ವಿಜಯಪುರ: ವಿಧಾನ ಪರಿಷತ್ ಸದಸ್ಯ, ಬಿಜೆಪಿಗ ಕೇಶವ ಪ್ರಸಾದ್ ಅವರಿದ್ದ ಕಾರನ್ನು ತಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾ ಸಿಬ್ಬಂದಿ ನೀವು ನಿಜವಾದ ಎಂಎಲ್ಸಿ ಅನ್ನಲು ಸಾಕ್ಷಿ ಏನು? ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಎನ್ಎಚ್ 52ರ ವಿಜಯಪುರ ಹೊರವಲಯದ ಹಿಟ್ಟಿನಹಳ್ಳಿ ಬಳಿ ಭಾನುವಾರ ಪ್ರಸಾದ್ರಿದ್ದ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದರಿಂದ 1 ತಾಸು ಅವರು ಟೋಲ್ ಬಳಿಯೇ ಕಾಯುವಂತಾಯಿತು. ದಾಖಲೆ ತೋರಿಸಿದರೂ ಕಾರಿನ ಮೇಲಿನ ಎಂಎಲ್ಸಿ ಗುರುತಿನ ಚೀಟಿ ಕಿತ್ತು ಗಲಾಟೆ ಮಾಡಿ, ಚಾಲಕನ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಪ್ರಸಾದ್, ಕೊನೆಗೆ ಎಸ್ಪಿಗೆ ಕರೆ ಮಾಡಿದ ಬಳಿಕ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್, ಡಿವೈಎಸ್ಪಿ ಸ್ಥಳಕ್ಕೆ ಬಂದು ವಾಹನ ಬಿಡಿಸಿ ಕಳಿಸಿದ್ದಾರೆ.
10:32 AM (IST) Dec 22
ಬೆಂಗಳೂರಿನ ಟ್ರಾಫಿಕ್ ನಿವಾರಣೆಗೆ ಉದ್ದೇಶಿಸಲಾದ ಟನಲ್ ರಸ್ತೆ ಯೋಜನೆಗೆ ಅದಾನಿ ಗ್ರೂಪ್ ಅತಿ ಕಡಿಮೆ ಮೊತ್ತಕ್ಕೆ ಬಿಡ್ ಸಲ್ಲಿಸಿದೆ. ಆದರೆ, ರಾಷ್ಟ್ರಮಟ್ಟದಲ್ಲಿ ಅದಾನಿ ವಿರೋಧಿಸುವ ಕಾಂಗ್ರೆಸ್ ಸರ್ಕಾರಕ್ಕೆ ಇದು ರಾಜಕೀಯವಾಗಿ ಇಕ್ಕಟ್ಟನ್ನು ಸೃಷ್ಟಿಸಿದೆ.
10:06 AM (IST) Dec 22
09:59 AM (IST) Dec 22
09:27 AM (IST) Dec 22
ಭಾರತ ನೌಕಾಪಡೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಮಲ್ಪೆ ಪೊಲೀಸರು ಗುಜರಾತ್ ಮೂಲದ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಸಿಮ್ ಕಾರ್ಡ್ ಒದಗಿಸುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
08:59 AM (IST) Dec 22
ಕಿಚ್ಚ ಸುದೀಪ್ ಮುಂಬರುವ ಬಿಗ್ಬಾಸ್ ಕನ್ನಡ ಸೀಸನ್ 12ರ ವೀಕೆಂಡ್ ಸಂಚಿಕೆಗೆ ಗೈರಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಸುದೀಪ್ ಅನುಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಯಾರು ನಡೆಸಿಕೊಡಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದ್ದು, ಹಿಂದಿನ ಸೀಸನ್ಗಳಂತೆ ವಿಶೇಷ ಅತಿಥಿಯ ಆಗಮನದ ನಿರೀಕ್ಷೆಯಿದೆ.
08:28 AM (IST) Dec 22
08:19 AM (IST) Dec 22
ಹೂವಿನಹಡಗಲಿ ಮೀಸಲು ಕ್ಷೇತ್ರದ ಶಾಸಕ ಕೃಷ್ಣನಾಯ್ಕ ಅವರು ಬೆಳಗಾವಿ ಅಧಿವೇಶನದಲ್ಲಿ ಕ್ಷೇತ್ರದ ಗಂಭೀರ ಸಮಸ್ಯೆಗಳನ್ನು ಅನಾವರಣಗೊಳಿಸಿದರು. ಸೋರುತ್ತಿರುವ ಸರ್ಕಾರಿ ಶಾಲೆಗಳು, ಅಪೂರ್ಣ ನೀರಾವರಿ ಯೋಜನೆಗಳು, ಹದಗೆಟ್ಟ ರಸ್ತೆಗಳ ಬಗ್ಗೆ ಸರ್ಕಾರದ ಗಮನ ಸೆಳೆದು, ತಕ್ಷಣದ ಕ್ರಮಕ್ಕೆ ಒತ್ತಾಯಿಸಿದರು.
08:05 AM (IST) Dec 22
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲೂ ಹೆಸರಿನ ವಿಚಾರವಾಗಿ ಸ್ವಾರಸ್ಯಕರ ಚರ್ಚೆ ನಡೆಯಿತು. ಆ ಚರ್ಚೆ ಅಂತ್ಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಸದನದಲ್ಲಿ ಯಾರಾದರೂ ಇನ್ನೊಬ್ಬರ ಹೆಸರು ಸರಿಯಾಗಿ ಸಂಬೋಧಿಸದಿದ್ದರೆ ದಂಡ ಹಾಕುವ ಎಚ್ಚರಿಕೆಯನ್ನೂ ಕೊಡುವಂತಾಯಿತು.
07:54 AM (IST) Dec 22
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಜಿಲ್ಲಾ ವಿಭಜನೆಗೆ ಮನಸ್ಸು ಮಾಡಿದ್ದು, ಶೀಘ್ರದಲ್ಲೇ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.
07:50 AM (IST) Dec 22
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಮುಖವಾಡ ಹಾಕಿಕೊಂಡು ನಡೆಸುತ್ತಿರುವ ಸರ್ವಾಧಿಕಾರಿ ಆಡಳಿತಕ್ಕೆ ‘ದ್ವೇಷ ಭಾಷಣ ಪ್ರತಿಬಂಧಕ ಮಸೂದೆ’ ಸ್ಪಷ್ಟ ಸಾಕ್ಷಿ. ಈ ಮಸೂದೆ ಕೇವಲ ಒಂದು ಕಾನೂನಿನ ಕರಡಲ್ಲ; ಇದು ಕಾಂಗ್ರೆಸ್ ಪಕ್ಷದ ಹಳೆಯ, ಪ್ರಜಾಪ್ರಭುತ್ವ ವಿರೋಧಿ ‘ತುರ್ತು ಪರಿಸ್ಥಿತಿ ಮನಸ್ಥಿತಿ
07:44 AM (IST) Dec 22
07:33 AM (IST) Dec 22
ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಎನ್ಜಿಒದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಕಾರದಪುಡಿ ಎರಚಿ, ಪೈಪ್ನಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ ಶಿಕ್ಷಕ ದಂಪತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ನಂತರ, ಶಾಲೆಯಲ್ಲಿದ್ದ ಮಕ್ಕಳನ್ನು ಅವರ ಪಾಲಕರೊಂದಿಗೆ ಕಳುಹಿಸಲಾಗಿದೆ.
07:13 AM (IST) Dec 22
07:03 AM (IST) Dec 22