LIVE NOW
Published : Jul 21, 2026, 06:41 AM ISTUpdated : Jul 21, 2026, 08:34 PM IST

Karnataka News Live: ಬೆಂಗಳೂರಿನ 1 BHK ಮನೆಗೆ ಇಬ್ಬರು ಪುರುಷ ರೂಮ್‌ಮೇಟ್‌ ಬೇಕಾಗಿದ್ದಾರೆ - ಪೋಸ್ಟರ್ ವೈರಲ್

ಸಾರಾಂಶ

ಬೆಂಗಳೂರು: ರಾಜ್ಯದಲ್ಲಿ ಬರಗಾಲ ತೀವ್ರಗೊಂಡಿದ್ದು, ರಾಜ್ಯ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಸೋಮವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಇಡೀ ರಾಜ್ಯದ ಯಾವುದೇ ಜಲಾಶಯ, ಅಣೆಕಟ್ಟುಗಳಲ್ಲಿ ನೀರಿಲ್ಲ. ಬಿತ್ತಿದ ಬಿತ್ತನೆ ಬೀಜ ಮೊಳಕೆ ಒಡೆದು ಹಾಳಾಗಿದೆ. ಶೇ.10ರಷ್ಟು ಫಸಲು ಬರದಂಥ ಸ್ಥಿತಿ ಇದೆ. ಇಷ್ಟು ತೀವ್ರ ಬರಗಾಲವಿದ್ದರೂ ಈ ಸರ್ಕಾರ ಮೌನವಾಗಿದೆ. ಈವರೆಗೆ ಏನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸರ್ಕಾರವು ಪ್ರತಿ ರೈತರಿಗೆ ಕನಿಷ್ಠ 50 ಸಾವಿರ ರು. ಪರಿಹಾರ ಕೊಟ್ಟು ಅವರ ನೆರವಿಗೆ ಬಂದರೆ ಅವರಿಗೆ ಉಸಿರಾಡಲು ಅನುಕೂಲ ಆಗಲಿದೆ. ಈ ಕೆಲಸವನ್ನಾದರೂ ಮಾಡಬೇಕು ಎಂದು ಹೇಳಿದರು.

08:34 PM (IST) Jul 21

ಬೆಂಗಳೂರಿನ 1 BHK ಮನೆಗೆ ಇಬ್ಬರು ಪುರುಷ ರೂಮ್‌ಮೇಟ್‌ ಬೇಕಾಗಿದ್ದಾರೆ - ಪೋಸ್ಟರ್ ವೈರಲ್

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ 'ರೂಮ್‌ಮೇಟ್ ಬೇಕಾಗಿದ್ದಾರೆ' ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಪೂರ್ಣ ಸಜ್ಜುಗೊಂಡ 1BHK ಮನೆಗೆ, ಅದರಲ್ಲೂ ವಿಶೇಷವಾಗಿ 'ಮಲಯಾಳಿಗಳಿಗೆ ಆದ್ಯತೆ' ಎಂದು ಬರೆದಿರುವುದು ಜನರ ಅಚ್ಚರಿಗೆ ಮತ್ತು ಚರ್ಚೆಗೆ ಕಾರಣವಾಗಿದೆ.
Read Full Story

05:58 PM (IST) Jul 21

Job - ಅಗ್ನಿವೀರ್‌ ಅಭ್ಯರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್‌ - ಶೇ.25 ಅಲ್ಲ, ಬರೋಬ್ಬರಿ ಶೇ. 75ರಷ್ಟು ಅಭ್ಯರ್ಥಿಗಳಿಗೆ ಖಾಯಂ ಸೇವಾ ಅವಕಾಶ?

