jan 21
ಸಚಿವ ಸ್ಥಾನ ಪಡೆದ ಬಳಿಕ ಈಡಿಗ ಸಮುದಾಯವನ್ನು ನಿರ್ಲಕ್ಷಿಸಿದ್ದಾರೆಂದು ಸಚಿವ ಶಿವರಾಜ್ ತಂಗಡಗಿ ವಿರುದ್ಧ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀ ಪ್ರಣವಾನಂದ ಸ್ವಾಮೀಜಿಗಳ ಪಾದಯಾತ್ರೆಗೆ ಬೆಂಬಲ ನೀಡಿ, ಸಮುದಾಯದ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ.
07:16 PM (IST) Jan 21
ಬಿಗ್ ಬಾಸ್ ಖ್ಯಾತಿಯ ಡಾಗ್ ಸತೀಶ್, ಅನುಬಂಧ ವೇದಿಕೆಯಲ್ಲಿ ತಮ್ಮ ದುಬಾರಿ ಉಡುಪು ಮತ್ತು ವೈಯಕ್ತಿಕ ಜೀವನದ ಬಗ್ಗೆ ಎಂದಿನಂತೆ ಬಡಾಯಿ ಕೊಚ್ಚಿಕೊಂಡಿದ್ದಾರೆ. ಆದರೆ, ಅಂತಿಮವಾಗಿ ವೇದಿಕೆಯಲ್ಲೇ ತಾನು ಹೇಳುವುದೆಲ್ಲಾ ಸುಳ್ಳು ಎಂದು ಒಪ್ಪಿಕೊಂಡಿದ್ದಾರೆ.
07:08 PM (IST) Jan 21
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಉತ್ಖನನವು ಹಾವುಗಳ ಪ್ರತ್ಯಕ್ಷದಿಂದ ನಿಗೂಢ ತಿರುವು ಪಡೆದಿದೆ. 'ನಿಧಿಯನ್ನು ಹಾವು ಕಾಯುತ್ತವೆ' ಎಂಬ ಸ್ಥಳೀಯರ ನಂಬಿಕೆ ಕುರಿತು ಪರಿಶೀಲನೆ ಮಾಡಿ, ಜಾಗೃತಿ ಮೂಡಿಸಲು ಮೈಸೂರಿನ ಶಿವರಾಜ್ ನೇತೃತ್ವದ ಉರಗ ರಕ್ಷಣಾ ತಂಡವು ಆಗಮಿಸಿದೆ.
06:59 PM (IST) Jan 21
ರಾಜ್ಯಾದ್ಯಂತ ಪ್ರಸಿದ್ಧವಾದ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ 24 ರಿಂದ ಮಾರ್ಚ್ 4 ರವರೆಗೆ ನಡೆಯಲಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಗದ್ದುಗೆ ಮಂಟಪ ನಿರ್ಮಿಸಲಾಗುತ್ತಿದ್ದು, ಭಕ್ತರಿಗಾಗಿ ವಸತಿ, ಅನ್ನಸಂತರ್ಪಣೆ ಹಾಗೂ ಭದ್ರತೆ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ.
06:39 PM (IST) Jan 21
ಬೆಂಗಳೂರು: ತನ್ನ ಅದ್ಭುತ ನಟನೆಯ ಮೂಲಕವೇ ಕನ್ನಡ ನಾಡಿನಾದ್ಯಂತ ಅಭಿಮಾನಿಗಳ ಜನಮನ ಗೆದ್ದ ಹೊಸ ತಲೆಮಾರಿನ ಕನ್ನಡದ ಟಾಪ್-7 ನಟಿಯರು ಯಾವ ಜಿಲ್ಲೆಯವರು ಹಾಗೆ ಯಾವ ಜಾತಿಯವರು ಎನ್ನುವುದನ್ನು ನೋಡೋಣ ಬನ್ನಿ.
06:34 PM (IST) Jan 21
Karnataka Maharashtra Border Row ಸುಪ್ರೀಂ ಕೋರ್ಟ್ನಲ್ಲಿ ನಡೆಯಬೇಕಿದ್ದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಅರ್ಜಿ ವಿಚಾರಣೆ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ನ್ಯಾಯಮೂರ್ತಿಗಳು ಬೇರೆ ಪ್ರಕರಣಗಳಲ್ಲಿ ನಿರತರಾಗಿದ್ದೇ ಇದಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆಯು ಗಡಿ ಹೋರಾಟಗಾರರ ಅಸಮಾಧಾನಕ್ಕೆ ಕಾರಣ.
