LIVE NOW
Published : Feb 22, 2026, 06:35 AM ISTUpdated : Feb 22, 2026, 09:09 AM IST

Karnataka News Live: ಅತ್ಯುತ್ತಮ ವಿವಿ ಕಟ್ಟಲು ಏಕೆ ಆಗುತ್ತಿಲ್ಲ? ಕುಲಪತಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್‌

ಸಾರಾಂಶ

‘ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಏನಾಗುತ್ತದೆಯೋ ಅದು ನನಗೆ ಮತ್ತು ಹೈಕಮಾಂಡ್‌ಗೆ ಬಿಟ್ಟ ವಿಷಯ. ಹೈಕಮಾಂಡ್‌ ಮೇಲೆ ನನಗೆ ವಿಶ್ವಾಸವಿದೆ. ಏನು ಮಾಡಬೇಕು ಎಂಬುದು ಅವರಿಗೆ ತಿಳಿದಿದೆ. ಅವರು ಕರ್ನಾಟಕದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಾರೆಂದು ನನಗೆ ಖಾತ್ರಿಯಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

CM Siddaramaiah

09:09 AM (IST) Feb 22

ಅತ್ಯುತ್ತಮ ವಿವಿ ಕಟ್ಟಲು ಏಕೆ ಆಗುತ್ತಿಲ್ಲ? ಕುಲಪತಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಲಪತಿಗಳ ಸಭೆ ನಡೆಸಿ, ರಾಜ್ಯದಲ್ಲಿ ಉನ್ನತ ಶಿಕ್ಷಣದ ದಾಖಲಾತಿ ಅನುಪಾತ ಕಡಿಮೆಯಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಹಿಂದೆ ಇದ್ದಂತೆ ಈಗ ಅತ್ಯುತ್ತಮ ವಿವಿಗಳನ್ನು ಏಕೆ ಕಟ್ಟಲಾಗುತ್ತಿಲ್ಲ ಎಂದು  ಪ್ರಶ್ನಿಸಿದ್ದಾರೆ.

Read Full Story

09:08 AM (IST) Feb 22

ಫಸ್ಟ್‌ ಮದುವೆಯಲ್ಲಿ ನರಕ; ಪ್ರೀತಿಸಿ ಎರಡನೇ ಮದುವೆಯಾದ Shikhar Dhawan; ಫೋಟೋಗಳಿವು

Shikhar Dhawan News: ಕ್ರಿಕೆಟರ್‌ ಶಿಖರ್‌ ಧವನ್‌ ಅವರು ಎರಡನೇ ಮದುವೆಯಾಗಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಶಿಖರ್, ಆಯೇಷಾ ಮುಖರ್ಜಿ ಅವರನ್ನು ಮದುವೆಯಾಗಿದ್ದರು ಮತ್ತು ಅವರಿಗೆ ಜೊರಾವರ್ ಎಂಬ ಮಗನಿದ್ದಾನೆ. 

 

 

Read Full Story

08:48 AM (IST) Feb 22

ನ್ಯಾಯಾಂಗ ಅಪರಾಧ ದ್ವೇಷಿಸಬೇಕೇ ವಿನಃ ಅಪರಾಧಿಯನ್ನಲ್ಲ - ಹೈಕೋರ್ಟ್

ಜನರಿಂದ ಎಟಿಎಂ ಕಾರ್ಡ್‌ಗಳನ್ನು ಕದ್ದು ಹಣ ಪಡೆಯುತ್ತಿದ್ದ ಇಬ್ಬರು ಅಪರಾಧಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ 3 ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ದಂಡವಾಗಿ ಪರಿವರ್ತಿಸಿದೆ. ಕ್ರಿಮಿನಲ್‌ ನ್ಯಾಯವ್ಯವಸ್ಥೆ ಅಪರಾಧವನ್ನು ದ್ವೇಷಿಸಬೇಕೇ ವಿನಃ ಅಪರಾಧಿಯನ್ನಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Read Full Story

08:10 AM (IST) Feb 22

ಕೊಪ್ಪಳದ ಈ ಗ್ರಾಮದಲ್ಲಿ ಬದಕಲು ಬೇಕು ನೆಬುಲೈಜೇಷನ್!

ಈ ಗ್ರಾಮದಲ್ಲಿ ಮಕ್ಕಳು, ವೃದ್ಧರು ಕನಿಷ್ಠ ವಾರಕ್ಕೆ ಮೂರು ದಿನ ನೆಬುಲೈಜೇಷನ್‌ ಮಾಡಿಸಿಕೊಳ್ಳಬೇಕು. ಇದಿಲ್ಲದಿದ್ದರೆ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗುತ್ತದೆ. ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಂತ ಇದು ಯುದ್ಧಪೀಡಿತ ಪ್ರದೇಶವಲ್ಲ.

Read Full Story

06:51 AM (IST) Feb 22

ವಿಜಯನಗರದ ಯುವಕ ಮಂಜುನಾಥಗೆ ಒಲಿದ 7 ಸರ್ಕಾರಿ ಹುದ್ದೆ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವ ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗೇರಲು ಸಿಕ್ಕ ಸಿಕ್ಕ ಕಡೆಗಳಲ್ಲಿ ತರಬೇತಿ ಪಡೆದು ಕಷ್ಟ ಪಟ್ಟು ಒಂದು ಸರ್ಕಾರಿ ಹುದ್ದೆ ಗಿಟ್ಟಿಸಿಕೊಳ್ಳಲು ಹೆಣಗಾಡುವ ಇಂದಿನ ಪರಿಸ್ಥಿತಿಯಲ್ಲಿ ಇಲ್ಲೊಬ್ಬ ಗ್ರಾಮೀಣ ಯುವಕನಿಗೆ 7 ಸರ್ಕಾರಿ ಹುದ್ದೆಗಳು ಅರಸಿ ಬಂದಿವೆ.

Read Full Story

06:39 AM (IST) Feb 22

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ - ಜಾರಕಿಹೊಳಿ

ಸದ್ದಿಲ್ಲದೆ ದೆಹಲಿಗೆ ತೆರಳಿ ಎರಡು ದಿನ ಅಲ್ಲೇ ಬೀಡು ಬಿಟ್ಟು, ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಟೀಮ್‌ಗೆ ರಾಜ್ಯದ ನಾಯಕತ್ವ ಗೊಂದಲ ಬಗೆಹರಿಸುವ ಭರವಸೆ ಹೈಕಮಾಂಡ್‌ನಿಂದ ದೊರಕಿದೆ.

Read Full Story

More Trending News