ಅಗ್ನಿವೀರ್ ಸ್ಪರ್ಧಾರ್ಥಿಗಳಿಗೆ ಮತ್ತೊಂದು ಗುಡ್‌ ನ್ಯೂಸ್‌ ಎದುರಾಗಿದೆ. 3ಸೇನೆ ಕಡೆಯಿಂದ ಒಳ್ಳೆಯ ಸುದ್ದಿ. ಈ ನಿಟ್ಟಿನಲ್ಲಿ ಯುವಕರಿಗೆ ಸೇನೆಯಲ್ಲಿ ಖಾಯಂ ಉದ್ಯೋಗದ ಅವಕಾಶಗಳು ಹೆಚ್ಚಾಗಲಿವೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

Read Full Story

05:08 PM (IST) Jul 21

Supreme Court - ಸಂಸಾರದ ಜಗಳ ಆಫೀಸ್ ಮೆಟ್ಟಿಲೇರಿದರೆ ಏನಾಗುತ್ತೆ? ಹೆಂಡತಿಯರಿಗೆ ಸುಪ್ರೀಂ ಖಡಕ್ ವಾರ್ನಿಂಗ್!

ಪತಿಯ ಸ್ನೇಹಿತ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ವರ್ಗಾಯಿಸುವಂತೆ ಕೋರಿ ಮಹಿಳೆಯೊಬ್ಬರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.

Read Full Story

04:59 PM (IST) Jul 21

ಬನ್ನೇರುಘಟ್ಟ ಮೆಟ್ರೋ ಮಾರ್ಗ ಮತ್ತೆ ವಿಳಂಬ - ಆಗೆಸ್ಟ್ 15ರ ಡೆಡ್‌ಲೈನ್ ಮಿಸ್; ಸೆಪ್ಟೆಂಬರ್‌ನಲ್ಲಿ ಸಂಚಾರ ಆರಂಭ?

ಬನ್ನೇರುಘಟ್ಟ ರಸ್ತೆಯ ನಮ್ಮ ಮೆಟ್ರೋ 'ಪಿಂಕ್ ಲೈನ್' ಸಂಚಾರವು ಆಗಸ್ಟ್ 15ರ ಗಡುವನ್ನು ತಪ್ಪಿಸಿಕೊಳ್ಳುವುದು ಖಚಿತವಾಗಿದೆ. ಸಿಗ್ನಲಿಂಗ್ ವ್ಯವಸ್ಥೆಯ ಸುರಕ್ಷತಾ ಮೌಲ್ಯಮಾಪನ ಪ್ರಮಾಣಪತ್ರ ಬಾಕಿಯಿರುವುದೇ ಈ ವಿಳಂಬಕ್ಕೆ ಮುಖ್ಯ ಕಾರಣವಾಗಿದೆ.

Read Full Story

04:57 PM (IST) Jul 21

ಶಿವಣ್ಣ-ವಿಜಯ್ ರಾಘವೇಂದ್ರ ಜೊತೆ ಕೊಡಗಿನ ಬೆಡಗಿ ವರ್ಷ ಬೊಳ್ಳಮ್ಮ - ಕನ್ನಡದಲ್ಲಿ ಹೊಸ ಅಧ್ಯಾಯ

Varsha Bollamma First Look: ದಕ್ಷಿಣ ಭಾರತದ ಜನಪ್ರಿಯ ನಟಿ ವರ್ಷ ಬೊಳ್ಳಮ್ಮ ಅವರು ಬಹುನಿರೀಕ್ಷಿತ 'ಮಹಾನ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

Read Full Story

04:36 PM (IST) Jul 21

ಬಹುನಿರೀಕ್ಷಿತ ಧ್ರುವ ಸರ್ಜಾ ಚಿತ್ರಕ್ಕೆ ಬ್ರೇಕ್ - ನಿರ್ದೇಶಕ ಸೂರಿ ಹೇಳಿದ ಆ ಸತ್ಯವೇನು?

ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ಚಿತ್ರದಿಂದ ನಿರ್ದೇಶಕ ಸೂರಿ ಸದ್ಯಕ್ಕೆ ಹಿಂದೆ ಸರಿದಿದ್ದಾರೆ. ವಿಳಂಬದ ಕಾರಣ, 'ಕ್ರಿಮಿನಲ್' ಚಿತ್ರದ ಪ್ರಭಾವ ಹಾಗೂ ಮುಂದಿನ ಯೋಜನೆ ಕುರಿತು ಸೂರಿ ಹೇಳಿದ್ದೇನು?

Read Full Story

04:27 PM (IST) Jul 21

ಮೂರು ವರ್ಷಗಳ ಬಳಿಕ Jakkur Flying School ಪುನರಾರಂಭ!; ಕಾರ್ಯನಿರ್ವಹಣೆಗೆ DGCA ಹೊಸ ಅನುಮೋದನೆ

ಬೆಂಗಳೂರಿನ ಜಕ್ಕೂರು ಸರ್ಕಾರಿ ವಿಮಾನ ಚಾಲನಾ ತರಬೇತಿ ಶಾಲೆಯು ಮೂರು ವರ್ಷಗಳ ಸುದೀರ್ಘ ವಿರಾಮದ ನಂತರ ಡಿಜಿಸಿಎಯಿಂದ ನೂತನ ಅನುಮೋದನೆ ಪಡೆದಿದೆ. ಈ ಮೂಲಕ, ಸಂಸ್ಥೆಯು ವಿವಿಧ ಪೈಲಟ್ ತರಬೇತಿ ಕೋರ್ಸ್‌ಗಳನ್ನು ಪುನರಾರಂಭಿಸಲು ಸಜ್ಜಾಗಿದ್ದು, ಶೀಘ್ರದಲ್ಲೇ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ.

Read Full Story

03:48 PM (IST) Jul 21

ಬಂಗಾರ ಕದ್ದು ಕಡಿಮೆ ಬೆಲೆಗೆ ಮಾರಾಟ ಮಾಡ್ತಿದ್ದ ಕುಖ್ಯಾತ ಕಳ್ಳ ಶಿಗ್ಲಿ ಬಸ್ಯಾ; ಬಿಗ್‌ಬಾಸ್ ಕನ್ನಡ ಮನೆಗೆ ಬರಲು ರೆಡಿ

ಗದಗದ ಕುಖ್ಯಾತ ಕಳ್ಳ 'ಶಿಗ್ಲಿ ಬಸ್ಯಾ' ಬಿಗ್‌ಬಾಸ್ ಕನ್ನಡ ಸೀಸನ್ 13ಕ್ಕೆ ಸ್ಪರ್ಧಿಸಲು ಪಣತೊಟ್ಟಿದ್ದಾನೆ. ಸನ್ಮಾರ್ಗದಲ್ಲಿ ನಡೆಯಲು ಅವಕಾಶ ಕೋರಿ, ತುಮಕೂರಿನ ಸಿದ್ದಗಂಗಾ ಮಠದಿಂದ ಬಿಡದಿಯ ಬಿಗ್‌ಬಾಸ್ ಮನೆಯವರೆಗೆ ಪಾದಯಾತ್ರೆ ಆರಂಭಿಸಿದ್ದಾನೆ. ಈ ಮೂಲಕ ವಾಹಿನಿ ಮುಖ್ಯಸ್ಥರು ಮತ್ತು ಕಿಚ್ಚ ಸುದೀಪ್ ಅವರ ಗಮನ ಸೆಳೆದು, ದೊಡ್ಮನೆ ಪ್ರವೇಶಿಸುವ ಗುರಿ ಹೊಂದಿದ್ದಾನೆ.
Read Full Story

03:18 PM (IST) Jul 21

ನಮ್ಮ ತಾಯಿ ಭೂಮಿಯ ಒಡಲು ಸೇರಿದ್ದಾರೆ -ಅಮ್ಮನ ನೆನೆದು ಕಣ್ಣೀರಿಟ್ಟ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಅಗಲಿದ ತಮ್ಮ ತಾಯಿಯನ್ನು ನೆನೆದು ಭಾವುಕರಾದರು. ನಮ್ಮ ತಾಯಿ ಎಂದೂ ಮಾಧ್ಯಮಗಳ ಮುಂದೆ ಬಂದವಳಲ್ಲ. ಅವರೀಗ ಭೂಮಿ ತಾಯಿಯ ಒಡಲು ಸೇರಿದ್ದಾರೆ, ಶಿವ-ವಿಷ್ಣುವಿನ ಪಾದ ಸೇರಿದ್ದಾರೆ ಎಂದು ಭಾವುಕರಾದರು.