06:22 PM (IST) Jan 21
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನ ಸ್ಥಳದಲ್ಲಿ ವಾನರ ಸೇನೆ ಕಾಣಿಸಿಕೊಂಡು ಕುತೂಹಲ ಮೂಡಿಸಿದೆ. ಈ ಉತ್ಖನನದಲ್ಲಿ ಚಾಲುಕ್ಯ ಶೈಲಿಯ ತಾಮ್ರದ ಶಿವಲಿಂಗ, ನಾಗನ ಕಲ್ಲುಗಳು ಸೇರಿದಂತೆ ಹಲವು ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.
05:57 PM (IST) Jan 21
ಮಂಡ್ಯದ ಮೈಷುಗರ್ ಕಾರ್ಖಾನೆಯಲ್ಲಿ 2021-22ನೇ ಸಾಲಿನಿಂದ ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಗಳು ಮತ್ತು ಅಕ್ರಮಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ತನಿಖಾ ಸಮಿತಿಯನ್ನು ರಚಿಸಿದೆ. ನಿವೃತ್ತ ಸಕ್ಕರೆ ಆಯುಕ್ತ ಶೇಖರ್ ಗಾಯಕ್ವಾಡ್ ಅಧ್ಯಕ್ಷತೆಯ ಈ ಸಮಿತಿಯು 15 ದಿನಗಳಲ್ಲಿ ವರದಿ ಸಲ್ಲಿಸಲಿದೆ.
05:48 PM (IST) Jan 21
ಉಡುಪಿ: ಕರಾವಳಿಯ ಕುವರಿ, ಬಿಗ್ ಬಾಸ್ ಸೀಸನ್ 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿಗೆ ತವರಿನಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಅಭಿಮಾನಿಗಳು ರಕ್ಷಿತಾ ಶೆಟ್ಟಿಗೆ ತಮ್ಮ ನೆಚ್ಚಿನ ಬಂಗುಡೆ ಮೀನು ಕೊಟ್ಟು ಸ್ವಾಗತಿಸಿದ್ದು, ಹೆಚ್ಚು ಗಮನ ಸೆಳೆದಿದೆ.
05:20 PM (IST) Jan 21
ಧಾರವಾಡದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆಂದು ನಂಬಲಾಗಿದ್ದ NWKSRTC ಚಾಲಕ ಬಾಬಾಜಾನ್ ಚಿನ್ನೂರು ಅವರ ಸಾವಿನಲ್ಲಿ ಹೊಸ ತಿರುವು ಸಿಕ್ಕಿದೆ. ಸೆಯ ವಿರುದ್ಧವೇ ದೂರು ನೀಡಿದ್ದು, ಸತ್ಯಾಸತ್ಯತೆ ತಿಳಿಯಲು ಹೂತಿಟ್ಟ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
05:06 PM (IST) Jan 21
ಬೆಳಗಾವಿಯ ಅಥಣಿಯಲ್ಲಿ ಖಾಸಗಿ ಪ್ಯಾರಾಮೆಡಿಕಲ್ ಕಾಲೇಜಿನ ಉಪನ್ಯಾಸಕನೊಬ್ಬ, ತನ್ನದೇ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಕರೆದುಕೊಂಡು ಪರಾರಿಯಾಗಿದ್ದಾನೆ. ಘಟನೆ ನಡೆದು 11 ದಿನ ಕಳೆದರೂ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆ.
04:47 PM (IST) Jan 21
ಸಚಿವ ಹಾಗೂ ನ್ಯಾಷನಲ್ ಟ್ರಾವೆಲ್ಸ್ ಮಾಲೀಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಜೈದ್ ಖಾನ್, ತಮ್ಮ ತಂದೆಯ ಕುತೂಹಲಕಾರಿ ಪ್ರಸಂಗವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಟ್ರಾವೆಲ್ಸ್ ಬಸ್ಸುಗಳಲ್ಲಿ ನಡೆಯುತ್ತಿದ್ದ ವಂಚನೆಯನ್ನು ಪತ್ತೆಹಚ್ಚಲು, ಜಮೀರ್ ಅವರೇ ಬುರ್ಖಾ ಧರಿಸಿ ಪ್ರಯಾಣಿಕರಂತೆ ಬಸ್ ಹತ್ತಿದ್ದರು.
