LIVE NOW
Published : Apr 22, 2026, 06:40 AM ISTUpdated : Apr 22, 2026, 09:21 AM IST

Karnataka News Live: ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟ ಪ್ರಕರಣ - 7 ಮಂದಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

ಸಾರಾಂಶ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಅವರು ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಟಗರು ಎಂದಿಗೂ ಟಗರೇ. ಅವರು ಸೈಲೆಂಟ್‌ ಆಗಿರಬಹುದು, ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್ ಆಗುತ್ತದೆ’ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ.

‘ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರೇ. ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಈಗ ಸೈಲೆಂಟ್ ಆಗಿರಬಹುದು. ಆದರೆ ಅವರು ಮಾತನಾಡಿದರೆ ಬೇರೆ ರೀತಿಯೇ ಸೌಂಡ್‌ ಬರುತ್ತದೆ. ಸದ್ಯ ಅವರು ಮಾತನಾಡುವ ಅಗತ್ಯವಿಲ್ಲ’ ಎಂದು ಹೇಳಿದರು.

ಪಕ್ಷದಲ್ಲಿ ಮುಸ್ಲಿಮರಿಗೆ ಯಾವುದೇ ತಾರತಮ್ಯ ಆಗಿಲ್ಲ. ಒಬ್ಬರು ನನ್ನ ಪರ ಮಾತನಾಡುತ್ತಾರೆ. ಇನ್ನೊಬ್ಬರು ಮತ್ತೊಬ್ಬರ ಪರ ಮಾತನಾಡುತ್ತಾರೆ. ಅದನ್ನೆಲ್ಲ ಪರಿಗಣಿಸಬೇಕಾಗಿಲ್ಲ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

09:21 AM (IST) Apr 22

ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟ ಪ್ರಕರಣ - 7 ಮಂದಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

2008ರ ಬೆಂಗಳೂರು ಸರಣಿ ಬಾಂಬ್‌ ಸ್ಫೋಟದ ರೂವಾರಿ ಟಿ.ನಾಸೀರ್ ಸೇರಿ 7 ಮಂದಿಗೆ ಎನ್‌ಐಎ ವಿಶೇಷ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಜೈಲಿನಲ್ಲೇ ಕುಳಿತು ದೇಶದ ವಿವಿಧೆಡೆ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದರು.

Read Full Story

09:18 AM (IST) Apr 22

ಕಾಂಗ್ರೆಸ್ಸಿನದ್ದು ವಿಕೃತ ಮನಸ್ಥಿತಿ - ಪ್ರ ಧಾನಿ ಮೋದಿ ಬಗ್ಗೆ ಖರ್ಗೆ, ರಾಹುಲ್ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಗರಂ

ಪ್ರಧಾನಿ ಮೋದಿಯವರನ್ನು 'ಭಯೋತ್ಪಾದಕ' ಎಂದು ಕರೆದಿದ್ದಾರೆ ಎನ್ನಲಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಸಭ್ಯ ಹೇಳಿಕೆ ನೀಡಿದ್ದಾರೆನ್ನಲಾದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡವಳಿಕೆಯು ಅವರ ‘ವಿಕೃತ ಮನಸ್ಥಿತಿ ಎಂದು ಕಿಡಿ

Read Full Story

09:11 AM (IST) Apr 22

Bengaluru - ಬಿಡಿಎ ಮಹಾ ಕಾರ್ಯಾಚರಣೆ - 43 ಕೋಟಿ ರೂ. ಬೆಲೆಯ ಒತ್ತುವರಿ ಆಸ್ತಿ ವಶಕ್ಕೆ

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 43 ಕೋಟಿ ರೂ. ಮೌಲ್ಯದ ಒತ್ತುವರಿ ಜಾಗವನ್ನು ಬಿಡಿಎ ವಶಪಡಿಸಿಕೊಂಡಿದೆ. ಇದೇ ವೇಳೆ, ಮುಂಬರುವ ಮಳೆಗಾಲದಲ್ಲಿ ಪ್ರವಾಹ ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಬಿಎ ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Read Full Story

08:52 AM (IST) Apr 22

ರಾಜ್ಯದಲ್ಲಿ ವರುಣನ ಅಬ್ಬರ - ಬಾಳೆ ಬೆಳೆ ನಾಶ, ಸಿಡಿಲು, ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತ

ರಾಜ್ಯದ ಧಾರವಾಡ, ಗದಗ, ರಾಯಚೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದೆ. ಈ ಭಾರಿ ಮಳೆಯಿಂದಾಗಿ ಹಲವೆಡೆ ಬೆಳೆ ನಾಶವಾಗಿದ್ದು, ವಿಶೇಷವಾಗಿ ಬಾಳೆ ಬೆಳೆಗಾರರಿಗೆ ಅಪಾರ ನಷ್ಟವಾಗಿದೆ ಮತ್ತು ಸಿಡಿಲು, ಬಿರುಗಾಳಿಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.
Read Full Story

08:27 AM (IST) Apr 22

ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರ ಕೊಲ್ಕತ್ತಾದ ರಾಮಕೃಷ್ಣ ಮಿಷನ್‌ಗೆ ಹಸ್ತಾಂತರ

ಬಳ್ಳಾರಿಯ ಶ್ರೀರಾಮಕೃಷ್ಣ ವಿವೇಕಾನಂದ ಕೇಂದ್ರವನ್ನು ಅಧಿಕೃತವಾಗಿ ರಾಮಕೃಷ್ಣ ಮಿಷನ್‌ಗೆ ಹಸ್ತಾಂತರಿಸಲಾಗಿದೆ. ಆಶ್ರಮದ ಮೂಲಕ ಶೈಕ್ಷಣಿಕ, ವೈದ್ಯಕೀಯ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ವಿಸ್ತರಿಸಲು ಯೋಜಿಸಲಾಗಿದೆ.

Read Full Story

07:58 AM (IST) Apr 22

Belagavi - ಸೀರೆ ಬದಲು ನೈಟ್ ಧರಿಸಿದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಕ್ರೂರ ಪತಿರಾಯ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ, ನೈಟಿ ಧರಿಸಿದ್ದಕ್ಕೆ ಪತಿ ಕೃಷ್ಣಾ ಪಾಟೀಲ್ ತನ್ನ ಪತ್ನಿ ಮಂಜುಳಾಗೆ ಬೆಂಕಿ ಹಚ್ಚಿದ್ದಾನೆ. ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಂಜುಳಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ. 

Read Full Story

07:32 AM (IST) Apr 22

ಬತ್ತಿದ ಜಲಮೂಲ, ಧಾರವಾಡ ಜಿಲ್ಲೆಯ 15 ಹಳ್ಳಿಗೆ ನೀರಿನ ಬರ; ಗ್ರಾಮಗಳ ಸಂಖ್ಯೆ ಹೆಚ್ಚಾಗುವ ಆತಂಕ

ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೇಸಿಗೆಯ ತಾಪಮಾನದಿಂದಾಗಿ 15 ಹಳ್ಳಿಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಕೆರೆಗಳು ಮತ್ತು ಬೋರ್‌ವೆಲ್‌ಗಳು ಬತ್ತುತ್ತಿರುವುದರಿಂದ, ಜಿಲ್ಲಾಡಳಿತವು ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸುತ್ತಿದೆ.

Read Full Story

07:28 AM (IST) Apr 22

Ramanuja Jayanti 2026 - ಅಸ್ಪೃಶ್ಯರಿಗೂ ದೀಕ್ಷೆ ಕೊಟ್ಟಿದ್ದ ರಾಮಾನುಜಾಚಾರ್ಯರು

ಯತಿ ಸಾರ್ವಭೌಮ ರಾಮಾನುಜಾಚಾರ್ಯರು ಸಾಮಾಜಿಕ ಸಮಾನತೆಯ ಹರಿಕಾರರಾಗಿದ್ದರು. ಗುರುಗಳಿಂದ ಪಡೆದ ರಹಸ್ಯ ಮಂತ್ರವನ್ನು ಸಮಾಜದ ಎಲ್ಲ ವರ್ಗದವರಿಗೂ ಉಪದೇಶಿಸಿ, ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ, ಶ್ರೀವೈಷ್ಣವ ಸಿದ್ಧಾಂತವನ್ನು ಪ್ರತಿಪಾದಿಸಿದರು. ,

Read Full Story

More Trending News