LIVE NOW
Published : Jun 21, 2026, 07:19 AM ISTUpdated : Jun 21, 2026, 10:47 AM IST

ಹಾಲಿನ ಕಲಬೆರಕೆ, ಕಬಾಬ್‌ಗೆ ವಿಷಕಾರಿ ಬಣ್ಣ ಬಳಸುವವರಿಗೆ ಆರೋಗ್ಯ ಸಚಿವ ಖಾದರ್ ಖಡಕ್ ವಾರ್ನಿಂಗ್!

ಸಾರಾಂಶ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಇಂದು ರಾಜ್ಯದೆಲ್ಲೆಡೆ ಯೋಗಾಭ್ಯಾಸ ನಡೆಸಲಾಗುತ್ತಿದೆ. ವಿಧಾನಸೌಧ ಮುಂಭಾಗದ ಮೆಟ್ಟಿಲಲ್ಲಿ 12 ನೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗಿದೆ. ಆಯುಷ್ ಇಲಾಖೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ. ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಪರಮೇಶ್ವರ ,ಯು ಟಿ ಖಾದರ್,ಸೇರಿದಂತೆ ಹಲವು ಗಣ್ಯರು. ಭಾಗಿಯಾಗಿದ್ದಾರೆ..ಸುಧಾರಾಣಿ,ವಶಿಷ್ಠ ಸಿಂಹ ,ಹರಿಪ್ರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯಲ್ಲಿ ಭಾಗಿಯಾಗಿದ್ದಾರೆ.

UT Khader

10:47 AM (IST) Jun 21

ಹಾಲಿನ ಕಲಬೆರಕೆ, ಕಬಾಬ್‌ಗೆ ವಿಷಕಾರಿ ಬಣ್ಣ ಬಳಸುವವರಿಗೆ ಆರೋಗ್ಯ ಸಚಿವ ಖಾದರ್ ಖಡಕ್ ವಾರ್ನಿಂಗ್!

ಹೊರ ರಾಜ್ಯಗಳಿಂದ ಬರುವ ಹಾಲಿನ ಗುಣಮಟ್ಟವನ್ನು ಗಡಿಯಲ್ಲಿಯೇ ಪರೀಕ್ಷಿಸಲಾಗುತ್ತಿದ್ದು, ಕಲಬೆರಕೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ಯು.ಟಿ.ಖಾದರ್‌ ಎಚ್ಚರಿಸಿದ್ದಾರೆ. ಜೊತೆಗೆ, ಕಬಾಬ್‌ನಂತಹ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಬಣ್ಣ ಬಳಸದಂತೆ ಎಚ್ಚರಿಸಿದರು.

Read Full Story

10:21 AM (IST) Jun 21

ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಿಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಹಿಂದೆ ಪ್ರಕಟಿಸಿದ ಅಂತಿಮ ಮತದಾರ ಪಟ್ಟಿಗೆ ತಡೆ ನೀಡಲಾಗಿದೆ.

Read Full Story

09:37 AM (IST) Jun 21

ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿ ಐಫೋನ್, ಲ್ಯಾಪ್‌ಟಾಪ್, ಕಾರು ಕದ್ದು ಪರಾರಿ, ಇಬ್ಬರ ಬಂಧನ

ಹಾಡಹಾಗಲೇ ಮನೆಗೆ ಏಕಾಏಕಿ ನುಗ್ಗಿ ಕಬ್ಬಿಣ್ಣದ ರಾಡ್ ನಿಂದ ಹಲ್ಲೆ ನಡೆಸಿ ಮನೆಯಲ್ಲಿದ್ದ ವಸ್ತುಗಳ ದೋಚಿದ ಘಟನೆ ಬೆಂಗಳೂರಲ್ಲಿ ನಡೆದಿದೆ. ಕಾರು, ಸ್ಕೂಟರ್, ಐಫೋನ್ ಕಸಿದು ಪರಾರಿಯಾಗಿದ್ದಾರೆ. 8 ಮಂದಿ ವಿರುದ್ದ ಕೇಸ್ ದಾಖಲಾಗಿದೆ.