04:43 PM (IST) Jan 21
ಜಾಗತಿಕ ಮನ್ನಣೆ ಪಡೆದ ಮೈಸೂರು ರೇಷ್ಮೆ ಸೀರೆಗಳಿಗೆ ಅಭೂತಪೂರ್ವ ಬೇಡಿಕೆ ಸೃಷ್ಟಿ, ಸೀರೆ ಕೊಳ್ಳಲು ಗ್ರಾಹಕರು ಮುಂಜಾನೆಯಿಂದಲೇ ಕಾರ್ಖಾನೆಯ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಬೇಡಿಕೆಗೆ ತಕ್ಕಂತೆ ಸೀರೆಗಳನ್ನು ಪೂರೈಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಕ್ಕೆ ಆಕ್ರೋಶ.
04:29 PM (IST) Jan 21
04:18 PM (IST) Jan 21
04:05 PM (IST) Jan 21
ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರು ಕುಂಚೇನಹಳ್ಳಿ ಬಳಿ ಸರಣಿ ಅಪಘಾತಕ್ಕೀಡಾಗಿದೆ. ಹಿಂಬದಿಯಿಂದ ಬಂದ ಖಾಸಗಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಸದರ ಕಾರು ಮುಂದಿದ್ದ ಪೊಲೀಸ್ ಬೆಂಗಾವಲು ವಾಹನಕ್ಕೆ ಗುದ್ದಿದೆ. ಅದೃಷ್ಟವಶಾತ್ ಸಂಸದರು ಯಾವುದೇ ಅಪಾಯವಾಗಿಲ್ಲ.
03:29 PM (IST) Jan 21
03:17 PM (IST) Jan 21
ಇನ್ಸ್ಟಾಗ್ರಾಮ್ನಲ್ಲಿ ಫಿಟ್ನೆಸ್ ಇನ್ಫ್ಲುಯೆನ್ಸರ್ ಯುವತಿಯೊಬ್ಬರಿಗೆ ಹರಿಯಾಣ ಮೂಲದ ಸುಧೀರ್ ನಿರಂತರ ಕಿರುಕುಳ ನೀಡಿದ್ದಾನೆ. ಯುವತಿ ಬೆಂಗಳೂರಿನಲ್ಲಿದ್ದಾಗ ಇನ್ಸ್ಟಾಗ್ರಾಮ್ ಲೊಕೇಶನ್ ಆಧರಿಸಿ ಹರಿಯಾಣದಿಂದ ಬಂದು ಯುವತಿ ಹಿಂಬಾಲಿಸುತ್ತಿದ್ದನು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
02:50 PM (IST) Jan 21
02:17 PM (IST) Jan 21
ಬೆಳಗಾವಿಯಲ್ಲಿ, ತನ್ನ ಅಕ್ಕನನ್ನು ಪ್ರೀತಿಸಿ ಪೀಡಿಸುತ್ತಿದ್ದ ಅರ್ಚಕನನ್ನು ಅಪ್ರಾಪ್ತ ಯುವಕನೊಬ್ಬ ಕೊ*ಲೆ ಮಾಡಿದ್ದಾನೆ. ಮತ್ತೊಂದೆಡೆ, ಹಾಸನದಲ್ಲಿ ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ ಕಾಮುಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
02:07 PM (IST) Jan 21
01:36 PM (IST) Jan 21
01:36 PM (IST) Jan 21
ದಾವಣಗೆರೆಯಲ್ಲಿ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿದ ಆರೋಪದ ಮೇಲೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಆಪ್ತ ಮೊಹಮ್ಮದ್ ಜಮೀರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಚಿವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
01:07 PM (IST) Jan 21
01:05 PM (IST) Jan 21
01:04 PM (IST) Jan 21
ಸೋಷಿಯಲ್ ಮೀಡಿಯಾದಲ್ಲಿ ಅವ್ಯಾಚ್ಯ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ, ನ್ಯಾಯಾಧೀಶರ ಮುಂದೆ 164ನೇ ಕಲಂನಡಿ ಹೇಳಿಕೆ ದಾಖಲಿಸುವಂತೆ ಅವರಿಗೆ ಸೂಚಿಸಲಾಗಿದೆ.
12:52 PM (IST) Jan 21
ಗುಜರಾತ್ ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಕೋರಮಂಗಲ ಆರ್.ಟಿ.ಒ ಅಧಿಕಾರಿ ನಿಸಾರ್ ಅಹಮದ್ ಅಮಾನತು. ಈ ಭ್ರಷ್ಟಾಚಾರವನ್ನು ಸುವರ್ಣ ನ್ಯೂಸ್ ಸಾಕ್ಷಿ ಸಮೇತ ಬಯಲಿಗೆಳೆದ ನಂತರ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ. ಈ ಹಗರಣದಿಂದಾಗಿ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಎದುರಾಗಿದೆ.