ಬೆಂಗಳೂರು: ಆದಾಯ ಹೆಚ್ಚಳ ಮತ್ತು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದೊಂದಿಗೆ ಬಿಎಂಟಿಸಿ ಜಾರಿ ಮಾಡಿರುವ ಯುಪಿಐ ಆಧಾರಿತ ವ್ಯವಸ್ಥೆ ಬಳಸಿ ನಿಗಮಕ್ಕೆ ಸೇರಬೇಕಾದ ಹಣ ತಮ್ಮ ಖಾತೆಗೆ ವರ್ಗಾಯಿಸುತ್ತಿದ್ದ ಮೂವರು ನಿರ್ವಾಹಕರನ್ನು ನಿಗಮ ಅಮಾನತು ಮಾಡಿದೆ.
ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದೊಂದಿಗೆ ಬಿಎಂಟಿಸಿ ಹಲವು ತಿಂಗಳಿನಿಂದ ಯುಪಿಐ ಆಧಾರಿತ ಪೇಮೆಂಟ್ ವ್ಯವಸ್ಥೆ ಜಾರಿಗೊಳಿಸಿದೆ. ಆದರೆ, ಈ ಯುಪಿಐ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ನಿರ್ವಾಹಕರಾದ ಸುರೇಶ್, ಅಶ್ಫಕ್ ಖಾನ್ ಮತ್ತು ಚಾಲಕ ಕಂ ನಿರ್ವಾಹಕ ಮಂಚೇಗೌಡ ಅವರು ಪ್ರಯಾಣಿಕರಿಗೆ ತಮ್ಮ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್ ಅನ್ನು ನೀಡಿ ಪ್ರಯಾಣಿಕರು ಪಾವತಿಸುತ್ತಿದ್ದ ಪ್ರಯಾಣ ಶುಲ್ಕ ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಈ ಮೂಲಕ ಬಿಎಂಟಿಸಿ ಬ್ಯಾಂಕ್ ಖಾತೆಗೆ ಹೋಗಬೇಕಿದ್ದ 1.04 ಲಕ್ಷವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನೂ ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿದೆ. ಜತೆಗೆ ಇಲಾಖಾ ವಿಚಾರಣೆಗೂ ಆದೇಶಿಸಲಾಗಿದೆ.
09:31 AM (IST) Jan 21
09:04 AM (IST) Jan 21
ಪುರಾತನ ಮಡಿಕೆಗಳ ಅವಶೇಷಗಳು ಪತ್ತೆಯಾಗಿವೆ. ಈ ಹಿಂದೆ ಬಂಗಾರದ ಆಭರಣಗಳು ಮತ್ತು ಶಿವಲಿಂಗ ಪತ್ತೆಯಾಗಿದ್ದ ಸ್ಥಳದಲ್ಲಿ ಈಗ ಸಿಕ್ಕಿರುವ ಮಡಿಕೆಗಳು, ಚಾಲುಕ್ಯರ ಕಾಲದ ಈ ಐತಿಹಾಸಿಕ ಗ್ರಾಮದ ಬಗ್ಗೆ ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿವೆ.
08:57 AM (IST) Jan 21
ಕರ್ನಾಟಕದ ಹೆಮ್ಮೆಯ ಮೈಸೂರು ಸಿಲ್ಕ್ ಸೀರೆಗಾಗಿ ಗ್ರಾಹಕರು ನಗರದ ಶೋರೂಂ ಮುಂದೆ ಮುಂಜಾನೆ 4 ಗಂಟೆಯಿಂದಲೇ ಕ್ಯೂ ನಿಂತಿದ್ದು, ಈ ವಿಡಿಯೋ ವೈರಲ್ ಆಗಿದೆ. ಅಧಿಕೃತ ಮಳಿಗೆಗಳಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ.
08:47 AM (IST) Jan 21
08:23 AM (IST) Jan 21
ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯು ಮುಕ್ತಾಯಗೊಂಡದ್ದು, ಅರ್ಧ ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಇದೇ ವೇಳೆ, ಮಂಡ್ಯ ನಗರದಲ್ಲಿ ಹಿಂದೂ ಸಮಾಜದ ಏಕತೆ ಮತ್ತು ಸಂಸ್ಕೃತಿ ಜಾಗೃತಿಗಾಗಿ ಬೃಹತ್ ಹಿಂದೂ ಸಮಾಜೋತ್ಸವವನ್ನು ಆಯೋಜಿಸಲಾಗಿದೆ.
08:08 AM (IST) Jan 21
ಸಚಿವ ಎನ್.ಚಲುವರಾಯಸ್ವಾಮಿ ಅವರು, ಯುಪಿಎ ಸರ್ಕಾರದ 56 ಲಕ್ಷ ಕೋಟಿ ರು. ಸಾಲ ಬಿಜೆಪಿ ಆಡಳಿತದಲ್ಲಿ 300 ಲಕ್ಷ ಕೋಟಿಗೆ ಏರಿದ್ದು, ದೇಶದ ಅರ್ಥವ್ಯವಸ್ಥೆ ಅಧೋಗತಿಗೆ ಇಳಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
07:45 AM (IST) Jan 21
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಿಂದೂ ಸಂಸ್ಕೃತಿ ಉಳಿಸುವ ಕೆಲಸ ಮಾಡಿರುವುದಾಗಿ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪ್ರತಿ ಗ್ರಾಮಕ್ಕೆ ₹5 ರಿಂದ ₹10 ಕೋಟಿ ಅಭಿವೃದ್ಧಿ ಕಾಮಗಾರಿಗಳನ್ನು ತರುವ ಮೂಲಕ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿರುವುದಾಗಿ ತಿಳಿಸಿದರು.
07:25 AM (IST) Jan 21
ಸೈಬರ್ ವಂಚಕರ ಪಾಲಾಗುತ್ತಿದ್ದ 2.16 ಕೋಟಿ ರು.ಗಳನ್ನು ‘ಗೋಲ್ಡನ್ ಅವರ್’ನಲ್ಲಿ ರಕ್ಷಣೆ ಮಾಡುವಲ್ಲಿ ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋರ್ಟ್ ಅನುಮತಿ ಪಡೆದು ಡಾ.ರೆಡ್ಡೀಸ್ ಲ್ಯಾಬೋರೇಟರೀಸ್ಗೆ ಸೇರಿದ್ದ 2.16 ಕೋಟಿ ರು.ಗಳನ್ನು ವರ್ಗಾಯಿಸಲಾಗಿದೆ
07:23 AM (IST) Jan 21
ಬೆಂಗಳೂರಿನ ಪ್ರವಾಸಿಗರಿಗಾಗಿ ಲಂಡನ್ ಮಾದರಿಯ 'ಅಂಬಾರಿ ಡಬಲ್ ಡೆಕ್ಕರ್' ಬಸ್ಸುಗಳ ಸಂಚಾರವನ್ನು ಆರಂಭಿಸಿದೆ. ಈ ಬಸ್ಸುಗಳು ಲಾಲ್ಬಾಗ್, ವಿಧಾನಸೌಧದಂತಹ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲಿದ್ದು, ನಿಗಮದ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.