 

Read Full Story

09:04 AM (IST) Jun 21

International Yoga day - 5000 ವರ್ಷಗಳ ಇತಿಹಾಸವಿರುವ ಯೋಗದಲ್ಲಿ ಅಡಗಿದೆ ರಹಸ್ಯ, ಇದು ತಿಳಿದವರೇ ಸುಖಿ, ಆರೋಗ್ಯವಂತರು!

ಜೂನ್ 21 ರಂದು ಆಚರಿಸಲಾಗುವ ವಿಶ್ವ ಯೋಗ ದಿನದ ಇತಿಹಾಸ, ಮಹತ್ವ ಮತ್ತು ಭಾರತದ ಪುರಾತನ ಜೀವನಶೈಲಿಯಾದ ಯೋಗದ ಅರ್ಥವನ್ನು ಈ ಲೇಖನ ವಿವರಿಸುತ್ತದೆ. ಇದು ಪತಂಜಲಿ ಮಹರ್ಷಿಗಳ ಅಷ್ಟಾಂಗ ಯೋಗವನ್ನು ಪರಿಚಯಿಸಿ, ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯ ವೃದ್ಧಿಸುವ ಯೋಗದ ಹಲವಾರು ಪ್ರಯೋಜನ ತಿಳಿಯಿರಿ.

Read Full Story

08:58 AM (IST) Jun 21

Breaking News - ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್; ಇದೀಗ ಬಂಧನದ ಭೀತಿ!

ಪ್ರಕಾಶ್ ರಾಜ್ ವಿರುದ್ಧ ದಿಲೀಪ್ ಕುಮಾರ್ ಎಂಬುವರು ಕೇಸ್ ದಾಖಲಿಸಿರುವ ಹಿನ್ನೆಲೆಯಲ್ಲಿ, ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಜಾಮೀನು ರಹಿತ ವಾರಂಟ್ (NBW) ಜಾರಿಯಾಗಿದೆ. ಮುಂದೇನು..? ಈ ಸ್ಟೋರಿ ನೋಡಿ..

Read Full Story

08:42 AM (IST) Jun 21

World Yoga day 2026 - ನಿಮ್ಮೊಳಗೆ ನಿಮ್ಮನ್ನು ಸಂಪರ್ಕಿಸುವುದೇ ಯೋಗ! | ಗುರುದೇವ ಶ್ರೀ ಶ್ರೀ ರವಿ ಶಂಕರ್‌

International Yoga Day 2026: ಯೋಗವು ಕೇವಲ ಆಸನ ಅಥವಾ ದೇಹದ ಭಂಗಿಗಳಲ್ಲ. ವ್ಯಾಯಾಮ ಮತ್ತು ಆಸನಗಳು ಯೋಗದ ಒಂದು ಭಾಗವಾಗಿರುವುದು ನಿಜ. ಆದರೆ ಯೋಗವನ್ನು ಕೇವಲ ವ್ಯಾಯಾಮ ಎಂದು ಸೀಮಿತಗೊಳಿಸಬಾರದು ಇದು ಮಾನವ ಜೀವನದ ಸಮಗ್ರ ಬೆಳವಣಿಗೆ ಸಂಪರ್ಕವಾಗಿದೆ. ಯೋಗವು ಒಂದು ಸಂಪೂರ್ಣ ವಿಜ್ಞಾನ.