Read Full Story

03:18 PM (IST) Jul 21

Bengaluru - ಸಮಗ್ರ ಅಭಿವೃದ್ಧಿ ಟೆಂಡರ್ ರದ್ದು, ಶೀಘ್ರದಲ್ಲೇ ಔಟರ್ ರಿಂಗ್ ರೋಡ್ ಒತ್ತುವರಿ ತೆರವಿಗೆ ಜಿಬಿಎ ಸಿದ್ಧತೆ

ಬೆಂಗಳೂರಿನ ಹೊರವರ್ತುಲ ರಸ್ತೆಯ ಸಮಗ್ರ ಅಭಿವೃದ್ಧಿ ಟೆಂಡರ್‌ ರದ್ದುಗೊಂಡಿದ್ದು, ಮೊದಲು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ಜಿಬಿಎ ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾದ ಟ್ರಾಫಿಕ್ ಜಾಮ್ ಮತ್ತು ಪ್ರವಾಹಕ್ಕೆ ಕಾರಣವಾದ ರಸ್ತೆ ಹಾಗೂ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದ ನಂತರವೇ ಹೊಸ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ.
Read Full Story

02:42 PM (IST) Jul 21

ಬೆಂಗಳೂರು ಉಪನಗರ ರೈಲು ಯೋಜನೆಗೆ ಬೂಸ್ಟ್ - ಮತ್ತಿಕೆರೆ to ಯಶವಂತಪುರ ₹199 ಕೋಟಿ ವೆಚ್ಚದ ‘ಡಬಲ್ ಡೆಕ್ಕರ್’ ಕಾರಿಡಾರ್!

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸಲು ಉಪನಗರ ರೈಲು ಯೋಜನೆಯಡಿ (BSRP) ಮತ್ತಿಕೆರೆ ಮತ್ತು ಯಶವಂತಪುರ ನಡುವೆ 'ಡಬಲ್ ಡೆಕ್ಕರ್' ಕಾರಿಡಾರ್ ನಿರ್ಮಿಸಲಾಗುತ್ತಿದೆ. ಈ ವಿಶಿಷ್ಟ ಮಾದರಿಯಲ್ಲಿ ರಸ್ತೆ ಮೇಲ್ಸೇತುವೆಯ ಮೇಲೆ ಉಪನಗರ ರೈಲು ಮಾರ್ಗ ನಿರ್ಮಾಣವಾಗಲಿದ್ದು, ಇದಕ್ಕಾಗಿ ಕೆ-ರೈಡ್ ₹199 ಕೋಟಿ ವೆಚ್ಚದ ಹೊಸ ಟೆಂಡರ್ ಆಹ್ವಾನಿಸಿದೆ. ಈ ಯೋಜನೆಯು ನಗರದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲಿದೆ.
Read Full Story

02:33 PM (IST) Jul 21

ಪತ್ನಿ, ಮಕ್ಕಳ ಬಾಯಿಗೆ ಪ್ಲಾಸ್ಟರ್‌ ಹಚ್ಚಿ ಕೊಂದ ಪತಿ.. ಮೈಸೂರಲ್ಲಿ ಪಾಪದ ಕೃತ್ಯ

ಮೈಸೂರು ಜಿಲ್ಲೆಯ ಹುಣಸೂರಿನ ನ್ಯೂ ಮಾರುತಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನೂ ಆತ್ಮ*ತ್ಯೆ ಮಾಡಿಕೊಂಡಿದ್ದಾನೆ. ಈ ಕೃತ್ಯಕ್ಕೆ ಕೌಟುಂಬಿಕ ಕಲಹ ಅಥವಾ ಆರ್ಥಿಕ ಸಂಕಷ್ಟ ಕಾರಣವಿರಬಹುದೆಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Read Full Story

01:45 PM (IST) Jul 21

ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್ ಶಾಕ್ - ಕೋರ್ಟ್‌ನಿಂದ ಸಮನ್ಸ್..!

ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

Read Full Story

01:21 PM (IST) Jul 21

ಚೂಡಿದಾರ್ ಒಳಗಿತ್ತು 26 ಕೋಟಿ ರೂ. ಮೌಲ್ಯದ ಸಾವಿನ ಪುಡಿ! ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿದ್ದಾರೆ. ಮಹಿಳೆಯರ ಚೂಡಿದಾರ್‌ಗಳಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಎಂ‌ಡಿಎಂಎ ಡ್ರಗ್ಸ್ ಅಡಗಿಸಿಟ್ಟು ಸಾಗಿಸುತ್ತಿದ್ದ ಜಾಲವನ್ನು ಪತ್ತೆಹಚ್ಚಿ, ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೈಜೀರಿಯಾ ಮೂಲದ ವ್ಯಕ್ತಿಯ ಕೈವಾಡವೂ ಬೆಳಕಿಗೆ ಬಂದಿದೆ.
Read Full Story

11:48 AM (IST) Jul 21

ಬೆಂಗಳೂರಿನ 8 ಕಡೆ ಇಡಿ ದಾಳಿ - ಐಸಿಸ್ ಉಗ್ರ ಸಂಘಟನೆಗೆ ಫಂಡಿಂಗ್ ಜಾಲ ಪತ್ತೆ, ವಿದೇಶದಲ್ಲಿ ಲೆಕ್ಕವಿಲ್ಲದಷ್ಟು ಆಸ್ತಿ!

ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಐಸಿಸ್‌ಗೆ ಹಣಕಾಸು ನೆರವು ನೀಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿದ್ದಾರೆ. ಎನ್‌ಐಎ ತನಿಖೆಯ ಆಧಾರದ ಮೇಲೆ, 'ಇಕ್ರಾ ವೆಲ್ಫೇರ್ ಟ್ರಸ್ಟ್' ಮತ್ತು 'ಜಿಎಫ್‌ಎಂ ಟ್ರಸ್ಟ್' ಮೂಲಕ ಸಿರಿಯಾದಲ್ಲಿರುವ ಐಸಿಸ್ ಶಿಬಿರಗಳಿಗೆ ಹಣ ವರ್ಗಾವಣೆ ಮಾಡುತ್ತಿದ್ದ ಆರೋಪದ ಮೇಲೆ ಈ ಕಾರ್ಯಾಚರಣೆ ನಡೆದಿದೆ.

Read Full Story

11:30 AM (IST) Jul 21

ಆಲಮಟ್ಟಿ ಡ್ಯಾಂಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ, ರಾಜ್ಯದ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟು?

ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ವಿಜಯಪುರ ಜಿಲ್ಲೆಯ ನಿಡಗುಂಡಿ ತಾಲೂಕಿನಲ್ಲಿರುವ ಆಲಮಟ್ಟಿ ಲಾಲ್‌ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದರು.

Read Full Story

11:15 AM (IST) Jul 21

ಒಂದು ವಾರಕ್ಕೆ 16% ಏರಿಕೆ ಕಂಡ ಜಾಗತಿಕ ಕಚ್ಚಾತೈಲ ಬೆಲೆ, ಭಾರತ ಸೇರಿದಂತೆ ಇಡೀ ವಿಶ್ವಕ್ಕೆ ಹಣದುಬ್ಬರದ ಭೀತಿ!

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟಿನಿಂದಾಗಿ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಗಳು ಗಗನಕ್ಕೇರಿದ್ದು, ಜಾಗತಿಕ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಇದು ಭಾರತದಲ್ಲಿ ಇಂಧನ ಕಂಪನಿಗಳಿಗೆ ಚಿಲ್ಲರೆ ಮಾರಾಟದಲ್ಲಿ ಭಾರಿ ನಷ್ಟ ಉಂಟುಮಾಡುತ್ತಿದೆಯಾದರೂ, ತೈಲ ಸಂಸ್ಕರಣಾ ಲಾಭಾಂಶವು ಕಂಪನಿಗಳಿಗೆ ಆಸರೆಯಾಗಿದೆ. ಈ ಬಿಕ್ಕಟ್ಟು ಜಾಗತಿಕ ಹಣದುಬ್ಬರ ಮತ್ತು ಕರೆನ್ಸಿ ಮೌಲ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಆತಂಕವನ್ನು ಸೃಷ್ಟಿಸಿದೆ.
Read Full Story

10:55 AM (IST) Jul 21

ರಾಜ್ಯ ಸರ್ಕಾರಕ್ಕೆ ಬೇಡವಾಯ್ತಾ ಎಲೆಕ್ಟ್ರಿಕ್‌ ಬಸ್!? ಬೆಂಗಳೂರಿಗೆ ಮಂಜೂರಾಗಿದ್ದ 4,500 ಇ-ಬಸ್‌ಗಳು ಕೈತಪ್ಪುವ ಭೀತಿ!

ಕೇಂದ್ರ ಸರ್ಕಾರದ 'ಪಿಎಂ ಇ-ಡ್ರೈವ್' ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿದ್ದ 4,500 ಎಲೆಕ್ಟ್ರಿಕ್ ಬಸ್‌ಗಳು, ರಾಜ್ಯ ಸರ್ಕಾರದ ವಿಳಂಬ ನೀತಿ ಮತ್ತು ಅನುಮೋದನೆಯ ಕೊರತೆಯಿಂದಾಗಿ ಬೇರೆ ರಾಜ್ಯಗಳ ಪಾಲಾಗುವ ಆತಂಕ ಎದುರಿಸುತ್ತಿವೆ. ಬಿಎಂಟಿಸಿ ಇನ್ನೂ ಕಾರ್ಯಾದೇಶ ನೀಡದ ಕಾರಣ, ಕೋಟ್ಯಂತರ ರೂಪಾಯಿ ಸಬ್ಸಿಡಿ ಸಹಿತ ಈ ಬೃಹತ್ ಯೋಜನೆ ಕೈತಪ್ಪುವ ಸಾಧ್ಯತೆಯಿದೆ.
Read Full Story

09:27 AM (IST) Jul 21

ಸಿಕ್ಕಿಂನಲ್ಲಿ ಭೀಕರ ದುರಂತ - ಸುರಂಗದಲ್ಲಿ ಸ್ಫೋಟ, ಭೂಕುಸಿದು 7 ಸಾವು, 18 ಮಂದಿ ನಾಪತ್ತೆ

ಸಿಕ್ಕಿಂನ ನಾಮ್ಚಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಮೀಥೇನ್ ಅನಿಲ ಸ್ಫೋಟಗೊಂಡು ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಸ್ಫೋಟದಿಂದ ಭೂಕುಸಿತ ಉಂಟಾಗಿದ್ದು, ಇನ್ನೂ 18 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದು, ವಿಷಕಾರಿ ಅನಿಲದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
Read Full Story

09:21 AM (IST) Jul 21

ಶರಾವತಿ ಪಂಪ್ಡ್‌ ಸ್ಟೋರೇಜ್‌ ಶೀಘ್ರದಲ್ಲೇ ಶುರು ಮಾಡ್ತೇವೆ - ಮುಖ್ಯಮಂತ್ರಿ ಡಿಕೆ ಶಿವಕುಮಾರ್

ವಿರೋಧದ ನಡುವೆಯೂ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಪರಿಸರಕ್ಕೆ ಹಾನಿಯಾಗದಂತೆ, ಎಲ್ಲಾ ಅನುಮತಿಗಳನ್ನು ಪಡೆದು ಯೋಜನೆ ಅನುಷ್ಠಾನಗೊಳಿಸಲಾಗುವುದು ಮತ್ತು ಹಿಂದಿನ ಬಿಜೆಪಿ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
Read Full Story

09:19 AM (IST) Jul 21

ಸರೆಗಮಪ ಕನ್ನಡ ಶೋ ಜ್ಯೂರಿ ಮೋಹನ್‌ರ ಏಕೈಕ ಪುತ್ರ ಹೃತಿಕ್‌ ಇನ್ನಿಲ್ಲ - ಚಿಕ್ಕ ವಯಸ್ಸಿನವರಿಗೆ ಹೀಗಾದ್ರೆ...!