 

Read Full Story

08:23 AM (IST) Jun 21

ನೀರು ಕುಡಿಯಲು ಬಂದ ಕಾಡೆಮ್ಮೆ ಬೇಟೆಯಾಡಿದ ಹುಲಿ, ಪ್ರವಾಸಿಗರಿಂದ ಬಂಡಿಪುರದ ರೋಚಕ ದೃಶ್ಯ ಸೆರೆ

ನೀರು ಕುಡಿಯಲು ಬಂದ ಕಾಡೆಮ್ಮೆಯನ್ನು ಹುಲಿ ಬೇಟೆಯಾಡಿದ ಅಪರೂಪದ ದೃಶ್ಯ ಸೆರೆಯಾಗಿದೆ. ಬಂಡಿಪುರದ ಸಫಾರ ವೇಳೆ ಈ ದೃಶ್ಯ ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸೋಶಿಯಲ್ ಮೀಡಿಯದಲ್ಲಿ ಈ ವಿಡಿಯೋ ವೈರಲ್ ಆಗಿದೆ.

 

Read Full Story

07:57 AM (IST) Jun 21

ಬಸ್‌ ಪ್ರಯಾಣ ದರ ಏರಿಕೆ ಆಗುತ್ತಾ? ಡೀಸೆಲ್‌ ದರದ ₹40 ವ್ಯತ್ಯಾಸ ನೋಡಿ ಗಾಬರಿ ಆಯಿತು ಎಂದ ಸಿಎಂ

‘ಡೀಸೆಲ್ ದರದ 40 ರೂಪಾಯಿ ವ್ಯಾತ್ಯಾಸ ನೋಡಿ ನನಗೇ ಗಾಬರಿ ಆಯ್ತು’ ಸಿಎಂ ಡಿಕೆ ಶಿವವಕುಮಾರ್ ಹೇಳಿಕೆ ನೀಡಿದ ಹಿನ್ನೆಲೆ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ನಿಗಮಗಳ ಉಳಿವು ಹೂ ಜನರ ಹಿತ ಎರಡನ್ನೂ ಗಮನದಲ್ಲಿಟ್ಕೊಂಡು ತೀರ್ಮನಾ ಮಾಡಲಾಗುತ್ತೆ ಎಂದು ಸಿಎಂ ಹೇಳಿದ್ದಾರೆ.

Read Full Story

07:55 AM (IST) Jun 21

ಮೋದಿಗೆ ಸಿಗುತ್ತಿರುವ ಮನ್ನಣೆ ಹೇಳುವ ಭರದಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾದಿಂದ ಎಡವಟ್ಟು

ಪ್ರಧಾನಿ ನರೇಂದ್ರ ಮೋದಿಗೆ ವಿಶ್ವಮಟ್ಟದಲ್ಲಿ ಸಿಗುತ್ತಿರುವ ಮನ್ನಣೆ, ಜನಪ್ರಿಯತೆ ಕುರಿತು ಹೇಳುವ ಭರದಲ್ಲಿ ರಾಜ್ಯ ಬಿಜೆಪಿ ಸೋಶಿಯಲ್ ಮೀಡಿಯಾ ತಂಡ ಎಡವಟ್ಟು ಮಾಡಿದೆ. ಇದು ಭಾರಿ ಸದ್ದು ಮಾಡುತ್ತಿದೆ.

Read Full Story

07:20 AM (IST) Jun 21

ಯೋಗ ಪಟುಗಳ ಗಮನ ಸೆಳೆದ ಮಲ್ಲಗಂಭ ಪ್ರದರ್ಶನ‌

ಧಾರವಾಡದಲ್ಲಿ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನಲೆಯಲ್ಲಿ ಅಕಾಡೆಮಿಯಿಂದ ಯೋಗಾಭ್ಯಾಸ ಪ್ರದರ್ಶನ ನೀಡಲಾಗಿದೆ. ಈ ವೇಳೆ ಯೋಗಪಟುಗಳ ಮಲ್ಲಕಂಭ ಪ್ರದರ್ಶನ ಎಲ್ಲರ ಗಮನಸೆಳೆದಿದೆ. ಏಳುಬಾರಿ ವಿಶ್ವದಾಖಲೆ ಮಾಡಿರುವ ಧಾರವಾಡ ಮಲ್ಲಗಂಭ ಅಕಾಡೆಮಿ ಈ ಪ್ರದರ್ಶನ ಆಯೋಜಿಸಿದೆ.


More Trending News