Saregamapa Kannada Show Mohan Son Hrithik: ಇತ್ತೀಚೆಗೆ ಅಪ*ಘಾತ, ಆತ್ಮ*ಹತ್ಯೆ, ಹೃದಯಾಘಾತದ ಕಾರಣಕ್ಕೆ ದಿನಕ್ಕೆ ಒಂದಿಷ್ಟು ಜನರು ಸಾಯುತ್ತಿದ್ದಾರೆ. ಅದರಲ್ಲಿಯೂ ಚಿಕ್ಕ ವಯಸ್ಸಿನಲ್ಲಿರುವವರು ಸಾಯೋದು ಹೆಚ್ಚಾಗುತ್ತಿದೆ. ಸರಿಗಮಪ ಶೋ ಜ್ಯೂರಿ ಮೋಹನ್‌ ಅವರ ಮಗ ಕೂಡ ನಿಧನರಾಗಿದ್ದಾರಂತೆ.

Read Full Story

09:17 AM (IST) Jul 21

ತನ್ನದೇ ಚಿನ್ನದಂಗಡಿಗೆ ಕನ್ನ ಹಾಕಿ ತಗ್ಲಾಕೊಂಡ ಮಾಲೀಕ ಕೃಷ್ಣಾನಂದ ಹಿಂಡಲಗಾ ಜೈಲಿಗೆ ಶಿಫ್ಟ್

ಬೆಳಗಾವಿಯಲ್ಲಿ ತನ್ನದೇ ಚಿನ್ನದಂಗಡಿಯಲ್ಲಿ ಕಳ್ಳತನವಾಗಿದೆ ಎಂದು ದೂರು ನೀಡಿದ್ದ ಮಾಲೀಕ ಕೃಷ್ಣಾನಂದ ವೇರ್ಣೇಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಜನರಿಗೆ ಮೋಸ ಮಾಡುವ ಉದ್ದೇಶದಿಂದ ಕಳ್ಳತನದ ನಾಟಕವಾಡಿದ್ದು, ಆತನ ಸ್ಕೂಟಿಯಲ್ಲೇ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿದೆ.
Read Full Story

08:18 AM (IST) Jul 21

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; VTU-Google ನಡುವೆ ಐತಿಹಾಸಿಕ ಒಪ್ಪಂದ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಮತ್ತು ಗೂಗಲ್ ನಡುವೆ ಐತಿಹಾಸಿಕ ಒಪ್ಪಂದ ಏರ್ಪಟ್ಟಿದೆ. ಈ ಸಹಭಾಗಿತ್ವದ ಮೂಲಕ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಕ್ಲೌಡ್ ಕಂಪ್ಯೂಟಿಂಗ್‌ನಂತಹ ಆಧುನಿಕ ತಂತ್ರಜ್ಞಾನಗಳಲ್ಲಿ ತರಬೇತಿ ನೀಡಿ, ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸಲಾಗುವುದು.

Read Full Story

08:10 AM (IST) Jul 21

CJP Protest - ಮೋದಿ ದುರ್ಬಲ ಪ್ರಧಾನಿ, ದುಷ್ಟರ ರಕ್ಷಕ -ಸಿದ್ದರಾಮಯ್ಯ ಕಿಡಿ

ನೀಟ್‌ ಪರೀಕ್ಷೆ ಹಗರಣದ ಕುರಿತು ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ. ಭ್ರಷ್ಟ ಶಿಕ್ಷಣ ಮಂತ್ರಿಯ ವಿರುದ್ಧ ಕ್ರಮ ಕೈಗೊಳ್ಳದ ಮೋದಿ ದುರ್ಬಲ ಪ್ರಧಾನಿ ಎಂದು ಸಾಬೀತುಪಡಿಸಿದ್ದಾರೆ ಎಂದಿರುವ ಅವರು, ವಿದ್ಯಾರ್ಥಿಗಳು ಮತ್ತು ಪೋಷಕರ ಕಣ್ಣೀರಿನ ಶಾಪದಿಂದಲೇ ಸರ್ಕಾರ ಪತನಗೊಳ್ಳಲಿದೆ..

Read Full Story

07:30 AM (IST) Jul 21

Bagalkote - 19 ವರ್ಷ ವಯೋಮಿತಿಯ KSCA ಕ್ರಿಕೆಟ್‌ಗೆ ಮಹಾಲಿಂಗಪುರದ ದಿಶಾ ಶಿರೋಳ ಆಯ್ಕೆ

ಮಹಾಲಿಂಗಪುರದ ನಿವಾಸಿ ದಿಶಾ ಶಿರೋಳ ಅವರು 19 ವರ್ಷ ವಯೋಮಿತಿಯ ಕೆಎಸ್ ಸಿಎ ಮಹಿಳಾ ಕ್ರಿಕೆಟ್‌ನ ರಾಯಚೂರು ವಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಆಗಿ ಆಡುವ ಮೂಲಕ ಇವರು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
Read Full Story

07:15 AM (IST) Jul 21

ಉತ್ಖನನ ವೇಳೆ 30ಕ್ಕೂ ಅಧಿಕ ರಾವಣನ ವಿಗ್ರಹಗಳು ಪತ್ತೆ! ಇತಿಹಾಸ ತಜ್ಞರಲ್ಲಿ ಆಶ್ಚರ್ಯ

ರಾವಣನ 35ಕ್ಕೂ ಹೆಚ್ಚು ಮೂರ್ತಿಗಳು ಉತ್ಖನನದ ವೇಳೆ ಪತ್ತೆಯಾಗಿವೆ. ಭಾರತೀಯ ಸರ್ವೇಕ್ಷಣಾ ಇಲಾಖೆಗೂ 15-20 ವಿಗ್ರಹ ದೊರಕಿದರೆ, ರಂಗರಾಜು ಅವರಿಗೂ ಅಷ್ಟೇ ಪ್ರಮಾಣದ ವಿಗ್ರಹಗಳು ದೊರಕಿದೆ.

Read Full Story

07:11 AM (IST) Jul 21

ಮೈಸೂರು - ಗಿರ್ ಹಸುವೊಂದು ಎರಡು ತಲೆ, ಎರಡು ಬಾಲದ ಹೆಣ್ಣು ಕರುವಿಗೆ ಜನ್ಮ ನೀಡಿ ಅಚ್ಚರಿ!

ಮೈಸೂರಿನ ಕೆ.ಆರ್.ನಗರದಲ್ಲಿ ಗಿರ್ ತಳಿಯ ಹಸುವೊಂದು ಎರಡು ತಲೆ ಮತ್ತು ಎರಡು ಬಾಲಗಳಿರುವ ಹೆಣ್ಣು ಕರುವಿಗೆ ಜನ್ಮ ನೀಡಿದೆ. ಆದರೆ, ಜನಿಸಿದ ಕೆಲವೇ ಕ್ಷಣಗಳಲ್ಲಿ ಆ ವಿಚಿತ್ರ ಕರು ಮೃತಪಟ್ಟಿದ್ದು, ಮಾಲೀಕರು ಪೂಜೆ ಸಲ್ಲಿಸಿ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ.
Read Full Story

07:02 AM (IST) Jul 21

Shivamogga - ಹೊಳೆಯಲ್ಲಿ ತೇಲಿ ಹೋಗುತ್ತಿದ್ದ ತಂದೆಯನ್ನ ರಕ್ಷಿಸಿದ 9 ವರ್ಷದ ಮಗ ನಂದನ್

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಫಿಟ್ಸ್‌ ಬಂದು ಹೊಳೆಗೆ ಬಿದ್ದ ತಂದೆಯನ್ನು, 9 ವರ್ಷದ ಬಾಲಕ ನಂದನ್ ಸಮಯಪ್ರಜ್ಞೆ ಮೆರೆದು ಸ್ಥಳೀಯರ ಸಹಾಯದಿಂದ ರಕ್ಷಿಸಿದ್ದಾನೆ. ಮಗನ ಕೂಗಿಗೆ ಓಗೊಟ್ಟು ಬಂದ ಸ್ಥಳೀಯರು ಹೊಳೆಯಲ್ಲಿ ತೇಲಿ ಹೋಗುತ್ತಿದ್ದ ಚಂದ್ರು ಅವರನ್ನು ದಡಕ್ಕೆ ತಂದು ಪ್ರಾಣ ಉಳಿಸಿದ್ದಾರೆ.
Read Full Story

More Trending News